Updated News From Kaup

ಅದಮಾರು : ಪಿಪಿಸಿ ವಿದ್ಯಾಸಂಸ್ಥೆಯಿಂದ ಮತದಾರ ಜಾಗೃತಿ ಜಾಥ

Posted On: 09-11-2022 04:42PM

ಅದಮಾರು: ಇಲ್ಲಿನ ಪೂರ್ಣಪ್ರಜ್ಞ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಂದ ಬುಧವಾರ ಮತದಾರರ ಜಾಗೃತಿ ಜಾಥ ಕಾರ್ಯಕ್ರಮ ಜರಗಿತು.

ಉದ್ಯಾವರ : ಕನಸಿನ ಮನೆಗೆ ಇನ್ವರ್ಟರ್ ಕೊಡುಗೆ

Posted On: 07-11-2022 09:15PM

ಉದ್ಯಾವರ : ಇಲ್ಲಿಯ ಸ್ನೇಹ ಶಿಕ್ಷಣ ಮತ್ತು ಅಭಿವೃದ್ಧಿ ಸಂಸ್ಥೆಯ ಹಿರಿಯ ನಾಗರಿಕರ ಕನಸಿನ ಮನೆಗೆ ಉದ್ಯಾವರ ಹಲೀಮಾ ಸಾಬ್ಜು ಚಾರಿಟೇಬಲ್ ಟ್ರಸ್ಟಿನ ಟ್ರಸ್ಟಿ ಮತ್ತು ಉದ್ಯಮಿ ಹಾಜಿ ಅಬ್ದುಲ್ ಜಲೀಲ್ ಸಾಹೇಬ್ ವತಿಯಿಂದ ಸುಮಾರು 60 ಸಾವಿರ ರೂ. ಅಧಿಕ ಮೌಲ್ಯದ ಇನ್ವರ್ಟರ್ ಹಾಗೂ ದಿನಬಳಕೆ ಸಾಮಗ್ರಿ ಗಳನ್ನು ಹಸ್ತಾಂತರಿಸಲಾಯಿತು. ಉದ್ಘಾಟಿಸಿ ಮಾತನಾಡಿದ ಹಾಜಿ ಅಬ್ದುಲ್ ಜಲೀಲ್ ಸಾಹೇಬ್, ಹಿರಿಯ ನಾಗರಿಕರಿಗೆ ಈ ಕನಸಿನ ಮನೆಯಲ್ಲಿ ನೆಮ್ಮದಿ ಸಿಗಲಿ ಎಂದು ಶುಭ ಹಾರೈಸಿದರು.

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದ ದೀಪಾವಳಿ ಹಾಗೂ ತುಳಸಿ ಹಬ್ಬ

Posted On: 07-11-2022 08:45PM

ಕಾರ್ಕಳ : ಇಲ್ಲಿನ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 5 ರಂದು ದೀಪಾವಳಿ ಮತ್ತು ತುಳಸಿ ಪೂಜಾ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಕಾಪು ವೆಂಕಟರಮಣ ದೇವಳದಲ್ಲಿ ಮೃಗಬೇಟೆ ಉತ್ಸವ

Posted On: 07-11-2022 08:37PM

ಕಾಪು : ಇಲ್ಲಿನ ಶ್ರೀ ವೆಂಕಟರಮಣ ದೇವಳದಲ್ಲಿ ಮೃಗಬೇಟೆ ಉತ್ಸವ ಇಂದು ಜರಗಿತು.

ಯಶಸ್ವಿ ಜನಸಂಕಲ್ಪ ಸಮಾವೇಶ : ಕಾಪು ಬಿಜೆಪಿ

Posted On: 07-11-2022 08:26PM

ಕಾಪು : ಪೂರ್ವತಯಾರಿಕೆಗೆ ಕೆಲವೇ ದಿನಗಳ ಅವಕಾಶ ದೊರೆತರೂ, ಹತ್ತು ಹಲವು ಕಾರ್ಯಕ್ರಮಗಳಿದ್ದರೂ, ವಾರದ ನಡುವೆ ಆದರೂ ನಮ್ಮ ಕಾರ್ಯಕರ್ತರು ಪಕ್ಷಕ್ಕಾಗಿ ಸಮರ್ಪಣೆ ಮಾಡಲು ಸದಾ ಸಿದ್ದ ಎಂದು ರೂಪಿಸಿದ ಐತಿಹಾಸಿಕ ಕಾರ್ಯಕ್ರಮ ಕಾಪು ಬಿಜೆಪಿಯ ಇಂದಿನ ಜನಸಂಕಲ್ಪ ಸಮಾವೇಶ. ಸಮಯ ನಿಗದಿಯಾಗಿ ಕೇವಲ ಕೆಲವೇ ದಿನಗಳು ಬಾಕಿ ಇದ್ದರೂ ಎಲ್ಲ ಪಂಚಾಯತ್ ಗಳಲ್ಲಿ ಸಭೆಗಳನ್ನು ನಡೆಸಿ, ಕಾರ್ಯಕರ್ತರ ಮನ ಒಲಿಸಿ, ಬೇಸಾಯದ ಸಂದರ್ಭದಲ್ಲಿ, ರಜಾದಿನವಲ್ಲದಿದ್ದರೂ, ಬೇರೆ ದೊಡ್ಡ ಮಟ್ಟದ ಧಾರ್ಮಿಕ ಕಾರ್ಯಕ್ರಮ ಇದ್ದರೂ, ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿ ಬೂತ್ ಬೂತ್ ಗಳಿಂದ ಫಲಾನುಭವಿ ಕಾರ್ಯಕರ್ತರನ್ನು ಕರೆತಂದು ಕಾಪು ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

ಎರ್ಮಾಳು : ಬಹುಭಾಷಾ ನಟಿ ಜಯಪ್ರದ ಜನಾರ್ಧನ ದೇವಳಕ್ಕೆ ಭೇಟಿ

Posted On: 07-11-2022 08:17PM

ಎರ್ಮಾಳು : ಉತ್ತರ ಪ್ರದೇಶದ ರಾಂಪುರ ಕ್ಷೇತ್ರದ ಮಾಜಿ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯೆ ಹಾಗೂ ಖ್ಯಾತ ಬಹುಭಾಷಾ ಚಲನಚಿತ್ರ ನಟಿ ಜಯಪ್ರದ ಎರ್ಮಾಳು ಜನಾರ್ಧನ ದೇವಳಕ್ಕೆ ಇಂದು ಭೇಟಿ ನೀಡಿದರು.

ಇನ್ನಂಜೆ : ವಿಶ್ವವಲ್ಲಭ ತೀರ್ಥ ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ಉದ್ಯಮಿ ಗ್ರೆಗೋರಿ ಮಾತಾಯಸ್ ರಿಂದ ವಿಜ್ಞಾಪನ ಪತ್ರ ಬಿಡುಗಡೆ

Posted On: 07-11-2022 08:11PM

ಇನ್ನಂಜೆ : ಸೋದೆ ವಾದಿರಾಜ ಮಠದ ಯತಿಗಳಾದ ಶ್ರೀ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅವರ ಶುಭ ಆಶೀರ್ವಾದದೊಂದಿಗೆ, ಇನ್ನಂಜೆಯ ಯುವ ಉದ್ಯಮಿ ಗ್ರೆಗೋರಿ ಮತಾಯಸ್, ಮತಯಾಸ್ ಹೆರಿಟೇಜ್ ಇನ್ನಂಜೆ ಇವರು ಸುವರ್ಣ ಮಹೋತ್ಸವದ ನೂತನ ಕಟ್ಟಡದ ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಿದರು.

ಬಂಟಕಲ್ಲು : ವಿಕಾಸ ಸೇವಾ ಸಮಿತಿ ಮತ್ತು ಸ್ಥಳೀಯರಿಂದ ಸ್ವಚ್ಚತಾ ಕಾರ್ಯ

Posted On: 06-11-2022 09:17PM

ಬಂಟಕಲ್ಲು : ವಿಕಾಸ ಸೇವಾ ಸಮಿತಿ ಮತ್ತು ಸ್ಥಳೀಯರಿಂದ 92ನೇ ಹೇರೂರು ಬ್ರಹ್ಮನಗರದಿಂದ ಕಲ್ಲುಗುಡ್ಡೆ ಹೋಗುವ ರಸ್ತೆಯನ್ನು ರಸ್ತೆಯ ಇಕ್ಕೆಲಗಳಲ್ಲಿ ಬೆಳೆದ ಗಿಡಗಂಟಿಗಳನ್ನು ಸ್ವಚ್ಛಗೊಳಿಸಲಾಯಿತು.

ಕಟಪಾಡಿ : ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿ - ಯಶ್ಪಾಲ್ ಸುವರ್ಣ

Posted On: 06-11-2022 09:09PM

ಕಟಪಾಡಿ : ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳುವುದು. ಕರಾಟೆಯಂತಹ ಕ್ರೀಡೆಯಲ್ಲಿ ಭಾಗವಹಿಸುವುದರ ಮೂಲಕ ಮಕ್ಕಳ ಮಾನಸಿಕ ಬೆಳವಣಿಗೆಗೊಳ್ಳುವ ಜೊತೆಗೆ ಶಾಲಾ ಕಲಿಕೆಗೆ ಸಹಾಯವಾಗುವುದು. ಇದೇ ರೀತಿಯಲ್ಲಿ ಹಳ್ಳಿ ಹಳ್ಳಿ ಗಳಿಂದ ಕರಾಟೆ ಪಟುಗಳು ಹೊರಹೊಮ್ಮುವುದರಿಂದ ಮುಂದಿನ ದಿನಗಳಲ್ಲಿ ಕರಾಟೆ ಮೂಲಕ ನಮ್ಮ ರಾಜ್ಯ ವಿಶ್ವದಲ್ಲೇ ಹೆಸರು ಗಳಿಸುವುದರಲ್ಲಿ ಸಂಶಯವಿಲ್ಲ. ರಾಷ್ಟ್ರ ಮಟ್ಟದ ಕ್ರೀಡೆಗಳಿಂದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಲಿ ಎಂದು ಯಶ್ ಪಾಲ್ ಸುವರ್ಣ ಹೇಳಿದರು. ಅವರು ಉಡುಪಿ ಜಿಲ್ಲೆಯ ಕಟಪಾಡಿ ಸುಭಾಸ್ ನಗರದಲ್ಲಿ ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ,ಸಂಸ್ಥೆಯ ವತಿಯಿಂದ ಆದಿತ್ಯವಾರ ಕಟಪಾಡಿ ಸುಭಾಷ್ ನಗರದ ಥಂಡರ್ಸ್ ಗ್ರಾಂಡ್ ಬೇ ಸಭಾಂಗಣದಲ್ಲಿ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿ ಯಾಗಲಿ ಎಂಬ ಉದ್ದೇಶದಿಂದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಕೂಟ "ಕೊಂಪಿಟ್ -3.0," ಉದ್ಘಾಟಸಿ ಮಾತನಾಡಿದರು.

ಮೂಳೂರು : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಪಿಲಿಕೋಲ ದೈವನರ್ತಕ ಗುಡ್ಡ ಪಾಣಾರರಿಗೆ ಹುಟ್ಟೂರ ಸನ್ಮಾನ ; ಮೂಳೂರ್ದ ಮುತ್ತು ಬಿರುದು

Posted On: 06-11-2022 08:53PM

ಮೂಳೂರು : ಪ್ರಶಸ್ತಿಯನ್ನು ಬೆನ್ನಟ್ಟಿ ಹೋಗುವ ಒಂದು ಕಾಲ ಇತ್ತು. ಆದರೆ ಇಂದು ಪ್ರಶಸ್ತಿ ಯೋಗ್ಯ ವ್ಯಕ್ತಿಯನ್ನು ಅರಸಿ ಬಂದಂತಹ ಸಂದರ್ಭ ಯೋಚಿಸಿದರೆ ಯೋಗ್ಯವಾದವರೇ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಜಾನಪದ ವಿದ್ವಾಂಸ ಡಾ.ವೈ.ಎನ್.ಶೆಟ್ಟಿ ಅಭಿಪ್ರಾಯಪಟ್ಟರು. ಅವರು 2022ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಪಿಲಿಕೋಲ ದೈವನರ್ತಕ ಗುಡ್ಡ ಪಾಣಾರ ಮೂಳೂರು ಇವರ ಹುಟ್ಟೂರ ಸನ್ಮಾನ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.