Updated News From Kaup
ಜನವರಿ 22 : ಯಂಗ್ ಫ್ರೆಂಡ್ಸ್ ಪಡುಬಿದ್ರಿ - ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಕೋಸ್ಟಲ್ ಸ್ಮ್ಯಾಷರ್ಸ್ ಟ್ರೋಫಿ 2023
Posted On: 20 Jan 2023, 10:57 PM
ಪಡುಬಿದ್ರಿ : ಇಲ್ಲಿನ ಯಂಗ್ ಫ್ರೆಂಡ್ಸ್ ಪಡುಬಿದ್ರಿ ವತಿಯಿಂದ ಬ್ಯಾಡ್ಮಿಂಟನ್ ಪ್ರೀಮಿಯರ್ ಲೀಗ್ ಕೋಸ್ಟಲ್ ಸ್ಮ್ಯಾಷರ್ಸ್ ಟ್ರೋಫಿ 2023 ಇದರ ಉದ್ಘಾಟನಾ ಸಮಾರಂಭ ಜನವರಿ 22, ಆದಿತ್ಯವಾರ ಬೆಳಿಗ್ಗೆ 9:30 ಕ್ಕೆ ಹಳೆಯಂಗಡಿಯ ಟೋರ್ಪೆಡೋಸ್ ಸ್ಫೋಟ್ಸ್೯ ಕ್ಲಬ್ನ ಒಳಾಂಗಣ ಶಟಲ್ ಕೋಟ್೯ ನಲ್ಲಿ ಜರಗಲಿದೆ. ಸ್ಮ್ಯಾಷಸ್೯ ವೆಲ್ಫೇರ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ಅಧ್ಯಕ್ಷ ರಮೀಝ್ ಹುಸೇನ್ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರಗಲಿದ್ದು, ಪಂದ್ಯಾಟವನ್ನು ಪಡುಬಿದ್ರಿ ಬ್ಯಾಡ್ಮಿಂಟನ್ ಕ್ಲಬ್ ನ ಅಧ್ಯಕ್ಷರಾದ ವೈ ಸುಕುಮಾರ್ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕೆಪಿಸಿಸಿ ಕೋರ್ಡಿನೇಟರ್ ನವೀನ್ಚಂದ್ರ ಜೆ ಶೆಟ್ಟಿ, ಪಡುಬಿದ್ರಿ ಸಿಎ ಬ್ಯಾಂಕ್ ಅಧ್ಯಕ್ಷ ವೈ ಸುಧೀರ್ ಕುಮಾರ್, ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ನವೀನ್ ಎನ್ ಶೆಟ್ಟಿ, ಮ್ಯಾಂಗಳೋರ್ ಪ್ರಾಪರ್ಟೀಸ್ ಮ್ಯಾನೇಜಿಂಗ್ ಡೈರೆಕ್ಟರ್ ರೋಜರ್ ಎಮ್ ಪಿಂಟೊ, ಕೋಸ್ಟಲ್ ಫರ್ನಿಚರ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಹನಿಫ್ ಕೋಸ್ಟಲ್, ಟೆನ್ನಿಸ್ ಬಾಲ್ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಗೌರವ ಅಧ್ಯಕ್ಷ ಶರತ್ ಶೆಟ್ಟಿ, ದೇವಿ ಜುವೆಲರ್ಸ್ ಮ್ಯಾನೇಜಿಂಗ್ ಡೈರೆಕ್ಟರ್ ಪ್ರಸನ್ನ ಎಸ್ ಎಸ್, ಕಾಪು ಪ್ರೆಸ್ ಕ್ಲಬ್ ಅಧ್ಯಕ್ಷ ಸುರೇಶ್ ಎರ್ಮಾಳು, ಸ್ಮ್ಯಾಷಸ್೯ ವೆಲ್ಫೇರ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಪಡುಬಿದ್ರಿ ಗೌರವ ಅಧ್ಯಕ್ಷ ಕೌಸರ್ ಭಾಗವಹಿಸಲಿದ್ದಾರೆ. ಪಂದ್ಯಾಟದಲ್ಲಿ ಒಟ್ಟು 10 ತಂಡಗಳು, 80 ಆಟಗಾರರಿದ್ದು, ವಿನ್ನಸ್೯ಗೆ ರೂ.20,000 ನಗದು, ಟ್ರೋಫಿ, ರನ್ನಸ್೯ಗೆ ರೂ. 13,0000 ನಗದು, ಟ್ರೋಫಿ ದೊರೆಯಲಿದೆ. ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನೌಶೀರ್ ಮಾಲೀಕತ್ವದ ಕೋಸ್ಟಲ್ ಹಿರೋಸ್, ನಿತೇಶ್ ರವರ ಎರ್ಮಾಳು ಗುರು ಫ್ರೆಂಡ್ಸ್, ನಸ್ರುಲ್ಲರವರ ಟೀಮ್ ಸಿಗ್ನೇಚರ್, ಕಾರ್ತಿಕ್ ರವರ ದುರ್ಗಾ ಫ್ರೆಂಡ್ಸ್ ಎರ್ಮಾಳು, ಶಂಕರ್ ಕಂಚಿನಡ್ಕ ಇವರ ಯಶ್ ವಾರಿಯಸ್೯, ಕೃಷ್ಣ ಬಂಗೇರ ಇವರ ಯನ್ಶ್ ರಿಯಲ್ ಫೈಟಸ್೯, ಅನ್ವರ್ ಅಹ್ಮದ್ ರವರ ಕ್ಲಬ್ ಡಿ ಎನ್ಫಿಗೊ, ಪ್ರಶಾಂತ್ ರವರ ಎಸ್ ಎನ್ ಜಿ ಎರ್ಮಾಳು, ತರುಣ್ ಶೆಟ್ಟಿ ಇವರ ಟಿಯಾನ್ ಶೆಟ್ಟಿ ಫ್ರೆಂಡ್ಸ್, ರಾಝಿ ಮಾಲೀಕತ್ವದ ರೈಸಿಂಗ್ ಸ್ಟಾರ್ ಪಡುಬಿದ್ರಿ ತಂಡಗಳು ಭಾಗವಹಿಸಲಿವೆ ಎಂದು ಪಂದ್ಯಾಟದ ಸಂಘಟಕರಾದ ಮಿನ್ನಾ ಷರೀಫ್, ಪ್ರವೀಣ್ ಎರ್ಮಾಳು, ಇಮ್ರಾನ್ ಪಡುಬಿದ್ರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಶಿರ್ವ : ಅಪಘಾತ ವಲಯ ಸಮೀಪದ ಗಿಡಗಂಟಿಗಳ ಸ್ವಚ್ಚತೆ
Posted On: 20 Jan 2023, 10:09 PM
ಶಿರ್ವ : ಶಿರ್ವದ ಅಪಘಾತ ವಲಯವೆಂದು ಪರಿಗಣಿಸಲ್ಪಟ್ಟ ರಾಬಿನ್ ಬಸ್ ಸ್ಟ್ಯಾಂಡ್ ರಸ್ತೆ ಬದಿಯ ತಿರುಗು ರಸ್ತೆ ಬಳಿ ಇರುವ ಗಿಡಗಂಟಿಗಳನ್ನು ಶಿರ್ವ ಸಿ. ಎ. ಬ್ಯಾಂಕ್ ಕಾರ್ಯದರ್ಶಿ ರವೀಂದ್ರ ಆಚಾರ್ಯ, ಬಂಟಕಲ್ ಸಾರ್ವಜನಿಕ ಶ್ರೀ ಗಣೇಶೋತ್ಸವ ವೇದಿಕೆ ಅಧ್ಯಕ್ಷ ಮಾಧವ ಕಾಮತ್, ಲl ರವೀಂದ್ರ ಆಚಾರ್ಯ ಬಂಟಕಲ್ ಇವರ ಸಹಕಾರದಿಂದ ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ ತೆರವುಗೊಳಿಸಲಾಯಿತು. ಸರಕಾರ ಪಂಜಿಮಾರು ಪಾಲ್ಕೆಯಿಂದ ಸಿದ್ದಿ ವಿನಾಯಕ ದೇವಸ್ಥಾನದವರೆಗಿನ ರಸ್ತೆಯನ್ನು ದ್ವೀಪದಗೊಳಿಸದೆ ಕೆಲವಾರು ಅಪಘಾತ ಈ ವಲಯದಲ್ಲಿ ಸಂಭವಿಸಿ ಪ್ರಾಣಹಾನಿ ಉಂಟಾಗಿದೆ. ಸಾರ್ವಜನಿಕರು, ಗ್ರಾಮ ಪಂಚಾಯತ್ ಮನವಿ ಮಾಡಿದರು ಸರಕಾರ ಸ್ಪಂದನೆ ಮಾಡಲಿಲ್ಲ ಎಂದು ರತನ್ ಶೆಟ್ಟಿ ಅಭಿಪ್ರಾಯಪಟ್ಟು ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸಿದರು.
ಕಾಪು : ಮೂಳೂರು ಯುವ ಗೆಳೆಯರ ಬಳಗದ 33ನೇ ವಾರ್ಷಿಕೋತ್ಸವ ಸಂಪನ್ನ
Posted On: 19 Jan 2023, 09:07 PM
ಕಾಪು : ಮುಳೂರು ಯುವ ಗೆಳೆಯರ ಬಳಗದ 33ನೇ ವಾರ್ಷಿಕೋತ್ಸವ ಬುಧವಾರ ಸಂಪನ್ನಗೊಂಡಿತು. ಕಾರ್ಯಕ್ರಮವನ್ನು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಕಳೆದ 33 ವರ್ಷಗಳಿಂದ ನಿರಂತರ ಸಮಾಜ ಸೇವೆ ಮಾಡುತ್ತಿರುವ ಯುವ ಗೆಳೆಯರ ಬಳಗದ ಸದಸ್ಯರು ಅಭಿನಂದನೆಗೆ ಅರ್ಹರು ಎಂದರು. ಈ ಪರಿಸರದಲ್ಲಿ ಕಡಲ್ಕೊರೆತಕ್ಕಾಗಿ ಕಲ್ಲು ದಂಡೆ ನಿರ್ಮಿಸಲು ಸಹಕರಿಸಿದ ಕಾಪು ಶಾಸಕ ಲಾಲಾಜಿ ಮೆಂಡನ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ, ಸಹಕಾರ ರತ್ನ ಪ್ರಶಸ್ತಿ ಪಡೆದ ಯಶ್ ಪಾಲ್ ಸುವರ್ಣ, ಕಲಾಸಂಗಮದ ಮುಖ್ಯಸ್ಥ ವಿಜಯಕುಮಾರ್ ಕೊಡಿಯಲ್ ಬೈಲುರವರನ್ನು ವೇದಿಕೆಯಲ್ಲಿ ಗಣ್ಯರು ಸನ್ಮಾನಿಸಿದರು. ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವೇದಿಕೆಯಲ್ಲಿ ಕಾಪು ಶಾಸಕ ಲಾಲಾಜಿ ಮೆಂಡನ್, ಗುರ್ಮೆ ಫೌಂಡೇಶನ್ ಅಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ, ಸಮಾಜ ರತ್ನ ಯಶ್ ಪಾಲ್ ಸುವರ್ಣ, ಸಾಯಿ ರಾಧಾ ಸಂಸ್ಥೆಯ ಮುಖ್ಯಸ್ಥ ಮನೋಹರ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ಶೆಟ್ಟಿ ಬಾಲಾಜಿ , ಸಂಸ್ಥೆಯ ಅಧ್ಯಕ್ಷ ಮಧು ಆರ್ ಕೋಟ್ಯಾನ್, ವಿನೋದ್ ಸುವರ್ಣ, ಶಾಂಭವಿ ಕುಲಾಲ್, ಕುಶ ಸುವರ್ಣ, ಕಿಶೋರ್ ಕರ್ಕೆರಾ, ವೀರ ಕೇಸರಿ ಜೆ ಶೆಟ್ಟಿ, , ನವೀನ್ ಡಿ ಪುತ್ರನ್, ಸಚಿನ್ ಕೋಟ್ಯಾನ್, ದೇವರಾಜ್ ಎಸ್ ಕರ್ಕೆರಾ ಉಪಸ್ಥಿತರಿದ್ದರು. ಮಧು ಕೋಟ್ಯಾನ್ ಪ್ರಾರ್ಥಿಸಿದರು. ಸತೀಶ್ ಶೆಟ್ಟಿ ಚಿತ್ರಪಾಡಿ ನಿರೂಪಿಸಿದರು. ಸುನಿಲ್ ಕೋಟ್ಯಾನ್ ವಂದಿಸಿದರು.
ಕಾಂಗ್ರೆಸ್ ಪ್ರತಿಯೊಬ್ಬರ ಏಳಿಗೆ ಬಯಸುವ ಪಕ್ಷ : ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ
Posted On: 19 Jan 2023, 08:42 PM
ಕಾಪು : ಬೆಂಗಳೂರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯಾಧ್ಯಕ್ಷ ವಿಧಾನ ಪರಿಷತ್ ಸದಸ್ಯರಾದ ಕೆ. ಅಬ್ದುಲ್ ಜಬ್ಬಾರ್ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಫಾರೂಕ್ ಚಂದ್ರನಗರ ಭಾಗವಹಿಸಿ ಉಡುಪಿ ಜಿಲ್ಲಾ ಅಲ್ಪ ಸಂಖ್ಯಾತರ ಪರವಾಗಿ ಚರ್ಚೆ ನಡೆಸಿದರು. ಈಗಾಗಲೇ ಚುನಾವಣೆ ಹತ್ತಿರದಲ್ಲಿದ್ದು ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ ಈಗಾಗಲೇ ಚುನಾವಣೆ ಪ್ರಣಾಳಿಕೆ ಬಿಡುಗಡೆಗೊಳ್ಳುತ್ತಿದೆ. ಜನಸಾಮಾನ್ಯರಿಗೆ ಪ್ರತಿ ತಿಂಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವುದು ಜನರಿಗೆ ತುಂಬಾ ಸಹಕಾರಿಯಾಗಲಿದೆ ಎಂದು ತಿಳಿಸಿದರು. ಕಾಂಗ್ರೆಸ್ ಪಕ್ಷ ಜ್ಯಾತ್ಯತೀತ ನೆಲೆಯಲ್ಲಿ ಪ್ರತಿಯೊಬ್ಬರ ಪ್ರಗತಿಯನ್ನು ಬಯಸುತ್ತದೆ ಎಂದರು. ಈ ಸಂದರ್ಭದಲ್ಲಿ ಕೆಪಿಸಿಸಿ ಅಲ್ಪ ಸಂಖ್ಯಾತ ಸದಸ್ಯರುಗಳು ಉಪಸ್ಥಿತರಿದ್ದರು.
ಶಿರ್ವ : ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ; ಸರಕಾರ ಪ್ರೋತ್ಸಾಹ ಧನ ಹೆಚ್ಚಿಸಿ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು - ಬೋಳ ಸದಾಶಿವ ಶೆಟ್ಟಿ
Posted On: 19 Jan 2023, 05:27 PM
ಶಿರ್ವ : ಸ್ಥಳೀಯ ಹೋಟೆಲ್ ಶಾಮ್ ಸ್ಕ್ವೇರ್ ಸಭಾಂಗಣದಲ್ಲಿ ಜರುಗಿದ ಸಹಕಾರ ಭಾರತಿ ಸಂಸ್ಥಾಪನಾ ದಿನಾಚರಣೆ ಯನ್ನು ಉದ್ಘಾಟಿಸಿ ಮಾತನಾಡುತ್ತಾ ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾದ ಬೋಳ ಸದಾಶಿವ ಶೆಟ್ಟಿಯವರು ಹೈನುಗಾರರ ಪರಿಸ್ಥಿತಿ ತೀವ್ರ ಸಂಕಷ್ಟದಲ್ಲಿದೆ. ಸರಕಾರವು ಪ್ರೋತ್ಸಾಹ ಧನವನ್ನು ಹೆಚ್ಚಿಸುವ ಮೂಲಕ ಹೈನುಗಾರರ ಕಷ್ಟಕ್ಕೆ ಸ್ಪಂದಿಸಬೇಕು ಎಂದರು. ಸಭಾಧ್ಯಕ್ಷತೆಯನ್ನು ಕಾಪು ತಾಲೂಕು ಸಹಕಾರ ಭಾರತಿ ಅಧ್ಯಕ್ಷ ರಾದ ಗಂಗಾಧರ ಸುವರ್ಣ ವಹಿಸಿದ್ದರು. ಸಹಕಾರ ಭಾರತಿ ರಾಜ್ಯ ಹಾಲು ಪ್ರಕೋಷ್ಟ ಸಂಚಾಲಕರಾದ ಸಾಣೂರು ನರಸಿಂಹ ಕಾಮತ್ ಅವರು ಸಂಘಟನಾತ್ಮಕ ಮಾತುಗಳನ್ನಾಡಿದರು. ಜಿಲ್ಲಾ ಪ್ಯಾಕ್ಸ್ ಪ್ರಕೊಷ್ಟ ಸಂಚಾಲಕರೂ ಶಿರ್ವ ಸಿ. ಎ.ಬ್ಯಾಂಕ್ ಅಧ್ಯಕ್ಷರೂ ಆದ ಕುತ್ಯಾರು ಪ್ರಸಾದ್ ಶೆಟ್ಟಿ ಹಾಗೂ ಕಾಪು ತಾಲೂಕು ಸಂಚಾಲಕರಾದ ಸುಧಾಮ ಶೆಟ್ಟಿ ಮಲ್ಲಾರು ವೇದಿಕೆಯಲ್ಲಿದ್ದರು. ಸಮಾರಂಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿನೇಶ್ ಬಲ್ಲಾಳ್ ಕುತ್ಯಾರು, ರಘುವೀರ ಶೆಣೈ ಮುಂಡ್ಕೂರು ಹಾಗೂ ತಾಲೂಕಿನ ವಿವಿಧ ಸಹಕಾರಿ ಸಂಘಗಳ ನಿರ್ದೇಶಕರು, ಅಧ್ಯಕ್ಷರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ವೀರೇಂದ್ರ ಪಾಟ್ಕರ್ ಪ್ರಾರ್ಥಿಸಿದರು. ಗಂಗಾಧರ ಸುವರ್ಣ ಸ್ವಾಗತಿಸಿದರು. ರವೀಂದ್ರ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಮುರಳೀಧರ ಪೈ ಕಟಪಾಡಿ ವಂದಿಸಿದರು.
ಕೆ.ಪಿ.ಸಿ.ಸಿ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರ ಆಯ್ಕೆ
Posted On: 18 Jan 2023, 06:34 PM
ಕಾಪು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಕಾರ್ಯದರ್ಶಿಯಾಗಿ ಫಾರೂಕ್ ಚಂದ್ರನಗರರನ್ನು ಕರ್ನಾಟಕ ಸರಕಾರದ ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರ ಶಿಫಾರಸಿನ ಮೇರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷರು ಹಾಗೂ ಕೇಂದ್ರ ಸರಕಾರದ ಸಂಸದರಾದ ಇಮ್ರಾನ್ ಪ್ರತಾಪ್ ಗರ್ಹೀ ಅವರ ಆದೇಶದ ಮೇರೆಗೆ ಕೆ.ಪಿ.ಸಿ.ಸಿ ಅಲ್ಪ ಸಂಖ್ಯಾತ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬಾರ್ ಆಯ್ಕೆ ಮಾಡಿರುತ್ತಾರೆ. ಫಾರೂಕ್ ಚಂದ್ರನಗರ ಈ ಮೊದಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಪಕ್ಷದ ಹಲವಾರು ಹುದ್ದೆ ಯಶಸ್ವಿಯಾಗಿ ನಿರ್ವಹಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತು : ಉಡುಪಿ ಜಿಲ್ಲಾ ಸಮಿತಿ, ತಾಲೂಕು ಅಧ್ಯಕ್ಷರ ನಿಯೋಗ - ಸಚಿವ ಸುನಿಲ್ ಕುಮಾರ್ ಭೇಟಿ
Posted On: 18 Jan 2023, 06:18 PM
ಉಡುಪಿ : ಜಿಲ್ಲಾ ಕನ್ನಡ ಭವನ ನಿರ್ಮಾಣದ ಬಗ್ಗೆ ಸರಕಾರದ ಮೂಲಕ ಅನುದಾನ ನೀಡುವ ಬಗ್ಗೆ ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರು ಸುನಿಲ್ ಕುಮಾರ್ ರನ್ನು ಅವರ ನಿವಾಸದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ನೇತೃತ್ವದಲ್ಲಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಅಧ್ಯಕ್ಷರುಗಳ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿದರು.
ಮೂಲ್ಯರ ಯಾನೆ ಕುಲಾಲರ ಸಂಘ ಕುತ್ಯಾರು : ವಾರ್ಷಿಕೋತ್ಸವ, ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ
Posted On: 17 Jan 2023, 01:53 PM
ಕಾಪು : ತಾಲೂಕಿನ ಕುತ್ಯಾರುವಿನ ಮೂಲ್ಯರ ಯಾನೆ ಕುಲಾಲ ಸಂಘ (ರಿ) ಕುತ್ಯಾರು ಇವರ ಆಶ್ರಯದಲ್ಲಿ ಸಂಘದ ವಾರ್ಷಿಕೋತ್ಸವ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಸಂಘದ ಅಧ್ಯಕ್ಷರಾದ ಸತೀಶ್ ಕುತ್ಯಾರು ಅಧ್ಯಕ್ಷತೆಯಲ್ಲಿ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಜನವರಿ 15 ರಂದು ನಡೆಯಿತು. ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪೆರ್ಡೂರಿನ ಐತು ಕುಲಾಲ್ ಹಾಗೂ ಕುತ್ಯಾರು ಅಂಚೆ ಕಚೇರಿಯಲ್ಲಿ ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ ಇನ್ನದ ಸತೀಶ್ ಕುಲಾಲ್ ಅವರನ್ನು ಸನ್ಮಾನಿಸಲಾಯಿತು. ವೇದಿಕೆಯಲ್ಲಿ ಮಂಗಳೂರಿನ ವೈದ್ಯರಾದ ಶ್ರೀನಿವಾಸ್ ಮಂಗಳೂರು, ಆಗಮ ಪಂಡಿತ ವೇ| ಮೂ| ಕುತ್ಯಾರು ಕೇಂಜ ಶ್ರೀಧರ ತಂತ್ರಿ, ಉದ್ಯಮಿ ಸಮಾಜ ಸೇವಕರು ಗುರ್ಮೆ ಸುರೇಶ್ ಶೆಟ್ಟಿ, ಕುತ್ಯಾರು ಅರಮನೆಯ ಜಿನೇಶ್ ಬಲ್ಲಾಳ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇದರ ನಿಕಟ ಪೂರ್ವ ಅಧ್ಯಕ್ಷ ಮಟ್ಟಾರು ರತ್ನಾಕರ ಶೆಟ್ಟಿ, ಸಂಘದ ಪ್ರಧಾನ ಕಾರ್ಯದರ್ಶಿ ಮನೋಜ್ ಕುಲಾಲ್ ಉಪಸ್ಥಿತರಿದ್ದರು. ರಾಜಲಕ್ಷ್ಮಿ ಸತೀಶ್ ಎಲ್ಲರನ್ನು ಸ್ವಾಗತಿಸಿದರು. ಧೀರಜ್ ಕುಲಾಲ್ ಕುತ್ಯಾರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಶಬ್ಬೀರ್ ಎಸ್ ಅಭಿಮಾನಿ ಬಳಗದಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರರಿಗೆ ಅಭಿನಂದನೆ
Posted On: 17 Jan 2023, 12:41 PM
ಕಾಪು : ಶಬ್ಬೀರ್ ಎಸ್ ಅಭಿಮಾನಿ ಬಳಗ ಮಂಗಳೂರು ವತಿಯಿಂದ ಸಮಾಜ ಸೇವಕ ಫಾರೂಕ್ ಚಂದ್ರನಗರ ರವರನ್ನು ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಡಿ.ಕೆ.ಡಿ.ಸಿ.ಸಿ ಪ್ರದಾನ ಕಾರ್ಯದರ್ಶಿ ಶಬ್ಬೀರ್ ಸಿದ್ದಕಟ್ಟೆ ಮಾತನಾಡಿ ಫಾರೂಕ್ ಚಂದ್ರನಗರ ಉಡುಪಿ ಜಿಲ್ಲೆಯ ಹತ್ತಾರು ಗ್ರಾಮದಲ್ಲಿ ಉತ್ತಮ ಸಮಾಜ ಸೇವೆ ಸಲ್ಲಿಸಿದ್ದಾರೆ ಅದಕ್ಕಾಗಿ ಅವರಿಗೆ ಕರ್ನಾಟಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ. ಆ ನಂತರ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವಾರು ಪ್ರಶಸ್ತಿ ಕೂಡ ಅವರ ಪಾಲಿಗೆ ಬಂದಿರುತ್ತದೆ. ಇನ್ನು ಮುಂದೆಯೂ ದೇವರು ಅವರಿಗೆ ಇನ್ನಷ್ಟು ಶಕ್ತಿ ಕೊಟ್ಟು ಬಡವರ ಸೇವೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೂಡುಬಿದ್ರೆ ಅಳ್ವಾಸ್ ಪಿ.ಯು ಕಾಲೇಜು ಪ್ರಾಂಶುಪಾಲರಾದ ಮೊಹಮ್ಮದ್ ಸದಕತ್, ಮಾಜಿ ವಿಲೇಜ್ ಅಕೌಂಟೆಂಟ್ ಸುಲೈಮಾನ್ ಬಜಗೋಳಿ, ಉದ್ಯಮಿ ಶಬ್ಬೀರ್ ಅಲ್ತಾಫ್, ಮಾಜಿ ವಿ.ಎಸ್.ಎಸ್.ಎನ್ ಬ್ಯಾಂಕ್ ಮೆನೇಜರ್ ಮೊಹಮ್ಮದ್ ವೇಣೂರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಅಡ್ವೆ-ನಂದಿಕೂರು ಕಂಬಳ - ಕಂಬಳ ನೋಡಬೇಕೆನ್ನುವ ಹಂಬಲವಿತ್ತು, ನೋಡಿ ಧನ್ಯನಾದೆ : ಪ್ರಮೋದ್ ಮುತಾಲಿಕ್
Posted On: 15 Jan 2023, 11:44 PM
ಪಡುಬಿದ್ರಿ : ಕಂಬಳದ ಬಗ್ಗೆ ಆಸಕ್ತಿ ಇತ್ತು. ನೋಡಬೇಕೆನ್ನುವ ಹಂಬಲವೂ ಇತ್ತು. ಅದು ಇಂದು ಅಡ್ವೆ- ನಂದಿಕೂರು ಕಂಬಳದಲ್ಲಿ ಈಡೇರಿದೆ. ಮೊದಲನೆಯ ಬಾರಿ ಕಂಬಳ ನೋಡಿ ಧನ್ಯನಾದೆ. ಜಾತಿ,ಮತ, ಶ್ರೀಮಂತ, ಬಡವನೆಂಬ ಬೇಧವಿಲ್ಲದೆ, ಎಲ್ಲರ ಕ್ರೀಡೆ ಎನ್ನಬಹುದು. ರೈತವರ್ಗಕ್ಕೆ ಪ್ರೋತ್ಸಾಹ, ಆನಂದ ಕೊಡುವ ಕ್ರೀಡೆ. ಗ್ರಾಮೀಣ ಭಾಗದ ಕಂಬಳವು ದೇಶದಲ್ಲಿ ಆಕರ್ಷಕವಾದಂತಹ ಕ್ರೀಡೆ. ತುಳು ಭಾಷೆ ಗ್ರಾಮೀಣ ಭಾಷೆ, ಶ್ರೇಷ್ಠ ಭಾಷೆ, ಪುರಾತನ ಭಾಷೆ ಸರಕಾರ ಮಾನ್ಯತೆ ನೀಡಬೇಕೆಂದು ಸರಕಾರಕ್ಕೆ ಆಗ್ರಹಿಸುತ್ತೇನೆ. ಈ ಭಾಗದಲ್ಲಿ ಧಾರ್ಮಿಕತೆಗೆ ಒತ್ತು ನೀಡುತ್ತಾ ಭಜನಾ ಸಂಸ್ಕೃತಿಗೂ ಕೂಡ ಮಹತ್ವ ನೀಡಲಾಗುತ್ತಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್ ಹೇಳಿದರು. ಅವರು ಆದಿತ್ಯವಾರ ಪಡುಬಿದ್ರಿ ಸಮೀಪದ ಅಡ್ವೆ-ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ 30ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಕಂಬಳೋತ್ಸವದ ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಿರಂತರ 30 ವರ್ಷಗಳಿಂದ ಕಂಬಳ ಆಯೋಜಿಸಿದ ಸಂಘಟಕರಿಗೆ ಮತ್ತು ಭಾಗವಹಿಸಿದ ಎಲ್ಲರಿಗೂ ಶುಭವಾಗಲಿ ಎಂದು ಹೇಳಿದರು. ಈ ಸಂದರ್ಭ ಗಣ್ಯರು, ಕಂಬಳಾಭಿಮಾನಿಗಳು ಉಪಸ್ಥಿತರಿದ್ದರು.
