Updated News From Kaup
ಕಾಪು : ಶಂಕರಪುರ ಇನ್ನರ್ ವೀಲ್ ಕ್ಲಬ್ ಗೆ ಜಿಲ್ಲಾ ಚೇರ್ಮೆನ್ ಅಧಿಕೃತ ಭೇಟಿ
Posted On: 20-02-2023 01:39PM
ಕಾಪು : ತಾಲೂಕಿನ ಶಂಕರಪುರ ಇನ್ನರ್ ವೀಲ್ ಕ್ಲಬ್ ಗೆ ಶುಕ್ರವಾರದಂದು ಇನ್ನರ್ ವೀಲ್ ಜಿಲ್ಲಾ ಚೇರ್ಮೆನ್ ಕವಿತಾ ನಿಯತ್ ಅಧಿಕೃತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಶಂಕರಪುರದ ಮುಖ್ಯ ಬೆಳೆಯಾದ ಮಲ್ಲಿಗೆ ಕೃಷಿ ಹಾಗೂ ಹೂವಿನ ಬಗ್ಗೆ ಮತ್ತು ಶಂಕರಪುರ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಕಾರ್ಕಳ : ಕುಲಾಲ ಸಂಘ, ಕುಲಾಲ ಯುವ ವೇದಿಕೆ ವತಿಯಿಂದ ಸರ್ವಜ್ಞ ಜಯಂತಿ ಆಚರಣೆ
Posted On: 20-02-2023 12:54PM
ಕಾರ್ಕಳ : ಇಲ್ಲಿನ ಕುಲಾಲ ಸಂಘ, ಕುಲಾಲ ಯುವ ವೇದಿಕೆ ವತಿಯಿಂದ ಕಾರ್ಕಳ ತಾಲೂಕಿನ ಬಳಿ ಇರುವ ಸರ್ವಜ್ಞ ಸರ್ಕಲ್ ನ ಸರ್ವಜ್ಞನ ಮೂರ್ತಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಸರ್ವಜ್ಞ ಜಯಂತಿಯನ್ನು ಆಚರಣೆ ಮಾಡಲಾಯಿತು.
ಕಟಪಾಡಿ ಸಮಾಜ ಸೇವಕ ಜಯರಾಜ ಕಟಪಾಡಿ, ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆ
Posted On: 19-02-2023 04:00PM
ಉಡುಪಿ : ಜಿಲ್ಲಾ ಜೆಡಿಎಸ್ ಪಕ್ಷ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟಪಾಡಿಯ ಸಮಾಜ ಸೇವಕರಾದ ಜಯರಾಜ ಕಟಪಾಡಿ ಮತ್ತು ಸಂಗಡಿಗರು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು.
ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ
Posted On: 19-02-2023 03:39PM
ಕಾಪು : ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಕ್ರೀಡಾಕೂಟ ರವಿವಾರ ಕಾಪು ಮಹಾದೇವಿ ಶಾಲೆಯ ಮೈದಾನದಲ್ಲಿ ಉದ್ಘಾಟನೆಗೊಂಡಿತು.
ಫೆ.20 : ಹೆಜಮಾಡಿಯಲ್ಲಿ ಕಾಪು ತಹಶೀಲ್ದಾರ್ ಗ್ರಾಮ ವಾಸ್ತವ್ಯ
Posted On: 19-02-2023 10:49AM
ಕಾಪು : ತಾಲೂಕಿನ ಹೆಜಮಾಡಿ ಗ್ರಾಮದಲ್ಲಿ ಫೆ.20ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆಯ ವರೆಗೆ ಕಾಪು ತಾಲೂಕಿನ ತಹಶೀಲ್ದಾರರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯವನ್ನು ಮಾಡಲಿದ್ದಾರೆ ಎಂದು ಕಾಪು ತಹಶೀಲ್ದಾರ್ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಪು : ರಾಜ್ಯಮಟ್ಟದ ಗೀತಗಾಯನ ಸಂಗೀತ ಸ್ಪರ್ಧೆ - ಶಂಕರಪುರದ ಆಯುಷ್ ರೇಗನ್ ಮಿನೇಜಸ್ ಪ್ರಥಮ ಬಹುಮಾನ
Posted On: 18-02-2023 03:40PM
ಕಾಪು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ಇವರು ಆಯೋಜಿಸಿದ ರಾಜ್ಯಮಟ್ಟದ ಗೀತಗಾಯನ ಸಂಗೀತ ಸ್ಪರ್ಧೆಯಲ್ಲಿ ಕಾಪು ಶಂಕರಪುರದ ಆಯುಷ್ ರೇಗನ್ ಮಿನೇಜಸ್ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಮಹಾಶಿವರಾತ್ರಿ : ಹಬ್ಬವಲ್ಲ, ’ವ್ರತ'
Posted On: 18-02-2023 03:27PM
'ಶಿವರಾತ್ರಿ' ಸಂಭ್ರಮಿಸುವ ಹಬ್ಬ ಅಲ್ಲ; ಉಪವಾಸವಿದ್ದು ಶಿವನನ್ನು ಅಭಿಷೇಕ, ಸಹಸ್ರನಾಮಾದಿಗಳಿಂದ ಸುಪ್ರೀತನನ್ನಾಗಿಸುವುದು, ಧ್ಯಾನಾಸಕ್ತರಾಗಿದ್ದು ರಾತ್ರಿ ಜಾಗರಣೆಯಲ್ಲಿರುವುದು, ಪ್ರದಕ್ಷಿಣೆ-ನಮಸ್ಕಾರ, ಬಿಲ್ವಾರ್ಚನೆ ಯಿಂದ ಮಹಾದೇವನನ್ನು ಆರಾಧಿಸುವ ವ್ರತ ವಿಶೇಷವಾಗಿ ’ಮಹಾ ಶಿವರಾತ್ರಿ’ ಪುರಾಣಕಾರರಿಂದ ವ್ಯಾಖ್ಯಾನಿಸಲ್ಪಟ್ಟಿದೆ. ಶರಣಾರ್ಥಿ ಶರಣರಿಗೆ ಸರ್ವಮಂಗಲವನ್ನು ಅನುಗ್ರಹಿಸುವ ಮಂಗಲಕರನಾದ ಶರ್ವನು ಜನಮಾನಸಕ್ಕೆ ಸಮೀಪದ ದೇವರು. ವೇದಪೂರ್ವ ಕಾಲದಿಂದ ಈತನ ಅಸ್ತಿತ್ವವು ಗುರುತಿಸಲ್ಪಡುತ್ತದೆ. ವೇದಕಾಲದಲ್ಲಿ ಒಂದು ಸ್ವರೂಪವನ್ನು ಪಡೆದು ವೇದೋತ್ತರ ಕಾಲಕ್ಕಾಗುವಾಗ ತ್ರಿಮೂರ್ತಿಗಳಲ್ಲಿ ಒಬ್ಬನಾಗಿ, ಲಯಾಧಿಕಾರಿಯಾಗಿ, ದೇವೋತ್ತಮನಾಗಿ, ಮಹಾಲಿಂಗನಾಗಿ, ಭೂವ್ಯೋಮ ವ್ಯಾಪಿಯಾದ ವಿರಾಟ್ ಪುರುಷನಾಗಿ ಪುರಾಣಗಳು ಕೊಂಡಾಡುವಂತಾಗುವುದನ್ನು ಗಮನಿಸಬಹುದು.
ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ : ಭರವಸೆಯ ಒಪ್ಪಿಗೆ ನೀಡಿ ಬಜೆಟ್ನಲ್ಲಿ ವಂಚನೆ - ಪ್ರವೀಣ್ ಎಂ ಪೂಜಾರಿ
Posted On: 17-02-2023 10:42PM
ಉಡುಪಿ : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಘೋಷಣೆ ಕುರಿತು ಮುಖ್ಯಮಂತ್ರಿಯವರು ನೀಡಿದ ಭರವಸೆ ಸುಳ್ಳಾಗಿದೆ. ಸಮಾಜದ ಬಹುಕಾಲದ ಬೇಡಿಕೆಯನ್ನು ಈಡೇರಿಸುವ ಸಲುವಾಗಿ ಸಚಿವರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರ ನಿಯೋಗ ಸಿಎಂ ಬಸವರಾಜ್ ಬೊಮ್ಮಾಯಿಗೆ ಜ.5ರಂದು ಮನವಿ ಸಲ್ಲಿಸಿದ್ದ ಸಂದರ್ಭ ನಿಗಮ ಸ್ಥಾಪನೆಗೆ ಸ್ಪಷ್ಟ ಭರವಸೆಯ ಒಪ್ಪಿಗೆ ನೀಡಿ ಸೂಕ್ತ ಅನುದಾನದೊಂದಿಗೆ ಈ ಸಾಲಿನ ಬಜೆಟ್ನಲ್ಲಿ ಘೋಷಣೆ ಮಾಡುವುದಾಗಿ ತಿಳಿಸಿದ್ದರು. ಆದರೂ ಈ ಬಾರಿಯ ಬಜೆಟ್ನಲ್ಲಿ ಯಾವುದೆ ಕ್ರಮ ಕೈಗೊಳ್ಳದೆ ಮತ್ತೆ ಬಿಲ್ಲವ, ಈಡಿಗರಿಗೆ ಅನ್ಯಾಯವೆಸಗಿದ್ದಾರೆ.
ಈ ಚುನಾವಣಾ ಬಜೆಟ್ ಅನುಷ್ಟಾನವಾಗಲಿ : ರಾಘವೇಂದ್ರ ಪ್ರಭು, ಕವಾ೯ಲು
Posted On: 17-02-2023 10:17PM
ಉಡುಪಿ : ಮುಖ್ಯಮಂತ್ರಿ ಅವರು ಮಂಡಿಸಿದ ಬಜೆಟ್ ಚುನಾವಣಾ ಸಮಯದಲ್ಲಿ ಆಗಿರುವುದರಿಂದ ಅದರ ಅನುಷ್ಠಾನ ಅಗತ್ಯವಾಗಿ ಆಗಬೇಕು ಎಂದು ಉಡುಪಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಘಟನಾ ಕಾಯ೯ದಶಿ೯ ರಾಘವೇಂದ್ರ ಪ್ರಭು, ಕವಾ೯ಲು ಆಗ್ರಹಿಸಿದ್ದಾರೆ.
ತುಳು ಭಾಷೆಗೆ ಅಪಮಾನ : ಸಚಿವ ಮಾಧು ಸ್ವಾಮಿ ಕ್ಷಮೆ ಕೇಳಬೇಕು, ಇಲ್ಲವಾದಲ್ಲಿ ಪ್ರತಿಭಟನೆ ಅನಿವಾರ್ಯ - ವಿನೋದ್ ಶೆಟ್ಟಿ
Posted On: 17-02-2023 10:00PM
ಪವಿತ್ರವಾದ ತುಳುನಾಡಿನಲ್ಲಿ ದೈವರಾಧನೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅದೇ ಪ್ರಕಾರ ತುಳುನಾಡ ನಲ್ಲಿ ತುಳು ಭಾಷೆಗೆ ಅದರದೇ ಆದ ಸಾವಿರಾರು ವರ್ಷಗಳ ವಿಶಿಷ್ಟವಾದ ಸ್ಥಾನಮಾನ ಗೌರವ ಆಚಾರ ವಿಚಾರ ಸಾಹಿತ್ಯ ಸಂಸ್ಕೃತಿ ಹಿನ್ನೆಲೆ ಇದೆ. ಪಂಚ ದ್ರಾವಿಡ ಭಾಷೆಗಳಲ್ಲಿಯೂ ತುಳು ಭಾಷೆ ಕೂಡ ಒಂದು. ತುಳು ಭಾಷೆಗೆ ತನ್ನದೇ ಆದ ಲಿಪಿ ಇದೆ. ರಾಜಕೀಯ ಕುತಂತ್ರದಿಂದ ಇನ್ನೂ ಕೂಡ ತುಳು ಭಾಷೆಗೆ ರಾಷ್ಟ್ರೀಯ ಸ್ಥಾನಮಾನ ಕೊಡಿಸಲು ವಿಫಲವಾಗಿದೆ ಎಂದು ಅಖಿಲ ಭಾರತ ತುಳುನಾಡ ದೈವರಾಧಾಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆಯ ಸಂಸ್ಥಾಪಕರು ಹಾಗೂ ಪ್ರಧಾನ ಕಾರ್ಯದರ್ಶಿಯಾದ ವಿನೋದ್ ಶೆಟ್ಟಿ ತಿಳಿಸಿದ್ದಾರೆ.
