Updated News From Kaup

ನಿರಂತರ್ ಉದ್ಯಾವರ : ಏಳು ದಿನದ ಬಹುಭಾಷ ನಾಟಕೋತ್ಸವಕ್ಕೆ ತೆರೆ

Posted On: 09-02-2023 05:54PM

ಉಡುಪಿ : ನಿರಂತರ್ ಸಂಘಟನೆಯ ನೇತೃತ್ವದಲ್ಲಿ ಐದನೇ ವರ್ಷದ ಪ್ರಯುಕ್ತ ಉದ್ಯಾವರದ ಸಂತ ಫ್ರಾನ್ಸಿಸ್ ಝೆವಿಯರ್ ದೇವಾಲಯದ ವಠಾರದಲ್ಲಿ ಏಳು ದಿನದ ಬಹುಭಾಷ ನಾಟಕೋತ್ಸವವು ಯಶಸ್ವಿಯಾಗಿ ಮುಕ್ತಾಯ ಕಂಡಿತು. ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಕರ್ನಾಟಕದ ಉಚ್ಚ ನ್ಯಾಯಾಲಯದ ನ್ಯಾಯವಾದಿ ಮತ್ತು ಖ್ಯಾತ ಲೇಖಕಿಯಾಗಿರುವ ವಿತಾಶ ರೋಡ್ರಿಗಸ್ (ಮುದ್ದು ತೀರ್ಥಹಳ್ಳಿ), ಪ್ರಸ್ತುತ ಕಾಲದಲ್ಲಿ ಜನ ನಾಟಕಗಳಿಗಿಂತ ಚಲನಚಿತ್ರದತ್ತ ಹೆಚ್ಚು ಆಕರ್ಷಿತರಾದರೂ, ನಾಟಕಗಳು ಇನ್ನಷ್ಟು ಬೆಳೆಯುತ್ತೇವೆ. ಚಲನಚಿತ್ರಗಳು ಎಷ್ಟು ಬೆಳೆದರು ಅಥವಾ ಜನಪ್ರಿಯತೆಯನ್ನು ಕಂಡರೂ ನಾಟಕದ ಜಾಗಕ್ಕೆ ಬರಲು ಸಾಧ್ಯವೇ ಇಲ್ಲ. ನಾಟಕಕ್ಕೆ ಅದರದೇ ಆದ ವರ್ಚಸ್ಸು ಇದೆ ಎಂದರು.

ಕಾಪು : ಮಲ್ಲಾರಿನ ಪ್ರದೀಪ್ ಆರ್ ಭಂಡಾರಿಗೆ ಪಿಎಚ್ ಡಿ ಪದವಿ

Posted On: 09-02-2023 05:31PM

ಕಾಪು : ತಾಲೂಕಿನ ಮಲ್ಲಾರು ಗ್ರಾಮದ ಪ್ರದೀಪ್ ಭಂಡಾರಿಗೆ ಮಂಗಳೂರು ವಿವಿಯ ಘಟಕ ಕಾಲೇಜಾದ ಮಡಿಕೇರಿಯ ಫೀಲ್ಡ್ ಮಾರ್ಷಲ್ ಕೆ. ಎಂ. ಕಾರಿಯಪ್ಪ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಾಧ್ಯಾಪಕ ಹಾಗೂ ಸ್ನಾತಕೋತ್ತರ ವಾಣಿಜ್ಯ ವಿಭಾಗದಲ್ಲಿ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿರುವ ಪ್ರದೀಪ್ ಭಂಡಾರಿ ಪಾಲಿಸಿಸ್ ಅಂಡ್ ಪ್ರಾಕ್ಟಿಸಸ್ ಆಫ್ ಎಂಪ್ಲೊಯೀರೇಟೆನ್ಸನ್ ಮ್ಯಾನೇಜ್ಮೆಂಟ್ ಇನ್ ಟೆಲಿಕಾಂ ಸೆಕ್ಸರ್ ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಮಂಗಳೂರು ವಿವಿ ಪಿಎಚ್ ಡಿ ಪದವಿ ನೀಡಿದೆ.

ಪಡುಬಿದ್ರಿ : ಆದಿ ಮಾಯೆ ಆದಿಶಕ್ತಿ, ಅಣ್ಣಪ್ಪ ಪಂಜುರ್ಲಿ, ಕೊರಗಜ್ಜ ಕ್ಷೇತ್ರ ಜೀರ್ಣೋದ್ಧಾರದ ಲಕ್ಕಿಡಿಪ್ ಪುಸ್ತಕ ಬಿಡುಗಡೆ

Posted On: 09-02-2023 01:28PM

ಪಡುಬಿದ್ರಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಇತಿಹಾಸ ಪ್ರಸಿದ್ಧ ಪಡುಬಿದ್ರಿ ಆದಿ ಮಾಯೆ ಆದಿಶಕ್ತಿ ಹಾಗೂ ಅಣ್ಣಪ್ಪ ಪಂಜುರ್ಲಿ ಕೊರಗಜ್ಜ ದೈವಗಳ ಕ್ಷೇತ್ರದ ಜೀರ್ಣೋದ್ಧಾರದ ಪ್ರಯುಕ್ತ ಸೋಮವಾರ ಜಿಲ್ಲೆಯ ಇತಿಹಾಸ ಪ್ರಸಿದ್ಧ ಬೊಬ್ಬರ್ಯ ಕಾಂತೇರಿ ಜುಮಾದಿ ಹಾಗೂ ಕಲ್ಕುಡ ಕೊರಗಜ್ಜ ಪರಿವಾರ ದೈವಗಳ ದೈವಸ್ಥಾನದಲ್ಲಿ ಜೀರ್ಣೋದ್ಧಾರದ ಪ್ರಯುಕ್ತ ಅದೃಷ್ಟ ಕೂಪನ್ ಟಿಕೆಟ್ ಇರುವ ಪುಸ್ತಕದ ಬಿಡುಗಡೆ ಕಾರ್ಯಕ್ರಮವನ್ನು ಬೊಬ್ಬರ್ಯ ಯುವ ಸೇವಾ ಸಮಿತಿಯ ಅಧ್ಯಕ್ಷರಾದ ವರದರಾಜ ಕಾಮತ್ ಅವರಿಗೆ ಹಸ್ತಾಂತರ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕಾಪು : ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಯುವ ಛಾಯಾಗ್ರಹಕ ನಿಧನ

Posted On: 09-02-2023 12:37PM

ಕಾಪು : ಇಲ್ಲಿನ ಪೊಲಿಪುವಿನ ನಿವಾಸಿ ಯುವ ಛಾಯಾಗ್ರಹಕ ಪ್ರೀತೇಶ್ ಪೂಜಾರಿಯವರು ಗುರುವಾರ ಬೆಳಿಗ್ಗೆ ನಾಲ್ಕು ಗಂಟೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕಟಪಾಡಿ : ಯುವಜನ ಸೇವಾ ಸಂಘ ಏಣಗುಡ್ಡೆ - ನೂತನ ಸಂಘದ ಉದ್ಘಾಟನೆ

Posted On: 06-02-2023 09:23PM

ಕಟಪಾಡಿ : ಯುವಜನ ಸೇವಾ ಸಂಘ ಏಣಗುಡ್ಡೆ ಕಟಪಾಡಿ ಇದರ ನೂತನ ಸಂಘದ ಉದ್ಘಾಟನಾ ಸಮಾರಂಭವು ಫೆಬ್ರವರಿ 5 ರಂದು ಕಟಪಾಡಿಯ ತ್ರಿಶಾ ವಿದ್ಯಾಕಾಲೇಜ್ ನಲ್ಲಿ ನಡೆಯಿತು. ಕಾರ್ಯಕ್ರಮವನ್ನು ಡಾ ಉದಯ ಕುಮಾರ್ ಶೆಟ್ಟಿ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜ್ ನ ಇಂದುರೀತಿ ಉದ್ಘಾಟಿಸಿದರು.

ಉಡುಪಿ ತುಳುಕೂಟ : 21ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ

Posted On: 06-02-2023 09:13PM

ಉಡುಪಿ : ಬದುಕಿನಲ್ಲಿ ಟಿ.ವಿ.ಯಂತಹ ಪರಿಕರಗಳ ಬಳಕೆ ಹೆಚ್ಚುತ್ತಿರುವುದರಿಂದ, ಜನರು ನಾಟಕದಂತಹ ಕಲೆಗಳಿಂದ ದೂರವಾಗುತ್ತಿದ್ದಾರೆ. ಇಂತಹ ಕಾಲಘಟ್ಟದಲ್ಲಿಯೂ ಉಡುಪಿ ತುಳುಕೂಟ ಎರಡು ದಶಕಗಳಿಂದ ನಾಟಕೋತ್ಸವವನ್ನು ನಡೆಸುತ್ತಾ ಜನರ ಉಡುಪಿಯ ಅಭಿರುಚಿಯನ್ನು ಜೀವಂತವಾಗಿಟ್ಟಿರುವುದು ಶ್ಲಾಘನೀಯ ಎಂದು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಡೀನ್ ಡಾ.ಪದ್ಮರಾಜ್ ಹೆಗ್ಡೆ ಹೇಳಿದರು. ಅವರು ಭಾನುವಾರ ಉಡುಪಿ ತುಳುಕೂಟದ ವತಿಯಿಂದ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 21ನೇ ಕೆಮ್ತೂರು ತುಳು ನಾಟಕ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.

ಪಾಂಗಾಳ : ಹಾಡುಹಗಲೇ ಯುವಕನ ಕೊಲೆ

Posted On: 05-02-2023 07:34PM

ಕಾಪು : ಪಾಂಗಾಳದಲ್ಲಿ ಯುವಕನೋರ್ವನನ್ನು ಚೂರಿಯಿಂದ ಇರಿದು ಬರ್ಬರವಾಗಿ ಇರಿದು ಕೊಲೆಗೈದ ಘಟನೆ ರವಿವಾರ ಸಂಜೆ ನಡೆದಿದೆ. ಪಾಂಗಾಳ ಮಂಡೇಡಿ ನಿವಾಸಿ ಶರತ್ ಶೆಟ್ಟಿ (41) ಮೃತ ಯುವಕ.

ಕಾಪು : ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆ

Posted On: 05-02-2023 04:47PM

ಕಾಪು : ವಿಶ್ವಹಿಂದೂ ಪರಿಷದ್ ಬಜರಂಗದಳ ಕಾಪು ಪ್ರಖಂಡ ಇದರ ಬಜರಂಗದಳ ತಾಲೂಕು ಸಂಚಾಲಕರಾಗಿ ದಿನೇಶ್ ಪಾಂಗಾಳ ಆಯ್ಕೆಯಾಗಿರುತ್ತಾರೆ.

ಪಿ ಕೆ ಎಸ್ ಪ್ರೌಢಶಾಲೆ ಕಳತ್ತೂರು: ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 05-02-2023 03:30PM

ಕಾಪು : ಇಲ್ಲಿನ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢಶಾಲೆ ಕಳತ್ತೂರು ಇಲ್ಲಿ ಮಾರ್ಚ್ 3 ರಂದು ಶಾಲೆಯ ನಿವೃತ್ತ ಶಿಕ್ಷಕ ಗೋಪಾಲ ಕೃಷ್ಣ ರಾವ್ ಇವರಿಗೆ ನಡೆಯುವ ಗುರುವಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮದ ಪೂರ್ವಭಾವಿ ಸಭೆ ಆದಿತ್ಯವಾರ ಶಾಲೆಯ ಸಭಾಭವನದಲ್ಲಿ ನಡೆಯಿತು.

ಕಾಪು : ಗದ್ದಿಗೆಬೆಟ್ಟು ಕೈಪುಂಜಾಲು ಉಳಿಯಾರಗೋಳಿ ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಶಿಲಾನ್ಯಾಸ ; ವಿಜ್ಞಾಪನಾ ಪತ್ರ ಬಿಡುಗಡೆ

Posted On: 05-02-2023 03:21PM

ಕಾಪು : ಇಲ್ಲಿನ ಗದ್ದಿಗೆಬೆಟ್ಟು ಕೈಪುಂಜಾಲು ಉಳಿಯಾರಗೋಳಿಯ ಕಂಬೆರ್ಕಳ ಶ್ರೀ ಬಬ್ಬುಸ್ವಾಮಿ ದೈವಸ್ಥಾನ (ರಿ.)ದ ಜೀರ್ಣೋದ್ಧಾರ ಫೆಬ್ರವರಿ 3ರಂದು ಜರಗಿತು.