Updated News From Kaup
ಕಾಪು : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ; 30 ವರ್ಷದ ಸಂಭ್ರಮ ; ಹೊಸ ಕಟ್ಟಡದ ಶಿಲಾನ್ಯಾಸ

Posted On: 22-11-2022 10:39AM
ಕಾಪು : ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2022-23 ಸಾಲಿನ ನೂತನ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಕಾಲೇಜಿನ 30 ವರ್ಷದ ಸಂಭ್ರಮ ಹಾಗು ಹೊಸ ಕಟ್ಟಡದ ಶಿಲಾನ್ಯಾಸ ಸೋಮವಾರ ನಡೆಯಿತು.

ವಿದ್ಯಾರ್ಥಿ ಸಂಘದ ನೂತನ ನಾಯಕನಾಗಿ ಗೌರವ್ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದನು.

ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ತುಳು ಚಿತ್ರರಂಗದ ನವರಸ ನಟ ಭೊಜರಾಜ್ ವಾಮಂಜೂರು, ಕಾಲೇಜಿನ ಪ್ರಾಂಶುಪಾಲರಾದ ಸ್ಟೀವನ್ ಕ್ವಾಡ್ರಸ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರೊಷನಿ ಯಶ್ವಂತ್, ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶಿರ್ವ : ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿಯಲ್ಲಿ ಪ್ರತಿಭಾ ದಿನಾಚರಣೆ

Posted On: 21-11-2022 05:29PM
ಶಿರ್ವ : ಕುತ್ಯಾರಿನಲ್ಲಿರುವ ಆನೆಗುಂದಿ ಶ್ರೀ ಸರಸ್ವತಿ ಪೀಠದ ಸೂರ್ಯ ಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲ್ನಲ್ಲಿ ನವೆಂಬರ್ 19ರಂದು ಪ್ರತಿಭಾ ದಿನಾಚರಣೆ ಆಚರಿಸಲಾಯಿತು.

ಖ್ಯಾತ ಗಾಯಕಿ ಹಾಗೂ ಕಲಾವಿದೆ ಕಾವ್ಯಶ್ರೀ ಆಚಾರ್ಯ ಕೊಡವೂರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅವರು ಭಾವಪೂರ್ಣವಾದ ಮಧುರ ಗೀತೆಗಳೊಂದಿಗೆ ಮಕ್ಕಳನ್ನು ರಂಜಿಸಿದರು.

ಆನೆಗುಂದಿ ಶ್ರೀ ಸರಸ್ವತಿ ಎಜುಕೇಶನ್ ಟ್ರಸ್ಟ್ (ಆಸೆಟ್) ಅಧ್ಯಕ್ಷ ಮೋಹನ್ ಕುಮಾರ್ ಬೆಳ್ಳೂರು ಅಧ್ಯಕ್ಷತೆ ವಹಿಸಿದ್ದರು. ಗೌರವ ಸಲಹೆಗಾರ ವಿದ್ವಾನ್ ಶಂಭುದಾಸ್ ಗುರೂಜಿ, ಪ್ರಾಂಶುಪಾಲ ಗುರುದತ್ತ ಸೋಮಯಾಜಿ, ವಿಜಯಲಕ್ಷ್ಮಿ ತಂತ್ರಿ, ಸಹಾಯಕ ಪ್ರಾಂಶುಪಾಲೆ ಸಂಗೀತಾ ಹಾಗೂ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.

ಶಿಕ್ಷಕರ ಸಮಿತಿ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ನಂತರ ನಡೆದ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪೋಷಕರು ಮತ್ತು ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಂಡರು. ವಿದ್ಯಾರ್ಥಿಗಳು ನೃತ್ಯ, ಗಾಯನ ಮತ್ತು ಕಿರುನಾಟಕ ಕಾರ್ಯಕ್ರಮಗಳೊಂದಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಂಚಿನಡ್ಕ ಸತ್ಯದೇವಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿ : ಕುಣಿತ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 19-11-2022 04:16PM
ಪಡುಬಿದ್ರಿ : ಕಂಚಿನಡ್ಕ ಸತ್ಯದೇವಿ ಅಯ್ಯಪ್ಪಸ್ವಾಮಿ ಸೇವಾ ಸಮಿತಿಯ 28 ವರ್ಷದ ಮಹಾಪೂಜೆಯ ಅಂಗವಾಗಿ ಆಯೋಜಿಸಿರುವ ಅಂತರ್ ಜಿಲ್ಲಾ ಮಟ್ಟದ ಕುಣಿತ ಭಜನಾ ಸ್ಪರ್ಧೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶನಿವಾರ ನಡೆಯಿತು.

ವಿಶೇಷವಾಗಿ ಅಯ್ಯಪ್ಪ ಮಾಲಾಧಾರಿಗಳ ಶಿಬಿರದಲ್ಲಿ ನಡೆದ ಕ್ಷೇತ್ರಶುದ್ಧಿ,ಗಣಹೋಮ ಸಂದರ್ಭದಲ್ಲಿ ಪಡುಬಿದ್ರಿ ಬ್ರಹ್ಮಸ್ಥಾನದ ನಾಗಪಾತ್ರಿ ಗೌರವಾನ್ವಿತ ಸುರೇಶ್ ಭಟ್ ಅವರ ದಿವ್ಯ ಉಪಸ್ಥಿತಿಯಲ್ಲಿ ದೀಪ ಬೆಳಗಿಸಿ ಆಶೀರ್ವದಿಸಿದರು.
ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯತ್ರಿ ಪ್ರಭು, ಕರ್ನಾಟಕ ರಾಜ್ಯ ಸರ್ಕಾರದ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನಿರ್ದೇಶಕ ಮಿಥುನ್.ಆರ್.ಹೆಗ್ಡೆ, ಪಡುಬಿದ್ರಿ ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗುರುರಾಜ್ ಪೂಜಾರಿ,ಕೊಂಕನಡ್ಪು ಕೋಡ್ದಬ್ಬು ದೈವಸ್ಥಾನ ಪ್ರ.ಅರ್ಚಕರಾದ ಬಾಬು ಮುಖಾರಿ, ಕಾಪು ಪ್ರಖಂಡ ವಿಹಿಂಪ ಮುಖಂಡರಾದ ರಾಜೇಂದ್ರ ಶೆಣೈ, ಹಿಂಜಾವೇ ಮುಖಂಡ ರಾಜೇಶ್ ಉಚ್ಚಿಲ,ಊರಿನ ಹಿರಿಯರಾದ ಸುಬ್ಬ ಕಂಚಿನಡ್ಕ, ಕೃಷ್ಣ ಗುರುಸ್ವಾಮಿ, ಸಮಿತಿಯ ಅಧ್ಯಕ್ಷ ಶಿವಪ್ಪ ಸಾಲ್ಯಾನ್ ಮೊದಲಾದವದರು ಉಪಸ್ಥಿತರಿದ್ದರು.
ಪಡುಬಿದ್ರಿ : ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನೂತನ ಶೀತಲೀಕೃತ ಶವಗಾರ ಉದ್ಘಾಟನೆ

Posted On: 19-11-2022 02:43PM
ಪಡುಬಿದ್ರಿ : 69ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಿಂದ ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕೊಡುಗೆಯಾಗಿ ನೀಡಿದ ಶೀತಲೀಕೃತ ಶವಗಾರವನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಪ್ರಥಮವಾಗಿ ನೂತನ ಶೀತಲಿಕೃತ ಘಟಕ ಚಾಲನೆಗೊಂಡಿದ್ದು ಉತ್ತಮ ಬೆಳವಣಿಯಾಗಿದ್ದು. ಅಮೃತಯೋಜನೆಯಡಿ ತನ್ನ ಶಿಫಾರಸ್ಸಿನ ಮೇರೆಗೆ 20 ಲಕ್ಷ ಅನುದಾನದಲ್ಲಿ ಶವಗಾರ ಕಟ್ಟಡ ನಿರ್ಮಾಣಗೊಂಡಿದ್ದು ಹಾಗೂ ನೂತನ ಶವಗಾರಕ್ಕೆ 5 ಲಕ್ಷ ಮೊತ್ತದ ಶೀತಲಿಕೃತ ಘಟಕವನ್ನು ಸಹಕಾರ ಸಪ್ತಾಹ ನಿಟ್ಟಿನಲ್ಲಿ ಕೊಡಮಾಡಿದ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಆಡಳಿತ ಮಂಡಳಿಗೆ ಧನ್ಯವಾದಗಳನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಪಡುಬಿದ್ರಿ ವ್ಯವಸಾಯಿಕ ಸೊಸೈಟಿ ಅಧ್ಯಕ್ಷರಾದ ವೈ. ಸುಧೀರ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ನಾಗಭೂಷಣ್ ಉಡುಪ, ತಾಲೂಕು ವೈದ್ಯಾಧಿಕಾರಿ ವಾಸುದೇವ್ ಉಪಾಧ್ಯಾಯ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ, ಮಹಾಲಕ್ಷ್ಮಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಯಶಪಾಲ್ ಸುವರ್ಣ, ಸೇವಾಭಾರತಿ ಬೆಳ್ತಂಗಡಿ ಅಧ್ಯಕ್ಷರಾದ ಕೆ ವಿನಾಯಕ್ ರಾವ್ , ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾಂಡುರಂಗ ಕೋಟ್ಯಾನ್, ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಪ್ರಭು, ಪಡುಬಿದ್ರಿ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜಶ್ರೀ ಕಿಣಿ, ಪಡುಬಿದ್ರಿ ಗಣಪತಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಕಾರ್ಯನಿರ್ವಹಣಾಧಿಕಾರಿ ನಿಶ್ಮಿತಾ ಪಿ ಎಚ್, ಸೊಸೈಟಿಯ ನಿರ್ದೇಶಕರು, ಸಿಬ್ಬಂದಿ ವರ್ಗ, ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾಪು : ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವ ಸಂಪನ್ನ

Posted On: 19-11-2022 01:47PM
ಕಾಪು : ತಾಲೂಕಿನ ಪಡು ಕುತ್ಯಾರು ಶ್ರೀ ದುರ್ಗಾಮಂದಿರದಲ್ಲಿ ವಾರ್ಷಿಕ ಮಹೋತ್ಸವವು ಆನೆಗುಂದಿ ಮಠದ ಪರಮ ಪೂಜ್ಯ ಜಗದ್ಗುರು ಅನಂತ ಶ್ರೀ ವಿಭೂಷಿತ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮಿಗಳ ಉಪಸ್ಥಿತಿಯಲ್ಲಿ ನವೆಂಬರ್ 18ರಂದು ಜರಗಿತು.
ಈ ಸಂದರ್ಭ ಕ್ಷೇತ್ರದ ದೇವರಿಗೆ ವಿಶೇಷ ಅಲಂಕಾರ ಪೂಜೆ ಮಾಡಲಾಗಿತ್ತು. ಶ್ರೀದೇವಿಯ ಮಹಾಪೂಜೆಯಲ್ಲಿ ನೂರಾರು ಭಕ್ತರು ಪಾಲ್ಗೊಂಡಿದ್ದು ಪ್ರಸಾದ ವಿತರಣೆ, ಅನ್ನ ಸಂತರ್ಪಣೆಯು ನಡೆಯಿತು.
ಮುಕ್ತೇಶ್ವರ ಪ್ರಕಾಶ ಎನ್ ಆಚಾರ್ಯ, ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಹರಿಚಂದ್ರ ಎಚ್ ಆಚಾರ್ಯ, ಕಾರ್ಯಾಧ್ಯಕ್ಷರಾದ ಕಾಪು ಜಯರಾಮ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾದ ಮಾಧವ ಎಸ್ ಆಚಾರ್ಯ, ಪದಾಧಿಕಾರಿಗಳು, ಸಮಾಜ ಬಾಂಧವರು ಉಪಸ್ಥಿತರಿದ್ದರು.
ಕಾಪು : ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾರಿಗೆ ಪ್ರಶಸ್ತಿ

Posted On: 18-11-2022 08:56PM
ಕಾಪು : ಸಾರ್ವಜನಿಕ ಗ್ರಂಥಾಲಯ ಇಲಾಖೆ ಬೆಂಗಳೂರು, ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯ ತುಮಕೂರು ಇವರಿಂದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಮತ್ತು ಸಿಬ್ಬಂದಿ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಶುಕ್ರವಾರ ತುಮಕೂರು ಜಿಲ್ಲೆಯ ತಿಪಟೂರಿನ ಕಲ್ಪತರು ಕಾಲೇಜು ಸಭಾಂಗಣದಲ್ಲಿ ಜರಗಿತು.
ಕಾಪು ದೇವಿಪ್ರಸಾದ್ ಗ್ರಂಥಾಲಯದ ಪೂರ್ಣಿಮಾ ಇವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಮಾರಂಭದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮತ್ತಿತರರು ಉಪಸ್ಥಿತರಿದ್ದರು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಂಗಣ್ಣು ಭೀತಿ ; ಸಮಸ್ಯೆಯಿದ್ದ ಮಕ್ಕಳಿಗೆ ಶಾಲೆಗೆ ಬರದಿರಲು ಸೂಚನೆ

Posted On: 17-11-2022 05:31PM
ಮಂಗಳೂರು : ಪ್ರಸ್ತುತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೆಲವಡೆ ಮಕ್ಕಳಿಗೆ ಕಣ್ಣಿನ ಸಾಂಕ್ರಾಮಿಕ ರೋಗವಾದ ಕೆಂಗಣ್ಣು (ಕೆಂಪು ಕಣ್ಣು) ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಮುಖ್ಯ ಆರೋಗ್ಯಾಧಿಕಾರಿಗಳ ಸೂಚನೆಯ ಮೇರೆಗೆ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.
ಅದರ ಪ್ರಕಾರ ಕೆಂಗಣ್ಣು ಸಾಂಕ್ರಾಮಿಕವಾಗಿದ್ದು ಮಕ್ಕಳಿಗೆ ಶೀಘ್ರವಾಗಿ ಹರಡುತ್ತದೆ. ಆದುದರಿಂದ ಈ ಕಾಯಿಲೆ ಬಂದ ಮಕ್ಕಳನ್ನು 5 ದಿನ ಶಾಲೆಗೆ ಬರದಂತೆ ತಡೆಯುವುದು ಹಾಗೂ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಪೋಷಕರಿಗೆ ಮನವರಿಕೆ ಮಾಡಿಕೊಡಲು ತಿಳಿಸಿದ್ದಾರೆ.
ಜೆಸಿಐ ಶಂಕರಪುರ ಜಾಸ್ಮಿನ್ : ಪದಪ್ರದಾನ ಸಮಾರಂಭ

Posted On: 17-11-2022 05:28PM
ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಇದರ 2022-23 ಪದಪ್ರದಾನ ಸಮಾರಂಭವು ಜೆಸಿಐ ಶಂಕರಪುರ ಸಭಾಭವನದಲ್ಲಿ ಜರುಗಿತು.
ಅಧ್ಯಕ್ಷರಾದ ಜಗದೀಶ್ ಅಮೀನ್ ನೂತನ ಅಧ್ಯಕ್ಷರಾದ ಮಾಲಿನಿ ಶೆಟ್ಟಿ ಇವರಿಗೆ ಅಧಿಕಾರ ಹಸ್ತಾಂತರ ಮಾಡಿದರು.
ನೂತನ ಕಾರ್ಯದರ್ಶಿಯಾಗಿ ಪ್ರವೀಣ್ ಪೂಜಾರಿ ನೂತನ ಜೆಸಿರೇಟ್ ಅಧ್ಯಕ್ಷರಾಗಿ ಜಯಶ್ರೀ ನವೀನ್ ಅಮೀನ್, ಜೆಜೆಸಿ ಅಧ್ಯಕ್ಷರಾಗಿ ಶಶಾಂಕ್ ಕುಲಾಲ್ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಗಿರಿಜಾ ಸರ್ಜಿಕಲ್ ಮಾಲಕರವಾದ ರವೀಂದ್ರ ಶೆಟ್ಟಿ, ವಲಯ ಅಧ್ಯಕ್ಷರಾದ ಪುರುಷೋತ್ತಮ ಶೆಟ್ಟಿ, ವಲಯ ಉಪಾಧ್ಯಕ್ಷರಾದ ಸುಧಾಕರ್ ಆಚಾರ್ಯ ಉಪಸ್ಥಿತರಿದ್ದರು. ಜಗದೀಶ್ ಅಮೀನ್ ಸ್ವಾಗತಿಸಿದರು. ಕಾರ್ಯದರ್ಶಿಯಾದ ಪ್ರವೀಣ್ ಪೂಜಾರಿ ವಂದಿಸಿದರು.
ನವೆಂಬರ್ 20 : ಬಿರುವೆರ್ ಕಾಪು ಸೇವಾ ಸಮಿತಿ - ಜ್ಞಾನ ದೀವಿಗೆ ; 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ

Posted On: 15-11-2022 10:52PM
ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ ನವೆಂಬರ್ 20, ಆದಿತ್ಯವಾರ ಅಪರಾಹ್ನ 2 ಗಂಟೆಗೆ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇಲ್ಲಿ ಜರಗಲಿದೆ.
ಕಾರ್ಯಕ್ರಮವನ್ನು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾದ ಪ್ರಭಾಕರ ಪೂಜಾರಿ ಉದ್ಘಾಟಿಸಲಿದ್ದು, ಬಿರುವೆರ್ ಕಾಪು ಸೇವಾ ಸಮಿತಿಯ ಉಪಾಧ್ಯಕ್ಷರಾದ ಸುಧಾಕರ್ ಸಾಲ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ನ್ಯಾಯವಾದಿ ಗಿರೀಶ್ ಎಸ್. ಪಿ ಭಾಗವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಓಮನ್ ಬಿಲ್ಲವಾಸ್ ನ ಉಪಾಧ್ಯಕ್ಷರಾದ ಸುಜಿತ್ ಅಂಚನ್ ಪಾಂಗಾಳ, ಮಸ್ಕತ್, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷರಾದ ವಿಕ್ರಂ ಕಾಪು, ಬಿರುವೆರ್ ಕಾಪು ಸೇವಾ ಸಮಿತಿಯ ಕಾನೂನು ಸಲಹೆಗಾರರು, ವಕೀಲರಾದ ಸಂಕಪ್ಪ ಅಮೀನ್ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪೆರ್ಣಂಕಿಲ ದೇವಳ ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ

Posted On: 15-11-2022 02:22PM
ಉಡುಪಿ : ಪೆರ್ಣಂಕಿಲ ಶ್ರೀಮಹಾಲಿಂಗೇಶ್ವರ ಮತ್ತು ಮಹಾಗಣಪತಿ ದೇವಳದ ಜೀರ್ಣೊದ್ಧಾರ ಅಂಗವಾಗಿ 10ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿದ್ದು ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಜೀರ್ಣೋದ್ಧಾರ ಪೂರ್ವಭಾವಿ ಸಭೆಯು ಸೋಮವಾರ ನಡೆಯಿತು. ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ತ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜೀರ್ಣೋದ್ಧಾರ ಕಚೇರಿ ಉದ್ಘಾಟಿಸಿ, ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿ, ಬರಿಗೈಯಲ್ಲಿ ಬಂದ ನಾವು ಭಗವಂತ ಕೊಟ್ಟದ್ದನ್ನು ಮರಳಿ ಸಮರ್ಪಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ. ದೇವರು ಕೊಟ್ಟ ಭತ್ತವನ್ನು ದೇವರು ಕೊಟ್ಟ ಭೂಮಿಯಲ್ಲಿ ಬಿತ್ತಿ, ದೇವರು ಕೊಟ್ಟ ನೀರೆರೆದು ಭತ್ತ ಉತ್ಪಾದಿಸಿ ದೇವರಿಗೆ ಸಮರ್ಪಿಸುವುದರ ಹಿಂದೆ ದೇವರ ಅನುಗ್ರಹ ಸ್ಮರಣೆ ಮುಖ್ಯ. ನಮ್ಮದಲ್ಲದ್ದು ನಮ್ಮದಾಗದು, ಎಲ್ಲವೂ ಭಗವಂತನಿಗೆ ಸೇರಿದ್ದು , ತನ್ನದಲ್ಲದ ಸೊತ್ತು ಉಣ್ಣುವವ ಹೇಗೆ ಕಳ್ಳ, ದರೋಡೆಕೋರ ಎನಿಸಿಕೊಳ್ಳುತ್ತಾನೋ ಹಾಗೆಯೇ ದೇವರ ಸೊತ್ತಿಗೆ ಕೈ ಹಾಕಿದರೆ ನಾವು ಕಳ್ಳರಾಗುತ್ತೇವೆ. ದೇವರು ಕೊಟ್ಟದ್ದನ್ನು ನಾವು ಅನುಭವಿಸುತ್ತೇವೆ ಎನ್ನುವ ಅರ್ಪಣೆ, ಕೃತಜ್ಞತಾ ಮನೋಭಾವ ನಮಗಿದ್ದರೆ ಅದು ದೇವರ ಪೂಜೆಯಾಗಬಲ್ಲದು ಎಂದರು.

ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ಕೊಡಿಬೆಟ್ಟು ಗ್ರಾಮಕ್ಕೆ 23ಕೋಟಿ ರೂ., ಪೆರ್ಣಂಕಿಲ ವ್ಯಾಪ್ತಿಗೆ 8ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿ ಪ್ರಗತಿಯಲ್ಲಿದ್ದು ಪೆರ್ಣಂಕಿಲ ದೇವಳ ಪರಿಸರದ ರಸ್ತೆಗೆ 35ಲಕ್ಷ ರೂ. ಸಹಿತ ವಿವಿಧ ಯೋಜನೆಗಳ ಪ್ರಸ್ತಾವನೆಗೆ ಅನುಗುಣವಾಗಿ ನೆರವಿನ ಭರವಸೆ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ ಮಾತನಾಡಿ, ದೇವಳದ ಜೀರ್ಣೋದ್ಧಾರ ಕಾರ್ಯವು ಭಕ್ತರು ಭಕ್ತಿಯಿಂದ ತಮ್ಮ ಕೊಡುಗೆ ನೀಡಲು ಸಕಾಲ ಎಂದರು. ತಮ್ಮ ತಾಯಿಯ ಹೆಸರಲ್ಲಿ ದೇವಳಕ್ಕೆ ಐದು ಲಕ್ಷ ರೂ. ದೇಣಿಗೆ ಘೋಷಿಸಿದರು.

ದೇವಳ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿದ್ವಾನ್ ಪೆರ್ಣಂಕಿಲ ಹರಿದಾಸ್ ಭಟ್ ಮಾತನಾಡಿ, ಊರ ದೇವಳದ ಜೀರ್ಣೋದ್ಧಾರವಾದರೆ ಮನೆ, ವ್ಯಕ್ತಿಯ ಜೀರ್ಣೋದ್ಧಾರವಾದಂತೆ. ನಿಮ್ಮೊಳಗಿನ ಭಕ್ತಿ, ಶಕ್ತಿಯ ನೆರವಿನಿಂದ ಊರ ಸಮಸ್ಯೆಗಳು ಪರಿಹಾರವಾಗಲಿ, ಏಕ ಮನಸ್ಸಿನ ಸಹಕಾರದಿಂದ ದೇವಳ ಜೀರ್ಣೋದ್ಧಾರವಾಗಲಿ ಎಂದು ಹಾರೈಸಿದರು. ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪೆರ್ಣಂಕಿಲ ಶ್ರೀಶ ನಾಯಕ್ ಪ್ರಾಸ್ತಾವಿಕ ಮಾತನಾಡಿ, ಮೂರ್ನಾಲ್ಕು ದಶಕಗಳಿಂದ ದೇವಳದ ಜೀರ್ಣೋದ್ಧಾರ ಕನಸಾಗಿದ್ದು ಪೇಜಾವರ ಮಠದಿಂದ ನೀಡಿದ 1.5ಕೋಟಿ ರೂ. ಠೇವಣಿಯಾಗಿಟ್ಟು ಭಕ್ತರಿಂದ ಸ್ವಯಂಪ್ರೇರಿತ ದೇಣಿಗೆ ನಿರೀಕ್ಷಿಸಲಾಗಿದೆ. ದೇವಳದ ಪಂಚಾಂಗ ನಿರ್ಮಾಣಕ್ಕೆ 9ಗ್ರಾಮಗಳ ಭಕ್ತರ ಕರಸೇವೆಗೆ ಉದ್ದೇಶಿಸಲಾಗಿದೆ ಎಂದರು. ಪೇಜಾವರ ಮಠದ ದಿವಾನ ಸುಬ್ರಹ್ಮಣ್ಯ ಭಟ್ ಉಪಸ್ಥಿತರಿದ್ದರು.
ಭಕ್ತರ ಪರವಾಗಿ ಕುದಿ ವಸಂತ ಶೆಟ್ಟಿ ಮಾತನಾಡಿದರು. ಸಂಘಟನಾ ಕಾರ್ಯದರ್ಶಿ ಸದಾನಂದ ಪ್ರಭು ಸ್ವಾಗತಿಸಿದರು. ಹರೀಶ್ ಸರಳಾಯ ನಿರೂಪಿಸಿದರು. ಉಮೇಶ್ ನಾಯಕ್ ವಂದಿಸಿದರು.