Updated News From Kaup
ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆಯ ಉದ್ಘಾಟನೆ
Posted On: 06-11-2022 07:26PM
ಉಡುಪಿ : ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಹೆಬ್ರಿ ಇದರ ನೇತೃತ್ವದಲ್ಲಿ ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ವಾಯ್ಸ್ ಆಫ್ ಚಾಣಕ್ಯ 2022 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ ಉಡುಪಿ ಸೃಷ್ಟಿ ಸಂಗೀತ ತರಬೇತಿ ಕೇಂದ್ರದಲ್ಲಿ ರವಿವಾರ ಉದ್ಘಾಟಿಸಿದರು.
ಮಟ್ಟಾರುವಿನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ
Posted On: 06-11-2022 06:44PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ನವೆಂಬರ್ 27 ರಂದು ಮಟ್ಟಾರ್ ನಲ್ಲಿ ಜರಗಲಿರುವ ಹಿಂದೂ ಸಮಾಜೋತ್ಸವದ ಪ್ರಚಾರ ಸ್ಟಿಕರ್ ಬಿಡುಗಡೆ ಇಂದು ನಡೆಯಿತು.
ಕಾಪು : ವಿಶ್ವ ಹಿಂದೂ ಪರಿಷದ್ - ಮಟ್ಟಾರುವಿನಲ್ಲಿ ಹಿತ ಚಿಂತಕ ಅಭಿಯಾನಕ್ಕೆ ಚಾಲನೆ
Posted On: 06-11-2022 06:38PM
ಕಾಪು : ವಿಶ್ವ ಹಿಂದೂ ಪರಿಷದ್ ನ ಹಿತ ಚಿಂತಕ ಅಭಿಯಾನಕ್ಕೆ ಕಾಪು ತಾಲೂಕಿನ ಮಟ್ಟಾರುವಿನಲ್ಲಿ ಚಾಲನೆ ನೀಡಲಾಯಿತು.
ಇನ್ನಂಜೆ : ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ
Posted On: 06-11-2022 06:31PM
ಇನ್ನಂಜೆ : ಇಲ್ಲಿನ ಇನ್ನಂಜೆ ಯುವಕ ಮಂಡಲ (ರಿ) ಇದರ ಸುವರ್ಣಮಹೋತ್ಸವ ಕಟ್ಟಡದ ವಿಜ್ಞಾಪನಾ ಪತ್ರವನ್ನು ಸೋದೆ ವಾದಿರಾಜ ಮಠದ ಯತಿಗಳಾದ ವಿಶ್ವವಲ್ಲಭ ತೀರ್ಥರು ಹಾಗೂ ಇನ್ನಂಜೆಯ ಉದ್ಯಮಿ ಗ್ರೇಗೊರಿ ಮಥಾಯಸ್ ಬಿಡುಗಡೆಗೊಳಿಸಿದರು.
ಕಾಪು : ಡಿಸೆಂಬರ್ 10 ರಂದು ಪಡುಬೆಳ್ಳೆಯಲ್ಲಿ ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆ
Posted On: 05-11-2022 10:10AM
ಕಾಪು : ಝಿಝೋ ಎಜುಕೇಶನ್ ಅರ್ಪಿಸುವ ಲೆಟ್ಸ್ ನಾಚೊ ಜಿಲ್ಲಾ ಮಟ್ಟದ ಸೊಲೊ ಮತ್ತು ಗುಂಪು ನೃತ್ಯ ಸ್ಪರ್ಧೆ 2022 ಡಿಸೆಂಬರ್ 10, ಶನಿವಾರ ಸಂಜೆ 6 ಗಂಟೆಗೆ ಪಡುಬೆಳ್ಳೆ ಶ್ರೀ ನಾರಾಯಣ ಗುರು ಆಂಗ್ಲ ಮಾಧ್ಯಮ ಶಾಲೆಯ ಮೈದಾನದಲ್ಲಿ ಜರಗಲಿದೆ.
ನವೆಂಬರ್ 6 : ಕಟಪಾಡಿಯ ಸುಭಾಸ್ ನಗರದಲ್ಲಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ
Posted On: 04-11-2022 03:40PM
ಕಾಪು : ಕೆನ್-ಈ-ಮಾಬುನಿ ಶಿಟೋ-ರಿಯೋ ಕರಾಟೆ ಸ್ಕೂಲ್ ಆಫ್ ಇಂಡಿಯಾ ಉಡುಪಿ ಸಂಸ್ಥೆಯ ವತಿಯಿಂದ ಕಟಪಾಡಿ ಸುಭಾಸ್ ನಗರದ ಥಂಡರ್ಸ್ ಗ್ರಾಂಡ್ ಬೇ ಸಭಾಂಗಣದಲ್ಲಿ ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಲಿ ಎಂಬ ಉದ್ದೇಶದಿಂದ ರಾಷ್ಟ್ರಮಟ್ಟದ ಕರಾಟೆ ಪಂದ್ಯಾಕೂಟ "ಕೊಂಪಿಟ್ -3.0" ಆಯೋಜಿಸಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಯತೀಶ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ನವೆಂಬರ್ 6 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರರಿಗೆ ಹುಟ್ಟೂರ ಸನ್ಮಾನ
Posted On: 04-11-2022 02:29PM
ಕಾಪು : ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಕಾಪು ತಾಲೂಕಿನ ಮೂಳೂರಿನ ಪಿಲಿ ಕೋಲ ನರ್ತಕರಾದ ಗುಡ್ಡ ಪಾಣಾರ ಅವರಿಗೆ ನವೆಂಬರ್ 6, ಆದಿತ್ಯವಾರದಂದು ಸಂಜೆ ಗಂಟೆ 3:30ಕ್ಕೆ ಮೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ ಇಲ್ಲಿ ಹುಟ್ಟೂರ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜಮಾಡಿ ಟೋಲ್ ಸಿಬ್ಬಂದಿಗೆ ಹಲ್ಲೆ, ಬೆದರಿಕೆ
Posted On: 04-11-2022 01:56PM
ಪಡುಬಿದ್ರಿ : ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿಯೋರ್ವರಿಗೆ ಯುವಕರ ಗುಂಪೊಂದು ಎರಡು ಕಾರುಗಳಲ್ಲಿ ಬಂದು ಹಲ್ಲೆ ನಡೆಸಿದ ಬಗ್ಗೆ ದೂರು ದಾಖಲಾಗಿದೆ.
ಎಸ್ಡಿಪಿಐ ಕಾಪು ಕ್ಷೇತ್ರದ ನೂತನ ಕಛೇರಿ ಉದ್ಘಾಟನೆ
Posted On: 04-11-2022 11:40AM
ಕಾಪು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಕಾಪು ಕ್ಷೇತ್ರದ ನೂತನ ಕಛೇರಿ ಕಾಪುವಿನ ಹಿರಾ ಕಾಂಪ್ಲೆಕ್ಸ್ ನಲ್ಲಿ ಉದ್ಘಾಟನೆಗೊಂಡಿತು.
ಹಿರಿಯರೆಡೆಗೆ ನಮ್ಮ ನಡಿಗೆ - ಪಡುಬಿದ್ರಿಯ ಪ್ರಗತಿಪರ ಕೃಷಿಕ ಪಿ.ಕೆ.ಸದಾನಂದರಿಗೆ ಸನ್ಮಾನ
Posted On: 03-11-2022 08:56PM
ಪಡುಬಿದ್ರಿ : ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ಜಿಲ್ಲಾ ಘಟಕ, ಗೀತಾನಂದ ಫೌಂಡೇಶನ್ ಮಣೂರು ಇವರ ಸಂಯುಕ್ತ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಹಕಾರದೊಂದಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ 9ನೇ ವರ್ಷದ ಸಂಪದ 2022 ತಿಂಗಳ ಸಡಗರ ಕಾರ್ಯಕ್ರಮದ ಅಂಗವಾಗಿ ಕಾಪು ತಾಲೂಕು ಘಟಕದ ವತಿಯಿಂದ ನವಂಬರ್ 3ರಂದು ಹಿರಿಯರೆಡೆಗೆ ನಮ್ಮ ನಡಿಗೆ ಕಾರ್ಯಕ್ರಮದ ಅಂಗವಾಗಿ ಪಡುಬಿದ್ರಿಯ ಪ್ರಗತಿಪರ ಕೃಷಿಕ ಪಿ.ಕೆ.ಸದಾನಂದ ಅವರನ್ನು ಸನ್ಮಾನಿಸಲಾಯಿತು.
