Updated News From Kaup
ಜನವರಿ 19 ರಿಂದ ಮಾಚ್೯ 11: ಪಡುಬಿದ್ರಿ ಢಕ್ಕೆಬಲಿ

Posted On: 04-01-2023 12:55PM
ಪಡುಬಿದ್ರಿ : ಇಲ್ಲಿನ ಖಡೇಶ್ವರೀ ಬ್ರಹ್ಮಸ್ಥಾನದಲ್ಲಿ ಎರಡು ವರ್ಷಗಳಿಗೊಮ್ಮೆ ನಡೆಯುವ ಢಕ್ಕೆಬಲಿ ಸೇವೆಗಳು ಜನವರಿ 19ರಂದು ಮಂಡಲ ಹಾಕುವ ಢಕ್ಕೆಬಲಿ ಸೇವೆಯೊಂದಿಗೆ ಆರಂಭಗೊಳ್ಳಲಿದೆ.

ಮಾಚ್೯ 11ರಂದು ಮಂಡಲ ವಿಸರ್ಜನೆಯೊಂದಿಗೆ ಢಕ್ಕೆಬಲಿ ಸೇವೆಗಳು ಮುಕ್ತಾಯಗೊಳ್ಳಲಿವೆ.
ಈ ಬಾರಿ ಒಟ್ಟು 36 ಢಕ್ಕೆಬಲಿ ಸೇವೆಗಳು ಇರಲಿದೆ. ಹೆಚ್ಚಿನ ಮಾಹಿತಿಗೆ ಸೇವಾದಾರರು ಬ್ರಹ್ಮಸ್ಥಾನದ ಕಚೇರಿಯನ್ನು ಅಥವಾ ಖಡೇಶ್ವರೀ ವನದುರ್ಗಾ ಟ್ರಸ್ಟ್ನ ಕಾರ್ಯದರ್ಶಿ ವೈ.ಎನ್. ರಾಮಚಂದ್ರ ರಾವ್ ಅವರನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.
ಜನವರಿ ತಿಂಗಳಲ್ಲಿ ಬ್ರಹ್ಮ ಬೈದರ್ಕಳ ಗರೋಡಿಗಳಲ್ಲಿ ಜರಗುವ ನೇಮೋತ್ಸವದ ವೇಳಾಪಟ್ಟಿ

Posted On: 04-01-2023 12:10PM
1/1- ಪಕ್ಕಿಬೆಟ್ಟು ಗರೋಡಿ 4/1- ಬೆರಂದೊಟ್ಟು ಗರೋಡಿ 5/1- ದೊಂಡೆರಂಗಡಿ ಗರೋಡಿ, ಮುಡಾಯೂರು ಅರಿಗೊ ಗರೋಡಿ 6/1- ಮಲ್ಲಾರು ಗರೋಡಿ, ಮರಿಪ್ಪಾದೆ ಬಾವಂತಬೆಟ್ಟು ಗರೋಡಿ, ಹಳೆನೇರಂಕಿ ಗರೋಡಿ 7/1- ಪಾಂದೆ ಗರೋಡಿ, ಪರ್ಪುಂಜ ರಾಮಜಾಲ್ ಗರೋಡಿ 8/1- ಕಂಕನಾಡಿ ಗರೋಡಿ, ಕೊಲಕೆ ಇರ್ವತ್ತೂರು ದೊಂಪದ ಬಲಿ 9/1- ಕಾಪು ಪೊಯ್ಯ ಪೊಡಿಕಲ್ಲ್ ಗರೋಡಿ 10/1- ನಿಟ್ಟೆ ಗರೋಡಿ ದೋಂಪದ ಬಲಿ 11/1- ಪಣಿಯೂರು ಮೇಲ್ ಗರೋಡಿ, ಪಣಿಯೂರು ಕೆಳ ಗರೋಡಿ 14/1- ಬಾಲ್ಕಟ್ಟ ಗರೋಡಿ 15/1- ಸೂಡ ಗರೋಡಿ 24/1 - ಗುಜ್ಜಾಡಿ ಗರೋಡಿ ಕಾಯಿದ ಪೂಜೆ 25/1 - ಬೊರಿವಲಿ ಗರೋಡಿ 27/1 - ಬೋಳೂರು ಮರ್ಣೆ ಗರೋಡಿ 28/1 - ಕೊಲಕೆ ಇರ್ವತ್ತೂರು ಗರೋಡಿ
ಕಾಪು : ಉಡುಪಿ ಜಿಲ್ಲಾ ರಜತ ಮಹೋತ್ಸವ - ಪೂರ್ವಭಾವಿ ಸಭೆ

Posted On: 04-01-2023 10:55AM
ಕಾಪು : ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮವನ್ನು ಕಾಪು ತಾಲೂಕಿನಲ್ಲಿ ಜನವರಿ ತಿಂಗಳಲ್ಲಿ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ಮಂಗಳವಾರ ಕಾಪು ಪುರಸಭೆಯಲ್ಲಿ ಆಯೋಜಿಸಲಾಗಿತ್ತು.
ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಈಗಾಗಲೇ ಉಡುಪಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ರಜತ ಮಹೋತ್ಸವದ ಅಂಗವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಸಂದರ್ಭ ಕಾಪು ತಾಲೂಕಿನಲ್ಲಿ ಜನವರಿ 21 ರಂದು ಕಾರ್ಯಕ್ರಮ ಆಯೋಜಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಕಾಪು ತಹಶೀಲ್ದಾರ್ ಶ್ರೀನಿವಾಸ ಕುಲಕರ್ಣಿ, ಕಾಪು ಪೋಲಿಸ್ ವೃತ್ತ ನಿರೀಕ್ಷಕರಾದ ಪೂವಯ್ಯ, ಪುರಸಭಾ ಮುಖ್ಯಾಧಿಕಾರಿ ವೆಂಕಟೇಶ ನಾವಡ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರೇಗೌಡ, ಸುದಾಮ ಶೆಟ್ಟಿ, ವಿವಿಧ ಸಂಘ ಸಂಸ್ಥೆಗಳ ಮುಖ್ಯಸ್ಥರು, ರಾಜಕೀಯ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.
ಶಾಲೆಗಳು ಕಾರ್ಖಾನೆಯಾಗಬಾರದು : ವಿಶ್ವವಲ್ಲಭ ತೀರ್ಥ ಸ್ವಾಮೀಜಿ

Posted On: 04-01-2023 10:27AM
ಕಾಪು : ಶಿಕ್ಷಣ ವ್ಯವಸ್ಥೆಯಲ್ಲಿ ನೈತಿಕ ಶಿಕ್ಷಣ ಅನಿವಾರ್ಯ. ರಿಯಾಲಿಟಿ ಷೊಗಳನ್ನು ತೋರಿಸುವ ಮೂಲಕ ಮಕ್ಕಳಿಗೆ ಒತ್ತಡ ಹಾಕಿ ಅವರಂತಾಗಬೇಕು ಇವರಂತಾಗ ಬೇಕೆನ್ನುವುದು ತಪ್ಪು. ಮಕ್ಕಳ ನೈಜ ಪ್ರತಿಭೆ ಗುರುತಿಸುವುದು ಶಿಕ್ಷಣ ಸಂಸ್ಥೆಗಳ ಕಾರ್ಯ. ಮಕ್ಕಳು ಒತ್ತಡದಲ್ಲಿಯೆ ಬದುಕುವವರೆಗೆ ತಲುಪಿದೆ ಇಂದಿನ ಶಿಕ್ಷಣ. ಶಾಲೆಗಳು ಕಾರ್ಖಾನೆಯಾಗಬಾರದು. ವಿಶ್ವೇಂದ್ರ ತೀರ್ಥರ ದೂರದೃಷ್ಟಿಯಲ್ಲಿ ಸ್ಥಾಪನೆಯಾದ ಇನ್ನಂಜೆ ಸಂಸ್ಥೆ ಸಮಾಜಕ್ಕೆ ನೀಡಿದ ದೊಡ್ಡ ಕೊಡುಗೆ. ಕರ್ನಾಟಕದಲ್ಲಿ ಮೊತ್ತ ಮೊದಲು ಬಿಸಿ ಊಟ ನೀಡಿದ ಶಾಲೆ ಇನ್ನಂಜೆ ಎಂದು ಸೋದೆ ವಾದಿರಾಜ ಮಠದ ಯತಿವರ್ಯ ಮತ್ತು ಎಸ್ ವಿ ಎಚ್ ಶಿಕ್ಷಣ ಸಂಸ್ಥೆಗಳ ವಿಶ್ವಸ್ತ ಮಂಡಳಿಯ ಅಧ್ಯಕ್ಷರಾದ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದರು.
ಅವರು ಎಸ್ ವಿ ಎಚ್ ಆಂಗ್ಲ ಮಾಧ್ಯಮ ಶಾಲೆ, ಎಸ್ ವಿ ಎಚ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹೈಯರ್ ಪ್ರೈಮರಿ ಶಾಲೆ ಇನ್ನಂಜೆಯ ವಿಶ್ವೋತ್ತಮ ರಂಗಮಂಟಪದಲ್ಲಿ ಜರಗಿದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮುಖ್ಯ ಅತಿಥಿಯಾಗಿ ಕೆನಡಾದ ಸರ್ಜಿಕಲ್ ಸೈನ್ಸ್ ಇನ್ನೊವೆಷನ್ ಸಲಹೆಗಾರರಾದ ಡಾ. ಅಶ್ವತ್ ವಿನಾಯಕ್ ಕುಲಕರ್ಣಿ, ಉಡುಪಿಯ ಐಡಿಯಲ್ ಮೆಡಿಕಲ್ ಸಪ್ಲೈಸ್ ಆಡಳಿತ ನಿರ್ದೇಶಕ ವಿ.ಜಿ. ಶೆಟ್ಟಿ, ಎಸ್ ವಿ ಎಚ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರತ್ನಕುಮಾರ್ ,ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಆಚಾರ್ಯ, ಆಡಳಿತಾಧಿಕಾರಿ ಅನಂತ ಮೂಡಿತ್ತಾಯ, ಶಾಲಾ ಮುಖ್ಯಶಿಕ್ಷಕಿಯರಾದ ಮಮತ ಮತ್ತು ಸುಷ್ಮ ಉಪಸ್ಥಿತರಿದ್ದರು.
ಆಡಳಿತಾಧಿಕಾರಿ ಅನಂತ ಮೂಡಿತ್ತಾಯ ಸ್ವಾಗತಿಸಿದರು. ಶಾಲಾ ಮುಖ್ಯಶಿಕ್ಷಕಿಯರಾದ ಮಮತ ಮತ್ತು ಸುಷ್ಮ ವರದಿ ವಾಚಿಸಿದರು. ಶಿಕ್ಷಕಿ ಲವೀನ ಬಹುಮಾನಿತರ ಪಟ್ಟಿ ವಾಚಿಸಿದರು. ವಿದ್ಯಾರ್ಥಿಗಳಾದ ಶಮಿಕ ಮತ್ತು ಹರ್ಷಿತ್ ಕಾರ್ಯಕ್ರಮ ನಿರೂಪಿಸಿದರು.
ಜನವರಿ 7 : ಮಜೂರಿನಲ್ಲಿ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ; ಅನ್ನಸಂತರ್ಪಣೆ

Posted On: 03-01-2023 11:18PM
ಕಾಪು : ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಮತ್ತು ಮಹಾ ಅನ್ನಸಂತರ್ಪಣೆಯ ಮಜೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಜನವರಿ 7, ಶನಿವಾರ ಮಧ್ಯಾಹ 12:30ಕ್ಕೆ ಜರಗಲಿದ್ದು ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಶ್ರೀ ಅಯ್ಯಪ್ಪ ಸ್ವಾಮಿಯ ಸಿರಿಮುಡಿ ಗಂಧ-ಪ್ರಸಾದವನ್ನು ಸ್ವೀಕರಿಸಿ, ಕೃತಾರ್ಥರಾಗಬೇಕೆಂದು ಪ್ರಕಟನೆಯ ಮೂಲಕ ತಿಳಿಸಿದ್ದಾರೆ.
ಹೆಜಮಾಡಿ : ಬ್ರಹ್ಮಸ್ಥಾನದ ಬಳಿ ಬೆಂಕಿ ಅವಘಡ

Posted On: 03-01-2023 06:27PM
ಹೆಜಮಾಡಿ : ಗ್ರಾಮ ಪಂಚಾಯತ್ ವ್ಯಾಪ್ತಿಯ 5ನೇ ವಾರ್ಡ್ ಬ್ರಹ್ಮಸ್ಥಾನದ ದ್ವಾರದ ಬಳಿ ಸುಮಾರು ೫ ಎಕರೆ ಬಯಲು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗಲಿ ಸ್ಥಳೀಯರು , ಯುಪಿಸಿಎಲ್ ಅಗ್ನಿಶಾಮಕ ದಳದಿಂದ ಸಕಾಲಿಕ ಕಾರ್ಯಾಚರಣೆ ಮೂಲಕ ಬೆಂಕಿ ನಂದಿಸಲಾಯಿತು.
ಪಕ್ಕದಲ್ಲಿ ಯಾವುದೇ ಮನೆ ಇಲ್ಲದ ಕಾರಣ ಯಾವುದೇ ಅವಘಡ ಸಂಭವಿಸಿಲ್ಲ.
ಈ ಸಂದರ್ಭದಲ್ಲಿ ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ ಗಿರೀಶ್, ಗ್ರಾಮ ಪಂಚಾಯತ್ ಸದಸ್ಯರಾದ ಶರಣ್ ಕುಮಾರ್ ಮಟ್ಟು, ಸಾಮಾಜಿಕ ಕಾರ್ಯಕರ್ತರಾದ ನಿತಿನ್ ಕುಮಾರ್ ಹೆಜಮಾಡಿ ಕೋಡಿ, ಅನಿಲ್ ಎಚ್ ಕುಂದರ್, ಕೃಷ್ಣರಾಜ ಭಟ್, ನವೀನ್ ಕುಮಾರ್, ಅಗ್ನಿ ಶಾಮಕ ದಳದ ಉಪ ಅಧಿಕಾರಿ ಶರಣ್ ಕುಮಾರ್ ಮಟ್ಟು, ಸಿಬ್ಬಂದಿಗಳಾದ ಶರಣಪ್ಪ ಮಾದಾರ್, ಲತೇಶ್ ಕರ್ಕೆರ, ಜೋಯಲ್ ಪ್ರಮೋದ್, ಗೌರವ್ ಪಾಂಡೆ ಮತ್ತು ಸ್ಥಳೀಯ ನಾಗರಿಕರು ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ.
ಮಜೂರು : ಶ್ರೀ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಲಶಾಭಿಷೇಕ, ನೇಮೋತ್ಸವ ಸಂಪನ್ನ

Posted On: 03-01-2023 02:06PM
ಕಾಪು : ಮಜೂರು ನಲ್ಲಿ ನೂತನವಾಗಿ ಜೀರ್ಣೋದ್ಧಾರಗೊಂಡಿರುವ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರಗಳ ದೈವಸ್ಥಾನದಲ್ಲಿ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರಗಳ ದೈವಗಳ ಪುನಃ ಪ್ರತಿಷ್ಠೆಯು ಶ್ರೀನಿವಾಸ ಭಟ್ ಮಜೂರು ಅವರ ನೇತೃತ್ವದಲ್ಲಿ ಸಂಪನ್ನಗೊಂಡಿತು.
ಆ ಪ್ರಯುಕ್ತ ಬೆಳಗ್ಗೆ ಪ್ರತಿಷ್ಟಾ ಹೋಮ, ಪ್ರತಿಷ್ಠೆ, ದೈವದರ್ಶನ ಮತ್ತು ಕಲಶಾಭಿಷೇಕ ನಡೆದು ಬಳಿಕ ಪ್ರಸನ್ನ ಪೂಜೆ ಹಾಗೂ ಮಧ್ಯಾಹ್ನ ಅನ್ನಸಂತರ್ಪಣೆ ಸೇರಿದಂತೆ ಬಬ್ಬು ಸ್ವಾಮಿ, ತನ್ನಿಮಾನಿಗ ಹಾಗೂ ಪರಿವಾರ ದೈವಗಳ ನೇಮೋತ್ಸವ ವಿಜೃಂಭಣೆ ಯಿಂದ ನೆರವೇರಿತು.
ಸಾವಿರಾರು ಭಕ್ತರು ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಂಡು ಗಂಧಪ್ರಸಾಧ ಸ್ವೀಕರಿಸಿದರು.
ಒಬಿಸಿ ಕಮಲ ಟ್ರೋಫಿ - 2023 ;ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 03-01-2023 10:40AM
ಕಾಪು : ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ಮಂಡಲ ಇದರ ವತಿಯಿಂದ ಜನವರಿ ತಿಂಗಳ 14 ರಂದು ಶಿರ್ವದ ಮಟ್ಟಾರುವಿನಲ್ಲಿ ನಡೆಯಲಿರುವ ಹೊನಲು ಬೆಳಕಿನ ಮುಕ್ತ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆಯನ್ನು ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಹಿಂದುಳಿದ ಮೋರ್ಚಾ ಜಿಲ್ಲಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಕಾಪು ಮಂಡಲ ಬಿಜೆಪಿ ಹಿಂದುಳಿದ ಮೋರ್ಚಾ ಅಧ್ಯಕ್ಷ ಸಂತೋಷ್ ಕುಮಾರ್ ಮೂಡುಬೆಳ್ಳೆ, ಹಿಂದುಳಿದ ಮೋರ್ಚಾ ಕಾಪು ಮಂಡಲದ ಪದಾಧಿಕಾರಿಗಳು, ಪಕ್ಷದ ನಾಯಕರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಪಡುಬಿದ್ರಿ : ಕುಣಿತ ಭಜನಾ ಸ್ಪರ್ಧೆ - ಕುಣಿದು ಭಜಿಸಿರೋ - 2023 ಸಂಪನ್ನ

Posted On: 03-01-2023 10:33AM
ಪಡುಬಿದ್ರಿ : ಇಲ್ಲಿನ ಕಂಚಿನಡ್ಕದ ಶ್ರೀಸತ್ಯದೇವಿ ಶ್ರೀ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ 28ನೇ ವರ್ಷದ ಮಹಾಪೂಜೆಯ ಅಂಗವಾಗಿ ಆಯೋಜಿಸಲಾದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆ "ಕುಣಿದು ಭಜಿಸಿರೋ - 2023" ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊಂಡಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಪಡುಬಿದ್ರಿ ಶ್ರೀ ಖಡ್ಗೇಶ್ವರಿ ಬ್ರಹ್ಮಸ್ಥಾನದ ನಾಗಪಾತ್ರಿ ಸುರೇಶ್ ಭಟ್ ದೀಪ ಪ್ರಜ್ವಲಿಸಿ ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ.ಆರ್.ಮೆಂಡನ್, ಸುದರ್ಶನ್ ಎಂ ಮೂಡುಬಿದಿರೆ, ಗೀತಾಂಜಲಿ ಸುವರ್ಣ, ಶ್ರೀಕಾಂತ್ ನಾಯಕ್, ರವಿ ಶೆಟ್ಟಿ ಪಾದೆಬೆಟ್ಟು, ಗಾಯತ್ರಿ ಪ್ರಭು, ಸೌಮ್ಯಲತಾ ಶೆಟ್ಟಿ, ಕು.ಯಶೋದ, ಧಾರ್ಮಿಕ ಮುಖಂಡರಾದ ವಿಷ್ಣುಮೂರ್ತಿ ಆಚಾರ್ಯ, ಪ್ರಶಾಂತ್ ಶೆಣೈ, ಬಾಬು ಕೋಟ್ಯಾನ್, ಭಾಸ್ಕರ್ ಪಂಬದ, ಸುಧಾಕರ ಪಾತ್ರಿ, ರಾಜೇಂದ್ರ ಶೆಣೈ, ಶಶಿಧರ್ ಹೆಗ್ಡೆ ಅಡ್ವೆ, ಯುವರಾಜ್ ಕುಲಾಲ್, ಚಂದ್ರಹಾಸ ಭಂಡಾರಿ, ರಾಜೇಶ್ ಕೋಟ್ಯಾನ್, ರಾಜೇಶ್ ಉಚ್ಚಿಲ ಆಗಮಿಸಿ ಶುಭಹಾರೈಸಿದರು.

ಸಮಾರೋಪ : ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಪೂಜ್ಯ ಕೇಮಾರು ಶ್ರೀಗಳಾದ ಶ್ರೀಶ್ರೀಶ್ರೀ ಈಶ ವಿಠಲದಾಸ ಸ್ವಾಮೀಜಿ ಆಶೀರ್ವಚನ ನೀಡಿದರು. ಈ ಸಂದರ್ಭದಲ್ಲಿ ಮಿಥುನ್.ಆರ್.ಹೆಗ್ಡೆ, ಯಶಪಾಲ್.ಎ.ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಶ್ರೀಶ ನಾಯಕ್ ಪೆರ್ಣಂಕಿಲ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ನವೀನಚಂದ್ರ.ಜೆ.ಶೆಟ್ಟಿ, ನವೀನ್ ಶೆಟ್ಟಿ, ಜಯಕರ್ ಐರೋಡಿ, ಗೀತಾ ಅರುಣ್, ಕೃಷ್ಣ ಗುರುಸ್ವಾಮಿ, ಶಿವಪ್ಪ ಕಂಚಿನಡ್ಕ ಮೊದಲಾದವರು ಉಪಸ್ಥಿತರಿದ್ದರು.

ಕುಣಿತ ಭಜನಾ ಸ್ಪರ್ಧೆಯಲ್ಲಿ ಒಟ್ಟು 13 ತಂಡಗಳು ಭಾಗವಹಿಸಿದ್ದು,ಪ್ರಥಮ ಬಹುಮಾನವನ್ನು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಿರಿಬೈಲ್ ಕಡ್ತಲ, ದ್ವಿತೀಯ ಬಹುಮಾನವನ್ನು ಬಾಲ ವಿಕಾಸ ಭಜನಾ ಮಂಡಳಿ ಹೊಸಬೆಟ್ಟು, ತೃತೀಯ ಬಹುಮಾನ - ಆಂಜನೇಯ ಭಜನಾ ಮಂಡಳಿ ಸಾಣೂರು ಕಾರ್ಕಳ ಹಾಗೂ ಸಮಾಧಾನಕರ ಬಹುಮಾನವನ್ನು ಶ್ರೀ ದುರ್ಗಾ ಭಜನಾ ಮಂಡಳಿ ಮುದರಂಗಡಿ ಮತ್ತು ಶ್ರೀ ಗುರು ರಾಘವೇಂದ್ರ ಭಜನಾ ಮಂಡಳಿ ಗುರಿಪಳ್ಳ ಉಜಿರೆ ಪಡೆದುಕೊಂಡರು.
ಗೆಳೆಯರ ಬಳಗ ಬಂಗ್ಲೆ ಮೈದಾನ ಕಾಪು : 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Posted On: 03-01-2023 10:24AM
ಕಾಪು : ಗೆಳೆಯರ ಬಳಗ ಬಂಗ್ಲೆ ಮೈದಾನ ಕಾಪು ಇದರ ವತಿಯಿಂದ 31ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮವು ಕಾಪು ಬಂಗ್ಲೆ ಮೈದಾನದಲ್ಲಿ ವೇದಮೂರ್ತಿ ಮಾನಿಯುರು ಮುಖ್ಯಪ್ರಾಣ ಆಚಾರ್ಯರ ಉಪಸ್ಥಿತಿಯಲ್ಲಿ ನಡೆದ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ವಿಜೃಂಭಣೆಯಿಂದ ಜರಗಿತು.
ಈ ಸಂದರ್ಭದಲ್ಲಿ 2022ನೇ ವರ್ಷದಲ್ಲಿ ಜಾನಪದ ಕಲಾ ವಿಭಾಗದಲ್ಲಿ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕಾಪು ತಾಲೂಕಿನ ಮೂಳೂರು ಗ್ರಾಮದ ದೈವ ನರ್ತಕ ಗುಡ್ಡ ಪಾಣಾರರನ್ನು ಸಮ್ಮಾನಿಸಲಾಯಿತು.
ವೇದಿಕೆಯಲ್ಲಿ ಬಳಗದ ಅಧ್ಯಕ್ಷರಾದ ಜಯ ವೈ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮುಚ್ಚೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ರಘುರಾಮ್ ನಾಯಕ್, ಕಾಪು ಪುರಸಭಾ ಬೀಡು ಬದಿ ವಾರ್ಡಿನ ಸದಸ್ಯರಾದ ಅನಿಲ್ ಕುಮಾರ್ ಮತ್ತು ಪೂಜಾ, ಅರ್ಚಕರಾದ ಮಾಣಿಯೂರು ಸೂರ್ಯಕಾಂತ ಆಚಾರ್ಯ ಉಪಸ್ಥಿತರಿದ್ದರು.
ಬಳಗದ ಸಂಚಾಲಕ ರವೀಂದ್ರ ಎಂ ಸ್ವಾಗತಿಸಿ ವಂದಿಸಿದರು. ತದನಂತರ ಶ್ರೀ ಲಕ್ಷಿಜನಾರ್ದನ ಮಹಿಳಾ ಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು ಹಾಗೂ ಅನ್ನಸಂತರ್ಪಣೆ ನಡೆಯಿತು.