Updated News From Kaup
ಪಡುಬಿದ್ರಿ : ಬ್ಲೂ ಫ್ಲ್ಯಾಗ್ ಬೀಚ್ನಲ್ಲಿ ಜರಗಿದ ವರ್ಣ ವಿಹಾರ -2022 ; 400 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ
Posted On: 12-11-2022 09:25PM
ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ, ಪ್ರವಾಸೋದ್ಯಮ ಇಲಾಖೆ ಉಡುಪಿ, ಬ್ಲೂ ಫ್ಲ್ಯಾಗ್ ಬೀಚ್ ಪಡುಬಿದ್ರಿ ಜಂಟಿ ಸಹಯೋಗದೊಂದಿಗೆ ಉಜ್ವಲ್ ಡಿಸೈನ್ಸ್ ಮತ್ತು ಪ್ರಿಂಟಿಂಗ್ಸ್ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪಡುಬಿದ್ರಿ ಬ್ಲೂ ಫ್ಲ್ಯಾಗ್ ಬೀಚ್ ನಲ್ಲಿ ವರ್ಣ ವಿಹಾರ -2022 ಉಭಯ ಜಿಲ್ಲಾ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರ ಬಿಡಿಸುವ ಸ್ಪರ್ಧೆ ಶನಿವಾರ ಜರಗಿತು. ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಸುಮಾರು 400ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಪಡುಬಿದ್ರಿ ಅಧ್ಯಕ್ಷರಾದ ಗೀತಾ ಅರುಣ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರೋಟರಿ ಜಿಲ್ಲೆ 3182 ರ ವಲಯ 5 ರ ಸಹಾಯಕ ಗವರ್ನರ್ ಡಾ| ಶಶಿಕಾಂತ ಕರಿಂಕ, ಎಚ್ ಎನ್ ಗುರುಪ್ರಸಾದ್, ವೈ ಸುಧೀರ್ ಕುಮಾರ್, ಮಾಧವ ಸುವರ್ಣ, ಸುಕುಮಾರ್ ಶ್ರೀಯಾನ್, ಪತ್ರಕರ್ತ ಸುರೇಶ್ ಎಮಾಳು, ಗಣೇಶ್ ಆಚಾರ್ಯ ಉಚ್ಚಿಲ, ಗಂಗಾಧರ ಕರ್ಕೇರ, ಅಬ್ದುಲ್ ಹಮೀದ್, ಕಿರಣ್ ರಾಜ್ ಕರ್ಕೇರ, ಅಶೋಕ್ ಸಾಲ್ಯಾನ್, ಭವಿಷ್, ಕಾರ್ಯಕ್ರಮದ ನಿರ್ದೇಶಕರಾದ ತಸ್ನೀನ್ ಅರಾ, ಮಹಮ್ಮದ್ ನಿಯಾಝ್, ಗಣೇಶ್ ಶೆಟ್ಟಿಗಾರ್, ರೂಪ ವಸುಂಧರಾ, ಕಾರ್ಯದರ್ಶಿ ಜ್ಯೋತಿ ಮೆನನ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಅಕ್ರಮ, ಅವೈಜ್ಞಾನಿಕ, ಕಾನೂನು ಬಾಹಿರ ಟೋಲ್ ಗೇಟ್ ರದ್ದಾಗುವವರೆಗೆ ವಿರಮಿಸಲಾರೆವು : ವಿನಯ್ ಕುಮಾರ್ ಸೊರಕೆ
Posted On: 12-11-2022 08:19PM
ಕಾಪು : ಅಕ್ರಮ, ಅವೈಜ್ಞಾನಿಕ, ಕಾನೂನು ಬಾಹಿರ ವಾಗಿ ಕಾರ್ಯಾಚರಿಸುತ್ತಿರುವ ಸುಲಿಗೆ ಕೇಂದ್ರವು ರದ್ದಾಗುವವರೆಗೆ ವಿರಮಿಸೆವು ಈ ನಿಟ್ಟಿನಲ್ಲಿ ಹೋರಾಟವನ್ನು ಇನ್ನಷ್ಟು ತೀವ್ರ ಗೊಳಿಸಲಾಗುವುದೆಂದು ವಿನಯ್ ಕುಮಾರ್ ಸೊರಕೆ ಅವರು ಕಾಪುವಿನಲ್ಲಿ ನಡೆದ ಧರಣಿ ಪ್ರತಿಭಟನೆಯಲ್ಲಿ ಗುಡುಗಿದರು. ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಗಳು ಹಾಗೂ ಇತರ ಸಮಾನ ಮನಸ್ಕ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಇಂದು ಕಾಪು ಪೇಟೆಯಲ್ಲಿ ಸುರತ್ಕಲ್ ಟೋಲ್ ಗೇಟ್ ರದ್ದುಪಡಿಸುವ ನಿಟ್ಟಿನಲ್ಲಿ ಟೋಲ್ ವಿರೋಧಿ ಹೋರಾಟ ಸಮಿತಿಯ ನಿರ್ಣಯದಂತೆ ಉಭಯ ಜಿಲ್ಲೆಗಳ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಧರಣಿ ಕಾರ್ಯಕ್ರಮವು ಪ್ರಥಮವಾಗಿ ಕಾಪುವಿನಲ್ಲಿ ನಡೆಯಿತು.
ಎರ್ಮಾಳು : ಶ್ರೀ ಜನಾರ್ಧನ ರಿಕ್ಷಾ ನಿಲ್ದಾಣಕ್ಕೆ ಚಾಲನೆ
Posted On: 12-11-2022 03:04PM
ಎರ್ಮಾಳು : ರಾಷ್ಟ್ರೀಯ ಹೆದ್ದಾರಿ 66 ಶ್ರೀ ಜನಾರ್ಧನ ದೇವಾಲಯದ ಬಳಿ ನೈಮಾಡಿ ಸುಂದರ ಕಾಂತರ ಶೆಟ್ಟಿ, ಮಕ್ಕಳಿಂದ ನಿರ್ಮಾಣಗೊಂಡ ಜನಾರ್ಧನ ರಿಕ್ಷಾ ನಿಲ್ದಾಣವನ್ನು ಜನಾರ್ಧನ ದೇವಾಲಯದ ಆಡಳಿತ ಮೊಕ್ತೇಸರ ಅಶೋಕ ರಾಜ್ ರವರು ಶನಿವಾರ ಬೆಳಗ್ಗೆ ಲೋಕಾರ್ಪಣೆಗೈದರು.
ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿ ನಿಧನ
Posted On: 12-11-2022 03:00PM
ಕಾಪು : ಉಳ್ಳೂರುಗುತ್ತು ಮನೆ ರಾಮಚಂದ್ರ ಶೆಟ್ಟಿಯವರು ಇಂದು ಬೆಳಗ್ಗೆ 9.04 ಕ್ಕೆ ಸ್ವಗೃಹ ಇನ್ನಂಜೆ ಉಂಡಾರು ಗುರುಕೃಪಾದಲ್ಲಿ ಅಸೌಖ್ಯದಿಂದಾಗಿ ದೈವಾಧೀನರಾದರು.
ಮಕ್ಕಳ ದಿನಾಚರಣೆ : ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆ
Posted On: 11-11-2022 11:41PM
ಉಡುಪಿ : ಮಾನವ ಬಂಧುತ್ವ ವೇದಿಕೆ ಕರ್ನಾಟಕ ಉಡುಪಿ ಜಿಲ್ಲೆ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ಇವರ ಸಹಕಾರದೊಂದಿಗೆ ಮಕ್ಕಳ ದಿನಾಚರಣೆಯ ಪ್ರಯುಕ್ತ ಉಡುಪಿ ಜಿಲ್ಲಾ ಮಟ್ಟದ ಚಿತ್ರ (ಡ್ರಾಯಿಂಗ್) ಬಿಡಿಸುವ ಇದೇ ನವೆಂಬರ್ 13 ರಂದು ಆದಿತ್ಯವಾರ ಬೆಳಿಗ್ಗೆ 10 ಗಂಟೆಗೆ ಉದ್ಯಾವರ ಝೇವಿಯರ್ ಸಭಾಭವನದಲ್ಲಿ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ.
ಶಿರ್ವ : ಪ್ಲೇಸ್ಮೆಂಟ್ ಸ್ಕಿಲ್ ಮತ್ತು ಟ್ರೈನಿಂಗ್ ಕಾರ್ಯಗಾರ
Posted On: 11-11-2022 12:37PM
ಶಿರ್ವ : ವಿದ್ಯಾರ್ಥಿಗಳ ವೃತ್ತಿಜೀವನದ ಗುರಿಗಳನ್ನು ರೂಪಿಸುವಲ್ಲಿ ಉದ್ಯೋಗ ತರಬೇತಿ ಪ್ರಮುಖ ಪಾತ್ರ ವಹಿಸುತ್ತದೆ. ನೇಮಕಾತಿಗಾಗಿ ತಮ್ಮ ಕ್ಯಾಂಪಸ್ಗೆ ಭೇಟಿ ನೀಡುವ ಉನ್ನತ ಸಂಸ್ಥೆಯಲ್ಲಿ ಸ್ಥಾನ ಪಡೆಯುವುದು ಪ್ರತಿಯೊಬ್ಬ ಕಂಪ್ಯೂಟರ್ ಪದವಿ ವಿದ್ಯಾರ್ಥಿಯ ಕನಸಾಗಿದೆ. ಈ ಪ್ರಮುಖ ಅಂಶವನ್ನು ಪರಿಗಣನೆಗೆ ಇಟ್ಟುಕೊಂಡು, ಪದವಿ ವಿದ್ಯಾರ್ಥಿಗಳಿಗೆ ತಮ್ಮ ಉದ್ಯೋಗ ಕೌಶಲ್ಯಗಳನ್ನು ಹೆಚ್ಚಿಸಲು ಮತ್ತು ವಿವಿಧ ಉದ್ಯಮಗಳಲ್ಲಿ ಉತ್ತಮ ಉದ್ಯೋಗವನ್ನು ಸಾಧಿಸಲು ತರಬೇತಿ ಮುಖ್ಯವಾಗಿದೆ ಎಂದು ಸಂತ ಮೇರಿ ಮಹಾ ವಿದ್ಯಾಲಯ,ಶಿರ್ವ ಮತ್ತು ಮೈಟ್ ಕಾಲೇಜು, ಮಿಜಾರು ನಡುವೆ ಒಡಂಬಡಿಕೆಯ ಅನುಸರಿಸಿ ಗಣಕ ವಿಜ್ಞಾನ ವಿಭಾಗ ಏರ್ಪಡಿಸಿದ ಪ್ಲೇಸ್ಮೆಂಟ್ ಸ್ಕಿಲ್ ಮತ್ತು ಟ್ರೈನಿಂಗ್ ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಮಿಜಾರ್ ಮೈಟ್ ಕಾಲೇಜು ಸಹಾಯಕ ಪ್ರಾಧ್ಯಾಪಕ ಅಕ್ಷತ್ರಾಜ್ ಜೈನ್ ಹೇಳಿದರು.
ನವೆಂಬರ್ 14 - 20 : 69 ನೇ ಅಖಿಲ ಭಾರತ ಸಹಕಾರ ಸಪ್ತಾಹ - ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯಲ್ಲಿ ವಿವಿಧ ಕಾರ್ಯಕ್ರಮಗಳು
Posted On: 11-11-2022 12:09PM
ಪಡುಬಿದ್ರಿ : 69ನೇ ಅಖಿಲ ಭಾರತ ಸಹಕಾರ ಸಪ್ತಾಹವು ನವಂಬರ್ 14ರಿಂದ 20ರವೆಗೆ ರಾಷ್ಟ್ರದಾದ್ಯಂತ ಆಚರಿಸಲಾಗುತಿದ್ದು ಇದರ ಅಂಗವಾಗಿ ಜಿಲ್ಲೆಯಲ್ಲಿಯೇ ಪ್ರಪ್ರಥಮ ಬಾರಿಗೆ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯು ಸಪ್ತಾಹದ 7 ದಿನಗಳಲ್ಲೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಿದೆ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ. ಬೆಂಗಳೂರು ಮತ್ತು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರಾದ ಡಾ| ಎಮ್ ಎನ್ ರಾಜೇಂದ್ರ ಕುಮಾರ್ ಉದ್ಘಾಟಿಸಲಿದ್ದಾರೆ ಎಂದು ಸೊಸೈಟಿಯ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಸೊಸೈಟಿಯ ಪ್ರಧಾನ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಉಡುಪಿ : ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಮತದಾರದ ಜಾಗೃತಿ ಜಾಥ
Posted On: 10-11-2022 08:57PM
ಉಡುಪಿ : ಟಿ ಎ ಪೈ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕುಂಜಿಬೆಟ್ಟಿನ ಶಾಲೆಯಲ್ಲಿ ಮತದಾರದ ಜಾಗೃತಿ ಜಾಥ ನಡೆಯಿತು.
ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಭೇಟಿ
Posted On: 10-11-2022 06:41PM
ಶಿರ್ವ: ಇಲ್ಲಿನ ಶಿರ್ವ ಸಂತ ಮೇರಿ ವಿದ್ಯಾಲಯಕ್ಕೆ 21 ಕರ್ನಾಟಕ ಬೆಟಾಲಿಯನ್ ಎನ್ ಸಿಸಿ, ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ಕೆ ಸಿಂಗ್ ಅವರ ಭೇಟಿ ನೀಡಿದರು. ಯುವ ಸೇನಾದಳದ ಕೆಡೆಟ್ಗಳನ್ನು ಉದ್ದೇಶಿಸಿ ಮಾತನಾಡುತ್ತಾ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಎನ್ ಸಿಸಿ ಸಹಾಯಕಾರಿ. ಎನ್ಸಿಸಿ ತರಬೇತಿಯಿಂದ ಕ್ಯಾಡೆಡ್ಗಳಲ್ಲಿ ದೇಶ ಸೇವೆ ಹಾಗೂ ಸಾಮಾಜಿಕ ಸೇವೆ ಮಾಡಲು ಪ್ರೇರೇಪಿಸುತ್ತದೆ. ಶಿಸ್ತುಬದ್ಧವಾದ ಜೀವನವನ್ನು ನಡೆಸಲು, ಉನ್ನತ ಉದ್ಯೋಗ ಪಡೆಯಲು ಕ್ಯಾಡೆಡ್ಗಳಿಗೆ ಎನ್ಸಿಸಿ ಒಂದು ವರವಾಗಿದೆ. ಈ ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು, ಶಾರೀರಿಕವಾಗಿ ಹಾಗೂ ಮಾನಸಿಕವಾಗಿ ದೃಢರಾಗಲು ಎನ್ಸಿಸಿಯ ವಿವಿಧ ತರಬೇತಿಗಳಲ್ಲಿ ಭಾಗವಹಿಸಿ ಪಡೆದುಕೊಳ್ಳಬಹುದು ಎಂದರು.
ಕಾರ್ಕಳ : ಕಾನೂನು ಅರಿವು ಮತ್ತು ನಮಗೂ ಹಕ್ಕಿದೆ @75 ಕಾರ್ಯಕ್ರಮ
Posted On: 09-11-2022 05:21PM
ಕಾರ್ಕಳ : ನಮ್ಮ ದೇಶದ ಕಾನೂನು ಅತ್ಯಂತ ಪರಿಣಾಮಕಾರಿಯಾಗಿದ್ದು, ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನ ನ್ಯಾಯದ ಹಕ್ಕನ್ನು ನೀಡಿದೆ. ಕಾನೂನಿನ ಅಡಿಯಲ್ಲಿ ಪ್ರತಿ ನಾಗರೀಕನೂ ಕಾನೂನಿಗೆ ತಲೆಬಾಗಿ ತನ್ನ ಸ್ವಾತಂತ್ರವನ್ನು ಅನುಭವಿಸಬೇಕು. ನಮ್ಮ ಹಕ್ಕುಗಳಿಗಾಗಿ ಹೋರಾಡಿ ನ್ಯಾಯಾಲಯದಲ್ಲಿ ನ್ಯಾಯ ಪಡೆಯುವ ವ್ಯವಸ್ಥೆಯೂ ಇದೆ. ಇದನ್ನು ದೇಶದ ನಾಗರೀಕರಾದ ನಾವೆಲ್ಲ ಅರ್ಥೈಸಿಕೊಂಡು ಕಾನೂನಿಗೆ ಗೌರವ ನೀಡಿ ಬದುಕಬೇಕಿದೆ ಎಂದು ವಕೀಲ ಪ್ರಸನ್ನ ಕರ್ಮರ್ಕರ್ ಹೇಳಿದರು.
