Updated News From Kaup

ಜೆಸಿಐ ಶಂಕರಪುರ ಜಾಸ್ಮಿನ್ - ಕ್ರಿಸ್ಮಸ್ ಸಂಭ್ರಮಾಚರಣೆ

Posted On: 06-12-2022 09:35PM

ಶಂಕರಪುರ : ಜೆಸಿಐ ಶಂಕರಪುರ ಜಾಸ್ಮಿನ್ ಇದರ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಜೆಸಿ ಭವನ ಶಂಕರಪುರದಲ್ಲಿ ಆಚರಣೆ ಮಾಡಲಾಯಿತು.

ಶ್ರೀ ದೂಮಾವತಿ ಯುವ ಸಮಿತಿ ಕಾಪು : ಅಧ್ಯಕ್ಷರಾಗಿ ಐತಪ್ಪ ಎಸ್ ಕೋಟಿಯನ್ ಆಯ್ಕೆ

Posted On: 06-12-2022 09:28PM

ಕಾಪು : ಶ್ರೀ ದೂಮಾವತಿ ಯುವ ಸಮಿತಿ ಕಾಪು ಇದರ ಮಹಾಸಭೆಯು ಶ್ರೀ ದೂಮಾವತಿ ದೈವಸ್ಥಾನದ ವಠಾರದಲ್ಲಿ ರಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಶಿರ್ವ : ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ ಸೊರ್ಪು ಆಯ್ಕೆ

Posted On: 06-12-2022 09:21PM

ಶಿರ್ವ : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ (ರಿ.) ಶಿರ್ವ ಇದರ ವಿಶೇಷ ಮಹಾ ಸಭೆ ಅಧ್ಯಕ್ಷರಾದ ದೇವಿಪ್ರಸಾದ್ ಪೂಜಾರಿ ಮಾಣಿಬೆಟ್ಟು ಅಧ್ಯಕ್ಷತೆಯಲ್ಲಿ ಇಂದು ಜರಗಿತು. ಸಭೆಯಲ್ಲಿ 2023 ರಿಂದ 2025 ಮೂರು ವರ್ಷದ ನೂತನ ಆಡಳಿತ ಮಂಡಳಿ ರಚನೆ ಸರ್ವ ಸದಸ್ಯರ ಬಹುಮತದೊಂದಿಗೆ ನಿರ್ಣಯಿಸಲಾಯಿತು.

ಕಾರ್ಕಳ : ನೆತ್ತೆರ್ ಉಂಬೊಲಿ - ರಕ್ತದಾನ ಶಿಬಿರ

Posted On: 06-12-2022 05:48PM

ಕಾರ್ಕಳ : ಜೈ ತುಳುನಾಡ್(ರಿ.) ಮುಂದಾಳತ್ವದಲ್ಲಿ ರಕ್ತನಿಧಿ, ಜಿಲ್ಲಾಸ್ಪತ್ರೆ, ಉಡುಪಿ ಮತ್ತು ಹಲವು ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಕಳದ ರೋಟರಿ ಬಾಲಭವನದಲ್ಲಿ 'ನೆತ್ತೆರ್ ಉಂಬೊಲಿ' ರಕ್ತದಾನ ಶಿಬಿರ ಡಿಸೆಂಬರ್ 4 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯೋಗದೀಪಿಕ ವಿದ್ಯಾಪೀಠ, ಪಲಿಮಾರು ಇಲ್ಲಿನ ಪ್ರಾಂಶುಪಾಲರೂ, ಕಾರ್ಕಳದ ಶ್ರೀ ಅನಂತಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಕಾ. ವೇ. ಶಂಕರನಾರಾಯಣ ಭಟ್ ಮಾತನಾಡಿ ಭಾಷೆ ಮತ್ತು ಲಿಪಿ ಎರಡನ್ನೂ ಹೊಂದಿರುವ ಭಾಷೆಗಳಲ್ಲಿ ತುಳು ಒಂದಾಗಿದ್ದು, ಅದರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಎಲ್ಲಾ ತುಳುವರು ಈ ಬಗ್ಗೆ ಹೆಮ್ಮೆ ಪಡಬೇಕು. ಮುನ್ನೂರು ವರ್ಷಗಳ ಹಿಂದಕ್ಕೆ ಉಡುಪಿ, ಮಂಗಳೂರು, ಕಾಸರಗೋಡು ಮತ್ತು ಉತ್ತರ ಕನ್ನಡದ ಕೆಲ ಪ್ರದೇಶಗಳಲ್ಲಿ ಭಾಷೆ ಎಂದರೆ ತುಳು, ಲಿಪಿ ಎಂದರೆ ತುಳು ಲಿಪಿ ಎಂದಾಗಿತ್ತು. ತುಳುನಾಡಿನ ಎಲ್ಲಾ ದೇವಸ್ಥಾನಗಳಲ್ಲಿಯೂ ಪೂಜಾ ಕೈಂಕರ್ಯಗಳ ವಿದ್ಯಾಭ್ಯಾಸವನ್ನು ಪಡೆಯುವವರು ತುಳು ಲಿಪಿಯನ್ನು ಕಲಿಯಬೇಕಾಗಿತ್ತು ಮತ್ತು ಅದನ್ನು ಪ್ರತಿದಿನ ದೇವಸ್ಥಾನಗಳಲ್ಲಿ ಬಳಸಬೇಕಾಗಿತ್ತು, ಈಗಲೂ ಈ ಪದ್ಧತಿ ಬಹಳಷ್ಟು ಕಡೆ ಚಾಲ್ತಿಯಲ್ಲಿದೆ ಎಂದರು.

ಮುಂಡ್ಕೂರಿನ ಕುಲಾಲ ಸಂಘದಲ್ಲಿ ಕುಲಾಲ ಕ್ರೀಡಾಕೂಟ ಸಮಾಪನ

Posted On: 06-12-2022 05:37PM

ಮುಂಡ್ಕೂರು : ಕುಲಾಲ ಸಂಘ (ರಿ.) ನಾನಿಲ್ತಾರ್ ಮುಂಡ್ಕೂರು ಇದರ ಯುವ ವೇದಿಕೆ ಆಶ್ರಯದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾದ ದಿ. ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ ಅಯೋಜಿಸಲಾಗಿತ್ತು.

ಕಾರ್ಕಳ : ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಪಾಲಕರ-ಶಿಕ್ಷಕರ ಸಭೆ

Posted On: 05-12-2022 10:15PM

ಕಾರ್ಕಳ : ಇಲ್ಲಿನ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ 2022-23 ನೇ ಸಾಲಿನ ಪಾಲಕರ-ಶಿಕ್ಷಕರ ಸಭೆ ದಿನಾಂಕ ಡಿಸೆಂಬರ್ 4 ರಂದು ನಡೆಯಿತು.

ಪಡುಬಿದ್ರಿ : ರೋಟರಿ ಕ್ಲಬ್ ವತಿಯಿಂದ ಪರೀಕ್ಷಾ ಪೂರ್ವ ತಯಾರಿ ಸಿದ್ಧತೆ ; ವಿದ್ಯಾರ್ಥಿ ನಾಯಕತ್ವ - ಮಾಹಿತಿ ಕಾರ್ಯಕ್ರಮ

Posted On: 05-12-2022 09:38PM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಇದರ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತಯಾರಿ ಸಿದ್ಧತೆ ಮತ್ತು ವಿದ್ಯಾರ್ಥಿ ನಾಯಕತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ಗಣಪತಿ ಪ್ರೌಢ ಶಾಲೆ ಪಡುಬಿದ್ರಿ ಇಲ್ಲಿ ಜರಗಿತು.

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ

Posted On: 05-12-2022 06:41PM

ಶಿರ್ವ : ಪ್ರಸ್ತುತ ತಾಂತ್ರಿಕ ಮತ್ತು ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕಾರ್ಯಗಳು ಎಲ್ಲಾ ಕ್ಷೇತ್ರಗಳಲ್ಲಿ ಸುಲಭವಾಗಿ ನಡೆಯಲು ಮತ್ತು ಅತ್ಯಂತ ವೇಗವಾಗಿ ಪರಿಣಾಮಕಾರಿಯಾಗಿ ಮಾನವನ ಕೆಲಸವನ್ನು ಕಂಪ್ಯೂಟರ್ ಬಳಕೆಯಿಂದ ಸಾಗುತ್ತಿದೆ. ಇಂದಿನ ಯುವಕರಲ್ಲಿ ಕಲಿಕೆಯ ಜೊತೆಗೆ ಕಂಪ್ಯೂಟರ್ ಜ್ಞಾನ ಪಡೆದುಕೊಳ್ಳುವ ಮೂಲಕ ಮುಂದೆ ತಮ್ಮ ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ರೀತಿಯ ಬೆಳವಣಿಗೆ ಕಾಣಿಸಬಹುದು. ಕಲಿಕೆಗೆ ವಯಸ್ಸು ಮುಖ್ಯ ಅಲ್ಲ ಮನಸು ಮುಖ್ಯ ಎಂದು ಇಲ್ಲಿನ ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಗಣಕ ವಿಜ್ಞಾನ ವಿಭಾಗ ಹಾಗೂ ಕಂಪ್ಯೂಟರ್ ಸಾಕ್ಷರತ ಕೋಶ ಜಂಟಿಯಾಗಿ ಏರ್ಪಡಿಸಿದ ವಿಶ್ವ ಕಂಪ್ಯೂಟರ್ ಸಾಕ್ಷರತೆ ದಿನಾಚರಣೆ ದಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜಿನ ಕಚೇರಿ ದ್ವಿತೀಯ ದರ್ಜೆಯ ಸಹಾಯಕಿ ಜಾಕ್ಲೈನ್ ​​ಮೆಂಡೋನ್ಸಾ ರವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ನೀಡಿ ತಮ್ಮ ಅನುಭವವನ್ನು ವ್ಯಕ್ತಪಡಿಸಿದರು.

ಕಾಪು ಶ್ರೀ ವೆಂಕಟರಮಣ ದೇವಾಲಯದಲ್ಲಿ ಮುಕ್ಕೋಟಿ ದ್ವಾದಶಿ ಸಂಭ್ರಮ

Posted On: 05-12-2022 10:33AM

ಕಾಪು : ಧನುರ್ಮಾಸದಲ್ಲಿ ಬರುವ ಶುದ್ಧ ದ್ವಾದಶಿಯಂದು ಮುಕ್ಕೋಟಿ ದ್ವಾದಶಿ ಆಚರಿಸುತ್ತಾರೆ. ಏಕಾದಶಿಯ ಮರು ದಿನ ದ್ವಾದಶಿ. ಮೂವತ್ತ್ಮೂರು ಕೋಟಿ ದೇವತೆಗಳು ಅಂದು ತಿರುಮಲದ ದೇವಾಲಯ ಪಕ್ಕದಲ್ಲಿರುವ ಸ್ವಾಮಿ ಪುಷ್ಕರಣಿಯಲ್ಲಿ ತೀರ್ಥ ಸ್ನಾನ ಮಾಡುತ್ತಾರೆ. ಆದ್ದರಿಂದ ಮುಕ್ಕೋಟಿ ದ್ವಾದಶಿ ಎಂಬ ಹೆಸರಿದೆ. ಹಲವಾರು ದೇವಾಲಯಗಳಲ್ಲಿ ಇದನ್ನು ಆಚರಿಸುತ್ತಾರೆ.

ಜಿ. ಜಗದೀಶ್ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ

Posted On: 04-12-2022 06:50PM

ಉಚ್ಚಿಲ : ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಜಿ. ಜಗದೀಶ್ ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ದೇವರದರ್ಶನ ಪಡೆದರು.