Updated News From Kaup

ಶ್ರೀ ನಾರಾಯಣ ಗುರು ಅಭಿವೃದ್ಧಿ ಕೋಶ ರಚನೆ : ರಾಜ್ಯ ಸರಕಾರಕ್ಕೆ ಗೀತಾಂಜಲಿ ಸುವರ್ಣ ಅಭಿನಂದನೆ

Posted On: 03-11-2022 06:00PM

ಉಡುಪಿ: ಹಿಂದುಳಿದ ವರ್ಗಕ್ಕೆ ಸೇರಿದ ಈಡಿಗ,ಬಿಲ್ಲವ ಸೇರಿದಂತೆ ತತ್ಸಮಾನ ಇಪ್ಪತ್ತಾರು ಜಾತಿಗಳವರಿಗೆ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸಲಿರುವ ರಾಜ್ಯದಲ್ಲೇ ವಿಶಿಷ್ಠವಾದ ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶವನ್ನು ಸ್ಥಾಪಿಸಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿಯವರನ್ನು ಹಿರಿಯ ಬಿಜೆಪಿ ನಾಯಕಿ ಮತ್ತು ಬಿಲ್ಲವ ಸಮುದಾಯದ ಮಹಿಳಾ ಮುಂದಾಳು ಗೀತಾಂಜಲಿ. ಎಂ.ಸುವರ್ಣ ಅಭಿನಂದಿಸಿದ್ದಾರೆ.

ರೋಟರಿ ಶಂಕರಪುರ : ದೀಪಾವಳಿ ಆಚರಣೆ ; ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ

Posted On: 03-11-2022 05:53PM

ಕಾಪು : ರೋಟರಿ ಶಂಕರಪುರದ ವತಿಯಿಂದ ದೀಪಾವಳಿ ಆಚರಣೆ ಹಾಗೂ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ರೋಟರಿ ಜಿಲ್ಲೆ 3182 ರ ವಲಯ 5 ರ ಸಹಾಯಕ ಗವರ್ನರ್ ಡಾ| ಶಶಿಕಾಂತ ಕರಿಂಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅತಿಥಿಗಳು ಸಾಮೂಹಿಕವಾಗಿ ದೀಪಗಳನ್ನು ಉರಿಸುವ ಮೂಲಕ ದೀಪಾವಳಿ ಶುಭಾಶಯ ವಿನಿಮಯ ಮಾಡಲಾಯಿತು.

ಹೆಜಮಾಡಿ‌ : ಅತ್ಯುತ್ತಮ ಶಿಕ್ಷಕಿಯೆಂದು ಕರೆಯಲ್ಪಡುತ್ತಿದ್ದ ಶಿಕ್ಷಕಿ ಮಾನಸಿಕ‌‌ ಖಿನ್ನತೆಯಿಂದ ಆತ್ಮಹತ್ಯೆ

Posted On: 01-11-2022 10:20PM

ಹೆಜಮಾಡಿ : ಶಾಲೆಯಲ್ಲಿ ಅತ್ಯುತ್ತಮ ಶಿಕ್ಷಕಿಯೆಂದೇ ಕರೆಯಲ್ಪಡುತ್ತಿದ್ದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತೋಕೂರು ಖಾಸಗಿ ಶಾಲೆಯ ಶಿಕ್ಷಕಿಯೊಬ್ಬರು ಹೆಜಮಾಡಿಯ ತನ್ನ ಗಂಡನ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.

ಫಲಿಮಾರು : ದೇವಳದ ಜೀರ್ಣೋದ್ಧಾರ ಸಹಾಯಾರ್ಥವಾಗಿ ನಾಟಕ ಪ್ರದರ್ಶನ

Posted On: 01-11-2022 10:05PM

ಫಲಿಮಾರು : ಶ್ರೀ ಬ್ರಹ್ಮಲಿಂಗೇಶ್ವರ ಬ್ರಹ್ಮಸ್ಥಾನ, ಕೊಡಂಚಾಲ, ಅವರಾಲು, ವಯಾ ಹೆಜಮಾಡಿ, ಫಲಿಮಾರು ಗ್ರಾಮ, ಉಡುಪಿ ಜಿಲ್ಲೆ ಇದರ ಜೀರ್ಣೋದ್ಧಾರ ಸಹಾಯಾರ್ಥವಾಗಿ ನವಂಬರ್ 5 ರ ಶನಿವಾರ ಸಂಜೆ 4.30 ಕ್ಕೆ ಸಂತಕ್ರೂಜ್ ನ ಬಿಲ್ಲವ ಭವನದಲ್ಲಿ ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ರಚಿಸಿ ನಿರ್ದೇಶಿಸಿರುವ, ಕಾಪಿಕಾಡ್, ಬೋಳಾರ್, ವಾಮಂಜೂರು ಅಭಿನಯದಲ್ಲಿ " ನಾಯಿದ ಬೀಲ..." ತುಳು ಹಾಸ್ಯಮಯ ನಾಟಕ ಪ್ರದರ್ಶನಗೊಳ್ಳಲಿದೆ.

ಕಾಪು : ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ - ಕಾಂಗ್ರೆಸ್ ಪ್ರತಿಭಟನೆ

Posted On: 31-10-2022 04:59PM

ಕಾಪು : ಪಂಚಾಯತ್ ರಾಜ್ ಮಸೂದೆಗೆ ತಿದ್ದುಪಡಿ ಮಾಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ಧಕ್ಕೆ ಉಂಟು ಮಾಡಿದೆ ಎಂದು ಆಡಳಿತಾರೂಢ ಬಿಜೆಪಿ ವಿರುದ್ಧ ಕಾಪು ಕಾಂಗ್ರೆಸ್ ವತಿಯಿಂದ ಸೋಮವಾರ ಪ್ರತಿಭಟನೆ ಮಾಡಲಾಯಿತು.

ಅದಮಾರು : ಐತಿಹಾಸಿಕ ಉಳಿಕೆಗಳ ರಕ್ಷಣೆ ಇಂದಿನ ಅಗತ್ಯ- ಪುರಾತತ್ವ ಸಂಶೋಧಕ ಸುಭಾಸ್

Posted On: 31-10-2022 10:23AM

ಅದಮಾರು : ಇತಿಹಾಸ ಸಂಶೋಧನೆ ಮತ್ತು ಗುರುತಿಸುವಿಕೆಯಿಂದ ನಮ್ಮ ಸಾಂಸ್ಕೃತಿಕ ಅರಿವು ವಿಸ್ತಾರವಾಗುತ್ತದೆ.ಆದುದರಿಂದ ಐತಿಹಾಸಿಕ ಮಹತ್ವವುಳ್ಳ‌ ಪುರಾತನ ಅವಶೇಷಗಳನ್ನು ಕಾಪಿಡಬೇಕಾದುದು ಇಂದಿನ ಅಗತ್ಯ ಎಂದು ಪುರಾತತ್ವ ಸಂಶೋಧಕ ಬಂಟಕಲ್ಲಿನ‌ ಸುಭಾಸ್ ನಾಯಕ್ ಅವರು ಹೇಳಿದ್ದಾರೆ. ಅವರು ಅದಮಾರಿನಲ್ಲಿ‌ ಆದರ್ಶ ಸಂಘಗಳ ಒಕ್ಕೂಟವು ಸ್ಥಳೀಯ ಸರ್ವೋದಯ ಸಮುದಾಯ ಭವನದಲ್ಲಿಆಯೋಜಿಸಿದ ಬೆಂಗಳೂರಿನ ಕರ್ನಾಟಕ ಇತಿಹಾಸ ಅಕಾಡೆಮಿ‌ಯ "ಐತಿಹಾಸಿಕ ಪರಂಪರೆ ಉಳಿಸಿ ಜನಜಾಗೃತಿ ಅಭಿಯಾನ" ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡುತ್ತಿದ್ದರು.

ಕಾಪು : ದೇಶದಲ್ಲಿ ಶೇ. 20 ರಷ್ಟು ರಕ್ತದ ಕೊರತೆಯಿದೆ : ಡಾ| ವೀಣಾ ಕುಮಾರಿ

Posted On: 30-10-2022 11:24PM

ಕಾಪು : ರಕ್ತದಾನ ಮಹಾದಾನವಾಗಿದ್ದು ದೇಶದಲ್ಲಿ ಶೇ.20ರಷ್ಟು ರಕ್ತದ ಕೊರತೆ ಕಾಡುತ್ತಿದೆ. ರಕ್ತದ ಅಲಭ್ಯತೆಯಿಂದಾಗಿ ಬಹಳಷ್ಟು ಮಂದಿ ಸಾವಿಗೀಡಾಗುತ್ತಿದ್ದು ನಾವೆಲ್ಲರೂ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದ ಕೊರತೆಯನ್ನು ನೀಗಿಸಲು ಮತ್ತು ಜನರ ಜೀವವನ್ನು ಉಳಿಸಲು ಕೈಜೋಡಿಸಬೇಕಿದೆ ಎಂದು ಉಉಡಪಿ ಜಿಲ್ಲಾಸ್ಪತ್ರೆಯ ರಕ್ತ ನಿಧೀಕೇಂದ್ರದ ಮುಖ್ಯಸ್ಥೆ ಡಾ| ವೀಣಾ ಕುಮಾರಿ ಹೇಳಿದರು. ಕಾಪು ಧರಣಿ ಸಮಾಜ ಸೇವಾ ಸಂಘ, ಕಾಪು ಜೇಸಿಐ, ಕಾಪು ವಲಯ ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಮ್ ಆಶ್ರಯದಲ್ಲಿ ಉಡುಪಿ ಜಿಲ್ಲಾಸ್ಪತ್ರೆ ಮತ್ತು ರಕ್ತ ನಿಧಿಕೇಂದ್ರದ ಸಹಯೋಗದಲ್ಲಿ ಕಾಪು ವೀರಭದ್ರ ಸಭಾಭವನದಲ್ಲಿ ರವಿವಾರ ನಡೆದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪಡುಬಿದ್ರಿ : ಶ್ರೀ ವೆಂಕಟರಮಣ ದೇವಳಕ್ಕೆ ಪಾದಯಾತ್ರೆ ಕೈಗೊಂಡ ಶ್ರೀ ವಾಮನಾಶ್ರಮ ಸ್ವಾಮೀಜಿ ಭೇಟಿ

Posted On: 30-10-2022 01:44PM

ಪಡುಬಿದ್ರಿ : ವಿಶ್ವಪ್ರಸಿದ್ಧ ಗೋಕರ್ಣ ಸಮೀಪದ ಹಳದಿಪುರದ ವೈಶ್ಯ ವಾಣಿ ಸಮಾಜದ ಶ್ರೀ ಸಂಸ್ಥಾನ ಶಾಂತಾಶ್ರಮ ಮಠದ ಶ್ರೀ ವಾಮನಾಶ್ರಮ ಸ್ವಾಮೀಜಿಯವರು ಕಳೆದ ವಿಜಯದಶಮಿ ಅಕ್ಟೋಬರ್ ೫ ರಂದು ತಮ್ಮ ಶಿಷ್ಯರೊಂದಿಗೆ ಆದಿ ಶಂಕರಾಚಾರ್ಯರ ಮೂಲಸ್ಥಾನ ದಕ್ಷಿಣದ ಕೇರಳದ ಕಾವಡಿಯಿಂದ ಉತ್ತರದ ಕಾಶೀ ವಿಶ್ವನಾಥ ಕ್ಷೇತ್ರದವರೆಗೆ ಪಾದಯಾತ್ರೆ ಆರಂಭಿಸಿದ್ದು ರವಿವಾರ ಕಾಪು ತಾಲೂಕಿನ ಪಡುಬಿದ್ರಿ ಶ್ರೀ ವೆಂಕಟರಮಣ ದೇವಳಕ್ಕೆ ಭೇಟಿ ಕೊಟ್ಟರು.

ಪಡುಬಿದ್ರಿ : ರೋಟರಿ ಕ್ಲಬ್ ಹಾಗೂ ಆರ್ ಸಿ ಸಿ ಜಂಟಿ ಆಶ್ರಯದಲ್ಲಿ ಭಜನಾ ಸ್ಪರ್ಧೆ -2022ಕ್ಕೆ ಚಾಲನೆ

Posted On: 30-10-2022 11:51AM

ಪಡುಬಿದ್ರಿ : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ರೋಟರಿ ಸಮುದಾಯದಳ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ರವಿವಾರ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ 6ನೇ ಬಾರಿಗೆ ಆಯೋಜಿಸಿದ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ -2022 ನ್ನು ರೋಟರಿ ವಲಯ 5 ರ ಸಹಾಯಕ ಗವರ್ನರ್ ರೊ. ಡಾ.ಶಶಿಕಾಂತ್ ಕಾರಿಂಕ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ದೇವಳ, ಮಸೀದಿ, ಚಚ್೯ ಆರಾಧನಾ ಕೇಂದ್ರದಲ್ಲಿ ವಿವಿಧ ಆರಾಧನಾ ಕ್ರಮದ ಮೂಲಕ ದೇವರನ್ನು ಪ್ರಾರ್ಥಿಸುತ್ತೇವೆ. ಸಮಾಜದ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ನಮ್ಮ ಆರೋಗ್ಯ ಉತ್ತಮವಾಗಿರಲು ಸಾಧ್ಯ. ದೇವರನ್ನು ಮುಟ್ಟಲು ಇರುವ ಮಾಧ್ಯಮವೇ ಭಜನೆ. ನಮ್ಮಲ್ಲಿ ಧನಾತ್ಮಕ ಶಕ್ತಿ ಮೂಡಲು ಭಜನೆಯಿಂದ ಸಾಧ್ಯ ಎಂದರು.

ಕಾಪುವಿನಿಂದ ಮುಲ್ಕಿಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಚಾಲನೆ

Posted On: 30-10-2022 10:06AM

ಕಾಪು : ಇಲ್ಲಿನ ಕೊಂಕಣಿಮಠ ಶ್ರೀ ವೆಂಕಟರಮಣ ದೇವಸ್ಥಾನದಿಂದ ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದವರೆಗೆ ರಾಮನಾಮ ಸಂಕೀರ್ತನೆ ಪಾದಯಾತ್ರೆಗೆ ಕಾಪು ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಮೂಲಕ ಚಾಲನೆ ನೀಡಲಾಯಿತು.