Updated News From Kaup
ಪಡುಬಿದ್ರಿ : ಕಂಚಿನಡ್ಕದಲ್ಲಿ ಬಿಜೆಪಿ ಸೇರ್ಪಡೆ, ಕಾರ್ಯಕರ್ತರ ಸಭೆ
Posted On: 24 Apr 2023, 10:55 PM
ಪಡುಬಿದ್ರಿ : ಇಲ್ಲಿನ ಗ್ರಾ.ಪಂ ವ್ಯಾಪ್ತಿಯ ಕಂಚಿನಡ್ಕದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರ ಸಭೆ ಸೋಮವಾರ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮತ್ತು ಕಾಪು ಬಿಜೆಪಿ ಅಭ್ಯರ್ಥಿ ಸುರೇಶ್ ಶೆಟ್ಟಿ ಗುರ್ಮೆ ಉಪಸ್ಥಿತಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕು. ನಯನ ಕಂಚಿನಡ್ಕ, ಸಾಮಾಜಿಕ ಕಾರ್ಯಕರ್ತೆ ಶಶಿ ಕಂಚಿನಡ್ಕ ಮೊದಲಾದವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭ ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ಇಬ್ಬರು ಪಕ್ಷೇತರರಿಂದ ನಾಮಪತ್ರ ವಾಪಾಸ್ ; 5 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ
Posted On: 24 Apr 2023, 08:47 PM
ಕಾಪು : ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಕಾಪು ವಿಧಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ್ದ ಇಬ್ಬರು ಪಕ್ಷೇತರರು ನಾಮಪತ್ರ ವಾಪಾಸ್ ಪಡೆದಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಅಬ್ದುಲ್ ರಝಾಕ್ ಶಾಬನ್ ಅಹ್ಮದ್ ಮತ್ತು ಅಬ್ದುಲ್ ರಹಿಮಾನ್ ನಾಮಪತ್ರ ವಾಪಾಸ್ ಪಡೆದಿದ್ದಾರೆ. ಅಂತಿಮವಾಗಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಆಮ್ ಆದ್ಮಿ ಮತ್ತು ಎಸ್ಡಿಪಿಐ ಪಕ್ಷದ 5 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ
ಹೆಜಮಾಡಿ ಮತ್ತು ಪಡುಬಿದ್ರಿ : ಬಿಜೆಪಿ ಕಾರ್ಯಕರ್ತರ ಸಭೆ ; ಮನೆ ಮನೆ ಪ್ರಚಾರ
Posted On: 24 Apr 2023, 08:28 PM
ಹೆಜಮಾಡಿ : ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಶಾಸಕ ಲಾಲಾಜಿ ಆರ್ ಮೆಂಡನ್, ಪಕ್ಷದ ಕಾರ್ಯಕರ್ತರು ಜೊತೆಯಾಗಿ ಹೆಜಮಾಡಿ ಮತ್ತು ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಂದು ಭರ್ಜರಿ ಪ್ರಚಾರ ನಡೆಸಿ ಮತಯಾಚಿಸಿದರು. ಮೊದಲು ಹೆಜಮಾಡಿ ಶ್ರೀ ಧೂಮಾವತಿ ದೈವಸ್ಥಾನ ಬಸ್ತಿಪಡ್ಪು ಇಲ್ಲಿಗೆ ಭೇಟಿ ನೀಡಿ ದೈವದ ಆಶೀರ್ವಾದ ಪಡೆದು ಕಾರ್ಯಕರ್ತರ ಸಭೆಯ ಬಳಿಕ ವಿವಿದೆಡೆ ಪ್ರಚಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗ್ರಾಮ ಪಂಚಾಯತ್ ಅಧ್ಯಕ್ಷ ಪಾಡುರಂಗ ಕರ್ಕೇರ, ಉಪಾಧ್ಯಕ್ಷೆ ಪವಿತ್ರ ಗಿರೀಶ್ , ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪ್ರಮುಖರಾದ ಮಿಥುನ್ ಹೆಗ್ಡೆ, ಶರಣ್ ಹೆಜಮಾಡಿ, ಶಿವಕುಮಾರ್, ಮೋಹನ್ ಸುವರ್ಣ, ಲೀಲೇಶ್ ಸುವರ್ಣ, ಬಬಿತ, ಪ್ರಸಾದ್ ಹೆಜಮಾಡಿ, ನಿತಿನ್ ಹೆಜಮಾಡಿ, ಚಂದ್ರಶೇಖರ, ಅನಿಲ್, ರವೀಂದ್ರ ಹೆಜಮಾಡಿ ಹಾಗೂ ಪಕ್ಷದ ಹಿರಿಯರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ಪಕ್ಷೇತರ ಅಭ್ಯರ್ಥಿ ನಾಮಪತ್ರ ಹಿಂತೆಗೆದು ಕಾಂಗ್ರೆಸ್ ಸೇರ್ಪಡೆ
Posted On: 24 Apr 2023, 07:23 PM
ಕಾಪು : ಪಕ್ಷೇತರ ಅಭ್ಯರ್ಥಿಯಾದ ಅಬ್ದುಲ್ ರಹಿಮಾನ್ ಯಾನೆ ಆಸೀಫ್ ಹನನ್ ನಾಮಪತ್ರ ಹಿಂತೆಗೆದು ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಮತ್ತು ಪಕ್ಷದ ಮುಖಂಡರ ಸಮ್ಮುಖ ಕಾಪುವಿನಲ್ಲಿ ಇಂದು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಆಸೀಫ್ ಹನನ್ ಜೊತೆಗೆ ಶೇಖ್ ಸೈಯದ್ ಅಹ್ಮದ್, ಇಬ್ರಾಹಿಂ ಅವರನ್ನು ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭ ಕಾಂಗ್ರೆಸ್ ಮುಖಂಡರಾದ ನವೀನಚಂದ್ರ ಸುವರ್ಣ , ಶರ್ಫುದ್ದೀನ್ ಶೇಖ್, ರಾಜಶೇಖರ ಕೋಟ್ಯಾನ್, ದಿನೇಶ್ ಕೋಟ್ಯಾನ್, ಇಮ್ರಾನ್ ಮಜೂರು, ಫಾರೂಕ್ ಚಂದ್ರ ನಗರ, ಉಸ್ಮಾನ್ ಕಾಪು, ರಮೀಝ್ ಪಡುಬಿದ್ರಿ, ಹಮೀದ್ ಮುಳೂರು, ಆಸೀಫ್ ಮೂಳೂರು, ರಹೀಂ ಮಲ್ಲಾರು ಉಪಸ್ಥಿತರಿದ್ದರು.
ಶಿರ್ವ : ಪತ್ರಿಕಾರಂಗದ ಸೇವೆಗಾಗಿ ಉಪಾಧ್ಯಾಯ ಸಮ್ಮಾನ್ ವಿಶೇಷ ಪ್ರಶಸ್ತಿ ಪುರಸ್ಕೃತರಾದ ಬಿ. ಪುಂಡಲೀಕ ಮರಾಠೆ
Posted On: 24 Apr 2023, 06:58 PM
ಶಿರ್ವ : ಮೂಡುಬೆಳ್ಳೆ ಕಲಾ ಪ್ರತಿಷ್ಠಾನ ವತಿಯಿಂದ ನೀಡಲಾಗುವ ರಾಜ್ಯಮಟ್ಟದ 9ನೇ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪಾಧ್ಯಾಯ ಸಮ್ಮಾನ್ ವಿಶೇಷ ಪ್ರಶಸ್ತಿಯನ್ನು ಪತ್ರಿಕಾರಂಗದ ಸೇವೆಗಾಗಿ ಪತ್ರಕರ್ತ ಬಿ. ಪುಂಡಲೀಕ ಮರಾಠೆಯವರಿಗೆ ಎಪ್ರಿಲ್ 23 ರಂದು ನೀಡಿ ಗೌರವಿಸಲಾಯಿತು. ಬಿ. ಪುಂಡಲೀಕ ಮರಾಠೆಯವರು ಪ್ರಸ್ತುತ ಕಾಪು ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಸಾಹಿತ್ಯ ಕ್ಷೇತ್ರ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಅದಮಾರು ಮಠದ ಶ್ರೀ ವಿಶ್ವಪ್ರಿಯತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಉಡುಪಿ ರಥಬೀದಿ ಶ್ರೀರಾಘವೇಂದ್ರ ಮಠದ ಶ್ರೀ ಮಂತ್ರಾಲಯ ಸಭಾಮಂದಿರದಲ್ಲಿ ಜರಗಿತು. ಅತಿಥಿಗಳಾಗಿ ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿರ್ದೇಶಕರಾದ ಮಿಥುನ್ ಆರ್. ಹೆಗ್ಡೆ, ಉಡುಪಿ ಜಿಲ್ಲಾ ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಣ ಇಲಾಖೆಯ ನಿವೃತ್ತ ಸಹನಿರ್ದೇಶಕರು ಮತ್ತು ಇಸ್ಕಾನ್ ಅಕ್ಷಯ ಪಾತ್ರೆ ಪ್ರತಿಷ್ಠಾನ, ಬೆಂಗಳೂರು ಶೈಕ್ಷಣಿಕ ಸಲಹೆಗಾರರಾದ ಸಿ.ವಿ.ತಿರುಮಲ ರಾವ್ ವಹಿಸಿದ್ದರು. ಈ ಸಂದರ್ಭ ಮಾಧವ ಉಪಾಧ್ಯಾಯ, ನಾಗರತ್ನ ಉಪಾಧ್ಯಾಯ, ರಮಾಕಾಂತ ಉಪಾಧ್ಯಾಯ, ಉಪಾಧ್ಯಾಯ ಮೂಡುಬೆಳ್ಳೆ ಕಲಾ ಪ್ರತಿಷ್ಠಾನದ ಅಧ್ಯಕ್ಷ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಕಲಾವಿದ ಡಾ. ಉಪಾಧ್ಯಾಯ ಮೂಡುಬೆಳ್ಳೆ, ಪ್ರದ್ಯುಮ್ನ ಉಪಾಧ್ಯಾಯ, ಡಾ.ಪ್ರಮೋದನ ಉಪಾಧ್ಯಾಯ, ಸಂಧ್ಯಾ ಉಪಾಧ್ಯಾಯ ಉಪಸ್ಥಿತರಿದ್ದರು.
ಬಸವಣ್ಣ ಅವರಿಂದ ಜಗತ್ತಿನ ಮೊದಲ ಸಂಸತ್ತು ರಚನೆ : ಪ್ರಸನ್ನ ಹೆಚ್
Posted On: 24 Apr 2023, 03:33 PM
ಉಡುಪಿ : ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರವಾದ ಅನುಭವ ಮಂಟಪವನ್ನು ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರೀ-ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದ ಬಸವಣ್ಣನವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಹೇಳಿದರು. ಅವರು ಇಂದು ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಬಸವ ಜಯಂತಿಯಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು. ತಾವು ಈ ಹಿಂದೆ ಬಸವಕಲ್ಯಾಣದಲ್ಲಿ ಕೆಲಸ ನಿರ್ವಹಿಸಲು ಸಿಕ್ಕ ಅವಕಾಶವನ್ನು ಸ್ಮರಿಸಿಕೊಂಡು, ಬಸವಕಲ್ಯಾಣದಲ್ಲಿ ಇರುವ ಬಸವಣ್ಣ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಸರ್ಕಾರದ ವತಿಯಿಂದ ಬಸವಣ್ಣನವರನ್ನು ಮುಂದಿನ ಪೀಳಿಗೆಗೆ ತಿಳಿಸುವ ಅಭಿವೃದ್ಧಿ ಕೆಲಸಗಳು ಆಗುತ್ತಿವೆಯೆಂದರು. ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ರವರು ಮಾತನಾಡುತ್ತಾ ಬಸವಣ್ಣನವರ ಕಾಯಕ ತತ್ವ ಹಾಗೂ ದಾಸೋಹ ತತ್ವ ಇಂದಿನ ಮಟ್ಟಿಗೆ ತುಂಬಾ ಪ್ರಸ್ತುತ. ಬಸವಣ್ಣನವರ ತತ್ವದಂತೆ ಅಂತರಂಗ ಶುದ್ಧರಾಗಿ ಎಲ್ಲರೂ ಕೆಲಸ ನಿರ್ವಹಿಸುವುದರಿಂದ ಉತ್ತಮ ಸಮಾಜ ನಿರ್ಮಾಣವಾಗಲು ಸಾಧ್ಯ ಎಂದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಸುರೇಂದ್ರ ಅಡಿಗ ಅವರು ಶುಭ ಹಾರೈಕೆ ಮಾತುಗಳನ್ನಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಅಧ್ಯಕ್ಷ ಗಿರೀಶ್, ಬಸವಣ್ಣನವರ ವಚನವನ್ನು ವಾಚಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ ನ ರವಿರಾಜ್, ನರಸಿಂಹಮೂರ್ತಿ, ರಾಜೇಶ್ ಭಟ್, ಸಂಗೊಳ್ಳಿ ರಾಯಣ್ಣ ಬಳಗದ ಜಿಲ್ಲಾಧ್ಯಕ್ಷ ಸಿದ್ದಬಸವಯ್ಯ ಸ್ವಾಮಿ ಚಿಕ್ಕಮಠ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಿಲ್ಲಾ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಬಸವ ಸಮಿತಿ ಜಿಲ್ಲಾ ಅಧ್ಯಕ್ಷ ಶಾಂತೇಗೌಡರವರು ವಂದಿಸಿದರು.
ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಚುನಾವಣಾ ವೀಕ್ಷಕರಾಗಿ ಫಾರೂಕ್ ಚಂದ್ರನಗರ ಆಯ್ಕೆ
Posted On: 23 Apr 2023, 08:21 PM
ಕಾಪು : ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಚುನಾವಣಾ ವೀಕ್ಷಕರಾಗಿ ಉಡುಪಿ ಜಿಲ್ಲೆಯ ಕಾಂಗ್ರೆಸ್ ಮುಖಂಡ ಕೆಪಿಸಿಸಿ ಅಲ್ಪ ಸಂಖ್ಯಾತ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ರವರನ್ನು ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷ ಕೆ.ಅಬ್ದುಲ್ ಜಬ್ಬಾರ್ ನೇಮಕ ಮಾಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು : ಪಡು ಗ್ರಾಮ ವ್ಯಾಪ್ತಿಯಲ್ಲಿ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರಿಂದ ಮತಯಾಚನೆ
Posted On: 23 Apr 2023, 05:18 PM
ಕಾಪು : ಪುರಸಭೆ ವ್ಯಾಪ್ತಿಯ ಕಾಪು ಪಡು ಗ್ರಾಮ ವ್ಯಾಪ್ತಿಯ ರಾಮನಗರ ಕಾರ್ಯಕರ್ತರ ಸಭೆಯಲ್ಲಿ ವಿಧಾನ ಸಭಾ ಚುನಾವಣೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ಕ್ಷೇತ್ರ ಚುನಾವಣೆ ಉಸ್ತುವಾರಿ ಸುಲೋಚನಾ ಭಟ್, ಗಂಗಾಧರ್ ಸುವರ್ಣ, ಪುರಸಭೆ ಬಿಜೆಪಿ ಅಧ್ಯಕ್ಷ ಸಂದೀಪ್ ಶೆಟ್ಟಿ, ಪುರಸಭೆ ಸದಸ್ಯ ನಿತಿನ್ ಕುಮಾರ್, ಅನಿಲ್ ಕುಮಾರ್, ನವೀನ್ ಅಮೀನ್ ಹಾಗೂ ಪಕ್ಷದ ಪ್ರಮುಖರಾದ ಸುರೇಂದ್ರ ಪಣಿಯೂರು, ನವೀನ್ ಎಸ್ ಕೆ, ಕುಶ ಸಾಲ್ಯಾನ್, ಪಕ್ಷದ ಪ್ರಮುಖರು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಗೆ ಸೇರ್ಪಡೆ
Posted On: 23 Apr 2023, 05:11 PM
ಕಾಪು: ಬಿಜೆಪಿ ಕಾರ್ಯಕರ್ತರಾದ ನಾಗಾರಾಜ್ ಸಾಲ್ಯಾನ್ ಮತ್ತು ರೋಷನ್ ಮುಳೂರು ಇಂದು ಕಾಂಗ್ರೆಸ್ ಸೇರ್ಪಡೆಗೊಂಡರು. ಕಾಪು ರಾಜೀವ ಭವನದಲ್ಲಿ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು ಕಾಂಗ್ರೆಸ್ ಧ್ವಜ ನೀಡಿ ಶಾಲು ಹಾಕಿ ನಾಗರಾಜ್ ಸಾಲ್ಯಾನ್ ಮತ್ತು ರೋಶನ್ ಮುಳೂರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಪಕ್ಷದ ಮುಖಂಡರಾದ ದೇವಿ ಪ್ರಸಾದ್ ಶೆಟ್ಟಿ, ನವೀನ ಚಂದ್ರ ಸುವರ್ಣ, ದೀಪಕ್ ಎರ್ಮಾಳ್, ಶರ್ಫುದ್ದೀನ್, ಸತೀಶ್ಚಂದ್ರ ಮುಳೂರು, ಸುಶಾಂತ್ ಕುಮಾರ್ ಉಪಸ್ಥಿತರಿದ್ದರು.
ಪಡುಬಿದ್ರಿ : ಬಿಜೆಪಿ ಚುನಾವಣಾ ಕಾರ್ಯಾಲಯ ಉದ್ಘಾಟನೆ
Posted On: 21 Apr 2023, 12:37 PM
ಪಡುಬಿದ್ರಿ : ಇಲ್ಲಿನ ಬಿಜೆಪಿ ಮಹಾ ಶಕ್ತಿ ಕೇಂದ್ರದ ಚುನಾವಣಾ ಕಾರ್ಯಾಲಯ ಇಂದು ಕಾಪು ವಿಧಾನಸಭಾ ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಶಾಸಕ ಲಾಲಾಜಿ ಆರ್ ಮೆಂಡನ್ ಜೊತೆಗೂಡಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಶಾಸಕ ಲಾಲಾಜಿ ಆರ್ ಮೆಂಡನ್ ಸರ್ವರು ಒಗ್ಗೂಡಿ ಈ ಚುನಾವಣೆಯಲ್ಲಿ ಗುರ್ಮೆಯವರನ್ನು ಹೆಚ್ಚಿನ ಬಹುಮತದಿಂದ ಗೆಲ್ಲಿಸೋಣ ಎಂದರು. ಕಾಪು ವಿಧಾನಸಭಾ ಬಿಜೆಪಿ ಪಕ್ಷದ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಚುನಾವಣೆಯಲ್ಲಿ ಗೆಲ್ಲಲು ಕಾರ್ಯಕರ್ತರ ಬೆಂಬಲ ಅನಿವಾರ್ಯ. ನಿಮ್ಮ ಸಹಕಾರದಿಂದ ಮುಂದಿನ ಸಮಯದಲ್ಲಿ ಪ್ರಚಾರ ಕಾರ್ಯ ನಡೆಯಲಿ. ನನ್ನ ಗೆಲುವು, ಪಕ್ಷದ ಅಸ್ತಿತ್ವ ನಿಮ್ಮ ಕೈಯಲ್ಲಿದೆ. ಈ ಬಾರಿ ಭಾರತೀಯ ಜನತಾ ಪಕ್ಷ, ಧರ್ಮ, ಸಂಸ್ಕೃತಿ ಗೆಲ್ಲಿಸೋಣ ಎಂದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ, ಪಡುಬಿದ್ರಿ ಮಹಾ ಶಕ್ತಿ ಕೇಂದ್ರ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ, ಪಡುಬಿದ್ರಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಶಿಕಾಂತ್ ಪಡುಬಿದ್ರಿ, ಹಾಗೂ ಪಕ್ಷದ ಪ್ರಮುಖರಾದ ಮಿಥುನ್ ಹೆಗ್ಡೆ, ಹರೀಶ್ ಶೆಟ್ಟಿ ಮುಂಬಯಿ, ನೀತಾ ಗುರುರಾಜ್, ಕೇಶವ ಮೊಯ್ಲಿ, ಗಾಯತ್ರಿ ಪ್ರಭು , ಸೌಮ್ಯಲತಾ ಶೆಟ್ಟಿ, ಜಯಶ್ರೀ ತೆಂಕ , ಯಶೋದ ಹಾಗೂ ಇನ್ನಿತರ ಪ್ರಮುಖರು, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
