Updated News From Kaup
ಭೃಷ್ಟಾಚಾರದ ಸರಕಾರದಿಂದ ಟೋಲ್ ದರೋಡೆ : ರಮೀಜ್ ಹುಸೇನ್

Posted On: 27-11-2022 12:50PM
ಪಡುಬಿದ್ರಿ : ಅತ್ಯಂತ ಕಠೋರ ಹೃದಯದ ಜನ ವಿರೋಧಿ ಸರಕಾರದ ನಿರ್ಧಾರ ಜನರ ಬದುಕಿನಲ್ಲಿ ಚೆಲ್ಲಾಟ ನಡೆಸುತ್ತಿದೆ. ಸುರತ್ಕಲ್ ಟೋಲ್ ಅನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕರನ್ನು ಸೇರಿಸಿ ಟೋಲ್ ಹೋರಾಟ ಸಮಿತಿ ಅನಿರ್ಧಿಷ್ಟ ಅವಧಿ ಹಗಲು ರಾತ್ರಿ ಧರಣಿಯನ್ನು ಹಮ್ಮಿಕೊಂಡಿರುವ ಪರಿಣಾಮ ಸುರತ್ಕಲ್ ಟೋಲ್ ನ್ನು ರದ್ದು ಮಾಡುತ್ತೇವೆ ಅನ್ನುತ್ತಿದ್ದ ಜನಪ್ರತಿನಿಧಿಗಳು , ಇಂದು ವಿಲೀನದ ನೆಪ ಹೇಳಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ನಲ್ಲಿ ಪೂರ್ತಿಯಾಗಿ ಸೇರಿಸಿ ಹಣ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಈ ದುಪ್ಟಟು ದರವನ್ನು ಜನ ಸಾಮಾನ್ಯರು ಕಟ್ಟುವಂತಹ ಪರಿಸ್ಥಿತಿ ಒದಗಿ ಬಂದಿದೆ. ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದಡೆಯಾದರೆ, ಈಗ ಟೋಲ್ ಮೂಲಕ ಜನರ ಸುಲಿಗೆ ನಡೆಸಿ ಜನ ಸಾಮಾನ್ಯನ ಬದುಕಿಗೆ ಕೊಳ್ಳಿ ದೀಪ ಇಡಲು ಸರಕಾರ ತಯಾರಿ ನಡೆಸುತಿದೆ. ಇದೇ ರೀತಿ ಮುಂದುವರಿದಲ್ಲಿ ಅರ್ಥಿಕವಾಗಿ ಕುಗ್ಗಿರುವ ಜನರ ಬದುಕು ಕಂಗಲಾಗುವ ಪರಿಸ್ಥಿತಿಗೆ ಬರುವಂತೆ ಈ ಸರಕಾರ ಮಾಡುತಿದೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಆಗ್ರಹಿಸಿದ್ದಾರೆ.
ಈಗಾಗಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಷ್ಕೃತ ದರದಲ್ಲಿ ಡಿಸೆಂಬರ್ 1 ರಿಂದ ಹೆಜಮಾಡಿ ಟೋಲ್ ನಲ್ಲಿ ದುಪ್ಪಟ್ಟು ಟೋಲ್ ವಸೂಲಿ ನಡೆಯಲಿದೆ. ಇದರಿಂದ ಹೆಜಮಾಡಿ, ಪಡುಬಿದ್ರಿ ಆಸುಪಾಸಿನ ಜನರು ಕೇವಲ 6 ಕಿ.ಮಿ ದೂರದ ಮುಲ್ಕಿ ಗೆ ಕಾರಿನಲ್ಲಿ ಹೋಗಿ ಬರಬೇಕಾದರೆ ಹೆಜಮಾಡಿ ಟೋಲ್ ನಲ್ಲಿ 155 ರೂಪಾಯಿಯನ್ನು ಕಟ್ಟಬೇಕಾಗಿದೆ ಇಂತಹ ಹಗಲು ದರೋಡೆಯನ್ನು ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಇದು ಡಬಲ್ ಇಂಜಿನ್ ಸರಕಾರದ ಡಬಲ್ ಲೂಟಿ, ಇಷ್ಟಾದರೂ ಇನ್ನೂ ಬಾಯಿ ಮುಚ್ಚಿ ಕುಳಿತಿರುವ ಸರಕಾರ ನಡೆಸುತ್ತಿರುವ ಸ್ಥಳೀಯ ಶಾಸಕರು, ಸಂಸದರು ಧ್ವನಿ ಎತ್ತದಿರುವುದು ವಿಪರ್ಯಾಸವೇ ಸರಿ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ದುಪ್ಪಟ್ಟು ದರವನ್ನು ರದ್ದು ಗೊಳಿಸದ್ದಿದಲ್ಲಿ ಯುವ ಕಾಂಗ್ರೆಸ್ ಜನ ವಿರೋಧಿ ನಿರ್ಧಾರದ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆಗೆ ನಡೆಸಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Posted On: 27-11-2022 12:48PM
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು.
ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ ಎಲ್ಲರಿಗೂ ನ್ಯಾಯ ಸಿಗುವಂತೆ ರಚಿಸಲಾಗಿದೆ. ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮೀತಿಯ ಅಧ್ಯಕ್ಷರನ್ನಾಗಿ ನೇಮಿಸಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಅವರ ಆಶಯಕ್ಕೆ ಅನುಗುಣವಾಗಿ ದೇಶದ ಸಮಗ್ರತೆಯನ್ನು ಗೌರವಿಸಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬೇಕೆಂದು ಕರೆ ನೀಡಿದರು.
ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್, ಶಿವಕುಮಾರ್, ಉಮೇಶ್, ಅಕ್ಷತಾ ಜೈನ್, ರಾಮಕೃಷ್ಣ ಹೆಗಡೆ, ಡಾ ಆದಂ ಶೇಕ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್ ಗೌಡ ಉಪಸ್ಥಿತರಿದ್ದರು.
ಡಿಸೆಂಬರ್ 16 : ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ

Posted On: 25-11-2022 10:59PM
ಕಾಪು : ಇಲ್ಲಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಡಿಸೆಂಬರ್ 16ರಂದು ಜರಗಲಿದ್ದು ಆ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಬಿಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ದೇವಿ ದರ್ಶನ, ಮಧ್ಯಾಹ್ನ 1.30 ಕ್ಕೆ ಅನ್ನ ಪ್ರಸಾದ ಹಾಗೂ ಸಂಜೆ 7 ಗಂಟೆಗೆ ಭಜನೆ, ರಾತ್ರಿ 10 ಗಂಟೆಗೆ ಮಹಾಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಬಿಂಬ ವಿಸರ್ಜನೆ ನಡೆಯಲಿದೆ.
ಕಾಪು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಮಚಂದ್ರ ಆಚಾರ್ಯರಿಗೆ ಪತ್ರಕರ್ತರ ಅಭಿನಂದನೆ

Posted On: 25-11-2022 09:45PM
ಕಾಪು : ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯರವರನ್ನು ದಂಪತಿ ಸಮೇತವಾಗಿ ಕಾಪು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಮ್ಮೂರ ಮಂದಾರ ಹೋಟೆಲ್ ಸಭಾಭವನದಲ್ಲಿ ಸನ್ಮಾನಿಸಲಾಯಿತು.
ಈ ಸಂದರ್ಭ ರಾಮಚಂದ್ರ ಆಚಾರ್ಯ ಮಾತನಾಡಿ, ಪತ್ರಕರ್ತರು ಯಾವುದೇ ಪೂರ್ವಗ್ರಹ, ರಾಗದ್ವೇಷ ಇಲ್ಲದೆ ವಸ್ತು ನಿಷ್ಠ ವರದಿ ಮಾಡಬೇಕು. ಜನರಿಗೆ ಆ ಸುದ್ದಿಯಿಂದ ಲಾಭ ಆಗುವಂತಿರಬೇಕು. ಆಗ ಸಮಾಜಕ್ಕೆ ಮತ್ತು ಸುದ್ದಿ ಮಾಡಿದ ಪತ್ರಕರ್ತರಿಗೂ ಒಳಿತು ಎಂದರು.
ವೇದಿಕೆಯಲ್ಲಿ ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುರೇಶ್ ಎರ್ಮಾಳು, ಕಾರ್ಯದರ್ಶಿ ಪುಂಡಲಿಕ ಮರಾಠೆ, ಕೋಶಾಧಿಕಾರಿ ಅಬ್ದುಲ್ ಹಮೀದ್ ಪಡುಬಿದ್ರಿ, ನಮ್ಮೂರ ಮಂದಾರ ಹೋಟೆಲ್ ಮಾಲೀಕ ವಾದಿರಾಜ ನಡಿಮನೆ, ರಾಮಚಂದ್ರ ಆಚಾರ್ಯರವರ ಪತ್ನಿ ರಾಜಲಕ್ಷ್ಮಿ ಆಚಾರ್ಯ ಜಿಲ್ಲಾ ಸಮಿತಿಯ ಸದಸ್ಯರು ಹಾಗೂ ಪತ್ರಕರ್ತರ ಉಪಸ್ಥಿತರಿದ್ದರು.
ಪತ್ರಕರ್ತ ಸುರೇಶ್ ಎರ್ಮಾಳು ಸ್ವಾಗತಿಸಿದರು. ರಾಕೇಶ್ ಕುಂಜೂರು ನಿರೂಪಿಸಿದರು. ಪುಂಡಲಿಕ ಮರಾಠೆ ವಂದಿಸಿದರು.
ನವಂಬರ್ 27: ಕುಲಾಲ ಚಾವಡಿ ವಾಟ್ಸಪ್ ಬಳಗ ವತಿಯಿಂದ ಕುಲಾಲ ಚಾವಡಿ ಸಂಭ್ರಮ 2022

Posted On: 25-11-2022 07:50PM
ಕಾರ್ಕಳ : ಸಾಮಾಜಿಕ ಜಾಲತಾಣದ ವಾಟ್ಸಪ್ ಗ್ರೂಪ್ ಮುಖೇನ ಕುಲಾಲ ಸಮುದಾಯದ ಹಲವಾರು ಕುಟುಂಬದಲ್ಲಿ ಮಂದಹಾಸ ಮೂಡಿದ ತಂಡದ ಸಮಸ್ತ ಸದಸ್ಯರಿಂದ ಕುಲಾಲ ಚಾವಡಿ ಸಂಭ್ರಮ ಕಾರ್ಯಕ್ರಮ ನವಂಬರ್ 27 ರಂದು ಕಾರ್ಕಳ ಮಿಯ್ಯಾರು ರಾಮರಗುತ್ತು ನದಿಯ ತೀರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕುಲಾಲ ಚಾವಡಿ ಅಡ್ಮಿನ್ ಬಳಗದ ಸಂತೋಷ್ ಕುಲಾಲ್ ಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದಿಂದ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ

Posted On: 25-11-2022 06:28PM
ಕಾಪು : ಯಾವುದೇ ಪ್ರದೇಶದ ಸಾಂಸ್ಕೃತಿಕ ಹಿನ್ನೆಲೆಯ ಚಲನಚಿತ್ರ ವೀಕ್ಷಿಸಿದಾಗ ಅಲ್ಲಿಯ ಚಿತ್ರಣ ನಮ್ಮ ಮುಂದೆ ಹೇಗೆ ಬರುತ್ತದೆಯೋ ಹಾಗೆ ಸಾಹಿತ್ಯದ ಓದುವಿಕೆಯಿಂದ ಕವಿ, ಲೇಖಕರ ಓದು, ಹಿನ್ನೆಲೆ, ಪರಿಸರ ಇತ್ಯಾದಿ ತಿಳಿಯಲು ಸಾಧ್ಯ. ಬರೆಯಲು ಪ್ರತಿಯಬ್ಬರಿಗೂ ಸಾಧ್ಯ. ಪ್ರಯತ್ನ ಪಡದೆ ಯಾವುದೇ ಕಾರ್ಯ ಸಾಧ್ಯವಾಗದು. ಯಾವುದೇ ವಿಷಯವನ್ನು ಬರೆದು, ಓದಿದಾಗ ನಮ್ಮಲ್ಲಿ ಉಳಿಯಲು ಸಾಧ್ಯ. ನಮ್ಮನ್ನು ನಾವು ಪ್ರಯೋಗಕ್ಕೆ ಒಡ್ಡಿದಾಗ ಯಾವುದೇ ಕಾರ್ಯ ಸಾಧ್ಯ. ಮೊದಲ ಅಕ್ಷರದಿಂದ ಯಾರು ಸಾಹಿತಿ ಆಗಿಲ್ಲ. ಓದು, ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಬಹುದು. ಸಾಹಿತ್ಯದ ಬಗೆಗಿನ ಒಲವನ್ನು ನಾವೆಲ್ಲರೂ ಬೆಳೆಸೋಣ ಎಂದು ಕಟಪಾಡಿಯ ತೃಷಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಹೇಳಿದರು.

ಅವರು ಕಾಪು ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ ಆಯೋಜಿಸಿದ್ದ ಕನ್ನಡ ಮಾಸಾಚರಣೆ - ನವೆಂಬರ್ ತಿಂಗಳ ಸಡಗರ 'ಸಂಪದ - ೨೦೨೨' ಕಾರ್ಯಕ್ರಮದಲ್ಲಿ 'ಶಾಲೆಯತ್ತ ಸಾಹಿತ್ಯ' ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಪುಂಡಲಿಕ ಮರಾಠೆ ವಹಿಸಿದ್ದರು. ಈ ಸಂದರ್ಭ ಕಾಪು ತಾಲೂಕು ಘಟಕದ ಕಾರ್ಯದರ್ಶಿ ನೀಲಾನಂದ ನಾಯಕ್, ಕ.ಸಾ.ಪ ಜಿಲ್ಲಾ ಸಮಿತಿಯ ಸದಸ್ಯ ಮಧುಕರ್ ಎಸ್, ಕಾಪು ತಾಲೂಕು ಕ.ಸಾ.ಪ ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ದಂಡತೀರ್ಥ ಸಂಸ್ಥೆಯ ಪ್ರಾಂಶುಪಾಲೆ ಮರೀನಾ ಸರೋಜಾ ಸೋನ್ಸ್, ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಯ ಶಿಕ್ಷಕರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ.ಸಾ.ಪ ಕಾಪು ತಾಲೂಕು ಘಟಕದ ಕಾರ್ಯದರ್ಶಿ ನೀಲಾನಂದ ನಾಯಕ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕ.ಸಾ.ಪ ಕಾಪು ತಾಲೂಕು ಘಟಕದ ಖಜಾಂಚಿ ವಿದ್ಯಾಧರ್ ಪುರಾಣಿಕ್ ನಿರೂಪಿಸಿದರು. ಕ.ಸಾ.ಪ ಜಿಲ್ಲಾ ಸಮಿತಿಯ ಸದಸ್ಯ ಮಧುಕರ್ ಎಸ್ ವಂದಿಸಿದರು.
ಕ್ರಿಕೆಟ್ : ಕಟಪಾಡಿಯ ರಿತೇಶ್ ಹೆಚ್ ಸುವರ್ಣ ರಾಜ್ಯಮಟ್ಟಕ್ಕೆ ಆಯ್ಕೆ

Posted On: 24-11-2022 11:12PM
ಕಟಪಾಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನವೆಂಬರ್ 16 ಮತ್ತು 17 ರಂದು ಹಾಸನ ಜಿಲ್ಲೆಯ ತಾಲೂಕು ಕ್ರೀಡಾಂಗಣ ಚನ್ನರಾಯಪಟ್ಟಣದಲ್ಲಿ ನಡೆಯಿತು.
ಸೈಂಟ್ ಜಾನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶಂಕರಪುರದ ವಿದ್ಯಾರ್ಥಿ ಕಟಪಾಡಿ ಅಂಬಾಡಿ ಹರೀಶ್ ದಯಾವತಿಯವರ ಪುತ್ರ ರಿತೇಶ್ ಹೆಚ್ ಸುವರ್ಣ ಉಡುಪಿ ಜಿಲ್ಲೆಯ ಕ್ರಿಕೆಟ್ ತಂಡದಲ್ಲಿ ಆಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ.
ಕಟಪಾಡಿಯ ಕ್ರಿಕೆಟ್ ಕೋಚ್ ಉದಯ್ ಹಾಗೂ ಪ್ರದೀಪ್ ಅವರಲ್ಲಿ ತರಬೇತಿ ಪಡೆದಿರುತ್ತಾನೆ.
ಪಲಿಮಾರು : ಹೊೖಗೆ ಫ್ರೆಂಡ್ಸ್ ವತಿಯಿಂದ ಹಾವು ನಾವು ಮತ್ತು ಪರಿಸರ ಜಾಗೃತಿ ಪ್ರಾತ್ಯಕ್ಷಿಕೆ

Posted On: 24-11-2022 06:34PM
ಪಲಿಮಾರು : ಇಲ್ಲಿನ ಹೊೖಗೆ ಫ್ರೆಂಡ್ಸ್ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ, ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್ ಉಡುಪಿ ಇವರಿಂದ 'ಹಾವು ನಾವು ಮತ್ತು ಪರಿಸರ' ಎಂಬ ವಿಷಯದ ಕುರಿತು ಜಾಗೃತಿ ಮೂಡಿಸುವ ಪ್ರಾತ್ಯಕ್ಷಿಕೆ ನಡೆಯಿತು.
ಜೀವಂತ ಹಾವುಗಳನ್ನು ತಂದು, ಅವುಗಳ ಪರಿಚಯವನ್ನು ಮಾಡಿಸಿದರು. ಹಾವುಗಳು ಕಾರಣವಿಲ್ಲದೆ ಯಾರಿಗೂ ಕಚ್ಚುವುದಿಲ್ಲ ವಿದ್ಯಾರ್ಥಿಗಳು ಹಾವುಗಳನ್ನು ಕಂಡು ಭಯಪಡಬೇಕಾಗಿಲ್ಲ ಎಂಬುದಾಗಿ, ತಮ್ಮ ಅನುಭವಗಳನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಗ್ರೆಟ್ಟಾ ಮೊರಾಸ್ ಅಧ್ಯಕ್ಷತೆ ವಹಿಸಿದ್ದರು. ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು , ಉಪಾಧ್ಯಕ್ಷರಾದ ಸೌಮ್ಯಲತ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರ್, ಹೊೖಗೆ ಫ್ರೆಂಡ್ಸ್ ಅಧ್ಯಕ್ಷರಾದ ರಾಘವೇಂದ್ರ ಜೆ ಸುವರ್ಣ, ಉಪಾಧ್ಯಕ್ಷ ರಿತೇಶ್ ದೇವಾಡಿಗ, ಪಂಚಾಯತ್ ಸದಸ್ಯರಾದ ಸುಮಂಗಳ ದೇವಾಡಿಗ, ರಾಯೆಶ್ವರ ಪೈ , ಸುಜಾತಾ ,ಪ್ರೌಢಶಾಲಾ ವಿಭಾಗದ ಹಿರಿಯ ಸಹಶಿಕ್ಷಕಿ ಸುನಿತಾ, ಟೆರಾಕೋಟ ಕಲಾವಿದ ವೆಂಕಿ ಪಲಿಮಾರ್ ಉಪಸ್ಥಿತರಿದ್ದರು.
ಉಪನ್ಯಾಸಕಿ ವಿಜಯಲಕ್ಷ್ಮಿ ಸ್ವಾಗತಿಸಿದರು. ಸಹಶಿಕ್ಷಕಿ ರಶ್ಮಿತಾ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಸಹಶಿಕ್ಷಕಿ ಸುನಿತಾ ವಂದಿಸಿದರು.
ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ (ಮೈಸ್) ಕಾಪುವಿನಲ್ಲಿ ಶುಭಾರಂಭ

Posted On: 24-11-2022 05:19PM
ಕಾಪು : ಮೂವತ್ತಮೂರು ವರ್ಷಗಳ ಸಾರ್ಥಕ ಸೇವೆ ನೀಡಿದ ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಕಂಪ್ಯೂಟರ್ ಎಜುಕೇಶನ್ ಇದೀಗ ಕಾಪುವಿನ ಹೊಸ ಮಾರಿಗುಡಿ ಸಮೀಪದ ಹಿರಾ ಕಾಂಪ್ಲೆಕ್ಸ್ ಎರಡನೇ ಮಹಡಿಯಲ್ಲಿ ಶುಭಾರಂಭಗೊಂಡಿದೆ.
ಬೇಸಿಕ್ ಆಫ್ ಐಟಿ, ವಿಂಡೋಸ್, ವರ್ಡ್, ಎಕ್ಸೆಲ್, ಪವರ್ ಪಾಯಿಂಟ್, ಇಂಟರ್ನೆಟ್ ಆಂಡ್ ಎಸೆನ್ಶಿಯಲ್, ಬೇಸಿಕ್ ಆಫ್ ಹಾರ್ಡ್ವೇರ್, ಮಾನ್ಯತೆ ಸರ್ಟಿಫಿಕೇಟ್ ಆಧಾರಿತ ಡಿಪ್ಲೋಮಾ ಇನ್ ಐಟಿ, ಇ - ಆಫೀಸ್, ಐಟಿ/ಡಿಸಿಎ, ನುಡಿ ತಂತ್ರಾಂಶ, ಅಡ್ವಾನ್ಸ್ಡ್ ಎಕ್ಸೆಲ್, ಟ್ಯಾಲಿ ವಿದ್ ಜಿಎಸ್ಟಿ/ವ್ಯಾಟ್, ವರ್ಕ್ ಪ್ಲೇಸ್ ಸ್ಕಿಲ್ಸ್ ಇತ್ಯಾದಿ ಕಲಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9380571699 9880035284
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಳಕ್ಕೆ ಭೇಟಿ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

Posted On: 23-11-2022 07:00PM
ಉಚ್ಚಿಲ : ಇತ್ತೀಚೆಗೆ ನವೀಕೃತಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರರವರು ಬುಧವಾರ ಸಂಜೆ ಭೇಟಿ ನೀಡಿ ಶ್ರೀ ಮಹಾಲಕ್ಷ್ಮಿಯ ದರ್ಶನ ಪಡೆದರು.
ದೇವಳದ ವತಿಯಿಂದ ಅವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಖ್ಯ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ ಹಾಗೂ ವಿಷ್ಣುಮೂರ್ತಿ ಉಪಾಧ್ಯಾಯರವರು ಶ್ರೀದೇವಿಗೆ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.
ದೇವಾಲಯದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರು ದೇವಳದ ವತಿಯಿಂದ ಗೃಹ ಸಚಿವರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿದರು.
ಈ ಸಂದರ್ಭ ಕಾಪು ಶಾಸಕ ಲಾಲಾಜಿ ಆರ್ ಮೆಂಡನ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, ಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ವಾಸುದೇವ ಸಾಲಿಯನ್, ಮಹಾಜನ ಸಂಘದ ಮಹಿಳಾ ಘಟಕದ ಉಪಾಧ್ಯಕ್ಷೆ ಜಾನಕಿ ಲೀಲಾಧರ್, ನಾರಾಯಣ ಕರ್ಕೇರಾ, ದಿನೇಶ್ ಎರ್ಮಾಳು, ದಿನೇಶ್ ಮೂಳೂರು, ಮೋಹನ್ ಬಂಗೇರ, ದೇವಳದ ಪ್ರಧಾನ ಕಾರ್ಯನಿರ್ವಾಹಕ ಸತೀಶ್ ಅಮೀನ್ ಮಟ್ಟು, ಕಾಪು ಬಿಜೆಪಿ ಅಧ್ಯಕ್ಷ ಶ್ರೀಕಾಂತ್ ನಾಯಕ್, ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ. ಸಿ ಪೂವಯ್ಯ, ಪಡುಬಿದ್ರಿ ಠಾಣಾಧಿಕಾರಿ ಪುರುಷೋತ್ತಮ್ ಮತ್ತಿತರರು ಉಪಸ್ಥಿತರಿದ್ದರು.