Updated News From Kaup

ಪಡುಬಿದ್ರಿ : ಕಾಪು ಶಾಸಕರಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ನಾಲ್ಕು ಕೊಠಡಿಗಳ ಶಿಲಾನ್ಯಾಸ

Thumbnail
Posted On: 09 Dec 2022, 10:49 PM

ಪಡುಬಿದ್ರಿ : ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ವಿವೇಕ ಶಾಲಾ ಕೊಠಡಿಗಳ ಶಿಲಾನ್ಯಾಸ ಮತ್ತು ನೂತನ ಶೌಚಾಲಯ ಉದ್ಘಾಟನೆಯನ್ನು ಶುಕ್ರವಾರ ಕಾಪು ಶಾಸಕರಾದ ಲಾಲಾಜಿ ಮೆಂಡನ್ ನೆರವೇರಿಸಿದರು. ಶಾಸಕರ ಶಿಫಾರಸ್ಸಿನ ಮೇರೆಗೆ ವಿವೇಕ ಶಾಲಾ ಕೊಠಡಿಗಳನ್ನು 55.6 ಲಕ್ಷ ವೆಚ್ಚದಲ್ಲಿ (ನಾಲ್ಕು ಕೊಠಡಿಗಳು) ನಿರ್ಮಾಣವಾಗಲಿದೆ. ಈ ಸಂದರ್ಭ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರವಿ ಶೆಟ್ಟಿ, ಉಪಾಧ್ಯಕ್ಷರಾದ ಯಶೋಧ, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಕೃಷ್ಣ ಬಂಗೇರ, ಶಿಕ್ಷಣ ಇಲಾಖೆ ಸಂಯೋಜಕ ಶಂಕರ್ ಸುವರ್ಣ, ಪ್ರಾಥಮಿಕ ಮುಖ್ಯ ಶಿಕ್ಷಕ ಕೃಷ್ಣಾನಂದ, ಪ್ರೌಢಶಾಲಾ ಮುಖ್ಯ ಶಿಕ್ಷಕ ಪ್ರಸನ್ನ, ಕಾಲೇಜು ಪ್ರಾಂಶುಪಾಲೆ ಅನುರಾಧ, ಗ್ರಾಮ ಪಂಚಾಯಿತಿ ಸದಸ್ಯರಾದ ರವಿ ಶೆಟ್ಟಿ ಹೇಮಚಂದ್ರ, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ವಿನಯ, ರವೀಂದ್ರ, ಭಾರತಿ, ಲೋಕೇಶ್ ಕಂಚಿನಡ್ಕ, ಗುತ್ತಿಗೆದಾರರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು, ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾಪು : ಕೊಪ್ಪಲಂಗಡಿಯಲ್ಲಿ ಪಾದಚಾರಿ ಮಹಿಳೆಗೆ ಶಾಲಾ ವಾಹನ ಡಿಕ್ಕಿ ; ಸ್ಥಳದಲ್ಲೇ ಸಾವು

Thumbnail
Posted On: 09 Dec 2022, 08:44 PM

ಕಾಪು : ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಾಪು ಕೊಪ್ಪಲಂಗಡಿ ಬಳಿ ಶುಕ್ರವಾರ ಸಂಜೆ ಸಂಭವಿಸಿದೆ. ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿಯವರ ಪತ್ನಿ ಸಪ್ನ (54) ಎಂದು ಗುರುತಿಸಲಾಗಿದೆ. ಅವರು ಕೊಪ್ಪಲಂಗಡಿಯಲ್ಲಿ ದಿನಸಿ ಅಂಗಡಿಗೆ ಹೋಗಿ ಹಿಂತಿರುಗಿ ಮನೆ ಕಡೆಗೆ ಹೋಗಲು ಕಮ್ಯುನಿಟಿ ಹಾಲ್ ಸಮೀಪ ರಸ್ತೆ ದಾಟಲು ನಿಂತಿದ್ದ ವೇಳೆ ಮಂಗಳೂರು ಕಡೆಯಿಂದ ಉಡುಪಿಯತ್ತ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿಯಾಗಿದೆ. ಘಟನೆಯಿಂದ ತಲೆಗೆ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳೂರು : ಜಾಗತಿಕ ಛಾಯಾಗ್ರಹಣ ಸ್ಪರ್ಧೆಯಲ್ಲಿ ಪ್ರಶಸ್ತಿ ಗೆದ್ದ ದಯಾನಂದ ಕುಕ್ಕಾಜೆ

Thumbnail
Posted On: 08 Dec 2022, 10:52 PM

ಮಂಗಳೂರು : ಗ್ಲೋಬಲ್ ಟ್ಯಾಲೆಂಟ್ ಸರ್ಚ್ ಫರ್ಮ್ ಇನ್ನೋವೈಜ್ ಆರ್ಟ್ಸ್ ಅಂಡ್ ಕಲ್ಚರ್ ಆಯೋಜಿಸಿದ್ದ 2022 ರ ಜಾಗತಿಕ ಛಾಯಾಗ್ರಹಣ ಸ್ಪರ್ಧೆಯ ಸೀಸನ್ 3ರಲ್ಲಿ, ಖ್ಯಾತ ಪೋಟೋ ಜರ್ನಲಿಸ್ಟ್ ದಯಾನಂದ ಕುಕ್ಕಾಜೆ ಅವರು ’ಅತ್ಯುತ್ತಮ ಛಾಯಾಗ್ರಾಹಕ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ದಯಾನಂದ ಕುಕ್ಕಾಜೆ ಅವರಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಗಿದ್ದು. ಈ ಹಿಂದೆ ಇವರು ಅತ್ಯುತ್ತಮ ಆಕ್ಷನ್ ಛಾಯಾಗ್ರಹಣ ಪ್ರಶಸ್ತಿ ಮತ್ತು ಅತ್ಯುತ್ತಮ ಕ್ಯಾಂಡಿಡ್ ಛಾಯಾಗ್ರಹಣ ಪ್ರಶಸ್ತಿ ಪಡೆದಿದ್ದರು. ಗ್ಲೋಬಲ್ ಫೋಟೋಗ್ರಫಿ ಕಾಂಟೆಸ್ಟ್ 2022 ರ ಸೀಸನ್ -3 ಅನ್ನು ಭಾರತದ ಛಾಯಾಗ್ರಾಹಕರು ಮತ್ತು ಹಲವಾರು  ದೇಶಗಳ ಎನ್‌ಆರ್‌ಐಗಳ ನಡುವೆ ನಡೆಸಲಾಗಿತ್ತು. ಕುಕ್ಕಾಜೆ ಅವರು 12ಕ್ಕೂ ಹೆಚ್ಚು ಛಾಯಾಚಿತ್ರ ಪ್ರದರ್ಶನಗಳನ್ನು ಆಯೋಜಿಸಿದ್ದು ತಮ್ಮ ಛಾಯಾಗ್ರಹಣ ಕೌಶಲ್ಯವನ್ನು ಪ್ರದರ್ಶಿಸಲು ಆರಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದಾರೆ.

ಮಸ್ಕತ್ ನ ಪ್ರತಿಷ್ಠಿತ ಮಲ್ಟಿ ಟೇಕ್ ಮಾಲಕರಿಂದ ಕಾಪು ಹೊಸ ಮಾರಿಗುಡಿ ದೇವಳಕ್ಕೆ 500 ಶಿಲಾಸೇವೆ ಸಮರ್ಪಣೆ

Thumbnail
Posted On: 08 Dec 2022, 09:20 PM

ಕಾಪು : ಮಸ್ಕತ್ ಮಲ್ಟಿ ಟೆಕ್ ಮಾಲಕರಾದ ದಿವಾಕರ್ ಶೆಟ್ಟಿ "ನರ್ಸಿ ಸದನ" ಮಲ್ಲಾರ್ ಇವರು ದಂಪತಿ ಸಮೇತರಾಗಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ 500 ಶಿಲಾಸೇವೆ ನೀಡಿ, ಶಿಲಾ ಪುಷ್ಪ ಸಮರ್ಪಣೆ ಮಾಡಿ ಮಾರಿಯಮ್ಮನ ಸಂಪೂರ್ಣ ಅನುಗ್ರಹಕ್ಕೆ ಪಾತ್ರರಾದರು. ದೇವಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಕೆ. ವಾಸುದೇವ ಶೆಟ್ಟಿಯವರು ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ, ಜೀರ್ಣೋದ್ಧಾರದ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ರಮೇಶ್ ಹೆಗ್ಡೆ ಕಲ್ಯಾ, ಸುಧಾಕರ್ ಶೆಟ್ಟಿ ಮಕರ ಕನ್ಸ್ಟ್ರಕ್ಷನ್, ಆರ್ಥಿಕ ಸಮಿತಿಯ ಕಾತ್ಯಾಯಿನಿ ತಂಡದ ಸಂಚಾಲಕರಾದ ಜಯಲಕ್ಷ್ಮಿ ಶೆಟ್ಟಿ, ದೇವಳದ ಸಿಬ್ಬಂದಿಗಳಾದ ಗೋವರ್ಧನ್ ಸೇರಿಗಾರ್, ಲಕ್ಷ್ಮಣ್ ಶೆಟ್ಟಿ ಮಂಡೇಡಿ ಮತ್ತು ಸಂತೋಷ್ ಶೆಟ್ಟಿ ಕಳತ್ತೂರು ಉಪಸ್ಥಿತರಿದ್ದರು.

ರೋಟರಿ ಶಂಕರಪುರದ ವತಿಯಿಂದ ಕ್ರಿಸ್ಮಸ್ ಆಚರಣೆ ; ಕುಟುಂಬ ಸಹ ಮಿಲನ ಕಾರ್ಯಕ್ರಮ

Thumbnail
Posted On: 07 Dec 2022, 09:25 PM

ಶಂಕರಪುರ : ರೋಟರಿ ಶಂಕರಪುರದ ವತಿಯಿಂದ ಕ್ರಿಸ್ಮಸ್ ಆಚರಣೆ ಹಾಗೂ ಕುಟುಂಬ ಸಹ ಮಿಲನ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಸಿಎಸ್ಐ ಇಮ್ಯಾನುವೆಲ್ ದೇವಾಲಯ ಪಾದೂರು ಇಲ್ಲಿನ ಧರ್ಮ ಗುರುಗಳಾದ ರೆ| ರೇಶ್ಮ ರವಿಕಲಾ ಅಮ್ಮನ್ನ ಮಾತನಾಡಿ ನಾವು ಇತರರ ಬಾಳಿಗೆ ಬೆಳಕಾಗಿ ಈ ಸಮಾಜದ ಒಳಿತಿಗಾಗಿ ಶ್ರಮಿಸುವಂತಾಗಬೇಕು ಮಾನವೀಯ ನೆಲೆಯಲ್ಲಿ ಜೀವಿಸಿ ನಾವು ಸಮಾಜಕ್ಕೆ ಶ್ರೇಷ್ಠ ಉಡುಗೊರೆಯಾಗಬೇಕು ಎಂಬ ಸಂದೇಶವನ್ನು ನೀಡಿ ನೂತನ ವರ್ಷಕ್ಕೆ ಶುಭ ಕೋರಿದರು. ಕ್ಲಬ್ ಸರ್ವಿಸ್ ಡೈರೆಕ್ಟರ್ ಫ್ರಾನ್ಸಿಸ್ ಡೇಸಾ, ಸಂತ ಕ್ಲಾಸ್ ವೇಷಧಾರಿಯಾಗಿ ಚಂದ್ರ ಪೂಜಾರಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಗೀತ ಮಂಡಳಿ ಸದಸ್ಯರಾದ ರೂಬೆನ್ ಕೊಲಿನೋ ಅಮ್ಮನ್ನ,ಶರ್ಲಿ ಗ್ಲೆನೀಟ, ಸ್ಟಾನ್ಸನ್ ಗ್ಲೇನಿಶ್, ಕ್ರಿಸ್ಮಸ್ ಹಾಡುಗಳನ್ನು ಹಾಡುವುದರ ಮೂಲಕ ಮನರಂಜನೆಯನ್ನು ನೀಡಿದರು. ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಗಳನ್ನು ಮಾಡಿ ಬಹುಮಾನ ನೀಡಲಾಯಿತು. ಏಡ್ವಿನ್ ನೋಯೆಲ್ ಡಿಸಿಲ್ವ ಪ್ರಾರ್ಥಿಸಿದರು. ಅಧ್ಯಕ್ಷರಾದ ಗ್ಲಾಡ್ಸನ್ ಕುಂದರ್ ಸ್ವಾಗತಿಸಿದರು. ಮಾಲಿನಿ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಫ್ಲೇವಿಯಾ ಮೆನೆಜಸ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಸಿಲ್ವಿಯ ಕಸ್ಟಲೀನೋ ವಂದಿಸಿದರು.

ಜೆಸಿಐ ಶಂಕರಪುರ ಜಾಸ್ಮಿನ್ - ಕ್ರಿಸ್ಮಸ್ ಸಂಭ್ರಮಾಚರಣೆ

Thumbnail
Posted On: 06 Dec 2022, 09:35 PM

ಶಂಕರಪುರ : ಜೆಸಿಐ ಶಂಕರಪುರ ಜಾಸ್ಮಿನ್ ಇದರ ವತಿಯಿಂದ ಕ್ರಿಸ್ಮಸ್ ಸಂಭ್ರಮಾಚರಣೆಯನ್ನು ಜೆಸಿ ಭವನ ಶಂಕರಪುರದಲ್ಲಿ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ವಲಯ 15 ರ ವಲಯಧ್ಯಕ್ಷರಾದ ರಾಯನ್ ಉದಯ್ ಕ್ರಾಸ್ತ ಉದ್ಘಾಟಿಸಿದರು. ಸಭೆಯ ಅಧ್ಯಕ್ಷತೆಯನ್ನು ಅಧ್ಯಕ್ಷರಾದ ಮಾಲಿನಿ ಇನ್ನಂಜೆ ವಹಿಸಿದ್ದರು. ರಾಯನ್ ಮಥಾಯಸ್, ನಿಕಟಪೂರ್ವ ಅಧ್ಯಕ್ಷ ಜಗದೀಶ್ ಅಮೀನ್, ಕಾರ್ಯಕ್ರಮ ಸಂಯೋಜಕರಾದ ಪ್ರಸಿಲ್ಲ ಕ್ವಾಡ್ರಸ್, ಜೇಸಿರೆಟ್ ಅಧ್ಯಕ್ಷೆ ಜಯಶ್ರೀ ನವೀನ್ ಅಮೀನ್, ಪೂರ್ವ ವಲಯ ಉಪಾಧ್ಯಕ್ಷ ಸಂತೋಷ್ ಕುಮಾರ್, ಜೆಸಿ ಶಂಕರಪುರದ ಪೂರ್ವ ಅಧ್ಯಕ್ಷರುಗಳಾದ ನವೀನ್ ಅಮೀನ್, ಅಲ್ವಿನ್ ಮೆನೇಜಸ್, ಅನಿತಾ ಮಾಥಾಯಸ್, ಸೀಮಾ ಮಾರ್ಗರೆಟ್ ಡಿಸೋಜ, ಸಂತ ಕ್ಲಾಸ್ ಆಗಿ ಸಿಲ್ವಿಯಾ ಕಾಸ್ಟಲಿನೋ, ಹರೀಶ್ ಕುಲಾಲ್ ಉಪಸ್ಥಿತರಿದ್ದರು.

ಶ್ರೀ ದೂಮಾವತಿ ಯುವ ಸಮಿತಿ ಕಾಪು : ಅಧ್ಯಕ್ಷರಾಗಿ ಐತಪ್ಪ ಎಸ್ ಕೋಟಿಯನ್ ಆಯ್ಕೆ

Thumbnail
Posted On: 06 Dec 2022, 09:28 PM

ಕಾಪು : ಶ್ರೀ ದೂಮಾವತಿ ಯುವ ಸಮಿತಿ ಕಾಪು ಇದರ ಮಹಾಸಭೆಯು ಶ್ರೀ ದೂಮಾವತಿ ದೈವಸ್ಥಾನದ ವಠಾರದಲ್ಲಿ ರಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಐತಪ್ಪ ಎಸ್ ಕೋಟಿಯನ್, ಕಾರ್ಯದರ್ಶಿ ಅನಿಲ್ ಪಾಡಿಮನೆ, ಜೊತೆ ಕಾರ್ಯದರ್ಶಿ ಸಂಜೀವ ಅಂಚನ್, ಕೋಶಾಧಿಕಾರಿ ರಾಜೇಶ್ ಅಂಚನ್, ಉಪಾಧ್ಯಕ್ಷರಾಗಿ ರವಿಚಂದ್ರನ ಶೆಟ್ಟಿ, ಸಂಘಟನ ಕಾರ್ಯದರ್ಶಿ ಪ್ರಶಾಂತ್ ಮಡಿವಾಳ ಇವರನ್ನು ಆಯ್ಕೆ ಮಾಡಲಾಯಿತು.

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ ಶಿರ್ವ : ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ ಸೊರ್ಪು ಆಯ್ಕೆ

Thumbnail
Posted On: 06 Dec 2022, 09:21 PM

ಶಿರ್ವ : ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಮಿತಿ (ರಿ.) ಶಿರ್ವ ಇದರ ವಿಶೇಷ ಮಹಾ ಸಭೆ ಅಧ್ಯಕ್ಷರಾದ ದೇವಿಪ್ರಸಾದ್ ಪೂಜಾರಿ ಮಾಣಿಬೆಟ್ಟು ಅಧ್ಯಕ್ಷತೆಯಲ್ಲಿ ಇಂದು ಜರಗಿತು. ಸಭೆಯಲ್ಲಿ 2023 ರಿಂದ 2025 ಮೂರು ವರ್ಷದ ನೂತನ ಆಡಳಿತ ಮಂಡಳಿ ರಚನೆ ಸರ್ವ ಸದಸ್ಯರ ಬಹುಮತದೊಂದಿಗೆ ನಿರ್ಣಯಿಸಲಾಯಿತು. ನೂತನ ಅಧ್ಯಕ್ಷರಾಗಿ ಗೋಪಾಲ ಪೂಜಾರಿ ಸೊರ್ಪು, ಉಪಾಧ್ಯಕ್ಷರಾಗಿ ರಮೇಶ್ ಬಂಗೇರ, ಲಕ್ಷ್ಮಣ್ ಪೂಜಾರಿ ಮಾಣಿಬೆಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ವೀರೇಂದ್ರ ಪೂಜಾರಿ, ಜೊತೆ ಕಾರ್ಯದರ್ಶಿಯಾಗಿ ರಮೇಶ್ ಪೂಜಾರಿ ಶಿರ್ವ, ಕೋಶಾಧಿಕಾರಿಯಾಗಿ ಸುಕೇಶ್ ಪೂಜಾರಿ ವಳದೂರು, ಭಜನಾ ಸಂಚಾಲಕರಾಗಿ ಭಾಸ್ಕರ್ ಪೂಜಾರಿ ಸೋರ್ಕಳ ಆಯ್ಕೆಯಾದರು.

ಕಾರ್ಕಳ : ನೆತ್ತೆರ್ ಉಂಬೊಲಿ - ರಕ್ತದಾನ ಶಿಬಿರ

Thumbnail
Posted On: 06 Dec 2022, 05:48 PM

ಕಾರ್ಕಳ : ಜೈ ತುಳುನಾಡ್(ರಿ.) ಮುಂದಾಳತ್ವದಲ್ಲಿ ರಕ್ತನಿಧಿ, ಜಿಲ್ಲಾಸ್ಪತ್ರೆ, ಉಡುಪಿ ಮತ್ತು ಹಲವು ಸ್ಥಳೀಯ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಕಾರ್ಕಳದ ರೋಟರಿ ಬಾಲಭವನದಲ್ಲಿ 'ನೆತ್ತೆರ್ ಉಂಬೊಲಿ' ರಕ್ತದಾನ ಶಿಬಿರ ಡಿಸೆಂಬರ್ 4 ರಂದು ನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ ಯೋಗದೀಪಿಕ ವಿದ್ಯಾಪೀಠ, ಪಲಿಮಾರು ಇಲ್ಲಿನ ಪ್ರಾಂಶುಪಾಲರೂ, ಕಾರ್ಕಳದ ಶ್ರೀ ಅನಂತಪದ್ಮನಾಭ ದೇವಸ್ಥಾನದ ಪ್ರಧಾನ ಅರ್ಚಕರಾದ ಡಾ. ಕಾ. ವೇ. ಶಂಕರನಾರಾಯಣ ಭಟ್ ಮಾತನಾಡಿ ಭಾಷೆ ಮತ್ತು ಲಿಪಿ ಎರಡನ್ನೂ ಹೊಂದಿರುವ ಭಾಷೆಗಳಲ್ಲಿ ತುಳು ಒಂದಾಗಿದ್ದು, ಅದರ ಬಗ್ಗೆ ನಮಗೆ ಹೆಮ್ಮೆ ಇದೆ ಮತ್ತು ಎಲ್ಲಾ ತುಳುವರು ಈ ಬಗ್ಗೆ ಹೆಮ್ಮೆ ಪಡಬೇಕು. ಮುನ್ನೂರು ವರ್ಷಗಳ ಹಿಂದಕ್ಕೆ ಉಡುಪಿ, ಮಂಗಳೂರು, ಕಾಸರಗೋಡು ಮತ್ತು ಉತ್ತರ ಕನ್ನಡದ ಕೆಲ ಪ್ರದೇಶಗಳಲ್ಲಿ ಭಾಷೆ ಎಂದರೆ ತುಳು, ಲಿಪಿ ಎಂದರೆ ತುಳು ಲಿಪಿ ಎಂದಾಗಿತ್ತು. ತುಳುನಾಡಿನ ಎಲ್ಲಾ ದೇವಸ್ಥಾನಗಳಲ್ಲಿಯೂ ಪೂಜಾ ಕೈಂಕರ್ಯಗಳ ವಿದ್ಯಾಭ್ಯಾಸವನ್ನು ಪಡೆಯುವವರು ತುಳು ಲಿಪಿಯನ್ನು ಕಲಿಯಬೇಕಾಗಿತ್ತು ಮತ್ತು ಅದನ್ನು ಪ್ರತಿದಿನ ದೇವಸ್ಥಾನಗಳಲ್ಲಿ ಬಳಸಬೇಕಾಗಿತ್ತು, ಈಗಲೂ ಈ ಪದ್ಧತಿ ಬಹಳಷ್ಟು ಕಡೆ ಚಾಲ್ತಿಯಲ್ಲಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯರು ಮತ್ತು ಆಳುಪ ವಂಶಸ್ಥರಾದ ಡಾ. ಆಕಾಶ್ ರಾಜ್ ಜೈನ್ ಮಾತನಾಡಿ ಕರ್ನಾಟಕ ರಾಜ್ಯದಲ್ಲಿ ಅತಿ ಹೆಚ್ಚು ಆದಾಯವನ್ನು ತಂದುಕೊಡುವಂತಹ ಜಿಲ್ಲೆಗಳಲ್ಲಿ ತುಳುನಾಡಿನ ಜಿಲ್ಲೆಗಳು ಅಗ್ರಸ್ಥಾನದಲ್ಲಿವೆ. ನಮ್ಮಲ್ಲಿ ಭೂಮಾರ್ಗ, ಜಲಮಾರ್ಗ ವಾಯುಮಾರ್ಗದಂತಹ ಎಲ್ಲಾ ಸೌಕರ್ಯಗಳು ಇವೆ. ಬ್ರಿಟಿಷರ ಕಾಲದಲ್ಲಿ ಅತ್ಯಂತ ಉದ್ದದ ಭಾರತದ ರೈಲ್ವೆ ಮಾರ್ಗವನ್ನು ತುಳುನಾಡು ಹೊಂದಿತ್ತು. ಇಷ್ಟೆಲ್ಲ ಇದ್ದರೂ ಇಲ್ಲಿನ ನೆಲದ ಭಾಷೆಯಾದ ತುಳುವಿಗೆ ಕರ್ನಾಟಕ ರಾಜ್ಯದಲ್ಲಿ ಇನ್ನೂ ಕೂಡ ಆಡಳಿತ ಭಾಷಾ ಸ್ಥಾನಮಾನ ಸಿಗದಿರುವುದು ಬೇಸರದ ಸಂಗತಿ ಎಂದರು. ಇದೇ ಸಂದರ್ಭದಲ್ಲಿ ಅವರು ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ ನಡೆಯುವ 20 ವರ್ಷಗಳ ಹಿಂದೆಯೇ ತುಳುನಾಡಿನಲ್ಲಿ ನಡೆದಂತಹ ಅಮರ ಸುಳ್ಯ ಕ್ರಾಂತಿಯನ್ನು ಪ್ರಸ್ತಾಪಿಸಿ ತುಳುನಾಡಿನ ಸ್ವಾತಂತ್ರ್ಯ ಸಂಗ್ರಾಮದ ಬಗ್ಗೆ ಸಭೆಗೆ ನೆನಪಿಸಿದರು. ಜೈ ತುಲುನಾಡ್(ರಿ.) ಸಂಘಟನೆಯ ಅಧ್ಯಕ್ಷರಾದಂತಹ ಅಶ್ವಥ್ ತುಳುವೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು. ರಕ್ತ ನಿಧಿ ಜಿಲ್ಲಾಸ್ಪತ್ರೆ, ಉಡುಪಿ ಇದರ ವೈದ್ಯಾಧಿಕಾರಿ ಆದಂತಹ ಡಾ. ವೀಣಾ ಕುಮಾರಿ ಮುಖ್ಯ ಅತಿಥಿಗಳಾಗಿ ಜೊತೆಯಲ್ಲಿದ್ದರು. ಕಾರ್ಯಕ್ರಮದ ಸಹಭಾಗಿತ್ವವನ್ನು ವಹಿಸಿಕೊಂಡ ಸಂಘ ಸಂಸ್ಥೆಗಳಾದ ಜಿ.ಎಸ್.ಬಿ ಹಿತರಕ್ಷಣಾ ವೇದಿಕೆ ಕಾರ್ಕಳ ಇದರ ಸಂಚಾಲಕರಾದ ಆರ್ ವಿವೇಕಾನಂದ ಶೆಣೈ, ಎಚ್.ಡಿ.ಎಫ್.ಸಿ ಬ್ಯಾಂಕ್ ಲಿ. ಮಂಗಳೂರು ಇದರ ಸಹ ವ್ಯವಸ್ಥಾಪಕ ನಿತೇಶ್ ಕುಮಾರ್, ಯುವ ವಾಹಿನಿ (ರಿ.) ಕಾರ್ಕಳ ಘಟಕದ ಅಧ್ಯಕ್ಷರು ತಾರಾನಾಥ ಕೋಟ್ಯಾನ್, ಸೌಹಾರ್ದ ಫ್ರೆಂಡ್ಸ್ ಕ್ಲಬ್ ಜಾರ್ಕಳ-ಮುಂಡ್ಲಿ ಇದರ ಅಧ್ಯಕ್ಷರಾದ ಪ್ರಜ್ವಲ್ ಜೈನ್, ಅಮ್ಮಾಸ್ ಸ್ಪೋರ್ಟ್ಸ್ & ಗಿಫ್ಟ್ಸ್ ಕಾರ್ಕಳ ಇದರ ಮಾಲಕ ಸುಧೀರ್ ಪೂಜಾರಿ, ಗೆಳೆಯರ ಬಳಗ ನೆಲ್ಲಿಗುಡ್ಡೆ ಬಜಗೋಳಿ ಅಧ್ಯಕ್ಷರು ಸುರೇಶ್ ಸಾಲಿಯಾನ್, ಛತ್ರಪತಿ ಶಿವಾಜಿ ಮಹಾರಾಜ್ ಬಳಗ ಕಾಂತರಗೋಳಿ ಇದರ ಅಧ್ಯಕ್ಷರಾದ ಸತೀಶ್ ಪೂಜಾರಿ ಕಾಂತರಗೋಳಿ ವೇದಿಕೆಯಲ್ಲಿದ್ದರು. ಪ್ರಧಾನ ಕಾರ್ಯದರ್ಶಿಗಳಾದ ಅವಿನಾಶ್ ಮುಕ್ಕ, ಸಂಘಟನಾ ಕಾರ್ಯದರ್ಶಿ ಸದಾಶಿವ ಮುದ್ರಾಡಿ, ಸಹ ಸಂಘಟನಾ ಕಾರ್ಯದರ್ಶಿ ಪೃಥ್ವಿ ತುಲುವೆ, ಕೇಂದ್ರ ಸಮಿತಿಯ ಗೀತಾ ಲಕ್ಷ್ಮೀಶ್, ವಿನಯ್ ರೈ, ಸಂಘಟನೆಯ ಸದಸ್ಯರು ಮತ್ತು ರಕ್ತ ನಿಧಿ ಜಿಲ್ಲಾ ಆಸ್ಪತ್ರೆ, ಉಡುಪಿ ಇದರ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು. ವಿವಿಧ ಸಂಸ್ಥೆಗಳ 60ಕ್ಕೂ ಹೆಚ್ಚು ಸದಸ್ಯರು ರಕ್ತದಾನ ಮಾಡುವ ಮೂಲಕ ಶಿಬಿರದಲ್ಲಿ ಪಾಲ್ಗೊಂಡರು. ಆತ್ಮ ಕೆ. ತುಳುನಾಡಗೀತೆ ಹಾಡುವ ಮೂಲಕ ಪ್ರಾರ್ಥಿಸಿದರು. ಜೈ ತುಲುನಾಡ್ (ರಿ.) ಸಂಘಟನೆಯ ಜೊತೆ ಕಾರ್ಯದರ್ಶಿ ರಾಜೇಶ್ ತುಲುವೆ ಉಪ್ಪೂರು ಸ್ವಾಗತಿಸಿದರು. ಸ್ವರಾಜ್ ಶೆಟ್ಟಿ ಕಾರ್ಕಳ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷರಾದ ವಿಶು ಶ್ರೀಕೇರ ವಂದಿಸಿದರು.

ಮುಂಡ್ಕೂರಿನ ಕುಲಾಲ ಸಂಘದಲ್ಲಿ ಕುಲಾಲ ಕ್ರೀಡಾಕೂಟ ಸಮಾಪನ

Thumbnail
Posted On: 06 Dec 2022, 05:37 PM

ಮುಂಡ್ಕೂರು : ಕುಲಾಲ ಸಂಘ (ರಿ.) ನಾನಿಲ್ತಾರ್ ಮುಂಡ್ಕೂರು ಇದರ ಯುವ ವೇದಿಕೆ ಆಶ್ರಯದಲ್ಲಿ ಸಂಘದ ಸ್ಥಾಪಕ ಅಧ್ಯಕ್ಷರಾದ ದಿ. ಸುಂದರ ಮೂಲ್ಯ ಕ್ರೀಡಾಂಗಣದಲ್ಲಿ ಕುಲಾಲ ಬಾಂಧವರಿಗಾಗಿ ಕುಲಾಲ ಕ್ರೀಡಾಕೂಟ ಅಯೋಜಿಸಲಾಗಿತ್ತು. ಸಂಘದ ಅಧ್ಯಕ್ಷ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಕುತ್ಯಾರುವಿನ ಖ್ಯಾತ ನ್ಯಾಯವಾದಿ ಜಗದೀಶ್ ಮೂಲ್ಯ ಉದ್ಘಾಟಿಸಿದರು. ಸಂಘದ ಅಧ್ಯಕ್ಷ ಕುಶ ಆರ್ ಮೂಲ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಲವ ಆರ್ ಮೂಲ್ಯ ಇನ್ನ, ಸದಾನಂದ ಮೂಲ್ಯ ಕುವೈಟ್, ಸಂಘದ ಉಪಾಧ್ಯಕ್ಷರಾದ ಬೊಗ್ಗು ಮೂಲ್ಯ ಬೇಲಾಡಿ, ಜಯರಾಮ ಕುಲಾಲ್, ಸಂಘದ ಮಾಜಿ ಅಧ್ಯಕ್ಷರಾದ ಮಂಜಪ್ಪ ಮೂಲ್ಯ, ಗುತ್ತಿಗೆದಾರರಾದ ಬೊಗ್ಗು ಮೂಲ್ಯ ಬೆಳ್ಮಣ್, ಬಿ ವಾರಿಜ, ಮಹಿಳಾ ಘಟಕದ ಅಧ್ಯಕ್ಷೆ ಪ್ರತಿಮಾ, ಯುವ ವೇದಿಕೆ ಅಧ್ಯಕ್ಷರಾದ ದೀಪಕ್ ಕುಲಾಲ್ ಬೆಳ್ಮಣ್, ಕಾರ್ಯದರ್ಶಿ ಸಂತೋಷ್, ಉಪಾಧ್ಯಕ್ಷ ಗಿರೀಶ್ ಬೆಳ್ಮಣ್ ಉಪಸ್ಥಿತರಿದ್ದರು. ಕಾರ್ಯದರ್ಶಿ ದಿನೇಶ್ ಕುಲಾಲ್ ಸ್ವಾಗತಿಸಿದರು. ಆಶಾ ವರದರಾಜ್ , ಕುಮಾರಿ ಹರ್ಷಿತಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ಶ್ರೀಕಾಂತ್ ಕುಲಾಲ್ ವಂದಿಸಿದರು.