Updated News From Kaup

ಪಡುಬಿದ್ರಿ : ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ; ಬೈಕ್ ರ‌್ಯಾಲಿ

Posted On: 11-12-2022 06:33PM

ಪಡುಬಿದ್ರಿ : ಇಲ್ಲಿನ ಪೊಲೀಸ್ ಠಾಣೆ, ರೋಟರಿ ಕ್ಲಬ್ ಪಡುಬಿದ್ರಿ, ರೋಟರಿ ಸಮುದಾಯದಳ ಪಡುಬಿದ್ರಿ, ಇನ್ನರ್‌ವೀಲ್ ಕ್ಲಬ್ ಪಡುಬಿದ್ರಿ ಜಂಟಿ ಸಹಯೋಗದೊಂದಿಗೆ ರಸ್ತೆ ಸುರಕ್ಷತೆ ಹಾಗೂ ಅಪರಾಧ ತಡೆ ಮಾಸ ಜಾಗೃತಿ ಕಾರ್ಯಕ್ರಮದ ಅಂಗವಾಗಿ ನಡೆದ ಬೈಕ್ ರ್ಯಾಲಿಗೆ ಆದಿತ್ಯವಾರ ಪಡುಬಿದ್ರಿ ಪೇಟೆಯಲ್ಲಿ ಕಾಪು ವೃತ್ತನಿರೀಕ್ಷಕರಾದ ಕೆ.ಸಿ. ಪೂವಯ್ಯ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ರಸ್ತೆಯಲ್ಲಿ ವಾಹನ ಚಲಾಯಿಸುವವರು ತಮ್ಮ ಸುರಕ್ಷತೆಯ ಜೊತೆಗೆ ವಾಹನಗಳ ದಾಖಲೆಯನ್ನು ಇಟ್ಟುಕೊಳ್ಳಬೇಕಾಗಿದೆ. ಇದರ ಬಗೆಗಿನ ಜಾಗೃತಿ ಅನಿವಾರ್ಯ ಎಂದರು.

ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ಕನೇ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

Posted On: 10-12-2022 11:36AM

ಕಟಪಾಡಿ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾಪು ತಾಲೂಕು ಘಟಕದ 4 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಎಸ್ ವಿ ಎಸ್ ಪದವಿ ಪೂರ್ವ ಕಾಲೇಜ್ ಇಲ್ಲಿ ಶನಿವಾರ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ಸಮ್ಮೇಳನದ ಸರ್ವಾಧ್ಯಕ್ಷರಾದ ಬಹುಭಾಷಾ ಸಾಹಿತಿ ಕ್ಯಾಥ್ರಿನ್ ರೊಡ್ರಿಗಸ್ ಸಭಾಧ್ಯಕ್ಷತೆ ವಹಿಸಿದ್ದರು.

ಡಿಸೆಂಬರ್ 11 : ಕಂಬಳಕಟ್ಟ ಮನೆಯ ಸಿರಿ ಕುಮಾರ ದೈವಳ ಕಂಬಳ

Posted On: 09-12-2022 11:28PM

ಉಡುಪಿ : ಜಿಲ್ಲೆಯ ಇತಿಹಾಸ ಪ್ರಸಿದ್ಧ ಸಿರಿ ಕುಮಾರ ದೈವಳ ಕಂಬಳವು ಡಿಸೆಂಬರ್ 11, ಭಾನುವಾರದಂದು ಮಧ್ಯಾಹ್ನ ಗಂಟೆ 2ರಿಂದ ಆದಿ ಉಡುಪಿಯ ಕೊಡವೂರು ಕಂಬಳಕಟ್ಟೆ ಮನೆಯಲ್ಲಿ ಜರಗಲಿದೆ ಕಂಬಳ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಂಬಳ ಮನೆಯ ಜಗದೀಶ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಪನ್ಯಾಸಕ ಸಂತೋಷ ಆಳ್ವಗೆ ಪಿಎಚ್ ಡಿ ಪದವಿ

Posted On: 09-12-2022 11:20PM

ಕಟೀಲು : ಇಲ್ಲಿನ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಹಾಗೂ ಕಟೀಲು ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿ ಸಂತೋಷ ಆಳ್ವ ಅವರು ನಾಟಕ ಪರಂಪರೆ ಹಾಗೂ ಪ್ರಯೋಗ ವಿಷಯದಲ್ಲಿ ಡಾ. ಮಾಧವ ಪೆರಾಜೆ ಇವರ ಮಾರ್ಗದರ್ಶನದಲ್ಲಿ ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇಲ್ಲಿಗೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್ ಡಿ ಪದವಿಯನ್ನು ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಪ್ರದಾನಿಸಿದರು.

ಕುತ್ಯಾರು : ಆನೆಗುಂದಿ ಸೂರ್ಯ ಚೈತನ್ಯ ಹೈಸ್ಕೂಲ್ ನಲ್ಲಿ ಜೆಇ ಲಸಿಕಾ ಅಭಿಯಾನ ಉದ್ಘಾಟನೆ

Posted On: 09-12-2022 10:55PM

ಕುತ್ಯಾರು : ಕಾಪು ತಾಲೂಕಿನ ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್ ಟ್ರಸ್ಟ್ ನ ಅಧೀನ ಸಂಸ್ಥೆಯಾದ ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲಿನಲ್ಲಿ ಜಪಾನೀಸ್ ಎನ್ ಸೆಫಲೈಟಿಸ್ (ಜೆಇ) ಲಸಿಕಾ ಅಭಿಯಾನದ ಉದ್ಘಾಟನೆಯನ್ನು ಶಿರ್ವ ಪ್ರಾಥಮಿಕ ಅರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಸುಬ್ರಮಣ್ಯ ರಾವ್ ನೆರವೇರಿಸಿದರು.

ಪಡುಬಿದ್ರಿ : ಕಾಪು ಶಾಸಕರಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಕೊಠಡಿಗಳ ಶಿಲಾನ್ಯಾಸ

Posted On: 09-12-2022 10:49PM

ಪಡುಬಿದ್ರಿ : ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಮತ್ತು ನೂತನ ಶೌಚಾಲಯ ಉದ್ಘಾಟನೆಯನ್ನು ಶುಕ್ರವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ನೆರವೇರಿಸಿದರು.

ಕಾಪು : ಕೊಪ್ಪಲಂಗಡಿಯಲ್ಲಿ ಪಾದಚಾರಿ ಮಹಿಳೆಗೆ ಶಾಲಾ ವಾಹನ ಡಿಕ್ಕಿ ; ಸ್ಥಳದಲ್ಲೇ ಸಾವು

Posted On: 09-12-2022 08:44PM

ಕಾಪು : ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ.

ಮಂಗಳೂರು : ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ದಯಾನಂದ ಕುಕ್ಕಾಜೆ

Posted On: 08-12-2022 10:52PM

ಮಂಗಳೂರು : ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣ ಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರು ’ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಸ್ಕತ್ ನ ಪ್ರತಿಷ್ಠಿತ ಮಲ್ಟಿ ಟೇಕ್ ಮಾಲಕರಿಂದ ಕಾಪು ಹೊಸ ಮಾರಿಗುಡಿ ದೇವಳಕ್ಕೆ 500 ಶಿಲಾಸೇವೆ ಸಮರ್ಪಣೆ

Posted On: 08-12-2022 09:20PM

ಕಾಪು : ಮಸ್ಕತ್ ಮಲ್ಟಿ ಟೆಕ್ ಮಾಲಕರಾದ ದಿವಾಕರ್ ಶೆಟ್ಟಿ "ನರ್ಸಿ ಸದನ" ಮಲ್ಲಾರ್ ಇವರು ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 500 ಶಿಲಾಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಣೆ ಮಾಡಿ ಮಾರಿಯಮ್ಮನ ಸಂಪೂರ್ಣ ಅನುಗ್ರಹಕ್ಕೆ ಪಾತ್ರರಾದರು.

ರೋಟರಿ ಶಂಕರಪುರದ ವತಿಯಿಂದ ಕ್ರಿಸ್ಮಸ್ ಆಚರಣೆ ; ಕುಟುಂಬ ಸಹ ಮಿಲನ ಕಾರ್ಯಕ್ರಮ

Posted On: 07-12-2022 09:25PM

ಶಂಕರಪುರ : ರೋಟರಿ ಶಂಕರಪುರದ ವತಿಯಿಂದ ಕ್ರಿಸ್ಮಸ್ ಆಚರಣೆ ಹಾಗೂ ಕುಟುಂಬ ಸಹ ಮಿಲನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸಿಎಸ್ಐ ಇಮ್ಯಾನುವೆಲ್ ದೇವಾಲಯ ಪಾದೂರು ಇಲ್ಲಿನ ಧರ್ಮ ಗುರುಗಳಾದ ರೆ| ರೇಶ್ಮ ರವಿಕಲಾ ಅಮ್ಮನ್ನ ಮಾತನಾಡಿ ನಾವು ಇತರರ ಬಾಳಿಗೆ ಬೆಳಕಾಗಿ ಈ ಸಮಾಜದ ಒಳಿತಿಗಾಗಿ ಶ್ರಮಿಸುವಂತಾಗಬೇಕು ಮಾನವೀಯ ನೆಲೆಯಲ್ಲಿ ಜೀವಿಸಿ ನಾವು ಸಮಾಜಕ್ಕೆ ಶ್ರೇಷ್ಠ ಉಡುಗೊರೆಯಾಗಬೇಕು ಎಂಬ ಸಂದೇಶವನ್ನು ನೀಡಿ ನೂತನ ವರ್ಷಕ್ಕೆ ಶುಭ ಕೋರಿದರು.