Updated News From Kaup
ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್ ಕ್ರೀಡಾಕೂಟ

Posted On: 18-12-2022 03:52PM
ಕಾಪು : ಕುತ್ಯಾರು ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್ ಟ್ರಸ್ಟ್ನ ಆಡಳಿತಕ್ಕೊಳಪಟ್ಟ ಸೂರ್ಯಚೈತನ್ಯ ಹೈಸ್ಕೂಲಿನ ವಾರ್ಷಿಕ ಕ್ರೀಡಾಕೂಟವು ಶನಿವಾರದಂದು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು ಅಧ್ಯಕ್ಷತೆಯಲ್ಲಿ ಜರುಗಿತು.
ಶಿರ್ವ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಘವೇಂದ್ರ ಸಿ. ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡೆಯಿಂದ ಶಿಸ್ತು, ಒಗ್ಗಟ್ಟು ಸಾಧ್ಯವಾಗುವುದು. ಪೊಲೀಸ್ ಮತ್ತು ಸೇನೆಯ ಸೇರ್ಪಡೆಗೆ ದೈಹಿಕ ಕ್ಷಮತೆ ಅತ್ಯಗತ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಿ ಉನ್ನತ ಸಾಧನೆ ಮಾಡಬೇಕು ಎಂದು ಕರೆಯಿತ್ತರು.
ಠಾಣಾ ಎಎಸ್ಸೈ ಶಶಿಧರ್ ಕೆ, ಕಾರ್ಯದರ್ಶಿ ಗುರುರಾಜ್ ಕೆ.ಜೆ. ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನೆಯ ವಂದನೆ ಸ್ವೀಕರಿಸಿದರು. ಉಪಾಧ್ಯಕ್ಷ ವಿವೇಕ್ ಆಚಾರ್ಯ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು.
ಗೌರವ ಸಲಹೆಗಾರ ವಿದ್ವಾನ್ ಶಂಭುದಾಸ ಗುರೂಜಿ, ಪ್ರಿನ್ಸಿಪಾಲ್ ಗುರುದತ್ತ ಸೋಮಯಾಜಿ, ಸಹಾಯಕ ಪ್ರಿನ್ಸಿಪಾಲ್ ಸಂಗೀತಾ, ಶಿಕ್ಷಕವೃಂದ,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಗುರುದತ್ತ ಸೋಮಯಾಜಿ ಸ್ವಾಗತಿಸಿದರು. ಸಹ ಶಿಕ್ಷಕಿ ರಮ್ಯಾ ಪ್ರಭು ನಿರೂಪಿಸಿ ಸಹ ಶಿಕ್ಷಕ ಮಂಜುನಾಥ್ ಶೇಟ್ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಆಚಾರ್ಯ ಕ್ರೀಡಾಕೂಟವನ್ನು ಸಂಘಟಿಸಿದರು.
ಜನವರಿ 15 : ಕುತ್ಯಾರು ಮೂಲ್ಯರ ಯಾನೆ ಕುಲಾಲರ ಸಂಘದಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Posted On: 18-12-2022 03:06PM
ಕಾಪು : ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 15 ರ ರವಿವಾರ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ಧಾರ್ಮಿಕ ಸಭೆ ನಂತರ ಪ್ರಸಾದ ಭೋಜನವಿರುತ್ತದೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುವರು.
ಕಾಪು : ಕಡಲ ಐಸಿರ 2022 ; ಜನ ಸಾಗರ ; ನೃತ್ಯ ಸ್ಪರ್ಧೆ ; ಲೇಸರ್ ಷೋ

Posted On: 17-12-2022 08:32PM
ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ನೃತ್ಯ ಸ್ಪರ್ಧೆ ವೀಕ್ಷಿಸಲು ಜನ ಸಾಗರವೇ ನೆರೆದಿದ್ದು ಜನಮನ ಸೆಳೆಯಿತು.

ಇದರ ಜೊತೆಗೆ ಲೇಸರ್ ಷೋ, ವಿಶೇಷ ಚೇತನ ಮಕ್ಕಳ ನೃತ್ಯ, ಹಾಡು ಸಭಿಕರ ಗಮನ ಸೆಳೆಯಿತು.

ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು ಈ ಬಾರಿ ಶನಿವಾರ ಮತ್ತು ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ- ಪ್ರದರ್ಶನ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಮಹಿಳೆಯರಿಗಾಗಿ ತ್ರೋಬಾಲ್, ಸಂಗೀತ ಕುರ್ಚಿ ಇತ್ಯಾದಿ ಸ್ಪರ್ಧೆಗಳು, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಜನವರಿ 7, 8 : ಮಹಾದೇವಿ ಫ್ರೆಂಡ್ಸ್ ಕಾಪು ಆಶ್ರಯದಲ್ಲಿ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ; ಸಮ್ಮಾನ

Posted On: 16-12-2022 10:47PM
ಕಾಪು : ಮಹಾದೇವಿ ಫ್ರೆಂಡ್ಸ್, ಕಾಪು ಇವರ ಆಶ್ರಯದಲ್ಲಿ 4ನೇ ವರ್ಷದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಮಹಾದೇವಿ ಟ್ರೋಫಿ - 2023 ಜನವರಿ 7, ಶನಿವಾರ ಮತ್ತು 8 ,ಆದಿತ್ಯವಾರ ಮಹಾದೇವಿ ಶಾಲಾ ಕ್ರೀಡಾಂಗಣ, ಕಾಪು ಇಲ್ಲಿ ಜರಗಲಿದೆ. ಪ್ರಥಮ ಬಹುಮಾನವಾಗಿ ₹ 50,555 ಹಾಗೂ ಮಹಾದೇವಿ ಟ್ರೋಫಿ ಮತ್ತು ದ್ವಿತೀಯ ಬಹುಮಾನವಾಗಿ ₹ 25,555 ಹಾಗೂ ಮಹಾದೇವಿ ಟ್ರೋಫಿ ಸಿಗಲಿದೆ.
ಲೀಗ್ ಮಾದರಿಯ 12 ಟೀಮ್ಗಳ ಪಂದ್ಯಾಕೂಟ ಜನವರಿ 7, ಶನಿವಾರ ಮಧ್ಯಾಹ್ನ ಗಂಟೆ 2 ರಿಂದ ಪ್ರಾರಂಭ. ಮುಕ್ತ ಪಂದ್ಯಾಕೂಟ ಜನವರಿ 7, ಶನಿವಾರ ರಾತ್ರಿ ಗಂಟೆ 10 ರಿಂದ ಪ್ರಾರಂಭವಾಗಲಿದೆ.
ಸಮ್ಮಾನ : 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ, 2022ನೇ ಸಾಲಿನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಟ್ರಿಂಗ್ ಆಟ್೯ ನಲ್ಲಿ ಸಾಧನೆಗೈದಿರುವ ಶಶಾಂಕ್ ಸಾಲ್ಯಾನ್, 2022ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಾಪು ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವ ರಕ್ಷಣ್ ಕಲ್ಯಾ ಇವರ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಸಮ್ಮಾನಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಸುಶಾಂತ್ 7795160058, ಮಾಧವ ಪೂಜಾರಿ 7899065890, ಜಗದೀಶ್ 8123431411
ಇನ್ನಂಜೆ : ಅಪರಾಧ ತಡೆ ಮಾಸಾಚರಣೆ ಮಾಹಿತಿ ಕಾರ್ಯಕ್ರಮ

Posted On: 16-12-2022 06:46PM
ಇನ್ನಂಜೆ : ಜೆಸಿಐ ಶಂಕರಪುರ ಜಾಸ್ಮಿನ್, ಕಾಪು ಪೊಲೀಸ್ ಠಾಣೆ ಮತ್ತು ಯಸ್ ವಿ ಎಚ್ ಪ್ರೌಢಶಾಲೆ ಇನ್ನಂಜೆ ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಮಾಹಿತಿ ಕಾರ್ಯಕ್ರಮವು ಇನ್ನಂಜೆ ದಾಸ ಭವನದಲ್ಲಿ ಜರುಗಿತು.
ಕಾರ್ಯಕ್ರಮವನ್ನು ದೈಹಿಕಶಿಕ್ಷಕ ನವೀನ್ ಶೆಟ್ಟಿ ಉದ್ಘಾಟಿಸಿದರು. ಕಾಪು ಠಾಣಾಧಿಕಾರಿಯಯಾದ ಶ್ರೀಶೈಲ ಮುರಗೋಡ ಮಾಹಿತಿಯನ್ನು ನೀಡಿದರು.
ಜೆಸಿಐ ಶಂಕರಪುರ ನಿಕಟಪೂರ್ವ ಅಧ್ಯಕ್ಷ ಜಗದೀಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವ ವಲಯ ಉಪಾಧ್ಯಕ್ಷ ಸಂತೋಷ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡರು. ಸಿಲ್ವಿಯಾ ಕಾಸ್ಟಲಿನೋ ಜೆಸಿ ವಾಣಿ ವಾಚಿಸಿದರು. ಜೆಸಿಐ ಶಂಕರಪುರ ಅಧ್ಯಕ್ಷರಾದ ಮಾಲಿನಿ ಪಾರ್ಥ ಇನ್ನಂಜೆ ಸ್ವಾಗತಿಸಿದರು. ಶಾಲೆಯ ಅಧ್ಯಾಪಕ ಪ್ರಭಾಕರ್ ಭಟ್ ವಂದಿಸಿದರು.
ಎರ್ಮಾಳು : ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ

Posted On: 16-12-2022 06:26PM
ಎರ್ಮಾಳು : ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ಶುಕ್ರವಾರ ಬೆಳಗ್ಗೆ ವಾರ್ಷಿಕ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿತು.

ಧ್ವಜಾರೋಹಣದ ಪ್ರಯುಕ್ತ ಬಲಿ ಸೇವೆ, ಮಹಿಳಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನೆರವೇರಿತು.
ದೇವಳದ ವಾರ್ಷಿಕ ಜಾತ್ರೋತ್ಸವವು ಡಿಸೆಂಬರ್ 20ರ ಮಂಗಳವಾರ ನೆರವೇರಲಿದೆ.
ಈ ಸಂದರ್ಭ ದೇವಳದ ತಂತ್ರಿ ವರ್ಯರಾದ ರಾಧಾಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್, ಅನುವಂಶೀಯ ಮೊಕ್ತೇಸರ ಅಶೋಕ್ ರಾಜ್ ಎರ್ಮಾಳು, ಶಂಕರ ಶೆಟ್ಟಿ ಎರ್ಮಾಳು, ನೈಮಾಡಿ ನಾರಾಯಣ ಶೆಟ್ಟಿ, ಎರ್ಮಾಳು ರೋಹಿತ್ ಹೆಗ್ಡೆ, ಉದಯ ಕೆ ಶೆಟ್ಟಿ ಎರ್ಮಾಳು, ಕಿಶೋರ್ ಶೆಟ್ಟಿ ಎರ್ಮಾಳು, ಸಂತೋಷ್ ಶೆಟ್ಟಿ ಬರ್ಪಾಣಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.
ಉಡುಪಿ : ಹೆಚ್ ಡಿ ಕುಮಾರಸ್ವಾಮಿಯವರ 64ನೇ ಹುಟ್ಟುಹಬ್ಬ ; ಉಡುಪಿ ಆಶಾ ನಿಲಯದ ಮಕ್ಕಳೊಂದಿಗೆ ಆಚರಣೆ

Posted On: 16-12-2022 05:01PM
ಉಡುಪಿ : ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಂದು ಉಡುಪಿ ಆಶಾ ನಿಲಯ ವಿಕಲಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಚರಿಸಲಾಯಿತು.
ಕೇಕ್ ಕತ್ತರಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು, ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಕಲ ಚೇತನ ಮಕ್ಕಳೊಂದಿಗೆ ಬೆರೆತು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಮಾರಸ್ವಾಮಿಯವರಿಗೆ ವಿಕಲಚೇತನ ಮಕ್ಕಳಲ್ಲಿ ಅತಿಯಾದ ಪ್ರೇಮ ಹಾಗೂ ಮುಖ್ಯಮಂತ್ರಿ ಆಗಿದ್ದ ಸಂದರ್ಭ ವಿಕಲಚೇತನ ಮಕ್ಕಳಿಗೆ ಕ್ಷೀರಭಾಗ್ಯ ಮತ್ತು ಇತರ ಕಾರ್ಯಕ್ರಮಗಳನ್ನು ನಾಡಿಗೆ ನೀಡಿದ್ದರು. ಈ ಸಂದರ್ಭ ಅವರಿಗೆ ದೇವರು ಆರೋಗ್ಯ, ಆಯುಷ್ಯವನ್ನು ದೇವರು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿದರು ಮತ್ತು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅತೀ ಹೆಚ್ಚು ಸೀಟು ಲಭಿಸಿ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ ಎಂದು ನುಡಿದರು ಮತ್ತು ಹುಟ್ಟುಹಬ್ಬದ ಶುಭಾಶಯಗಳು ಕೋರಿದರು. ತದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಶಾ ನಿಲಯದ ಎಚ್ಎಂ ಶಶಿಕಲಾ ಕೋಟ್ಯಾನ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು.
ಈ ಸಂದರ್ಭ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ,ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಹಿಳಾ ಅಧ್ಯಕ್ಷ ಶಾಲಿನಿ ಆರ್ ಶೆಟ್ಟಿ ಕೆಂಚನೂರು, ಜಿಲ್ಲಾ ಯುವ ನಾಯಕ ಸಂಜಯ್ ಕುಮಾರ್, ದಕ್ಷಿತ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಲಿಮಾರ್, ವೆಂಕಟೇಶ್ ಎಂಟಿ, ವಿಶಾಲಾಕ್ಷಿ ಶೆಟ್ಟಿ, ರಾಮರಾವ್, ಹರಣಿಕೋಟ್ಯಾನ್, ಅರುಣಾಕಿಣಿ, ಮಮತಾ, ರಂಗ ಆರ್ ಕೋಟ್ಯಾನ್, ಅರವಿಂದ ಶೆಟ್ಟಿ, ರೋಹಿತಾ ಶೆಟ್ಟಿ, ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಿರ್ವ : ಮಕ್ಕಳಿಗೆ ಹೆತ್ತವರು ದ್ವಿ ಚಕ್ರ ವಾಹನ ನೀಡಬೇಡಿ - ರಾಘವೇಂದ್ರ ಸಿ

Posted On: 16-12-2022 04:52PM
ಶಿರ್ವ : ಹದಿನೆಂಟು ವಯಸ್ಸಾಗದ ಕೆಳ ವಯಸ್ಸಿನ ಮಕ್ಕಳಿಗೆ ದ್ವಿ ಚಕ್ರ ವಾಹನ ಹಾಗೂ ಇತರ ವಾಹನ ನೀಡದೆ ಸಂಪೂರ್ಣ ವಾಹನ ಚಾಲನೆ ಪರವಾನಿಗೆ ಪಡೆದ ಮೇಲೆ ವಾಹನವನ್ನು ರಸ್ತೆಗೆ ಇಳಿಸಬೇಕು ಹೆತ್ತವರು ಜಾಗ್ರತೆ ವಹಿಸಿ ಮಕ್ಕಳನ್ನು ಅಪಾಯದಿಂದ ರಕ್ಷಿಸಿಕೊಳ್ಳಿ. ಅದಲ್ಲದೆ ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆಯಿಂದಿದ್ದು ಎಲ್ಲಾ ವಾಹನ ಮಾಲಕರು ತನ್ನ ವಾಹನದ ನಾಲ್ಕು ಬಗೆಯ ದಾಖಲೆಯನ್ನು ವಾಹನದಲ್ಲಿರಿಸಿ ತಪಾಸಣೆ ಸಮಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಮನೆಯಿಂದ ಹೊರಗೆ ಹೋಗುವಾಗ ಮನೆಯ ಸುರಕ್ಷತೆಯಿಂದ ಕಾಪಾಡಬೇಕು ಅಪರಾಧ ಆದಾಗ ಪೊಲೀಸರನ್ನು ಕೂಡಲೇ ಸಂಪರ್ಕಿಸಬೇಕು ನಾವೂ ಸದಾ ನಿಮ್ಮ ಸೇವೆಯಲ್ಲಿ ಇರುತ್ತೇವೆ ಎಂದು ಕಳತ್ತೂರು ಚಂದ್ರನಗರದ ಬಟರ್ ಫ್ಲೈ ಗೆಸ್ಟ್ ಹೌಸ್ ಸಭಾಂಗಣದಲ್ಲಿ ಶಿರ್ವ ಪೊಲೀಸ್ ಠಾಣಾ ವತಿಯಿಂದ ನಡೆದ ಅಪರಾಧ ಮಾಸ ತಡೆ ಮಾಸಚರಣೆ ಸಭೆಯಲ್ಲಿ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಮಾತನಾಡಿ ಸಾರ್ವಜನಿಕರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಪ್ರೊಬೆಷನರಿ ಎಸ್.ಐ ಶಶಿಧರ್, ಎ.ಎಸ್.ಐ ಶ್ರೀಧರ್ ಕೆ.ಜೆ, ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ, ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಫಾರೂಕ್ ಚಂದ್ರನಗರ, ಸಂಚಾಲಕರಾದ ದಿವಾಕರ ಡಿ ಶೆಟ್ಟಿ, ಬಟರ್ ಫ್ಲೈ ಆಡಳಿತ ನಿರ್ದೇಶಕರಾದ ಹಾಜಿ ಕೆ.ಉಮ್ಮರಬ್ಬ, ಚಂದ್ರನಗರ ಪೊಲೀಸ್ ಸಿಬ್ಬಂದಿಗಳಾದ ಪ್ರಸಾದ್, ಬೀಟ್ ಪೊಲೀಸ್ ಅನ್ವರ್ ಹಾಗೂ ಗ್ರಾಮದ ಸದಸ್ಯರು ಉಪಸ್ಥಿತರಿದ್ದರು.
ಕಾಪು ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

Posted On: 16-12-2022 12:25PM
ಕಾಪು : ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್ನ ಲೈಫ್ ಗಾರ್ಡ್ಗಳು ರಕ್ಷಿಸಿದ್ದಾರೆ.
ಹೈದರಾಬಾದ್ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್ಗಳಿಂದ ಜೀವದಾನ ಪಡೆದ ಪ್ರವಾಸಿಗರು.
ಗುರುವಾರ ಸಂಜೆ ಕಾಪು ಬೀಚ್ಗೆ ಬಂದಿದ್ದ ಹೈದರಾಬಾದ್ನ ಇಬ್ಬರು ಯುವಕರು ಮತ್ತು ಓರ್ವ ಯುವತಿ ಸಮುದ್ರ ಸ್ನಾನಕ್ಕೆ ಇಳಿದಿದ್ದರು. ಈ ಸಂದರ್ಭ ಅವರನ್ನು ಲೈಫ್ ಗಾರ್ಡ್ಗಳು ಎಚ್ಚರಿಕೆ ನೀಡಿ ಅವರನ್ನು ನೀರಿನಿಂದ ಮೇಲಕ್ಕೆ ಕಳುಹಿಸಿದ್ದರು. ಎರಡು ಮೂರು ಸಾರಿ ಹೇಳಿದ್ದರೂ ನಿರ್ಲಕ್ಷಿಸಿ ಲೈಟ್ಹೌಸ್ನ ಬಂಡೆಯ ಮೇಲೆ ಹೋಗಿದ್ದ ಯುವಕರು ಕಲ್ಲಿನಲ್ಲಿ ಜಾರುತ್ತಾ ಸಮುದ್ರದೊಳಗೆ ಬಿದ್ದಿದ್ದರು.
ಇದನ್ನು ಗಮನಿಸಿದ ಲೈಫ್ ಗಾರ್ಡ್ಗಳಾದ ಲಕ್ಷ್ಮಣ್, ಸಂದೇಶ್, ಸುಜಿನ್ ಹಾಗೂ ಬೋಟ್ ರೈಡರ್ಸ್ ತಂಡದ ಹುಸೇನ್ ಮತ್ತು ಕಾರ್ತಿಕ್ ಸಮುದ್ರಕ್ಕೆ ತೆರಳಿ ನೀರು ಪಾಲಾಗುತ್ತಿದ್ದ ಯುವಕರನ್ನು ರಕ್ಷಿಸಿದ್ದಾರೆ. ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.
ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ'

Posted On: 16-12-2022 11:09AM
ಶಿರ್ವ : ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು. ಶಸ್ತ್ರಾಸ್ತ್ರ ಕಲಿಕೆ ಒಂದು ಸುವರ್ಣ ಅವಕಾಶ , ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವುದಿಲ್ಲ ಕೆಡೆಟ್ಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದಂತ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ,ಕ್ಯಾಡೆಟ್ ಗಳಾದ ಪೂಜಾ, ಹುಳಿದ್ರ ಖುಷಿ, ಲಾಯ್ ವಿನ್ಸ್ಟನ್ ಫರ್ನಾಂಡಿಸ್ ರವರನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ, ಮುಂದೆ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ಹಾಗೂ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು ಮಾತನಾಡಿದರು. ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮಶ್ರೀ ಸುದರ್ಶನ್ ತರಬೇತಿನ ಮುಖ್ಯ ಉದ್ದೇಶ ಮತ್ತು ಪ್ರಯೋಜನವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಬಿಎಚ್ಎಂ ಮಹೇಂದ್ರ ಲಿಂಬು, ಹವಾಲ್ದಾರ್ ಪೆಶಲ್ ಬಿಡಿಆರ್ ತಮಾಂಗ್, ಭೂ-ಯುವ ಸೇನಾದಳದ ಕೆಡೆಟ್ಗಳನ್ನು ಎನ್.ಸಿ.ಸಿ. ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ಕವಾಯತು, ಭೂಪಟ ಅಧ್ಯಯನ, ಫೈರಿಂಗ್ ಅಣಕುಯುದ್ಧ, ಶಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯಮೂಲಕ ತಿಳಿಸಿ ತರಬೇತಿ ನಡೆಸಿಕೊಟ್ಟರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಲೋಬೋ ಆನ್ ರಿಯಾ ನೇವಿಲ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ, ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ವಾಣಿ ಯು ಸಾಲಿಯಾನ್ ಸ್ವಾಗತಿಸಿ, ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್ ವಂದಿಸಿದರು. ಸೋನಾಲಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.