Updated News From Kaup

ಮಾಚ್೯ 19 : ಮೀನುಗಾರಿಕಾ ಸಚಿವರಿಂದ ಮೀನುಗಾರರೊಂದಿಗೆ ಸಂವಾದ ಕಾರ್ಯಕ್ರಮ

Posted On: 18-03-2023 07:44AM

ಉಡುಪಿ : ಕೇಂದ್ರ ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ಸಚಿವಾಲಯವು ಕರಾವಳಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ ಪೂರ್ವ ನಿರ್ಧರಿಸಿದ ಸಮುದ್ರ ಮಾರ್ಗದ ಮೂಲಕ ಸಾಗರ ಪರಿಕ್ರಮ ಕಾರ್ಯಕ್ರಮವನ್ನು ಆಯೋಜಿಸಿದೆ. ಮೀನುಗಾರರು, ಕರಾವಳಿ ಸಮುದಾಯಗಳು ಮತ್ತು ಮಧ್ಯಸ್ಥಗಾರರೊಂದಿಗೆ ಸಂವಾದವನ್ನು ಸುಲಭಗೊಳಿಸಲು ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ವಿವಿಧ ಮೀನುಗಾರಿಕೆ ಸಂಬಂಧಿತ ಯೋಜನೆಗಳು ಮತ್ತು ಕಾರ್ಯಕ್ರಮಗಳ ಮಾಹಿತಿಯನ್ನು ಪ್ರಸಾರ ಮಾಡಲು, ಎಲ್ಲಾ ಮೀನುಗಾರರಿಗೆ ಮತ್ತು ಸಂಬಂಧಪಟ್ಟವರಿಗೆ ಒಗ್ಗಟ್ಟನ್ನು ಪ್ರದರ್ಶಿಸುವ ಗುರಿ ಹೊಂದಲು, ಆತ್ಮನಿರ್ಭರ ಭಾರತ ಸ್ಪೂರ್ತಿಯಂತೆ ಮಧ್ಯಸ್ಥಗಾರರು ಜವಾಬ್ದಾರಿಯುತ ಮೀನುಗಾರಿಕೆಯನ್ನು ಉತ್ತೇಜಿಸಲು ಮತ್ತು ರಾಷ್ಟ್ರದ ಆಹಾರ ಭದ್ರತೆ ಮತ್ತು ಕರಾವಳಿ ಮೀನುಗಾರ ಸಮುದಾಯಗಳ ಜೀವನೋಪಾಯಕ್ಕಾಗಿ ಸಮುದ್ರ ಮೀನುಗಾರಿಕೆ ಸಂಪನ್ಮೂಲಗಳ ಬಳಕೆ ಹಾಗೂ ಸಮುದ್ರ ಪರಿಸರ ವ್ಯವಸ್ಥೆಗಳ ರಕ್ಷಣೆಯ ನಡುವೆ ಸುಸ್ಥಿರ ಸಮತೋಲನವನ್ನು ಕೇಂದ್ರೀಕರಿಸುವುದಾಗಿದೆ.

ಕಟಪಾಡಿ :ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್‌ನ ಅಂತಾರಾಷ್ಟ್ರೀಯ ಉಪಾಧ್ಯಕ್ಷರಾಗಿ ನವೀನ್ ಅಮೀನ್ ಶಂಕರಪುರ ಆಯ್ಕೆ

Posted On: 17-03-2023 11:57AM

ಕಟಪಾಡಿ : ಸೀನಿಯರ್ ಚೇಂಬರ್ ಇಂಟರ್‌ನ್ಯಾಷನಲ್‌ನ ಅಂತಾರಾಷ್ಟ್ರೀಯ ಉಪಾಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ, ಉದ್ಯಮಿ ನವೀನ್ ಅಮೀನ್ ಶಂಕರಪುರ ಆಯ್ಕೆಯಾಗಿದ್ದಾರೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಜಿಲ್ಲೆಯಲ್ಲಿ ಉಂಟಾಗದಂತೆ ಅಧಿಕಾರಿಗಳು ಎಚ್ಚರವಹಿಸಿ : ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

Posted On: 16-03-2023 07:26PM

ಉಡುಪಿ : ಬೇಸಿಗೆಯಲ್ಲಿ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಿ ಸಮಸ್ಯೆಗಳು ಉಂಟಾಗದಂತೆ ನೋಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯ ಕೋರ್ಟ್ ಹಾಲ್ ನಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕೋಟ್ಯಂತರ ಭಕ್ತರ ನಂಬಿಕೆಯ ಗುಳಿಗ ದೈವಕ್ಕೆ ಗೃಹಸಚಿವರಿಂದ ಅಪಮಾನ ಖಂಡನೀಯ : ಪದ್ಮರಾಜ್‌ ಆರ್.

Posted On: 16-03-2023 07:07PM

ಮಂಗಳೂರು : ತುಳುನಾಡು ಮಾತ್ರವಲ್ಲ ದೇಶ, ವಿದೇಶದಲ್ಲೂ ಚರಿತ್ರೆ ಸೃಷ್ಟಿಸಿರುವ ನಾಟಕ ವಿಜಯಕುಮಾರ್ ಕೊಡಿಯಾಲ್‌ಬೈಲ್‌ ನಿರ್ದೇಶನದ 'ಶಿವಧೂತ ಗುಳಿಗೆ'. ದೈವಾರಾಧನೆ ಎಂದರೆ ತುಳುನಾಡಿನ ಧಾರ್ಮಿಕತೆ ಮತ್ತು ನಂಬಿಕೆ. ಇದು ಕೇವಲ ಆಚರಣೆಯಲ್ಲ; ತುಳುನಾಡಿನ ಬದುಕಿನ ಸಂಸ್ಕೃತಿಯೂ ಹೌದು ಎನ್ನುವುದನ್ನು ಅದ್ಭುತ ರಂಗಪ್ರಯೋಗದ ಮೂಲಕ ತೋರಿಸಿಕೊಟ್ಟರು ಕೊಡಿಯಾಲ್‌ಬೈಲ್‌ರವರು. ಇದೀಗ ಇವರ ನಿರ್ದೇಶನದ 'ಶಿವಧೂತ ಗುಳಿಗೆ' ನಾಟಕದ ಬಗ್ಗೆ ರಾಜ್ಯದ ಗೃಹ ಸಚಿವ ಆರಗ ಜ್ಞಾನೇಂದ್ರ ಅವಹೇಳನ ಮಾಡಿರುವುದು ದೈವಾರಾದನೆ ಮಾತ್ರವಲ್ಲ ಕೋಟ್ಯಂತರ ಮಂದಿ ದೈವ ಭಕ್ತರಿಗೆ ಮಾಡಿದ ಅಪಮಾನ ಎಂದು ಮಂಗಳೂರಿನ ನೋಟರಿ, ವಕೀಲರು ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್‌ ಆರ್. ಖಂಡಿಸಿದ್ದಾರೆ.

ಶಿರ್ವ : ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ, ಶ್ರೀ ವಿಶ್ವ ಬ್ರಾಹ್ಮಣ ಮಹಿಳಾ ಬಳಗದ ದಶಮಾನೋತ್ಸವ ಸಂಭ್ರಮ ಸಂಪನ್ನ

Posted On: 16-03-2023 06:24PM

ಶಿರ್ವ : ವಿಶ್ವಕರ್ಮ ಯುವ ಜನಾಂಗ ಸಾಮಾಜಿಕ ಚಟುವಟಿಕೆಯಲ್ಲಿ ಹಿಂದಿದೆ. 14ರಿಂದ 20 ವರ್ಷದ ಯುವಕರು ಕೇವಲ ಮೊಬೈಲ್ ನಲ್ಲಿ ತಲ್ಲೀನರಾಗಿದ್ದು ಈ ಬಗ್ಗೆ ಪಾಲಕರು ಮುತುವರ್ಜಿ ವಹಿಸಿ ಈ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳುವಲ್ಲಿ ಜವಾಬ್ದಾರಿ ವಹಿಸಬೇಕು. ಎಲ್ಲಾ ಸಮಾಜದವರನ್ನು ಒಟ್ಟುಗೂಡಿಸಿ ಕಾರ್ಯಕ್ರಮ ನಡೆಸುತ್ತಿದ್ದಾರೆ. ಅದು ವಿಶ್ವಕರ್ಮ ಸಮಾಜದವರಿಂದ ಮಾತ್ರ ಸಾಧ್ಯ ಎಂದು ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳು ಹೇಳಿದರು. ಅವರು ಶ್ರೀ ವಿಶ್ವ ಬ್ರಾಹ್ಮಣ ಯುವ ಸಂಗಮ (ರಿ). ಶಿರ್ವ ಮತ್ತು ಶ್ರೀ ವಿಶ್ವ ಬ್ರಾಹ್ಮಣ ಮಹಿಳಾ ಬಳಗ ಶಿರ್ವ ಇದರ ದಶಮಾನೋತ್ಸವ ಸಂಭ್ರಮದ ಕಾರ್ಯಕ್ರಮದಲ್ಲಿ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿದರು.

ಪಡುಬಿದ್ರಿ : ಮಾ.14ರಿಂದ ಮಾ.22ರವರೆಗೆ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಾವಧಿ ಮಹೋತ್ಸವ

Posted On: 14-03-2023 08:58PM

ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಮಾ.14ರಿಂದ ಮಾ. 22ರ ವರೆಗೆ ವರ್ಷಾವಧಿ ಮಹೋತ್ಸವ ವಿಜೃಂಭಣೆಯಿಂದ ಜರಗಲಿದೆ.

ಉಡುಪಿ : ಚುನಾವಣೆ ಸಂದರ್ಭ ಅಬಕಾರಿ ಅಕ್ರಮ ತಡೆಗಟ್ಟಲು ವಿಶೇಷ ತಂಡ ರಚನೆ

Posted On: 14-03-2023 07:11PM

ಉಡುಪಿ : ರಾಜ್ಯ ವಿಧಾನಸಭಾ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆ, ಮತದಾರರನ್ನು ಸೆಳೆಯಲು ನಕಲಿ/ ಕಳಪೆ ಮಟ್ಟದ ಮದ್ಯ ಹಾಗೂ ಕಳ್ಳಭಟ್ಟಿ ಸಾರಾಯಿಗಳನ್ನು ತಯಾರಿಸಿ, ಸಾಗಾಣಿಕೆ ಹಾಗೂ ಶೇಖರಣೆ ಮಾಡಿ, ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿತರಿಸುವ ಸಾಧ್ಯತೆ ಇದ್ದು, ಇದನ್ನು ಸೇವನೆ ಮಾಡಿದವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದ್ದು ಹಾಗೂ ಕೆಲವು ಸಮಾಜ ಘಾತುಕರು ಅಕ್ರಮವಾಗಿ ಆದಾಯ ಗಳಿಸಲು ತೆರಿಗೆ ಪಾವತಿಸಿರುವ ಮದ್ಯವನ್ನು ಖರೀದಿಸಿ, ದಾಸ್ತಾನು ಇಟ್ಟು, ಅದನ್ನು ಚುನಾವಣೆಯ ಡ್ರೈ ಡೇ ದಿನಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಸಾಧ್ಯತೆ ಇರುವುದರಿಂದ ಇಂತಹ ಕಾರ್ಯಗಳನ್ನು ತಡೆಗಟ್ಟಿ ಅಂತಹವರ ವಿರುದ್ಧ ಅಬಕಾರಿ ಇಲಾಖೆ ವತಿಯಿಂದ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಏಪ್ರಿಲ್ 1 : ಯುವಸೇನೆ ಮಡುಂಬು ಇನ್ನಂಜೆ - 16ನೇ ವಾರ್ಷಿಕೋತ್ಸವ - ಸಾಂಸ್ಕೃತಿಕ, ಮನೋರಂಜನಾ ಮತ್ತು ಸಭಾ ಕಾರ್ಯಕ್ರಮ

Posted On: 14-03-2023 07:34AM

ಕಾಪು : ಯುವಸೇನೆ ಮಡುಂಬು ಇನ್ನಂಜೆ ಇದರ 16ನೇ ವಾರ್ಷಿಕೋತ್ಸವ ಸಮಾರಂಭ ಏಪ್ರಿಲ್ 1, ಶನಿವಾರದಂದು ಮಡುಂಬು ಬೆರ್ಮೋಟ್ಟು ದೇವಸ್ಥಾನದ ಬಳಿ ನಡೆಯಲಿದೆ.

ಗೃಹ ರಕ್ಷಕರ ನೇಮಕಾತಿ : ಅರ್ಜಿ ಆಹ್ವಾನ

Posted On: 13-03-2023 06:27PM

ಉಡುಪಿ : ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ, 19 ರಿಂದ 45 ವರ್ಷದೊಳಗಿನ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯಿಂದ ಪರಿಪೂರ್ಣತೆ: ಎಸ್.ಟಿ ಸಿದ್ದಲಿಂಗಪ್ಪ

Posted On: 13-03-2023 06:13PM

ಉಡುಪಿ : ತರಬೇತಿಯು ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಜ್ಞಾನ, ಕೌಶಲ್ಯತೆ ಹಾಗೂ ಅತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಯಾವುದೇ ಉದ್ಯೋಗದಲ್ಲಿ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ತರಬೇತಿಯು ಅತೀ ಅಗತ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ಧಲಿಂಗಪ್ಪ ಹೇಳಿದರು. ಅವರು ಗುರುವಾರ, ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಚೇರಿಯಲ್ಲಿ, ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇ ತಂಡದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಕಾವಲು ಪೊಲೀಸ್ ಘಟಕದ ವತಿಯಿಂದ ಹಮ್ಮಿಕೊಂಡಿರುವ ಈಜು ತರಬೇತಿ, ಪ್ರಥಮ ಚಿಕಿತ್ಸೆ, ಸಮುದ್ರ ಈಜು ತರಬೇತಿ ಮತ್ತು ಒಳಾಂಗಣ ತರಬೇತಿಯು ಸಿ.ಎಸ್.ಪಿ ಘಟಕದ ಕರ್ತವ್ಯ ನಿರ್ವಹಣೆಗೆ ಪೂರಕವಾಗಿದೆ ಎಂದರು.