Updated News From Kaup

ಕಾಪು : ಬಟರ್ ಫ್ಲೈ ಗೆಸ್ಟ್ ಹೌಸ್ - ಸಮಾಜ ಸೇವಕ ಮೂಸ ಕುಚ್ಚಿಗುಡ್ಡೆಯವರಿಗೆ ಗೌರವ ಸನ್ಮಾನ

Posted On: 09-02-2023 07:07PM

ಕಾಪು : ಚಂದ್ರನಗರ ಬಟರ್ ಫ್ಲೈ ಗೆಸ್ಟ್ ಹೌಸ್ ವತಿಯಿಂದ ಸಮಾಜ ಸೇವಕ ಅನಿವಾಸಿ ಭಾರತೀಯ ಕಾಪು ಮೂಲದ ಮೂಸ ಕುಚ್ಚಿಗುಡ್ಡೆಯವರಿಗೆ ಬಟರ್ ಫ್ಲೈ ಗೆಸ್ಟ್ ಹೌಸ್ ನ ನಿರ್ದೇಶಕ ಹಾಜಿ ಕೆ. ಉಮ್ಮರಬ್ಬ ಚಂದ್ರನಗರ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಟರ್ ಫ್ಲೈ ಗೆಸ್ಟ್ ಹೌಸ್ ನ ಆಡಳಿತ ನಿರ್ದೇಶಕ ಫಾರೂಕ್ ಚಂದ್ರನಗರ ಮೂಸ ಕುಚ್ಚಿಗುಡ್ಡೆಯವರು ತೆರೆಮರೆಯಲ್ಲಿ ಯಾವುದೇ ಪ್ರಚಾರವಿಲ್ಲದೆ ನಮ್ಮ ಕಾಪು ಕ್ಷೇತ್ರದಲ್ಲಿರುವ ಹಲವಾರು ಬಡವರನ್ನು ಗುರುತಿಸಿ ಆರ್ಥಿಕವಾಗಿ ಸಹಾಯ ಮಾಡಿದ್ದಾರೆ ಕೊರೋಣ ಸಂದರ್ಭದಲ್ಲಿ ಸಾವಿರಾರು ಮನೆಗೆ ಅಕ್ಕಿ ಮತ್ತು ಪಡಿತರ ಕಿಟ್ ನೀಡಿದ್ದು ಅವರ ಸಮಾಜಮುಖಿ ಕೆಲಸ ನಿಜಕ್ಕೂ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಶರ್ಫುದ್ದಿನ್ ಶೇಕ್ ಮಜೂರು, ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿ,ಮೊಹಮ್ಮದ್ ಸಾಬಿಲ್ ಕುಚ್ಚಿಗುಡ್ಡೆ,ಅಬ್ದುಲ್ ಇಲ್ಯಾಸ್ ಮಜೂರು, ಫೈಸಲ್ ಕರಂದಾಡಿ, ಸಮದ್ ಮಲ್ಲಾರ್,ಲುಕ್ಮನ್ ಮಜೂರು,ಶಂಶುದ್ಧಿನ್ ಕರಂದಾಡಿ,ಸಾದಿಕ್ ಸಾಹಿಲ್ ಫೇಬ್ರಿಕೇಟರ್ಸ್ ಕಾಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕಾಪು : ತಾಲೂಕು ಮುಸ್ಲಿಂ ಮುಖಂಡರಿಂದ ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ಕಾರ್ಯದರ್ಶಿಯಾಗಿ ಆಯ್ಕೆಯಾದ ಫಾರೂಕ್ ಚಂದ್ರನಗರರಿಗೆ ಸನ್ಮಾನ

Posted On: 09-02-2023 06:18PM

ಕಾಪು : ಕಾಪು ತಾಲೂಕು ಮುಸ್ಲಿಂ ಮುಖಂಡರಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಕ್ಕೆ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಫಾರೂಕ್ ಚಂದ್ರನಗರರಿಗೆ ಸನ್ಮಾನ ಕಾರ್ಯಕ್ರಮವನ್ನು ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ನೂರಾರು ಗಣ್ಯರ ಸಮ್ಮುಖದಲ್ಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ.ಸಿ.ಸಿ ವಕ್ತಾರ ಅಬ್ದುಲ್ ಮುನೀರ್ ಫಾರೂಕ್ ಚಂದ್ರನಗರ ಕಾಂಗ್ರೆಸ್ ಪಕ್ಷದಲ್ಲಿ 18 ವರ್ಷದಿಂದ ಸಾಮಾನ್ಯ ಕಾರ್ಯಕರ್ತರಾಗಿ ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಹಲವಾರು ಹುದ್ದೆಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ ಈ ಮೊದಲು 2 ಬಾರಿ ಕೆಪಿಸಿಸಿ ಅಲ್ಪ ಸಂಖ್ಯಾತ ಸದಸ್ಯರಾಗಿ ಇದೀಗ ಕಾರ್ಯದರ್ಶಿಯಾಗಿ ಬಡ್ತಿ ಹೊಂದಿದ್ದು ಮುಂದೆಯೂ ಪಕ್ಷದಲ್ಲಿ ಇನ್ನು ಉತ್ತಮ ಕೆಲಸ ಮಾಡಿ ಅತ್ಯುನ್ನತ ಹಂತಕ್ಕೆ ತಲುಪಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕೋ-ಒರ್ಡಿನೆಟರ್ ಅಬ್ದುಲ್ ಅಝೀಜ್ ಹೆಜಮಾಡಿ, ಕಾಪು ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಶರ್ಫುದ್ದಿನ್ ಶೇಕ್ ಮಜೂರು, ಕಾಪು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾದ ರಮೀಜ್ ಹುಸೈನ್ ಪಡುಬಿದ್ರೆ, ಕಾಪು ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಯು.ಸಿ ಶೇಖಬ್ಬ, ಕಾಪು ಪುರಸಭೆ ಮಾಜಿ ಉಪಾಧ್ಯಕ್ಷರಾದ ಉಸ್ಮಾನ್ ಕೊಪ್ಪಲಂಗಡಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಕಾರ್ಯದರ್ಶಿ ಶಂಶುದ್ಧಿನ್ ಮಜೂರು, ಪೊಲಿಪು ಜಾಮಿಯಾ ಮಸ್ಜಿದ್ ಅಧ್ಯಕ್ಷ ಹೆಚ್. ಅಬ್ದುಲ್ಲ, ಕಾಂಗ್ರೆಸ್ ಮುಖಂಡ ಮನ್ಸೂರ್ ಮೆಕ್ಕಾಸ್ ಮೂಳೂರು, ಕಾಪು ಮುಸ್ಲಿಂ ಒಕ್ಕೂಟ ಅಧ್ಯಕ್ಷರಾದ ನಸೀರ್ ಕೊಂಬಗುಡ್ಡೆ, ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಹಸನಬ್ಬ ಶೇಕ್, ಕಾಪು ಬ್ಲಾಕ್ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಅಮಿರ್ ಮೊಹಮ್ಮದ್, ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಝುಬೈರ್ ಅಹ್ಮದ್ ಶಿರ್ವ, ಕಾಪು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಇಮ್ರಾನ್ ಮಜೂರು, ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿ, ಪಡುಬಿದ್ರೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಹಸನ್ ಕಂಚಿನಡ್ಕ, ಕಾಂಗ್ರೆಸ್ ಮುಖಂಡ ರೆಹ್ಮನ್ ಹೆಜಮಾಡಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ನಿರಂತರ್ ಉದ್ಯಾವರ : ಏಳು ದಿನದ ಬಹುಭಾಷ ನಾಟಕೋತ್ಸವಕ್ಕೆ ತೆರೆ

Posted On: 09-02-2023 05:54PM

ಉಡುಪಿ : ನಿರಂತರ್ ಸಂಘಟನೆಯ ನೇತೃತ್ವದಲ್ಲಿ ಐದನೇ ವರ್ಷದ ಪ್ರಯುಕ್ತ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಠಾರದಲ್ಲಿ ಏಳು ದಿನದ ಬಹುಭಾಷ ನಾಟಕೋತ್ಸವವು ಯಶಸ್ವಿಯಾಗಿ ಮುಕ್ತಾಯ ಕಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ಖ್ಯಾತ ಲೇಖಕಿಯಾಗಿರುವ ವಿತಾಶ ರೋಡ್ರಿಗಸ್ (ಮುದ್ದು ತೀರ್ಥಹಳ್ಳಿ), ಪ್ರಸ್ತುತ ಕಾಲದಲ್ಲಿ ಜನ ನಾಟಕಗಳಿಗಿಂತ ಚಲನಚಿತ್ರದತ್ತ ಹೆಚ್ಚು ಆಕರ್ಷಿತರಾದರೂ, ನಾಟಕಗಳು ಇನ್ನಷ್ಟು ಬೆಳೆಯುತ್ತೇವೆ. ಚಲನಚಿತ್ರಗಳು ಎಷ್ಟು ಬೆಳೆದರು ಅಥವಾ ಜನಪ್ರಿಯತೆಯನ್ನು ಕಂಡರೂ ನಾಟಕದ ಜಾಗಕ್ಕೆ ಬರಲು ಸಾಧ್ಯವೇ ಇಲ್ಲ. ನಾಟಕಕ್ಕೆ ಅದರದೇ ಆದ ವರ್ಚಸ್ಸು ಇದೆ ಎಂದರು.

ಉದ್ಯಾವರ ಚರ್ಚಿನ ಧರ್ಮ ಗುರುಗಳಾದ ವo. ಸ್ಟ್ಯಾನಿ ಬಿ ಲೋಬೊ ಮಾತನಾಡಿ, ಉದ್ಯಾವರದಲ್ಲಿ ಈ ನಾಟಕದ ಮೂಲಕ ಒಂದು ಹಬ್ಬವೇ ನಡೆಯಿತು. ಈ ಸಂಭ್ರಮದಲ್ಲಿ ನಾವೆಲ್ಲರೂ ಭಾಗಿಯಾದೆವು ಮತ್ತು ಈ ಸಂಭ್ರಮದ ಸಂದೇಶವನ್ನು ಸ್ವೀಕಾರ ಮಾಡಿದೆವು. ಉಡುಪಿ ಜಿಲ್ಲೆಯಲ್ಲಿ ಜನರನ್ನು ನಾಟಕದತ್ತ ಸೆಳೆಯವಲ್ಲಿ ನಿರಂತರ್ ಸಂಘಟನೆ ಯಶಸ್ವಿಯಾಗಿದೆ ಎಂದರು. ವಂ. ಲಿಯೋ ಪ್ರವೀಣ್ ಮಾತನಾಡಿ, ಏಳು ದಿನದ ನಾಟಕೋತ್ಸವದ ಮೂಲಕ ಕಲಾಭಿಮಾನಿಗಳಿಗೆ ನೀತಿ ಉಳ್ಳ ಜ್ಞಾನದ ಬಾಡೂಟ ಉಣ್ಣಿಸಿದ ಯಶಸ್ವಿಯ ದಿನ. ಮನೋರಂಜನೆಯ ಜೊತೆಗೆ ನೀತಿಯುಳ್ಳ ಪಾಠವನ್ನು ನಾಟಕದ ಮೂಲಕ ನಿರಂತರ್ ಸಂಘಟನೆ ಇಲ್ಲಿಯ ಜನತೆಗೆ ನೀಡಿದೆ ಎಂದರು.

ಮುದ್ದು ತೀರ್ಥಹಳ್ಳಿ ನಾಮಾಂಕಿತ, ಉಚ್ಚ ನ್ಯಾಯಾಲಯದ ನ್ಯಾಯವಾದಿ ವಿತಾಶ ರೊಡ್ರಿಗಸ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ವೇದಿಕೆಯಲ್ಲಿ ಉಡುಪಿ ಧರ್ಮ ಪ್ರಾಂತ್ಯದ ಕುಲಪತಿ ಅ. ವo. ಡಾ. ರೋಷನ್ ಡಿಸೋಜಾ, ನಾಟಕದ ನಿರ್ದೇಶಕ ವಂ. ಆಲ್ವಿನ್ ಸೆರಾವೊ, ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಅಧ್ಯಕ್ಷ ಲ. ಅನಿಲ್ ಲೋಬೊ, ಪ್ರಮುಖರಾದ ತಿಯಾದೋರ್ ಪಿರೇರಾ, ರೋನಾಲ್ಡ ಡಿಸೋಜಾ ಉಪಸ್ಥಿತರಿದ್ದರು.

ನಿರಂತರ ಅಧ್ಯಕ್ಷ ರೋಷನ್ ಕ್ರಾಸ್ತಾ ಸ್ವಾಗತಿಸಿದರೆ, ಕಾರ್ಯದರ್ಶಿ ಒಲವಿರಾ ಮತಯಸ್ ಧನ್ಯವಾದ ಸಮರ್ಪಿಸಿದರು. ಸ್ಟೀವನ್ ಕುಲಾಸೋ ಮತ್ತು ಮೈಕಲ್ ಡಿಸೋಜಾ ಕಾರ್ಯಕ್ರಮ ನಿರೂಪಿಸಿದರು. ಏಳು ದಿನದ ನಾಟಕೋತ್ಸವದಲ್ಲಿ ಐದು ಭಾಷೆಯ ನಾಟಕಗಳು ಪ್ರದರ್ಶನಗೊಂಡವು. ಸಭಾ ಕಾರ್ಯಕ್ರಮದಲ್ಲಿ ಆಯಾ ದಿನದ ನಾಟಕದ ಭಾಷೆಯ ಪ್ರಾರ್ಥನ ಗೀತೆಯನ್ನು ಹಾಡಲಾಗಿತ್ತು. ಪ್ರತಿ ದಿನ 500ಕ್ಕೂ ಅಧಿಕ ಕಲಾಭಿಮಾನಿಗಳು ನಾಟಕ ವೀಕ್ಷಣೆಯಲ್ಲಿದ್ದರೆ, ಕೊನೆಯ ದಿನ ಅದರ ಸಂಖ್ಯೆ 1,000 ಕ್ಕೆ ಸಮೀಪವಾಗಿತ್ತು.

ಕಾಪು : ಮಲ್ಲಾರಿನ ಪ್ರದೀಪ್ ಆರ್ ಭಂಡಾರಿಗೆ ಪಿಎಚ್ ಡಿ ಪದವಿ

Posted On: 09-02-2023 05:31PM

ಕಾಪು : ತಾಲೂಕಿನ ಮಲ್ಲಾರು ಗ್ರಾಮದ ಪ್ರದೀಪ್ ಭಂಡಾರಿಗೆ ಮಂಗಳೂರು ವಿವಿಯ ಘಟಕ ಕಾಲೇಜಾದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರಿಯಪ್ಪ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದಲ್ಲಿ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ್ ಭಂಡಾರಿ ಪಾಲಿಸಿಸ್ ಅಂಡ್ ಪ್ರಾಕ್ಟಿಸಸ್ ಆಫ್ ಎಂಪ್ಲೊಯೀರೇಟೆನ್ಸನ್ ಮ್ಯಾನೇಜ್ಮೆಂಟ್ ಇನ್ ಟೆಲಿಕಾಂ ಸೆಕ್ಸರ್ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿವಿ ಪಿಎಚ್ ಡಿ ಪದವಿ ನೀಡಿದೆ.

ಪ್ರದೀಪ್ ಭಂಡಾರಿ ಮಲ್ಲಾರು ಗ್ರಾಮದ ದಿ. ರವೀಂದ್ರ ಭಂಡಾರಿ ಹಾಗೂ ದಿ. ಸುಜಯ ಭಂಡಾರಿಯವರ ಪುತ್ರರಾಗಿರುತಾರೆ. ಇವರು ಮಂಗಳೂರು ವಿಶ್ವವಿದ್ಯಾನಿಲಯದ ಗೌರವಾನ್ವಿತ ಕುಲಪತಿಗಳಾದ ಪ್ರೊ. ಪಿ. ಎಸ್ ಯಡಪಡಿತ್ತಾಯ ಅವರ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧವನ್ನು ಮಂಡಿಸಿದ್ದು, ಫೆಬ್ರವರಿ ತಿಂಗಳಲ್ಲಿ ನಡೆಯಲಿರುವ ಮಂಗಳೂರು ವಿಶ್ವವಿದ್ಯಾನಿಲಯದ 41ನೇ ಘಟಿಕೋತ್ಸವದಲ್ಲಿ ಪಿ ಎಚ್ ಡಿ ಪ್ರಮಾಣಪತ್ರವನ್ನು ಸ್ವೀಕರಿಸಲಿದ್ದಾರೆ.

ಪಡುಬಿದ್ರಿ : ಆದಿ ಮಾಯೆ ಆದಿಶಕ್ತಿ, ಅಣ್ಣಪ್ಪ ಪಂಜುರ್ಲಿ, ಕೊರಗಜ್ಜ ಕ್ಷೇತ್ರ ಜೀರ್ಣೋದ್ಧಾರದ ಲಕ್ಕಿಡಿಪ್ ಪುಸ್ತಕ ಬಿಡುಗಡೆ

Posted On: 09-02-2023 01:28PM

ಪಡುಬಿದ್ರಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇತಿಹಾಸ ಪ್ರಸಿದ್ಧ ಪಡುಬಿದ್ರಿ ಆದಿ ಮಾಯೆ ಆದಿಶಕ್ತಿ ಹಾಗೂ ಅಣ್ಣಪ್ಪ ಪಂಜುರ್ಲಿ ಕೊರಗಜ್ಜ ದೈವಗಳ ಕ್ಷೇತ್ರದ ಜೀರ್ಣೋದ್ಧಾರದ ಪ್ರಯುಕ್ತ ಸೋಮವಾರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಬೊಬ್ಬರ್ಯ ಕಾಂತೇರಿ ಜುಮಾದಿ ಹಾಗೂ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಅದೃಷ್ಟ ಕೂಪನ್ ಟಿಕೆಟ್ ಇರುವ ಪುಸ್ತಕದ ಬಿಡುಗಡೆ ಕಾರ್ಯಕ್ರಮವನ್ನು ಬೊಬ್ಬರ್ಯ ಯುವ ಸೇವಾ ಸಮಿತಿಯ ಅಧ್ಯಕ್ಷರಾದ ವರದರಾಜ ಕಾಮತ್ ಅವರಿಗೆ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಕಾರ್ಯಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಡುಬಿದ್ರಿ ಹಾಗೂ ಕ್ಷೇತ್ರ ಧರ್ಮದರ್ಶಿಗಳಾದ ಸುಧಾಕರ್ ಮಡಿವಾಳ, ಬೊಬ್ಬರ್ಯ ಯುವ ಸೇವಾ ಸಮಿತಿ ಗೌರವಾಧ್ಯಕ್ಷರು ಕ್ಷೇತ್ರದ ಮುಕ್ಕಾಲ್ದಿ ಶೆಟ್ಟಿ ಬಾಲೆ ಹಾಗೂ ಜೀರ್ಣೋದ್ಧಾರ ಸಮಿತಿಯ ಸಂಘಟನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ದೊಡ್ಡನ ಗುಡ್ಡೆ, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಸಚಿಂದ್ರ ಶೆಟ್ಟಿ, ಜೀರ್ಣೋದ್ಧಾರ ಮಹಿಳಾ ಸಮಿತಿ ಅಧ್ಯಕ್ಷರಾದ ಮಮತಾ ಪಿ ಶೆಟ್ಟಿ ಹಾಗೂ ಸರ್ವ ಸದಸ್ಯರು ಉಪಸ್ಥಿತಿ ಇದ್ದರು.

ಕಾಪು : ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವ ಛಾಯಾಗ್ರಹಕ ನಿಧನ

Posted On: 09-02-2023 12:37PM

ಕಾಪು : ಇಲ್ಲಿನ ಪೊಲಿಪುವಿನ ನಿವಾಸಿ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿಯವರು ಗುರುವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಪ್ರೀತೇಶ್ ರವರು ನಾಲ್ಕು ದಿನದ ಹಿಂದೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ತೀವ್ರ ಗಾಯಗೊಂಡ ಅವರನ್ನು ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಅವರನ್ನು ಉಡುಪಿ ಅಜ್ಜರಕಾಡು ಸರಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಗುರುವಾರ ಬೆಳಗಿನ ಜಾವ ನಾಲ್ಕು ಗಂಟೆಗೆ ಪ್ರೀತೇಶ್ ರವರು ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ.

ಪ್ರೀತಿಶ್ ರವರು ಕಾಪು ಛಾಯಾಗ್ರಹಕ ಸಂಘದ ಅಜೀವ ಸದಸ್ಯರಾಗಿದ್ದು, ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದರು.

ಪ್ರೀತೇಶ್ ರವರು ತಂದೆ ತಾಯಿ ಹೆಂಡತಿ ಮಗಳು ಮತ್ತು ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಕಾಪು ಛಾಯಾಗ್ರಾಹಕ ಸಂಘದ ಅಧ್ಯಕ್ಷ ವಿನೋದ್ ಕಾಂಚನ್ ಮತ್ತು ಸದಸ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕಟಪಾಡಿ : ಯುವಜನ ಸೇವಾ ಸಂಘ ಏಣಗುಡ್ಡೆ - ನೂತನ ಸಂಘದ ಉದ್ಘಾಟನೆ

Posted On: 06-02-2023 09:23PM

ಕಟಪಾಡಿ : ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಇದರ ನೂತನ ಸಂಘದ ಉದ್ಘಾಟನಾ ಸಮಾರಂಭವು ಫೆಬ್ರವರಿ 5 ರಂದು ಕಟಪಾಡಿಯ ತ್ರಿಶಾ ವಿದ್ಯಾಕಾಲೇಜ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಾ ಉದಯ ಕುಮಾರ್ ಶೆಟ್ಟಿ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜ್ ನ ಇಂದುರೀತಿ ಉದ್ಘಾಟಿಸಿದರು.

ಇದರ ಪ್ರಯುಕ್ತ ಯುವಜನ ಸೇವಾ ಸಂಘದ ನೇತೃತ್ವದಲ್ಲಿ, ರಾ.ಸೇ. ಯೋಜನಾ ಘಟಕ ತ್ರಿಶಾ ವಿದ್ಯಾ ಕಾಲೇಜು,ಕಟಪಾಡಿ ಉಡುಪಿ,ರಕ್ತನಿಧಿ, ಜಿಲ್ಲಾ ಆಸ್ಪತ್ರೆ ಉಡುಪಿ ಇದರ ಸಂಯುಕ್ತ ಆಶ್ರಯದಲ್ಲಿ ಹಾಗೂ ಹಲವಾರು ಸಂಘ ಸಂಸ್ಥೆಗಳ ಸಹಯೋಗದಿಂದ ರಕ್ತದಾನ ಶಿಬಿರ ಹಾಗೂ ಉಚಿತ ಆಯುಷ್ಮಾನ್ ಕಾರ್ಡ್ ನೋಂದಣಿ ಕಾರ್ಯಾಗಾರ ನಡೆಯಿತು.

ಸಂಘದ ಅಧಿಕೃತ ಲೋಗೋವನ್ನು ಅರ್ಚಿಟೆಕ್ಟ್ ಪ್ರಮುಖ್ ರೈ ಹಾಗೂ ಕಾಪು ಪೊಲೀಸ್ ಠಾಣೆಯ ಉಪನಿರೀಕ್ಷಕ ದಯಾನಂದ ಬಿಡುಗಡೆ ಗೊಳಿಸಿದರು. ಮುಖ್ಯ ಅತಿಥಿಗಳಾಗಿ ಉಡುಪಿ ರಕ್ತನಿಧಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿ ಡಾ ವೀಣಾ ಕುಮಾರಿ, ವಿಜಯ್ ಕುಮಾರ್ ಉದ್ಯಾವರ ಆಡಳಿತಾಧಿಕಾರಿ ತ್ರಿಶಾ ವಿದ್ಯಾ ಕಾಲೇಜ್,ಜೈ ತುಲುನಾಡ್(ರಿ) ನ ರಾಜೇಶ್, ಸತ್ಯದ ತುಳುವೆರ್(ರಿ) ಉಡುಪಿ-ಮಂಗಳೂರು ನ ಪ್ರವೀಣ್ ಕುರ್ಕಾಲ್, ತ್ರಿಶಾ ವಿದ್ಯಾ ಕಾಲೇಜ್ ರಾ, ಸೇ ಯೋಜನಾಧಿಕಾರಿ ಸಂತೋಷ್. ಎ, ಶೆಟ್ಟಿ , ಜೂನಿಯರ್ ಫ್ರೆಂಡ್ಸ್ ಕೋರಂಗ್ರಪಾಡಿಯ ಚೇತನ್, ಸಂಗಮ್ ಫ್ರೆಂಡ್ಸ್ ನ ಜಯಕರ್ ಕುಂದರ್, ಗ್ರಾಮ ಒನ್ ಕೇಂದ್ರ ಕೋಟೆ ಇದರ ಸಹನಾ ಕುಂದರ್, ರತ್ನಾಕರ್ ಉಡುಪಿ, ಮಹೇಶ್ ಎನ್ ಅಂಚನ್ ಭಾಗವಹಿಸಿದ್ದರು.

ಶಿಬಿರದಲ್ಲಿ ಒಟ್ಟು 82 ಯೂನಿಟ್ ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು. ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಪ್ರಮೋದ್ ವಹಿಸಿದ್ದರು, ಸಂಘದ ಕಾರ್ಯದರ್ಶಿ ಸಂತೋಷ್ ಎನ್. ಎಸ್ ಸ್ವಾಗತಿಸಿದರು. ಕುಮಾರಿ ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿ, ಕೋಶಾಧಿಕಾರಿ ಸನತ್ ಕೋಟ್ಯಾನ್ ವಂದಿಸಿದರು.

ಉಡುಪಿ ತುಳುಕೂಟ : 21ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

Posted On: 06-02-2023 09:13PM

ಉಡುಪಿ : ಬದುಕಿನಲ್ಲಿ ಟಿ.ವಿ.ಯಂತಹ ಪರಿಕರಗಳ ಬಳಕೆ ಹೆಚ್ಚುತ್ತಿರುವುದರಿಂದ, ಜನರು ನಾಟಕದಂತಹ ಕಲೆಗಳಿಂದ ದೂರವಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿಯೂ ಉಡುಪಿ ತುಳುಕೂಟ ಎರಡು ದಶಕಗಳಿಂದ ನಾಟಕೋತ್ಸವವನ್ನು ನಡೆಸುತ್ತಾ ಜನರ ಉಡುಪಿಯ ಅಭಿರುಚಿಯನ್ನು ಜೀವಂತವಾಗಿಟ್ಟಿರುವುದು ಶ್ಲಾಘನೀಯ ಎಂದು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಪದ್ಮರಾಜ್ ಹೆಗ್ಡೆ ಹೇಳಿದರು. ಅವರು ಭಾನುವಾರ ಉಡುಪಿ ತುಳುಕೂಟದ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 21ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ವಿಶ್ವದಾದ್ಯಂತ ಇಂದು ಸುಮಾರು 18,50,000 ಮಂದಿ ಮಾತನಾಡುವ ತುಳು ಭಾಷೆಗೆ ಸರ್ಕಾರ ಈಗಲಾದರೂ ರಾಜ್ಯದ 2ನೇ ಭಾಷೆಯ ಮಾನ್ಯತೆ ನೀಡುವುದಕ್ಕೆ ಸಿದ್ದತೆಗಳನ್ನು ನಡೆಸಿದೆ. ಈ ಮೂಲಕ ತುಳುವರ ದಶಕದ ಕನಸು ಈಡೇರುತ್ತಿದೆ ಎಂದವರು ಸಂತಸ ವ್ಯಕ್ತಪಡಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಕೂಟದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು.

ಅತಿಥಿಗಳಾಗಿ ತುಳು ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ದಾನಿ ವಿಶ್ವನಾಥ ಶೆಣೈ, ಉದ್ಯಮಿಗಳಾದ ಪಿ. ಪುರುಷೋತ್ತಮ ಶೆಟ್ಟಿ, ಮನೋಹರ ಶೆಟ್ಟಿ, ಕೆಮ್ತೂರು ಕುಟುಂಬದ ವಿಜಯಕುಮಾರ್ ಶೆಟ್ಟಿ ಆಗಮಿಸಿದ್ದರು. ಕೂಟದ ಪ್ರಧಾನ ಕಾರ್ಯದರ್ಶಿ ಗಂಗಾಧರ ಕಿದಿಯೂರು, ಕೋಶಾಧಿಕಾರಿ ಚೈತನ್ಯ ಎಂ.ಜಿ., ನಾಟಕ ಸ್ಪರ್ಧೆಯ ಸಂಚಾಲಕ ಬಿ. ಪ್ರಭಾಕರ ಭಂಡಾರಿ ವೇದಿಕೆಯಲ್ಲಿದ್ದರು.

ಕೂಟದ ಉಪಾಧ್ಯಕ್ಷ ದಿವಾಕರ ಸನೀಲ್ ಸ್ವಾಗತಿಸಿದರು. ತಾರಾ ಉಮೇಶ್ ಆಚಾರ್ಯ ಕಾರ್ಯಕ್ರಮ ಸಂಯೋಜಿಸಿದರು. ಇದೇ ಸಂದರ್ಭದಲ್ಲಿ ಪ.ಪೂ ತರಗತಿಯಲ್ಲಿ ತುಳು ಭಾಷಾ ವಿಷಯದಲ್ಲಿ ಶೇ. 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಮತ್ತು ಉಡುಪಿ ತುಳುಕೂಟದ ನೂತನ ಯೂಟ್ಯೂಬ್ ಚಾನೆಲ್ ಗೆ ಚಾಲನೆ ನೀಡಲಾಯಿತು.

ಪಾಂಗಾಳ : ಹಾಡುಹಗಲೇ ಯುವಕನ ಕೊಲೆ

Posted On: 05-02-2023 07:34PM

ಕಾಪು : ಪಾಂಗಾಳದಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಇರಿದು ಕೊಲೆಗೈದ ಘಟನೆ ರವಿವಾರ ಸಂಜೆ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಮೃತ ಯುವಕ.

ಪಾಂಗಾಳ ಶ್ರೀ ಜನಾರ್ದನ ದೇವಸ್ಥಾನದ ಬಳಿಯ ಅಂಗಡಿಯ ಬಳಿಯೊಂದರಲ್ಲಿ ಕೃತ್ಯ ನಡೆದಿದ್ದು ಗಂಭೀರ ಗಾಯಗೊಂಡು ರಕ್ತದ ಮಡುವಿನಲ್ಲಿ‌ ಬಿದ್ದಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು.

ಕಾಪು ವೃತ್ತ ನಿರೀಕ್ಷಕ ಕೆ.ಸಿ. ಪೂವಯ್ಯ, ಕಾಪು ಎಸ್ಸೈ ಸುಮ ಬಿ., ಕ್ರೈಂ ಎಸ್ಸೈ ಭರತೇಶ್ ಕಂಕಣವಾಡಿ ಸಹಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಕಾಪು : ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆ

Posted On: 05-02-2023 04:47PM

ಕಾಪು : ವಿಶ್ವಹಿಂದೂ ಪರಿಷದ್ ಬಜರಂಗದಳ ಕಾಪು ಪ್ರಖಂಡ ಇದರ ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆಯಾಗಿರುತ್ತಾರೆ.