Updated News From Kaup
ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದಲ್ಲಿ ವಿಶ್ವರೂಪ ದರ್ಶನ
Posted On: 30-10-2022 09:56AM
ಪಡುಬಿದ್ರಿ : ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳದಲ್ಲಿ ಕಾರ್ತಿಕ ಮಾಸದಲ್ಲಿ ಜರಗುವ ಒಂದು ತಿಂಗಳ ನಗರ ಭಜನೆ ಮತ್ತು ಪ್ರತಿ ದಿನ ಜರಗುವ ಪಕ್ಷಿಜಾಗರ ಪೂಜಾ ವಿಜ್ರಂಭಣೆಯಿಂದ ಆಚರಿಸಲಾಯಿತು.
ಉದ್ಯಾವರ : ಗುಡ್ಡೆಯಂಗಡಿ ಫ್ರೆಂಡ್ಸ್ ವತಿಯಿಂದ ಪುನೀತ್ ರಾಜ್ ಕುಮಾರ್ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ
Posted On: 29-10-2022 08:47PM
ಉದ್ಯಾವರ : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಉದ್ಯಾವರದಲ್ಲಿ ಅಂಧರ ಗೀತ ಗಾಯನ ನಡೆಯಿತು. ಶೃಂಗೇರಿಯ ಶ್ರೀ ಶಾರದಾ ಅಂಧರ ಗೀತ ಗಾಯನ ಕಲಾ ಸಂಘದ ಕಲಾವಿದರನ್ನು ಆಹ್ವಾನಿಸಿದ ಸಾಕಷ್ಟು ಸಮಾಜಮುಖೀ ಚಟುವಟಿಕೆ ನಿರತ ಗುಡ್ಡೆಯಂಗಡಿ ಫ್ರೆಂಡ್ಸ್ ಗುಡ್ಡೆಯಂಗಡಿ ವತಿಯಿಂದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಸಂಗೀತ ಸಂಜೆ ಕಾರ್ಯಕ್ರಮ ಶನಿವಾರ ಸಂಜೆ ಉದ್ಯಾವರ ಗುಡ್ಡೆಯಂಗಡಿ ಇಮೇಜ್ ಬಿಲ್ಡಿಂಗ್ ಮುಂಭಾಗದಲ್ಲಿ ನಡೆಯಿತು.
ಕಾಪು : ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರದ ಕಂದಾಯ ಸಚಿವರ ಭೇಟಿ
Posted On: 29-10-2022 08:29PM
ಕಾಪು : ಇಲ್ಲಿನ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವರು ಮತ್ತು ಶಿರಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಾಧಾಕೃಷ್ಣ ವಿಖೆ ಪಾಟೀಲ್ ಮತ್ತು ಪತ್ನಿ ಶಾಲಿನಿತೈ ವಿಖೆ ಪಾಟೀಲ್ ಇವರು ಜೀರ್ಣೋದ್ಧಾರದ ಮುಂಬೈ ಸಮಿತಿಯ ಕಾರ್ಯಾಧ್ಯಕ್ಷರು ಮತ್ತು ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿಯವರೊಂದಿಗೆ ಭೇಟಿ ನೀಡಿದರು.
ಕಾಪು : ಜನ ಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ
Posted On: 29-10-2022 05:23PM
ಕಾಪು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಇವರ ನೇತ್ರತ್ವದಲ್ಲಿ ಜನ ಸಂಕಲ್ಪ ಸಮಾವೇಶ ನಡೆಯಲಿದ್ದು ಇದರ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ಶನಿವಾರ ನಡೆಯಿತು.
ಹೆಜಮಾಡಿ : ಬಂದರು ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಲಾಲಾಜಿ ಮೆಂಡನ್
Posted On: 29-10-2022 04:43PM
ಹೆಜಮಾಡಿ :ಇಲ್ಲಿನ 181 ಕೋಟಿ ರೂಗಳ ಮೊತ್ತದಲ್ಲಿ 70 ಎಕ್ರೆ ಪ್ರದೇಶದಲ್ಲಿ ಬಂದರು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಬಂದರು ಸಮಿತಿ, ಸ್ಥಳೀಯರೊಂದಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಸಮಾಲೋಚನೆ ನಡೆಸಿದರು.
ಕಾಪು : ನೂತನ ಗೃಹ ರಕ್ಷಕ ದಳ ಪದಾಧಿಕಾರಿಗಳ ಕಚೇರಿ ಉದ್ಘಾಟನೆ
Posted On: 28-10-2022 11:33PM
ಕಾಪು : ಗೃಹ ರಕ್ಷಕ ದಳ ಕಾಪು ಘಟಕದ ಪದಾಧಿಕಾರಿಗಳ ನೂತನ ಕಚೇರಿಯನ್ನು ಉಡುಪಿ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ ಶೆಟ್ಟಿ ಉದ್ಘಾಟಿಸಿದರು.
ಕಾಪುವಿನಿಂದ ಮೂಲ್ಕಿವರೆಗೆ - ರಾಮ ನಾಮ ಸಂಕೀರ್ತನಾ ಪಾದಯಾತ್ರೆ
Posted On: 28-10-2022 03:53PM
ಕಾಪು : ರಾಮ ನಾಮ ಸಂಕೀರ್ತನಾ ಪಾದಯಾತ್ರೆ ಯು ಅಕ್ಟೋಬರ್ 30, ಆದಿತ್ಯವಾರದಂದು ಕಾಪು ಶ್ರೀ ವೆಂಕಟರಮಣ ದೇವಳದಿಂದ ಬೆಳಿಗ್ಗೆ ಗಂಟೆ 5:30 ಕ್ಕೆ ಪ್ರಾರಂಭಗೊಂಡು, ಹಳೇ ಮಾರಿಯಮ್ಮ ದೇವಳ ಭೇಟಿಯಾಗಿ, ಪಡುಬಿದ್ರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ, ಹೆಜಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಳ ಭೇಟಿಯಾಗಿ ತದನಂತರ ಹೆಜಮಾಡಿ ಟೋಲ್ ಗೇಟ್ ನಿಂದ ಹೊರೆಕಾಣಿಕೆ ಸಹಿತ ಮೂಲ್ಕಿ ಶ್ರೀ ವೆಂಕಟರಮಣ ದೇವಳ ತಲುಪಿ ರಾಮ ನಾಮ ಸಂಕೀರ್ತನ ಪಾದ ಯಾತ್ರೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದಮಾರು : ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು : ಕೋಟಿ ಕಂಠ ಗಾಯನ
Posted On: 28-10-2022 03:25PM
ಅದಮಾರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದಾದ್ಯಾಂತ ಆಯೋಜಿಸಲಾದ 67ನೇ ಕರ್ನಾಟಕ ರಾಜ್ಯೋತ್ಸವ ದ ಅಂಗವಾಗಿ ನನ್ನ ನಾಡು - ನನ್ನ ಹಾಡು ಸಮೂಹ ಗೀತೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಅದಮಾರಿನಲ್ಲಿ ನಡೆಯಿತು.
ಕಾಪು : ಮರದ ದಿಮ್ಮಿಯಿದ್ದ ಲಾರಿಯ ಟೈಯರ್ ಸ್ಫೋಟ ; ಉರಿದ ದಿಮ್ಮಿ ; ತಪ್ಪಿದ ಭಾರೀ ಅನಾಹುತ
Posted On: 28-10-2022 01:18PM
ಕಾಪು : ತೀರ್ಥಹಳ್ಳಿಯಿಂದ ಮಂಗಳೂರು ಕಡೆ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದರ ಟೈರ್ ಸ್ಫೋಟಗೊಂಡು ಮರದ ದಿಮ್ಮಿ ಸಮೇತ ಲಾರಿ ಹೊತ್ತಿ ಉರಿದ ಘಟನೆ ಗುರುವಾರ ತಡ ರಾತ್ರಿ ಕಾಪು ದಂಡ ತೀರ್ಥ ಮಠದ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ನಡೆದಿದೆ.
ಅಕ್ಟೋಬರ್ 30 : ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಆರ್ ಸಿ ಸಿ ಜಂಟಿ ಆಶ್ರಯದಲ್ಲಿ ಭಜನಾ ಸ್ಪರ್ಧೆ -2022
Posted On: 28-10-2022 01:06PM
ಕಾಪು : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ರೋಟರಿ ಸಮುದಾಯದಳ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ನಶಿಸಿ ಹೋಗುವ ಭಜನೆ ಕಲೆಯನ್ನು ಯುವ ಜನತೆಗೆ ಪ್ರೇರೇಪಿಸುವ ನಿಟ್ಟಿನಲ್ಲಿ 6ನೇ ಬಾರಿಗೆ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ -2022 ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ 9 ರಿಂದ ಸಂಜೆ 6:30ರ ತನಕ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿದೆ. ಭಜನಾ ಸ್ಪರ್ಧಾ ಕಾರ್ಯಕ್ರಮವನ್ನು ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಅಧಿಕಾರಿ ರೇಖಾ ಮೋಹನ್ ಉದ್ಘಾಟಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಸ್ಥಾಪಕ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
