Updated News From Kaup

ಬಟರ್ ಫ್ಲೈ ಗೆಸ್ಟ್ ಹೌಸ್ ಚಂದ್ರನಗರ ವತಿಯಿಂದ ಸಿ.ಸಿ.ಕ್ಯಾಮರ ಕೊಡುಗೆ

Thumbnail
Posted On: 27 Dec 2022, 02:56 PM

ಚಂದ್ರನಗರ : ಕಾಪು ತಾಲೂಕಿನ ಕಳತ್ತೂರು ಚಂದನಗರ ಬಟ‌ರ್ ಫ್ಲೈ ಗೆಸ್ಟ್ ಹೌಸ್ ವತಿಯಿಂದ ಚಂದ್ರನಗರ ಮೇಲ್ ಪೇಟೆಯಲ್ಲಿ ಸಾರ್ವಜನಿಕರಿಗೋಸ್ಕರ 30,000 ವೆಚ್ಚದಲ್ಲಿ ಸಿ.ಸಿ.ಕ್ಯಾಮರ ಅಳವಡಿಸಿ ಇದನ್ನು ಶಿರ್ವ ಪೋಲಿಸ್ ಠಾಣಾಧಿಕಾರಿ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಾಪು ಕ್ಷೇತ್ರದಲ್ಲಿ ಪ್ರಖ್ಯಾತ ಸಮಾಜ ಸೇವಕರಾಗಿರುವ ಫಾರೂಕ್ ಚಂದ್ರನಗರ ಮತ್ತು ಅವರ ಸಂಗಡಿಗರು ಸೇರಿಕೊಂಡು ಕೊರೋನಾ ಸಮಯದಲ್ಲಿ ಜನರಿಗೆ ತುಂಬಾ ಸಹಕಾರ ನೀಡಿದ್ದಲ್ಲದೇ, ಹಲವಾರು ವರ್ಷಗಳಿಂದ ಸಮಾಜಮುಖಿ ಕೆಲಸ ಮಾಡಿ ಈ ಭಾಗದಲ್ಲಿ ಶಾಂತಿ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅದಲ್ಲದೇ ಇಲ್ಲಿ ಕೂಡಾ ಸಿ.ಸಿ.ಕ್ಯಾಮರ ಅಗತ್ಯವಿದ್ದು ಅಪರಾಧ ಕೇಸುಗಳನ್ನು ಪತ್ತೆ ಮಾಡಲು ತುಂಬಾ ಸಹಕಾರಿ ಆಗುತ್ತದೆ ಎಂದರು. ಈ ಸಮಾರಂಭದಲ್ಲಿ ಬಟರ್ ಫ್ಲೈ ಗೆಸ್ಟ್ ಹೌಸ್‌ನ ಮಾಲಕ ಮೊಹಮ್ಮದ್ ಫಾರೂಕ್ ಚಂದ್ರನಗರ, ಠಾಣಾ ಪ್ರೊಬೆಷನರಿ ಎಸ್.ಐ ಶಶಿಧರ, ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ದಿವಾಕರ ಬಿ ಶೆಟ್ಟಿ, ಸಂಚಾಲಕ ದಿವಾಕರ ಡಿ ಶೆಟ್ಟಿ, ಉದ್ಯಮಿ ಉಮರಬ್ಬ ಚಂದ್ರನಗರ, ಶಿರ್ವ ಉದ್ಯಮಿ ಹೆಚ್ ಆರ್ ರೆಸಿಡೆನ್ಸಿ ಮಾಲಕ ಹಸನ್, ಶಿರ್ವ ಪಂಚಾಯತ್ ಸದಸ್ಯೆ ಶಾಂಭವಿ ಕುಲಾಲ್‌, ಭಾರತಿ ಶೆಟ್ಟಿಗಾರ ಮುಂತಾದವರು ಉಪಸ್ಥಿತರಿದ್ದರು.

ಕಾರ್ಕಳ : ಕ್ರಿಯೇಟಿವ್‌ ಪಿ.ಯು ಕಾಲೇಜು ವಾರ್ಷಿಕೋತ್ಸವ ಆವಿರ್ಭವ್‌ - 2022

Thumbnail
Posted On: 27 Dec 2022, 02:39 PM

ಕಾರ್ಕಳ : ಗ್ರಾಮೀಣ ಪ್ರದೇಶದಲ್ಲಿ ಕ್ರಿಯೇಟಿವ್‌ನಂತಹ ವಿದ್ಯಾಸಂಸ್ಥೆಗಳು ಬಂದಲ್ಲಿ ಅಂತಹ ಪ್ರದೇಶ ಅಭಿವೃದ್ಧಿ ಹೊಂದುವುದರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲೂ ಉತ್ತಮ ಬದಲಾವಣೆಯಾಗುತ್ತದೆ. ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭೆಗೆ ಮನ್ನಣೆ ದೊರೆತಂತೆ ಆಗುತ್ತದೆ ಎಂದು ಮಾನ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯ ಸಚಿವರಾದ ವಿ. ಸುನೀಲ್‌ ಕುಮಾರ್‌ ಹೇಳಿದರು. ಕಾರ್ಕಳದ ಕ್ರಿಯೇಟಿವ್‌ ಕಾಲೇಜಿನಲ್ಲಿ ನಡೆದ ಕ್ರಿಯೇಟಿವ್‌ ಆವಿರ್ಭವ್‌ -2022 ರ ವಾರ್ಷಿಕೋತ್ಸವದಲ್ಲಿ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳ ಉಚಿತ ಶಿಕ್ಷಣ ವ್ಯವಸ್ಥೆ ʼಕ್ರಿಯೇಟಿವ್‌ ಹೊಂಗಿರಣʼ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಡಾ. ನರೇಂದ್ರ ರೈ ದೇರ್ಲ ಆಗಮಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಸಾಹಿತ್ಯದ ಮಾನವಿಕ ಅಂಶ ಪ್ರತಿ ವಿದ್ಯಾರ್ಥಿಯ ಗುರಿಯಾಗಬೇಕು. ಸಹಜ ಬದುಕು ಬದುಕಲು ಮಾನವನ ದುರಾಸೆ ಬಿಡುತ್ತಿಲ್ಲ ಮಾನವೀಯ ಮೌಲ್ಯಗಳೊಂದಿಗೆ ಜೀವಿಸಿ ಎಂದು ಕರೆ ನೀಡಿದರು. ವಿದ್ಯಾರ್ಥಿ ಜೀವನದಲ್ಲಿ ಕಲೆ ಸಾಹಿತ್ಯದೊಂದಿಗೆ ಒಡನಾಟ ಬೆಳೆಸಿಕೊಂಡು ಪರಿಸರ ಪ್ರೀತಿಯೊಂದಿಗೆ ಬದುಕಲು ಕಲಿಯೋಣ ಎಂದು ಆಶಿಸಿದರು. ಇನ್ನೋರ್ವ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಹಿರ್ಗಾನ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀ. ಸಂತೋಷ್‌ ಶೆಟ್ಟಿಯವರು ಪರಸ್ಪರ ಸಹಕಾರದ ಮೂಲಕ ಉತ್ತಮ ವಿದ್ಯಾಸಂಸ್ಥೆಯನ್ನು ಕಟ್ಟೋಣ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಕಳೆದ ವರ್ಷ ದ್ವಿತೀಯ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು ಹಾಗೂ 2022ನೇ ಇಸವಿಯಲ್ಲಿ ಪ್ರತಿಷ್ಠತ ಸಂಸ್ಥೆಗಳಲ್ಲಿ ಕಾಲೇಜಿನಲ್ಲಿ 16 ವೈದ್ಯಕೀಯ ಮತ್ತು ಇಂಜಿನಿಯರಿಂಗ್‌ ಗೆ ಪ್ರವೇಶ ಪಡೆದ 17 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಟ್ಲ್‌ ಬ್ಯಾಡ್ಮಿಂಡನ್‌ ನಲ್ಲಿ ಜಿಲ್ಲಾಮಟ್ಟದಿಂದ ರಾಜ್ಯ ತಂಡಕ್ಕೆ ಆಯ್ಕೆಯಾದ ಕ್ರೀಡಾ ಪ್ರತಿಭೆ ಕು.ಲೇಖನಾ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದ ನಿಹಾರ್‌ ಭಟ್‌ ಮತ್ತು ಸುಮಂತ್‌ ಶೆಟ್ಟಿ, ಹಾಸನದಲ್ಲಿ ನಡೆದ ಮೈಸೂರು ವಿಭಾಗಮಟ್ಟದ ಪ್ರತಿಭಾ ಕಾರಂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿ ಅಜಯ್‌ ಇವರನ್ನು ಸಂಸ್ಥೆಯ ವತಿಯಿಂದ ಗೌರವಿಸಲಾಯಿತು. ಬೆಳಿಗ್ಗೆ ಕುಂದಾಪುರದ ಅಂತರಾಷ್ಟ್ರೀಯ ಖ್ಯಾತಿಯ ಮೂರು ಮುತ್ತು ಕಲಾವಿದರಿಂದ ಹಾಸ್ಯಮಯ ನಗೆನಾಟಕ ನಡೆಯಿತು. ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ಸಂಸ್ಥೆಯ ವಾರ್ಷಿಕ ವರದಿ ವಾಚಿಸಿದರು. ಸಂಸ್ಥಾಪಕರಲ್ಲೊಬ್ಬರಾದ ಅಶ್ವತ್ ಎಸ್.ಎಲ್‌ ಪ್ರಾಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ಗಣಪತಿ ಭಟ್‌ ಕೆ.ಎಸ್‌ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ, ಆದರ್ಶ ಎಂ.ಕೆ, ವಿಮಲ್‌ರಾಜ್‌. ಜಿ, ಅಮೃತ್‌ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕ ಲೋಹಿತ್‌ ಎಸ್‌.ಕೆ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮ ನಿರ್ವಹಿಸಿದರು. ರಾಮಕೃಷ್ಣ ಹೆಗಡೆ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು. ಕನ್ನಡ ಉಪನ್ಯಾಸಕ ಸತೀಶ್‌ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸಭಾಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ʼಕಲಾಸಿಂಧುʼ ವೇದಿಕೆಯಲ್ಲಿ ʼಭಾರತ ವೈಭವʼ ಪರಿಕಲ್ಪನೆಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕುಲಾಲ ಸಂಘ ನಾನಿಲ್ತಾರ್ ಮುಂಡ್ಕೂರು : 34ನೇ ವರ್ಷದ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ವೈದ್ಯಕೀಯ ನೆರವು, ಸಾಂಸ್ಕೃತಿಕ, ಅಭಿನಂದನ ಕಾರ್ಯಕ್ರಮ

Thumbnail
Posted On: 27 Dec 2022, 02:25 PM

ಕಾಪು : ಸಮಾಜದ ಅತ್ಯಂತ ಹಿಂದುಳಿದ ಸಮಾಜವನ್ನು ಗುರುತಿಸಿ ಸಮಾಜದ ಅಭಿವೃದ್ಧಿಗೆ ಸರಕಾರದಿಂದ ಅನುದಾನಗಳನ್ನು ದೊರಕಿಸಿ ಕೊಡುವ ನಿರಂತರ ಪ್ರಯತ್ನಗಳನ್ನು ಮಾಡಲಾಗುವುದು. ಸಂಘವು ಹತ್ತಾರು ಕಾರ್ಯಕ್ರಮಗಳನ್ನು ಆಯೋಜಿಸಿ ನಿರಂತರ ಚಟುವಟಿಕೆಗಳನ್ನು ನೀಡುವುದು ತುಂಬಾ ಹೆಮ್ಮೆಯಾಗಿದೆ ಎಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನೀಲ್ ಕುಮಾರ್ ಹೇಳಿದರು. ಅವರು ಡಿಸೆಂಬರ್ 25 ರಂದು ಕುಲಾಲ ಸಂಘ ನಾನಿಲ್ತಾರ್ (ರಿ.) ಮುಂಡ್ಕೂರು ಇದರ 34ನೇ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ ಮತ್ತು ವೈದ್ಯಕೀಯ ನೆರವು, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ‌ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ವಹಿಸಿದ್ದರು. ರಾಜ್ಯ ಸರಕಾರದಿಂದ ಡಿ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತರಾದ ಡಾ| ಅಣ್ಣಯ್ಯ ಕುಲಾಲ್ ದಂಪತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಐತು ಕುಲಾಲ್ ಕನ್ಯಾನ ಇವರನ್ನು ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಮುಂಬೈ ಉದ್ಯಮಿ ಸುನಿಲ್ ಸಾಲ್ಯಾನ್, ಮುಂಬೈ ಕುಲಾಲ ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ದೇವ್ ದಾಸ್ ಕುಲಾಲ್, ವಕೀಲರಾದ ಸುನೀಲ್ ಎಸ್ ಮೂಲ್ಯ, ಸಂಘದ ಮಹಿಳಾ ಘಟಕದ ಅಧ್ಯಕ್ಷರಾದ ಪ್ರತೀಮಾ ಶ್ರೀಧರ್, ಯುವ ವೇದಿಕೆ ಅಧ್ಯಕ್ಷರಾದ ದೀಪಕ್ ಬೆಳ್ಮಣ್, ಸಾಂಸ್ಕೃತಿಕ ಕಾರ್ಯದರ್ಶಿ ಹರ್ಷಿತ, ಮುಂಬೈ ಸುಕುಮಾರ್ ಸಾಲ್ಯಾನ್, ಸಂಘದ ಉಪಾಧ್ಯಕ್ಷರಾದ ಬೊಗ್ಗು ಮೂಲ್ಯ ಬೇಲಾಡಿ, ಜಯರಾಮ್ ಕುಲಾಲ್ ಅಗರಟ್ಟ, ಮಂಜ್ಜಪ ಮೂಲ್ಯ, ಜಗನ್ನಾಥ ಮೂಲ್ಯ ಬೆಳ್ಮಣ್, ಗೋಪಾಲ್ ಮೂಲ್ಯ, ರತ್ನ ಜಿ ಮೂಲ್ಯ, ಸಂತೋಷ್ ಕುಲಾಲ್, ಲೋಕೆಶ್ ಕುಲಾಲ್, ಚಂದ್ರಹಾಸ್ ಕುಲಾಲ್, ಗಣೇಶ್ ಮೂಲ್ಯ ಬೋಳ, ಶಿಕ್ಷಕರಾದ ದೇವಿಪ್ರಸಾದ್ ಸ್ವಾಗತಿಸಿದರು. ಆಶಾ ವರದರಾಜ್ ವಂದಿಸಿದರು.

ಡಿಸೆಂಬರ್ 29ರಂದು ವಿದ್ಯುತ್ ವ್ಯತ್ಯಯ

Thumbnail
Posted On: 26 Dec 2022, 11:54 PM

ಉಡುಪಿ : ಉದ್ಯಾವರ ಎಂ.ಯು.ಎಸ್.ಎಸ್ ನಿಂದ ಹೊರಡುವ ಸಂಪಿಗೆನಗರ ಮತ್ತು ಕಡೆಕಾರ್ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸಾಲ್ಮರ, ಕಲಾಯಿಬೈಲು, ಸಂಪಿಗೆನಗರ, ಕುತ್ಪಾಡಿ, ಅನಂತಕೃಷ್ಣನಗರ, ಕಡೆಕಾರು, ಕಿದಿಯೂರು, ಪಡುಕೆರೆ, ಕನ್ನರ್ಪಾಡಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 110/11ಕೆವಿ ಮಧುವನ ಉಪವಿದ್ಯುತ್ ಕೇಂದ್ರದಿಂದ ಹೊರಡುವ 11 ಕೆವಿ ಬಾರ್ಕೂರು ಎಕ್ಸ್ಪ್ರೆಸ್ ಫೀಡರಿನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಹೊಸಾಳ, ಕಚ್ಚೂರು, ರಂಗನಕೆರೆ, ಹೇರಾಡಿ, ಹನೆಹಳ್ಳಿ, ಕೂರಾಡಿ, ನಡೂರು, ಪಡುನೀಲಾವರ, ಬೆಣ್ಣೆಕುದ್ರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಡಿಸೆಂಬರ್ 29 ರಂದು ಬೆಳಗ್ಗೆ 9.30 ರಿಂದ ಸಂಜೆ 5.30 ರ ವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ಸಾಲ ಸೌಲಭ್ಯ : ಅರ್ಜಿ ಆಹ್ವಾನ

Thumbnail
Posted On: 26 Dec 2022, 11:42 PM

ಉಡುಪಿ : ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸಫಾಯಿ ಕರ್ಮಚಾರಿ/ ಮ್ಯಾನುವಲ್ ಸ್ಕಾವೆಂರ್ಸ್ ಹಾಗೂ ಅವರ ಅವಲಂಬಿತರ ಆರ್ಥಿಕ ಅಭಿವೃದ್ಧಿಗಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ (ದ್ವಿ-ಚಕ್ರ / ತ್ರಿ-ಚಕ್ರ ಸರಕು ಸಾಗಾಣಿಕೆ ವಾಹನ) ಸಾಲ ಸೌಲಭ್ಯ ಪಡೆಯಲು ಗ್ರಾಮ ಒನ್, ಬೆಂಗಳೂರು ಒನ್ ಅಥವಾ ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 0820-2574884 ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಡಿಸೆಂಬರ್ 29 : ನೇರ ಸಂದರ್ಶನ

Thumbnail
Posted On: 26 Dec 2022, 11:40 PM

ಉಡುಪಿ : ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಡಿಸೆಂಬರ್ 29 ರಂದು ಬೆಳಗ್ಗೆ 10.30 ಕ್ಕೆ ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ. 2ನೇ ಮಹಡಿ, ನಂದ ಕಮರ್ಷಿಯಲ್ ಕಾಂಪ್ಲೆಕ್ಸ್, ಕೋರ್ಟ್ ರೋಡ್, ಉಡುಪಿ ಇಲ್ಲಿ ನೇರ ಸಂದರ್ಶನ ನಡೆಯಲಿದ್ದು, ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ, ದೂರವಾಣಿ ಸಂಖ್ಯೆ: 8105618291, 9945856670, 8197440155 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳ ದಾಖಲಾತಿಗೆ ಅನುಗುಣವಾಗಿ ಶಾಲಾ ಕೊಠಡಿಗಳನ್ನು ನಿರ್ಮಿಸಿ : ಡಾ. ವಿಶಾಲ್

Thumbnail
Posted On: 26 Dec 2022, 11:33 PM

ಉಡುಪಿ : ಶಾಲಾ ಕಟ್ಟದ ನಿರ್ಮಾಣ ಸಂದರ್ಭದಲ್ಲಿ ಮಕ್ಕಳ ದಾಖಲಾತಿಗೆ ಅನುಗುಣವಾಗಿ ಕೊಠಡಿಗಳನ್ನು ನಿರ್ಮಿಸುವಂತೆ ಇಂಜಿನಿಯರಿಂಗ್ ಅಧಿಕಾರಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಡಾ. ವಿಶಾಲ್ ಆರ್ ಸೂಚನೆ ನೀಡಿದರು. ಅವರು ಇಂದು ನಗರದ ಜಿಲ್ಲಾ ಪಂಚಾಯತ್ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಶಿಕ್ಷಣ ಇಲಾಖೆಯ ವಿವಿಧ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆ.ಪಿ.ಎಸ್ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಅಭಿವೃದ್ಧಿ ಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು, ಕೆ.ಪಿ.ಎಸ್ ಶಾಲೆಗಳಿಗೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲು ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಕಳೆದ ಮೂರು ವರ್ಷಗಳ ನಿರ್ಮಾಣ ಹಾಗೂ ದುರಸ್ಥಿ ಕಾಮಗಾರಿಗಳ ಪ್ರಗತಿ ವಿವರಗಳನ್ನು ಪರಿಶೀಲಿಸಿದ ಅವರು, ಬೇರೆ ಬೇರೆ ಅನುದಾನಗಳನ್ನು ಒಗ್ಗೂಡಿಸಿ ಕಾಮಗಾರಿ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಣಾಧಿಕಾರಿಗಳಿಗೆ ತಿಳಿಸಿದರು. ವಿವೇಕಾ ಶಾಲಾ ಕಾಮಗಾರಿಯಲ್ಲಿ 150 ಕಾಮಗಾರಿಗಳಿಗೆ ಪಿಡಬ್ಲ್ಯೂಡಿ ಹಾಗೂ 38 ಕಾಮಗಾರಿಗಳಿಗೆ ಕೆ.ಆರ್.ಐ.ಡಿ.ಎಲ್ ಇವರು ಅನುಷ್ಠಾನಾಧಿಕಾರಿಗಳಾಗಿದ್ದು ಕಾಮಗಾರಿ ಟೆಂಡರ್ ಹಂತದಲ್ಲಿದೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿದರು. ಎಲ್ಲಾ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಟೆಂಡರ್ ಕರೆದು ಅತ್ಯಂತ ತುರ್ತಾಗಿ ಕಾಮಗಾರಿಗಳನ್ನು ಮುಕ್ತಾಯಗೊಳಿಸುವಂತೆ ತಿಳಿಸಿದರು. ಕಂದಾಯ ಭೂಮಿ, ಅರಣ್ಯ, ಕುಂಕಿ, ದೇವಸ್ಥಾನ ಜಾಗಗಳ ಸಮಸ್ಸೆಗಳಿದ್ದಲ್ಲಿ ಸಂಬಂಧಿಸಿದ ತಹಶೀಲ್ದಾರರೊಂದಿಗೆ ಚರ್ಚಿಸಿ ಸಮಸ್ಸೆ ಬಗೆಹರಿಸಲು ತಿಳಿಸಿದ ಆಯುಕ್ತರು ಅರಣ್ಯ ನೋಂದಣಿ ಕಾಯಿದೆಯ ಪ್ರಕಾರ ಶಾಲಾ ಜಮೀನನ್ನು ಸಾರ್ವಜನಿಕ ಆಸ್ತಿಯೆಂದು ಘೋಷಿಸಿ ಬಳಕೆಯ ಹಕ್ಕನ್ನು ಅರಣ್ಯ ಇಲಾಖೆಯಿಂದ ಪಡೆಯುವಂತೆ ತಿಳಿಸಿದರು. ಕುಡಿಯುವ ನೀರು ಮತ್ತು ಶೌಚಾಲಯ ನರೇಗಾ ಕಾಮಗಾರಿಯ ಉಳಿಕೆ ಅನುದಾನವನ್ನು ಇತರೆ ಕಾಮಗಾರಿಗಳಿಗೆ ಬಳಸುವಂತೆ ಹಾಗೂ ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳ ಕೊರತೆಯಾಗದಂತೆ ಅವಧಿಗೆ ಮುಂಚಿತವಾಗಿ ವಿತರಿಸಲಾಗುವುದು ಎಂದ ಅವರು, ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರವಾಗಿ ಮಾಡಲಾಗುವುದು ಎಂದರು. ಮಕ್ಕಳ ವೈದ್ಯಕೀಯ ತಪಾಸಣಾ ತಂಡಕ್ಕೆ ತಜ್ಞ ವೈದ್ಯರಿಂದ ತರಬೇತಿ ನೀಡುವಂತೆ, ವಿಟಮಿನ್ ಕೊರತೆ ಇರುವ ಮಕ್ಕಳಿಗೆ ವಿಟಮಿನ್ ಮಾತ್ರೆ ನೀಡಲು, ಮಕ್ಕಳಿಗೆ ದಂತ ತಪಾಸಣಾ ಶಿಬಿರಗಳನ್ನು ಏರ್ಪಡಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು. ಎಲ್ಲಾ ಶಾಲಾ ಮಕ್ಕಳ ಆರೋಗ್ಯ ತಪಾಸಣೆಯ ನಡೆಸಿ, ಸ್ಕ್ರೀನಿಂಗ್ ಮಾಡಿ, ಯಾವುದಾದರು ಗುರುತರವಾದ ಖಾಯಿಲೆಗಳು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ತಜ್ಞ ವೈದ್ಯರಿಂದ ತಪಾಸಣೆಗೆ ಒಳಪಡಿ ಆಶಾ ಕಾರ್ಯಕರ್ತೆಯರಿಂದ ಫಾಲೊ ಅಫ್ ಮಾಡಿಸುವಂತೆ ತಿಳಿಸಿದರು. ಗರ್ಭಿಣಿಯರಿಗೆ ಕಬ್ಬಿಣ ಅಂಶದ ಕೊರತೆಗೆ ಚುಚ್ಚುಮದ್ದು ನೀಡುವಂತೆ ತಿಳಿಸಿದ ಅವರು,ಮಕ್ಕಳ ಮಾನಸಿಕ ಬೆಳವಣಿಗೆಗೆ ತಾಯಿಯು ಗರ್ಭಿಣಿಯಾಗಿದ್ದಾಗ ಎಲ್ಲಾ ಪೋಷಕಾಂಶಗಳ ಕೊರತೆಯೇ ಕಾರಣ ಆದ್ದರಿಂದ ಗರ್ಭಿಣಿಯರಿಗೆ ಉತ್ತಮ ವಿಟಮಿನ್ ಮಾತ್ರೆ, ಕಬ್ಬಿಣ ಅಂಶದ ಕೊರತೆಗೆ ಚುಚ್ಚುಮದ್ದು ನೀಡುವಂತೆ ತಿಳಿಸಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಕೆ., ಎಲ್ಲಾ ವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಪು : ಮಗುವಿನ ಚಿಕಿತ್ಸೆಗೆ ಧನಸಹಾಯ ನೀಡಿದ ಕುತ್ಯಾರು ಗ್ರಾಮದ ಯುವಕರು

Thumbnail
Posted On: 26 Dec 2022, 11:24 PM

ಕಾಪು : ಕುತ್ಯಾರು ಗ್ರಾಮದ ಯುವಕರ ತಂಡ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿ ಹಂಪಿ ಯಾತ್ರೆ ಕೈಗೊಂಡು ಹಿಂದುರುಗಿ ಬಂದ ಉಳಿದ ಹಣ ರೂ.5,400 ಹಾಗೂ ಇತರರಿಂದ ಒಟ್ಟು 15,000 ವನ್ನು ಸಂಗ್ರಹಿಸಿ ಪೇರಾಡಿ ಗ್ರಾಮದ ಶ್ರೀಧರ್ ಪೂಜಾರಿ ಇವರ 7 ವರ್ಷದ ಮಗು ಪ್ರೀತೇಶ್ ರವರ ವೈದ್ಯಕೀಯ ಚಿಕಿತ್ಸೆಗೆ ನೀಡಲಾಯಿತು.

ಕಾಪು : ಕಳತ್ತೂರಿನಲ್ಲಿ ಆರ್ಥಿಕ ಹಿಂದುಳಿದ ನಾಲ್ಕು ಮಹಿಳೆಯರಿಗೆ ಸ್ವಂತ ಮನೆ ನಿರ್ಮಾಣ

Thumbnail
Posted On: 26 Dec 2022, 11:13 PM

ಕಾಪು : ಆಲ್ ಕಾರ್ಗೋ ಲೋಜಿಸ್ಟಿಕ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಶಶಿಕಿರಣ್ ಶೆಟ್ಟಿಯವರು ದಾನದ ರೂಪದಲ್ಲಿ 2021-22 ಪಟ್ಟಿಯಲ್ಲಿ ಮಂಗಳೂರಿನ ಉದ್ಯಮಿ ಎ.ಜೆ.ಶೆಟ್ಟಿ ಇವರ ಅಧ್ಯಕ್ಷತೆಯ ವಿಶ್ವ ಬಂಟರ ಪ್ರತಿಷ್ಠಾನ ಮಂಗಳೂರು ಇವರ ಮುಖಾಂತರ ಸುಮಾರು 8 ಲಕ್ಷ ವೆಚ್ಚದ 17 ಮನೆ ನಿರ್ಮಾಣಗೊಂಡಿದ್ದು ಅದರಲ್ಲಿ ಕಾಸರಗೋಡು 7 ಮನೆ, ಮಂಗಳೂರು 5 ಮನೆ, ಕುಂದಾಪುರ 1 ಮನೆ ಹಾಗೂ ಕಾಪು ತಾಲೂಕಿನ ಕಳತ್ತೂರು ಗ್ರಾಮಕ್ಕೆ 4 ಮನೆ ನಿರ್ಮಿಸಿ ಕೊಟ್ಟಿರುತ್ತಾರೆ. 17 ಮನೆಯನ್ನು ಮಂಗಳೂರಿನಲ್ಲಿ ನಡೆದ ವಿಶ್ವ ಬಂಟರ ಪ್ರತಿಷ್ಠಾನ ಸಮಾರಂಭದಲ್ಲಿ 17 ಬಂಟ ಸಮಾಜದ ಮಹಿಳೆಯರಿಗೆ ಮನೆಯ ಕೀಯನ್ನು ಹಸ್ತಾಂತರಿಸಲಾಗಿದೆ. ಕಳತ್ತೂರು ಗ್ರಾಮದ 4 ಬಂಟ ಮಹಿಳೆಯರಿಗೆ ಮನೆಯನ್ನು ಡಿಸೆಂಬರ್ 21 ರಂದು ಪ್ರತಿಷ್ಠಾನದ ಸದಸ್ಯರ ಸಮ್ಮುಖದಲ್ಲಿ ಉದ್ಘಾಟಿಸಲಾಯಿತು. ಕಳತ್ತೂರಿನ 4 ಫಲಾನುಭವಿಗಳಿಗೆ ಬಂಟ ಪ್ರತಿಷ್ಠಾನದ ಅಧ್ಯಕ್ಷ ಎ.ಜೆ.ಶೆಟ್ಟಿ, ಬಂಟ ಪ್ರತಿಷ್ಠಾನದ ಟ್ರಸ್ಟಿ ಶೇಖರ ಬಿ.ಶೆಟ್ಟಿ, ಕಳತ್ತೂರು ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಸುಧೀರ್ ಕುಮಾರ್ ಶೆಟ್ಟಿ ಇವರಿಗೆ ಕಳತ್ತೂರು ಜನ ಸೇವಾ ವೇದಿಕೆಯ ಅಧ್ಯಕ್ಷ ದಿವಾಕರ ಬಿ. ಶೆಟ್ಟಿಯವರು ಮನವಿ ನೀಡಿರುವುದರಿಂದ ಕಳತ್ತೂರು ಗ್ರಾಮಕ್ಕೆ 4 ಮನೆ ನೀಡಿದ್ದಾರೆ. ಕಳತ್ತೂರು ಗ್ರಾಮದ ನಾಲ್ಕು ಮನೆಯನ್ನು ವಿಶ್ವ ಬಂಟರ ಪ್ರತಿಷ್ಠಾನ ಮಂಗಳೂರು ಇದರ ಟ್ರಸ್ಟಿ ಶೇಖರ ಬಿ.ಶೆಟ್ಟಿ ಕಳತ್ತೂರು ಉದ್ಘಾಟಿಸಿದರು. ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಳತ್ತೂರು ಶೇಖರ ಬಿ. ಶೆಟ್ಟಿ, ದಿವಾಕರ ಬಿ. ಶೆಟ್ಟಿ ಕಳತ್ತೂರು ಮತ್ತು ಮನೆಯನ್ನು ಅಚ್ಚುಕಟ್ಟಾಗಿ ನಿರ್ಮಿಸಿಕೊಟ್ಟ ಮಕರ ಕನ್ಟ್ರಕ್ಷನ್ ಕಾಪು ಇದರ ಆಡಳಿತ ನಿರ್ದೇಶಕರಾದ ಸುಧಾಕರ್ ಶೆಟ್ಟಿ ಮಲ್ಲಾರು ಇವರನ್ನು ಫಲಾನುಭವಿಗಳ ಪರವಾಗಿ ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಸನ್ಮಾನಿಸಿದರು. ಕಾಪು ಬಂಟರ ಸಂಘದ ಕಾರ್ಯದರ್ಶಿ ಕೆ. ಲೀಲಾಧರ ಶೆಟ್ಟಿ ಕಾಪು, ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷ ದಿವಕರ್ ಬಿ.ಶೆಟ್ಟಿ ಕಳತ್ತೂರು ವೇದಿಕೆಯಲ್ಲಿದ್ದರು. ನಿರ್ಮಲ್ ಕುಮಾರ್ ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು. ದಯಾನಂದ ಶೆಟ್ಟಿ ದೆಂದೂರು ಸ್ವಾಗತಿಸಿದರು. ದಿವಾಕರ್ ಡಿ. ಶೆಟ್ಟಿ ಕಳತ್ತೂರು ವಂದಿಸಿದರು.

ರಾಜ್ಯ ಮಟ್ಟದ ಭಜನಾ ಸ್ಪರ್ಧೆ : ಉದ್ಯಾವರದ ಶ್ರೀ ನಾರಾಯಣಗುರು ಯುವಜನ ಕಲಾ ಮಂಡಳಿಗೆ ದ್ವಿತೀಯ ಸ್ಥಾನ

Thumbnail
Posted On: 26 Dec 2022, 12:10 PM

ಕಾಪು : ಕರಾವಳಿ ಮಿತ್ರ ವೃಂದ ಮತ್ತು ಮಹಿಳಾ ವೃಂದ ಕಾಪು ಪಡು ಇವರ ಆಶ್ರಯದಲ್ಲಿ ಕಾಪುವಿನಲ್ಲಿ ನಡೆದ ರಾಜ್ಯಮಟ್ಟದ ಭಜನಾ ಸ್ಪರ್ಧೆಯಲ್ಲಿ ಉದ್ಯಾವರ ಬಿಲ್ಲವ ಮಹಾಜನ ಸಂಘದ ಅಂಗಸಂಸ್ಥೆಯಾದ ಶ್ರೀ ನಾರಾಯಣಗುರು ಯುವ ಜನ ಕಲಾ ಮಂಡಳಿ ಉದ್ಯಾವರ ದ್ವಿತೀಯ ಸ್ಥಾನ ಪಡೆದಿರುತ್ತದೆ.