Updated News From Kaup

ಬಿಸಿಲ ಧಗೆಗೆ ಮುನ್ನೆಚ್ಚರಿಕಾ ಕ್ರಮಗಳು

Thumbnail
Posted On: 28 Apr 2023, 04:41 PM

ಉಡುಪಿ : ಭಾರತೀಯ ಹವಾಮಾನ ಇಲಾಖೆಯು ಪ್ರಸಕ್ತ ಸಾಲಿನ ಬಿಸಿಗಾಳಿ ಕುರಿತು ಮುನ್ಸೂಚನೆ ನೀಡಿದ್ದು, ಪ್ರಸ್ತುತ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿ ಸೆ. ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮನುಷ್ಯ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು ಬಿಸಿಗಾಳಿಯಿಂದಾಗುವ ಅಪಾಯಗಳನ್ನು ತಡೆಯಲು ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆಯು ಸಲಹೆ - ಸೂಚನೆಗಳನ್ನು ಪಾಲಿಸುವುದು ಅಗತ್ಯವಿದೆ. ಬಿಸಿಗಾಳಿಯಿಂದ ಉಂಟಾಗುವ ಅನಾರೋಗ್ಯವನ್ನುತ ಡೆಗಟ್ಟಲು ಸಾಧ್ಯವಾದಷ್ಟು ಮದ್ಯಾಹ್ನ 12 ರಿಂದ 3 ರ ವರೆಗಿನ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ಕಡಿಮೆ ಮಾಡಬೇಕು. ಬಾಯಾರಿಕೆ ಇಲ್ಲದಿದ್ದರೂ ಸಹ ಸಾಕಷ್ಟು ನೀರನ್ನು ಸೇವಿಸಬೇಕು. ಹಗುರವಾದ ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸಬೇಕು. ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣೆಗಾಗಿಕನ್ನಡಕ, ಛತ್ರಿ/ ಟೊಪಿ, ಬೂಟುಅಥವಾ ಚಪ್ಪಲಿಗಳನ್ನು ಬಳಸಬೇಕು. ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ಮಾಡಬಾರದು. ಪ್ರಯಾಣ ಮಾಡುವಾಗ ನೀರನ್ನುಜೊತೆಯಲ್ಲಿ ತೆಗೆದುಕೊಂಡು ಹೋಗಬೇಕು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತುಕಾರ್ಬೋನೇಟ್ ನಂತಹ ತಂಪು ಪಾನೀಯಗಳನ್ನು ಸೇವಿಸಬಾರದು. ಈ ಸಂದರ್ಭದಲ್ಲಿ ಬಿಸಿ ಆಹಾರವನ್ನು ಸೇವಿಸಬಾರದು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಹಾಗೂ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದ್ದಲ್ಲಿ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು.ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯ ಮತ್ತು ಓ.ಆರ್.ಎಸ್ ಅನ್ನು ಬಳಸಬೇಕು. ಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ, ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸಬೇಕು. ಮನೆಯನ್ನು ತಂಪಾಗಿರಿಸಲು ಪರದೆ, ಸನ್ಶೆಡ್ಗಳನ್ನು ಬಳಸಬೇಕು.ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ/ ಟೋಪಿ ಅಥವಾಕ್ಯಾಪ್/ ಹೆಡ್ಕವರ್, ಹ್ಯಾಂಡ್ಟವೆಲ್, ಹ್ಯಾಂಡ್ ಫ್ಯಾನ್, ಎಲೆಕ್ಟ್ರೋಲೈಟ್, ಗ್ಲೂಕೋಸ್, ಮೌಖಿಕರೀಹೈಡ್ರೇಶನ್ ಪೌಡರ್ ಒಳಗೊಂಡಿರುವ ಬಿಸಿಗಾಳಿ ತಡೆಗಟ್ಟುವ ವಸ್ತುಗಳನ್ನು ತೆಗೆದುಕೊಂಡು ಹೋಗಲು ನಾಗರಿಕರನ್ನು ಪ್ರೋತ್ಸಾಹಿಸಬೇಕು. ಬಿಸಿಗಾಳಿಯಿಂದ ಸಾಮಾನ್ಯವಾಗಿ ನಿರ್ಜಲೀಕರಣ, ಶಾಖ ಸೆಳೆತ, ಶಾಖದ, ಬಳಲಿಕೆ ಮತ್ತು ಸನ್ ಸ್ಟ್ರೋಕ್ ನಂತಹ ಆರೋಗ್ಯ ದುಷ್ಪರಿಣಾಮಗಳು ಉಂಟಾಗುವ ಸಾಧ್ಯತೆ ಇದ್ದು, ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ನೆರಳಿನ ಅಡಿಯ ತಂಪಾದ ಸ್ಥಳಕ್ಕೆ ಸ್ಥಳಾಂತರಿಸಬೇಕು. ವ್ಯಕ್ತಿಯು ಪ್ರಜ್ಞೆ ಹೊಂದಿದ್ದರೆ, ನೀರು ಅಥವಾ ಪುನರ್ಜಲೀಕರಣ ಪಾನೀಯ ನೀಡಿ, ತಂಪಾದ ಗಾಳಿಯ ವ್ಯವಸ್ಥೆ ಮಾಡಬೇಕು. ರೋಗ ಲಕ್ಷಣಗಳು ಉಲ್ಬಣಗೊಂಡರೆ, ದೀರ್ಘಕಾಲದವರೆಗೆ ಇದ್ದರೆ ಅಥವಾ ವ್ಯಕ್ತಿಯು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರೆ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ನೀಡಬೇಕು. ಮದ್ಯಪಾನ, ಕಾಫಿ ಹಾಗೂ ಶೇಖರಿಸಿದ ಪಾನೀಯಗಳನ್ನು ನೀಡಬಾರದು. ಬಿಸಿಗಾಳಿಗೆ ತುತ್ತಾದವರ ಮೇಲೆ ತಂಪಾದ ಒದ್ದೆ ಬಟ್ಟೆಯನ್ನು ಹಾಕುವ ಮೂಲಕ ವ್ಯಕ್ತಿಯನ್ನು ತಂಪಾಗಿರಿಸಬೇಕು. ಉತ್ತಮ ಗಾಳಿಗಾಗಿ ಬಟ್ಟೆಗಳನ್ನು ಸಡಿಲಗೊಳಿಸಬೇಕು.

ಸಿಡಿಲಿನ ಕುರಿತು ಮುನ್ಸೂಚನೆ ನೀಡಲಿದೆ ಸಿಡಿಲು ಆ್ಯಪ್

Thumbnail
Posted On: 28 Apr 2023, 04:15 PM

ಉಡುಪಿ : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಸಿಡಿಲಿನಿಂದರಕ್ಷಣೆ ಪಡೆಯಬಹುದಾದ ಸರಳ ಮಾರ್ಗಗಳನ್ನು ತಿಳಿಸಿದೆ. ಸಿಡಿಲು-ಮೊಬೈಲ್ ಆ್ಯಪ್ ನಲ್ಲಿ ಸಿಡಿಲಿನ ಬಗ್ಗೆ ಮುಂಚಿತವಾಗಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಸಿಡಿಲಿನ ಸಂಭವನೀಯತೆ ಇದ್ದಲ್ಲಿ ಹೊರಗಿನ ಕೆಲಸಗಳನ್ನು ಮುಂದೂಡಿ, ಆದಷ್ಟು ಮನೆಯಲ್ಲಿಯೇ ಇರುವುದು ಸೂಕ್ತ. ಮನೆಯ ಸುತ್ತಲಿನಲ್ಲಿರುವ ಕೊಳೆತ ಹಾಗೂ ಒಣಗಿದ ಮರಗಳನ್ನು ತೆರವುಗೊಳಿಸಬೇಕು. ಮನೆಯ ಒಳಗಿರುವಾಗ ಸಿಡಿಲು ಬಂದಾಗ ಕಿಟಕಿಯಿಂದದೂರವಿರಬೇಕು. ಈ ಸಂದರ್ಭದಲ್ಲಿ ದೂರವಾಣಿ, ಮೊಬೈಲ್ ಮತ್ತುಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಬಾರದು. ಗೃಹಪಯೋಗಿ ಉಪಕರಣಗಳ ಫ್ಲಗ್ಗಳನ್ನು ತೆಗೆದಿಡಬೇಕು. ಗೋಡೆಯಿಂದವದೂರವಿರುವುದು ಉತ್ತಮ. ಒಣ ಮರದ ಪೀಠೋಪಕರಣಗಳು ಸುರಕ್ಷಿತವಾಗಿದ್ದು, ವಿದ್ಯುತೀಕರಣದ ಅಪಾಯ ಇರುವುದರಿಂದ ಸಿಡಿಲಿನ ಸಂದರ್ಭದಲ್ಲಿ ಸ್ನಾನ ಮತ್ತು ಪಾತ್ರೆ ಹಾಗೂ ಇತರ ನೀರಿನೊಂದಿಗಿನ ಕೆಲಸವನ್ನು ಮಾಡಬಾರದು. ಹೊರಾಂಗಣದಲ್ಲಿದ್ದಾಗ ಸಿಡಿಲು ಬರುವ ಲಕ್ಷಣಗಳಿದ್ದಲ್ಲಿ ತಕ್ಷಣ ಸುರಕ್ಷಿತ ಕಟ್ಟಡಗಳ ಒಳಗೆ ಸೇರಿಕೊಳ್ಳಬೇಕು. ಎತ್ತರ ಪ್ರದೇಶದಲ್ಲಿ ಸಿಡಿಲಿನ ಪ್ರಭಾವ ಅಧಿಕವಾಗಿರುವುದರಿಂದ ತಗ್ಗು ಪ್ರದೇಶಗಳಿಗೆ ತೆರಳಬೇಕು. ಸಿಡಿಲಿನ ಸಂದರ್ಭದಲ್ಲಿ ಕೊಡೆ ಅಥವಾ ಛತ್ರಿಯನ್ನು ಬಳಸಬಾರದು. ಮಕ್ಕಳು ಈ ಸಂದರ್ಭದಲ್ಲಿ ಗಾಳಿಪಟವನ್ನು ಹಾರಿಸಬಾರದು. ವಾಹನ ಚಲಿಸುವ ಸಂದರ್ಭದಲ್ಲಿ ಸಿಡಿಲು ಬಂದಾಗ ಮರ ಹಾಗೂ ತಂತಿಕಂಬಗಳಿಂದ ವಾಹನವನ್ನು ದೂರ ನಿಲ್ಲಿಸಿ, ವಾಹನದೊಳಗೆ ಇರುವುದು ಸೂಕ್ತ. ಬಸ್ಗಳಲ್ಲಿ ಪ್ರಯಾಣಿಸುವಾಗ ಕಿಟಕಿಗಳ ಗಾಜನ್ನು ಮುಚ್ಚಬೇಕು. ಕಾಡಿನಲ್ಲಿದ್ದ ಸಂದರ್ಭದಲ್ಲಿ ಕಡಿಮೆ ಮರಗಳಿರುವ ಪ್ರದೇಶದಲ್ಲಿ ಸಣ್ಣ ಮರದ ಕೆಳಗೆ ಆಶ್ರಯ ಪಡೆಯಬೇಕು. ಗುಂಪಿನಲ್ಲಿದ್ದಾಗ ಜನರಿಂದ ಪರಸ್ಪರ ಅಂತರವನ್ನು ಕಾಪಾಡಿಕೊಳ್ಳುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಉಡುಪಿ : ಮಾಂಗ್ರೋವ್ ವನದ ಮಧ್ಯೆ ಕಯಾಕ್ ಮೂಲಕ ವಿನೂತನ ರೀತಿಯಲ್ಲಿ ಮತದಾನ ಜಾಗೃತಿ

Thumbnail
Posted On: 28 Apr 2023, 03:04 PM

ಉಡುಪಿ : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಉಡುಪಿ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಕುರಿತಂತೆ ಸ್ವೀಪ್ ವತಿಯಿಂದ ವಿವಿಧ ರೀತಿಯಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು, ಇದೇ ಮೊದಲ ಬಾರಿಗೆ ಅತ್ಯಂತ ವಿಶಿಷ್ಟ ರೀತಿಯಲ್ಲಿ ಹೊಳೆಯಲ್ಲಿ ಕಯಾಕಿಂಗ್ ಮೂಲಕ ತೆರಳಿ ಮಾಂಗ್ರೋವ್ ಕಾಡುಗಳ ಮಧ್ಯೆ ಕಯಾಕ್ ಗಳಲ್ಲಿ ವಿನೂತನ ರೀತಿಯಲ್ಲಿ ಮತದಾನ ಮಹತ್ವ ಕುರಿತು ಜಾಗೃತಿ ಮೂಡಿಸಲಾಗಿದೆ. ಜಿಲ್ಲಾಡಳಿತ ಉಡುಪಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಬುಧವಾರ, ಸಾಲಿಗ್ರಾಮದ ಸೀತಾ ನದಿಯ ಹಿನ್ನೀರಿನಲ್ಲಿ ನಡುವಿನ ದಟ್ಟ ಕಾಂಡ್ಲಾವನದ ನಡುವೆ ಕಯಾಕಿಂಗ್ ಮಾಡಲು ಬಳಸುವ ದೋಣಿಗಳ ಮೂಲಕ ಮತದಾನ ಜಾಗೃತಿಯ ಸಂದೇಶವನ್ನು ಸಾರಲಾಯಿತು. ಈ ಕಾರ್ಯಕ್ರಮದ ಅಂಗವಾಗಿ ಸಾಲಿಗ್ರಾಮ ಬಳಿಯ ಕಯಾಕಿಂಗ್ ಪಾಯಿಂಟ್ ಬಳಿಗೆ ತೆರಳಿದ ,ಜಿಲ್ಲಾ ಚುನಾವಣಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿ ಕೂರ್ಮರಾವ್ ಎಂ , ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ , ಪ್ರೋಬೇಷನರಿ ಐ.ಎ.ಎಸ್ ಅಧಿಕಾರಿ ಯತೀಶ್, ಅವರು ಕಯಾಕಿಂಗ್ ಪ್ರಾರಂಭದ ಸ್ಥಳದಲ್ಲಿ ತುಳುನಾಡಿನ ಸಾಂಪ್ರದಾಯಿಕ ಅಡಿಕೆ ಮುಟ್ಟಾಳೆ ಧರಿಸಿ, ಸ್ಥಳದಲ್ಲಿ ಅಳವಡಿಸಲಾಗಿದ್ದ ನೈತಿಕ ಮತದಾನ ಪ್ರತಿಜ್ಞೆ ಕುರಿತ ಫಲಕದಲ್ಲಿ ಸಹಿ ಮಾಡಿ, ಸಂಪೂರ್ಣ ಸುರಕ್ಷತಾ ಉಪಕರಣಗಳನ್ನು ಧರಿಸಿ ಕಯಾಕಿಂಗ್ ಆರಂಭಿಸಿದರು. ಸುಮಾರು 30 ನಿಮಿಷಗಳ ಕಯಾಕಿಂಗ್ ನಂತರ ಮಾಂಗ್ರೋವ್ ಕಾಡುಗಳ ಮಧ್ಯೆ ಇರುವ ಪ್ರದೇಶದಲ್ಲಿ ಸುಮಾರು 40 ಕ್ಕೂ ಹೆಚ್ಚು ಕಯಾಕ್ ದೋಣಿಗಳ ಮೂಲಕ ಮತದಾನ ದಿನವಾದ, ಮೇ 10 ದಿನಾಂಕದ ಚಿತ್ರಣ ರೂಪಿಸಿ ಮತ್ತು ಮತದಾನ ಜಾಗೃತಿಯ ಫಲಕವನ್ನು ನೀರಿನ ಮೇಲೆ ಪ್ರದರ್ಶಿಸಿ ಅತ್ಯಂತ ಆಕರ್ಷಕ ರೀತಿಯಲ್ಲಿ ಮತದಾನ ಜಾಗೃತಿ ಮೂಡಿಸಲಾಯಿತು. ಕಯಾಕಿಂಗ್ ನ ಆರಂಭದ ಸ್ಥಳದಿಂದ ನದಿ ಮಧ್ಯದ ಕಾರ್ಯಕ್ರಮ ನಡೆಯವ ಸ್ಥಳದವರೆಗೂ ನದಿಯಲ್ಲಿ ಮತದಾನ ಜಾಗೃತಿ ಸಾರುವ ಯಕ್ಷಗಾನ ಮುಖುಟ ಮಾದರಿಯ ಆಕೃತಿಗಳು ಗಮನ ಸೆಳೆದವು. ಇದೇ ಸಂದರ್ಭದಲ್ಲಿ, ಕಯಾಕಿಂಗ್ ಮೂಲಕ ಆ ಪ್ರದೇಶಕ್ಕೆ ಆಗಮಿಸಿದ್ದ ಮಣೂರು ಪಡುಕೆರೆ ಕಾಲೇಜಿನ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾ ವಿಧಿ ಭೋಧಿಸಿ,ಮತದಾನ ದಿನಾಂಕವನ್ನು ಒಳಗೊಂಡ ಬಲೂನ್ಗಳನ್ನು ಹಾರಿಬಿಡುವ ಮೂಲಕ ಕೂಡಾ ಜಾಗೃತಿ ಮೂಡಿಸಲಾಯಿತು. ಈ ವಿಶಿಷ್ಠ ಕಾರ್ಯಕ್ರಮಕ್ಕೆ ಸಾಲಿಗ್ರಾಮ ಕಯಕಿಂಗ್ ಪಾಯಿಂಟ್ ನಲ್ಲಿ ಕಾರ್ಯನಿರ್ವಹಿಸುವ ವಿವಿಧ ಸಂಸ್ಥೆಗಳು ಮತ್ತು ಸಿಬ್ಬಂದಿ ಅಗತ್ಯ ಸಹಕಾರ ನೀಡುವುದರ ಮೂಲಕ ಕಾರ್ಯಕ್ರಮ ಯಶಸ್ಸಿಗೆ ಸಹಕರಿಸಿದರು.

ಕಾಪುವಿನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ; ವಿಜಯ ಸಂಕಲ್ಪ ರಥ ಯಾತ್ರೆ ಉದ್ಘಾಟಿಸಿ, ಚಾಲನೆ

Thumbnail
Posted On: 28 Apr 2023, 02:52 PM

ಕಾಪು : ಇಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಇಂದು ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರು ಶಾಸಕರಾದ ಲಾಲಾಜಿ ಮೆಂಡನ್ ಹಾಗೂ ಚುನಾವಣಾ ಪ್ರವಾಸಿ ಪ್ರಭಾರಿಗಳಾದ ಹಾಗೂ ದೆಹಲಿ ವಿಧಾನಸಭಾ ಶಾಸಕರಾದ ವಿಜೇಂದ್ರ ಗುಪ್ತ ವಿಜಯ ಸಂಕಲ್ಪ ರಥ ಯಾತ್ರೆಯನ್ನು ಉದ್ಘಾಟಿಸಿ ಚಾಲನೆ ನೀಡಿದರು. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಕಾಂಗ್ರೆಸ್ ಪಕ್ಷ ಬಡ, ಮಧ್ಯಮ ವರ್ಗದವರಿಗಾಗಿ ಇರುವ ಪಕ್ಷ : ವಿನಯ್ ಕುಮಾರ್ ಸೊರಕೆ

Thumbnail
Posted On: 28 Apr 2023, 02:37 PM

ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು‌ ಹೀರುವ ಕೆಲಸವನ್ನು‌ ಬಿಜೆಪಿ ಮಾಡಿದೆ ಎಂದು ಕಾಪು ತಾಲೂಕಿನ ಮಣಿಪುರ ದೆಂದೂರು ಭಾಗದಲ್ಲಿ ಮತಯಾಚನೆಯ ಸಂದರ್ಭ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಕಾಂಗ್ರೆಸ್ ಪಕ್ಷ ಬಡ ಮಧ್ಯಮ ವರ್ಗದ ಪಕ್ಷ. ಬಡ ಮಧ್ಯಮ ವರ್ಗದವರಿಗೆ ಬಹಳಷ್ಟು ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತು ಹೋಗಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಇನ್ನು‌ ಹೆಚ್ಚು ಶ್ರೀಮಂತರಾಗುತ್ತಿದ್ದಾರೆ. ಬಡ ಮಧ್ಯಮ ವರ್ಗಕ್ಕೆ ಆರ್ಥಿಕವಾಗಿ ಸದೃಢರಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಮತ್ತೆ ಬೆಂಬಲಿಸಬೇಕು ಎಂದು ಸೊರಕೆ ಹೇಳಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಶೆಟ್ಟಿ, ವಿನ್ಸೆಂಟ್, ಹಸನ್ ಶೇಖ್, ಡೆನ್ಸಿಲ್, ದೇವೆಂದ್ರ ಶೆಟ್ಟಿ, ಹಮೀದ್, ಅಬ್ದುಲ್ ಅಜೀದ್ ಮತ್ತಿತರರು ಉಪಸ್ಥಿತರಿದ್ದರು.

ಮತದಾರರು ಬೆಂಬಲಿಸಿದರೆ ಮುಂದಿನ 5 ವರ್ಷದ ಅವಧಿ ಜನರ ಕೆಲಸವನ್ನು ನಿಷ್ಠೆಯಿಂದ ಮಾಡುವೆ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ

Thumbnail
Posted On: 27 Apr 2023, 07:27 PM

ಪಡುಬಿದ್ರಿ : ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶವು ಪ್ರಗತಿಯ ಪಥದಲ್ಲಿ ನಡೆಯುತ್ತಿದೆ. ಕೋವಿಡ್ ಕಾಲದಲ್ಲಿ ಲಸಿಕೆಯ ಸಮರ್ಪಕ‌ ವಿತರಣೆ, ಹಸಿವೆ ನಿವಾರಣೆಗೆ ಉಚಿತ ಪಡಿತರದಂತಹ ಕಾರ್ಯಕ್ರಮಗಳಿಂದಾಗಿ ಜನರು ಇಂದು ಭಯಮುಕ್ತವಾಗಿ ಬದುಕುವಂತಾಗಿದೆ ಎಂದು ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಜ್ಯೋತಿ ಹೇಳಿದರು ಅವರು ಪಡುಬಿದ್ರಿಯಲ್ಲಿ ಕಾಪು ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಪರ ಚುನಾವಣಾ ಪ್ರಚಾರ ಮಾಡಿ ಮತ ಯಾಚಿಸಿದ ಅವರು ಆತ್ಮನಿರ್ಭರ ಭಾರತ ನಿರ್ಮಾಣ ಮಾಡಲು ಬಿಜೆಪಿಯನ್ನು ಗೆಲ್ಲಿಸಬೇಕು ಎಂದರು. ಬಿಜೆಪಿ ತುಷ್ಟೀಕರಣ ರಾಜಕೀಯ ಮಾಡುವುದಿಲ್ಲ. ಅದರ ನೀತಿಗಳು ಸ್ಪಷ್ಟವಾಗಿವೆ ಮತ್ತು ಅಭಿವೃದ್ಧಿ ಕಾರ್ಯಸೂಚಿಯನ್ನು ಒಳಗೊಂಡಿವೆ ಎಂದ ಅವರು ಕರ್ನಾಟಕ ಒಂದು ಸುಂದರ ರಾಜ್ಯ, ಅಭಿವೃದ್ಧಿಗಾಗಿ ಜನರು ಗುರ್ಮೆ ಸುರೇಶ್ ಶೆಟ್ಟಿ ಅವರಿಗೆ ಮತ ನೀಡಬೇಕು ಎಂದು ಮನವಿ ಮಾಡಿದರು. ಸಭೆಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ನರೇಂದ್ರ ಮೋದಿಯಂತಹ ಪ್ರಧಾನ ಮಂತ್ರಿ ನಮ್ಮ ರಾಷ್ಟ್ರಕ್ಕೆ ಲಭ್ಯರಾಗಿಲ್ಲವಲ್ಲ ಎಂದು ಪಾಕಿಸ್ತಾನದ ಜನತೆ ಖೇದ ವ್ಯಕ್ತಪಡಿಸುತ್ತಿದ್ದಾರೆ. ಇದು ಮಾಧ್ಯಮಗಳಲ್ಲೂ ವರದಿಯಾಗಿದೆ. ನಿಸ್ವಾರ್ಥದಿಂದ ದುಡಿಯುತ್ತಿರುವ ನರೇಂದ್ರ ಮೋದಿಯವರಿಂದಾಗಿ ಭಾರತ ವಿಶ್ವಗುರುವಾಗುವ ಹಾದಿಯಲ್ಲಿದೆ. ಇಂತಹ ಸಂದರ್ಭದಲ್ಲಿ ಅವರ ಕೈ ಬಲಪಡಿಸುವುದಕ್ಕಾಗಿ ಕಾಪು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರನ್ನು ಭಾರೀ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಮತದಾರರು ಬೆಂಬಲಿಸಿದರೆ ಮುಂದಿನ ಐದು ವರ್ಷದ ಅವಧಿ ಜನರ ಚಾಕರಿ ಮಾಡುವ ಕೆಲಸವನ್ನು ನಿಷ್ಠೆಯಿಂದ ಮಾಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಶಾಸಕರಾದ ಲಾಲಾಜಿ ಮೆಂಡನ್, ಚುನಾವಣಾ ಪ್ರವಾಸಿ ಪ್ರಭಾರಿಗಳಾದ ವಿಜಯೇಂದ್ರ ಗುಪ್ತ, ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಹಿರಿಯ ಮುಖಂಡರಾದ ಎಂ ಕೆ ವಿಜಯ್ ಕುಮಾರ್, ಮಂಗಳೂರು ವಿಭಾಗ ಪ್ರಭಾರಿಗಳಾದ ಉದಯ್ ಕುಮಾರ್ ಶೆಟ್ಟಿ, ಮಟ್ಟಾರ್ ರತ್ನಾಕರ ಹೆಗ್ಡೆ, ಕಾಪು ಕ್ಷೇತ್ರದ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತಿಯಿದ್ದರು.

ಉಚ್ಚಿಲ : ರಾಹುಲ್ ಗಾಂಧಿಗೆ ಅಂಜಲ್ ಮೀನು ನೀಡಿದ ಮಹಿಳೆ

Thumbnail
Posted On: 27 Apr 2023, 07:05 PM

ಉಚ್ಚಿಲ : ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಇಂದು ಉಚ್ಚಿಲ ಮಹಾಲಕ್ಷ್ಮಿ ದೇಗುಲದ ಶಾಲಿನಿ ಡಾ. ಜಿ. ಶಂಕರ್ ತೆರೆದ ಸಭಾಂಗಣದಲ್ಲಿ ಮೀನುಗಾರರೊಂದಿಗೆ ಸಂವಾದ ನಡೆಸಿದರು. ಈ ಸಂದರ್ಭ ನೇತ್ರಾವತಿ ಸುವರ್ಣ ಎಂಬ ಮಹಿಳೆ ರಾಹುಲ್ ಗಾಂಧಿಗೆ ಅಂಜಲ್ ಮೀನು ನೀಡಿದರು. ಇದಲ್ಲದೆ ಸಂವಾದದಲ್ಲಿ ತಾನು ಕೇರಳದಲ್ಲಿ ಮೀನುಗಾರರೊಂದಿಗೆ ಮೀನುಗಾರಿಕೆಗೆ ಹೋದ ಕತೆಯನ್ನು ಹೇಳಿದರು. ಈ ಸಂದರ್ಭ ಪಕ್ಷದ ಪ್ರಮುಖರು ಉಪಸ್ಥಿತಿಯಿದ್ದರು.

ಉಚ್ಚಿಲ : ಬಿಜೆಪಿಯ ಭೃಷ್ಟಾಚಾರದ ಜೊತೆ ಬೆಲೆ ಏರಿಕೆಯ ಬಿಸಿಯ ಮಧ್ಯೆ ಬಡವರು ಸಿಕ್ಕಿಕೊಂಡಿದ್ದಾರೆ - ರಾಹುಲ್ ಗಾಂಧಿ

Thumbnail
Posted On: 27 Apr 2023, 06:52 PM

ಉಚ್ಚಿಲ : ಕೋಟ್ಯಾಂತರ ರೂಪಾಯಿ ಬಂಡವಾಳ ಹಾಕಿ ಶಾಸಕರ ಖರೀದಿ ಬಿಜೆಪಿಯಲ್ಲಿದೆ. ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಬೇಕಾದರೆ 2ಸಾವಿರ ಕೋಟಿ ನೀಡಬೇಕಾಗಿದೆ. ಇತ್ತೀಚೆಗೆ ಕಂಟ್ರ್ಯಾಕ್ಟರ್ ಗಳು ಕರ್ನಾಟಕದ ಬಿಜೆಪಿ ಪಕ್ಷದ 40% ಕಮಿಷನ್ ಗೆ ಬೇಸತ್ತು ಪ್ರಧಾನಮಂತ್ರಿ ಗೆ ಪತ್ರ ಬರೆದಿದ್ದಾರೆ. ಧಾರ್ಮಿಕ ಮಠದಲ್ಲಿಯೂ 30% ಕಮೀಷನ್ ಇರುವುದು ದುರಂತ. ಪೋಲಿಸ್ , ಪ್ರಾಧ್ಯಾಪಕ, ಇಂಜಿನಿಯರಿಂಗ್ ನೇಮಕಾತಿ ಯಲ್ಲಿಯೂ 40% ಕಮಿಷನ್ ಇದೆ. ಈ ಹಣ ಎಲ್ಲಿ ಹೋಗುತ್ತದೆ ಅಂತ ನಾವು ಯೋಚಿಸಬೇಕಿದೆ ಎಂದು ಕಾಂಗ್ರೆಸ್ ಯುವ ನಾಯಕ ‌ರಾಹುಲ್ ಗಾಂಧಿ ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಳದ ಶಾಲಿನಿ ಡಾ. ಜಿ. ಶಂಕರ್ ತೆರೆದ ಸಭಾಭವನದಲ್ಲಿ ಮೀನುಗಾರರೊಂದಿಗೆ ನಡೆದ ಸಂವಾದವನ್ನು ಉದ್ದೇಶಿಸಿ ಮಾತನಾಡಿದರು. ಬಡವರು ಮತ್ತು ಶ್ರೀಮಂತ ಮೀನುಗಾರರೆಂಬ ವ್ಯತ್ಯಾಸ ದೂರಮಾಡಬೇಕಾಗಿದೆ. ಭೃಷ್ಟಾಚಾರದ ಜೊತೆ ಬೆಲೆ ಏರಿಕೆಯ ಬಿಸಿಯ ಮಧ್ಯೆ ಬಡವರು ಸಿಕ್ಕಿಕೊಂಡಿದ್ದಾರೆ. ಬಡವರಿಗೆ ಬಾರಿ ನಷ್ಟ ಉಂಟಾದರೆ ಶ್ರೀಮಂತರಿಗೆ ತೊಂದರೆಯಾಗದು. 4 ಗ್ಯಾರಂಟಿ ಸ್ಕೀಮ್ ಕಾಂಗ್ರೆಸ್ ಜಾರಿಗೊಳಿಸಿದೆ ಸರಕಾರ ಬಂದ 1 ಗಂಟೆಯಲ್ಲಿ ನಮ್ಮ ಭರವಸೆ ಈಡೇರಿಸುತ್ತೇವೆ. ಮಾತೆಯರಿಗಾಗಿ ಯೋಜನೆಗಳಿವೆ. ಸರಕಾರ ಕೋಟ್ಯಾಂತರ ಹಣ ಡೀಸೆಲ್‌ , ಪೆಟ್ರೋಲ್ ಮೂಲಕ ಗಳಿಸಿದೆ. ನಮ್ಮ ಸರಕಾರದಲ್ಲಿ ಸುಳ್ಳು ಭರವಸೆ ನೀಡಲಾರೆವು. ದೇಶದ ಜನಗಣತಿಯ ಮೂಲಕ ಸಮುದಾಯದ ಬಗ್ಗೆ ತಿಳಿಯಬಹುದು ಎಂದರು. ಮೀನುಗಾರರೊಂದಿಗೆ ಸಂವಾದ : ಡ್ರೆಜ್ಜಿಂಗ್ ಸಮಸ್ಯೆ, ಮೀನುಗಾರಿಕಾ ಕಾಲೇಜನ್ನು ವಿಶ್ವವಿದ್ಯಾಲಯವನ್ನಾಗಿ ಮಾಡಬೇಕು, ಮೀನುಗಾರಿಕೆ ಸಂದರ್ಭ ತುರ್ತುಸೇವೆಗಾಗಿ ಸೀ ಅಂಬುಲೆನ್ಸ್ ಸೇವೆ, ಮೀನುಗಾರರ ಮಕ್ಕಳಿಗೆ ಶೈಕ್ಷಣಿಕ ವ್ಯವಸ್ಥೆಯಲ್ಲಿ ಮೀಸಲಾತಿ ಇತ್ಯಾದಿಗಳ ಬಗ್ಗೆ ಸಂವಾದ ನಡೆಯಿತು. ನಮ್ಮ ಸರಕಾರ ಮೀನುಗಾರರಿಗಾಗಿ ಹತ್ತು ಲಕ್ಷದ ಇನ್ಶೂರೆನ್ಸ್, ಮಹಿಳೆಯರಿಗೆ 1 ಲಕ್ಷದ ಬಡ್ಡಿರಹಿತ ಸಾಲ ನೀಡುವ ಯೋಜನೆಯಿದೆ. 25 ರೂಪಾಯಿ ಸಬ್ಸಿಡಿಯೊಂದಿಗೆ ಪ್ರತಿದಿನ 500 ಲೀಟರ್ ಡೀಸೆಲ್ ನೀಡಲಾಗುವುದು ಎಂದರು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ, ಉಡುಪಿ ಅಭ್ಯರ್ಥಿ ಪ್ರಸಾದ್ ಕಾಂಚನ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್, ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಷ್ಟ್ರೀಯ ಮೀನುಗಾರರ ಸಂಘದ ಅಧ್ಯಕ್ಷ ಮಂಜುನಾಥ ಸುಣೇಗಾರ್, ಕಾಂಗ್ರೆಸ್ ಮುಖಂಡರಾದ ಪ್ರತಾಪ್ ಚಂದ್ರ, ದೀಪಕ್ ಕೋಟ್ಯಾನ್, ವಿಶ್ವಾಸ್ ಅಮೀನ್, ಗೀತಾ ವಾಗ್ಳೆ, ಲಾವಣ್ಯ ಬಲ್ಲಾಳ್, ಸಂತೋಷ್ ಕುಲಾಲ್, ನವೀನ್ ಚಂದ್ರ ಸುವರ್ಣ, ನವೀನ್ ಚಂದ್ರ ಜೆ ಶೆಟ್ಟಿ, ವೆರೋನಿಕಾ ಕರ್ನಾಲಿಯೋ, ಗಫೂರ್, ಜಿತೇಂದ್ರ ಫುಟಾರ್ಡೋ, ದಿನೇಶ್ ಹೆಗ್ಡೆ ಮೊಳಹಳ್ಳಿ, ಮಂಜುನಾಥ ಪೂಜಾರಿ, ದಿವಾಕರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ರಾಶಿ ಪೂಜಾ ಮಹೋತ್ಸವ ಸಂಪನ್ನ

Thumbnail
Posted On: 26 Apr 2023, 10:24 PM

ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀಜನಾರ್ದನ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ರಾಶಿ ಪೂಜಾ ಮಹೋತ್ಸವವು ಬ್ರಹ್ಮಶ್ರೀ ವೇ|ಮೂ| ಕಲ್ಯ ಶ್ರೀ ಅನಂತರಾಮ ತಂತ್ರಿಯವರ ಮಾರ್ಗದರ್ಶನದಲ್ಲಿ ಮತ್ತು ಬ್ರಹ್ಮಶ್ರೀ ವೇ|ಮೂ| ಶ್ರೀ ಪಂಜ ಭಾಸ್ಕರ ಭಟ್ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ಬ್ರಹ್ಮಶ್ರೀ ವೇ|ಮೂ| ಕೊರಂಗ್ರಪಾಡಿ ಶ್ರೀ ಶ್ರೀನಿವಾಸ ತಂತ್ರಿಗಳ ಸಹಕಾರದೊಂದಿಗೆ ಸಂಪನ್ನಗೊಂಡಿತು. ಈ ಸಂದರ್ಭ ದೇವಳದ ಕಾರ್ಯನಿರ್ವಹಣಾಧಿಕಾರಿ ಸುಧೀರ್ ಕುಮಾರ್ ಶೆಟ್ಟಿ, ಆಡಳಿತಾಧಿಕಾರಿ ಗಣೇಶ್ ರಾವ್, ರಾಶಿ ಪೂಜಾ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರುಗಳು, ಅಧ್ಯಕ್ಷರು, ಕಾರ್ಯದರ್ಶಿ, ಕೋಶಾಧಿಕಾರಿ, ಸಮಿತಿಯ ಉಪಾಧ್ಯಕ್ಷರುಗಳು, ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯಿಂದ ವಿವಿದೆಡೆ ಮತಯಾಚನೆ

Thumbnail
Posted On: 26 Apr 2023, 06:35 PM

ಕಾಪು : ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಗುರ್ಮೆ ಸುರೇಶ್ ಶೆಟ್ಟಿ ಅವರು ಇಂದು ಶಾಸಕ ಲಾಲಾಜಿ ಮೆಂಡನ್ ಜೊತೆಗೂಡಿ ತೆಂಕ ಗ್ರಾಮ ಪಂಚಾಯತ್, ಅಲೆವೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಮನೆ ಭೇಟಿ ಮಾಡಿ ಮತಯಾಚಿಸಿದರು. ಈ ಸಂದರ್ಭ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಯಡಿಯೂರಪ್ಪ ಹಾಗು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ರಾಜ್ಯ ಸರಕಾರ ಮಾಡಿದ ಸಾಧನೆಗಳನ್ನು ಜನರಿಗೆ ಮನದಟ್ಟು ಮಾಡಿದರು. ಸರಕಾರ ಒದಗಿಸುತ್ತಿರುವ ಸವಲತ್ತುಗಳು ಅರ್ಹರನ್ನು ತಲುಪುತ್ತಿರುವ ಬಗೆಯನ್ನು ವಿವರಿಸಿದರಲ್ಲದೆ ಈ ಬಾರಿಯೂ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಗಳಿಸುವಂತಾಗಲು ತಮಗೆ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭ ಗ್ರಾಮ ಪಂಚಾಯತಿ ಸದಸ್ಯರು, ಪಕ್ಷದ ಪ್ರಮುಖರು, ಕಾರ್ಯಕರ್ತರು ಉಪಸ್ಥಿತಿಯಿದ್ದರು.