Updated News From Kaup
ಕಾರ್ಕಳ : ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ
Posted On: 12 Jan 2023, 06:51 PM
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನದ ಆಚರಣೆ ನಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಹಿಂದಿ ಉಪನ್ಯಾಸಕರಾದ ವಿನಾಯಕ ಜೋಗ್ ವಿವೇಕಾನಂದರ ಚೈತನ್ಯ ಶಕ್ತಿ ಯುವ ಮನಸ್ಸುಗಳಲ್ಲಿ ಮೊಳೆಯಲ. ತನ್ಮೂಲಕ ದೇಶದ ಭವಿತವ್ಯವನ್ನು ,ಸುಭದ್ರ ಭಾರತದ ನಿರ್ಮಾಣ ಮಾಡಲು ಯುವ ಸಮುದಾಯ ಕಾರ್ಯಪ್ರವೃತ್ತವಾಗಲಿ ಎಂದು ಕರೆ ನೀಡಿದರು. ಸ್ವಾಮಿ ವಿವೇಕಾನಂದರ ತತ್ವಾದರ್ಶಗಳನ್ನು ನಾವೆಲ್ಲರೂ ಪಾಲಿಸೋಣ ಎಂದು ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ನುಡಿಯುತ್ತಾ ಇಂದಿನ ಕಾಲದಲ್ಲಿ ಯುವಕರೆಲ್ಲರೂ ಒಂದಾಗಿ ಜಗತ್ತಿನ ಪ್ರಮುಖ ಶಕ್ತಿಯಾಗಿ ಬೆಳೆಯಲಿ ಎಂದು ಹಾರೈಸಿದರು. ವಿದ್ಯಾರ್ಥಿನಿ ವಿಂಧ್ಯಾ ಹೆಗಡೆ ವಿವೇಕಾನಂದರ ಕುರಿತು ಮಾತನಾಡಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಉಮೇಶ್, ರಾಮಕೃಷ್ಣ ಹೆಗಡೆ, ರಾಘವೇಂದ್ರ ರಾವ್, ಗಿರೀಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರಕಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕುಮಾರಿ ಅನಘಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ದ.ಕ. ಜಿಲ್ಲಾಧ್ಯಕ್ಷರಾಗಿ ಪರಿಮಳ ಮಹೇಶ್ ರಾವ್ ಅಧಿಕಾರ ಸ್ವೀಕಾರ
Posted On: 10 Jan 2023, 11:08 PM
ಮಂಗಳೂರು : ವೃತ್ತಿಯಲ್ಲಿ ವಕೀಲೆ ಪ್ರವೃತ್ತಿಯಲ್ಲಿ ಕವಯತ್ರಿ ಮಕ್ಕಳ ಸಾಹಿತಿಯಾಗಿರುವ ಮಂಗಳೂರು ಮೂಲದ ಪರಿಮಳ ಮಹೇಶ್ ರಾವ್ ಇವರು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಅಧ್ಯಕ್ಷ ರಾಗಿ ಇಂದು ಅಧಿಕಾರ ಸ್ವೀಕರಿಸಿದರು. ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣದಲ್ಲಿ ಜನವರಿ 9 ರಿಂದ 10ರ ತನಕ ನಡೆದ ಬೃಹತ್ ದ್ವಿತೀಯ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸಿ.ಎನ್.ಅಶೋಕ ನಿರ್ದೇಶನದಂತೆ, ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಅರುಣ್ ಅಧಿಕಾರ ಪತ್ರವನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತೆ ಕುಸುಮ ಬಾಲಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಮಾಹಿತಿ ಕರಪತ್ರ ಬಿಡುಗಡೆ
Posted On: 09 Jan 2023, 09:56 PM
ಕಾಪು : ನೂತನವಾಗಿ ಪ್ರಾರಂಭಗೊಂಡ ಕಳತ್ತೂರು ಚಂದ್ರನಗರದಲ್ಲಿರುವ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ನ ಮಾಹಿತಿ ಕರಪತ್ರವನ್ನು ಮಲ್ಲಾರು-ಮಜೂರು ಬದ್ರಿಯಾ ಜುಮ್ಮಾ ಮಸ್ಜಿದ್ ಧರ್ಮಗುರುಗಳಾದ ಅಬ್ದುರ್ರಶೀದ್ ಸಖಾಫಿ ಅಲ್-ಖಾಮಿಲ್ ರವರು ಕಾಪುವಿನ ಸಮಾಜ ಸೇವಕ ಲೀಲಾದರ ಕೆ ಶೆಟ್ಟಿಯವರ ನಿವಾಸದಲ್ಲಿ ಬಿಡುಗಡೆಗೊಳಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಲೀಲಾದರ ಶೆಟ್ಟಿಯವರು ಮಾತನಾಡಿ ಫಾರೂಕ್ ಚಂದ್ರನಗರರವರು ಉತ್ತಮ ಸಮಾಜ ಸೇವಕರಾಗಿದ್ದು ಪ್ರತಿಯೊಬ್ಬ ವ್ಯಕ್ತಿಯನ್ನು ಗೌರವದಿಂದ ಕಾಣುವ ಹಸನ್ಮುಖಿ ವ್ಯಕ್ತಿಯಾಗಿದ್ದು ಗ್ರಾಮೀಣ ಪ್ರದೇಶದಲ್ಲಿ ಬಟರ್ ಫ್ಲೈ ಎಂಬ ಹೆಸರಿನಲ್ಲಿ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಪ್ರಾರಂಭ ಮಾಡಿದ್ದು ಹಣದ ಆಸೆಯನ್ನು ಬಿಟ್ಟು ಸಮಾಜ ಸೇವೆ ಮಾಡುವ ಮೂಲಕ ಸಾಮಾನ್ಯ ಜನರಿಗೂ ಕೂಡ ಸಮಾಧಾನಕರ ರೀತಿಯ ದರದಲ್ಲಿ ಸಿಗಲಿ ಎಂಬ ಉದ್ದೇಶದಿಂದ ಮಾಡಿರುತ್ತಾರೆ ನೂತನವಾಗಿ ಪ್ರಾರಂಭಿಸಿದ ಸಂಸ್ಥೆಯು ಇನ್ನಷ್ಟು ಬೆಳಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಜನಸಂಪರ್ಕ ಜನಸೇವಾ ವೇದಿಕೆ ಕಾಪು ಇದರ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ, ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಉಳಿಯಾರು ಇದರ ಅಧ್ಯಕ್ಷರಾದ ನಾಗಭೂಷಣ್ ರಾವ್ , ರವಿ ಉಪಾಧ್ಯಾಯ ಕರಂದಾಡಿ, ಪ್ರಭಾತ್ ಮೂಳೂರು, ಶಂಶುದ್ಧಿನ್ ಇಸ್ಮಾಯಿಲ್ ಕರಂದಾಡಿ, ರವೀಂದ್ರ ಮಲ್ಲಾರು ಉಪಸ್ಥಿತರಿದ್ದರು. ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ಇದರ ಆಡಳಿತ ನಿರ್ದೇಶಕರಾದ ಫಾರೂಕ್ ಚಂದ್ರನಗರ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ : ಪೂರ್ವಭಾವಿ ಸಭೆ
Posted On: 09 Jan 2023, 08:40 PM
ಮಂಗಳೂರು : ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ಪೂರ್ವಭಾವಿ ಸಭೆ ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದಲ್ಲಿ ಜನವರಿ 8ರಂದು ಜರಗಿತು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸ್ವಾತಂತ್ರ್ಯಯೋಧ ಡಾ. ಅಮ್ಮೆಂಬಳ ಬಾಳಪ್ಪ ಸ್ಮಾರಕ ಸೇವಾ ಪ್ರತಿಷ್ಠಾನ, ಬಂಟ್ವಾಳ ಇದರ ಅಧ್ಯಕ್ಷರೂ ಹಿರಿಯ ಪತ್ರಕರ್ತರೂ ಆದ ಅಮ್ಮೆಂಬಳ ಆನಂದ ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭದ ರೂಪುರೇಷೆಗಳನ್ನು ವಿವರಿಸಿದರು. ಸಭೆಯಲ್ಲಿ ಡಾ. ಅಮ್ಮೆಂಬಳ ಬಾಳಪ್ಪ ಜನ್ಮ ಶತಾಬ್ದಿ ಸಮಾರಂಭಕ್ಕೆ ಅತಿಥಿ ಗಣ್ಯರನ್ನು ಆಹ್ವಾನಿಸುವುದು, ದೇಶಭಕ್ತಿಗೀತೆ ಸ್ಪರ್ಧೆ ಆಯೋಜನೆ, ಅಮ್ಮೆಂಬಳ ಬಾಳಪ್ಪರ ಸಂಸ್ಮರಣಾರ್ಥ ಸಂಚಿಕೆ ಬಿಡುಗಡೆ, ಸಾಧಕರಿಗೆ ಸನ್ಮಾನ ಮುಂತಾದ ವಿಷಯಗಳ ಬಗ್ಗೆ ಸಮಾಲೋಚನೆ ನಡೆಯಿತು. ಶತಾಬ್ದಿ ಸಮಾರಂಭವನ್ನು ಸಂಪೂರ್ಣ ಯಶಸ್ವಿ ಗೊಳಿಸುವುದಕ್ಕಾಗಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಡಾ. ಅಮ್ಮೆಂಬಳ ಬಾಳಪ್ಪ ಜನ್ಮಶತಾಬ್ದಿ ಸಮಾರಂಭ ಸಮಿತಿಗೆ ಹಿರಿಯ ಪತ್ರಕರ್ತ ಅಮ್ಮೆಂಬಳ ಆನಂದ ಅವರನ್ನು ಗೌರವಾಧ್ಯಕ್ಷರನ್ನಾಗಿ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ. ತುಕಾರಾಮ ಪೂಜಾರಿ ಅವರನ್ನು ಅಧ್ಯಕ್ಷರನ್ನಾಗಿ, ಪುಂಡರೀಕಾಕ್ಷ ಯು. ಕೈರಂಗಳ ಅವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ, ಉಮೇಶ್ ಪಿ.ಕೆ. ನಾಗಲಚ್ಚಿಲು ಅವರನ್ನು ಕೋಶಾಧಿಕಾರಿಯನ್ನಾಗಿ, ಮಂಜು ವಿಟ್ಲ ಅವರನ್ನು ಪ್ರಧಾನ ಸಂಯೋಜಕರನ್ನಾಗಿ ಹಾಗೂ ಡಾ.ಆಶಾಲತಾ ಸುವರ್ಣ, ಡಾ.ರಶ್ಮಿ ಅಮ್ಮೆಂಬಳ, ರತ್ನಾವತಿ, ಪ್ರಸಾದ್ ಕುಮಾರ್ ಮಾರ್ನಬೈಲು, ಡಾ. ದುಗ್ಗಪ್ಪ ಕಜೆಕಾರು ಅವರನ್ನು ಸಂಪಾದಕ ಮಂಡಳಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನಿವೃತ್ತ ಯೋಧ ಡಿ. ಚಂದಪ್ಪ ಮೂಲ್ಯ, ಭೋಜ ಅಡ್ಯಾರ್, ಮಯೂರ್ ಉಳ್ಳಾಲ್, ರವೀಂದ್ರನಾಥ, ತೇಜಸ್ವಿರಾಜ್, ಶ್ರೀರಾಮ ದಿವಾಣ, ಪಾಂಡುರಂಗ ನಾಯಕ್, ಸದಾನಂದ ಬಂಗೇರ ಮುಡಿಪು, ಸುರೇಶ್ ಬಂಗೇರ, ದಾಮೋದರ ಸಾಲ್ಯಾನ್ ಸಂಚಯಗಿರಿ, ಜನಾರ್ದನ ಕುಲಾಲ್, ಕಿರಣ್ ಅಟ್ಲೂರು, ಸದಾಶಿವ ಕುಲಾಲ್, ಸಿ. ಮುತ್ತಪ್ಪ ಪೂಜಾರಿ, ಕೇಶವ ಮಾಸ್ಟರ್ ಮಾರ್ನಬೈಲು, ಪ್ರದೀಪ್ ಅತ್ತಾವರ್, ಎ. ಶಿವಪ್ಪ ಬಿ.ಸಿ.ರೋಡು ಮೊದಲಾದವರು ಉಪಸ್ಥಿತರಿದ್ದರು. ಉಮೇಶ್ ಪಿ. ಕೆ. ಸ್ವಾಗತಿಸಿದರು ಮತ್ತು ದಾಮೋದರ್ ಬಿ. ಎಂ. ವಂದಿಸಿದರು.
ಕುಲಾಲ ಸಮಾಜ ಸೇವಾ ಸಂಘ, ಮಹಿಳಾ ಘಟಕ ಬೆಳಪು : ವಾರ್ಷಿಕ ಮಹಾಸಭೆ, ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ
Posted On: 09 Jan 2023, 08:18 PM
ಕಾಪು : ಕುಲಾಲ ಸಮಾಜ ಸೇವಾ ಸಂಘ (ರಿ ) ಬೆಳಪು ಇದರ ಸಂಘದ ವಾರ್ಷಿಕ ಮಹಾಸಭೆಯು ಜನವರಿ 08 ರಂದು ಬೆಳಪು ವ್ಯವಸಾಯ ಸೇವಾ ಸಹಕಾರಿ ಸಂಘ (ನಿ.) ಪಣಿಯೂರು ಇದರ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬೆಳಪು ವ್ಯವಸಾಯ ಸೇವಾ ಸಂಘದ ಅಧ್ಯಕ್ಷರಾದ ಡಾ|| ದೇವಿಪ್ರಸಾದ್ ಶೆಟ್ಟಿ ಮುಂದಿನ ದಿನಗಳಲ್ಲಿ ಬೆಳಪುವಿನಲ್ಲಿ ಆರಂಭ ಆಗುವ ಕಾರ್ಖಾನೆಗಳಲ್ಲಿ ಕುಲಾಲ ಸಮುದಾಯದವರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸಿಕೊಡುವುದಲ್ಲದೆ ಕುಲಾಲ ಸಮುದಾಯ ಭವನ ನಿರ್ಮಾಣಕ್ಕೆ ಸ್ಥಳದ ವ್ಯವಸ್ಥೆಯನ್ನು ಮಾಡಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭ ಉಡುಪಿ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಐತು ಕುಲಾಲ್ ಕನ್ಸಾನ, ಗಣೇಶ್ ಪಂಜಿಮಾರು ಮತ್ತು ಸಂಘದ ಹಿರಿಯರಾದ ಕುಟ್ಟಿ ಮೂಲ್ಯ ಇವರನ್ನು ಸನ್ಮಾನಿಸಲಾಯಿತು. ಕಲಿಕೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು. ಸುಧಾಕರ್ ಕುಲಾರ್ ಇವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂದೀಪ್ ಮೂಲ್ಯ, ಗೀತಾ ವೈ,ಉಮೇಶ್ ಕುಲಾಲ್ ಉಪಸ್ಥಿತರಿದ್ದರು. ಕೋಶಾಧಿಕಾರಿ ಹರೀಶ್ ಕುಲಾಲ್ ವಾರ್ಷಿಕ ವರದಿ ಮಂಡಿಸಿದರು. ಮಲ್ಲಿಕಾ ಉಮೇಶ್ ಮಹಿಳಾ ಘಟಕದ ವರದಿಯನ್ನು ಮಂಡಿಸಿದರು. ಜನಾರ್ದನ್ ಕುಲಾಲ್ ಸ್ವಾಗತಿಸಿದರು. ಸತೀಶ್ ಕುಲಾಲ್ ಕುಂಜೂರು ಕಾರ್ಯಕ್ರಮ ನಿರೂಪಿಸಿದರು. ಸುಜಯ ಕುಲಾಲ್ ವಂದಿಸಿದರು.
ಬಂಟಕಲ್ಲು : ಗುರುಮೆಚ್ಚುವ ಶಿಷ್ಯರಾಗಿ ಬೆಳೆಯಬೇಕು - ಶಂಕರ್ ನಾಯಕ್
Posted On: 08 Jan 2023, 06:14 PM
ಬಂಟಕಲ್ಲು : ಶ್ರೀ ಅಯ್ಯಪ್ಪ ಭಕ್ತ ವೃಂದ ಇದರ ಆಶ್ರಯದಲ್ಲಿ ಶ್ರೀ ಸ್ವಾಮಿ ಚಂಡೆ ಬಳಗವನ್ನು ಬಂಟಕಲ್ಲು ಶ್ರೀ ಸಾರ್ವಜನಿಕ ಗಣೇಶೋತ್ಸವ ವೇದಿಕೆಯ ಗೌರವಾಧ್ಯಕ್ಷ ಶಂಕರ್ ನಾಯಕ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಗುರು ಮೆಚ್ಚುವ ಶಿಷ್ಯರಾಗಿ ಬೆಳೆಯಬೇಕೆಂದು ಅಭಿಪ್ರಾಯಪಟ್ಟರು. ಬಳಗದ ಅಧ್ಯಕ್ಷರಾದ ಮಾಧವ ಕಾಮತ್ ರವರು ಗುರುಗಳಾದ ನಿತಿನ್ ಕಟಪಾಡಿಯವರಿಗೆ ಶಿಷ್ಯ ವೃಂದದ ಪರವಾಗಿ ಗುರುಕಾಣಿಕೆ ಸಮರ್ಪಿಸಿದರು. ಶಿಬಿರದ ಮಂಜುನಾಥ್ ಗುರುಸ್ವಾಮಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಚಂಡೆ ಬಳಗದ ಸದಸ್ಯರು ಪ್ರಾರ್ಥಿಸಿದರು. ಹೇರೂರು ಮಾಧವಾಚಾರ್ಯರವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಜನವರಿ 9 : CITU -ಮಂಗಳೂರಿನಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣ
Posted On: 08 Jan 2023, 04:03 PM
ಮಂಗಳೂರು : ಅವಿಭಜಿತ ದ.ಕ. ಜಿಲ್ಲೆ ಸೇರಿದಂತೆ ಕರಾವಳಿ ಕರ್ನಾಟಕದ ಸಮಗ್ರ ಅಭಿವೃದ್ಧಿಯ ಕಣ್ಣೋಟವನ್ನು ಮುಂದಿಟ್ಟುಕೊಂಡು ಕೃಷಿರಂಗಕ್ಕೆ ಪ್ರೋತ್ಸಾಹ, ಪರಿಸರಸ್ನೇಹಿ ಕೈಗಾರಿಕೆಗಳ ಸ್ಥಾಪನೆ,ಸ್ಥಳೀಯ ಯುವಜನರಿಗೆ ಉದ್ಯೋಗ, ಭವಿಷ್ಯದ ಯೋಜನೆಗಾಗಿ ಜನವರಿ 9, ಸೋಮವಾರ ಬೆಳಿಗ್ಗೆ 10ಕ್ಕೆ ಮಂಗಳೂರು ಪುರಭವನದಲ್ಲಿ ಕರಾವಳಿ ಕರ್ನಾಟಕ ; ಕೃಷಿ ಕೈಗಾರಿಕೆ ಉದ್ಯೋಗ ಜನಪರ ಪರ್ಯಾಯ ನೀತಿಗಳು ಎಂಬ ವಿಷಯದಲ್ಲಿ ರಾಜ್ಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. CITU ರಾಷ್ಟ್ರ ಸಮ್ಮೇಳನದ ಅಂಗವಾಗಿ ಆಯೋಜಿಸಲಾಗಿರುವ ಇಂತಹ ಮಹತ್ವಪೂರ್ಣ ವಿಚಾರ ಸಂಕಿರಣವನ್ನು ಕರ್ನಾಟಕ ರಾಜ್ಯ ಯೋಜನಾ ಆಯೋಗದ ಮಾಜಿ ಸದಸ್ಯರು ಹಾಗೂ ನಾಡಿನ ಖ್ಯಾತ ಆರ್ಥಿಕ ತಜ್ಞರಾದ ಡಾ. ಟಿ. ಆರ್. ಚಂದ್ರಶೇಖರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಹಂಪಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕರಾದ ಡಾ. ಎಂ.ಚಂದ್ರ ಪೂಜಾರಿ, CITU ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಜಯಶ್ರೀ ಕೃಷ್ಣ ಪರಿಸರ ಪ್ರೇಮಿ ಸಮಿತಿಯ ಸಂಸ್ಥಾಪಕರಾದ ತೋನ್ಸೆ ಜಯಕೃಷ್ಣ ಶೆಟ್ಟಿಯವರು ಭಾಗವಹಿಸಲಿದ್ದಾರೆ. ಸಭೆಯ ಅಧ್ಯಕ್ಷತೆಯನ್ನು ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಯಶವಂತ ಮರೋಳಿಯವರು ವಹಿಸಲಿದ್ದಾರೆ. ಕಾರ್ಯಕ್ರಮದ ಪ್ರಾರಂಭದಲ್ಲಿ ಜಿಲ್ಲೆಯ ಖ್ಯಾತ ಗಾಯಕರಾದ ಮೇಘನಾ ಕುಂದಾಪುರ, ಹುಸೈನ್ ಕಾಟಿಪಳ್ಳ, ಹೇಮಾ ಪಚ್ಚನಾಡಿ, ಇಸ್ಮಾಯಿಲ್ ಉಳ್ಳಾಲ ಇವರಿಂದ ಸೌಹಾರ್ದ ಗೀತಗಾಯನ ಕಾರ್ಯಕ್ರಮ ಜರುಗಲಿದೆ. ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿ ನಡೆಯುವ ಈ ವಿಚಾರ ಸಂಕಿರಣದಲ್ಲಿ ಜಿಲ್ಲೆಯ ಪ್ರಜ್ಞಾವಂತರು,ವಿದ್ಯಾರ್ಥಿ ಯುವಜನರು ಮಹಿಳೆಯರು, ಮಧ್ಯಮ ವರ್ಗದ ಜನತೆ ಸೇರಿದಂತೆ ಸರ್ವ ವಿಭಾಗದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಡುಪಿ : ತುಳುಕೂಟ ಉಡುಪಿ - ತುಳು ಭಾವಗೀತೆ ಗಾಯನ
Posted On: 08 Jan 2023, 12:11 PM
ಉಡುಪಿ : ತುಳುಕೂಟ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಸಹಯೋಗದಲ್ಲಿ ದಿ.ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಗಾಯನ ಭಾನುವಾರ ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ವೀಣಾ ಬಿ. ಎಸ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಯಾವುದೇ ಕಾರ್ಯ ಮಾಡುವಾಗ ಹೃದಯವಂತಿಕೆಯಿಂದ ಮಾಡಿದಾಗ ಮಾತ್ರ ಜನರಿಗೆ ತಲುಪಲು ಸಾಧ್ಯ. ಬಂದು ಹೋದ ಅಧಿಕಾರಿಯಾಗದೆ ಜನರಿಗಾಗಿ ದುಡಿಯಬೇಕೆಂದಿದ್ದೇನೆ. ಉಡುಪಿ ಮಂಗಳೂರಿನಲ್ಲಿ ಪ್ರೀತಿ, ವಿಶ್ವಾಸ, ಶಿಸ್ತು ಕಾಣಬಹುದು. ಇಲ್ಲಿನ ತುಳು ಭಾಷೆ ನನಗೂ ಕಲಿಯಬೇಕು. ಮುಂದಿನ ದಿನದಲ್ಲಿ ಖಂಡಿತವಾಗಿಯೂ ಕಲಿಯುತ್ತೇನೆ. ತುಳು ಭಾವಗೀತೆ ಗಾಯನದಲ್ಲಿ ಭಾಗವಹಿಸುವ ಎಲ್ಲಾ ಸ್ಪರ್ಧಿಗಳಿಗೂ ಶುಭಾಶಯಗಳು ಎಂದರು. ತುಳು ಕೂಟದ ವತಿಯಿಂದ ಅಪರ ಜಿಲ್ಲಾಧಿಕಾರಿಯವರನ್ನು ಸಮ್ಮಾನಿಸಲಾಯಿತು. ಅತಿಥಿಗಳಾಗಿ ಉಡುಪಿಯ ಚಾರ್ಟರ್ಡ್ ಅಕೌಂಟೆಂಟ್ ಸಿ ಎ ಜೀವನ್ ಕುಮಾರ್, ದುಬೈಯ ಕ್ರಿಯಾತ್ಮಕ ನಿರ್ದೇಶಕರಾದ ಬಿ. ಕೆ. ಗಣೇಶ್ ರೈ, ಮಲ್ಪೆಯ ಯುವ ಉದ್ಯಮಿ ಹರೀಶ್ ಶ್ರೀಯಾನ್, ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಉಡುಪಿಯ ಅಧ್ಯಕ್ಷರಾದ ರಾಮ್ ವಿ ಕುಂದರ್, ಮಾಡೆಲಿಂಗ್ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತರಾದ ವಿದ್ಯಾ ಸರಸ್ವತಿ, ಪ್ರೈಮ್ ಟಿವಿ ನಿರ್ದೇಶಕರಾದ ರೂಪೇಶ್ ವಿ.ಕಲ್ಮಾಡಿ, ಗಂಗಾಧರ ಕಿದಿಯೂರು ಉಪಸ್ಥಿತರಿದ್ದರು. ಜೂನಿಯರ್ ಮತ್ತು ಸೀನಿಯರ್ ವಿಭಾಗದಲ್ಲಿ ತುಳು ಭಾವಗೀತೆ ಗಾಯನ ಜರಗಿತು. ತೀರ್ಫುಗಾರರಾಗಿ ಜಯಶ್ರೀ ಕೋಟ್ಯಾನ್, ಭಾರತಿ, ರವಿಶಂಕರ್ ಸಹಕರಿಸಿದರು. ತುಳುಕೂಟ ಉಡುಪಿಯ ಅಧ್ಯಕರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. ಸಂಗೀತ ವಸಂತ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕ ಪ್ರಕಾಶ್ ಸುವರ್ಣ ವಂದಿಸಿದರು.
ಜನವರಿ 8 : ತುಳುಕೂಟ ಉಡುಪಿ ವತಿಯಿಂದ ತುಳು ಭಾವಗೀತೆ ಗಾಯನ
Posted On: 07 Jan 2023, 04:14 PM
ಉಡುಪಿ : ತುಳುಕೂಟ ಉಡುಪಿ (ರಿ.) ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಇವರ ಸಹಯೋಗದಲ್ಲಿ ದಿ.ನಿಟ್ಟೂರು ಸಂಜೀವ ಭಂಡಾರಿ ಸ್ಮರಣಾರ್ಥ ತುಳು ಭಾವಗೀತೆ ಗಾಯನ ಜನವರಿ 8, ಭಾನುವಾರ ಬೆಳಗ್ಗೆ 9 ಗಂಟೆಗೆ ಉಡುಪಿ ಎಂ.ಜಿ.ಎಂ. ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಜರಗಲಿದೆ. ಕಾರ್ಯಕ್ರಮವನ್ನು ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ, ವೀಣಾ ಬಿ. ಎಸ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಉಡುಪಿಯ ಚಾರ್ಟರ್ಡ್ ಅಕೌಂಟೆಂಟ್ ಸಿ ಎ ಜೀವನ್ ಕುಮಾರ್, ದುಬೈಯ ಕ್ರಿಯಾತ್ಮಕ ನಿರ್ದೇಶಕರಾದ ಬಿ. ಕೆ. ಗಣೇಶ್ ರೈ, ಮಲ್ಪೆಯ ಯುವ ಉದ್ಯಮಿ ಹರೀಶ್ ಶ್ರೀಯಾನ್, ಶ್ರೀರಸ್ತು ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ಲಿ.) ಉಡುಪಿಯ ಅಧ್ಯಕ್ಷರಾದ ರಾಮ್ ವಿ ಕುಂದರ್, ಮಾಡೆಲಿಂಗ್ ಕ್ಷೇತ್ರದಲ್ಲಿ ಗೌರವ ಡಾಕ್ಟರೇಟ್ ಪುರಸ್ಕೃತರಾದ ವಿದ್ಯಾ ಸರಸ್ವತಿ, ಪ್ರೈಮ್ ಟಿವಿ ನಿರ್ದೇಶಕರಾದ ರೂಪೇಶ್ ವಿ.ಕಲ್ಮಾಡಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳುಕೂಟ ಉಡುಪಿ (ರಿ.) ಇದರ ಅಧ್ಯಕ್ಷರಾದ ಬಿ. ಜಯಕರ್ ಶೆಟ್ಟಿ ಇಂದ್ರಾಳಿ ವಹಿಸಲಿದ್ದಾರೆ ಎಂದು ಕಾರ್ಯಕ್ರಮದ ಸಂಚಾಲಕರಾದ ಪ್ರಕಾಶ್ ಸುವರ್ಣ ಕಟಪಾಡಿ ತಿಳಿಸಿದ್ದಾರೆ.
ಜನವರಿ 8 : ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ - ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಿಬಿಸಿ ಟ್ರೋಫಿ 2023
Posted On: 07 Jan 2023, 03:52 PM
ಪಡುಬಿದ್ರಿ : ಇಲ್ಲಿನ ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ಅರ್ಪಿಸುವ ದಿವಂಗತ ಲೋಹಿತಾಕ್ಷ ಸುವರ್ಣ ಸ್ಮರಣಾರ್ಥ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಪಿಬಿಸಿ ಟ್ರೋಫಿ 2023 ಇದರ ಉದ್ಘಾಟನೆ ಜನವರಿ 8, ಆದಿತ್ಯವಾರ ಬೆಳಿಗ್ಗೆ 8:30 ಕ್ಕೆ ಹಳೆಯಂಗಡಿಯ ಟೋರ್ಪೆಡೋಸ್ ಸ್ಫೋಟ್೯್ಸ ಕ್ಲಬ್ ನ ಒಳಾಂಗಣ ಶಟಲ್ ಕೋಟ್೯ ಇಲ್ಲಿ ಜರಗಲಿದೆ. 8 ತಂಡಗಳು, 64 ಆಟಗಾರರು ಭಾಗವಹಿಸಲಿದ್ದಾರೆ. ಪ್ರಥಮ ಬಹುಮಾನ ರೂ.7,777 ಮತ್ತು ದ್ವಿತೀಯ ಬಹುಮಾನ ರೂ.5,555 ಜೊತೆಗೆ ಪಿಬಿಸಿ ಟ್ರೋಫಿ ಇರಲಿದೆ. ಬೆಸ್ಟ್ ಎಮರ್ಜಿಂಗ್ ಪ್ಲೇಯರ್ ಮತ್ತು ಬೆಸ್ಟ್ ಆಲ್ರೌಂಡರ್ ಪ್ರಶಸ್ತಿ ಇರಲಿದೆ. ಕಾರ್ಯಕ್ರಮವನ್ನು ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಡಿ ಎಸ್ ಅಬ್ದುಲ್ ರೆಹಮಾನ್, ನವೀನ್ಚಂದ್ರ ಶೆಟ್ಟಿ, ವೈ ಸುಧೀರ್ ಕುಮಾರ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿತೇಂದ್ರ ಜೆ ಶೆಟ್ಟಿ, ಸಂತೋಷ್ ಕುಮಾರ್ ಶೆಟ್ಟಿ, ಜಿತೇಂದ್ರ ಫುರ್ಟಾಡೊ, ಅಬ್ದುಲ್ ಅಝೀಝ್, ಗೀತಾ ಅರುಣ್ ಭಾಗವಹಿಸಲಿದ್ದಾರೆ. ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ನ ಅಧ್ಯಕ್ಷರಾದ ವೈ ಸುಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ತಂಡಗಳು : ನವೀನ್ ಎನ್ ಶೆಟ್ಟಿ ಮಾಲೀಕತ್ವದ ಮೋಹಿತ್ ಸ್ಮಾಶರ್ಸ್, ಕಪೀಲ್ ಕುಮಾರ್ ರವರ ಮಾಹಿ ವಾರಿಯಸ್೯, ನಸ್ರುಲ್ಲರವರ ಟೀಮ್ ಸಿಗ್ನೇಚರ್, ದೀಕ್ಷಿತ್ ರವರ ವಿಹಾನ್ ಗ್ಲಾಡಿಯೇಟರ್, ಶಂಕರ್ ಕಂಚಿನಡ್ಕ ಇವರ ಯಶ್ ವಾರಿಯಸ್೯, ಕೃಷ್ಣ ಬಂಗೇರರ ಯನ್ಶ್ ರಿಯಲ್ ಫೈಟಸ್೯, ಅನ್ವರ್ ಅಹ್ಮದ್ ರ ಕ್ಲಬ್ ಎನ್ಫಿಗೊ, ಸಿರಾಜ್ ರವರ ಓಶಿಯನ್ ವಾರಿಯಸ್೯ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ನಲ್ಲಿ ಭಾಗವಹಿಸಲಿದೆ ಎಂದು ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ನ ಕಾರ್ಯದರ್ಶಿ ರಮೀಝ್ ಹುಸೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
