Updated News From Kaup
ಕಾಪು : ಹೊಸ ಮಾರಿಗುಡಿಯಲ್ಲಿ ಜೀರ್ಣೋದ್ಧಾರದ ಕುರಿತು ಪೇಟೆಯ ವ್ಯಾಪಾರಸ್ಥರೊಂದಿಗೆ ಸಮಾಲೋಚನಾ ಸಭೆ

Posted On: 15-02-2023 09:32PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನದ ನವದುರ್ಗಾ ಮಂಟಪದಲ್ಲಿ ಆದಿತ್ಯವಾರ ಮಧ್ಯಾಹ್ನ ಸಮಗ್ರ ಜೀರ್ಣೋದ್ಧಾರದ ಕುರಿತು ಕಾಪು ಪೇಟೆಯ ವ್ಯಾಪಾರಸ್ಥರೊಂದಿಗೆ ಸಮಾಲೋಚನಾ ಸಭೆ ನಡೆಯಿತು.

ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕರಾದ ಯೋಗೀಶ್ ವಿ. ಶೆಟ್ಟಿ ಬಾಲಾಜಿ ಪ್ರಾಸ್ತವಿಕವಾಗಿ ಮಾತನಾಡಿ ದಕ್ಷಿಣ ಭಾರತದಲ್ಲಿಯೇ ವಿಶಿಷ್ಟವಾಗಿ ನಿರ್ಮಾಣವಾಗುತ್ತಿರುವ ದೇಗುಲ ಇದಾಗಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯ ಹಾಗೂ ವಿದೇಶಗಳಿಂದ ಭಕ್ತಾದಿಗಳು ಆಗಮಿಸುವ ನಿರೀಕ್ಷೆಯಿದೆ, ಇದೊಂದು ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಮಿಂಚಲಿದೆ ಇದರಿಂದ ಕಾಪು ಪೇಟೆಯ ವ್ಯಾಪಾರಸ್ಥರ ವ್ಯಾಪಾರದಲ್ಲಿಯೂ ಅಭಿವೃದ್ಧಿಯಾಗಲಿದೆ ಎಂದು ಹೇಳುತ್ತಾ ದೇಗುಲದ ಜೀರ್ಣೋದ್ಧಾರದ ಸಂಪೂರ್ಣ ಮಾಹಿತಿಯನ್ನು ನೀಡಿದರು. ವ್ಯಾಪಾರಸ್ಥರಾದ ನೀವೆಲ್ಲರೂ ಶಿಲಾಸೇವೆ ನೀಡುವ, ನೀಡಿಸುವ ಮೂಲಕ ಕಾರ್ಯೋನ್ಮುಖರಾಗಿ ನಿಮ್ಮನ್ನು ನೀವು ಸಂಪೂರ್ಣವಾಗಿ ಜೀರ್ಣೋದ್ಧಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವ ಸಲಹೆಗಾರರಾದ ರತ್ನಾಕರ ಶೆಟ್ಟಿ ನಡಿಕೆರೆ ಪ್ರಾರ್ಥಿಸಿದರು, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷರುಗಳಾದ ಗಂಗಾಧರ ಸುವರ್ಣ ಮತ್ತು ಮಾಧವ ಆರ್. ಪಾಲನ್ ಜೀರ್ಣೋದ್ಧಾರದ ಬಗ್ಗೆ ಮಾತನಾಡಿದರು. ಪೇಟೆಯ ವ್ಯಾಪಾರಸ್ಥರಿಂದ ಅನಿಸಿಕೆಯನ್ನು ಸಂಗ್ರಹಿಸಲಾಗಿ ಗ್ರಾಹಕರಿಗೆ ಶಿಲಾಸೇವೆಯ ಬಗ್ಗೆ ತಿಳಿಸಿ ದೇವಳದ ಸಮಗ್ರ ಜೀರ್ಣೋದ್ಧಾರಕ್ಕೆ ಕೈ ಜೋಡಿಸುತ್ತೇವೆ ಎಂದರು. ನಂತರ ನಡೆಯುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ವ್ಯಾಪಾರಸ್ಥರು ಹೊಸ ಮಾರಿಗುಡಿಯ ಜಿರ್ಣೋದ್ಧಾರದಿಂದ ಕಾಪು ಪೇಟೆಯು ಅಭಿವೃದ್ಧಿಯಾಗಲಿದೆ ಎಂದು ಸಂತಸ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕಚೇರಿ ನಿರ್ವಹಣಾ ಸಮಿತಿಯ ಮುಖ್ಯ ಸಂಚಾಲಕರಾದ ಸುನಿಲ್ ಎಸ್. ಪೂಜಾರಿ, ಪ್ರಚಾರ ಸಮಿತಿಯ ಸಂಚಾಲಕರಾದ ಜಯರಾಮ್ ಆಚಾರ್ಯ, ಹರೀಶ್ ನಾಯಕ್, ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಭಾತ್ ಶೆಟ್ಟಿ ಮೂಳೂರು ಮತ್ತು ದೇವಳದ ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು. ಗೌರವ ಸಲಹೆಗಾರರಾದ ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಯಕ್ಷರಂಗದ ಭರವಸೆಯ ಭಾಗವತ ರೋಶನ್ ಕೋಟ್ಯಾನ್

Posted On: 14-02-2023 12:31AM
ಶತಮಾನಗಳ ಇತಿಹಾಸವಿರುವ ಯಕ್ಷಗಾನವು ಸದಾ ಪಂಡಿತ ಪಾಮರರ ಚಿಂತನ-ಮಂಥನದ ವಸ್ತುವಾಗಿರುದು ಯಕ್ಷಗಾನ ಕಲೆಯ ಜೀವಂತಿಕೆಯ ಲಕ್ಷಣವಾಗಿದೆ. ಇದರ ವರ್ಣರಂಜಿತ ಇತಿಹಾಸದಲ್ಲಿ ತೆಂಕು-ಬಡಗಿನ ಅನೇಕ ಕಲಾವಿದರು ಅವಿಸ್ಮರಣೀಯರು.ಯಕ್ಷರಂಗದಲ್ಲಿ ಮಿಂಚಿ ಕಲಾ ಪ್ರೇಮಿಗಳ ಮನಗೆದ್ದ ತನ್ನದೇ ಆದ ಛಾಪನ್ನು ಒತ್ತಿ ಪ್ರೇಕ್ಷಕರ ಮನ ಗೆಲ್ಲಲು ಅಂಗೈ ಅಗಲದ ರಂಗದಲ್ಲಿ ಕ್ಷಣಾರ್ಧದಲ್ಲಿ ಮೂರು ಲೋಕಗಳನ್ನು ಸಾಕ್ಷಾತ್ಕರಿಸಿ ಪುರಾಣ ಕಥೆಗಳಿಗೆ ಜೀವಂತಿಕೆಯನ್ನು ನೀಡಬಲ್ಲ ತೆಂಕು-ಬಡಗಿನ ಪ್ರಬುದ್ಧ ಕಲಾವಿದರನೇಕರು ಇಂದು ಕಣ್ಮರೆಯಾದರೂ ಅವರೆಲ್ಲರ ಆದರ್ಶನೀಯವಾದ ಮಾರ್ಗದರ್ಶನದಲ್ಲಿ ಯಕ್ಷರಂಗದತ್ತ ಪಾದ ಬೆಳೆಸುವ ಕಲಾವಿದರಿಂದ ಯಕ್ಷಗಾನವನ್ನು ಉಳಿಸಬೇಕು, ಬೆಳೆಸಬೇಕು ಮಾತ್ರವಲ್ಲದೆ ರಂಗಕರ್ಮಿಗಳ ಬದುಕನ್ನು ರೂಪಿಸಲೆಂದು ಉದಯಿಸಿರುವ ಸಂಘ ಸಂಸ್ಥೆಗಳು ಹಲವಾರು.ಹಾಗಾಗಿ ಸರ್ವಾಂಗ ಸುಂದರವಾದ ಯಕ್ಷಗಾನವು ನಮ್ಮ ಜಿಲ್ಲೆಯ ಜನ ಜೀವನದಲ್ಲಿ ಬೆರೆತಂತೆ ಮತ್ಯಾವ ಕಲಾ - ಪ್ರಕಾರವೂ ಬೆರೆತಿಲ್ಲವೆನ್ನಬಹುದು.

ಜಾನಪದ ಕಲಾಪ್ರಕಾರವು ಕೆಲವು ನಿರ್ದಿಷ್ಟ ಜಾತಿ,ಪಂಗಡಗಳಿಗೆ ಮಿಸಲಾಗಿದ್ದರೆ ಯಕ್ಷಗಾನಕ್ಕೆ ಆ ಬಂಧನವಿಲ್ಲ.ಈ ರಂಗದಲ್ಲಿ ಎಲ್ಲಾ ಸಮಾಜದ ಜನರು ವಿವಿಧ ಸ್ತರಗಳಲ್ಲಿ ಪಾರಂಗತರಾಗಿರುವುದನ್ನು ನಾವು ಕಾಣಬಹುದು. ಜನಾಕರ್ಷಣಿಯಾವಾದ ಈ ಕಲಾ ಪ್ರಪಂಚಕ್ಕೆ ಬೆಡಗಿಗೆ ಮನಸೋತು ತಾನೂ ಒಬ್ಬ ಅತ್ಯುತ್ತಮ ಕಲಾವಿದನಾಗಬೇಕೇಂಬ ಹಂಬಲ ಜಾಗ್ರತವಾದಾರೂ ಎಲ್ಲರಿಗೂ ಅವರ ಬಯಕೆ ಈಡೆರುವ ಅವಕಾಶ ಒದಗುವುದಿಲ್ಲ .ಪರಿಸರ ಪರಿಸ್ಥಿತಿ ಸಂಧರ್ಭದಲ್ಲಿ ಅನುಕೂಲವಾಗಿ ಒದಗಿ ಬಂದರೆ ಮಾತ್ರ ಬಾಳ ಪ್ರತಿಭೆಗಳಲ್ಲಿ ಸುಪ್ತವಾಗಿರುವ ಕಲಾ ಚೇತನಗಳಿಗೆ ಆಕಾರವು ಪ್ರಾಪ್ತಿಯಾಗುತ್ತದೆಯೆಂಬುದಕ್ಕೆ ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರು ತುರ್ಕಿ ತೋಟದ ಜಯಂತಿ ಶಿವರಾಮ ಕೋಟ್ಯಾನ್ ರವರ ಪುತ್ರ ರೋಶನ್ ಕೋಟ್ಯಾನ್ ರವರೆ ಉದಾಹರಣೆಯಾಗಿದ್ದಾರೆ.

"ಬೆಳೆಯುವ ಸಿರಿ ಮೊಳಕೆಯಲ್ಲಿ" ಎಂಬತೆ ಮಹಾನಗರ ಮುಂಬಯಿಯ ಘಾಟ್ಕೋಪಾರ್ ಪಶ್ಚಿಮ ಆಂಗ್ಲ ಮಾಧ್ಯಮದ ನಾರ್ತ್ ಬಾಂಬೆ ಶಾಲೆಯ ಆರನೇ ತರಗತಿ ಕಲಿಯುತ್ತಿರುವಾಗಲೇ ಶಾಲೆಯ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಿಂದಲೇ ಪ್ರಶಂಸಿತನಾಗಿ ಭವಿಷ್ಯತ್ತಿನಲ್ಲಿ ತಾನೋರ್ವ ಶ್ರೇಷ್ಠ ಕಲಾವಿದನಾಗ ಬಲ್ಲೇ ಎಂಬ ಭರವಸೆಯನ್ನು ಮೂಡಿಸಿರುವ ಆ ಪುಟ್ಟ ಬಾಲಕನೇ ಇಂದು ಮುಂಬಯಿ ಹಾಗೂ ವಿದೇಶದಲ್ಲಿ ಯಕ್ಷ ಕಲಾಭಿಮಾನಿಗಳು ಕಂಡ "ಉದಯೋನ್ಮುಖ ಭಾಗವತ" ಶಾಲೆಯ ಬಿಡುವಿನ ಸಮಯದಲ್ಲಿ ಇವರ ಕಲಾಭಿರುಚಿಯು ಕೆರಳಿ ಅದು ಪ್ರತಿಭೆಗೆ ಬರಲು ಪ್ರೋತ್ಸಾಹಿಸಿದವರೆಂದರೆ ಇವರ ಮಾತ- ಪಿತರು ,ಮಾತ್ರವಲ್ಲದೆ ಮನೆ ಸಮೀಪದ ಸಂಘಾನಿ ಶನಿ ಮಂದಿರದ ಭಕ್ತ ವ್ರಂದ.
ಇವರೆಲ್ಲರ ಸಂಪೂರ್ಣ ಸಹಕಾರದಿಂದ ಮಂದಿರದ ವಠಾರದಲ್ಲಿ ಜರಗುತ್ತಿದ್ದ ಪ್ರತಿಯೊಂದು ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಕ್ತ ವ್ರಂದದ ಪ್ರಶಂಸೆಗೆ ಪಾತ್ರರಾದ ಅತ್ಯುತ್ತಮ ಭಜನಾ ಗಾಯಕರಾದ ಇವರ ಮಾವನಾದ ನಾಗೇಶ್ ಸುವರ್ಣರಿಂದ ಭಜನಾ ತರಬೇತಿಯನ್ನು ಅಲ್ಲದೆ ಶನಿಗ್ರಂಥ ಪಾರಾಯಣದ ತರಬೇತಿಯನ್ನು ಪಡೆದು ಎಲ್ಲರಿಂದಲೂ ಸೈ ಎನಿಸಿಕೊಂಡವರು. ಯಕ್ಷರಂಗದ ಸವ್ಯಸಾಚಿಯೆಂದು ಖ್ಯಾತರಾದ ಕಟೀಲು ಮೇಳದ ಸುಪ್ರಸಿದ್ಧ ಭಾಗವತ ಬೊಟ್ಟಿಕೆರೆ ಪುರುಷೋತ್ತಮ ಪೂಂಜರಿಂದ ಮೃದಂಗನಾದವನ್ನು ಯಕ್ಷರಂಗದ ಪರಂಪರೆಯ ಯಕ್ಷಕಲಾ ಗುರುಗಳಾದ ಮೋಹನ ಬೈಪಡಿತ್ತಾಯರವರಿಂದ ಭಾಗವತಿಕೆಯನ್ನು ಅಭ್ಯಾಸ ಮಾಡಿ ಗುರು ಪ್ರೇರಣೆಯಂತೆ ಗುರುನಾರಾಯಣ ಮೇಳದವರ "ಶ್ರೀ ದೇವಿ ಮಹಾತ್ಮೆ" ಪ್ರಸಂಗದಲ್ಲಿ ಪ್ರಥಮ ಭಾಗವತಿಕೆಯನ್ನು ಮಾಡಿ ಪ್ರೇಕ್ಷಕರ ಮನಗೆದ್ದು ಗುರುಪ್ರಶಂಸೆಯನ್ನು ಪಡೆದ ಕಿರ್ತಿಗೆ ಭಾಜನರಿವರು.ಗುರುನಾರಯಣ ಮೇಳದ ಪ್ರಸಿದ್ಧ ಭಾಗವತ ಜಯಪ್ರಕಾಶ್ ನಿಡ್ವಣ್ಣಾಯರವರಿಂದ ಭಾಗವತಿಕೆಯ ಹೆಚ್ಚಿನ ತರಬೇತಿಯನ್ನು ಪಡೆದಿರುವ ಇವರು ಉದ್ಯೋಗದ ನಿಮಿತ್ತ ವಿದೇಶಕ್ಕೆ ತೆರಳಿ ಅಲ್ಲಿ ಶಿಪ್ಪಿಂಗ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ. ತನ್ನ ಕಲಾ ಪ್ರತಿಭೆಗೆ ಕಾರಣರಾಗಿರುವ ಹಿರಿಯ-ಕಿರಿಯರನೇಕರನ್ನು ಸದಾ ಸ್ಮರಿಸುತ್ತಿರುವ ಪ್ರಸ್ತುತ ವಿದೇಶದಲ್ಲಿರೂ ಆಗಾಗ್ಗೆ ತನ್ನ ತಾಯ್ನಾಡಿಗೆ ಮರಳಿದಾಗ ನಗರದಲ್ಲಿ ಜರಗುತ್ತಿರುವ ಪ್ರತಿಯೊಂದು ಸಂಘ ಸಂಸ್ಥೆಗಳ ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ತನ್ನ ಕಲಾರಂಗದ ಮನದಾಸೆಯನ್ನು ಪೂರೈಸಿಕೊಂಡು ಸಂತಸ ಪಡುವ ಸಂತೃಪ್ತ ಕಲಾವಿದರು. ಇವರ ಕಲಾ ಪ್ರೌಡಿಮೆಗೆ ತಾನಾಗಿ ಒಲಿದು ಬಂದ ಸನ್ಮಾನಗಳು, ಪ್ರಶಸ್ತಿಗಳು ಅನೇಕ. ಅವುಗಳಲ್ಲಿ ಪ್ರಧಾನವಾದವು ಬೆಹರಿನ್ ಕರ್ನಾಟಕ ಸಂಘದ ವತಿಯಿಂದ ಹಾಗೂ "ಹವ್ಯಾಸಿ ಕಲಾವಿದರು" ಸೌದಿ ಅರೇಬಿಯಾ ಮತ್ತು "ಕುಡ್ಲ ಅಡ್ವೆಂಚರ್ " ದಮಾಮ್ ಇಲ್ಲಿ ಅಲ್ಲದೆ ಅಮ್ಮ ಕಲಾವಿದರು, ಪಟ್ಲ ಫೌಂಡೇಶನ್ ಟ್ರಸ್ಟ್. ಮುಂತಾದ ಕಡೆಗಳಲ್ಲಿ ಒದಗಿರುವ ಗೌರವ ಸನ್ಮಾನಗಳು ಅವಿಸ್ಮರಣೀಯವಾಗಿದೆ ಎನ್ನುತ್ತಾರೆ. ಮುಂಬೈಯ ಯಕ್ಷ ಭ್ರಾಮರಿ ನೃತ್ಯ ನಿಲಯದ ಸನ್ಮಾನವು ಮತ್ತು ಇವರಿಗೆ ಭ್ರಮರಇಂಚರ ಹಾಗೂ 2021 ಮುಂಬಾಯಿ ಯಲ್ಲಿ ನಡೆದ ಜಯ.ಸಿ. ಸುವರ್ಣ ಬಿಲ್ಲವಾರ್ ಐಕೊನ್ ಪ್ರಶಸ್ತಿ ತುಂಬಾ ಖುಷಿ ಕೊಟ್ಟಿದ್ದೆನ್ನುತ್ತಾರೆ. ಶ್ರೀಯುತರು 2013ರಲ್ಲಿ ಶ್ರೀ ಮತಿ ದೀಕ್ಷಾ ಎಂಬವರೊಡನೆ ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿರುತ್ತಾರೆ ಇವರಿಗೆ ವೃತಿ ಎಂಬ ಪುಟ್ಟ ಹೆಣ್ಣು ಮಗಳು ಇದ್ದಾರೆ ಹೀಗೆ ಚಿಕ್ಕದಾದರೂ ಚೊಕ್ಕ ಸಂಸಾರದಲ್ಲಿ ಸಂತೃಪ್ತ ಜೀವನ ನಡೆಸುತ್ತಿದ್ದಾರೆ. ವಿದೇಶದಲ್ಲಿ ಅದೆಷ್ಟೋ ಯಕ್ಷ ಕಲಾಭಿಮಾನಿಗಳು ಇದ್ದು ಅವರಿಗೆ ಇವರ ಭಾಗವತಿಕೆ ಎಂದರೆ ಅಚ್ಚು ಮೆಚ್ಚು. ಇವರು ವಿದ್ಯಭ್ಯಾಸವನ್ನು ಮುಂಬೈಯಲ್ಲಿ ಪೂರ್ಣಗಳಿಸಿರುದರಿಂದ ಇವರಿಗೆ ಕನ್ನಡ ಅಕ್ಷರ ಓದಲು ಬರೆಯಲು ಬರುವುದಿಲ್ಲ ಆದರೂ ಇವರು ಛಲ ಬಿಡದೆ ಕನ್ನಡದಲ್ಲಿ ಬರೆದ ಭಾಗವತಿಕೆಯನ್ನು ಹಲವರ ಸಹಾಯದಿಂದ ಹಿಂದಿ ಭಾಷೆಯಲ್ಲಿ ಬರೆದು ಭಾಗವತಿಕೆಯನ್ನು ಅಭ್ಯಾಸ ಮಾಡುತ್ತಾರೆ.ಈ ವೃತ್ತಿ ಜೀವನದಲ್ಲಿ ಸಮಯ ಸರಿಯಾಗಿ ಸಿಕ್ಕಿಲ್ಲವೆಂದರೂ ಸುಮಾರೂ ಮೂರು ಗಂಟೆಗಳ ಕಾಲ ತನ್ನ ವಾಹನದಲ್ಲಿ ಸಂಚಾರ ಮಾಡಿ ಯಕ್ಷಗಾನ ಅಭ್ಯಾಸ ಮಾಡಿ ಮತ್ತು ಯುವಕರನ್ನು ಯಕ್ಷರಂಗದತ್ತ ಒಲವು ಮೂಡಿಸುವ ಕಾರ್ಯ ಮಾಡುತ್ತಿದ್ದಾರೆ. ತನ್ನ ಕಲಾ ಜೀವನದಲ್ಲಿ ಸಂಪೂರ್ಣ ರೀತಿಯಲ್ಲಿ ಸಹಕರಿಸುವ ಕಟೀಲು ಮೇಳದ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಬೊಂದೆಲ್ ಹಾಗೂ ಪ್ರಸಿದ್ಧ ಸ್ತ್ರೀ ಪಾತ್ರಧಾರಿ ದೀಪಕ್ ರಾವ್ ಪೇಜಾವರ ಅವರ ಹಾಗೂ ಪ್ರಸಿದ್ಧ ಭಾಗವತ ಸತೀಶ್ ಶೆಟ್ಟಿ ಪಟ್ಲ ಇವರ ಹೆಸರನ್ನು ಹೇಳಲು ಮರೆಯುದಿಲ್ಲ. ಬೊಟ್ಟಿಕೆರೆ ಪುರುಷೋತ್ತಮ ಪೂಂಜರು,ಮೋಹನ ಬೈಪಾಡಿತ್ತಾಯರು,ಜಯಪ್ರಕಾಶ್ ನಿಡ್ವಣ್ಣಾಯರು ಹೀಗೆ ಗುರುತ್ರಯರಿಂದ ಯಕ್ಷ ರಂಗದ ತರಬೇತಿ ಪಡೆದಿರುವ ಇವರು ಭವಿಷ್ಯತ್ತಿನಲ್ಲಿ ಅತ್ಯುತ್ತಮ ಕಲಾವಿದನಾಗಿ ಯಕ್ಷ ಪ್ರಪಂಚದಲ್ಲಿ ವಿಜೃಂಭಿಸಲಿಯೆಂಬುದೇ ನಮ್ಮ ಶುಭ ಹಾರೈಕೆ.
ಕಾಪು : ಬೆಳಪು ವಿಜ್ಞಾನ ಕೇಂದ್ರಕ್ಕೆ ಈ ಬಾರಿಯ ಬಜೆಟ್ ನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ಪೂರ್ಣಗೊಳ್ಳಲಿ - ಡಾ|| ದೇವಿ ಪ್ರಸಾದ್ ಶೆಟ್ಟಿ

Posted On: 14-02-2023 12:07AM
ಕಾಪು : ಕಳೆದ 7 ವರ್ಷಗಳಿಂದ ಕಾಮಗಾರಿ ಕುಂಠಿತಗೊಂಡ ಬೆಳಪುವಿನ ವಿಜ್ಞಾನ ಕೇಂದ್ರ ಹಾಗೂ ಪಿಜಿ ಸೆಂಟರ್ ಗೆ ಈ ಬಾರಿಯ ಬಜೆಟ್ ನಲ್ಲಿ ಕನಿಷ್ಠ 50 ಕೋಟಿ ಹಣ ಇಡಬೇಕೆಂದು ಬೆಳಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪುವಿನಲ್ಲಿ ಆಗ್ರಹಿಸಿದ್ದಾರೆ.
ಬೆಳಪುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಕೇಂದ್ರಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಲನ್ಯಾಸ ನೆರವೇರಿಸಿ ಮೂವತ್ತಮೂರು ಕೋಟಿ ರೂಪಾಯಿ ಬಿಡುಗಡೆಗೊಳಿಸಿದ್ದರು.
33 ಕೋಟಿ ರೂಪಾಯಿಯಲ್ಲಿ ಕಾಮಗಾರಿ ಪ್ರಾರಂಭಗೊಂಡಿತ್ತು. ಅದರ 12 ಕೋಟಿ ರೂಪಾಯಿಯನ್ನು ಇತರ ಕಾಮಗಾರಿಗೆ ತೆಗೆಯಲಾಗಿದೆ. ಗುತ್ತಿಗೆದಾರರಿಗೆ ಹಣಪಾವತಿಯಾಗದೆ ಕೆಲಸ ಸ್ಥಗಿತಗೊಂಡಿದೆ.
ಈ ಬಾರಿಯ ಶೈಕ್ಷಣಿಕ ವರ್ಷದಲ್ಲಿ ಆದರೂ ಕಾಮಗಾರಿ ಪೂರ್ಣ ಆಗುವ ಭರವಸೆ ಇದ್ದರೂ, ಕೆಲಸ ಪೂರೈಸುವ ಸಾಧ್ಯತೆ ಕಡಿಮೆ ಇದೆ. ಐದು ವರ್ಷದಲ್ಲಿ ಸರಕಾರ ನಯಾ ಪೈಸೆ ಹಣ ಮಂಜೂರಾತಿ ಮಾಡಿಲ್ಲ. ಈ ಬಾರಿಯ ಬಜೆಟ್ಟಿನಲ್ಲಿ ಹಣ ಮೀಸಲಿಟ್ಟು ಕಾಮಗಾರಿ ಪೂರ್ಣಗೊಳ್ಳಲಿ ಎಂದು ದೇವಿ ಪ್ರಸಾದ್ ಶೆಟ್ಟಿ ಆಗ್ರಹಿಸಿದರು.
ಸಾಧು ಸಂತರನ್ನು ವಿಭಜಿಸದರಿ : ಈಶ ವಿಠಲದಾಸ ಸ್ವಾಮೀಜಿ

Posted On: 13-02-2023 11:58PM
ಕಟಪಾಡಿ : ನಾವು ಇಂದು ಸಾಧು ಸಂತರುಗಳನ್ನು ಒಂದು ಜಾತಿ, ಧರ್ಮಕ್ಕೆ ಸೀಮಿತ ಆಗುವಂತೆ ಮಾಡುತ್ತಿದ್ದೇವೆ. ಸಾಧು ಸಂತರು ಎಲ್ಲ ಜಾತಿ ಧರ್ಮಕ್ಕೆ ಒಳಪಟ್ಟಿರುವುದರಿಂದ ದಯಮಾಡಿ ಅವರನ್ನು ವಿಭಜಿಸದಿರಿ ಎಂದು ಕೇಮಾರು ಸಾಂದಿಪನಿ ಮಠದ ಈಶ ವಿಠಲದಾಸ ಸ್ವಾಮೀಜಿ ಹೇಳಿದ್ದಾರೆ.
ಅವರು ಕಟಪಾಡಿ ಏಣ ಗುಡ್ಡೆ ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ವೇದಿಕೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಗುರ್ಮೆ ಪೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ರಮೇಶ್ ನಾಯಕ್, ಗಣಪತಿ ನಾಯಕ್, ವೈ ಭರತ್ ಹೆಗಡೆ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಇಂದಿರಾ ಆಚಾರ್ಯ, ಗೀತಾಂಜಲಿ ಸುವರ್ಣ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಬೆಳಪು : ಪಣಿಯೂರಿನಲ್ಲಿ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 13-02-2023 11:53PM
ಬೆಳಪು : ಗ್ರಾಮದ ಪಣಿಯೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಪಣಿಯಾರು ಶ್ರೀ ಬಬ್ಬು ಸ್ವಾಮಿ ಸನ್ನಿಧಿಯಲ್ಲಿ ಫೆಬ್ರವರಿ 12ರಂದು ಬಿಡುಗಡೆಗೊಳಿಸಲಾಯಿತು.
ಫೆಬ್ರವರಿ 21ರಿಂದ ಫೆಬ್ರವರಿ 25ರವರೆಗೆ ಪುನರು ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ನೆರವೇರಲಿದೆ ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ|| ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.
ಈ ಸಂದರ್ಭ ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರು ಗುತ್ತು, ಗುರಿಕಾರ ಬಿ ಶಂಕರ್, ಜಯಾನಂದ ಶೆಟ್ಟಿ, ಪ್ರಭಾಕರ ಶೆಟ್ಟಿ ಎಲ್ಲೂರು ಗುತ್ತು, ನಡಿಮನೆ ದೇವರಾಜ ರಾವ್, ಕರುಣಾಕರ್ ಶೆಟ್ಟಿ ಪಣಿಯಾರು ಗುತ್ತು, ಸಾಧು ಶೆಟ್ಟಿ, ಸಚಿನ್ ಶೆಟ್ಟಿ, ಸೌಮ್ಯ ಸುರೇಂದ್ರ, ಮಹೇಶ್ ಶೆಟ್ಟಿ, ಶಿವ ಪೂಜಾರಿ, ಸಂಜೀವ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಚ್ 3: ಕಳತ್ತೂರು ಪಿ.ಕೆ ಎಸ್ ಪ್ರೌಢಶಾಲೆಯಲ್ಲಿ ಗುರುವಂದನೆ, ಮನೋರಂಜನಾ ಕಾರ್ಯಕ್ರಮ

Posted On: 13-02-2023 11:04PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಇಲ್ಲಿ ಮಾರ್ಚ್ 3, ಶುಕ್ರವಾರ ಸಂಜೆ ಗಂಟೆ 5ರಿಂದ ಶಾಲೆಯ ನಿವೃತ್ತ ಶಿಕ್ಷಕರಾದ ಗೋಪಾಲ ಕೃಷ್ಣ ರಾವ್ ಅವರಿಗೆ ಹಳೆ ವಿದ್ಯಾರ್ಥಿಗಳು ಹಾಗೂ ಅವರ ಅಭಿಮಾನಿಗಳ ಮುಂದಾಳತ್ವದಲ್ಲಿ ಗುರುವಂದನಾ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳ ಮನೋರಂಜನ ಕಾರ್ಯಕ್ರಮ, ಕಾಪು ರಂಗತರಂಗ ಕಲಾವಿದರ ತುಳು ಹಾಸ್ಯಮಯ ನಾಟಕ ಬುಡೆದಿ ಪ್ರದರ್ಶನಗೊಳ್ಳಲಿದೆ.

ಕಾರ್ಯಕ್ರಮದಲ್ಲಿ ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಲಿದ್ದು, ಪಡುಬಿದ್ರಿಯ ಸಂಸ್ಕೃತ ಅಧ್ಯಾಪಕ ಡಾ| ರಾಘವೇಂದ್ರ ರಾವ್, ಆರ್. ಎಸ್. ಎಸ್ ಹಿರಿಯ ಪ್ರಚಾರಕ ಶ್ರೀ ದಾ.ಮಾ. ರವೀಂದ್ರ, ವಿದ್ಯಾವರ್ಧಕ ಸಂಘ, (ರಿ) ಕಳತ್ತೂರು ಇದರ ಅಧ್ಯಕ್ಷರಾದ ನಿತ್ಯಾನಂದ ಆರ್ ಶೆಟ್ಟಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಪೈಯ್ಯಾರು, ಪಿ.ಕೆ.ಎಸ್ ಪ್ರೌಢಶಾಲೆಯ ಸಂಚಾಲಕ ಶಿವರಾಮ್ ಶೆಟ್ಟಿ ಪೈಯ್ಯಾರು, ಪಿ ಕೆ ಎಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗಂಗಾ ನಾಯ್ಕ್ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ನೆಲಮೂಲದ ಹಬ್ಬಗಳು ಕೃತಿ ಬಿಡುಗಡೆ

Posted On: 12-02-2023 07:24PM
ಉಡುಪಿ : ಸಾಹಿತಿ , ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ಲೇಖನಗಳ ಸಂಗ್ರಹ "ನೆಲಮೂಲದ ಹಬ್ಬಗಳು" ಕೃತಿಯನ್ನು ನಾಡೋಜ , ವಿದ್ವಾಂಸ ಕೆ.ಪಿ. ರಾವ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ಬರಹಗಾರ ದೇವು ಹನೆಹಳ್ಳಿ, ತಾಳಮದ್ದಲೆ ಅರ್ಥವಾದಿ ರಾಧಾಕೃಷ್ನ ಕಲ್ಚಾರ್. ಭುವನಪ್ರಸಾದ ಹೆಗ್ಡೆ ಉಪಸ್ಥಿತರಿದ್ದರು.
ಮಕ್ಕಳ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಬಿಟ್ಟು ಬಿಡಿ : ಭರತ್ ರಾಜ್ ಕೆ

Posted On: 12-02-2023 12:34AM
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಶನಿವಾರ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಮಾತನಾಡಿ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಅವರನ್ನು ಬಿಟ್ಟು ಬಿಡಬೇಕು ಹಾಗು ಅವರ ಸಂತೋಷವನ್ನು ಪೂರ್ಣವಾಗಿ ಅನುಭವಿಸುವಂತೆ ಪಾಲಕರು ಪೋಷಕರು ನೋಡಿಕೊಳ್ಳಬೇಕು. ಮಕ್ಕಳನ್ನು ಚೌಕಟ್ಟಿನೊಳಗಿಟ್ಟು ಬೆಳೆಸುವ ಬದಲು ಬಾಲ್ಯವನ್ನು ಸ್ವಚ್ಛಂದವಾಗಿರಿಸಬೇಕು ಎಂದು ಹೇಳಿದ ಅವರು ಮಕ್ಕಳ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಗುರುತಿಸಿ ಗೌರವಿಸುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ ಹಾಗೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸ್ಥಾಪನೆ ಮಾಡುವ ಮೂಲಕ ಮಕ್ಕಳ ಬೆಳವಣಿಗೆಗೆ ಇದು ಹೆಚ್ಚು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಉಪನ್ಯಾಸಕ ಎಸ್ ಪಿ ಅಜಿತ್ ಪ್ರಸಾದ್ ಮಾತನಾಡಿ ಮಕ್ಕಳನ್ನು ಅಂಕದ ಹಿಂದೋಡಿಸದೇ ತಮ್ಮ ಬುದ್ಧಿ ಚತುರತೆಯನ್ನು ಅಂಕೆಯಲ್ಲಿ ಇಟ್ಟುಕೊಳ್ಳುವಂತಹ ಮಾನಸಿಕ ವಿಕಸನಕ್ಕೆ ಹಿರಿಯರು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪರಿಮಳ ಮಹೇಶ್ ರಾವ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜಿಲ್ಲಾ ಪದಾಧಿಕಾರಿಗಳಾದ ಸುಮಂಗಳಾ ದಿನೇಶ್ಶೆಟ್ಟಿ, ರಶ್ಮಿ ಸನಿಲ್, ಅಮರ್ನಾಥ್ ಪೂಪಾಡಿಕಲ್ಲು, ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಗುರುತಿಸುವ ಮೂಲಕ ನಾಡಿಗೆ ಪರಿಚಯಿಸಲಾಯಿತು. ಮತ್ತು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕು ಘಟಕಗಳ ಅಧ್ಯಕ್ಷರುಗಳಾದ ಶಿವಪ್ರಸಾದ್ ಕೊಕ್ಕಡ, ಶ್ರೀಕಲಾ ಕಾರಂತ್, ಸುಭಾಷಿಣಿ ಹಾಗೂ ಸಿಹಾನ ಬಿ.ಎಂ ಇವರಿಗೆ ನೇಮಕಾತಿ ಆದೇಶ ಪತ್ರದೊಂದಿಗೆ, ಪ್ರಮಾಣ ವಚನವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಭೋದಿಸಿದರು.

ನೂತನ ಅಧ್ಯಕ್ಷೆ ಪರಿಮಳಾ ಮಹೇಶ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಕ.ರಾ.ಮ.ಸಾ.ಪ ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಉಪಸ್ಥಿತರಿದ್ದರು. ಕ.ರಾ.ಮ.ಸಾ.ಪ ನ ದ.ಕ ಜಿಲ್ಲಾ ಘಟಕ ಉಪಾಧ್ಯಕ್ಷೆ ಸುಮಂಗಲಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಶ್ಮಿ ಸನಿಲ್ ವಂದಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ನೃತ್ಯವೈವಿದ್ಯ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಪ್ರಮಾಣಪತ್ರದೊಂದಿಗೆ, ಕಿರು ಹೊತ್ತಗೆಗಳನ್ನು ವಿತರಿಸಲಾಯಿತು.
ಮಕ್ಕಳ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಬಿಟ್ಟು ಬಿಡಿ : ಭರತ್ ರಾಜ್ ಕೆ

Posted On: 12-02-2023 12:34AM
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಶನಿವಾರ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಮಾತನಾಡಿ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಅವರನ್ನು ಬಿಟ್ಟು ಬಿಡಬೇಕು ಹಾಗು ಅವರ ಸಂತೋಷವನ್ನು ಪೂರ್ಣವಾಗಿ ಅನುಭವಿಸುವಂತೆ ಪಾಲಕರು ಪೋಷಕರು ನೋಡಿಕೊಳ್ಳಬೇಕು. ಮಕ್ಕಳನ್ನು ಚೌಕಟ್ಟಿನೊಳಗಿಟ್ಟು ಬೆಳೆಸುವ ಬದಲು ಬಾಲ್ಯವನ್ನು ಸ್ವಚ್ಛಂದವಾಗಿರಿಸಬೇಕು ಎಂದು ಹೇಳಿದ ಅವರು ಮಕ್ಕಳ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಗುರುತಿಸಿ ಗೌರವಿಸುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ ಹಾಗೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸ್ಥಾಪನೆ ಮಾಡುವ ಮೂಲಕ ಮಕ್ಕಳ ಬೆಳವಣಿಗೆಗೆ ಇದು ಹೆಚ್ಚು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಉಪನ್ಯಾಸಕ ಎಸ್ ಪಿ ಅಜಿತ್ ಪ್ರಸಾದ್ ಮಾತನಾಡಿ ಮಕ್ಕಳನ್ನು ಅಂಕದ ಹಿಂದೋಡಿಸದೇ ತಮ್ಮ ಬುದ್ಧಿ ಚತುರತೆಯನ್ನು ಅಂಕೆಯಲ್ಲಿ ಇಟ್ಟುಕೊಳ್ಳುವಂತಹ ಮಾನಸಿಕ ವಿಕಸನಕ್ಕೆ ಹಿರಿಯರು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪರಿಮಳ ಮಹೇಶ್ ರಾವ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜಿಲ್ಲಾ ಪದಾಧಿಕಾರಿಗಳಾದ ಸುಮಂಗಳಾ ದಿನೇಶ್ಶೆಟ್ಟಿ, ರಶ್ಮಿ ಸನಿಲ್, ಅಮರ್ನಾಥ್ ಪೂಪಾಡಿಕಲ್ಲು, ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಗುರುತಿಸುವ ಮೂಲಕ ನಾಡಿಗೆ ಪರಿಚಯಿಸಲಾಯಿತು. ಮತ್ತು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕು ಘಟಕಗಳ ಅಧ್ಯಕ್ಷರುಗಳಾದ ಶಿವಪ್ರಸಾದ್ ಕೊಕ್ಕಡ, ಶ್ರೀಕಲಾ ಕಾರಂತ್, ಸುಭಾಷಿಣಿ ಹಾಗೂ ಸಿಹಾನ ಬಿ.ಎಂ ಇವರಿಗೆ ನೇಮಕಾತಿ ಆದೇಶ ಪತ್ರದೊಂದಿಗೆ, ಪ್ರಮಾಣ ವಚನವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಭೋದಿಸಿದರು.

ನೂತನ ಅಧ್ಯಕ್ಷೆ ಪರಿಮಳಾ ಮಹೇಶ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಕ.ರಾ.ಮ.ಸಾ.ಪ ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಉಪಸ್ಥಿತರಿದ್ದರು. ಕ.ರಾ.ಮ.ಸಾ.ಪ ನ ದ.ಕ ಜಿಲ್ಲಾ ಘಟಕ ಉಪಾಧ್ಯಕ್ಷೆ ಸುಮಂಗಲಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಶ್ಮಿ ಸನಿಲ್ ವಂದಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ನೃತ್ಯವೈವಿದ್ಯ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಪ್ರಮಾಣಪತ್ರದೊಂದಿಗೆ, ಕಿರು ಹೊತ್ತಗೆಗಳನ್ನು ವಿತರಿಸಲಾಯಿತು.
ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿ ರವರಿಗೆ ಸನ್ಮಾನ

Posted On: 11-02-2023 11:51PM
ಕಾಪು : ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿರವರಿಗೆ ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ಸಾಮಾಜಿಕ ಕಾರ್ಯಕ್ರಮದ ವೇದಿಕೆಯಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಫಾರೂಕ್ ಚಂದ್ರನಗರ ಅಶ್ರಫ್ ಕರಂದಾಡಿ ಒಬ್ಬ ಒಳ್ಳೆಯ ಚಿಂತಕ-ಸಾಹಿತಿಯಾಗಿದ್ದು ಹಲವಾರು ಕವನವನ್ನು ಬರೆದಿರುತ್ತಾರೆ. ಅವರೊಬ್ಬ ಸಾಮಾಜಿಕ ಕಳಕಳಿಯ ವ್ಯಕ್ತಿಯಾಗಿದ್ದು ಅವರನ್ನು ಸನ್ಮಾನಿಸಿ ಗುರುತಿಸಿದ್ದು ಅವರಿಗೆ ಇನ್ನಷ್ಟು ಪ್ರೇರಣೆಯಾಗಲಿದೆ ಮುಂದೆಯು ಉತ್ತಮ ಕವನ ಬರೆದು ಸಮಾಜಕ್ಕೆ ಕೊಡುಗೆ ನೀಡಲಿ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಬ್ದುಲ್ ಮುನೀರ್, ಶರ್ಫುದ್ದಿನ್ ಶೇಕ್ ಮಜೂರು,ಶಂಶುದ್ಧಿನ್ ಕರಂದಾಡಿ,ಯು.ಸಿ ಶೇಖಬ್ಬ ಉಚ್ಚಿಲ, ಝುಬೈರ್ ಶಿರ್ವ, ಉಸ್ಮಾನ್ ಕಾಪು, ಹೆಚ್ ಅಬ್ದುಲ್ಲ ಕಾಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.