Updated News From Kaup

ಜೆಸಿಐ ಶಂಕರಪುರ ಜಾಸ್ಮಿನ್ : ಪದಪ್ರದಾನ ಸಮಾರಂಭ

Posted On: 17-11-2022 05:28PM

ಕಾಪು : ಜೆಸಿಐ ಶಂಕರಪುರ ಜಾಸ್ಮಿನ್ ಇದರ 2022-23 ಪದಪ್ರದಾನ ಸಮಾರಂಭವು ಜೆಸಿಐ ಶಂಕರಪುರ ಸಭಾಭವನದಲ್ಲಿ ಜರುಗಿತು.

ನವೆಂಬರ್ 20 : ಬಿರುವೆರ್ ಕಾಪು ಸೇವಾ ಸಮಿತಿ - ಜ್ಞಾನ ದೀವಿಗೆ ; 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ

Posted On: 15-11-2022 10:52PM

ಕಾಪು : ಬಿರುವೆರ್ ಕಾಪು ಸೇವಾ ಸಮಿತಿಯ ವತಿಯಿಂದ 3ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಮತ್ತು ಸನ್ಮಾನ ಸಮಾರಂಭ ನವೆಂಬರ್ 20, ಆದಿತ್ಯವಾರ ಅಪರಾಹ್ನ 2 ಗಂಟೆಗೆ ಕಾಪು ಬಿಲ್ಲವರ ಸಹಾಯಕ ಸಂಘ (ರಿ.) ಕಾಪು ಇಲ್ಲಿ ಜರಗಲಿದೆ.

ಪೆರ್ಣಂಕಿಲ ದೇವಳ ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ

Posted On: 15-11-2022 02:22PM

ಉಡುಪಿ : ಪೆರ್ಣಂಕಿಲ ಶ್ರೀಮಹಾಲಿಂಗೇಶ್ವರ ಮತ್ತು ಮಹಾಗಣಪತಿ ದೇವಳದ ಜೀರ್ಣೊದ್ಧಾರ ಅಂಗವಾಗಿ 10ಕೋಟಿ ರೂ. ವೆಚ್ಚದ ಯೋಜನೆ ರೂಪಿಸಿದ್ದು ಜೀರ್ಣೋದ್ಧಾರ ಕಚೇರಿ ಉದ್ಘಾಟನೆ, ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ಜೀರ್ಣೋದ್ಧಾರ ಪೂರ್ವಭಾವಿ ಸಭೆಯು ಸೋಮವಾರ ನಡೆಯಿತು. ಅಯೋಧ್ಯೆಯ ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟಿನ ವಿಶ್ವಸ್ತ ಹಾಗೂ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜೀರ್ಣೋದ್ಧಾರ ಕಚೇರಿ ಉದ್ಘಾಟಿಸಿ, ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿ, ಬರಿಗೈಯಲ್ಲಿ ಬಂದ ನಾವು ಭಗವಂತ ಕೊಟ್ಟದ್ದನ್ನು ಮರಳಿ ಸಮರ್ಪಿಸುವುದರಲ್ಲಿ ಬದುಕಿನ ಸಾರ್ಥಕ್ಯವಿದೆ. ದೇವರು ಕೊಟ್ಟ ಭತ್ತವನ್ನು ದೇವರು ಕೊಟ್ಟ ಭೂಮಿಯಲ್ಲಿ ಬಿತ್ತಿ, ದೇವರು ಕೊಟ್ಟ ನೀರೆರೆದು ಭತ್ತ ಉತ್ಪಾದಿಸಿ ದೇವರಿಗೆ ಸಮರ್ಪಿಸುವುದರ ಹಿಂದೆ ದೇವರ ಅನುಗ್ರಹ ಸ್ಮರಣೆ ಮುಖ್ಯ. ನಮ್ಮದಲ್ಲದ್ದು ನಮ್ಮದಾಗದು, ಎಲ್ಲವೂ ಭಗವಂತನಿಗೆ ಸೇರಿದ್ದು , ತನ್ನದಲ್ಲದ ಸೊತ್ತು ಉಣ್ಣುವವ ಹೇಗೆ ಕಳ್ಳ, ದರೋಡೆಕೋರ ಎನಿಸಿಕೊಳ್ಳುತ್ತಾನೋ ಹಾಗೆಯೇ ದೇವರ ಸೊತ್ತಿಗೆ ಕೈ ಹಾಕಿದರೆ ನಾವು ಕಳ್ಳರಾಗುತ್ತೇವೆ. ದೇವರು ಕೊಟ್ಟದ್ದನ್ನು ನಾವು ಅನುಭವಿಸುತ್ತೇವೆ ಎನ್ನುವ ಅರ್ಪಣೆ, ಕೃತಜ್ಞತಾ ಮನೋಭಾವ ನಮಗಿದ್ದರೆ ಅದು ದೇವರ ಪೂಜೆಯಾಗಬಲ್ಲದು ಎಂದರು.

ಕಾಪು : ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ಭಜನೆ, ದೀಪೋತ್ಸವ ಸಂಪನ್ನ

Posted On: 14-11-2022 10:34PM

ಕಾಪು : ತಾಲೂಕಿನ ಉಂಡಾರು ವಿಷ್ಣುಮೂರ್ತಿ ದೇವಳದಲ್ಲಿ ನವೆಂಬರ್ 13ರಂದು ಉದಯಾಸ್ತಮಾನ ಭಜನೆ ಹಾಗೂ ಸಾಯಂಕಾಲ ಪರಮಪೂಜ್ಯ ವಿಶ್ವವಲ್ಲಭತೀರ್ಥ ಶ್ರೀಗಳ ಉಪಸ್ಥಿತಿಯಲ್ಲಿ ದೀಪೋತ್ಸವ ಜರಗಿತು.

ಸುರತ್ಕಲ್ ಟೋಲ್ ರದ್ದು : ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್

Posted On: 14-11-2022 04:50PM

ಸುರತ್ಕಲ್ : ಕಳೆದ ಹದಿನೆಂಟು ದಿನಗಳಿಂದ ಸುರತ್ಕಲ್ ಟೋಲ್ ಸಂಗ್ರಹ ಕೇಂದ್ರ ರದ್ದತಿಗೆ ಆಗ್ರಹಿಸಿ ವಿವಿಧ ಸಮಾನ ಮನಸ್ಕ ಸಂಘಟನೆಗಳು ಧರಣಿ ನಿರತವಾಗಿದ್ದವು ಇದೀಗ ಅದರ ಪ್ರತಿಫಲವೆಂಬಂತೆ ಟೋಲ್ ರದ್ಧತಿ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿ ಈ ವಿಷಯ ಹಂಚಿಕೊಂಡಿದ್ದಾರೆ.

ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು : ಜೀರ್ಣೋದ್ಧಾರ ಪೂರ್ವಭಾವಿಯಾಗಿ ತಾಂಬೂಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ

Posted On: 13-11-2022 03:26PM

ಕಾಪು : ಶ್ರೀ ಬಬ್ಬರ್ಯ ದೈವಸ್ಥಾನ ಮೂಡು ಮಟ್ಟಾರು ದೈವಸ್ಥಾನದ ಜೀರ್ಣೋದ್ಧಾರ ಪೂರ್ವಭಾವಿಯಾಗಿ ತಾಂಬೂಲ ಪ್ರಶ್ನೆಯ ಪರಿಹಾರ ಕಾರ್ಯಕ್ರಮ ನವೆಂಬರ್ 11 ರಂದು ಸಂಜೆ 5 ರಿಂದ ವಿಷ್ಣುಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುಪತಿ ಗುಂಡು ಭಟ್ ಇವರ ನೇತೃತ್ವದಲ್ಲಿ ಮತ್ತು ಆಗಮನ ಪಂಡಿತ ವೇ| ಮೂ | ಕುತ್ಯಾರು ಕೇಂಜ ಶ್ರೀಧರ್ ತಂತ್ರಿ ಯವರ ಉಪಸ್ಥಿಯಲ್ಲಿ ಅಘೋರ ಹೋಮ ಮತ್ತು ಪ್ರೇತ ಉಚ್ಚಾಟನೆ ಹಾಗೂ ಇನ್ನಿತರ ವೈದಿಕ ವಿಧಿ ವಿಧಾನಗಳು ಬಬ್ಬರ್ಯ ದೈವಸ್ಥಾನದ ಸಾನಿಧ್ಯದಲ್ಲಿ ನಡೆಯಿತು.

ವೇದಿಕೆಯಲ್ಲಿರುವ ವ್ಯಕ್ತಿಗಳು ದೊಡ್ಡವರಲ್ಲ, ವೇದಿಕೆಯ ಮುಂಭಾಗದಲ್ಲಿರುವ ವ್ಯಕ್ತಿಗಳು ಸಣ್ಣವರಲ್ಲ : ಎನ್. ದಾಮೋದರ ಬರ್ಮಾ ಬರ್ಕಾ

Posted On: 13-11-2022 03:13PM

ಬಂಟಕಲ್ಲು : ವೇದಿಕೆಯಲ್ಲಿರುವ ವ್ಯಕ್ತಿಗಳು ದೊಡ್ಡವರಲ್ಲ ವೇದಿಕೆಯ ಮುಂಭಾಗದಲ್ಲಿರುವ ವ್ಯಕ್ತಿಗಳು ಸಣ್ಣವರಲ್ಲ ಎಂದು ಉತ್ತಮ ಕಾರ್ಯಕ್ರಮ ನಿರೂಪಕ ವಾಗ್ಮಿ ವಿದ್ವಾಂಸರಾದ ಎನ್. ದಾಮೋದರ ಶರ್ಮಾರವರು ಬಂಟಕಲ್ಲು ಶ್ರೀ ವಿಶ್ವಕರ್ಮ ಸಂಘದ ಸಂಸ್ಥೆಯಾದ ಶ್ರೀ ವಿಶ್ವಕರ್ಮ ಯುವಕ ಸೇವಾದಳ ನೂತನ ಸದಸ್ಯರಿಗೆ ನೀಡಿದ ಸಜ್ಜನರು ಸವೆಸಿದ ದಾರಿ ಮಾಹಿತಿ ಕಾರ್ಯಕ್ರಮದಲ್ಲಿ ನಮ್ಮತನವನ್ನು ಉಳಿಸುವುದರ ಜೊತೆಗೆ ನಮ್ಮ ಸಮಾಜವನ್ನು ಬೆಳೆಸುವಂತೆ ಯುವಕರು ಮುನ್ನಡೆಯಬೇಕು ಹಿರಿಯರ ಮನಸ್ಸು ನೋವಾಗದ ರೀತಿಯಲ್ಲಿ ನಾವು ಬದುಕಿ ಬಾಳಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂತ ಮೇರಿ ಮಹಾವಿದ್ಯಾಲಯದಲ್ಲಿ ಎನ್‌ಸಿಸಿಯ ಸ್ವಚ್ಛತಾ ಶ್ರಮದಾನ - ಜನಾಂದೋಲನ

Posted On: 12-11-2022 10:47PM

ಶಿರ್ವ : ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಚ್ಛತಾ ಶ್ರಮದಾನ- ಜನಾಂದೋಲನ ಕಾರ್ಯಕ್ರಮವನ್ನು ಶನಿವಾರ ಆಯೋಜಿಸಲಾಯಿತು.

ಪಲಿಮಾರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 2.6 ಕೋಟಿ ರೂ ಅನುದಾನ : ಶಾಸಕ ಲಾಲಾಜಿ ಮೆಂಡನ್

Posted On: 12-11-2022 10:39PM

ಪಲಿಮಾರು : ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಪಲಿಮಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 2.06 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಕುತ್ಯಾರು ಸೂರ್ಯ ಚೈತನ್ಯ ಶಾಲೆಯಲ್ಲಿ ಪೋಷಕರ ಸಭೆ ಮತ್ತು ಉಪನ್ಯಾಸ ಕಾರ್ಯಕ್ರಮ

Posted On: 12-11-2022 09:44PM

ಕಾಪು : ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನಲ್ ಟ್ರಸ್ಟ್ (ಅಸೆಟ್) ನ ಅಧೀನದಲ್ಲಿರುವ ಕುತ್ಯಾರು ಸೂರ್ಯಚೈತನ್ಯ ಗ್ಲೋಬಲ್ ಅಕಾಡೆಮಿ ಹೈಸ್ಕೂಲಿನಲ್ಲಿ ನವೆಂಬರ್ 12 ರಂದು ಪೋಷಕರ ಸಭೆ ನಡೆಯಿತು.