Updated News From Kaup

ಬಂಟಕಲ್ಲು : ಗುರುಮೆಚ್ಚುವ ಶಿಷ್ಯರಾಗಿ ಬೆಳೆಯಬೇಕು - ಶಂಕರ್ ನಾಯಕ್

Posted On: 08-01-2023 06:14PM

ಬಂಟಕಲ್ಲು : ಶ್ರೀ ಅಯ್ಯಪ್ಪ ಭಕ್ತ ವೃಂದ ಇದರ ಆಶ್ರಯದಲ್ಲಿ ಶ್ರೀ ಸ್ವಾಮಿ ಚಂಡೆ ಬಳಗವನ್ನು ಬಂಟಕಲ್ಲು ಶ್ರೀ ಸಾರ್ವಜನಿಕ ಗಣೇಶೋತ್ಸವ ವೇದಿಕೆಯ ಗೌರವಾಧ್ಯಕ್ಷ ಶಂಕರ್ ನಾಯಕ್ ಉದ್ಘಾಟಿಸಿದರು.

ಜನವರಿ 9 : CITU -ಮಂಗಳೂರಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ

Posted On: 08-01-2023 04:03PM

ಮಂಗಳೂರು : ಅವಿಭಜಿತ ದ.ಕ. ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಕಣ್ಣೋಟವನ್ನು ಮುಂದಿಟ್ಟುಕೊಂಡು ಕೃಷಿರಂಗಕ್ಕೆ ಪ್ರೋತ್ಸಾಹ, ಪರಿಸರಸ್ನೇಹಿ ಕೈಗಾರಿಕೆಗಳ ಸ್ಥಾಪನೆ,ಸ್ಥಳೀಯ ಯುವಜನರಿಗೆ ಉದ್ಯೋಗ, ಭವಿಷ್ಯದ ಯೋಜನೆಗಾಗಿ ಜನವರಿ 9, ಸೋಮವಾರ ಬೆಳಿಗ್ಗೆ 10ಕ್ಕೆ ಮಂಗಳೂರು ಪುರಭವನದಲ್ಲಿ ಕರಾವಳಿ ಕರ್ನಾಟಕ ; ಕೃಷಿ ಕೈಗಾರಿಕೆ ಉದ್ಯೋಗ ಜನಪರ ಪರ್ಯಾಯ ನೀತಿಗಳು ಎಂಬ ವಿಷಯದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.

ಉಡುಪಿ : ತುಳುಕೂಟ ಉಡುಪಿ - ತುಳು ಭಾವಗೀತೆ ಗಾಯನ

Posted On: 08-01-2023 12:11PM

ಉಡುಪಿ : ತುಳುಕೂಟ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಸಹಯೋಗದಲ್ಲಿ ದಿ.ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಗಾಯನ ಭಾನುವಾರ ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎಸ್ ಉದ್ಘಾಟಿಸಿದರು.

ಜನವರಿ 8 : ತುಳುಕೂಟ ಉಡುಪಿ ವತಿಯಿಂದ ತುಳು ಭಾವಗೀತೆ ಗಾಯನ

Posted On: 07-01-2023 04:14PM

ಉಡುಪಿ : ತುಳುಕೂಟ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಸಹಯೋಗದಲ್ಲಿ ದಿ.ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಗಾಯನ ಜನವರಿ 8, ಭಾನುವಾರ ಬೆಳಗ್ಗೆ 9 ಗಂಟೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಲಿದೆ.

ಜನವರಿ 8 : ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ - ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಿಬಿಸಿ ಟ್ರೋಫಿ 2023

Posted On: 07-01-2023 03:52PM

ಪಡುಬಿದ್ರಿ : ಇಲ್ಲಿನ ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ಅರ್ಪಿಸುವ ದಿವಂಗತ ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಿಬಿಸಿ ಟ್ರೋಫಿ 2023 ಇದರ ಉದ್ಘಾಟನೆ ಜನವರಿ 8, ಆದಿತ್ಯವಾರ ಬೆಳಿಗ್ಗೆ 8:30 ಕ್ಕೆ ಹಳೆಯಂಗಡಿಯ ಟೋರ್ಪೆಡೋಸ್ ಸ್ಫೋಟ್೯್ಸ ಕ್ಲಬ್ ನ ಒಳಾಂಗಣ ಶಟಲ್ ಕೋಟ್೯ ಇಲ್ಲಿ ಜರಗಲಿದೆ.

ಪಡುಬಿದ್ರಿ : ಕಾಂತಾರ ಸಿನೆಮಾದಂತೆ ಕಾರ್ಣಿಕ ತೋರಿದ ದೈವ

Posted On: 07-01-2023 12:06PM

ಪಡುಬಿದ್ರಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಡುಬಿದ್ರಿಯ ಪಡುಹಿತ್ಲುವಿನಲ್ಲಿ ಸುಮಾರು 500 ವರ್ಷಗಳ ಇತಿಹಾಸವುಳ್ಳ ಊರ ದೈವವಾಗಿ ಕಾಲಕಾಲಕ್ಕೆ ತಂಬಿಲ, ನೇಮಾದಿ ಕಾರ್ಯಗಳು ನಡೆಯುತ್ತಿದ್ದ ಜಾರಂದಾಯ ಬಂಟ ದೈವಸ್ಥಾನದಲ್ಲಿ ಇದೀಗ ಅಧಿಕಾರದ ವ್ಯಾಮೋಹದಿಂದ ಒಂದು ವಾರ್ಷಿಕ ನೇಮೋತ್ಸವ ಆಗುವಲ್ಲಿ ಎರಡು ನೇಮವೇ ಎಂಬಂತಾಗಿದೆ.

ಕಾರ್ಕಳ : ನಿಧಿ ಯು ಆಚಾರ್‌ - ಅಂತರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

Posted On: 06-01-2023 11:28PM

ಕಾರ್ಕಳ : ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪದಲ್ಲಿ ಡಿಸೆಂಬರ್ 26ರಿಂದ 28ರವರೆಗೆ ನಡೆದ ಇಂಡಿಯಾ ಸ್ಕೂಲ್‌ ಗೇಮ್ಸ್‌ ಸ್ಪೋರ್ಟ್ಸ್‌ ಫೌಂಡೇಶನ್‌ ನ (S. G. S. D. F India) ವತಿಯಿಂದ ನಡೆಸಲಾದ ಮೂರನೇ ಅಂತರಾಷ್ಟ್ರೀಯ 19 ವರ್ಷದೊಳಗಿನ ಯೋಗ ಚಾಂಪಿಯನ್‌ ಶಿಪ್ ನಲ್ಲಿ ಕಾರ್ಕಳ ಕ್ರಿಯೇಟಿವ್‌ ಕಾಲೇಜಿನ ಪದವಿ ಪೂರ್ವ ವಿದ್ಯಾರ್ಥಿನಿ ನಿಧಿ ಯು ಆಚಾರ್‌ ಭಾರತವನ್ನು ಪ್ರತಿನಿಧಿಸಿ ಬಂಗಾರದ ಪದಕವನ್ನು ಗಳಿಸಿರುತ್ತಾರೆ.

ಶಂಕರಪುರ : ಜೆಸಿಐ ಜಾಸ್ಮಿನ್ ಬೆಳ್ಳಿ ಹಬ್ಬದ ಸಂಭ್ರಮ ; ಶಾಶ್ವತ ಕೊಡುಗೆಗಳ ಉದ್ಘಾಟನೆ ; ಸಾಲ್ಮರ ಫ್ರೆಂಡ್ಸ್ ವಾರ್ಷಿಕೋತ್ಸವ

Posted On: 06-01-2023 11:42AM

ಶಂಕರಪುರ : ಕಾಪು ತಾಲೂಕಿನ ಜೆಸಿಐ ಶಂಕರಪುರ ಜಾಸ್ಮಿನ್ ಘಟಕದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ, ಶಾಶ್ವತ ಕೊಡುಗೆಗಳ ಉದ್ಘಾಟನೆ, ಸಾಲ್ಮರ ಫ್ರೆಂಡ್ಸ್ ಶಂಕರಪುರ ಇದರ ವಾರ್ಷಿಕೋತ್ಸವ ಸಮಾರಂಭವನ್ನು ವಲಯ 15ರ ಪೂರ್ವ ಮಲಯಾಧ್ಯಕ್ಷರು ಮತ್ತು ರಾಷ್ಟ್ರೀಯ ತರಬೇತುದಾರರಾದ ಜೆಸಿ ರಾಜೇಂದ್ರ ಭಟ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು 24 ವರುಷದಿಂದ ಈ ಘಟಕ ಉತ್ತಮ ಸಮಾಜ ಸೇವೆ ಮತ್ತು ಯುವಕರ ವ್ಯಕ್ತಿತ್ವ ವಿಕಸನವನ್ನು ಮಾಡುತ್ತಾ ಬಂದಿರುತ್ತದೆ ಎಂದು ಶ್ಲಾಘಿಸಿದರು.

ಕಾಪು : ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹುಟ್ಟುಹಬ್ಬ ಆಚರಣೆ ; ಸಮ್ಮಾನ

Posted On: 06-01-2023 11:04AM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪು ರಾಜೀವ ಭವನದಲ್ಲಿ ಗುರುವಾರ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆಯವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು.

ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿಗೆ ಮುಖ್ಯಮಂತ್ರಿಗಳಿಂದ ಹಸಿರು ನಿಶಾನೆ ; ಮುಂದಿನ ಬಜೆಟ್ ನಲ್ಲಿ ಘೋಷಣೆ

Posted On: 05-01-2023 08:17PM

ಕಾಪು : ಈಡಿಗ, ಬಿಲ್ಲವ, ನಾಮದಾರಿಗಳು ಸೇರಿದಂತೆ 26 ಉಪಪಂಗಡಗಳ ಬಹಳ ದಿನಗಳ ಬೇಡಿಕೆಯಾದ ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ ಮಂಡಳಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದರು.