Updated News From Kaup
ಪಡುಬಿದ್ರಿ : ರೋಟರಿ ಕ್ಲಬ್ ಹಾಗೂ ಆರ್ ಸಿ ಸಿ ಜಂಟಿ ಆಶ್ರಯದಲ್ಲಿ ಭಜನಾ ಸ್ಪರ್ಧೆ -2022ಕ್ಕೆ ಚಾಲನೆ

Posted On: 30-10-2022 11:51AM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ರೋಟರಿ ಸಮುದಾಯದಳ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ರವಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ 6ನೇ ಬಾರಿಗೆ ಆಯೋಜಿಸಿದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ -2022 ನ್ನು ರೋಟರಿ ವಲಯ 5 ರ ಸಹಾಯಕ ಗವರ್ನರ್ ರೊ. ಡಾ.ಶಶಿಕಾಂತ್ ಕಾರಿಂಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ದೇವಳ, ಮಸೀದಿ, ಚಚ್೯ ಆರಾಧನಾ ಕೇಂದ್ರದಲ್ಲಿ ವಿವಿಧ ಆರಾಧನಾ ಕ್ರಮದ ಮೂಲಕ ದೇವರನ್ನು ಪ್ರಾರ್ಥಿಸುತ್ತೇವೆ. ಸಮಾಜದ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರಲು ಸಾಧ್ಯ. ದೇವರನ್ನು ಮುಟ್ಟಲು ಇರುವ ಮಾಧ್ಯಮವೇ ಭಜನೆ. ನಮ್ಮಲ್ಲಿ ಧನಾತ್ಮಕ ಶಕ್ತಿ ಮೂಡಲು ಭಜನೆಯಿಂದ ಸಾಧ್ಯ ಎಂದರು.

ಪಡುಬಿದ್ರಿ ಬೀಡಿನ ಬಲ್ಲಾಳರಾದ ರತ್ನಾಕರ್ ರಾಜ್ ಮಾತನಾಡಿ ಭಜನೆ ವಿಶೇಷವಾಗಿದೆ. ಈಗಿನ ಪರಿಸ್ಥಿತಯಲ್ಲಿ ನಮ್ಮ ಮನಸ್ಸಿನ ಒಳಿತಿಗಾಗಿ ಭಜನೆ ಅನಿವಾರ್ಯ. ಹಿಂದಿನ ಕಾಲದಲ್ಲಿ ಪ್ರತಿ ಮನೆ ಮನೆಗೂ ವರ್ಷಕ್ಕೆ ಒಂದು ಬಾರಿಯಾದರೂ ಭಜನಾ ಮಂಡಳಿಗಳು ಭಜನಾ ಸೇವೆಯ ಮೂಲಕ ಬರುತ್ತಿತ್ತು. ರೋಟರಿ ಪಡುಬಿದ್ರಿಯ ಕಾರ್ಯ ಶ್ಲಾಘನೀಯ ಎಂದರು.

ಪಡುಬಿದ್ರಿ ರೋಟರಿ ಅಧ್ಯಕ್ಷರಾದ ಗೀತಾ ಅರುಣ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನವೀನ್ ಚಂದ್ರ ಸುವರ್ಣ ಅಡ್ವೆ, ವೈ. ಸುಕುಮಾರ್, ಗಣೇಶ್ ಆಚಾರ್ಯ ಉಚ್ಚಿಲ, ಪಿ ಕೃಷ್ಣ ಬಂಗೇರ, ರಮೇಶ್ ಯು., ಸಚ್ಚಿದಾನಂದ ವಿ. ನಾಯಕ್, ನಟರಾಜ್ ಪಿ.ಎಸ್, ಬಾಬು ಕೋಟ್ಯಾನ್,ಜ್ಯೋತಿ ಮೆನನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭ ಕಾರ್ಯಕ್ರಮ ನಿರ್ದೇಶಕರಾದ ಯಶೋದ ಪಡುಬಿದ್ರಿ, ಪುಷ್ಪಲತಾ ಗಂಗಾಧರ್, ರಕ್ಷಿತಾ ಉಡುಪ, ಹೇಮಲತಾ ಸುವರ್ಣ, ಸುನಿಲ್ ಕುಮಾರ್, ಪವನ್ ಸಾಲ್ಯಾನ್ ಹಾಗೂ ರೋಟರಿ ಸದಸ್ಯರಾದ ಸುಧಾಕರ್, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಪಡುಬಿದ್ರಿ ರೋಟರಿ ಸಮುದಾಯ ಅಧ್ಯಕ್ಷೆ ದೀಪಾಶ್ರೀ ಕರ್ಕೇರ ಸ್ವಾಗತಿಸಿದರು. ರಾಜೇಶ್ ಕಾರ್ಯಕ್ರಮ ನಿರೂಪಿಸಿದರು. ತನಿಷಾ ಜಿ ಕುಕ್ಯಾನ್ ವಂದಿಸಿದರು.
ಕಾಪುವಿನಿಂದ ಮುಲ್ಕಿಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಚಾಲನೆ

Posted On: 30-10-2022 10:06AM
ಕಾಪು : ಇಲ್ಲಿನ ಕೊಂಕಣಿಮಠ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಚಾಲನೆ ನೀಡಲಾಯಿತು.

ಬಳಿಕ ಶ್ರೀ ಹಳೆಮಾರಿಗುಡಿಗೆ ತೆರಳಿ ಮುಲ್ಕಿಯತ್ತ ಪಾದಯಾತ್ರೆ ಸಾಗಿತು. ಈ ಪಾದಯಾತ್ರೆ ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳಕ್ಕೆ ಭೇಟಿ ನೀಡಿ ಬಳಿಕ ಹೆಜಮಾಡಿ ಲಕ್ಷ್ಮೀ ನಾರಾಯಣ ದೇವಸ್ಥಾನ ಆಗಿ ಟೋಲ್ ಗೇಟ್ ನಿಂದ ಹೊರೆ ಕಾಣಿಕೆಯೊಂದಿಗೆ ಮುಲ್ಕಿ ಒಳಲಂಕೆ ನರಸಿಂಹ ಸನ್ನಿಧಿಯಲ್ಲಿ ಸಮಾಪನ ಗೊಂಡು ಅಲ್ಲಿ ಜರಗುವ ದ್ವಾದಶ ಕೋಟಿ ರಾಮನಾಮ ತಾರಕ ಜಪಮಂತ್ರ ಯಾಗದಲ್ಲಿ ಪಾಲ್ಗೊಳ್ಳಲಿದೆ.

ಕಾಪುವಿನ ದೇವಳದ ಆಡಳಿತ ಮಂಡಳಿಯ ಸದಸ್ಯರು ಮತ್ತು ಜಿ.ಎಸ್.ಬಿ ಸಮಾಜದ ಭಜಕರು ಪಾಲ್ಗೊಂಡಿದ್ದರು.
ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದಲ್ಲಿ ವಿಶ್ವರೂಪ ದರ್ಶನ

Posted On: 30-10-2022 09:56AM
ಪಡುಬಿದ್ರಿ : ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ಒಂದು ತಿಂಗಳ ನಗರ ಭಜನೆ ಮತ್ತು ಪ್ರತಿ ದಿನ ಜರಗುವ ಪಕ್ಷಿಜಾಗರ ಪೂಜಾ ವಿಜ್ರಂಭಣೆಯಿಂದ ಆಚರಿಸಲಾಯಿತು.

ರವಿವಾರ ಪ್ರಾತ:ಕಾಲದಲ್ಲಿ ದೇವಳವನ್ನು ದೀಪಾಲಂಕಾರಗೊಳಿಸಿ ವಿಶ್ವರೂಪ ದರ್ಶನವನ್ನು ಕಣ್ತುಂಬ ಕಾಣಲು ಊರ ಪರವೂರ ಭಕ್ತಾದಿಗಳು ಆಗಮಿಸಿದ್ದರು.
ಈ ಸಂದರ್ಭ ದೇವಳದ ಆಡಳಿತ ಮೊಕ್ತೇಸರ ಪ್ರಶಾಂತ್ ಶೆಣೈ ಮತ್ತು ಸದಸ್ಯರು ಹಾಗೂ ಮಹಿಳಾ ಮಂಡಳಿಯ ಸದಸ್ಯರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದರು.
ಉದ್ಯಾವರ : ಗುಡ್ಡೆಯಂಗಡಿ ಫ್ರೆಂಡ್ಸ್ ವತಿಯಿಂದ ಪುನೀತ್ ರಾಜ್ ಕುಮಾರ್ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ

Posted On: 29-10-2022 08:47PM
ಉದ್ಯಾವರ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉದ್ಯಾವರದಲ್ಲಿ ಅಂಧರ ಗೀತ ಗಾಯನ ನಡೆಯಿತು. ಶೃಂಗೇರಿಯ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದ ಕಲಾವಿದರನ್ನು ಆಹ್ವಾನಿಸಿದ ಸಾಕಷ್ಟು ಸಮಾಜಮುಖೀ ಚಟುವಟಿಕೆ ನಿರತ ಗುಡ್ಡೆಯಂಗಡಿ ಫ್ರೆಂಡ್ಸ್ ಗುಡ್ಡೆಯಂಗಡಿ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಶನಿವಾರ ಸಂಜೆ ಉದ್ಯಾವರ ಗುಡ್ಡೆಯಂಗಡಿ ಇಮೇಜ್ ಬಿಲ್ಡಿಂಗ್ ಮುಂಭಾಗದಲ್ಲಿ ನಡೆಯಿತು.
ಉಡುಪಿ ಉದ್ಯಾವರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹವಾ ಇದ್ದು, ಪ್ರಕರಣವನ್ನು ಗುಡ್ಡೆಯಂಗಡಿ ಸಂಸ್ಥೆಯ ವತಿಯಿಂದ ಪ್ರಥಮ ವರ್ಷದ ಸ್ಮರಣೆ ನಡೆಸಿದ ಬಳಿಕ ಸಂಗೀತ ಸಂಜೆ ಕಾರ್ಯಕ್ರಮ ನಡೆಸಲಾಯಿತು.
ಈ ಸಂದರ್ಭದಲ್ಲಿ ಉದ್ಯಾವರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧಾಕಷ್ಣ ಶ್ರೀಯಾನ್, ಗ್ರಾಮ ಪಂಚಾಯತ್ ಸದಸ್ಯರಾದ ಯೋಗೀಶ್ ಕೋಟ್ಯಾನ್, ದಿವಾಕರ ಬೊಳ್ಜೆ, ಫ್ರೀಡಾ ಡಿಸೋಜ, ಗಿರೀಶ್ ಸುವರ್ಣ, ಜುಡಿತ್ ಪಿರೇರಾ, ವನಿತಾ ಶೆಟ್ಟಿ, ಗುಡ್ಡೆಯಂಗಡಿ ಫ್ರೆಂಡ್ಸ್ ಪ್ರಮುಖರಾದ ಗಿರೀಶ್ ಕುಮಾರ್, ಲಕ್ಷ್ಮಣ ಸಂಪಿಗೆನಗರ, ರೋಯ್ಸ್ ಫೆರ್ನಾಂಡಿಸ್, ಸತೀಶ್ ಬೀರಪ್ಪಾಡಿ, ಕಿಶೋರ್, ಉದಯ, ಸುಧಾಕರ ಮತ್ತಿತ್ತರು ಉಪಸ್ಥಿತರಿದ್ದರು.
ಗುಡ್ಡೆಯಂಗಡಿ ಫ್ರೆಂಡ್ಸ್ ಅಧ್ಯಕ್ಷ ಸಚಿನ್ ಸಾಲ್ಯಾನ್ ಸ್ವಾಗತಿಸಿದರು. ಕಾರ್ಯಕ್ರಮದ ಸಂಚಾಲಕ ರಿಯಾಝ್ ಪಳ್ಳಿ ವಂದಿಸಿದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರೂಪಿಸಿದರು.
ಕಾಪು : ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರದ ಕಂದಾಯ ಸಚಿವರ ಭೇಟಿ

Posted On: 29-10-2022 08:29PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವರು ಮತ್ತು ಶಿರಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಪತ್ನಿ ಶಾಲಿನಿತೈ ವಿಖೆ ಪಾಟೀಲ್ ಇವರು ಜೀರ್ಣೋದ್ಧಾರದ ಮುಂಬೈ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿಯವರೊಂದಿಗೆ ಭೇಟಿ ನೀಡಿದರು.

ಶ್ರೀ ದೇವಿಯ ಸನ್ನಿದಾನದಲ್ಲಿ ಜೀರ್ಣೋದ್ಧಾರ ಸಮಿತಿ ಮತ್ತು ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ಪ್ರಾರ್ಥಿಸಿ ಶ್ರೀದೇವಿಯ ಅನುಗ್ರಹ ಪ್ರಸಾದವನ್ನು ನೀಡಲಾಯಿತು.
ನಂತರ ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಶ್ರೀ ಕೆ. ವಾಸುದೇವ ಶೆಟ್ಟಿಯವರು ಭರದಿಂದ ಸಾಗುತ್ತಿರುವ ಜೀರ್ಣೋದ್ಧಾರ ಕಾಮಗಾರಿಯ ಬಗ್ಗೆ ಮಾಹಿತಿ ನೀಡಿದರು. ದಕ್ಷಿಣ ಭಾರತದಲ್ಲಿಯೇ ವಿಶಿಷ್ಟ ರೀತಿಯಲ್ಲಿ ಇಲ್ಕಲ್ ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ದೇಗುಲದ ಬಗ್ಗೆ ಸಂತೋಷ ವ್ಯಕ್ತಪಡಿಸಿ, ಮಹಾರಾಷ್ಟ್ರದ ಹಾಗೂ ಶಿರಡಿಯ ಭಕ್ತರಿಗೂ ಮಾರಿಯಮ್ಮನ ದೇಗುಲ ನಿರ್ಮಾಣದ ಸುದ್ದಿಯನ್ನು ತಲುಪಿಸುತ್ತೇನೆ ಎಂದರು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ರಮೇಶ್ ಹೆಗ್ಡೆ ಕಲ್ಯಾ, ಆರ್ಥಿಕ ಸಮಿತಿಯ ಸಿದ್ಧಿಧಾತ್ರಿ ತಂಡದ ಸಂಚಾಲಕರಾದ ಸುಲೋಚನಾ ಕೆ ಸುವರ್ಣ, ದೇವಳದ ಸಿಬ್ಬಂದಿಗಳಾದ ಗೋವರ್ಧನ್ ಸೇರಿಗಾರ್ ಮತ್ತು ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.
ಕಾಪು : ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

Posted On: 29-10-2022 05:23PM
ಕಾಪು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ಜನ ಸಂಕಲ್ಪ ಸಮಾವೇಶ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು.
ಶಕ್ತಿಕೇಂದ್ರ ಉಸ್ತುವಾರಿಗಳ ಜವಾಬ್ದಾರಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ವಿವರಿಸಿ ಪ್ರತೀ ಬೂತ್ ಗಳಲ್ಲಿ ಇರುವ ಫಲಾನುಭವಿಗಳನ್ನು ಸಂಪರ್ಕಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ಕರೆ ನೀಡಿದರು.
ಶಾಸಕರಾದ ಲಾಲಾಜಿ ಆರ್ ಮೆಂಡನ್, ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವಿವಿಧ ಶಕ್ತಿಕೇಂದ್ರಗಳ ಜವಾಬ್ದಾರಿ ಹೊಂದಿರುವ ಪದಾಧಿಕಾರಿಗಳು ಹಾಗೂ ವಿವಿಧ ಪಂಚಾಯತ್ ಅಧ್ಯಕ್ಷರುಗಳು, ಉಪಾಧ್ಯಕ್ಷರುಗಳು ಉಪಸ್ಥಿತರಿದ್ದರು.
ಹೆಜಮಾಡಿ : ಬಂದರು ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಲಾಲಾಜಿ ಮೆಂಡನ್

Posted On: 29-10-2022 04:43PM
ಹೆಜಮಾಡಿ :ಇಲ್ಲಿನ 181 ಕೋಟಿ ರೂಗಳ ಮೊತ್ತದಲ್ಲಿ 70 ಎಕ್ರೆ ಪ್ರದೇಶದಲ್ಲಿ ಬಂದರು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಬಂದರು ಸಮಿತಿ, ಸ್ಥಳೀಯರೊಂದಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಸ್ಥಳೀಯರಿಗೆ ಇರುವ ಗೊಂದಲವನ್ನು ಶಾಸಕರು ಬಗೆಹರಿಸಿದರು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಗಣೇಶ್, ಸಹಾಯಕ ನಿರ್ದೇಶಕರು ದಿವಾಕರ್ ಖಾರ್ವಿ, ಬಂದರು ಹಾಗೂ ಮೀನುಗಾರಿಕೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಬಂದರು ಸಮಿತಿ ಅಧ್ಯಕ್ಷ ಸದಾಶಿವ ಕೋಟ್ಯಾನ್, ಕಾರ್ಯದರ್ಶಿ ವಿಜಯ ಎಸ್ ಬಂಗೇರ, ಪ್ರಮುಖರಾದ ವಿನೋದ್ ಕೋಟ್ಯಾನ್, ಹರಿಶ್ಚಂದ್ರ ಮೆಂಡನ್, ಎಕನಾಥ ಕರ್ಕೇರ, ರವಿ ಕುಂದರ್, ಶರಣ್ ಹೆಜಮಾಡಿ, ಲಲಿತ್ ಕುಮಾರ್, ಅರುಣ್ ಕುಮಾರ್, ರಘುವೀರ್ ಸುವರ್ಣ, ಜನಾರ್ಧನ ಕೋಟ್ಯಾನ್, ರೋಷನ್ ಕುಂದರ್, ಶೈಲೇಶ್ ಕುಂದರ್, ಭರತ್ ಕಾಂಚನ್, ಶೇಖರ್ ಕೋಟ್ಯಾನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ನೂತನ ಗೃಹ ರಕ್ಷಕ ದಳ ಪದಾಧಿಕಾರಿಗಳ ಕಚೇರಿ ಉದ್ಘಾಟನೆ

Posted On: 28-10-2022 11:33PM
ಕಾಪು : ಗೃಹ ರಕ್ಷಕ ದಳ ಕಾಪು ಘಟಕದ ಪದಾಧಿಕಾರಿಗಳ ನೂತನ ಕಚೇರಿಯನ್ನು ಉಡುಪಿ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ ಶೆಟ್ಟಿ ಉದ್ಘಾಟಿಸಿದರು.
ಈ ಸಂದರ್ಭ ಮಾತನಾಡಿದ ಅವರು ಗೃಹ ರಕ್ಷಕ ದಳದ ಕಚೇರಿಯು ಈ ಹಿಂದೆ ಇದ್ದ ಕಚೇರಿಯಿಂದ ನೂತನ ಕಚೇರಿಗೆ ಸ್ಥಳಾಂತರವಾಗಿದೆ. ಇದಕ್ಕೆ ಸಹಕರಿಸಿದ ಶಾಸಕರು, ಪಂಚಾಯತ್ ಹಾಗೂ ಪುರಸಭೆಯ ಸರ್ವರಿಗೂ ಕೃತಜ್ಞತೆಗಳನ್ನು ಹೇಳಿದರು.
ಉಡುಪಿ ಜಿಲ್ಲಾ ಡೆಪ್ಯುಟಿ ಕಮಾಂಡೆಂಟ್ ರಮೇಶ್ ಮಾತನಾಡಿ ನಾಲ್ಕು ವರ್ಷಗಳ ಹಿಂದೆ ಕಾಪುವಿನಲ್ಲಿ ಗೃಹರಕ್ಷಕ ದಳದ ಕಚೇರಿ ಉದ್ಘಾಟನೆಯಾಗಿತ್ತು. ಇದೀಗ ನೂತನ ಕಚೇರಿಯ ಸದುಪಯೋಗ ಎಲ್ಲಾ ಗೃಹರಕ್ಷಕರು ಪಡೆಯುವಂತಾಗಲಿ ಎಂದರು.
ಈ ಸಂದರ್ಭ ಕಾಪು ಘಟಕಾಧಿಕಾರಿ ಲಕ್ಷೀನಾರಾಯಣ ರಾವ್, ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪುವಿನಿಂದ ಮೂಲ್ಕಿವರೆಗೆ - ರಾಮ ನಾಮ ಸಂಕೀರ್ತನಾ ಪಾದಯಾತ್ರೆ

Posted On: 28-10-2022 03:53PM
ಕಾಪು : ರಾಮ ನಾಮ ಸಂಕೀರ್ತನಾ ಪಾದಯಾತ್ರೆ ಯು ಅಕ್ಟೋಬರ್ 30, ಆದಿತ್ಯವಾರದಂದು ಕಾಪು ಶ್ರೀ ವೆಂಕಟರಮಣ ದೇವಳದಿಂದ ಬೆಳಿಗ್ಗೆ ಗಂಟೆ 5:30 ಕ್ಕೆ ಪ್ರಾರಂಭಗೊಂಡು, ಹಳೇ ಮಾರಿಯಮ್ಮ ದೇವಳ ಭೇಟಿಯಾಗಿ, ಪಡುಬಿದ್ರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ, ಹೆಜಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಳ ಭೇಟಿಯಾಗಿ ತದನಂತರ ಹೆಜಮಾಡಿ ಟೋಲ್ ಗೇಟ್ ನಿಂದ ಹೊರೆಕಾಣಿಕೆ ಸಹಿತ ಮೂಲ್ಕಿ ಶ್ರೀ ವೆಂಕಟರಮಣ ದೇವಳ ತಲುಪಿ ರಾಮ ನಾಮ ಸಂಕೀರ್ತನ ಪಾದ ಯಾತ್ರೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಶ್ರೀ ವೆಂಕಟರಮಣ ದೇವಳದಲ್ಲಿ ಪ್ರಾತಃ ಜಾಗರ ಪೂಜೆ ನಂತರ ಸಾಮೂಹಿಕ ಪ್ರಾರ್ಥನೆ, ಉಪಹಾರ, ಸಂಕೀರ್ತನ ಯಾತ್ರೆ ಆರಂಭ. ಹಳೇ ಮಾರಿಯಮ್ಮ ದೇವಳ ಭೇಟಿ, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಭೇಟಿಯಾಗಿ ವಿಶ್ರಾಂತಿ, ಉಪಹಾರ, ಹೆಜಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಳ ಭೇಟಿ , ವಿಶ್ರಾಂತಿ ನಂತರ ಮೂಲ್ಕಿ ಶ್ರೀ ವೆಂಕಟರಮಣ ದೇವಳ ತಲುಪಲಿದೆ.
ಅದಮಾರು : ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು : ಕೋಟಿ ಕಂಠ ಗಾಯನ

Posted On: 28-10-2022 03:25PM
ಅದಮಾರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದಾದ್ಯಾಂತ ಆಯೋಜಿಸಲಾದ 67ನೇ ಕರ್ನಾಟಕ ರಾಜ್ಯೋತ್ಸವ ದ ಅಂಗವಾಗಿ ನನ್ನ ನಾಡು - ನನ್ನ ಹಾಡು ಸಮೂಹ ಗೀತೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಅದಮಾರಿನಲ್ಲಿ ನಡೆಯಿತು.

ಉಚ್ಚಾರ ಸ್ಪಷ್ಟತೆಯೊಂದಿಗೆ ಬರೆದಂತೆ ಓದುವ ಹಾಗೂ ಓದಿದಂತೆ ಬರೆಯಲ್ಪಡುವ ಭಾಷೆ ಕನ್ನಡ. ನಾಡು ನುಡಿಯ ಬಗ್ಗೆ ಅಭಿಮಾನವನ್ನು ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದಾರೆ. ಇವುಗಳನ್ನು ಹಾಡುವುದರಿಂದ ಮತ್ತು ಆಲಿಸುವುದರಿಂದ ನಮ್ಮಲ್ಲಿ ನಾಡು ನುಡಿಯ ಬಗೆಗಿರುವ ಅಭಿಮಾನ ಹೆಚ್ಚಾಗುತ್ತದೆ. ಈ ದೃಷ್ಟಿಯಿಂದ ಈ ಗೀತೆಗಳು ಕನ್ನಡದ ಶಕ್ತಿ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕಲಿಯಲು ಹಲವು ಭಾಷೆಗಳಿದ್ದರೂ, ವ್ಯವಹರಿಸಲು ಮಾತೃ ಭಾಷೆಯೇ ಇರಲಿ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಂ. ರಾಮಕೃಷ್ಣ ಪೈಯವರು ನುಡಿದರು.

ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ರೀಕಾಂತ್ ರಾವ್ರವರು ಸಂಕಲ್ಪ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ನಾಯಕ್ ಮತ್ತು ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನಿಶ್ಮಿತಾ ಶೆಟ್ಟಿ, ಸಂಸ್ಥೆಯ ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜೈ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಕನ್ನಡದ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು. ಸಂಸ್ಕೃತ ಉಪನ್ಯಾಸಕರಾದ ಡಾ. ಜಯಶಂಕರ್ ಕಂಗಣ್ಣಾರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಸಂಜೀವ ನಾಯ್ಕ್ ರವರು ವಂದಿಸಿದರು.