Updated News From Kaup

ಪಡುಬಿದ್ರಿ : ಟೈಮಿಂಗ್ ವಿಚಾರ - ಬಸ್ ನಿರ್ವಾಹಕ, ಟೈಂ ಕೀಪರ್ ಹೊಡೆದಾಟ ; ದೂರು -ಪ್ರತಿದೂರು ದಾಖಲು

Posted On: 13-03-2023 06:05PM

ಪಡುಬಿದ್ರಿ : ಬಸ್ ನ ಟೈಮಿಂಗ್ ವಿಚಾರವಾಗಿ ಬಸ್ ನಿರ್ವಾಹಕ ಮತ್ತು ಬಸ್ ಟೈಮ್ ಕೀಪರ್ ನಡುವಿನ ಹೊಡೆದಾಟದ ಘಟನೆ ರವಿವಾರ ಪಡುಬಿದ್ರಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಶಿರ್ವ : ಮಾಣಿಬೆಟ್ಟುವಿನಲ್ಲಿ ಕಾಪುವಿಗಾಗಿ ಕಾಂಗ್ರೆಸ್ ಬ್ಯಾನರ್ ಹರಿದ ಕಿಡಿಗೇಡಿಗಳು ; ಕ್ರಮಕ್ಕಾಗಿ‌ ಆಗ್ರಹ

Posted On: 13-03-2023 04:48PM

ಶಿರ್ವ : ಇಲ್ಲಿನ ಮಾಣಿಬೆಟ್ಟುವಿನಲ್ಲಿ ಕಾಪುವಿಗಾಗಿ ಕಾಂಗ್ರೆಸ್ ಎಂದು ಕಾಂಗ್ರೆಸ್ ಪಕ್ಷದಿಂದ ಮುಂಬರುವ ಯೋಜನೆಗಳ ಬಗ್ಗೆ ಮಾಹಿತಿ ನೀಡಿ ಹಾಕಲಾಗಿದ್ದ ಬ್ಯಾನರ್ ಅನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ಮಾ.31 ರಿಂದ ಏ.2 : ಕಾಪು ಬಿಲ್ಲವರ ಸಹಾಯಕ ಸಂಘದ ನೂತನ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ

Posted On: 13-03-2023 07:12AM

ಕಾಪು : ಇಲ್ಲಿನ ಬಿಲ್ಲವರ ಸಹಾಯಕ ಸಂಘ(ರಿ.) ಕಾಪು ಇಲ್ಲಿ‌ ಮಾಚ್೯ 31ರಿಂದ ಏಪ್ರಿಲ್ 2 ರವರೆಗೆ ಖ್ಯಾತ ವಾಸ್ತು ತಜ್ಞರಾದ ತ್ರಿವಿಕ್ರಂ ಭಟ್‌ರವರ ಮಾರ್ಗದರ್ಶನದಲ್ಲಿ ನೂತನವಾಗಿ ನಿರ್ಮಿಸಿದ ಶಿಲಾಮಯ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ ಮೂರ್ತಿ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶಾಭಿಷೇಕ, ವಿವಿಧ ಧಾರ್ಮಿಕ, ಸಾಂಸ್ಕೃತಿಕ, ಸಭಾ ಕಾರ್ಯಕ್ರಮಗಳು ಜರಗಲಿದೆ.

ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ಸ್ವಯಂ ಸೇವಾ ಸಂಸ್ಥೆಗಳ ಕರ್ತವ್ಯ ಶ್ಲಾಘನೀಯ : ಗಂಗಾಧರ ಗಾಂಧಿ

Posted On: 13-03-2023 07:07AM

ಮಂಗಳೂರು : ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಉದ್ಘಾಟನೆ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಮಾಚ್೯ 12ರಂದು ನೆರವೇರಿತು. ಕಾರ್ಯಕ್ರಮವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದು ಅಧಿಕೃತವಾಗಿ ಅನಾವರಣಗೊಂಡಿದೆ. ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ, ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ನಡೆಸುತ್ತಿದೆ. ಈ ಕಾರಣದಿಂದಾಗಿ ಭಾರತದ ಅನೇಕ ಹಳ್ಳಿ ಪ್ರದೇಶಗಳು ಅಭಿವೃದ್ಧಿಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ ಎಂದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಪಾರದರ್ಶಕತ್ವವನ್ನು ಅನಾವರಣ ಗೊಳಿಸುತ್ತಾ ಸಮಾಜದ ಎಲ್ಲಾ ಸಮುದಾಯದ ಆಶಯಗಳಿಗೆ ಸ್ಪಂದಿಸುವಂತಾಗಬೇಕು. ಆಗಲೇ ಅನಾವರಣದ ಸಮಾಜಮುಖಿ ಕಾರ್ಯಗಳು ಈಡೇರಲು ಸಾಧ್ಯವೆಂದು ಮಾರ್ಮಿಕವಾಗಿ ಹೇಳಿದರು.

ಕಾಪು : ಬೈಕ್ - ಆಂಬುಲೆನ್ಸ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಮೃತ್ಯು

Posted On: 12-03-2023 05:55PM

ಕಾಪು : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆಯಲ್ಲಿ ಬೈಕ್ ಮತ್ತು ಆಂಬುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು ಸಾವನ್ನಪ್ಪಿದ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.

ನಾಳೆ : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಮೇ14 ರಿಂದ 24ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ನಿಮಿತ್ತ ಪೂರ್ವಭಾವಿ ಸಭೆ

Posted On: 11-03-2023 09:37PM

ಮಂಗಳೂರು : ಕುಲಾಲ ಸಮುದಾಯಕ್ಕೆ ಮುಕುಟಪ್ರಾಯವಾಗಿ ಕಂಗೊಳಿಸಲಿರುವ ಸಮುದಾಯದ ಸ್ವಾಭಿಮಾನ ಮತ್ತು ಹೆಮ್ಮೆಯ ಪ್ರತೀಕವಾದ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವದ ಶುಭವಸರದಲ್ಲಿದೆ.

ನಾಳೆ : ಪೆರ್ಡೂರು ಬೈರಂಪಳ್ಳಿ ಶ್ರಮಿಕ ತರುಣ ತಂಡದಿಂದ ಶ್ರಮಿಕೋತ್ಸವ 2023

Posted On: 11-03-2023 09:18PM

ಪೆರ್ಡೂರು : ಇಲ್ಲಿಯ ಬೈರಂಪಳ್ಳಿಯ ಶ್ರಮಿಕ ತರುಣರ ಯುವಕರ ತಂಡ ಸದಾ ಅಶಕ್ತರ ಪಾಲಿಗೆ ಸದಾ ಒಂದಲ್ಲ ಒಂದು ರೀತಿಯಲ್ಲಿ ನೆರವಾಗುತ್ತ, ಬಡವರ ಕಣ್ಣೀರು ಒರೆಸುವ ಕಾಯಕದಲ್ಲಿ ನಿರತವಾಗಿದೆ.

ಮಾಚ್೯ 11 ರಿಂದ 14 : ಕಟಪಾಡಿ‌ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ; ಕಾಲಾವಧಿ ಜಾತ್ರೆ

Posted On: 11-03-2023 06:44PM

ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಬ್ರಹ್ಮ ಬೈದೆರುಗಳ ಗರಡಿಯಲ್ಲಿ ನಡೆಯುವ ಕಾಲಾವಧಿ ಜಾತ್ರೆ ಹಾಗೂ ದೃಢಕಲಶ ಇತ್ಯಾದಿ ಧಾರ್ಮಿಕ ಕಾರ್ಯಕ್ರಮಗಳು ಮಾಚ್೯ 11ರಿಂದ ಮಾಚ್೯ 14 ರವರೆಗೆ ಜರಗಲಿದೆ.

ಮಾಚ್೯ 12 : ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ರಾಜ್ಯಮಟ್ಟದ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ

Posted On: 11-03-2023 05:29PM

ಮಂಗಳೂರು : ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (ASSAP) ಆಶ್ರಯದಲ್ಲಿ ರಾಜ್ಯಮಟ್ಟದ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಮಾಚ್೯ 12, ರವಿವಾರದಂದು ಮಂಗಳೂರು ನಗರದ ಕದ್ರಿ ಬಾಲಭವನದಲ್ಲಿ ನಡೆಯಲಿದೆ.

ಪತ್ರಕರ್ತ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆಯವರ ಜಾತಿವ್ಯಾಧಿ ಚಿಕಿತ್ಸಕ ಡಾ.ಪದ್ಮನಾಭನ್ ಪಲ್ಪು ಪುಸ್ತಕ ಬಿಡುಗಡೆ

Posted On: 11-03-2023 04:44PM

ಕಾಪು : ಬ್ರಹ್ಮರ್ಷಿ ನಾರಾಯಣ ಗುರುಗಳ ಒಡನಾಡಿಯಾಗಿದ್ದು , ಕ್ರಾಂತಿಕಾರಿ ಸಮಾಜ ಸುಧಾರಣೆಯಲ್ಲಿ ಸುಧೀರ್ಘ ಕಾಲ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಮಹತ್ತರ ಸುಧಾರಣೆಗಳನ್ನು ಯಶಸ್ವಿಯಾಗಿ ಸಾಧಿಸಿದ ಡಾ. ಪದ್ಮನಾಭನ್ ಪಲ್ಪು ಅವರ ಸಾಧನೆಗಳ ಕುರಿತು ಪತ್ರಕರ್ತ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ಅವರು ಬರೆದು ಪ್ರಕಟಿಸಿದ "ಜಾತಿವ್ಯಾಧಿ ಚಿಕಿತ್ಸಕ ಡಾ. ಪದ್ಮನಾಭನ್ ಪಲ್ಪು" ಪುಸ್ತಕ ಬಿಡುಗಡೆ ಕಾರ್ಯಕ್ರಮವು ಮಾರ್ಚ್ 9ರಂದು ಮೂಡುಬೆಳ್ಳೆಯ "ಧುನಿ" ಬಯಲು ರಂಗಮಂಟಪದಲ್ಲಿ ನಡೆಯಿತು.