Updated News From Kaup

ಶಿರ್ವ : ವಿಶ್ವ ಬ್ರಾಹ್ಮಣ ಯುವ ಸಂಗಮ, ಮಹಿಳಾ ಬಳಗ ದಶಮಾನೋತ್ಸವ - ಕ್ರೀಡೋತ್ಸವ

Posted On: 31-01-2023 10:40AM

ಶಿರ್ವ : ಸಮಾಜ ಬೆಳೆಯಬೇಕಿದ್ದರೆ ನಾವು ಸಮಾಜಕ್ಕಾಗಿ ತ್ಯಾಗ ಮಾಡಬೇಕು ಎಲ್ಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಿಸಬೇಕು ಎಂದು ಯುವ ಸಂಗಮದ ಸ್ಥಾಪಕರಾದ ಕಾಪು ಶ್ರೀಕಾಂತ ಆಚಾರ್ಯ ಅಭಿಪ್ರಾಯ ಪಟ್ಟರು.

ಕಟಪಾಡಿ : ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದ ಕೊರಗಜ್ಜ ಸನ್ನಿಧಿಗೆ ನಟಿ ಮೇಘ ಶೆಟ್ಟಿ ಭೇಟಿ

Posted On: 30-01-2023 01:24PM

ಕಟಪಾಡಿ : ಇಲ್ಲಿನ ಪೇಟೆಬೆಟ್ಟು ಬಬ್ಬು ಸ್ವಾಮಿ ದೈವಸ್ಥಾನದಲ್ಲಿನ ಕಾರ್ಣಿಕ ಪ್ರಸಿದ್ಧ ಕರಾವಳಿಯ ಅತ್ಯಂತ ನಂಬಿಕೆಯ ದೈವ ಕೊರಗಜ್ಜ ಸನ್ನಿಧಿಗೆ ಭಾನುವಾರ ಜೊತೆ ಜೊತೆಯಲಿ ಧಾರಾವಾಹಿಯ ನಾಯಕಿ ಮೇಘ ಶೆಟ್ಟಿ ಭೇಟಿ ನೀಡಿ, ಕೊರಗಜ್ಜನಲ್ಲಿ ಇಷ್ಟಾರ್ಥ ಸಿದ್ದಿಗೆ ಬೇಡಿಕೊಂಡರು.

ಕಾಪು : ಜೇಸಿಐ ರಜತ ವರ್ಷಾಚರಣೆಯ ಸಮಾರೋಪ ; ಸನ್ಮಾನ ; ಸಾಂಸ್ಕೃತಿಕ ಕಾರ್ಯಕ್ರಮ

Posted On: 29-01-2023 10:06PM

ಕಾಪು : ಜಗತ್ತಿನ ಎಲ್ಲೆಡೆ ಕಾಡುತ್ತಿರುವ ಅಶಾಂತಿಯ ವಾತಾವರಣವನ್ನು ತೊಲಗಿಸುವಲ್ಲಿ ಜೇಸಿಐನಂತಹ ಅಂತಾರಾಷ್ಟ್ರೀಯ ಸಂಸ್ಥೆಗಳ ಮಾರ್ಗದರ್ಶನ ಅತೀ ಅಗತ್ಯವಾಗಿದ್ದು, ಜಾಗತಿಕ ಶಾಂತಿ ಮತ್ತು ಜಗತ್ತಿನ ಕಲ್ಯಾಣಕ್ಕಾಗಿ ಜೇಸಿಐ ಸಂಸ್ಥೆ ವಿಶೇಷ ಕೊಡುಗೆ ನೀಡುವಂತಾಗಲಿ ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು. ಅವರು ಜನವರಿ 28 ರಂದು ಕಾಪು ಪೇಟೆಯಲ್ಲಿ ಆಯೋಜಿಸಲಾಗಿದ್ದ ಕಾಪು ಜೇಸಿಐನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಪು : ಬೃಹತ್ ಉದ್ಯೋಗ ಮೇಳ ; ಕಂಪನಿಗಳು ಉದ್ಯೋಗದ ದಾರಿ ಕಲ್ಪಿಸಿ ಕೊಡಿ - ಕೂರ್ಮಾ ರಾವ್ ಎಂ

Posted On: 29-01-2023 04:00PM

ಕಾಪು : ಕೌಶಲ ಕರ್ನಾಟಕ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ ಬೆಂಗಳೂರು, ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಉಡುಪಿ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಇದರ ಸಹಯೋಗದೊಂದಿಗೆ ಕಾಪು ಉದ್ಯೋಗ ಮೇಳವನ್ನು ಭಾನುವಾರ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಆಯೋಜಿಸಲಾಗಿತ್ತು.

ಯಕ್ಷ ಪ್ರತಿಭೆ ಪಡುಬಿದ್ರಿಯ ವೈಷ್ಣವಿ ರಾವ್

Posted On: 29-01-2023 01:23PM

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯ ಪಿವಿ ಜಗನ್ನಾಥ್ ರಾವ್ ಹಾಗೂ ಸುಜ್ಯೋತಿ ದಂಪತಿಯರ ಮಗಳಾದ ವೈಷ್ಣವಿ ರಾವ್ ಇವರ ಜನನ. ಬಿಕಾಂ ವಿದ್ಯಾಭ್ಯಾಸವನ್ನು ಪೂರೈಸಿ ಪ್ರಸ್ತುತ U18 ನಲ್ಲಿ M.COM ವ್ಯಾಸಂಗ ಮಾಡುತ್ತಿದ್ದಾರೆ. ಇವರ ಊರಿನಲ್ಲಿ ತುಂಬಾ ಯಕ್ಷಗಾನ ಪ್ರದರ್ಶನ ಆಗುತಿತ್ತು ಮತ್ತು ತಮ್ಮ ಮೂರನೇ ವಯಸ್ಸಿಗೆ ಭರತನಾಟ್ಯ ಕಲಿಯಲು ಆರಂಭಿಸಿದ್ದ ಇವರಿಗೆ ಯಕ್ಷಗಾನ ಕಲಿಯಬೇಕು ಅನ್ನುವ ಆಸೆ ಬಂತು ಆವಾಗ ಯಕ್ಷಗಾನಕ್ಕೆ ಸೇರಿದರು, ಹೀಗೆ ಇವರಿಗೆ ಯಕ್ಷಗಾನ ರಂಗಕ್ಕೆ ಬರಲು ಪ್ರೇರಣೆಯಾಯಿತು ಎಂದು ವೈಷ್ಣವಿ ಅವರು ಹೇಳುತ್ತಾರೆ. ಪೂರ್ಣಿಮಾ ಯತೀಶ್ ರೈ ಅವರ "ಶ್ರೀ ಮಹಾಗಣಪತಿ ಮಹಿಳಾ ಯಕ್ಷಗಾನ ಮಂಡಳಿಯಲ್ಲಿ”, ಅವರ ಮಾರ್ಗಶ್ರನದಲ್ಲಿ ಆರು ವರ್ಷಗಳಿಂದ ಮುಂಬೈ,ಚೆನ್ನೈ ಸೇರಿದಂತೆ ಬಹಳಷ್ಟು ಕಡೆ ಪ್ರದರ್ಶನ ಕೊಟ್ಟಿದ್ದಾರೆ. ಸಾಯಿಸುಮ ಮಿಥುನ್ ನಾವಡ ಇವರ "ಯಕ್ಷವಾಸ್ಯಮ್ ಕಾರಿಂಜ" ಇದರಲ್ಲೂ ಬಹಳ ಕಾರ್ಯಕ್ರಮಗಳಿಗೆ ಹೋಗಿದ್ದಾರೆ. ಇನ್ನೂ ಹಲವಾರು ಸಂಘ ಸಂಸ್ಥೆಗಳಲ್ಲಿ ಕಾರ್ಯಕ್ರಮಗಳನ್ನು ವೈಷ್ಣವಿ ಅವರು ನೀಡಿರುತ್ತಾರೆ.

ನಿರಂತರ್ ಉದ್ಯಾವರ : ಜ.30 - ಫೆ. 5 ರವರೆಗೆ ಏಳು ದಿನದ ಬಹುಭಾಷಾ ನಾಟಕೋತ್ಸವ

Posted On: 28-01-2023 02:25PM

ಉಡುಪಿ : ಕಲೆ ಮತ್ತು ಸಾಂಸ್ಕೃತಿಕ ಸಂಸ್ಥೆಯಾಗಿರುವ ನಿರಂತರ್ ಉದ್ಯಾವರ ಐದನೇ ವರ್ಷದ ಸಂಭ್ರಮಾಚರಣೆಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಜನವರಿ 30 ರಿಂದ ಫೆಬ್ರವರಿ 5 ರವರೆಗೆ ಸಂಪೂರ್ಣ ಉಚಿತ ಪ್ರವೇಶದ ನಿರಂತರ ಏಳು ದಿನದ ಬಹುಭಾಷಾ ನಾಟಕೋತ್ಸವ ಉದ್ಯಾವರದಲ್ಲಿ ಹಮ್ಮಿಕೊಳ್ಳಲಾಗಿದೆ.

ಜೆಸಿಐ ಕಟಪಾಡಿ ವತಿಯಿಂದ ಟ್ರಾಫಿಕ್ ಪೋಲಿಸರಿಗೆ ಸನ್ಮಾನ

Posted On: 27-01-2023 05:59PM

ಕಟಪಾಡಿ : ಜೆಸಿಐ ಇಂಡಿಯಾ ಇದರ ವಲಯ 15ರ ಕಾರ್ಯಕ್ರಮ, ಕಟಪಾಡಿ ಘಟಕದ ವತಿಯಿಂದ ಸೆಲ್ಯೂಟ್ ದ ಸೈಲೆಂಟ್ ವರ್ಕರ್ ಕಾರ್ಯಕ್ರಮದ ಅಂಗವಾಗಿ ಗುರುವಾರ ಕಟಪಾಡಿ ಹೊರ ಠಾಣೆಯಲ್ಲಿ ಟ್ರಾಫಿಕ್ ಪೊಲೀಸರನ್ನು ಸನ್ಮಾನಿಸಲಾಯಿತು.

ಜನವರಿ 28 : ಕಾಪು ಜೇಸಿಐ ರಜತ ಸಂಭ್ರಮ, ಸಾಂಸ್ಕೃತಿಕ ಕಾರ್ಯಕ್ರಮ

Posted On: 27-01-2023 05:55PM

ಕಾಪು : ಜೇಸಿಐ ಕಾಪುವಿನ ರಜತ ವರ್ಷಾಚರಣೆಯ ಸಮಾರೋಪ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ರಜತ ಸಂಭ್ರಮ ಸಮಾರಂಭವು ಜ. 28ರಂದು ಸಂಜೆ 6 ಗಂಟೆಗೆ ಕಾಪು ಪೇಟೆಯಲ್ಲಿ ನಡೆಯಲಿದೆ.

ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದಿಂದ ಕಾವ್ಯಾನುಬಂಧ ವಿಚಾರಗೋಷ್ಠಿ – ಕವಿಗೋಷ್ಠಿ

Posted On: 26-01-2023 07:38PM

ಮಂಗಳೂರು : ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (KSSAP )ಆಶ್ರಯದಲ್ಲಿ ನಾಡು ಕಂಡ ಅದ್ವಿತೀಯ ಪ್ರೇಮ ಕವಿ ಕೆ.ಎಸ್‌ ನರಸಿಂಹ ಸ್ವಾಮಿಯವರ ಜನ್ಮ ದಿನಾಚರಣೆ ಪ್ರಯುಕ್ತ ಕದ್ರಿ ಬಾಲ ಭವನದಲ್ಲಿ ಕಾವ್ಯಾನುಬಂಧ ವಿಚಾರಗೋಷ್ಠಿ – ಕವಿಗೋಷ್ಠಿ ನಡೆಸುವ ಮೂಲಕ ಆಚರಿಸಲಾಯಿತು.

ಕಾಪು : ಅತ್ಯಧಿಕ ಸೇವೆ ನೀಡಿದ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಸನ್ಮಾನ

Posted On: 26-01-2023 07:14PM

ಕಾಪು : ತಾಲೂಕಿನ ರಾಷ್ಟ್ರೀಯ ಹಾಗೂ ನಾಡಹಬ್ಬಗಳ ಆಚರಣಾ ಸಮಿತಿ ವತಿಯಿಂದ 74ನೇ ಗಣರಾಜ್ಯೋತ್ಸವ ದಿನಾಚರಣೆ ಸಂಭ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜರಗಿತು.