Updated News From Kaup
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾವ್ಯಾನುಬಂಧ ವಿಚಾರಗೋಷ್ಠಿ – ಕವಿಗೋಷ್ಠಿ

Posted On: 26-01-2023 07:38PM
ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (KSSAP )ಆಶ್ರಯದಲ್ಲಿ ನಾಡು ಕಂಡ ಅದ್ವಿತೀಯ ಪ್ರೇಮ ಕವಿ ಕೆ.ಎಸ್ ನರಸಿಂಹ ಸ್ವಾಮಿಯವರ ಜನ್ಮ ದಿನಾಚರಣೆ ಪ್ರಯುಕ್ತ ಕದ್ರಿ ಬಾಲ ಭವನದಲ್ಲಿ ಕಾವ್ಯಾನುಬಂಧ ವಿಚಾರಗೋಷ್ಠಿ – ಕವಿಗೋಷ್ಠಿ ನಡೆಸುವ ಮೂಲಕ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಅಭಿಯಂತರ, ಕವಿ ಸಾಹಿತಿ ಡಾ. ಆನಂದ್ ಬಂಜನ್ ಮಾತನಾಡಿ ಕೆ.ಎಸ್. ನರಸಿಂಹ ಸ್ವಾಮಿಯವರ ಸಾಹಿತ್ಯ ಪ್ರಕಾರ ಇಂದಿಗೂ ಜೀವಂತ ಇದೆ ಎಂದರೆ ಅವರ ಸಾಹಿತ್ಯದ ಗಟ್ಟಿತನ ಅನುಭವಿಸಿ ಬರೆದ ರೀತಿ ಪ್ರೀತಿಯನ್ನು ವರ್ಣಿಸಿದ ರೀತಿ ಅನನ್ಯವಾದುದು. ಬಹುಶ: ಇಂದು ಜಗತ್ತಿನ ಅತ್ಯಂತ ಶಾಂತಿ ಪ್ರಿಯರು ಎಂದರೆ ಕವಿಗಳು ಹಾಗೂ ಕಥೆಗಾರರು. ಎಂದ ಅವರು ಆರ್ಥಿಕ ಸ್ಥಿತಿಯಲ್ಲಿ ಹಿನ್ನಡೆಯಿದ್ದರೂ ಕವಿಗಳು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಇತ್ತೀಚೆಗೆ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ನ ದ.ಕ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನ್ಯಾಯವಾದಿ ಕವಯತ್ರಿ ವಿಮರ್ಶಕಿ ಪರಿಮಳ ಮಹೇಶ್ ರಾವ್ ಇವರನ್ನು ಅಭಿನಂದಿಸಲಾಯಿತು.

ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಕವಿ, ಆಕಾಶವಾಣಿಯ ವಿಶ್ರಾಂತ ಉದ್ಘೋಷಕ ಮುದ್ದು ಮೂಡುಬೆಳ್ಳೆ ಮಾತನಾಡಿ ಮೈಸೂರು ಮಲ್ಲಿಗೆಯ ಲಾವಣ್ಯ ಅಪ್ಸರೆಯ ಚೆಲುವಿನಂತೆ ಎಂದು ವರಕವಿ ಬೇಂದ್ರೆಯಂತವರೇ ಆಶ್ಚರ್ಯಪಟ್ಟಿದ್ದರು ಯಾಕೆಂದರೆ ಮೈಸೂರು ಮಲ್ಲಿಗೆ ಎಲ್ಲಾ ಯುವ ಪೀಳಿಗೆಗಳನ್ನು ಆಕರ್ಷಿಸಿತ್ತು. ಮೈಸೂರು ಮಲ್ಲಿಗೆ ಅಂದಿಗೂ ಇಂದಿಗೂ ಚಿರನೂತನವಾಗಿರುವುದು ಕಾಲದ ಸತ್ಯ ಎಂದ ಅವರು ಎಲ್ಲಾ ಕವಿಗಳ ಕವಿತೆಗಳ ಬಗ್ಗೆ ಅತ್ಯಂತ ಸರಳವಾಗಿ ಮತ್ತು ಮಾರ್ಮಿಕವಾಗಿ ನುಡಿದರು. ವೇದಿಕೆಯಲ್ಲಿ ಉಪನ್ಯಾಸಕ ಡಾ ಫ್ರಾನ್ಸಿಸ್ ಕ್ಸೇವಿಯರ್, ಚಲನಚಿತ್ರ ಸೆನ್ಸಾರ್ ಮಂಡಳಿಯ ಸದಸ್ಯೆ ಡಾ. ಮೀರಾ ಅನುರಾಧಾ ಪಡಿಯಾರ್, NSCDF ಅಧ್ಯಕ್ಷ ಗಂಗಾಧರ ಗಾಂಧಿ, PTI ವರದಿಗಾರ ಎಸ್.ಜಯರಾಂ ಉಪಸ್ಥಿತರಿದ್ದರು.

KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಸ್ವಾಗತಿಸಿ ಪ್ರಸ್ತಾವನೆಗೈದರು. ರಶ್ಮಿ ಸನಿಲ್ ನಿರೂಪಿಸಿದರು. ಗುಣಾಜೆ ರಾಮಚಂದ್ರ ಭ̧ಟ್ ಸೌಮ್ಯ ಆರ್ ಶೆಟ್ಟಿ,ಶ್ಯಾಮ್ ಪ್ರಸಾದ್ ಭಟ್, ಕಾರ್ಕಳ, ಹಿತೇಶ್ ಕುಮಾರ್ ಎ, ಅಶ್ರಫ್ ಅಲಿ ಕುಙಿ ಮುಂಡಾಜೆ, ಬಾಸ್ಕರ್ ವರ್ಕಾಡಿ, ಅಮರನಾಥ ಪೂಪಾಡಿಕಲ್ಲು, ಗೀತಾ ಲಕ್ಷ್ಮೀಶ್, ಅಜಿತ್ ಪ್ರಸಾದ್, ಎ.ಕೆ ಕುಕ್ಕಿಲ, ರೂಪಾ ವಿನಯ್, ಅಶ್ವಿಜಾ ಶ್ರೀಧರ್, ಹರೀಶ್ ಕುಮಾರ್ ಮೆಲ್ಕಾರ್, ಶಿವಪ್ರಸಾದ್ ಕೊಕ್ಕಡ, ರಶ್ಮಿತಾ ಸುರೇಶ್, ಮಾಣಿ, ರೇಖಾ ಸುದೇಶ್ ರಾವ್, ಸುರೇಶ್ ನೆಗಳಗುಳಿ, ಗೋಪಾಲಕೃಷ್ಣ ಶಾಸ್ತ್ರಿ, ಸಿಹಾನ ಬಿ.ಎಂ, ಸೌಮ್ಯ ಗೋಪಾಲ್, ರೇಮಂಡ್ ತಾಕೋಡೆ, ಆಶಾಲತಾ ಕಾಮತ್, ಲಿಖಿತಾ ಕೋಟ್ಯಾನ್ ಅಲ್ಲಿಪಾದೆ, ಮಾನ್ವಿ, ಸುಮಂಗಲಾ ದಿನೇಶ್. ರಾಮಾಂಜಿ, ನಾರಾಯಣ ಕುಂಬ್ರ, ಜೂಲಿಯೇಟ್ ಫೆರ್ನಾಂಡೀಸ್ ಹಾಗೂ ಹೃದಯ ಕವಿ ಮನ್ಸೂರ್ ಮುಲ್ಕಿ ಪ್ರೇಮಾಧಾರಿತ ಕವನಗಳನ್ನು ವಾಚಿಸಿದರು. ಕವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕಾಪು : ಅತ್ಯಧಿಕ ಸೇವೆ ನೀಡಿದ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಸನ್ಮಾನ

Posted On: 26-01-2023 07:14PM
ಕಾಪು : ತಾಲೂಕಿನ ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆ ಸಂಭ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜರಗಿತು.
ಈ ಸಂದರ್ಭ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಮಹಾತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಕೇಂದ್ರಗಳಲ್ಲಿ ಗ್ರಾಮೀಣ ಭಾಗದ ನಾಗರಿಕರಿಗೆ ನಿಗದಿತ ಸಮಯದಲ್ಲಿ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾಪು ತಾಲೂಕಿನಲ್ಲಿ ಪ್ರಥಮ ಸ್ಥಾನ ಹಾಗೂ ಉಡುಪಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನ ಪಡೆದ ಶಿರ್ವ ಗ್ರಾಮದ ಪ್ರಜ್ವಲ್ ಡಿಜಿಟಲ್ ಗ್ರಾಮ ಒನ್ ಕೇಂದ್ರದ ಪ್ರಜ್ವಲ್ ಬಿ ಕುಲಾಲ್, ಉಚ್ಚಿಲ ಬಡ ಗ್ರಾಮಪಂಚಾಯತ್ ನ ದೀರೇಶ್ ಡಿಪಿ ದ್ವಿತೀಯ, ಕೋಟೆ ಗ್ರಾಮ ಪಂಚಾಯತ್ ನ ಸಹನಾ ದಯಾನಂದ ತಿಂಗಳಾಯ ತೃತೀಯ ಸ್ಥಾನದ ನಿಮಿತ್ತ ಪ್ರಶಂಸನಾ ಪತ್ರವನ್ನು ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರಾದ ಲಾಲಾಜಿ ಆರ್ ಮೆಂಡನ್, ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಸುಧಾಮ ಶೆಟ್ಟಿ, ಕಾಪು ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ ಬಿ, ಕಾಪು ವೃತ್ತ ನಿರೀಕ್ಷಕರಾದ ಪೂವಯ್ಯ ಕೆ.ಸಿ, ಉಪ ತಹಶೀಲ್ದಾರ್ ಹರಿಪ್ರಸಾದ್ ಭಟ್, ಕಂದಾಯ ನಿರೀಕ್ಷಕ ಸುಧೀರ್ ಶೆಟ್ಟಿ, ಶಿರ್ವ ಗ್ರಾಮ ಕರಣಿಕ ವಿಜಯ್ ಮತ್ತು ಕಾಪು ಪುರಸಭಾ ಸದಸ್ಯರು, ಗ್ರಾಮಗಳ ಆಡಳಿತಾಧಿಕಾರಿಗಳು, ತಾಲೂಕು ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಪಡುಬಿದ್ರಿ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ ಡಿ ಟಿ ಯು) ವತಿಯಿಂದ ಗಣರಾಜ್ಯೋತ್ಸವ ಆಚರಣೆ

Posted On: 26-01-2023 07:11PM
ಪಡುಬಿದ್ರಿ : ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (ಎಸ್ ಡಿ ಟಿ ಯು) ವತಿಯಿಂದ ಪಡುಬಿದ್ರಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.
ಎಸ್ ಡಿ ಟಿ ಯು ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಖಾದರ್ ಮಲ್ಲಾರ್ ಧ್ವಜಾರೋಹಣಗೈದರು. ಈ ಸಂದರ್ಭ ಮಾತನಾಡಿದ ಅವರು ಜನವರಿ 26 ರಂದು ಆಚರಿಸಲಾಗುವ ಗಣರಾಜ್ಯೋತ್ಸವದ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನವಾಗಿದೆ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮದಿಂದ ಆಚರಣೆ ಮಾಡಲಾಗುತ್ತದೆಯೋ, ಅಷ್ಟೇ ಸಂಭ್ರಮದಿಂದ ದೇಶದಲ್ಲಿ ಗಣರಾಜ್ಯೋತ್ಸವವನ್ನು ಆಚರಣೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಮಿಕ ಸಂಘಟನೆಯಾದ ಎಸ್ ಡಿ ಟಿ ಯು ಉಡುಪಿ ಜಿಲ್ಲೆ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಗುತ್ತದೆ. ಎಸ್ ಡಿ ಟಿ ಯು ಎಂಬುವುದು ಕಾರ್ಮಿಕರನ್ನು ಒಟ್ಟು ಗೂಡಿಸಿ ಅವರ ಹಕ್ಕು ಮತ್ತು ಅವಕಾಶಗಳಿಗಾಗಿ ಹೋರಾಟ ಮಾಡುವ ಒಂದು ಒಕ್ಕೂಟವಾಗಿದೆ. ಈ ನಿಟ್ಟಿನಲ್ಲಿ ಸಂವಿಧಾನ ನೀಡಿದ ಎಲ್ಲಾ ಹಕ್ಕುಗಳನ್ನು ಸದುಪಯೋಗಪಡಿಸಿ ಕಾರ್ಮಿಕರು ಸಮಾಜದಲ್ಲಿ ಉತ್ತಮ ಬದುಕನ್ನು ಸಾಧಿಸಲು ಎಸ್ ಡಿ ಟಿ ಯು ಶ್ರಮಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ಎಸ್ ಡಿ ಟಿ ಯು ಪಡುಬಿದ್ರಿ ಘಟಕದ ಅಧ್ಯಕ್ಷ ರಿಯಾಜ್ ಕಂಚಿನಡ್ಕ , ಪಡುಬಿದ್ರಿ ಘಟಕದ ಪ್ರಧಾನ ಕಾರ್ಯದರ್ಶಿ ಹೈದರ್ ಕಂಚಿನಡ್ಕ, ಜಿಲ್ಲಾ ಸಮಿತಿ ಸದಸ್ಯ ಫಿರೋಜ್, ಅನ್ವರ್, ಎಸ್ ಡಿ ಪಿ ಐ ಪಡುಬಿದ್ರಿ ಗ್ರಾಮ ಸಮಿತಿ ಅಧ್ಯಕ್ಷರಾದ ಇಬ್ರಾಹಿಂ, ಮತ್ತಿತರರು ಉಪಸ್ಥಿತರಿದ್ದರು.
ಜನವರಿ 29 : ಪೈಯ್ಯಾರು ಪಿ. ಕೆ. ಎಸ್ ಪ್ರೌಢಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪೂರ್ವಭಾವಿ ಸಭೆ

Posted On: 26-01-2023 03:22PM
ಕಾಪು : ಕಳತ್ತೂರು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆಯ ನಿವೃತ್ತ ಶಿಕ್ಷಕರು ಗೋಪಾಲ ಕೃಷ್ಣ ರಾವ್ ಇವರಿಗೆ ಗುರುವಂದನಾ ಕಾರ್ಯಕ್ರಮ ನಡೆಸುವ ಬಗ್ಗೆ ಶಾಲೆಯ ಹಳೆ ವಿದ್ಯಾರ್ಥಿಗಳ ಪೂರ್ವಭಾವಿ ಸಭೆಯನ್ನು ಪಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲಾ ಸಭಾ ಭವನದಲ್ಲಿ ಜನವರಿ 29, ಭಾನುವಾರ ಬೆಳಿಗ್ಗೆ 9.30 ಕ್ಕೆ ಜರಗಲಿದೆ.
ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪಯ್ಯಾರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಪಯ್ಯಾರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ: ಕಾಪು ತಾಲೂಕು ನೂತನ ಪದಾಧಿಕಾರಿಗಳ ಆಯ್ಕೆ

Posted On: 25-01-2023 11:01PM
ಕಾಪು : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟದ ಕಾಪು ತಾಲೂಕಿನ 2023-2024ನೇ ಅವಧಿಯ ನೂತನ ಅಧ್ಯಕ್ಷರಾಗಿ ನಸೀರ್ ಅಹಮದ್ ಆಯ್ಕೆಯಾಗಿದ್ದಾರೆ.
ಕಾಪುವಿನಲ್ಲಿ ನಡೆದ ತಾಲೂಕು ಸಮಿತಿಯ ಸಭೆಯಲ್ಲಿ ಮುಂದಿನ ಎರಡು ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಈ ವೇಳೆ ಉಪಾಧ್ಯಕ್ಷರಾಗಿ ಮುಸ್ತಾಕ್ ಇಬ್ರಾಹಿಂ ಬೆಳಪು, ಕಾರ್ಯದರ್ಶಿಯಾಗಿ ರಿಯಾಜ್ ಅಹಮದ್ ನಜೀರ್ ಮುದರಂಗಡಿ, ಜೊತೆ ಕಾರ್ಯದರ್ಶಿಯಾಗಿ ವೈ. ಎಮ್ ಇಲಿಯಾಸ್ ಕಟಪಾಡಿ, ಕೋಶಾಧಿಕಾರಿಯಾಗಿ ಮೊಹಮ್ಮದ್ ಆಝಮ್ ಶೇಕ್ ಉಚ್ಚಿಲ ಹಾಗೂ ತಾಲೂಕು ಸಮಿತಿಯ ಸದಸ್ಯರಾಗಿ ಬಿ.ಎಮ್ ಮೊಯ್ದಿನ್ ಕಟಪಾಡಿ, ಅಬ್ದುಲ್ ರಜಾಕ್ ಕಟಪಾಡಿ, ಅಮೀರ್ ಹಂಝ ಕಾಪು, ರಮೀಜ್ ಹುಸೈನ್ ಪಡುಬಿದ್ರಿ, ಅಬ್ದುಲ್ ಹಮೀದ್ ಪಡುಬಿದ್ರಿ, ಮುಹಮ್ಮದ್ ಇಕ್ಬಾಲ್ ಸಾಹೇಬ್ ಮಜೂರ್, ಮುಹಮ್ಮದ್ ಸಾದಿಕ್ ದಿನಾರ್, ಮುಹಮ್ಮದ್ ಸುಲೇಮಾನ್ ಮಲ್ಲಾರ್ ಅವರನ್ನು ಆಯ್ಕೆ ಮಾಡಲಾಗಿದೆ.
ಅಬ್ದುರಹಮಾನ್ ಚಂದ್ರನಗರ, ಮೊಹಮ್ಮದ್ ಅಷ್ಪಾಕ್ ಮೊಹಸಿನ್ ಮಲ್ಲಾರ್, ಎಮ್. ಎಸ್. ಅಬ್ಬಾಸ್ ಹಾಜಿ ಕನ್ನಂಗಾರ್, ಅಬೂಬಕರ್ ಪಾದೂರ್ ಮತ್ತು ಸಿರಾಜ್ ಉಚ್ಚಿಲ, ಅವರನ್ನು ತಾಲೂಕು ಸಮಿತಿಯ ಸದಸ್ಯರಾಗಿ ನಾಮನಿರ್ದೇಶನ ಮಾಡಲಾಯಿತು. ಜಿಲ್ಲಾ ಸಮಿತಿಗೆ ಎಮ್. ಪಿ. ಮೊಯಿದಿನಬ್ಬ ಅಬ್ದುರಹಮಾನ್ ಕನ್ನಂಗಾರ್ ರವರು ಜಿಲ್ಲಾ ವತಿಯಿಂದ ನೇಮಿಸಲ್ಪಟ್ಟಿರುವರು. ಸಭೆಯಲ್ಲಿ ಕಾರ್ಯದರ್ಶಿ ಇಸ್ಮಾಯಿಲ್ ಹುಸೈನ್ ಕಟಪಾಡಿ, ಸಂಘಟನಾ ಕಾರ್ಯದರ್ಶಿ ಎಸ್. ಕೆ. ಇಕ್ಬಾಲ್ ಉಪಸ್ಥಿತರಿದ್ದರು.
ಅನ್ವರ್ ಅಲಿಯವರ ಕುರಾನ್ ಪಠಣದೊಂದಿಗೆ ಸಭೆ ಪ್ರಾರಂಭವಾಗಿ, ಜನಾಬ್ ಶಬೀಹ್ ಅಹಮದ್ ಕಾಝಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಇದ್ರಿಸ್ ರವರು ಪ್ರಾಸ್ತವಿಕ ಮಾತುಗಳನ್ನಾಡಿದರು. ಜಿಲ್ಲಾ ಉಪಾಧ್ಯಕ್ಷರಾದ ಸಲಾಹುದ್ದೀನ್ ಹೂಡೆ ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. ಹಾಲಿ ಅಧ್ಯಕ್ಷರಾದ ಶಭಿ ಅಹ್ಮದ್ ಖಾಝಿ ನೂತನ ಅಧ್ಯಕ್ಷರಿಗೆ ಅಧಿಕಾರ ಹಸ್ತಾಂತರಿಸಿದರು. ರಿಯಾಜ್ ಅಹಮದ್ ನಜೀರ್ ವಂದಿಸಿದರು.
ಕಾಪು : ರಾಷ್ಟೀಯ ಮತದಾರರ ದಿನಾಚರಣೆ - ಪ್ರತಿಜ್ಞಾ ವಿಧಿ ; ಸನ್ಮಾನ

Posted On: 25-01-2023 10:52PM
ಕಾಪು : ರಾಷ್ಟೀಯ ಮತದಾರರ ದಿನಾಚರಣೆ 2023 ಅಂಗವಾಗಿ ಕಾಪು ತಾಲೂಕು ಮಟ್ಟದ ಕಾರ್ಯಕ್ರಮವನ್ನು ಕಾಪುವಿನ ತಹಶೀಲ್ದಾರ್ ನೇತ್ರತ್ವದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಇಲ್ಲಿ ನಡೆಸಲಾಯಿತು.

ಮತದಾನದ ಮಹತ್ವವನ್ನು ತಿಳಿಸಿ, ಪ್ರತಿಜ್ಞಾ ವಿಧಿಯನ್ನು ತಹಶೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ ವಿದ್ಯಾರ್ಥಿಗಳಿಗೆ ಬೋಧಿಸಿದರು. ಪ್ರಾಂಶುಪಾಲರಾದ ಸ್ಟೀವನ್ ಕ್ವಾಡ್ರಸ್ ಯುವ ಮತದಾರರಿಗೆ ಮತದಾನದ ಮಹತ್ವವನ್ನು ತಿಳಿಸಿದರು.

ಸನ್ಮಾನ : ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ.ಎಲ್.ಓ ಮೇಲ್ವಿಚಾರಕರಾದ ಮಥಾಯಿ ಪಿ ಎಮ್, ಡೋಮಿನಿಕ್ ಡೇನಿಯಲ್ ಡಿಸೋಜಾ, ಗ್ರಾಮ ಆಡಳಿತಾಧಿಕಾರಿಗಳು ಹಾಗೂ ಬಿ.ಎಲ್.ಓಗಳಾದ ಜೆಸುದಾಸ್ ಸೋನ್ಸ್ ಹಾಗೂ ಪೂರ್ಣಿಮಾ ಇವರಿಗೆ ಸನ್ಮಾನಿಸಲಾಯಿತು.

ಈ ಸಂದರ್ಭ ತಹಶೀಲ್ದಾರ್ ಕಛೇರಿ ಸಿಬ್ಬಂದಿ, ಕಾಲೇಜಿನ ಉಪನ್ಯಾಸಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಪು : ವಿದ್ಯಾನಿಕೇತನ ಪಬ್ಲಿಕ್ ಶಾಲೆಯಲ್ಲಿ ವಾರ್ಷಿಕೋತ್ಸವ ಸಂಭ್ರಮ

Posted On: 24-01-2023 07:38PM
ಕಾಪು : ಇಲ್ಲಿನ ವಿದ್ಯಾನಿಕೇತನ ವಿದ್ಯಾ ಸಂಸ್ಥೆಯ ಶಾಲಾ ವಾರ್ಷಿಕೋತ್ಸವ ಮಂಗಳವಾರ ಜರಗಿತು. ಸಮಾರಂಭದಲ್ಲಿ ರಸಮಂಜರಿ, ಶಿಕ್ಷಕಿಯರ ನೃತ್ಯ, ಮಕ್ಕಳಿಂದ ಭಾರತದ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿತು.

ಉದಯ ಕುಮಾರ್ ಇವರಿಂದ ಕ್ರಿಕೆಟ್ ಕೋಚಿಂಗ್ ಉದ್ಘಾಟನೆಗೊಂಡಿತು.ಸುಪರ್ಣಾ ಅವರಿಂದ ಜೀವನ ಕೌಶಲ್ಯ ಪುಸ್ತಕ ಬಿಡುಗಡೆ ನಡೆಯಿತು. ಈ ಸಂದರ್ಭ ಮಾತನಾಡಿದ ಅವರು ಜೀವನದಲ್ಲಿ ಮೌಲ್ಯ, ಜ್ಞಾನ, ಕೌಶಲಗಳು ಮುಖ್ಯ. ಇದನ್ನು ಮಕ್ಕಳಿಗೆ ತಿಳಿಸಬೇಕಾಗಿದೆ ಎಂದರು.

ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕರಾದ ಕೆ.ಪಿ ಆಚಾರ್ಯ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಭಾರ್ಗವ ತಂತ್ರಿ, ಉಪ ಸಂಚಾಲಕರಾದ ಶ್ವೇತ, ಶಾಲಾ ಶಿಕ್ಷಕ ವೃಂದ, ಪೋಷಕರು, ಹಳೆವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿನಿಯರಾದ ಅನಮ್ ಮತ್ತು ಶಿದ್ರ ಕಾರ್ಯಕ್ರಮ ನಿರೂಪಿಸಿದರು.
ಕಾರ್ಕಳ : ಯುವಕರ ಕಣ್ಮಣಿ ನೇತಾಜಿ ಸುಭಾಶ್ಚಂದ್ರ ಬೋಸ್ ಜನ್ಮದಿನ ಆಚರಣೆ

Posted On: 24-01-2023 10:43AM
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪಿ ಯು ಕಾಲೇಜಿನಲ್ಲಿ ಜನವರಿ 23 ರಂದು ನೇತಾಜಿ ಸುಭಾಶ್ಚಂದ್ರ ಬೋಸ್ ರವರ ಜಯಂತಿ ಅಧಿಕೃತವಾಗಿ ಪರಾಕ್ರಮ್ ದಿವಸ್ ಆಚರಿಸಲಾಯಿತು.
ಇಡೀ ಭಾರತದಲ್ಲಿ ಸ್ವಾತಂತ್ರ್ಯದ ರಣಕಹಳೆ ಮೊಳಗಿಸಿ ನಿಮ್ಮ ರಕ್ತ ನೀಡಿ, ದೇಶಕ್ಕೆ ಸ್ವಾತಂತ್ರ್ಯ ಕೊಡಿಸುತ್ತೇನೆ ಎಂಬ ಸಿಡಿಲಬ್ಬರದ ಘರ್ಜನೆಯನ್ನು ಮಾಡಿದ ಅಪ್ರತಿಮ ಸಾಹಸಿ ನೇತಾಜಿಯವರ ದೇಶಪ್ರೇಮ ನಮಗೆ ಮಾದರಿಯಾಗಬೇಕು ಎಂದು ಹಿಂದಿ ಉಪನ್ಯಾಸಕ ವಿನಾಯಕ ಜೋಗ್ ಕರೆ ನೀಡಿದರು.
ಈ ಸಂದರ್ಭದಲ್ಲಿ ಕ್ರಿಯೇಟಿವ್ ವಿದ್ಯಾಸಂಸ್ಥೆಯ ಉಪನ್ಯಾಸಕರಾದ ನಂದೀಶ್ ಹೆಚ್ ಬಿ, ಉಮೇಶ್, ರಾಘವೇಂದ್ರ ಬಿ ರಾವ್, ಅಗ್ರಜ ರಾಘವ್, ಶಿವಕುಮಾರ್, ರಾಜೇಶ ಶೆಟ್ಟಿ, ಗಿರೀಶ್ ಭಟ್ ಹಾಗೂ ಬೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಬಂಟಕಲ್ಲು : ವಿಕಾಸ ಸೇವಾ ಸಮಿತಿಯಿಂದ ಹೊಂಡಮಯ ರಸ್ತೆಗೆ ಕಾಂಕ್ರೀಟ್ ಹಾಕುವ ಕಾರ್ಯ ; ಗ್ರಾಮಸ್ಥರ ಮೆಚ್ಚುಗೆ

Posted On: 22-01-2023 07:32PM
ಬಂಟಕಲ್ಲು : ನ್ಯೂ ಹೇರೂರು ಫ್ರೆಂಡ್ಸ್ ಮತ್ತು ವಿಕಾಸ ಸೇವಾ ಸಮಿತಿ ಇದರ ವತಿಯಿಂದ ಹೊಂಡಮಯ ರಸ್ತೆಗಳಿಗೆ ಕಾಂಕ್ರೀಟ್ ಹಾಕುವ ಶ್ರಮದಾನದಲ್ಲಿ ವಿಕಾಸ ಸೇವಾ ಸಮಿತಿಯು ಪಾಲ್ಗೊಂಡಿತು.
ಈ ಸಂದರ್ಭ ವಿಕಾಸ ಸೇವಾ ಸಮಿತಿಯ ಅಧ್ಯಕ್ಷರಾದ ಮಾಧವಾಚಾರ್ಯರು ಮಾತನಾಡಿ ಸಂಘ ಸಂಸ್ಥೆಗಳು ಗ್ರಾಮಸ್ಥರು ವಿಶ್ವಾಸವನ್ನು ಗಳಿಸಿ ಸಮಾಜಮುಖಿ ಕಾರ್ಯಕ್ರಮ ನಡೆಸಿ ಸದೃಢವಾಗಿ ಬೆಳೆಯಬೇಕು ಎಂದು ಅಭಿಪ್ರಾಯಪಟ್ಟರು.
ನಾನೇ ನಾನೇ ಎಂಬ ಅಹಂ ಮೆರೆತು ನಾವೆಲ್ಲ ಒಂದು ಎಂಬ ಭಾವನೆಯಿಂದ ನಮ್ಮ ಗ್ರಾಮ ಸ್ವಚ್ಛ ಗ್ರಾಮವಾಗಿ ಬೆಳೆಯಬೇಕೆಂದು ಅಧ್ಯಕ್ಷ ರಾಜೇಶ್ ಜೋಗಿ ಹೇಳಿದರು.
ಕಳೆದ ಹಲವಾರು ತಿಂಗಳಿಂದ ವಾಹನಗಳಿಗೆ ರಸ್ತೆಯಲ್ಲಿ ಚಲಿಸಲು ಅಸಾಧ್ಯ ವಾಗುವುದನ್ನು ಮನಗಂಡು ಸುಮಾರು 20ಕ್ಕೂ ಮಿಕ್ಕಿ ಸದಸ್ಯರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು. ಸಮಿತಿಯ ಗೌರವಾಧ್ಯಕ್ಷ ಗಣಪತಿ ಆಚಾರ್ಯ, ಪಂಚಾಯತ್ ಸದಸ್ಯ ವಿಜಯ್ ಧೀರಜ್, ನ್ಯೂ ಹೇರೂರು ಫ್ರೆಂಡ್ಸ್ನ ಕೋಶಾಧಿಕಾರಿ ಸುಧೀರ್ ಪಾಲ್ಗೊಂಡಿದ್ದರು. ಈ ಶ್ರಮದಾನ ಗ್ರಾಮಸ್ಥರ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಜೆಪಿ ಕಾಪು ಮಂಡಲ : ವಿಜಯ ಸಂಕಲ್ಪ ಅಭಿಯಾನಕ್ಕೆ ಚಾಲನೆ

Posted On: 22-01-2023 06:40PM
ಕಾಪು : ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಇವರ ನೇತೃತ್ವದಲ್ಲಿ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವು ಎರ್ಮಾಳು ಇಂಸ್ಟೆಂಟ್ ಸೀ ರೆಸಾರ್ಟ್ ನಲ್ಲಿ ಆದಿತ್ಯವಾರ ಜರಗಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷೆ ನಯನ ಗಣೇಶ್, ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ, ಕ್ಷೇತ್ರ ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಶ್ರೀಶ ನಾಯಕ್, ಗೀತಾಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಕೊಡಿಬೆಟ್ಟು, ಗೋಪಾಲಕೃಷ್ಣ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಶೆಟ್ಟಿ ಹಾಗೂ ವೇದಿಕೆಯಲ್ಲಿ ಪಕ್ಷದ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು,ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು.