Updated News From Kaup
ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆ
Posted On: 27-11-2022 01:46PM
ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ
Posted On: 27-11-2022 01:41PM
ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್ಸಿಸಿ ದಿನಾಚರಣೆಯ ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮ ಏರ್ಪಡಿಸಲಾಯಿತು. ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿದರು.
ಉಡುಪಿ : ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ವಾರ್ಷಿಕ ಹರಕೆ ಸೇವೆ
Posted On: 27-11-2022 01:00PM
ಉಡುಪಿ : ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಹಾವಂಜೆ ಗ್ರಾಮದ ಕೊಳಲಗಿರಿ ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಹರಕೆ ಸೇವೆ ಜರಗಿತು.
ಭೃಷ್ಟಾಚಾರದ ಸರಕಾರದಿಂದ ಟೋಲ್ ದರೋಡೆ : ರಮೀಜ್ ಹುಸೇನ್
Posted On: 27-11-2022 12:50PM
ಪಡುಬಿದ್ರಿ : ಅತ್ಯಂತ ಕಠೋರ ಹೃದಯದ ಜನ ವಿರೋಧಿ ಸರಕಾರದ ನಿರ್ಧಾರ ಜನರ ಬದುಕಿನಲ್ಲಿ ಚೆಲ್ಲಾಟ ನಡೆಸುತ್ತಿದೆ. ಸುರತ್ಕಲ್ ಟೋಲ್ ಅನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕರನ್ನು ಸೇರಿಸಿ ಟೋಲ್ ಹೋರಾಟ ಸಮಿತಿ ಅನಿರ್ಧಿಷ್ಟ ಅವಧಿ ಹಗಲು ರಾತ್ರಿ ಧರಣಿಯನ್ನು ಹಮ್ಮಿಕೊಂಡಿರುವ ಪರಿಣಾಮ ಸುರತ್ಕಲ್ ಟೋಲ್ ನ್ನು ರದ್ದು ಮಾಡುತ್ತೇವೆ ಅನ್ನುತ್ತಿದ್ದ ಜನಪ್ರತಿನಿಧಿಗಳು , ಇಂದು ವಿಲೀನದ ನೆಪ ಹೇಳಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ನಲ್ಲಿ ಪೂರ್ತಿಯಾಗಿ ಸೇರಿಸಿ ಹಣ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ.
ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
Posted On: 27-11-2022 12:48PM
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು.
ಡಿಸೆಂಬರ್ 16 : ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ
Posted On: 25-11-2022 10:59PM
ಕಾಪು : ಇಲ್ಲಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಡಿಸೆಂಬರ್ 16ರಂದು ಜರಗಲಿದ್ದು ಆ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಬಿಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ದೇವಿ ದರ್ಶನ, ಮಧ್ಯಾಹ್ನ 1.30 ಕ್ಕೆ ಅನ್ನ ಪ್ರಸಾದ ಹಾಗೂ ಸಂಜೆ 7 ಗಂಟೆಗೆ ಭಜನೆ, ರಾತ್ರಿ 10 ಗಂಟೆಗೆ ಮಹಾಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಬಿಂಬ ವಿಸರ್ಜನೆ ನಡೆಯಲಿದೆ.
ಕಾಪು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಮಚಂದ್ರ ಆಚಾರ್ಯರಿಗೆ ಪತ್ರಕರ್ತರ ಅಭಿನಂದನೆ
Posted On: 25-11-2022 09:45PM
ಕಾಪು : ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯರವರನ್ನು ದಂಪತಿ ಸಮೇತವಾಗಿ ಕಾಪು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಮ್ಮೂರ ಮಂದಾರ ಹೋಟೆಲ್ ಸಭಾಭವನದಲ್ಲಿ ಸನ್ಮಾನಿಸಲಾಯಿತು.
ನವಂಬರ್ 27: ಕುಲಾಲ ಚಾವಡಿ ವಾಟ್ಸಪ್ ಬಳಗ ವತಿಯಿಂದ ಕುಲಾಲ ಚಾವಡಿ ಸಂಭ್ರಮ 2022
Posted On: 25-11-2022 07:50PM
ಕಾರ್ಕಳ : ಸಾಮಾಜಿಕ ಜಾಲತಾಣದ ವಾಟ್ಸಪ್ ಗ್ರೂಪ್ ಮುಖೇನ ಕುಲಾಲ ಸಮುದಾಯದ ಹಲವಾರು ಕುಟುಂಬದಲ್ಲಿ ಮಂದಹಾಸ ಮೂಡಿದ ತಂಡದ ಸಮಸ್ತ ಸದಸ್ಯರಿಂದ ಕುಲಾಲ ಚಾವಡಿ ಸಂಭ್ರಮ ಕಾರ್ಯಕ್ರಮ ನವಂಬರ್ 27 ರಂದು ಕಾರ್ಕಳ ಮಿಯ್ಯಾರು ರಾಮರಗುತ್ತು ನದಿಯ ತೀರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕುಲಾಲ ಚಾವಡಿ ಅಡ್ಮಿನ್ ಬಳಗದ ಸಂತೋಷ್ ಕುಲಾಲ್ ಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದಿಂದ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ
Posted On: 25-11-2022 06:28PM
ಕಾಪು : ಯಾವುದೇ ಪ್ರದೇಶದ ಸಾಂಸ್ಕೃತಿಕ ಹಿನ್ನೆಲೆಯ ಚಲನಚಿತ್ರ ವೀಕ್ಷಿಸಿದಾಗ ಅಲ್ಲಿಯ ಚಿತ್ರಣ ನಮ್ಮ ಮುಂದೆ ಹೇಗೆ ಬರುತ್ತದೆಯೋ ಹಾಗೆ ಸಾಹಿತ್ಯದ ಓದುವಿಕೆಯಿಂದ ಕವಿ, ಲೇಖಕರ ಓದು, ಹಿನ್ನೆಲೆ, ಪರಿಸರ ಇತ್ಯಾದಿ ತಿಳಿಯಲು ಸಾಧ್ಯ. ಬರೆಯಲು ಪ್ರತಿಯಬ್ಬರಿಗೂ ಸಾಧ್ಯ. ಪ್ರಯತ್ನ ಪಡದೆ ಯಾವುದೇ ಕಾರ್ಯ ಸಾಧ್ಯವಾಗದು. ಯಾವುದೇ ವಿಷಯವನ್ನು ಬರೆದು, ಓದಿದಾಗ ನಮ್ಮಲ್ಲಿ ಉಳಿಯಲು ಸಾಧ್ಯ. ನಮ್ಮನ್ನು ನಾವು ಪ್ರಯೋಗಕ್ಕೆ ಒಡ್ಡಿದಾಗ ಯಾವುದೇ ಕಾರ್ಯ ಸಾಧ್ಯ. ಮೊದಲ ಅಕ್ಷರದಿಂದ ಯಾರು ಸಾಹಿತಿ ಆಗಿಲ್ಲ. ಓದು, ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಬಹುದು. ಸಾಹಿತ್ಯದ ಬಗೆಗಿನ ಒಲವನ್ನು ನಾವೆಲ್ಲರೂ ಬೆಳೆಸೋಣ ಎಂದು ಕಟಪಾಡಿಯ ತೃಷಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಹೇಳಿದರು.
ಕ್ರಿಕೆಟ್ : ಕಟಪಾಡಿಯ ರಿತೇಶ್ ಹೆಚ್ ಸುವರ್ಣ ರಾಜ್ಯಮಟ್ಟಕ್ಕೆ ಆಯ್ಕೆ
Posted On: 24-11-2022 11:12PM
ಕಟಪಾಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನವೆಂಬರ್ 16 ಮತ್ತು 17 ರಂದು ಹಾಸನ ಜಿಲ್ಲೆಯ ತಾಲೂಕು ಕ್ರೀಡಾಂಗಣ ಚನ್ನರಾಯಪಟ್ಟಣದಲ್ಲಿ ನಡೆಯಿತು.
