Updated News From Kaup

ಎಸ್ ಎಸ್ ಎಲ್ ಸಿ ಪರೀಕ್ಷೆ : ಮುಹಮ್ಮದ್ ಅಫ್ನಾನ್ 578 ( 92.48%) ಅಂಕ

Posted On: 05-05-2025 12:05PM

ಕಾಪು : ಕಾಪು ದಂಡತೀರ್ಥ ಇಂಗ್ಲಿಷ್ ಮೀಡಿಯಂ ಪಬ್ಲಿಕ್ ಹೈಸ್ಕೂಲ್ ನ ವಿದ್ಯಾರ್ಥಿ ಮುಹಮ್ಮದ್ ಅಫ್ನಾನ್ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 578 ( 92.48%) ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದ್ದಿದ್ದಾರೆ

ಕಾಪು : 75 ಲಕ್ಷ ರೂಪಾಯಿ ಅನುದಾನದ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ

Posted On: 03-05-2025 07:25PM

ಕಾಪು : ಕಾಪು ವಿಧಾನಸಭಾ ಕ್ಷೇತ್ರದ ಜಿಲ್ಲಾ ಮುಖ್ಯ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆಯಿಂದ 75 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿದ್ದು ಇದರ ಗುದ್ದಲಿ ಪೂಜೆಯನ್ನು ಶನಿವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು.

ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮೀಕ್ಷೆ ಕರಾರುವಕ್ಕಾಗಿ ನಡೆಯಬೇಕು : ತಹಶಿಲ್ದಾರ್ ಡಾ. ಪ್ರತಿಭಾ ಆರ್.

Posted On: 03-05-2025 05:49PM

ಕಾಪು : ಪರಿಶಿಷ್ಟ ಜಾತಿಯ ಪಟ್ಟಿಗೆ ಸೇರಿರುವ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ, ಔದ್ಯೋಗಿಕ ಪ್ರಾತಿನಿಧ್ಯತೆ ಇತ್ಯಾದಿ ಸ್ಥಿತಿಗತಿಗಳಿಗಾಗಿ ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯು ಅತ್ಯವಶ್ಯಕವಾಗಿದ್ದು ಪರಿಶಿಷ್ಟ ಜಾತಿ ಮೀಸಲಾತಿ ವರ್ಗೀಕರಣ ಸಮೀಕ್ಷೆಯಿಂದ ಒಂದೇ ಒಂದು ಕುಟುಂಬವು ಹೊರಗುಳಿಯದಂತೆ ನೋಡಿಕೊಳ್ಳಬೇಕು ಎಂದು ತಹಶಿಲ್ದಾರ್ ಡಾ.ಪ್ರತಿಭಾ ಆರ್ ಹೇಳಿದರು. ಕಾಪು ತಾಲೂಕಿನ ತಹಶಿಲ್ದಾರ್ ಕಚೇರಿಯ ಸಭಾಂಗಣದಲ್ಲಿ ನಡೆದ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.

ಆದ್ಯ.ಎಮ್.ಪೂಜಾರಿ : 592 ಅಂಕ

Posted On: 03-05-2025 05:14PM

ಕಾಪು : ಆದ್ಯ.ಎಮ್.ಪೂಜಾರಿ ಅವರು ಬೆಳಪು ಗ್ರಾಮದ ಅ.ಬಿ.ವಾಜಪೇಯಿ ಬಡವಣೆಯ ನಿವಾಸಿಯಾಗಿದ್ದು . ಇವರು ಪಯ್ಯಾರು ಪಿ.ಕೆ.ಎಸ್. ಪ್ರೌಢಶಾಲೆ ಕಳತ್ತೂರು, ಇಲ್ಲಿಯ ವಿದ್ಯಾರ್ಥಿನಿಯಾಗಿದ್ದು ಎಸ್. ಎಸ್. ಎಲ್.ಸಿ ಪರೀಕ್ಷೆಯಲ್ಲಿ 592(94.72%) ಅಂಕಗಳನ್ನು ಗಳಿಸಿರುತ್ತಾರೆ.

ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು : ಶೇ.100 ಫಲಿತಾಂಶ

Posted On: 03-05-2025 05:08PM

ಕಾಪು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಹೈಸ್ಕೂಲ್ ಕುತ್ಯಾರು 2025 ಮಾರ್ಚ್ ನಲ್ಲಿ ಜರಗಿದ ಎಸ್. ಎಸ್. ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಪರೀಕ್ಷೆಗೆ ಹಾಜರಾದ 11 ವಿದ್ಯಾರ್ಥಿಗಳು ಉತ್ತೀರ್ಣರಾಗಿ ನೂರು ಶೇಕಡ ಫಲಿತಾಂಶ ಬಂದಿರುತ್ತದೆ.

ಮೇ 5 : ಬಂಟಕಲ್ಲಿನಲ್ಲಿ ಕ.ಸಾ.ಪ. 111ನೇ ಸಂಸ್ಥಾಪನಾ ದಿನಾಚರಣೆ

Posted On: 03-05-2025 01:33PM

ಶಿರ್ವ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕಾಪು ತಾಲೂಕು ಕ.ಸಾ.ಪ. ಘಟಕ ಮತ್ತು ನಾಗರಿಕ ಸೇವಾ ಸಮಿತಿ ಬಂಟಕಲ್ಲು ಇದರ ಸಹಭಾಗಿತ್ವದಲ್ಲಿ "ಕನ್ನಡ ಸಾಹಿತ್ಯ ಪರಿಷತ್ತು ಇದರ 111ನೇ ಸಂಸ್ಥಾಪನಾ ದಿನಾಚರಣೆ" ಹಾಗೂ ಕುರಾಡಿ ಸೀತಾರಾಮ ಅಡಿಗ ಮತ್ತು ಡಿ.ಎಸ್.ಕಮಲಾಕ್ಷಿ ಅಡಿಗ ಸ್ಮಾರಕ ದತ್ತಿನಿಧಿ ಉಪನ್ಯಾಸ ಕಾರ್ಯಕ್ರಮ ಮೇ 5, ಸೋಮವಾರ ಸಂಜೆ ಘಂಟೆ 4 ಕ್ಕೆ ಬಂಟಕಲ್ಲು ಬಸ್ಸು ನಿಲ್ದಾಣದ ಸಾರ್ವಜನಿಕ ತೆರೆದ ವಾಚನಾಲಯದಲ್ಲಿ ಜರುಗಲಿದೆ.

ಬೆಳಪು ಸಂಜೀವಿನಿ ಸ್ವಸಹಾಯ ಸಂಘಗಳ ತಂಡದಿಂದ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪುರವರಿಗೆ ಅಭಿನಂದನೆ

Posted On: 03-05-2025 01:23PM

ಕಾಪು : ಬೆಳಪುವಿನ ಗ್ರಾಮ ಅಭಿವೃದ್ಧಿಯ ಹರಿಕಾರ ಡಾ. ದೇವಿ ಪ್ರಸಾದ್ ಶೆಟ್ಟಿ ಬೆಳಪು ಇವರು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕರಾಗಿ ಆಯ್ಕೆ ಆಗಿರುವ ಹಿನ್ನೆಲೆಯಲ್ಲಿ ಇವರನ್ನು ಬೆಳಪು ಗ್ರಾಮದ ಸಂಜೀವಿನಿ ಸ್ವಸಹಾಯ ಸಂಘಗಳ ತಂಡದ ವತಿಯಿಂದ ಅಭಿನಂದಿಸಲಾಯಿತು.

ಇನ್ನಂಜೆ ಮಹಿಳಾ ಮಂಡಳಿ ವಾರ್ಷಿಕೋತ್ಸವದ ಸಂಭ್ರಮಾಚರಣೆ : ಸ್ವರ್ಗ ಆಶ್ರಮ ಭೇಟಿ

Posted On: 03-05-2025 01:10PM

ಕಾಪು : ಇನ್ನಂಜೆ ಮಹಿಳಾ ಮಂಡಳಿ ಇನ್ನಂಜೆ ಇದರ ವಾರ್ಷಿಕೋತ್ಸವದ ಸಂಭ್ರಮಾಚರಣೆಯನ್ನು ಕೊಳಲಗಿರಿಯಲ್ಲಿರುವ ಹೊಂ ಡಾಕ್ಟರ್ ಫೌಂಡೇಶನ್ ಟ್ರಸ್ಟ್ ನ ಸ್ವರ್ಗ ಆಶ್ರಮದ ನಿವಾಸಿಗಳಿಗೆ ರೂ. ಹತ್ತು ಸಾವಿರ ನಗದು ಹಾಗೂ ಆಹಾರ ಸಾಮಗ್ರಿಗಳನ್ನು ನೀಡುವ ಮೂಲಕ ಆಚರಿಸಲಾಯಿತು.

ಸರಕಾರದ ವಿದ್ಯಾರ್ಥಿನಿಲಯಗಳ ಮಕ್ಕಳಿಗೆ ನೀಡುವ ಸೌಲಭ್ಯಗಳು ಪರಿಪೂರ್ಣವಾಗಿ ತಲುಪಬೇಕು : ಡಾ. ವಿದ್ಯಾಕುಮಾರಿ

Posted On: 03-05-2025 12:44PM

ಉಚ್ಚಿಲ : ಪೋಷಕರ ಉದ್ಯೋಗದ ನಿಮಿತ್ತ ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂಬ ನಿಲುವಿನ ಮೂಲಕ ದೇವರಾಜ ಅರಸುರವರು ವಿದ್ಯಾರ್ಥಿ ನಿಲಯಗಳನ್ನು ಸ್ಥಾಪಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳು ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ. ಮನೆಯ ಪ್ರೀತಿ, ವಾತ್ಸಲ್ಯ , ಗುಣಮಟ್ಟದ ಆಹಾರವನ್ನು ನ್ಯಾಯಯುತವಾಗಿ ನೀಡುವುದು ಎಲ್ಲಾ ಸಿಬ್ಬಂದಿಗಳ ಜವಾಬ್ದಾರಿ. ನಮ್ಮ ಮಕ್ಕಳು ಎಂಬ ಭಾವನೆಯಿರಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಹೇಳಿದರು. ಅವರು ಜಿಲ್ಲಾಡಳಿತ ಉಡುಪಿ, ಜಿಲ್ಲಾ ಪಂಚಾಯತಿ ಉಡುಪಿ, ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ ಅಡುಗೆಯವರು ಮತ್ತು ಅಡುಗೆ ಸಹಾಯಕರುಗಳಿಗೆ ವಿದ್ಯಾರ್ಥಿ ನಿಲಯಗಳ ಸಮರ್ಪಕ ನಿರ್ವಹಣೆ ಕುರಿತು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಸಭಾಭವನದಲ್ಲಿ ಜರಗಿದ ವಿಶೇಷ ಪುನಶ್ಚೇತನ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.

ದ.ಕ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಚುನಾವಣೆ : ಜಯಭೇರಿ ಬಾರಿಸಿದ ಐಕಳಬಾವ ಡಾ.ದೇವಿಪ್ರಸಾದ್ ಶೆಟ್ಟಿ

Posted On: 27-04-2025 07:38PM

ಪಡುಬಿದ್ರಿ : ದ.ಕ ಹಾಲು ಉತ್ಪಾದಕರ ಒಕ್ಕೂಟದ ಅಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡರಾದ ಐಕಳಬಾವ ಡಾ. ದೇವಿಪ್ರಸಾದ್ ಶೆಟ್ಟಿಯವರ ನೇತೃತ್ವದ ತಂಡ ಭರ್ಜರಿ ಬಹುಮತದಿಂದ ಜಯಭೇರಿ ಗಳಿಸಿದೆ.