Updated News From Kaup
ಜನವರಿ 22 : ಯಂಗ್ ಫ್ರೆಂಡ್ಸ್ ಪಡುಬಿದ್ರಿ - ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಕೋಸ್ಟಲ್ ಸ್ಮ್ಯಾಷರ್ಸ್ ಟ್ರೋಫಿ 2023
Posted On: 20-01-2023 10:57PM
ಪಡುಬಿದ್ರಿ : ಇಲ್ಲಿನ ಯಂಗ್ ಫ್ರೆಂಡ್ಸ್ ಪಡುಬಿದ್ರಿ ವತಿಯಿಂದ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಕೋಸ್ಟಲ್ ಸ್ಮ್ಯಾಷರ್ಸ್ ಟ್ರೋಫಿ 2023 ಇದರ ಉದ್ಘಾಟನಾ ಸಮಾರಂಭ ಜನವರಿ 22, ಆದಿತ್ಯವಾರ ಬೆಳಿಗ್ಗೆ 9:30 ಕ್ಕೆ ಹಳೆಯಂಗಡಿಯ ಟೋರ್ಪೆಡೋಸ್ ಸ್ಫೋಟ್ಸ್೯ ಕ್ಲಬ್ನ ಒಳಾಂಗಣ ಶಟಲ್ ಕೋಟ್೯ ನಲ್ಲಿ ಜರಗಲಿದೆ.
ಶಿರ್ವ : ಅಪಘಾತ ವಲಯ ಸಮೀಪದ ಗಿಡಗಂಟಿಗಳ ಸ್ವಚ್ಚತೆ
Posted On: 20-01-2023 10:09PM
ಶಿರ್ವ : ಶಿರ್ವದ ಅಪಘಾತ ವಲಯವೆಂದು ಪರಿಗಣಿಸಲ್ಪಟ್ಟ ರಾಬಿನ್ ಬಸ್ ಸ್ಟ್ಯಾಂಡ್ ರಸ್ತೆ ಬದಿಯ ತಿರುಗು ರಸ್ತೆ ಬಳಿ ಇರುವ ಗಿಡಗಂಟಿಗಳನ್ನು ಶಿರ್ವ ಸಿ. ಎ. ಬ್ಯಾಂಕ್ ಕಾರ್ಯದರ್ಶಿ ರವೀಂದ್ರ ಆಚಾರ್ಯ, ಬಂಟಕಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆ ಅಧ್ಯಕ್ಷ ಮಾಧವ ಕಾಮತ್, ಲl ರವೀಂದ್ರ ಆಚಾರ್ಯ ಬಂಟಕಲ್ ಇವರ ಸಹಕಾರದಿಂದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ತೆರವುಗೊಳಿಸಲಾಯಿತು.
ಕಾಪು : ಮೂಳೂರು ಯುವ ಗೆಳೆಯರ ಬಳಗದ 33ನೇ ವಾರ್ಷಿಕೋತ್ಸವ ಸಂಪನ್ನ
Posted On: 19-01-2023 09:07PM
ಕಾಪು : ಮುಳೂರು ಯುವ ಗೆಳೆಯರ ಬಳಗದ 33ನೇ ವಾರ್ಷಿಕೋತ್ಸವ ಬುಧವಾರ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಳೆದ 33 ವರ್ಷಗಳಿಂದ ನಿರಂತರ ಸಮಾಜ ಸೇವೆ ಮಾಡುತ್ತಿರುವ ಯುವ ಗೆಳೆಯರ ಬಳಗದ ಸದಸ್ಯರು ಅಭಿನಂದನೆಗೆ ಅರ್ಹರು ಎಂದರು.
ಕಾಂಗ್ರೆಸ್ ಪ್ರತಿಯೊಬ್ಬರ ಏಳಿಗೆ ಬಯಸುವ ಪಕ್ಷ : ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ
Posted On: 19-01-2023 08:42PM
ಕಾಪು : ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಭಾಗವಹಿಸಿ ಉಡುಪಿ ಜಿಲ್ಲಾ ಅಲ್ಪ ಸಂಖ್ಯಾತರ ಪರವಾಗಿ ಚರ್ಚೆ ನಡೆಸಿದರು.
ಶಿರ್ವ : ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ; ಸರಕಾರ ಪ್ರೋತ್ಸಾಹ ಧನ ಹೆಚ್ಚಿಸಿ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು - ಬೋಳ ಸದಾಶಿವ ಶೆಟ್ಟಿ
Posted On: 19-01-2023 05:27PM
ಶಿರ್ವ : ಸ್ಥಳೀಯ ಹೋಟೆಲ್ ಶಾಮ್ ಸ್ಕ್ವೇರ್ ಸಭಾಂಗಣದಲ್ಲಿ ಜರುಗಿದ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡುತ್ತಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು ಹೈನುಗಾರರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಸರಕಾರವು ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಮೂಲಕ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು.
ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ
Posted On: 18-01-2023 06:34PM
ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರರನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಫಾರಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಕೇಂದ್ರ ಸರಕಾರದ ಸಂಸದರಾದ ಇಮ್ರಾನ್ ಪ್ರತಾಪ್ ಗರ್ಹೀ ಅವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬಾರ್ ಆಯ್ಕೆ ಮಾಡಿರುತ್ತಾರೆ.
ಕನ್ನಡ ಸಾಹಿತ್ಯ ಪರಿಷತ್ತು : ಉಡುಪಿ ಜಿಲ್ಲಾ ಸಮಿತಿ, ತಾಲೂಕು ಅಧ್ಯಕ್ಷರ ನಿಯೋಗ - ಸಚಿವ ಸುನಿಲ್ ಕುಮಾರ್ ಭೇಟಿ
Posted On: 18-01-2023 06:18PM
ಉಡುಪಿ : ಜಿಲ್ಲಾ ಕನ್ನಡ ಭವನ ನಿರ್ಮಾಣದ ಬಗ್ಗೆ ಸರಕಾರದ ಮೂಲಕ ಅನುದಾನ ನೀಡುವ ಬಗ್ಗೆ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಸುನಿಲ್ ಕುಮಾರ್ ರನ್ನು ಅವರ ನಿವಾಸದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಅಧ್ಯಕ್ಷರುಗಳ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೂಲ್ಯರ ಯಾನೆ ಕುಲಾಲರ ಸಂಘ ಕುತ್ಯಾರು : ವಾರ್ಷಿಕೋತ್ಸವ, ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ
Posted On: 17-01-2023 01:53PM
ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲ ಸಂಘ (ರಿ) ಕುತ್ಯಾರು ಇವರ ಆಶ್ರಯದಲ್ಲಿ ಸಂಘದ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸತೀಶ್ ಕುತ್ಯಾರು ಅಧ್ಯಕ್ಷತೆಯಲ್ಲಿ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಜನವರಿ 15 ರಂದು ನಡೆಯಿತು.
ಶಬ್ಬೀರ್ ಎಸ್ ಅಭಿಮಾನಿ ಬಳಗದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರರಿಗೆ ಅಭಿನಂದನೆ
Posted On: 17-01-2023 12:41PM
ಕಾಪು : ಶಬ್ಬೀರ್ ಎಸ್ ಅಭಿಮಾನಿ ಬಳಗ ಮಂಗಳೂರು ವತಿಯಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರ ರವರನ್ನು ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಅಡ್ವೆ-ನಂದಿಕೂರು ಕಂಬಳ - ಕಂಬಳ ನೋಡಬೇಕೆನ್ನುವ ಹಂಬಲವಿತ್ತು, ನೋಡಿ ಧನ್ಯನಾದೆ : ಪ್ರಮೋದ್ ಮುತಾಲಿಕ್
Posted On: 15-01-2023 11:44PM
ಪಡುಬಿದ್ರಿ : ಕಂಬಳದ ಬಗ್ಗೆ ಆಸಕ್ತಿ ಇತ್ತು. ನೋಡಬೇಕೆನ್ನುವ ಹಂಬಲವೂ ಇತ್ತು. ಅದು ಇಂದು ಅಡ್ವೆ- ನಂದಿಕೂರು ಕಂಬಳದಲ್ಲಿ ಈಡೇರಿದೆ. ಮೊದಲನೆಯ ಬಾರಿ ಕಂಬಳ ನೋಡಿ ಧನ್ಯನಾದೆ. ಜಾತಿ,ಮತ, ಶ್ರೀಮಂತ, ಬಡವನೆಂಬ ಬೇಧವಿಲ್ಲದೆ, ಎಲ್ಲರ ಕ್ರೀಡೆ ಎನ್ನಬಹುದು. ರೈತವರ್ಗಕ್ಕೆ ಪ್ರೋತ್ಸಾಹ, ಆನಂದ ಕೊಡುವ ಕ್ರೀಡೆ. ಗ್ರಾಮೀಣ ಭಾಗದ ಕಂಬಳವು ದೇಶದಲ್ಲಿ ಆಕರ್ಷಕವಾದಂತಹ ಕ್ರೀಡೆ. ತುಳು ಭಾಷೆ ಗ್ರಾಮೀಣ ಭಾಷೆ, ಶ್ರೇಷ್ಠ ಭಾಷೆ, ಪುರಾತನ ಭಾಷೆ ಸರಕಾರ ಮಾನ್ಯತೆ ನೀಡಬೇಕೆಂದು ಸರಕಾರಕ್ಕೆ ಆಗ್ರಹಿಸುತ್ತೇನೆ. ಈ ಭಾಗದಲ್ಲಿ ಧಾರ್ಮಿಕತೆಗೆ ಒತ್ತು ನೀಡುತ್ತಾ ಭಜನಾ ಸಂಸ್ಕೃತಿಗೂ ಕೂಡ ಮಹತ್ವ ನೀಡಲಾಗುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದರು.
