Updated News From Kaup
ಕಾರ್ಕಳ ವಿಧಾನಸಭಾ ಕ್ಷೇತ್ರ : ಕಾಂಗ್ರೆಸ್ ನಿಂದ ಅನಿತಾ ಡಿಸೋಜ ರವರಿಗೆ ಟಿಕೆಟ್ ನೀಡಲು ಮನವಿ
Posted On: 23-03-2023 02:08PM
ಕಾರ್ಕಳ : ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿರುವ ಸಮಯದಲ್ಲಿ ವಿವಿಧ ಪಕ್ಷಗಳು ಅಭ್ಯರ್ಥಿ ತನಕ್ಕಾಗಿ ಭಾರಿ ಕಸರತ್ತನ್ನು ಮಾಡುತ್ತಿವೆ. ಪ್ರತಿಷ್ಠಿತ ಕಾರ್ಕಳ ಕ್ಷೇತ್ರದಲ್ಲಿ ಕಾಂಗ್ರೆಸ್ ಕ್ಷೇತ್ರವನ್ನು ಮರಳಿ ತನ್ನ ತೆಕ್ಕೆಗೆ ತರಲು ಹರಸಾಹಸ ಮಾಡುತ್ತಿದೆ. ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಹಲವು ಬಾರಿ ಪ್ರತಿನಿಧಿಸಿದಂತ ಕ್ಷೇತ್ರದಲ್ಲಿ ಪ್ರಸ್ತುತ ಕಾಂಗ್ರೆಸ್ ಹೀನಾಯ ಪರಿಸ್ಥಿತಿಯಲ್ಲಿದೆ. ಇಂಧನ ಸಚಿವ ಬಿಜೆಪಿ ಪ್ರಮುಖ ಮುಖಂಡ ಸುನಿಲ್ ಕುಮಾರ್ ರವರ ಹಿಡಿತದಲ್ಲಿರುವಂತ ಕಾರ್ಕಳ ಕ್ಷೇತ್ರವನ್ನು ಮತ್ತೆ ಕಾಂಗ್ರೆಸ್ ತನ್ನ ಗತ ಇತಿಹಾಸವನ್ನು ಮರಳಿ ತರುವಲ್ಲಿ ಹರಸಾಸಪಡುತ್ತಿದೆ.
ಮಾಚ್೯ 24 : ಹಾವಂಜೆ ಇರ್ಮಾಡಿ ಶೆಟ್ಟಿಬೆಟ್ಟು ಮೂಲನಾಗದೇವರ ದಿವ್ಯಸನ್ನಿಧಿಯಲ್ಲಿ ಚತುಃಪವಿತ್ರ ನಾಗಮಂಡಲೋತ್ಸವ
Posted On: 23-03-2023 01:59PM
ಉಡುಪಿ : ಇಲ್ಲಿನ ಹಾವಂಜೆ ಇರ್ಮಾಡಿ ಶೆಟ್ಟಿಬೆಟ್ಟು ಮೂಲನಾಗದೇವರ ದಿವ್ಯಸನ್ನಿಧಿಯಲ್ಲಿ ಮಾಚ್೯ 24, ಶುಕ್ರವಾರ ಚತುಃಪವಿತ್ರ ನಾಗಮಂಡಲೋತ್ಸವ ವಿದ್ವಾನ್ ವೇದಮೂರ್ತಿ ಹೆರ್ಗ ಜಯರಾಮ್ ತಂತ್ರಿ ಮತ್ತು ಹಾವಂಜೆ ಗುರುರಾಜ್ ಭಟ್ ಇವರ ನೇತೃತ್ವದಲ್ಲಿ, ನಾಗಪಾತ್ರಿ ರಾಮಚಂದ್ರ ಕುಂಜಿತ್ತಾಯ ಶ್ರೀ ಕ್ಷೇತ್ರ ಕಲ್ಲಂಗಳ, ಕೃಷ್ಣಪ್ರಸಾದ್ ವೈದ್ಯ ಮುದ್ದೂರು ಮತ್ತು ನಾಗಕನ್ನಿಕೆಯಾಗಿ ಬಾಲಕೃಷ್ಣ ವೈದ್ಯ, ನಟರಾಜ ವೈದ್ಯ ಬಳಗದವರ ಸಹಯೋಗದೊಂದಿಗೆ ನಡೆಯಲಿದೆ
ಕಾಪು : ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಐವರು ವಶಕ್ಕೆ
Posted On: 22-03-2023 07:55PM
ಕಾಪು : ಇಲ್ಲಿನ ಪಡು ಗ್ರಾಮದ ಬಬ್ಬುಸ್ವಾಮಿ ದೈವಸ್ಥಾನದ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಜೂಜಾಟವಾಡುತ್ತಿದ್ದ ಐದು ಜನರನ್ನು, ನಗದು ಸಹಿತ ಇತರೆ ವಸ್ತುಗಳನ್ನು ಕಾಪು ಪೋಲಿಸರು ವಶಪಡಿಸಿಕೊಂಡ ಘಟನೆ ಮಾಚ್೯ 22 ರಂದು ನಡೆದಿದೆ.
ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ : ಪಡುಬಿದ್ರಿ ಚೆಂಡಿಗೆ ಚಾಲನೆ
Posted On: 22-03-2023 05:05PM
ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ. 22ರಂದು ಚೆಂಡಿಗೆ ಚಾಲನೆ ನೀಡಲಾಯಿತು.
ಪಡುಬಿದ್ರಿ : ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ರಥಾರೋಹಣ ಸಂಪನ್ನ
Posted On: 22-03-2023 10:38AM
ಪಡುಬಿದ್ರಿ : ಇತಿಹಾಸ ಪ್ರಸಿದ್ದ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವದ ಪ್ರಯುಕ್ತ ಮಾ. 21ರಂದು ಮಧ್ಯಾಹ್ನ ರಥಾರೋಹಣ ಮತ್ತು ರಾತ್ರಿ ಶ್ರೀಮನ್ಮಹಾರಥೋತ್ಸವ ಸಂಪನ್ನಗೊಂಡಿತು.
ಇಂದು ಮತ್ತು ನಾಳೆ : ಕಾಪುವಿನ ಮೂರು ಮಾರಿಗುಡಿಗಳಲ್ಲಿ ಮಾರಿಪೂಜೆಯ ಸಂಭ್ರಮ
Posted On: 21-03-2023 03:15PM
ಕಾಪು : ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ, ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಕಾಪು ಶ್ರೀ ಮೂರನೇ ಮಾರಿಯಮ್ಮ ದೇವಸ್ಥಾನದಲ್ಲಿ ಜರಗುವ ಕಾಲಾವಧಿ ಸುಗ್ಗಿ ಮಾರಿಪೂಜೆಯು ಈ ಬಾರಿ ಮಾಚ್೯ 21 ಮತ್ತು 22ರಂದು ನಡೆಯಲಿದೆ.
ಪಡುಬಿದ್ರಿ : ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ವತಿಯಿಂದ ಜರಗಿದ ಸಾಂಸ್ಕೃತಿಕ ಕಾರ್ಯಕ್ರಮಗಳು ಸಂಪನ್ನ
Posted On: 19-03-2023 09:48PM
ಪಡುಬಿದ್ರಿ : ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ಸಾಧಕರನ್ನು ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿರುವ ಪಡುಬಿದ್ರಿಯ ತುಳುನಾಡ ಕಲಾವಿದರು ಸಂಘಟನೆಯ ಕಾರ್ಯ ಶ್ಲಾಘನೀಯ. ಪಡುಬಿದ್ರಿ ಭಾಗದಲ್ಲಿ ಕಲಾವಿದರಿಗೆ ಕೊರತೆಯಿಲ್ಲ. ಹಲವಾರು ಪ್ರತಿಭೆಗಳಿವೆ. ಇದು ನಮಗೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಪಡುಬಿದ್ರಿ ವ್ಯವಸಾಯಿಕ ಸಹಕಾರಿ ಸೊಸೈಟಿಯ ಅಧ್ಯಕ್ಷರಾದ ವೈ, ಸುಧೀರ್ ಕುಮಾರ್ ಹೇಳಿದರು. ಅವರು ಮಾಚ್೯ 18 ರಂದು ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾ ಗಣಪತಿ ದೇವಸ್ಥಾನದ ರಥೋತ್ಸವದ ಅಂಗವಾಗಿ ತುಳುನಾಡ ಕಲಾವಿದರು ಪಡುಬಿದ್ರಿ ವತಿಯಿಂದ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದ ಮುನ್ನ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ವರ್ಷದಿಂದ ವರ್ಷಕ್ಕೆ ಜನರಿಗೆ ಉತ್ತಮವಾದಂತಹ ಮನೋರಂಜಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಹೀಗೆಯೇ ಮುಂದುರಿಯಲಿ ಎಂದರು.
ಉಡುಪಿ : ಮತದಾನ ಜಾಗೃತಿ - ಕಿರುಚಿತ್ರ ಸ್ಪರ್ಧೆ ವಿಜೇತರು
Posted On: 19-03-2023 05:44PM
ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆ-2023 ರ ಅಂಗವಾಗಿ ಸಾರ್ವಜನಿಕರಿಗೆ ಏರ್ಪಡಿಸಲಾಗಿದ್ದ ಮತದಾನ ಜಾಗೃತಿ ಕಿರುಚಿತ್ರ ನಿರ್ಮಾಣ ಸ್ಪರ್ಧೆಯಲ್ಲಿ ಮೊದಲ ಐದು ಸ್ಥಾನ ಪಡೆದ ಸ್ಪರ್ಧೆಯ ವಿಜೇತರ ವಿವರ ಈ ಕೆಳಗಿನಂತಿದೆ.
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕ - ಗೋಗ್ರಾಸ ಸಮರ್ಪಣೆ
Posted On: 19-03-2023 02:51PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಪಡುಬೆಳ್ಳೆ ಘಟಕದ ನೇತೃತ್ವದಲ್ಲಿ ನೀಲಾವರ ಗೋಶಾಲೆಗಾಗಿ ಗೋಗ್ರಾಸ ಇಂದು ನೀಡಲಾಯಿತು.
ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ಶಿರ್ವ ಮತ್ತು ಪಾಂಗಾಳ ಘಟಕಗಳಿಂದ ಹಿಂದೂ ರುಧ್ರಭೂಮಿಯ ಸ್ವಚ್ಛತಾ ಕಾರ್ಯ
Posted On: 19-03-2023 02:45PM
ಕಾಪು : ಬಜರಂಗದಳದ ಸೇವಾ ಸಪ್ತಾಹ ಅಂಗವಾಗಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಶಿರ್ವ ವಿಷ್ಣುಮೂರ್ತಿ ಘಟಕ ಮತ್ತು ಪಾಂಗಾಳ ಘಟಕ ವತಿಯಿಂದ ಸಾಮಾಜಿಕ ಕಾರ್ಯಗಳು ಇಂದು ಜರಗಿತು.
