Updated News From Kaup

ಕಟಪಾಡಿ : ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿ - ಯಶ್ಪಾಲ್ ಸುವರ್ಣ

Posted On: 06-11-2022 09:09PM

ಕಟಪಾಡಿ : ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುವುದು. ಕರಾಟೆಯಂತಹ ಕ್ರೀಡೆಯಲ್ಲಿ ಭಾಗವಹಿಸುವುದರ ಮೂಲಕ ಮಕ್ಕಳ ಮಾನಸಿಕ ಬೆಳವಣಿಗೆಗೊಳ್ಳುವ ಜೊತೆಗೆ ಶಾಲಾ ಕಲಿಕೆಗೆ ಸಹಾಯವಾಗುವುದು. ಇದೇ ರೀತಿಯಲ್ಲಿ ಹಳ್ಳಿ ಹಳ್ಳಿ ಗಳಿಂದ ಕರಾಟೆ ಪಟುಗಳು ಹೊರಹೊಮ್ಮುವುದರಿಂದ ಮುಂದಿನ ದಿನಗಳಲ್ಲಿ ಕರಾಟೆ ಮೂಲಕ ನಮ್ಮ ರಾಜ್ಯ ವಿಶ್ವದಲ್ಲೇ ಹೆಸರು ಗಳಿಸುವುದರಲ್ಲಿ ಸಂಶಯವಿಲ್ಲ. ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿ ಎಂದು ಯಶ್ ಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ಜಿಲ್ಲೆಯ ಕಟಪಾಡಿ ಸುಭಾಸ್ ನಗರದಲ್ಲಿ ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ,ಸಂಸ್ಥೆಯ ವತಿಯಿಂದ ಆದಿತ್ಯವಾರ ಕಟಪಾಡಿ ಸುಭಾಷ್ ನಗರದ ಥಂಡರ್ಸ್ ಗ್ರಾಂಡ್ ಬೇ ಸಭಾಂಗಣದಲ್ಲಿ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿ ಯಾಗಲಿ ಎಂಬ ಉದ್ದೇಶದಿಂದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಕೂಟ "ಕೊಂಪಿಟ್ -3.0," ಉದ್ಘಾಟಸಿ ಮಾತನಾಡಿದರು.

ಈ ಸಂದರ್ಭ ಸುಮಾರು ಸಾವಿರದ ಐನೂರು ಕರಾಟೆ ವಿದ್ಯಾರ್ಥಿಗಳು ಭಾಗವಹಿದ್ದರು. ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯತೀಶ್ , ಸಂಸ್ಥೆಯ ಗೌರವಾಧ್ಯಕ್ಷ ಯಶ್ ಪಾಲ್ ಎ.ಸುವರ್ಣ, ನವೀನ್ ಅಮೀನ್ ಶಂಕರಪುರ, ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಸಲಹೆಗಾರ ರವಿ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ಮೂಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಪಿಲಿಕೋಲ ದೈವನರ್ತಕ ಗುಡ್ಡ ಪಾಣಾರರಿಗೆ ಹುಟ್ಟೂರ ಸನ್ಮಾನ ; ಮೂಳೂರ್ದ ಮುತ್ತು ಬಿರುದು

Posted On: 06-11-2022 08:53PM

ಮೂಳೂರು : ಪ್ರಶಸ್ತಿಯನ್ನು ಬೆನ್ನಟ್ಟಿ ಹೋಗುವ ಒಂದು ಕಾಲ ಇತ್ತು. ಆದರೆ ಇಂದು ಪ್ರಶಸ್ತಿ ಯೋಗ್ಯ ವ್ಯಕ್ತಿಯನ್ನು ಅರಸಿ ಬಂದಂತಹ ಸಂದರ್ಭ ಯೋಚಿಸಿದರೆ ಯೋಗ್ಯವಾದವರೇ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಜಾನಪದ ವಿದ್ವಾಂಸ ಡಾ.ವೈ.ಎನ್.ಶೆಟ್ಟಿ ಅಭಿಪ್ರಾಯಪಟ್ಟರು. ಅವರು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಪಿಲಿಕೋಲ ದೈವನರ್ತಕ ಗುಡ್ಡ ಪಾಣಾರ ಮೂಳೂರು ಇವರ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಾರ್ಯವನ್ನು ಬಿಕ್ರಿಗುತ್ತು ಸುಂದರ ಹೆಗ್ಡೆ ದೀಪ ಬೆಳಗಿಸಿ ಉದ್ಘಾಟಿಸಿದರು.

ಸರ್ವೇಶ್ವರ ಫ್ರೆಂಡ್ಸ್ ವತಿಯಿಂದ ಜರಗಿದ ಹುಟ್ಟೂರ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಗುಡ್ಡ ಪಾಣಾರ ಇವರನ್ನು ಶಾಲು, ಪೇಟ ತೊಡಿಸಿ ಸನ್ಮಾನ ಪತ್ರ ನೀಡುವ ಮೂಲಕ "ಮೂಳೂರ್ದ ಮುತ್ತು" ಎಂಬ ಬಿರುದು ನೀಡಿ ಸನ್ಮಾನಿಸಿದರು.

ಈ ಸಂದರ್ಭ ಮಹಾಲಕ್ಷ್ಮಿ ಕೋ ಒಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಡಾ.ವೈ.ಎನ್.ಶೆಟ್ಟಿ, ಮೂಳೂರು ಬಿಲ್ಲವ ಸಂಘದ ಉಪಾಧ್ಯಕ್ಷ ಪ್ರಕಾಶ್ ಮೂಳೂರು, ಮಟ್ಟಾರ್ ರತ್ನಾಕರ್ ಹೆಗ್ಡೆ, ಸೇಸು ಮಾಸ್ಟರ್, ಪಾಂಡುರಂಗ ಎಸ್.ಪಡ್ಡಮೆ, ಸಂತೋಷ್, ವೀರ ಕೇಸರಿ ಶೆಟ್ಟಿ, ಕೊರಗ ಬಂಗೇರ, ಸತೀಶ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು. ಪುರುಷೋತ್ತಮ್ ಮೂಳೂರು ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು.

ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆಯ ಉದ್ಘಾಟನೆ

Posted On: 06-11-2022 07:26PM

ಉಡುಪಿ : ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇದರ ನೇತೃತ್ವದಲ್ಲಿ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ವಾಯ್ಸ್ ಆಫ್ ಚಾಣಕ್ಯ 2022 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಡುಪಿ ಸೃಷ್ಟಿ ಸಂಗೀತ ತರಬೇತಿ ಕೇಂದ್ರದಲ್ಲಿ ರವಿವಾರ ಉದ್ಘಾಟಿಸಿದರು.

ಅಧ್ಯಕ್ಷತೆಯನ್ನು ಸೃಷ್ಟಿ ಸಂಗೀತ ತರಬೇತಿ ಕೇಂದ್ರದ ಆಡಳಿತ ನಿರ್ದೇಶಕ ಪ್ರಕಾಶ್ ಸುವರ್ಣ ಕಟಪಾಡಿ ವಹಿಸಿದ್ದರು.

ಸಮಾರಂಭದಲ್ಲಿ ಚಿತ್ರಕಲಾ ಶಿಕ್ಷಕ ರಮೇಶ್ ಕಿದಿಯೂರು, ತೀರ್ಪುಗಾರರಾದ ಸಂಗೀತ ಶಿಕ್ಷಕಿ ಸ್ವಾತಿ ಭಟ್ ಉಡುಪಿ, ಜಯಶ್ರೀ ಕೋಟ್ಯಾನ್ ಕಟಪಾಡಿ, ಸೃಷ್ಟಿ ಫೌಂಡೇಶನ್ ನ ಅಧ್ಯಕ್ಷೆ ಪ್ರೀತಿ ಪಿ.ಸುವರ್ಣ, ಎಸ್ ಪಿ ಮ್ಯೂಸಿಕ್ ನ ರಾಜೇಶ್ ಮೊದಲಾದವರು ಉಪಸ್ಥಿತರಿದ್ದರು.

ಮಟ್ಟಾರುವಿನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ

Posted On: 06-11-2022 06:44PM

ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಮಟ್ಟಾರ್ ನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ ಇಂದು ನಡೆಯಿತು.

ಶಿರ್ವ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾದ ನಡಿಬೆಟ್ಟು ನಿತ್ಯಾನಂದ ಹೆಗ್ಡೆಯವರು ಪ್ರಚಾರ ಸ್ಟಿಕರ್ ಬಿಡುಗಡೆ ಮಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿಶ್ವ ಹಿಂದೂ ಪರಿಷದ್ ಮಟ್ಟಾರು ಉಪಾಧ್ಯಕ್ಷ ಜಗದೀಶ ಆಚಾರ್ಯ ಸಭಾಧ್ಯಕ್ಷತೆ ವಹಿಸಿದ್ದರು. ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಪ್ರಸಾದ್ ಕುತ್ಯಾರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಟ್ಟಿಂಗೇರಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ದೇವದಾಸ್ ಹೆಬ್ಬಾರ್ ಬೆಳ್ಳೆ ಗ್ರಾಮ‌ ಪಂಚಾಯತ್ ಸದಸ್ಯ ಗುರುರಾಜ ಭಟ್, ಬಜರಂಗದಳ ಕಾಪು ಪ್ರಖಂಡ ಸುರಕ್ಷಾ ಪ್ರಮುಖ್ ಆನಂದ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಪು : ವಿಶ್ವ ಹಿಂದೂ ಪರಿಷದ್ - ಮಟ್ಟಾರುವಿನಲ್ಲಿ ಹಿತ ಚಿಂತಕ ಅಭಿಯಾನಕ್ಕೆ ಚಾಲನೆ

Posted On: 06-11-2022 06:38PM

ಕಾಪು : ವಿಶ್ವ ಹಿಂದೂ ಪರಿಷದ್ ನ‌ ಹಿತ ಚಿಂತಕ ಅಭಿಯಾನಕ್ಕೆ ಕಾಪು ತಾಲೂಕಿನ ಮಟ್ಟಾರುವಿನಲ್ಲಿ ಚಾಲನೆ ನೀಡಲಾಯಿತು.

ಈ ಸಂದರ್ಭ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬಂಟಕಲ್ಲು ಇದರ ಆಡಳಿತ ಮೊಕ್ತೇಸರರಾದ ಶಶಿಧರ ವಾಗ್ಳೆ, ಶಿರ್ವ ಸಹಕಾರಿ ವ್ಯವಸಾಯಿಕ‌ ಸಂಘದ ಅಧ್ಯಕ್ಷ ಪ್ರಸಾದ್ ಕುತ್ಯಾರು, ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು, ಕಾರ್ಯದರ್ಶಿ ರಾಜೇಂದ್ರ ಶೆಣೈ, ಬಜರಂಗದಳ ಸಹ ಸಂಚಾಲಕ ಪ್ರಸಾದ್‌ ಅಂಚನ್ ಉಪಸ್ಥಿತರಿದ್ದರು.

ಇನ್ನಂಜೆ : ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Posted On: 06-11-2022 06:31PM

ಇನ್ನಂಜೆ : ಇಲ್ಲಿನ ಇನ್ನಂಜೆ ಯುವಕ ಮಂಡಲ (ರಿ) ಇದರ ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರವನ್ನು ಸೋದೆ ವಾದಿರಾಜ ಮಠದ ಯತಿಗಳಾದ ವಿಶ್ವವಲ್ಲಭ ತೀರ್ಥರು ಹಾಗೂ ಇನ್ನಂಜೆಯ ಉದ್ಯಮಿ ಗ್ರೇಗೊರಿ ಮಥಾಯಸ್ ಬಿಡುಗಡೆಗೊಳಿಸಿದರು.

ಈ ಸಂದರ್ಭ ಸಲಹಾ ಸಮಿತಿಯ ಸದಸ್ಯರುಗಳಾದ ನಂದನ್ ಕುಮಾರ್ ಮತ್ತು ರವಿವರ್ಮ ಶೆಟ್ಟಿ ಮತ್ತು ಯುವಕ ಮಂಡಲದ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಮಾಜಿ ಅಧ್ಯಕ್ಷರುಗಳು, ಸರ್ವ ಸದಸ್ಯರು ಉಪಸ್ಥಿತರಿದ್ದರು.

ಕಾಪು : ಡಿಸೆಂಬರ್ 10 ರಂದು ಪಡುಬೆಳ್ಳೆಯಲ್ಲಿ ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆ

Posted On: 05-11-2022 10:10AM

ಕಾಪು : ಝಿಝೋ ಎಜುಕೇಶನ್ ಅರ್ಪಿಸುವ ಲೆಟ್ಸ್ ನಾಚೊ ಜಿಲ್ಲಾ ಮಟ್ಟದ ಸೊಲೊ ಮತ್ತು ಗುಂಪು ನೃತ್ಯ ಸ್ಪರ್ಧೆ 2022 ಡಿಸೆಂಬರ್ 10, ಶನಿವಾರ ಸಂಜೆ 6 ಗಂಟೆಗೆ ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ಜರಗಲಿದೆ.

ಗುಂಪು ವಿಭಾಗದಲ್ಲಿ ಪ್ರಥಮ ಬಹುಮಾನವಾಗಿ 8,000 ನಗದು ಮತ್ತು ಟ್ರೋಫಿ, ದ್ವಿತೀಯ ಬಹುಮಾನ 4000 ಮತ್ತು ಟ್ರೋಫಿ, ಎರಡು ಸಮಾಧಾನಕರ ಬಹುಮಾನಗಳು. ಸೋಲೊ ವಿಭಾಗದಲ್ಲಿ 3,000 ನಗದು ಮತ್ತು ಟ್ರೋಫಿ, ದ್ವಿತೀಯ 1,500 ನಗದು ಮತ್ತು ಟ್ರೋಫಿ, ಎರಡು ಸಮಾಧಾನಕರ ಬಹುಮಾನಗಳು ಇರಲಿವೆ.

ನೋಂದಣಿ ಮಾಡಲು ಡಿಸೆಂಬರ್ 6 ಕಡೆಯ ದಿನವಾಗಿದ್ದು ಸೊಲೋ ವಿಭಾಗಕ್ಕೆ 200 ರೂ. ಮತ್ತು ಗುಂಪು ವಿಭಾಗಕ್ಕೆ 500 ರೂ. ನೋಂದಣಿ ಶುಲ್ಕ ಇರುತ್ತದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7676921592 8746023845

ನವೆಂಬರ್ 6 : ಕಟಪಾಡಿಯ ಸುಭಾಸ್ ನಗರದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ

Posted On: 04-11-2022 03:40PM

ಕಾಪು : ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಸಂಸ್ಥೆಯ ವತಿಯಿಂದ ಕಟಪಾಡಿ ಸುಭಾಸ್ ನಗರದ ಥಂಡರ್ಸ್ ಗ್ರಾಂಡ್ ಬೇ ಸಭಾಂಗಣದಲ್ಲಿ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಕೂಟ "ಕೊಂಪಿಟ್ -3.0" ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯತೀಶ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕರಾಟೆ ಪಟುಗಳಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶ ಪಡೆಯುವಲ್ಲಿ ಸಹಕಾರಿಯಾಗಲಿದೆ. ಸಂಸ್ಥೆಯ ಗೌರವಾಧ್ಯಕ್ಷರುಗಳಾದ ಯಶ್ಪಾಲ್ ಎ ಸುವರ್ಣ, ನವೀನ್ ಅಮೀನ್ ಶಂಕರಪುರ ಇವರ ಮಾರ್ಗದರ್ಶನದಲ್ಲಿ ಕರಾಟೆ ಶಿಕ್ಷಕ ರವಿ ಸಾಲ್ಯಾನ್ ನೇತೃತ್ವದಲ್ಲಿ ರಾಷ್ಟ್ರ ಮಟ್ಟದ ಒಂದು ದಿನದ ಪಂದ್ಯಾಕೂಟ ಜರಗಲಿದೆ. ಈ ಪಂದ್ಯಾಕೂಟ ದಲ್ಲಿ ರಾಜ್ಯದ ಅಲ್ಲದೆ ನೆರೆಯ ಗೋವಾ, ಮಹಾರಾಷ್ಟ್ರ, ಕೇರಳ ರಾಜ್ಯಗಳ ಕರಾಟೆ ಪಟುಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಗೌರವಾಧ್ಯಕ್ಷ ಯಶ್ಪಾಲ್ ಎ ಸುವರ್ಣ, ನವೀನ್ ಅಮೀನ್ ಶಂಕರಪುರ, ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಕಾರ್ಯದರ್ಶಿ ರವಿ ಕೋಟ್ಯಾನ್, ಗೌರವ ಸಲಹೆಗಾರ ರವಿ ಸಾಲ್ಯಾನ್ ಮೊದಲಾದವರು ಉಪಸ್ಥಿತರಿದ್ದರು.

ನವೆಂಬರ್ 6 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರರಿಗೆ ಹುಟ್ಟೂರ ಸನ್ಮಾನ

Posted On: 04-11-2022 02:29PM

ಕಾಪು : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಾಪು ತಾಲೂಕಿನ ಮೂಳೂರಿನ ಪಿಲಿ ಕೋಲ ನರ್ತಕರಾದ ಗುಡ್ಡ ಪಾಣಾರ ಅವರಿಗೆ ನವೆಂಬರ್ 6, ಆದಿತ್ಯವಾರದಂದು ಸಂಜೆ ಗಂಟೆ 3:30ಕ್ಕೆ ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಜಮಾಡಿ ಟೋಲ್ ಸಿಬ್ಬಂದಿಗೆ ಹಲ್ಲೆ, ಬೆದರಿಕೆ

Posted On: 04-11-2022 01:56PM

ಪಡುಬಿದ್ರಿ : ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯೋರ್ವರಿಗೆ ಯುವಕರ ಗುಂಪೊಂದು ಎರಡು ಕಾರುಗಳಲ್ಲಿ ಬಂದು ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ.

ಕಾಪು ತಾಲೂಕಿನ ಹೆಜಮಾಡಿ ಗ್ರಾಮದ ಮಟ್ಟಿ ಹೌಸ್ ನಿವಾಸಿ ಸುದೀಶ್ ಜೆ ಶೆಟ್ಟಿ ಇವರು ಹೆಜಮಾಡಿಯ ಟೋಲ್‌ಗೇಟಿನಲ್ಲಿ ಕೆಲಸ ಮಾಡಿಕೊಂಡಿದ್ದು ಅಕ್ಟೋಬರ್ 30 ರಂದು ರಾತ್ರಿ ಕರ್ತವ್ಯದಲ್ಲಿರುವ ಸಮಯ 11ಗಂಟೆಯ ವೇಳೆಗೆ ಹೆಜಮಾಡಿಯ ಸಂದೇಶ್ ಶೆಟ್ಟಿ, ಮನೋಜ್ ಸುವರ್ಣ, ಶ್ರೇಯಸ್ ದೇವಾಡಿಗ ಮುಕ್ಕ, ಜಯರಾಜ್ ಪೂಜಾರಿ ಹೆಜಮಾಡಿ, ಕೀರ್ತನ್ ಪೂಜಾರಿ ಕೊಪ್ಪಲ ಹೆಜಮಾಡಿ ಹಾಗೂ ಇತರೆ 3 ಜನರು ಎರಡು ಕಾರುಗಳಲ್ಲಿ ಹೆಜಮಾಡಿ ಟೋಲ್‌ಗೇಟ್ ಬಳಿ ಬಂದು ಸುದೀಶ್ ಜೆ ಶೆಟ್ಟಿ ಯನ್ನು ಏಕಾಏಕಿ ದೂಡಿ ಹಾಕಿ, ಹಲ್ಲೆ ನಡೆಸಿ, ಅವಾಚ್ಯ ಶಬ್ದಗಳಿಂದ ಬೈದು ಬೆದರಿಕೆ ಹಾಕಿರುತ್ತಾರೆ ಎಂದು ಸುದೀಶ್ ಜೆ ಶೆಟ್ಟಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ರಾತ್ರಿ ಸಮಯ ಸುದೀಶ್ ಜೆ ಶೆಟ್ಟಿ ಗೆ ಪೋನ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು, ಪೋನ್ ಕರೆ ಸ್ವೀಕರಿಸದಿದ್ದಾಗ ಮೆಸೇಜ್‌ಗಳ ಮೂಲಕ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರನ್ನು ನೀಡಿದ್ದು ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.