Updated News From Kaup

ಓಮನ್ ಬಿಲ್ಲವಾಸ್ : ಅಧ್ಯಕ್ಷರಾಗಿ ಸುಜಿತ್ ಎಸ್ ಅಂಚನ್ ಪಾಂಗಳ ಆಯ್ಕೆ

Thumbnail
Posted On: 24 Dec 2022, 03:49 PM

ಗಲ್ಫ್ ರಾಷ್ಟ್ರದ ಸುಲ್ತಾನೇಟ್ ಆಪ್ ಓಮನ್ (ಮಸ್ಕತ್) ಇಲ್ಲಿರುವ ಓಮನ್ ಬಿಲ್ಲವಾಸ್ ಸಂಘಟನೆಯ 2023 ರಿಂದ 2024 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಶುಕ್ರವಾರ ನಡೆಯಿತು. ಸಂಘಟನೆಯ ಸ್ಥಾಪಕ ಸದಸ್ಯರು, ಆಯ್ಕೆ ಸಮಿತಿ, ಬಿಲ್ಲವ ಸಮಾಜದ ಬಾಂಧವರು ಸೇರಿ ನಡೆಸಿದ ಸಭೆಯಲ್ಲಿ ಅಧ್ಯಕ್ಷರಾಗಿ ಸುಜಿತ್ ಎಸ್ ಅಂಚನ್ ಪಾಂಗಳ, ಉಪಾಧ್ಯಕ್ಷರಾಗಿ ಹರೀಶ್ ಸುವರ್ಣ ಮತ್ತು ಪ್ರಪುಲ್ಲ ಶಂಕರ್ ಕಟಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಬೋಳ, ಕೋಶಧಿಕಾರಿಯಾಗಿ ಭಾಸ್ಕರ್ ಕೋಟ್ಯಾನ್ ಮತ್ತು ಪದಾಧಿಕಾರಿಗಳನ್ನು ಆಯ್ಕೆಯಾದರು.

ಕಟಪಾಡಿ : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ - ಕೃತಜ್ಞತಾಪೂರ್ವಕ ಸಭೆ

Thumbnail
Posted On: 24 Dec 2022, 03:40 PM

ಕಟಪಾಡಿ : ಯಾವುದೇ ಕಾರ್ಯ ಪೂರ್ವತಯಾರಿಯಿಲ್ಲದೆ ಆಗದು. ಎಲ್ಲರ ಸಹಕಾರ ಅಗತ್ಯ. ಸಫಲತೆಯ ಮನೋಭಾವ ಇದ್ದಾಗ ಕಾರ್ಯ ಸಾಧ್ಯ. ಕಾಪು ತಾಲೂಕಿನ ೪ನೇ ಕನ್ನಡ ಸಾಹಿತ್ಯ ಸಮ್ಮೇನಕ್ಕೆ ತಾಲೂಕು ಅಧ್ಯಕ್ಷರು, ಸಮಿತಿ ಮತ್ತು ಶಾಲೆಯ ಅಧ್ಯಾಪಕ ವೃಂದದವರ ಪರಿಶ್ರಮವಿದೆ. ಮುಂದೆಯೂ ನಮ್ಮ ಸಂಸ್ಥೆಯ ಸಹಕಾರವಿದೆ ಎಂದು ಕಟಪಾಡಿ ಎಸ್ ವಿ ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರು ಮತ್ತು ಸಮ್ಮೇಳನದ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾದ ಕೆ ಸತ್ಯೇಂದ್ರ ಪೈ ಹೇಳಿದರು. ಅವರು ಶನಿವಾರ ಕಟಪಾಡಿ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನಲ್ಲಿ ಯಶಸ್ವಿಯಾಗಿ ಜರಗಿದ ಕಾಪು ತಾಲೂಕಿನ ೪ನೇ ಕನ್ನಡ ಸಾಹಿತ್ಯ ಸಮ್ಮೇನದ ಕೃತಜ್ಞತಾಪೂರ್ವಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಪುಂಡಲೀಕ ಮರಾಠೆ, ಸರ್ವರ ಸಹಕಾರದಿಂದ ಸಮ್ಮೇಳನವು ಯಶಸ್ವಿಯಾಗಿದೆ. ಸಭೆಯ ಸಲಹೆಗಳು ಮುಂದಿನ ಸಮ್ಮೇಳನವನ್ನು ಮತ್ತಷ್ಟು ಉತ್ತಮ ರೀತಿಯಲ್ಲಿ ಮಾಡಲು ಸಹಾಯಕವಾಗಿದೆ ಎಂದರು. ಸಭೆಯಲ್ಲಿ ಸ್ವಾಗತ ಸಮಿತಿಯ ಕಾರ್ಯಧ್ಯಕ್ಷರು ಮತ್ತು ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ| ದಯಾನಂದ ಪೈ, ಎಸ್ ವಿ ಎಸ್ ಆಡಳಿತ ಮಂಡಳಿ ಸದಸ್ಯ ಗಣೇಶ್ ಕಿಣಿ, ಎಸ್‌ ವಿ ಎಸ್‌ ಪ್ರೌಢಶಾಲೆ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ತಂತ್ರಿ, ಕಾಪು ತಾಲೂಕು ಘಟಕದ ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್, ಸಂಘಟನ ಕಾರ್ಯದರ್ಶಿ ದೀಪಕ್ ಬೀರ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪದಾಧಿಕಾರಿ ಪ್ರಭಾ ಬಿ. ಶೆಟ್ಟಿ, ನವೋದಯ ಸ್ವಸಹಾಯ ಸಂಘದ ಸದಸ್ಯರು, ಭಾಸ್ಕರ ಕಾಮತ್, ಕಿರಣ್ ಕುಮಾರ್, ದಿಲೀಪ್ ಕುಮಾರ್ ಬನ್ಸೊಡೆ, ಗ್ರೆಟ್ಟಾ ಮೊರಸ್ ಪಲಿಮಾರು ಮತ್ತಿತರರು ಉಸ್ಥಿತರಿದ್ದರು. ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಪುಂಡಲೀಕ ಮರಾಠೆ ಸ್ವಾಗತಿಸಿದರು. ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು ವಂದಿಸಿದರು.

ಅದಮಾರು ಪಿಪಿಸಿ ನೆನೆಪಿನಂಗಳ ಗುರುಶಿಷ್ಯರ ಸಮಾಗಮ - 2022

Thumbnail
Posted On: 21 Dec 2022, 11:07 PM

ಈ ಗುರು ಶಿಷ್ಯ ಸಮಾವೇಶದಲ್ಲಿ ವಿದ್ಯಾರ್ಥಿಗಳಿಗೆ ಆಗ ಗುರುಗಳಾಗಿದ್ದ ಅದಮಾರು ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪೌಢಶಾಲೆ ಹಾಗೂ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿದ್ದ ಶಿಕ್ಷಕರಿಗೆ, ಉಪನ್ಯಾಸಕರಿಗೆ, ಸನ್ಮಾನಿಸುವ ಮೂಲಕ ಗುರುವಂದನೆ ಸಲ್ಲಿಸಿದರು. ನಿವೃತ್ತ ಪ್ರಾಂಶುಪಾಲರುಗಳಾದ ಬಿ. ಆರ್. ನಾಗರತ್ನ, ಎಂ. ಲಕ್ಷ್ಮೀ ನಾರಯಣ ರಾವ್, ರಮೇಶ ಹಂದೆ, ನಾರಾಯಣ ಹೆಬ್ಬಾರ್, ಎಂ ರಾಮಕೃಷ್ಣ ಪೈ, ಹಾಗೂ ನಿವೃತ್ತ ಉಪನ್ಯಾಸಕರಾದ ಏಕನಾಥ ಡೋಂಗ್ರೆ, ಹರಿಪ್ರಸಾದ್, ನಿವೃತ್ತ ಶಿಕ್ಷಕರಾದ ವೆಂಕಟರಾಜ ಸರಳಾಯ, ವಾದಿರಾಜ ತಂತಿ, ವಿಠಲ ದಾಸ್, ಜಯಶಂಕರ್, ರವಿ, ಶೆಟ್ಟಿ, ಹಾಗೂ ಮುಖ್ಯೋಪಾಧ್ಯಾಯರಾದ ಗಣಪತಿ ಭಟ್ ಸಂಧ್ಯಾ ಗಣಪತಿ ಭಟ್ ರನ್ನು ಸನ್ಮಾನಿಸಲಾಯಿತು. ತೀರಿಹೋದ ಗುರುಗಳಿಗೆ ಅವರ ಮನೆಯವರನ್ನು ಕರೆಸಿ ಅವರಿಗೂ ಗೌರವ ಸಲ್ಲಿಸಿದರು. ಶಿಕ್ಷಕೇತರ ಬಂಧುಗಳಾದ ನಾಗರತ್ನ ಕೆ. ವಸಂತ, ಸುಧಾಕರ ಅಮೀನ್, ಸುಧಾಕರ ಪೂಜಾರಿ, ಸದಾಶಿವ ಆಚಾರಿ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿತು ಈ ಗುರು ಶಿಷ್ಯ ಸಮಾವೇಶದಲ್ಲಿ ವಿದ್ಯಾರ್ಥಿಗಳಿಗೆ ಆಗ ಗುರುಗಳಾಗಿದ್ದ ಅದಮಾರು ಪೂರ್ಣಪ್ರಜ್ಞ ಕನ್ನಡ ಮಾಧ್ಯಮ ಪೌಢಶಾಲೆ ಹಾಗೂ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿದ್ದ ಶಿಕ್ಷಕರಿಗೆ, ಉಪನ್ಯಾಸಕರಿಗೆ, ಸನ್ಮಾನಿಸುವ ಮೂಲಕ ಗುರುವಂದನೆ ಸಲ್ಲಿಸಿದರು. ನಿವೃತ್ತ ಪ್ರಾಂಶುಪಾಲರುಗಳಾದ ಬಿ. ಆರ್. ನಾಗರತ್ನ, ಎಂ. ಲಕ್ಷ್ಮೀ ನಾರಯಣ ರಾವ್, ರಮೇಶ ಹಂದೆ, ನಾರಾಯಣ ಹೆಬ್ಬಾರ್, ಎಂ ರಾಮಕೃಷ್ಣ ಪೈ, ಹಾಗೂ ನಿವೃತ್ತ ಉಪನ್ಯಾಸಕರಾದ ಏಕನಾಥ ಡೋಂಗ್ರೆ, ಹರಿಪ್ರಸಾದ್, ನಿವೃತ್ತ ಶಿಕ್ಷಕರಾದ ವೆಂಕಟರಾಜ ಸರಳಾಯ, ವಾದಿರಾಜ ತಂತಿ, ವಿಠಲ ದಾಸ್, ಜಯಶಂಕರ್, ರವಿ, ಶೆಟ್ಟಿ, ಹಾಗೂ ಮುಖ್ಯೋಪಾಧ್ಯಾಯರಾದ ಗಣಪತಿ ಭಟ್ ಸಂಧ್ಯಾ ಗಣಪತಿ ಭಟ್ ರನ್ನು ಸನ್ಮಾನಿಸಲಾಯಿತು. ತೀರಿಹೋದ ಗುರುಗಳಿಗೆ ಅವರ ಮನೆಯವರನ್ನು ಕರೆಸಿ ಅವರಿಗೂ ಗೌರವ ಸಲ್ಲಿಸಿದರು. ಶಿಕ್ಷಕೇತರ ಬಂಧುಗಳಾದ ನಾಗರತ್ನ ಕೆ. ವಸಂತ, ಸುಧಾಕರ ಅಮೀನ್, ಸುಧಾಕರ ಪೂಜಾರಿ, ಸದಾಶಿವ ಆಚಾರಿ ಅವರಿಗೆ ಸ್ಮರಣಿಕೆ ನೀಡಿ ಗೌರವಿಸಿತು ಬಿ.ಆರ್. ನಾಗರತ್ನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಸಂಜೀವ ನಾಯ್ಕ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಪದ್ಮಜ, ಅಲ್ತಾಫ್, ಮಿಥುನ್ ಶೆಟ್ಟಿ, ಸಾಯಿ ಪ್ರಸಾದ್‌, ಜನೆಸ್‌ ಡಿಸಿಲ್ವ, ಶಾಲಿನಿ, ಪ್ರಶಾಂತ್ ಉಪಸ್ಥಿತರಿದ್ದರು. ತಮ್ಮ ಹಿಂದಿನ ಶಾಲಾ ಜೀವನವನ್ನು ನೆನೆಪಿಸಿಕೊಂಡು ತಾವು ಕಲಿತ ತರಗತಿಯಲ್ಲೇ ಕುಳಿತು ಹಿಂದಿನ ನೆನಪುಗಳನ್ನು ಮೆಲುಕಿ ಹಾಕಿಕೊಂಡು ಆಗಿನ ಇವರ ಶಿಕ್ಷಕರಾದ ವಿಠಲದಾಸರಿಂದ ಎಲ್ಲಾ ಹಳೆವಿದ್ಯಾರ್ಥಿಗಳು ನೆನಪಿನಂಗಳದ ಸ್ಮರಣಿಕೆ ಪಡೆದುಕೊಂಡರು. ತಾವು ಕಲಿತ ಶಾಲೆಗೆ ನೆನಪಿನ ಕಾಣಿಕೆಯಾಗಿ ಕಾಲು ದೀಪವನ್ನು ಆದಮಾರು ಪೂರ್ಣಪ್ರಜ್ಞ ಕಾಲೇಜಿನ ಪ್ರಾಂಶುಪಾಲ ಸಂಜೀವ ನಾಯ್ಕರಿಗೆ ನೀಡಿದರು. ಎಲ್ಲಾ ಗುರುಗಳಿಗೂ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದಲ್ಲದೆ ಎಲ್ಲಾ ಗುರುಗಳ ಆಶೀರ್ವಾದ ಪಡೆದುಕೊಂಡರು. ಹಳೆ ವಿದ್ಯಾರ್ಥಿ ಪ್ರಿಯ ಶೆಟ್ಟಿ ಸ್ವಾಗತಿಸಿದರು. ಸುಧಾಕರ ಕೋಟ್ಯಾನ್ ಧನ್ಯವಾದವಿತ್ತರು. ಸುಧೀರ್ ಶೆಟ್ಟಿ ಅದಮಾರು ಕಾರ್ಯಕ್ರಮ ನಿರೂಪಿಸಿದರು. ಒಟ್ಟು 45 ಮಂದಿ ಹಳೆ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಡಿಸೆಂಬರ್ 22 - 26 : ಉಡುಪಿಯ ಮುಕುಂದ ಕೃಪಾ ಶಾಲೆಯಲ್ಲಿ ಸುವರ್ಣ ಸಂಭ್ರಮ ; ವಿವಿಧ ಕಾರ್ಯಕ್ರಮಗಳು

Thumbnail
Posted On: 21 Dec 2022, 10:48 PM

ಉಡುಪಿ : ಮುಕುಂದ ಕೃಪಾ ಆಂಗ್ಲ ಮಾಧ್ಯಮ ನರ್ಸರಿ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮಾಚರಣೆ, ವಾರ್ಷಿಕ ಬಹುಮಾನ ವಿತರಣೆ , ವಾರ್ಷಿಕೋತ್ಸವ, ಪೇರೆಂಟ್ - ಟೀಚರ್ಸ್ ಡೇ ಮತ್ತು ಹಳೇ ವಿದ್ಯಾರ್ಥಿ ದಿನಾಚರಣೆ ಡಿ.22 ರಿಂದ ಡಿ.26 ರ ವರೆಗೆ ನಡೆಯಲಿದೆ ಎಂದು ಶಾಲಾ ಮುಖ್ಯ ಶಿಕ್ಷಕಿ ಸುಜಾತಾ ಶಾಂತಾರಾಮ್ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ಡಿ.22 ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆ ವರೆಗೆ ಶಾಲೆಯ ಸಭಾಂಗಣದಲ್ಲಿ 50 ನೇ ವರ್ಷದ ವಾರ್ಷಿಕ ಬಹುಮಾನ ವಿತರಣಾ ದಿನ, ಡಿ.24 ರಂದು ಬೆಳಿಗ್ಗೆ 9.30 ರಿಂದ 10.30 ರ ವರೆಗೆ ಬೆಳಗ್ಗಿನ ಅವಧಿಯ ಕಾರ್ಯಕ್ರಮ ಹಾಗೂ ಮಧ್ಯಾಹ್ನ 3.30 ರಿಂದ ರಾತ್ರಿ 9 ಗಂಟೆ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ವಾರ್ಷಿಕೋತ್ಸವ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ಡಿ.25 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಹಳೇ ವಿದ್ಯಾರ್ಥಿಗಳ ದಿನ , ಮಧ್ಯಾಹ್ನ 2.30 ರಿಂದ ರಾತ್ರಿ 8.30 ರ ವರೆಗೆ ಅದೇ ವೇದಿಕೆಯಲ್ಲಿ ಪೋಷಕರು ಮತ್ತು ಶಿಕ್ಷಕರ ದಿನ ಕಾರ್ಯಕ್ರಮ ನಡೆಯಲಿದೆ ಎಂದರು ಹಾಗೂ ಶಾಲೆಯ 50 ನೇ ವರ್ಷದ ಸುವರ್ಣ ಸಂಭ್ರಮದ ದಿನವು ಡಿ.26 ರಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಅಂದು ಬೆಳಿಗ್ಗೆ ಶಾಲಾ ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ನಿವೃತ್ತ ಮುಖ್ಯೋಪಾದ್ಯಾಯಿನಿ ಕಮಲಿನಿ ಆರ್ ಭಟ್ ಅವರು ಭಾಗವಹಿಸಲಿದ್ದಾರೆ. ನಂತರ ಮಧ್ಯಾಹ್ನ 2.30 ರಿಂದ ರಾಜಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ರಘುಪತಿ ಭಟ್, ಜಿಲ್ಲಾಧಿಕಾರಿ ಕೂರ್ಮಾ ರಾವ್, ಉಡುಪಿ ಡಿಡಿಪಿಐ ಎನ್. ಶಿವರಾಜ್, ನಗರ ಸಭಾ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಡುಪಿ ಬಿಇಒ ಚಂದ್ರೇ ಗೌಡ ಡಿಎಚ್, ಮಣಿಪಾಲದ ಡಾ. ಟಿಎಂಎ ಪೈ ಫೌಂಡೇಶನ್ ನ ಕಾರ್ಯದರ್ಶಿ ಟಿ. ಅಶೋಕ್ ಪೈ, ಡಯಟ್ ಉಡುಪಿ ಇದರ ಉಪ ಪ್ರಾಂಶುಪಾಲ ಅಶೋಕ್ ಕಾಮತ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಉಡುಪಿ ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಗಣನಾಥ ಎಕ್ಕಾರು, ಎಜಿಇ ಮಣಿಪಾಲ ಇದರ ಎಜುಕೇಶನ್ ಆಫೀಸರ್ ನಾಗೇಶ್ ಶಾನ್ ಭಾಗ್, ಮುಕುಂದ ಕೃಪಾ ಶಾಲೆಯ ನಿವೃತ್ತ ಪ್ರಾಂಶುಪಾಲೆ ಪ್ರಭಾವತಿ ಎಸ್ ಅಡಿಗ, ನಟ ರಕ್ಷಿತ್ ಶೆಟ್ಟಿ ಅವರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ಜನವರಿ 8 : ಪಲಿಮಾರಿನಲ್ಲಿ ರಕ್ತದಾನ ಶಿಬಿರ

Thumbnail
Posted On: 21 Dec 2022, 10:39 PM

ಪಲಿಮಾರು : ಹೊಯಿಗೆ ಫ್ರೆಂಡ್ಸ್ ಹೊಯಿಗೆ (ರಿ.) ಪಲಿಮಾರು, ಶ್ರೀದೇವಿ ಫ್ರೆಂಡ್ಸ್ ಕ್ಲಬ್ ಅವರಾಲು ಮಟ್ಟು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ (ರಿ.) ಉಡುಪಿ, ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲ, ಇವರ ಸಂಯುಕ್ತ ಆಶ್ರಯದಲ್ಲಿ ಜನವರಿ 8, ಆದಿತ್ಯವಾರ ಬೆಳಿಗ್ಗೆ 8 ರಿಂದ ಅಪರಾಹ್ನ 2 ರ ವರೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಪಲಿಮಾರಿನಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ : ರಾಘವೇಂದ್ರ ಸುವರ್ಣ- 8197605299. ಪ್ರತಾಪ್- 9743339093.

ಕಾಪು : ಲಕ್ಷ್ಮೀ ಜನರಲ್ ಸ್ಟೋರ್ಸ್ ನಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ

Thumbnail
Posted On: 20 Dec 2022, 06:51 PM

ಕಾಪು : ಇಲ್ಲಿನ ಲಕ್ಷ್ಮೀ ಜನರಲ್ ಸ್ಟೋರ್ಸ್ ನಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಕರ್ನಾಟಕ ರಾಜ್ಯ ಹಾಲು ಮಹಾಮಂಡಳ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಡಿಸೆಂಬರ್ 18 ರಿಂದ ಜನವರಿ 18 ರವರೆಗೆ ನಂದಿನಿ ಸಿಹಿ ಉತ್ಸವ ಜರಗಲಿದೆ. ನಂದಿನಿ ಸಿಹಿ ಉತ್ಪನ್ನಗಳಿಗೆ ಶೇ. 20 ರಿಯಾಯಿತಿ ದೊರೆಯಲಿದೆ ಇದರ ಸದುಪಯೋಗ ಸಾರ್ವಜನಿಕರು ಪಡೆಯಬಹುದು. ಸಿಹಿ ಉತ್ಪನ್ನಗಳ ಮಾರಾಟದ ಮೂಲಕ ಇದ್ದ ಗ್ರಾಹಕರನ್ನು ಉಳಿಸಿ ಹೊಸ ಗ್ರಾಹಕರನ್ನು ಸೆಳೆಯುವುದು. ಕರ್ನಾಟಕ ರಾಜ್ಯದಲ್ಲಿಯ 58 ಬಗೆಯ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಿಹಿ ಉತ್ಸವ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ದಕ್ಷಿಣ ಕನ್ನಡ ಹಾಲು ಮಹಾಮಂಡಲ ಇದರ ಉಪ ವ್ಯವಸ್ಥಾಪಕರಾದ ಸುಧಾಕರ್, ಕೆಎಂಎಫ್ ಪ್ರಭಾರ ಜಂಟಿ ನಿರ್ದೇಶಕ ರಮೇಶ್ ಬೂದಗತ್ತಿ, ಕೆಎಂಎಫ್ ಮಾರ್ಕೆಟಿಂಗ್ ಆಫೀಸರ್ ಸಿ ಎಚ್ ಮೋಹನ್, ಉದ್ಯಮಿ ಕೆ ಕಮಲಾಕ್ಷ ನಾಯಕ್, ಮಹಾಲಕ್ಷ್ಮಿ ಟ್ರೇಡರ್ಸ್ ನ ಹರೀಶ್ ಕೆ ನಾಯಕ್, ಅನುಪೂರ್ವಿ ಸಮೂಹ ಸಂಸ್ಥೆಯ ಪ್ರವರ್ತಕರಾದ ಪ್ರೀತಿ ನಾಯಕ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾರ್ಕೆಟಿಂಗ್ ಆಫೀಸರ್ ಸಂದೀಪ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ರವಿರಾಜ್ ಉಡುಪ ಮತ್ತಿತರರು ಉಪಸ್ಥಿತರಿದ್ದರು.

ಡಿಸೆಂಬರ್ 23 : ಕಾಪು ರಂಗತರಂಗ ತಂಡದ 16 ನೇ ನಾಟಕ 'ಬುಡೆದಿ' ಪ್ರಥಮ ಪ್ರದರ್ಶನ

Thumbnail
Posted On: 20 Dec 2022, 02:07 PM

ಕಾಪು : ಇಲ್ಲಿನ ರಂಗತರಂಗ ಕಲಾವಿದರಿಂದ ಡಿಸೆಂಬರ್ 23 ಶುಕ್ರವಾರದಂದು ಕಾಪು ಹೊಸ ಮಾರಿಗುಡಿಯ ಮೈದಾನದಲ್ಲಿ ನೂತನ ಹದಿನಾರನೇ ನಾಟಕ 'ಬುಡೆದಿ' ಪ್ರದರ್ಶನ ಗೊಳ್ಳಲಿದೆ ಎಂದು ರಂಗತರಂಗ ಸಂಚಾಲಕರಾದ ಸಮಾಜ ರತ್ನ ಲೀಲಾಧರ ಶೆಟ್ಟಿ ಕರಂದಾಡಿ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿದ್ದು ಉಚ್ಚಿಲ ನಿರ್ದೇಶನ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಕಥೆ, ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ, ಶರತ್ ಉಚ್ಚಿಲ ಸಂಗೀತ ನಾಟಕಕ್ಕಿದೆ. 16ನೇ ನಾಟಕ ಬುಡೆದಿಯ ಪ್ರಥಮ ಪ್ರದರ್ಶನದ ಟಿಕೆಟನ್ನು ಒಟಿಟಿ ಬುಕ್ ಮೈ ಶೋ ಆ್ಯಪ್ ಮೂಲಕ ಕಾಯ್ದಿರಿಸಲು ಅವಕಾಶವಿದೆ ಎಂದು ತಿಳಿಸಿದರು. ಪ್ರಥಮ ಪ್ರದರ್ಶನದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ, ವಕೀಲರಾದ ಸಂಕಪ್ಪ, ಉದ್ಯಮಿ ರೋಹಿತ್ ಆಳ್ವ ಮೊದಲಾದವರು ಉಪಸ್ಥಿತರಿರುವರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶರತ್ ಉಚ್ಚಿಲ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಕಡಲ ಐಸಿರ 2022 ; ಜನಮನ ಸೆಳೆದ ಚೆಂಡೆವಾದನ

Thumbnail
Posted On: 18 Dec 2022, 09:02 PM

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ಆದಿತ್ಯವಾರದಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಚೆಂಡೆ ವಾದನ ಜನಮನ ಸೆಳೆಯಿತು. ಸಭಾ ಕಾರ್ಯಕ್ರಮ, ಬೆಂಗಳೂರು ತಂಡದಿಂದ ರಸಮಂಜರಿ ಕಾರ್ಯಕ್ರಮವೂ ಜರಗಲಿದೆ. ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ವತಿಯಿಂದ ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಡ್ರಮ್ - ಚೆಂಡೆ ಸ್ಪರ್ಧೆ, ಕೊಳಲು - ಚೆಂಡೆ ವಾದನ, ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್‌ ಕ್ರೀಡಾಕೂಟ

Thumbnail
Posted On: 18 Dec 2022, 03:52 PM

ಕಾಪು : ಕುತ್ಯಾರು ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್‌ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಸೂರ್ಯಚೈತನ್ಯ ಹೈಸ್ಕೂಲಿನ ವಾರ್ಷಿಕ ಕ್ರೀಡಾಕೂಟವು ಶನಿವಾರದಂದು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್‌ ಕುಮಾರ್‌ ಬೆಳ್ಳೂರು ಅಧ್ಯಕ್ಷತೆಯಲ್ಲಿ ಜರುಗಿತು. ಶಿರ್ವ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ರಾಘವೇಂದ್ರ ಸಿ. ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡೆಯಿಂದ ಶಿಸ್ತು, ಒಗ್ಗಟ್ಟು ಸಾಧ್ಯವಾಗುವುದು. ಪೊಲೀಸ್‌ ಮತ್ತು ಸೇನೆಯ ಸೇರ್ಪಡೆಗೆ ದೈಹಿಕ ಕ್ಷಮತೆ ಅತ್ಯಗತ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಿ ಉನ್ನತ ಸಾಧನೆ ಮಾಡಬೇಕು ಎಂದು ಕರೆಯಿತ್ತರು. ಠಾಣಾ ಎಎಸ್ಸೈ ಶಶಿಧರ್‌ ಕೆ, ಕಾರ್ಯದರ್ಶಿ ಗುರುರಾಜ್‌ ಕೆ.ಜೆ. ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನೆಯ ವಂದನೆ ಸ್ವೀಕರಿಸಿದರು. ಉಪಾಧ್ಯಕ್ಷ ವಿವೇಕ್‌ ಆಚಾರ್ಯ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಗೌರವ ಸಲಹೆಗಾರ ವಿದ್ವಾನ್‌ ಶಂಭುದಾಸ ಗುರೂಜಿ, ಪ್ರಿನ್ಸಿಪಾಲ್‌ ಗುರುದತ್ತ ಸೋಮಯಾಜಿ, ಸಹಾಯಕ ಪ್ರಿನ್ಸಿಪಾಲ್‌ ಸಂಗೀತಾ, ಶಿಕ್ಷಕವೃಂದ,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಗುರುದತ್ತ ಸೋಮಯಾಜಿ ಸ್ವಾಗತಿಸಿದರು. ಸಹ ಶಿಕ್ಷಕಿ ರಮ್ಯಾ ಪ್ರಭು ನಿರೂಪಿಸಿ ಸಹ ಶಿಕ್ಷಕ ಮಂಜುನಾಥ್‌ ಶೇಟ್‌ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್‌ ಆಚಾರ್ಯ ಕ್ರೀಡಾಕೂಟವನ್ನು ಸಂಘಟಿಸಿದರು.

ಜನವರಿ 15 : ಕುತ್ಯಾರು ಮೂಲ್ಯರ ಯಾನೆ ಕುಲಾಲರ ಸಂಘದಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Thumbnail
Posted On: 18 Dec 2022, 03:06 PM

ಕಾಪು : ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 15 ರ ರವಿವಾರ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ಧಾರ್ಮಿಕ ಸಭೆ ನಂತರ ಪ್ರಸಾದ ಭೋಜನವಿರುತ್ತದೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುವರು.