Updated News From Kaup
ಮೇ. 16 : ಕರಾವಳಿ ಸ್ಟಾರ್ಸ್ ನಡಿಪಟ್ನ, ಪಡುಬಿದ್ರಿ ಇದರ 15ನೇ ವರ್ಷದ ವಾರ್ಷಿಕೋತ್ಸವ
Posted On: 15-05-2025 04:40PM
ಪಡುಬಿದ್ರಿ : ಕರಾವಳಿ ಸ್ಟಾರ್ಸ್ ನಡಿಪಟ್ನ, ಪಡುಬಿದ್ರಿ ಇದರ 15ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಸನ್ಮಾನ ಕಾರ್ಯಕ್ರಮ, ಕರಾವಳಿ ಸ್ಟಾರ್ಸ್ ನಡಿಪಟ್ಟ ಇವರಿಂದ ನೃತ್ಯ ವೈವಿಧ್ಯ, ಅರುಣ್ ಕಾಪು ಇವರಿಂದ ಸಂಗೀತ ಸಂಜೆ, ವಿಜಯಕುಮಾರ್ ಕೊಡಿಯಾಲ್ ಬೈಲ್ ನಿರ್ದೇಶನದಲ್ಲಿ ತುಳು ಚಾರಿತ್ರಿಕ ನಾಟಕ ಛತ್ರಪತಿ ಶಿವಾಜಿ ಮೇ.16, ಶುಕ್ರವಾರ ಸಂಜೆ 5ಗಂಟೆಯಿಂದ ಸಾಗರ್ ವಿದ್ಯಾ ಮಂದಿರ ಶಾಲಾ ವಠಾರದಲ್ಲಿ ಜರಗಲಿದೆ ಎಂದು ಕರಾವಳಿ ಸ್ಟಾರ್ಸ್ ನಡಿಪಟ್ನ, ಪಡುಬಿದ್ರಿ ಇದರ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಬಯೋಟೋರಿಯಂ ಕಂಪನಿ : ಆರೋಗ್ಯ ಮಾಹಿತಿ ಶಿಬಿರ ; ಸಾಧಕರ ಸನ್ಮಾನ
Posted On: 14-05-2025 05:45PM
ಶಿರ್ವ : ಈ ಬಯೋಟೋರಿಯಂ ಕಂಪನಿಯ ಆರೋಗ್ಯ ಮಾಹಿತಿ ಶಿಬಿರ ಹಾಗೂ ಸಾಧಕರ ಸನ್ಮಾನ ಕಾರ್ಯಕ್ರಮ ಶಾಮ್ಸ್ ಸ್ವೇರ್ ಜಾಸ್ಮಿನ್ ಮಿನಿ ಹಾಲ್ ನಲ್ಲಿ ನಡೆಯಿತು.
ಉಡುಪಿ : ಲೈಟ್ ಹೌಸ್ ಚಲನಚಿತ್ರ ನೇತ್ರದಾನ ವಾಗ್ದಾನ ಕಾಯ೯ಕ್ರಮ
Posted On: 14-05-2025 05:34PM
ಉಡುಪಿ : ಲೈಟ್ ಹೌಸ್ ಚಲನಚಿತ್ರ ತಂಡ ಮತ್ತು ಪ್ರಸಾದ್ ನೇತ್ರಾಲಯ ಉಡುಪಿ ಇದರ ವತಿಯಿಂದ ನೇತ್ರದಾನ ಅರಿವು ಮೂಡಿಸುವ ಉದ್ದೇಶದಿಂದ ನೇತ್ರದಾನ ವಾಗ್ದಾನ ಕಾರ್ಯಕ್ರಮ ಪ್ರಸಾದ್ ನೇತ್ರಾಲಯದ ಸಭಾಂಗಣದಲ್ಲಿ ನಡೆಯಿತು.
ನಗರ, ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂಧಿತ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚೆ
Posted On: 14-05-2025 05:14PM
ಕಾಪು : ನಗರ ಹಾಗೂ ಗ್ರಾಮಾಂತರ ಯೋಜನಾ ಪ್ರಾಧಿಕಾರಕ್ಕೆ ಸಂಬಂದಿತ ವಿವಿಧ ಸಮಸ್ಯೆಗಳ ಬಗ್ಗೆ ಬುಧವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರೊಂದಿಗೆ ಉಡುಪಿ ಜಿಲ್ಲಾಧಿಕಾರಿಗಳಾದ ವಿದ್ಯಾಕುಮಾರಿ ಅವರನ್ನು ಭೇಟಿಯಾಗಿ ಚರ್ಚಿಸಿದರು.
ಕುತ್ಯಾರು ಗ್ರಾಮಾಂತರ ಪ್ರದೇಶಕ್ಕೆ ಬಸ್ಸು ಸೌಲಭ್ಯ ಒದಗಿಸಿ : ಸಾಮಾಜಿಕ ಕಾರ್ಯಕರ್ತ ಜಯರಾಮ ಆಚಾರ್ಯ
Posted On: 14-05-2025 04:57PM
ಕಾಪು : ತಾಲೂಕಿನ ಕುತ್ಯಾರು ಗ್ರಾಮಾಂತರ ಪ್ರದೇಶಕ್ಕೆ ಸರಕಾರಿ ಬಸ್ಸಿನ ಸೌಲಭ್ಯ ಅಥವಾ ಖಾಸಗಿ ಬಸ್ಸಿನ ಸೌಲಭ್ಯವನ್ನು ಮುಂದುವರಿಕೆ ಮಾಡುವಂತೆ ಈಗಾಗಲೇ ಮನವಿ ನೀಡಿದ್ದು ಪುನರ್ ಪರಿಶೀಲಿಸಿ ತಕ್ಷಣ ಕ್ರಮಕೈಗೊಳ್ಳುವಂತೆ ಸಾಮಾಜಿಕ ಕಾರ್ಯಕರ್ತರಾದ ಜಯರಾಮ ಆಚಾರ್ಯ ಕಾಪು ಇವರು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ರವರಿಗೆ ಮನವಿ ಮಾಡಿದರು.
ದೇಶದ್ರೋಹಿ ಬರಹ ಆರೋಪಿತ ವಿದ್ಯಾರ್ಥಿನಿ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ : ರಚನ್ ಸಾಲಿಯಾನ್
Posted On: 12-05-2025 07:27PM
ಕಾರ್ಕಳ : ನಿಟ್ಟೆ ಶಿಕ್ಷಣ ಸಂಸ್ಥೆಯೊಂದರ ಹಾಸ್ಟೆಲ್ ಕ್ಯಾಂಪಸ್ ನಲ್ಲಿ ಕಂಡು ಬಂದ ದೇಶ ದ್ರೋಹಿ ಬರವಣಿಗೆ ಕೃತ್ಯವನ್ನು ಖಂಡಿಸಿ ಕ್ರಮ ಕೈಗೊಳ್ಳುವಂತೆ ಸರ್ವ ಕಾಲೇಜು ವಿದ್ಯಾರ್ಥಿ ಶಕ್ತಿ (ರಿ.) ಸ್ಥಾಪಕಾಧ್ಯಕ್ಷ ಶಿವಕುಮಾರ್ ಕರ್ಜೆ ಮಾರ್ಗದರ್ಶನದಲ್ಲಿ ರಾಜ್ಯಾಧ್ಯಕ್ಷ ರಚನ್ ಸಾಲ್ಯಾನ್ ಹೆಜಮಾಡಿ ನೇತೃತ್ವದಲ್ಲಿ ಕಾರ್ಕಳ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ದೂರು ನೀಡಲಾಯಿತು.
ಪಡುಬಿದ್ರಿ : ಗ್ರಾ.ಪಂ. ಉಪಚುನಾವಣೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ
Posted On: 12-05-2025 05:28PM
ಪಡುಬಿದ್ರಿ : ಪಾದೆಬೆಟ್ಟು-2 ಅನುಸೂಚಿತ ಜಾತಿ ಮಹಿಳೆಗೆ ಮೀಸಲಿರಿಸಿದ ಉಪಚುನಾವಣಾ ಕ್ಷೇತ್ರಕ್ಕೆ ಮೇ.25ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿ ಶ್ರೀಮತಿ ಪಿ.ಉಷಾರವರು ಪಕ್ಷದ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು.
ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾಪು ಶ್ರೀ ಹೊಸ ಮಾರಿಗುಡಿ ಭೇಟಿ
Posted On: 09-05-2025 03:05PM
ಕಾಪು: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಗುರುವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು.
ಬಂಟಕಲ್ಲು : ನೂರಹನ್ನೊಂದನೇ ಕಸಾಪ ಸಂಸ್ಥಾಪನಾ ದಿನಾಚರಣೆ ಸಂಪನ್ನ
Posted On: 09-05-2025 03:00PM
ಶಿರ್ವ: ಕನ್ನಡ ಸಾಹಿತ್ಯ ಪರಿಷತ್ತು ಕೇವಲ ಸಾಹಿತಿಗಳಿಗೆ ಮಾತ್ರ ಸೇರಿದ್ದಲ್ಲ. ಪ್ರತೀಯೊಬ್ಬ ಕನ್ನಡಿಗನಿಗೂ ಸೇರಿದ ಸ್ವಾಯತ್ತ ಸಂಸ್ಥೆಯಾಗಿದೆ. ೧೧೧ನೇ ವರ್ಷ ಪೂರೈಸುತ್ತಿರುವ ಕನ್ನಡ ಸಾಹಿತ್ಯ ಪರಿಷತ್ತು ಜನ ಸಾಮಾನ್ಯರ ಪರಿಷತ್ತು ಆಗಿ ಕಾರ್ಯನಿರ್ವಹಿಸುತ್ತಿದ್ದು ಇದೇ ಅದರ ದೀರ್ಘ ಅಸ್ತಿತ್ವಕ್ಕೆ ಕಾರಣವಾಗಿದೆ. ಕನ್ನಡ ಸಾಹಿತ್ಯ ಪರಿಷತ್ತು ನಾಡು,ನುಡಿ, ಸಂಸ್ಕೃತಿ, ಸಾಹಿತ್ಯ, ಜಾನಪದ, ಕನ್ನಡ,ಕನ್ನಡಿಗ, ಕರ್ನಾಟಕ ಇದೇ ಧ್ಯೇಯೋದ್ಧೇಶಗಳನ್ನು ಅನುಷ್ಠಾನ ಮಾಡಲು ಬದ್ದವಾಗಿದೆ. ಪ್ರೀತಿಯ ಬಾಂಧವ್ಯ ಬೆಳೆಸುವುದೇ ಇದರ ಆಶಯವಾಗಿದೆ ಎಂದು ಕಾರ್ಕಳ ತಾಲೂಕು ಕಸಾಪ ಅಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ ನುಡಿದರು. ಅವರು ಸೋಮವಾರ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಕಸಾಪ ಘಟಕದ ಸಹಭಾಗಿತ್ವದಲ್ಲಿ ಬಂಟಕಲ್ಲು ಬಸ್ಸು ನಿಲ್ದಾಣದ ಸಾರ್ವಜನಿಕ ತರೆದ ವಾಚನಾಲಯದಲ್ಲಿ ಜರುಗಿದ ೧೧೧ನೇ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ,ಜನಸಾಮಾನ್ಯರೆಲ್ಲ ಬಂದು ನಿಲ್ಲುವ ಬಸ್ಸು ತಂಗುದಾಣದಲ್ಲಿ ಶತಮಾನೋತ್ತರ ಇತಿಹಾಸ ಹೊಂದಿರುವ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸುತ್ತಿರುವುದು ನಾಡಿನ ಸಮಸ್ತರ ಭಾವನೆಗಳಿಗೆ ಸ್ಪಂದಿಸುವುದೇ ಆಗಿದೆ. ಈ ಸಂಸ್ಥೆಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಮೈಸೂರಿನ ಮಹಾರಾಜರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರು, ಅವರಿಗೆ ಬೆಂಬಲವಾಗಿ ನಿಂತ ಮಹಾನ್ ದಿವಾನರಾಗಿದ್ದ ಸರ್.ಎಂ.ವಿಶ್ವಶ್ವರಯ್ಯ ಮತ್ತು ಮಿರ್ಜಾ ಇಸ್ಮಾಯಿಲ್ರವರು. ಇದು ಸಾಹಿತಿಗಳ ಪರಿಷತ್ತು ಅಲ್ಲ. ಜನಸಾಮಾನ್ಯರ ಪರಿಷತ್ತು. ನಾವು ಆಡುವ ಭಾಷೆ ನೆಲದಭಾಷೆ, ಹೃದಯದ ಭಾಷೆ ಆಗಿದೆ, ಆಗಬೇಕು. ಇದು ಭಾವದ ಪ್ರತೀಕ ಎಂದರು.
ಕ್ರಿಯೇಟಿವ್ ಸಂಸ್ಥೆಯ ಪ್ರಥಮ ಪಿಯು ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೆ ಅವಕಾಶ
Posted On: 05-05-2025 12:14PM
ಕಾರ್ಕಳ : 2025 -26ನೇ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 90%ಕ್ಕಿಂತ ಅಧಿಕ ಅಂಕ ಗಳಿಸಿದ ಕಾರ್ಕಳದ ಸ್ಥಳೀಯ ವಿದ್ಯಾರ್ಥಿಗಳು ವಾಣಿಜ್ಯ ವಿಭಾಗವನ್ನು ಸೇರಬಯಸುವುದಾದರೆ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯು ವಿಶೇಷ ರಿಯಾಯಿತಿಯನ್ನು ಘೋಷಿಸಿದೆ. ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಾಣಿಜ್ಯ ವಿಭಾಗದಲ್ಲಿ ಉಚಿತ ಶಿಕ್ಷಣಕ್ಕೂ ಅವಕಾಶ ಕಲ್ಪಿಸಲಾಗಿದೆ.
