Updated News From Kaup
ಜನವರಿ 21 : ಮಟ್ಟಾರುವಿನಲ್ಲಿ ಹೊನಲು ಬೆಳಕಿನ ಒಬಿಸಿ ಕಮಲ ಟ್ರೋಫಿ - 2023
Posted On: 04-12-2022 11:49AM
ಕಾಪು : ಬಿಜೆಪಿ ಹಿಂದುಳಿದ ಮೋರ್ಚಾ ಕಾಪು ವಿಧಾನ ಸಭಾ ಕ್ಷೇತ್ರದ ವತಿಯಿಂದ ಜನವರಿ 21 ರಂದು ಶಿರ್ವದ ಮಟ್ಟಾರು ಇಲ್ಲಿ ಪಿನ್ ಕೊಡ್ ಮಾದರಿಯ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ ನಡೆಯಲಿದೆ.
ಬಂಟಕಲ್ಲು : ನಾಗರಿಕ ಸೇವಾ ಸಮಿತಿಯಿಂದ ಅಂಚೆಯಣ್ಣನವರಿಗೆ ಅಭಿನಂದನೆ, ಬೀಳ್ಕೊಡುಗೆ
Posted On: 02-12-2022 03:36PM
ಬಂಟಕಲ್ಲು : ನಾಗರಿಕ ಸೇವಾ ಸಮಿತಿ ರಿ. ಬಂಟಕಲ್ಲು ಇವರ ಆಶ್ರಯದಲ್ಲಿ ಬಂಟಕಲ್ಲು ಅಂಚೆ ಕಛೇರಿಯಲ್ಲಿ ಸುಮಾರು 8 ವರ್ಷದಿಂದ ಪತ್ರ ಬಟಾವಾಡೆ ಮಾಡುತ್ತಿದ್ದ ಅಂಚೆಯಣ್ಣ ಚಿತ್ರಕಲಿ ಹಾಗೂ ಸುಮಾರು 20 ವರ್ಷಗಳಿಂದ ಹೇರೂರು ಅಂಚೆ ಕಛೇರಿಯಲ್ಲಿ ಪತ್ರ ಬಟಾವಾಡೆ ಮಾಡುತ್ತಿದ್ದ ಅಂಚೆಯಣ್ಣ ರಾಜೇಶ್ ಆಚಾರ್ಯ ಇವರು ತಮ್ಮ ವೃತ್ತಿಯಲ್ಲಿ ಅಂಚೆ ಇಲಾಖೆಯಿಂದ ಪದೋನ್ನತಿ ಹೊಂದಿ ಚಿತ್ರಕಲಿಯವರು ಶಂಕರಪುರ ಅಂಚೆ ಕಛೇರಿಗೆ ಹಾಗೂ ರಾಜೇಶ್ ರವರು ಕಟಪಾಡಿ ಅಂಚೆಕಛೇರಿಗೆ ವರ್ಗಾವಣೆ ಹೊಂದಿರುವ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಿ ಬೀಳ್ಕೊಡುವ ಸರಳ ಕಾರ್ಯಕ್ರಮವು ಇಂದು ಬಂಟಕಲ್ಲು ಅಂಚೆ ಕಛೇರಿಯಲ್ಲಿ ಜರುಗಿತು.
ಗೆದ್ದ ಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದುಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ : ಜಸ್ಟಿಸ್ ಅರಳಿ ನಾಗರಾಜ್
Posted On: 02-12-2022 11:49AM
ಮಂಗಳೂರು : ಚುನಾವಣೆ ಸಂದರ್ಭದಲ್ಲಿ ಪ್ರತಿಯೊಬ್ಬ ಸ್ಪರ್ಧಿಯಲ್ಲೂ ನಾನು ಗೆದ್ದು ಬಂದಮೇಲೆ ಯಾವುದೇ ಪಕ್ಷ ಬದಲಾಯಿಸುವುದಿಲ್ಲ ಎಂದು ಅಫಿಡವಿಟ್ ಪಡೆದು ಕೊಳ್ಳುವ ಕಾನೂನು ರೂಪುಗೊಳ್ಳಬೇಕಿದೆ ಎಂದು ಜಸ್ಟಿಸ್ ಅರಳಿ ನಾಗರಾಜ್ ಹೇಳಿದರು. ಅವರು ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಮತ್ತು ರಾಷ್ಟ್ರೀಯ ಸೌಹಾರ್ದ ವೇದಿಕೆ ಬಿಜಾಪುರ ಜಂಟಿ ಆಶ್ರಯದಲ್ಲಿ ಡಿಸೆಂಬರ್ 1ರಂದು ಬಿಜಾಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ದಲ್ಲಿ ಆಯೋಜಿಸಿದ್ದ "ಸಂವಿಧಾನದ ಆಶಯ ಈಡೇರಿದೆಯೇ? " - ವಿಚಾರ ಗೋಷ್ಠಿ ಯನ್ನು ಉದ್ದೇಶಿಸಿ ಮಾತನಾಡಿದರು.
ಯುವವಾಹಿನಿ ಪಡುಬಿದ್ರಿ ಘಟಕ : ಮಕ್ಕಳ ಹಬ್ಬ - ಕಲಾಶ್ರೀ, ಕಲಾರತ್ನ ಪ್ರಶಸ್ತಿ ಪ್ರದಾನ
Posted On: 02-12-2022 10:28AM
ಪಡುಬಿದ್ರಿ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸೃತ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಆಶ್ರಯದಲ್ಲಿ ಕೆಮುಂಡೇಲು ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಮಕ್ಕಳ ಹಬ್ಬ, ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವು ನವೆಂಬರ್ 20ರಂದು ಕೆಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿ (ರಿ.) ಕೆಮುಂಡೇಲು ಇಲ್ಲಿ ಜರುಗಿತು. ಪುತ್ತಿಗೆ ಮಠ ಉಡುಪಿಯ ದಿವಾನರಾದ ನಾಗರಾಜ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು.
ಶಂಕರಪುರ : ನಶಾ ಮುಕ್ತ ಅಭಿಯಾನ
Posted On: 02-12-2022 09:33AM
ಶಂಕರಪುರ : ಭಾರತೀಯ ವೈದ್ಯಕೀಯ ಸಂಘ ಉಡುಪಿ ಹಾಗೂ ರೋಟರಿ ಕ್ಲಬ್ ಶಂಕರಪುರ ಜಂಟಿಯಾಗಿ ನಶಾ ಮುಕ್ತ ಅಭಿಯಾನ ಕಾರ್ಯಕ್ರಮವನ್ನು ಸೈಂಟ್ ಜಾನ್ಸ್ ಪಿಯು ಕಾಲೇಜ್ ಶಂಕರಪುರದಲ್ಲಿ ನಡೆಸಲಾಯಿತು.
ಉದ್ಯಮಿ ಜೋಸೆಫ್ ಮಥಾಯಸ್ ರವರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ
Posted On: 02-12-2022 09:26AM
ದುಬೈನಲ್ಲಿರುವ ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ಹಾಗೂ ದುಬೈ ಕನ್ನಡಿಗರ ಸಹಕಾರದಲ್ಲಿ ದುಬೈ ಶೇಖ್ ರಶೀದ್ ಸಭಾಂಗಣದಲ್ಲಿ ಇತ್ತೀಚಿಗೆ ಜರಗಿದ 'ವಿಶ್ವಕನ್ನಡ ಹಬ್ಬದಲ್ಲಿ' ಮೈಸೂರಿನ ಮಹಾರಾಜ ಯದುವೀರ ಶ್ರೀ ಕೃಷ್ಣದತ್ತ ಚಾಮರಾಜ ಒಡೆಯರು ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಮತ್ತು ಅರಬ್ ರಾಷ್ಟ್ರದಲ್ಲಿ ಉದ್ಯಮವನ್ನು ಹೊಂದಿರುವ ಜೋಸೆಫ್ ಮಥಾಯಸ್ ಅವರಿಗೆ 'ಅಂತಾರಾಷ್ಟ್ರೀಯ ವಿಶ್ವ ಮಾನ್ಯ ಪ್ರಶಸ್ತಿ' ನೀಡಿ ಗೌರವಿಸಿದರು.
ಕಾಪು : ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ
Posted On: 02-12-2022 09:23AM
ಕಾಪು : ರಕ್ತದಾನ ಶ್ರೇಷ್ಠವಾಗಿದೆ. ನಮ್ಮ ದೇಹದ ಬಗೆಗೂ ನಾವು ಗಮನಹರಿಸಿ ಆ ಮೂಲಕ ರಕ್ತದಾನ ಶಿಬಿರಗಳಲ್ಲಿ ಪಾಲ್ಗೊಳ್ಳಬೇಕಾಗಿದೆ ಎಂದು ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರ ಮುಖ್ಯಸ್ಥರಾದ ಡಾ. ವೀಣಾ ಕುಮಾರಿ ಹೇಳಿದರು. ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಕಾಪು,ಕಾಲೇಜಿನ ಐಕ್ಯೂಎಸಿ ಘಟಕ, ಶ್ರೀದೇವಿ ಸ್ಪೋರ್ಟ್ಸ್ ಮತ್ತು ಸಾಂಸ್ಕೃತಿಕ ಸಂಘ ಕಾಪು, ಯುವ ರೆಡ್ ಕ್ರಾಸ್ ಘಟಕ, ಕಾಲೇಜು ಹಳೆ ವಿದ್ಯಾರ್ಥಿ ಸಂಘ, ಹೆಚ್ ಡಿ ಎಫ್ ಸಿ ಬ್ಯಾಂಕ್ ಮಂಗಳೂರು ಹಾಗೂ ಜಿಲ್ಲಾ ರಕ್ತ ನಿಧಿ ಕೇಂದ್ರ ಉಡುಪಿ, ಇವರ ಸಹಯೋಗದೊಂದಿಗೆ ಡಿಸೆಂಬರ್ 1ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಾಪು ಇಲ್ಲಿ ಜರಗಿದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.
ದ್ವಿಚಕ್ರ ವಾಹನ ಸವಾರರಿಗೆ ತೊಂದರೆ : ಹೆದ್ದಾರಿ ಇಲಾಖೆ ನಿರ್ಲಕ್ಷ್ಯ
Posted On: 01-12-2022 05:52PM
ಪಡುಬಿದ್ರಿ : ಹಾಳಾದ ರಸ್ತೆಯನ್ನು ಸರಿ ಮಾಡದೆ ಸರಿ ಇದ್ದ ರಸ್ತೆಯನ್ನು ಯಂತ್ರದ ಮೂಲಕ ಡಾಂಬರು ತೆಗೆದು ಜೊತೆಗೆ ಡಾಂಬರು ಹುಡಿಯು ರಸ್ತೆಯಲ್ಲೇ ಇದ್ದು ದ್ವಿಚಕ್ರ ವಾಹನ ಸವಾರರಿಗೆ ತೊಂದರೆಯಾಗುವ ಸ್ಥಿತಿ ಪಡುಬಿದ್ರಿ ಸಮೀಪದ ಕಣ್ಣಂಗಾರುವಿನಿಂದ ಬೀಡುವರೆಗೆ ಒಂದು ಬದಿಯ ರಸ್ತೆಯಲ್ಲಿ ಕಾಣಬಹುದಾಗಿದೆ.
ಹಿರಿಯರ ಕನ್ನಡ ಸೇವೆಯು ನಮಗೆ ಮಾದರಿಯಾಗಲಿ – ಡಾ ಹಿರೇಮಗಳೂರು ಕಣ್ಣನ್
Posted On: 30-11-2022 05:48PM
ಕಾರ್ಕಳ : ಕನ್ನಡದ ಕಂಪು ವಿಶ್ವದೆಲ್ಲೆಡೆ ಪಸರಿಸಲು ನಾವು ಕಟಿಬದ್ಧರಾಗಬೇಕು. ಕನ್ನಡದ ನೆಲ, ಜಲ, ಭಾಷೆಗಳು ಉತ್ತುಂಗಕ್ಕೇರಲು ಇಂದಿನ ಯುವ ಪೀಳಿಗೆ ಪ್ರಯತ್ನಿಸಬೇಕು. ನಮ್ಮ ಪೂರ್ವಿಕರು ನಮಗೆ ದೊರಕಿಸಿಕೊಟ್ಟಿರುವ ಈ ಭವ್ಯ ಭಾಷೆ, ಕಲೆ, ಸಂಪತ್ತನ್ನು ವೃದ್ಧಿಸಬೇಕು. ನಮ್ಮಲ್ಲಿರುವ ಪರಸ್ಪರ ದ್ವೇಶಭಾವ ಬಿಟ್ಟು ಸುಮನಸಿನವರಾಬೇಕಾಗಿದೆ. ತಂದೆ-ತಾಯಿಗಳನ್ನು ಪ್ರೀತಿಯಿಂದ ಸಲಹಬೇಕು. ಹಾಗೆಯೇ ನಮ್ಮ ಮಾತೃಭೂಮಿ ತಾಯಿ ಭಾಷೆಯನ್ನು ಬೆಳೆಸಬೇಕು ಎಂದು ಕನ್ನಡದ ಪೂಜಾರಿ ಡಾ ಹಿರೇಮಗಳೂರು ಕಣ್ಣನ್ ಕರೆ ನೀಡಿದರು.
ದುಪ್ಪಟ್ಟು ಟೋಲ್ ವಿಧಿಸುವ ಕ್ರಮ ಸರಿಯಲ್ಲ : ಸಮಾಜ ಸೇವಕ ಫಾರೂಕ್ ಚಂದ್ರನಗರ
Posted On: 30-11-2022 05:29PM
ಕಾಪು : ಹೆಜಮಾಡಿಯಲ್ಲಿ ಡಿಸೆಂಬರ್ 01 ರಿಂದ ದುಪ್ಪಟ್ಟು ಟೋಲ್ ವಿಧಿಸುವ ಕ್ರಮ ಸರಿಯಲ್ಲ ಜನಸಾಮಾನ್ಯರು ಈಗಾಗಲೇ ಹೆಚ್ಚುತ್ತಿರುವ ದಿನಬಳಕೆ ವಸ್ತು ಡೀಸೆಲ್, ಪೆಟ್ರೋಲ್ ನಿಂದ ಕಂಗೆಟ್ಟಿದ್ದಾರೆ. ಕರೋಣದಂತ ಮಹಾ ಮಾರಿಯಿಂದ ಈಗ ವ್ಯಪಾರ ವ್ಯವಹಾರ ಚೇತರಿಕೆ ಸಂದರ್ಭದಲ್ಲಿ ಜನರ ಮೇಲೆ ಟೋಲ್ ದುಪ್ಪಟ್ಟು ಮಾಡಿ ಕಾಪು, ಪಡುಬಿದ್ರಿ, ಮುಲ್ಕಿ ಹತ್ತಿರದ ಜನರಿಗೆ ತುಂಬಾನೇ ಕಷ್ಟಕರ ಪರಿಸ್ಥಿತಿ ಎದುರಾಗುತ್ತದೆ. ಕೇಂದ್ರ ಸರಕಾರ ಕೂಡಲೇ ಇದನ್ನು ಮನಗಂಡು ಈ ಮೊದಲು ನಿಗದಿಪಡಿಸಿದ್ದ ದರವನ್ನೆ ಮುಂದುವರೆಸಿ ಜನಸಾಮಾನ್ಯರಿಗೆ ಸಹಕರಿಸಬೇಕೆಂದು ಸಮಾಜ ಸೇವಕ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಫಾರೂಕ್ ಚಂದ್ರನಗರ ಆಗ್ರಹಿಸಿದ್ದಾರೆ.
