Updated News From Kaup

ಡಿಸೆಂಬರ್ 16,17,18 ರಂದು ಕಾಪು ಕಡಲ ಕಿನಾರೆಯಲ್ಲಿ ಕಡಲ ಐಸಿರ - 2022

Posted On: 29-11-2022 06:47PM

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಡಿಸೆಂಬರ್ 16,17,18 ರಂದು ಜರಗಲಿದೆ ಎಂದು ಸಂಸ್ಥೆಯ ಗೌರವಾಧ್ಯಕ್ಷರಾದ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಕಾಪುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಕಟಪಾಡಿ : ಏಣಗುಡ್ಡೆ ಶ್ರೀ ಶಿವಾನಂದ ಭಜನಾ ಮಂಡಳಿಯ 76ನೇ ವಾರ್ಷಿಕ ಮಂಗಳೋತ್ಸವ

Posted On: 29-11-2022 02:57PM

ಕಟಪಾಡಿ : ಇಲ್ಲಿನ ಏಣಗುಡ್ಡೆ ಶ್ರೀ ಶಿವಾನಂದ ಭಜನಾ ಮಂಡಳಿಯ 76ನೇ ವಾರ್ಷಿಕ ಮಂಗಳೋತ್ಸವ ಡಿಸೆಂಬರ್ 3ರಂದು ಜರಗಲಿದೆ.

ಚಂಪಾ ಷಷ್ಠಿ - ಸುಬ್ರಹ್ಮಣ್ಯ ಷಷ್ಠಿ : "ನಾಗ - ಸುಬ್ರಹ್ಮಣ್ಯ" ಸಮೀಕರಣ ಒಂದು ವಿಶ್ಲೇಷಣೆ

Posted On: 28-11-2022 09:55PM

ಆದಿಮ - ವೈದಿಕ ವಿಚಾರಧಾರೆಗಳು ಒಂದಕ್ಕೊಂದು ಪೂರಕವಾಗಿದ್ದುವುಗಳಾಗಿದ್ದುದರಿಂದಲೇ ಅಥವಾ ಆದಿಮದ ಮುಂದುವರಿದ ಭಾಗವಾಗಿ ವೈದಿಕವು ಪಡಿಮೂಡಿರುವುದರಿಂದಲೇ ನಮ್ಮ ಸಂಸ್ಕೃತಿಯಲ್ಲಿ ಸಾವಿರಾರು ದೈವಗಳು - ಕೋಟಿ ಸಂಖ್ಯೆಯ ದೇವತೆಗಳು - ದೇವರುಗಳಿದ್ದರೂ ಗೊಂದಲವಿಲ್ಲ.ಸರ್ವ ಆಶೋತ್ತರಗಳ ಈಡೇರಿಕೆಗೆ ಒಂದೇ ದೇವರಿಗೆ ಶರಣಾಗುವ ಜಾಯಮಾನ ನಮ್ಮದಲ್ಲ.ನಮ್ಮಲ್ಲಿ‌ ಒಂದೊಂದು ಅನುಗ್ರಹಕ್ಕೆ ಒಬ್ಬೊಬ್ಬ ದೇವರಂತೆ ಆರಾಧಿಸುತ್ತೇವೆ. ಈ‌ದೇವರುಗಳ ಸಂದಣಿಯಲ್ಲಿ‌ ತಾಯಿಯಾಗಿ ರಕ್ಷಿಸುವ ,ತಂದೆಯಾಗಿ ಕರುಣೆತೋರುವ, ಸಂಪತ್ತನ್ನು‌ಕೊಡುವ, ವಿಘ್ನಗಳನ್ನು‌ನಿವಾರಿಸಿ ಬದುಕನ್ನು ನಿರಾಳವಾಗಿಸುವ,ದುಷ್ಟಾರಿಷ್ಟಗಳನ್ನು ಪರಿಹರಿಸುವವರು ಇದ್ದಾರೆ.ಮಾನವ ಬದುಕಿನ‌ ಪರಮ ಲಕ್ಷ್ಯ ಸುಖ, ಸಮೃದ್ಧಿ ಹಾಗೂ ಭಾರತೀಯ ತತ್ತ್ವಜ್ಞಾನದಂತೆ ಸತ್ ಸಂತಾನ ಪ್ರಾಪ್ತಿ, ಮಕ್ಕಳಿಲ್ಲದವನ ಬದುಕು ಸಾರ್ಥಕವಾಗಲಾರದು‌ ಆದುದರಿಂದಲೇ ಈ ಅನುಗ್ರಹ ಶಕ್ತಿಯನ್ನು ಹೊಂದಿರುವ ದೇವರು ಬಹುಮಾನ್ಯನಾಗಿ ಜನಪ್ರಿಯನಾಗುವುದು ಸಹಜ.ಅದರೊಂದಿಗೆ ಅಕ್ಷಯ ಕೃಷಿಸಂಪತ್ತನ್ನು ನೀಡುವ ,ತೀವ್ರ ವ್ಯಾಧಿಗಳನ್ನು ಗುಣ‌ಪಡಿಸುವ‌ ಅನುಗ್ರಹ ವಿಶೇಷ ‌ಇರುವುದರಿಂದಲೇ ನಾಗ - ಸುಬ್ರಹ್ಮಣ್ಯ ಸಾನ್ನಿಧ್ಯಗಳು ಜನಪ್ರೀತಿ ಪಡೆದುವು.

ನಿರಂತರ್ ಉದ್ಯಾವರ ಸಂಘಟನೆಗೆ ಐದನೇ ವರ್ಷದ ಸಂಭ್ರಮ : ನೂತನ ಅಧ್ಯಕ್ಷರಾಗಿ ರೋಶನ್ ಕ್ರಾಸ್ಟೋ ಆಯ್ಕೆ

Posted On: 28-11-2022 09:14PM

ಉದ್ಯಾವರ : ಕಲೆ ಮತ್ತು ಸಾಂಸ್ಕೃತಿಕ ಸಂಘಟನೆಯಾಗಿರುವ ನಿರಂತ್ ಉದ್ಯಾವರ ಇದರ ಐದನೇ ವರ್ಷದ ಅಧ್ಯಕ್ಷರಾಗಿ ವಿವಿಧ ಸಂಘ ಸಂಸ್ಥೆಗಳಲ್ಲಿ ವಿಶ್ವಾಸಾರ್ಹ ಸೇವೆ ಸಲ್ಲಿಸಿರುವ ರೋಶನ್ ಕ್ರಾಸ್ಟೋ ಆಯ್ಕೆಗೊಂಡಿದ್ದಾರೆ.

ಹೊಳಪು ಕ್ರೀಡಾಕೂಟದಲ್ಲಿ ನಾಲ್ಕು ಬಹುಮಾನಗಳನ್ನು ಮುಡಿಗೇರಿಸಿದ ಕಾಪು ಪುರಸಭೆ

Posted On: 28-11-2022 09:11PM

ಉಡುಪಿ : ಕೋಟ ಸಾಲಿಗ್ರಾಮದಲ್ಲಿ ನಡೆದ ಹೊಳಪು ಕ್ರೀಡಾಕೂಟದಲ್ಲಿ ಕಾಪು ಪುರಸಭೆ ಹಲವು ಬಹುಮಾನಗಳನ್ನು ಮುಡಿಗೇರಿಸಿಕೊಂಡಿದೆ.

ಕುಲಾಲ ಸಮಾಜ ಸೇವಾ ಸಂಘ ಬ್ರಹ್ಮಾವರ : ವಾರ್ಷಿಕ ಮಹಾಸಭೆ ; ಸತ್ಯನಾರಾಯಣ ಪೂಜೆ ; ವಿದ್ಯಾರ್ಥಿವೇತನ ವಿತರಣೆ

Posted On: 28-11-2022 07:08AM

ಉಡುಪಿ : ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಇದರ ವಾರ್ಷಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕುಲಾಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ರವಿವಾರ ಶಾರದಾ ಹೈಸ್ಕೂಲ್ ಚೇರ್ಕಾಡಿಯಲ್ಲಿ ನಡೆಯಿತು.

ಕಾಪು ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ - 2022 ಆಮಂತ್ರಣ ಪತ್ರಿಕೆ ಬಿಡುಗಡೆ

Posted On: 27-11-2022 07:30PM

ಕಟಪಾಡಿ : ಇಲ್ಲಿನ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 10ರಂದು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆಶ್ರಯದಲ್ಲಿ ನಡೆಯಲಿರುವ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು, ಗೋವಾ ವಿಮೋಚನ ಹೋರಾಟಗಾರರಾದ ಮಟ್ಟಾರು ವಿಟ್ಠಲ ಕಿಣಿಯವರು ಮಂಗಳೂರಿನ ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು.

ಬಿಳಿಯಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ

Posted On: 27-11-2022 07:24PM

ಕಾಪು : ತಾಲೂಕಿನ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಳಿಯಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವಿವಾರ ಭೇಟಿ ನೀಡಿದರು.

ಪಡೆದ ಡಿಗ್ರಿಯೊಂದಿಗೆ ಸಾಮಾನ್ಯ ಜ್ಞಾನವೂ ಅವಶ್ಯಕ : ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ

Posted On: 27-11-2022 07:03PM

ಬಂಟಕಲ್ಲು : ಪ್ರತಿಯೊಬ್ಬ ವ್ಯಕ್ತಿಗೂ ಜ್ಞಾನದ ಅವಶ್ಯಕತೆಯಿದೆ. ಇದರ ಜೊತೆಗೆ ಸಾಮಾನ್ಯ ಜ್ಞಾನದ ಅವಶ್ಯಕತೆಯೂ ಇದೆ. ಪಡೆದ ಡಿಗ್ರಿ ಮುಖ್ಯವಲ್ಲ. ಸಾಮಾನ್ಯ ಜ್ಞಾನ ಹೊಂದಿದರೆ ಮಾತ್ರ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಲು ಸಾಧ್ಯ. ಅಧ್ಯಯನ ಘಟ್ಟದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿ ಎಂದು ಉಡುಪಿ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದರು. ಅವರು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಇಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ನಡೆದ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಟೋಲ್ ಸುಲಿಗೆ - ಎರಡು ಜಿಲ್ಲೆಯ ಜನತೆಗೆ ಸಂಸದರು ಎಸೆಗಿದ ದ್ರೋಹ : ಯೋಗೀಶ್ ವಿ ಶೆಟ್ಟಿ

Posted On: 27-11-2022 01:52PM

ಕಾಪು : ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸುಲಿಗೆ ನಡೆಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ ಅಂದರೆ ಸರಕಾರದ ನಿರ್ಧಾರ ಇದು ಎರಡು ಜಿಲ್ಲೆಯ ಜನತೆಗೆ ಸಂಸದರು ಎಸೆಗಿದ ದ್ರೋಹ.