Updated News From Kaup
ಬೆಳಪು : ಪಣಿಯೂರಿನಲ್ಲಿ ಶ್ರೀ ಬಬ್ಬು ಸ್ವಾಮಿ ದೈವಸ್ಥಾನ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 13 Feb 2023, 11:53 PM
ಬೆಳಪು : ಗ್ರಾಮದ ಪಣಿಯೂರು ಶ್ರೀ ಬಬ್ಬು ಸ್ವಾಮಿ ದೈವಸ್ಥಾನದ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಪಣಿಯಾರು ಶ್ರೀ ಬಬ್ಬು ಸ್ವಾಮಿ ಸನ್ನಿಧಿಯಲ್ಲಿ ಫೆಬ್ರವರಿ 12ರಂದು ಬಿಡುಗಡೆಗೊಳಿಸಲಾಯಿತು. ಫೆಬ್ರವರಿ 21ರಿಂದ ಫೆಬ್ರವರಿ 25ರವರೆಗೆ ಪುನರು ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ನೆರವೇರಲಿದೆ ಎಂದು ದೈವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ|| ದೇವಿ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು. ಈ ಸಂದರ್ಭ ಗುತ್ತಿನಾರ್ ಯೋಗೀಶ್ ಶೆಟ್ಟಿ ಪಣಿಯೂರು ಗುತ್ತು, ಗುರಿಕಾರ ಬಿ ಶಂಕರ್, ಜಯಾನಂದ ಶೆಟ್ಟಿ, ಪ್ರಭಾಕರ ಶೆಟ್ಟಿ ಎಲ್ಲೂರು ಗುತ್ತು, ನಡಿಮನೆ ದೇವರಾಜ ರಾವ್, ಕರುಣಾಕರ್ ಶೆಟ್ಟಿ ಪಣಿಯಾರು ಗುತ್ತು, ಸಾಧು ಶೆಟ್ಟಿ, ಸಚಿನ್ ಶೆಟ್ಟಿ, ಸೌಮ್ಯ ಸುರೇಂದ್ರ, ಮಹೇಶ್ ಶೆಟ್ಟಿ, ಶಿವ ಪೂಜಾರಿ, ಸಂಜೀವ ಸತೀಶ್ ಶೆಟ್ಟಿ ಗುಡ್ಡೆಚ್ಚಿ ಮತ್ತಿತರರು ಉಪಸ್ಥಿತರಿದ್ದರು.
ಮಾರ್ಚ್ 3: ಕಳತ್ತೂರು ಪಿ.ಕೆ ಎಸ್ ಪ್ರೌಢಶಾಲೆಯಲ್ಲಿ ಗುರುವಂದನೆ, ಮನೋರಂಜನಾ ಕಾರ್ಯಕ್ರಮ
Posted On: 13 Feb 2023, 11:04 PM
ಕಾಪು : ತಾಲೂಕಿನ ಕುತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೈಯ್ಯಾರು ಕರಿಯಣ್ಣ ಶೆಟ್ಟಿ ಪ್ರೌಢ ಶಾಲೆ ಕಳತ್ತೂರು ಇಲ್ಲಿ ಮಾರ್ಚ್ 3, ಶುಕ್ರವಾರ ಸಂಜೆ ಗಂಟೆ 5ರಿಂದ ಶಾಲೆಯ ನಿವೃತ್ತ ಶಿಕ್ಷಕರಾದ ಗೋಪಾಲ ಕೃಷ್ಣ ರಾವ್ ಅವರಿಗೆ ಹಳೆ ವಿದ್ಯಾರ್ಥಿಗಳು ಹಾಗೂ ಅವರ ಅಭಿಮಾನಿಗಳ ಮುಂದಾಳತ್ವದಲ್ಲಿ ಗುರುವಂದನಾ ಕಾರ್ಯಕ್ರಮ, ಹಳೆ ವಿದ್ಯಾರ್ಥಿಗಳ ಮನೋರಂಜನ ಕಾರ್ಯಕ್ರಮ, ಕಾಪು ರಂಗತರಂಗ ಕಲಾವಿದರ ತುಳು ಹಾಸ್ಯಮಯ ನಾಟಕ ಬುಡೆದಿ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದಲ್ಲಿ ಗುರ್ಮೆ ಫೌಂಡೇಶನ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗುರ್ಮೆ ಅಧ್ಯಕ್ಷತೆ ವಹಿಸಲಿದ್ದು, ಪಡುಬಿದ್ರಿಯ ಸಂಸ್ಕೃತ ಅಧ್ಯಾಪಕ ಡಾ| ರಾಘವೇಂದ್ರ ರಾವ್, ಆರ್. ಎಸ್. ಎಸ್ ಹಿರಿಯ ಪ್ರಚಾರಕ ಶ್ರೀ ದಾ.ಮಾ. ರವೀಂದ್ರ, ವಿದ್ಯಾವರ್ಧಕ ಸಂಘ, (ರಿ) ಕಳತ್ತೂರು ಇದರ ಅಧ್ಯಕ್ಷರಾದ ನಿತ್ಯಾನಂದ ಆರ್ ಶೆಟ್ಟಿ, ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಣೇಶ್ ಶೆಟ್ಟಿ ಪೈಯ್ಯಾರು, ಪಿ.ಕೆ.ಎಸ್ ಪ್ರೌಢಶಾಲೆಯ ಸಂಚಾಲಕ ಶಿವರಾಮ್ ಶೆಟ್ಟಿ ಪೈಯ್ಯಾರು, ಪಿ ಕೆ ಎಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಗಂಗಾ ನಾಯ್ಕ್ ಉಪಸ್ಥಿತರಿರುವರು ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ನೆಲಮೂಲದ ಹಬ್ಬಗಳು ಕೃತಿ ಬಿಡುಗಡೆ
Posted On: 12 Feb 2023, 07:24 PM
ಉಡುಪಿ : ಸಾಹಿತಿ , ಜಾನಪದ ಸಂಶೋಧಕ ಕೆ.ಎಲ್. ಕುಂಡಂತಾಯರ ಲೇಖನಗಳ ಸಂಗ್ರಹ "ನೆಲಮೂಲದ ಹಬ್ಬಗಳು" ಕೃತಿಯನ್ನು ನಾಡೋಜ , ವಿದ್ವಾಂಸ ಕೆ.ಪಿ. ರಾವ್ ಬಿಡುಗಡೆಗೊಳಿಸಿದರು. ಈ ಸಂದರ್ಭ ಬರಹಗಾರ ದೇವು ಹನೆಹಳ್ಳಿ, ತಾಳಮದ್ದಲೆ ಅರ್ಥವಾದಿ ರಾಧಾಕೃಷ್ನ ಕಲ್ಚಾರ್. ಭುವನಪ್ರಸಾದ ಹೆಗ್ಡೆ ಉಪಸ್ಥಿತರಿದ್ದರು.
ಮಕ್ಕಳ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಬಿಟ್ಟು ಬಿಡಿ : ಭರತ್ ರಾಜ್ ಕೆ
Posted On: 12 Feb 2023, 12:34 AM
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಶನಿವಾರ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಮಾತನಾಡಿ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಅವರನ್ನು ಬಿಟ್ಟು ಬಿಡಬೇಕು ಹಾಗು ಅವರ ಸಂತೋಷವನ್ನು ಪೂರ್ಣವಾಗಿ ಅನುಭವಿಸುವಂತೆ ಪಾಲಕರು ಪೋಷಕರು ನೋಡಿಕೊಳ್ಳಬೇಕು. ಮಕ್ಕಳನ್ನು ಚೌಕಟ್ಟಿನೊಳಗಿಟ್ಟು ಬೆಳೆಸುವ ಬದಲು ಬಾಲ್ಯವನ್ನು ಸ್ವಚ್ಛಂದವಾಗಿರಿಸಬೇಕು ಎಂದು ಹೇಳಿದ ಅವರು ಮಕ್ಕಳ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಗುರುತಿಸಿ ಗೌರವಿಸುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ ಹಾಗೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸ್ಥಾಪನೆ ಮಾಡುವ ಮೂಲಕ ಮಕ್ಕಳ ಬೆಳವಣಿಗೆಗೆ ಇದು ಹೆಚ್ಚು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಉಪನ್ಯಾಸಕ ಎಸ್ ಪಿ ಅಜಿತ್ ಪ್ರಸಾದ್ ಮಾತನಾಡಿ ಮಕ್ಕಳನ್ನು ಅಂಕದ ಹಿಂದೋಡಿಸದೇ ತಮ್ಮ ಬುದ್ಧಿ ಚತುರತೆಯನ್ನು ಅಂಕೆಯಲ್ಲಿ ಇಟ್ಟುಕೊಳ್ಳುವಂತಹ ಮಾನಸಿಕ ವಿಕಸನಕ್ಕೆ ಹಿರಿಯರು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪರಿಮಳ ಮಹೇಶ್ ರಾವ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜಿಲ್ಲಾ ಪದಾಧಿಕಾರಿಗಳಾದ ಸುಮಂಗಳಾ ದಿನೇಶ್ಶೆಟ್ಟಿ, ರಶ್ಮಿ ಸನಿಲ್, ಅಮರ್ನಾಥ್ ಪೂಪಾಡಿಕಲ್ಲು, ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಗುರುತಿಸುವ ಮೂಲಕ ನಾಡಿಗೆ ಪರಿಚಯಿಸಲಾಯಿತು. ಮತ್ತು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕು ಘಟಕಗಳ ಅಧ್ಯಕ್ಷರುಗಳಾದ ಶಿವಪ್ರಸಾದ್ ಕೊಕ್ಕಡ, ಶ್ರೀಕಲಾ ಕಾರಂತ್, ಸುಭಾಷಿಣಿ ಹಾಗೂ ಸಿಹಾನ ಬಿ.ಎಂ ಇವರಿಗೆ ನೇಮಕಾತಿ ಆದೇಶ ಪತ್ರದೊಂದಿಗೆ, ಪ್ರಮಾಣ ವಚನವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಭೋದಿಸಿದರು. ನೂತನ ಅಧ್ಯಕ್ಷೆ ಪರಿಮಳಾ ಮಹೇಶ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಕ.ರಾ.ಮ.ಸಾ.ಪ ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಉಪಸ್ಥಿತರಿದ್ದರು. ಕ.ರಾ.ಮ.ಸಾ.ಪ ನ ದ.ಕ ಜಿಲ್ಲಾ ಘಟಕ ಉಪಾಧ್ಯಕ್ಷೆ ಸುಮಂಗಲಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಶ್ಮಿ ಸನಿಲ್ ವಂದಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ನೃತ್ಯವೈವಿದ್ಯ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಪ್ರಮಾಣಪತ್ರದೊಂದಿಗೆ, ಕಿರು ಹೊತ್ತಗೆಗಳನ್ನು ವಿತರಿಸಲಾಯಿತು.
ಮಕ್ಕಳ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಬಿಟ್ಟು ಬಿಡಿ : ಭರತ್ ರಾಜ್ ಕೆ
Posted On: 12 Feb 2023, 12:34 AM
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಶನಿವಾರ ಅತ್ಯಂತ ಸಂಭ್ರಮ ಸಡಗರದಿಂದ ನೆರವೇರಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ್ ರಾಜ್ ಕೆ ಮಾತನಾಡಿ ಮಕ್ಕಳ ಮಾನಸಿಕ ಹಾಗೂ ಭೌತಿಕ ಬೆಳವಣಿಗೆಗೆ ಅವರು ಇರುವಂತೆ ಅವರನ್ನು ಬಿಟ್ಟು ಬಿಡಬೇಕು ಹಾಗು ಅವರ ಸಂತೋಷವನ್ನು ಪೂರ್ಣವಾಗಿ ಅನುಭವಿಸುವಂತೆ ಪಾಲಕರು ಪೋಷಕರು ನೋಡಿಕೊಳ್ಳಬೇಕು. ಮಕ್ಕಳನ್ನು ಚೌಕಟ್ಟಿನೊಳಗಿಟ್ಟು ಬೆಳೆಸುವ ಬದಲು ಬಾಲ್ಯವನ್ನು ಸ್ವಚ್ಛಂದವಾಗಿರಿಸಬೇಕು ಎಂದು ಹೇಳಿದ ಅವರು ಮಕ್ಕಳ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರಾಜ್ಯದಾದ್ಯಂತ ಗುರುತಿಸಿ ಗೌರವಿಸುವ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಸ್ತುತ್ಯಾರ್ಹ ಹಾಗೆಯೇ ಇದೀಗ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಸ್ಥಾಪನೆ ಮಾಡುವ ಮೂಲಕ ಮಕ್ಕಳ ಬೆಳವಣಿಗೆಗೆ ಇದು ಹೆಚ್ಚು ಸಹಾಯಕವಾಗಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಖ್ಯ ಅತಿಥಿಯಾಗಿದ್ದ ವಿಶ್ರಾಂತ ಉಪನ್ಯಾಸಕ ಎಸ್ ಪಿ ಅಜಿತ್ ಪ್ರಸಾದ್ ಮಾತನಾಡಿ ಮಕ್ಕಳನ್ನು ಅಂಕದ ಹಿಂದೋಡಿಸದೇ ತಮ್ಮ ಬುದ್ಧಿ ಚತುರತೆಯನ್ನು ಅಂಕೆಯಲ್ಲಿ ಇಟ್ಟುಕೊಳ್ಳುವಂತಹ ಮಾನಸಿಕ ವಿಕಸನಕ್ಕೆ ಹಿರಿಯರು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪರಿಮಳ ಮಹೇಶ್ ರಾವ್ ಸ್ವಾಗತಿಸಿ ಪ್ರಸ್ತಾವನೆ ಗೈದರು. ಜಿಲ್ಲಾ ಪದಾಧಿಕಾರಿಗಳಾದ ಸುಮಂಗಳಾ ದಿನೇಶ್ಶೆಟ್ಟಿ, ರಶ್ಮಿ ಸನಿಲ್, ಅಮರ್ನಾಥ್ ಪೂಪಾಡಿಕಲ್ಲು, ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಗುರುತಿಸುವ ಮೂಲಕ ನಾಡಿಗೆ ಪರಿಚಯಿಸಲಾಯಿತು. ಮತ್ತು ಮಂಗಳೂರು, ಬಂಟ್ವಾಳ, ಬೆಳ್ತಂಗಡಿ ಹಾಗೂ ಉಳ್ಳಾಲ ತಾಲೂಕು ಘಟಕಗಳ ಅಧ್ಯಕ್ಷರುಗಳಾದ ಶಿವಪ್ರಸಾದ್ ಕೊಕ್ಕಡ, ಶ್ರೀಕಲಾ ಕಾರಂತ್, ಸುಭಾಷಿಣಿ ಹಾಗೂ ಸಿಹಾನ ಬಿ.ಎಂ ಇವರಿಗೆ ನೇಮಕಾತಿ ಆದೇಶ ಪತ್ರದೊಂದಿಗೆ, ಪ್ರಮಾಣ ವಚನವನ್ನು NSCDF ಅಧ್ಯಕ್ಷ ಗಂಗಾಧರ್ ಗಾಂಧಿ ಭೋದಿಸಿದರು. ನೂತನ ಅಧ್ಯಕ್ಷೆ ಪರಿಮಳಾ ಮಹೇಶ್ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಕ.ರಾ.ಮ.ಸಾ.ಪ ಕೇರಳ ರಾಜ್ಯ ಘಟಕದ ಅಧ್ಯಕ್ಷ ಶಿವರಾಮ ಕಾಸರಗೋಡು ಉಪಸ್ಥಿತರಿದ್ದರು. ಕ.ರಾ.ಮ.ಸಾ.ಪ ನ ದ.ಕ ಜಿಲ್ಲಾ ಘಟಕ ಉಪಾಧ್ಯಕ್ಷೆ ಸುಮಂಗಲಾ ಡಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ರಶ್ಮಿ ಸನಿಲ್ ವಂದಿಸಿದರು. ಬಳಿಕ ವಿವಿಧ ಶಾಲಾ ಮಕ್ಕಳಿಂದ ನೃತ್ಯವೈವಿದ್ಯ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಪ್ರಮಾಣಪತ್ರದೊಂದಿಗೆ, ಕಿರು ಹೊತ್ತಗೆಗಳನ್ನು ವಿತರಿಸಲಾಯಿತು.
ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿ ರವರಿಗೆ ಸನ್ಮಾನ
Posted On: 11 Feb 2023, 11:51 PM
ಕಾಪು : ಸಾಹಿತಿ-ಚಿಂತಕ ಅಶ್ರಫ್ ಕರಂದಾಡಿರವರಿಗೆ ಬಟರ್ ಫ್ಲೈ ಗೆಸ್ಟ್ ಹೌಸ್ ನಲ್ಲಿ ಸಾಮಾಜಿಕ ಕಾರ್ಯಕ್ರಮದ ವೇದಿಕೆಯಲ್ಲಿ ಹಲವಾರು ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ರಾಜ್ಯೋತ್ಸವ ಪುರಸ್ಕೃತ ಫಾರೂಕ್ ಚಂದ್ರನಗರ ಅಶ್ರಫ್ ಕರಂದಾಡಿ ಒಬ್ಬ ಒಳ್ಳೆಯ ಚಿಂತಕ-ಸಾಹಿತಿಯಾಗಿದ್ದು ಹಲವಾರು ಕವನವನ್ನು ಬರೆದಿರುತ್ತಾರೆ. ಅವರೊಬ್ಬ ಸಾಮಾಜಿಕ ಕಳಕಳಿಯ ವ್ಯಕ್ತಿಯಾಗಿದ್ದು ಅವರನ್ನು ಸನ್ಮಾನಿಸಿ ಗುರುತಿಸಿದ್ದು ಅವರಿಗೆ ಇನ್ನಷ್ಟು ಪ್ರೇರಣೆಯಾಗಲಿದೆ ಮುಂದೆಯು ಉತ್ತಮ ಕವನ ಬರೆದು ಸಮಾಜಕ್ಕೆ ಕೊಡುಗೆ ನೀಡಲಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಬ್ದುಲ್ ಮುನೀರ್, ಶರ್ಫುದ್ದಿನ್ ಶೇಕ್ ಮಜೂರು,ಶಂಶುದ್ಧಿನ್ ಕರಂದಾಡಿ,ಯು.ಸಿ ಶೇಖಬ್ಬ ಉಚ್ಚಿಲ, ಝುಬೈರ್ ಶಿರ್ವ, ಉಸ್ಮಾನ್ ಕಾಪು, ಹೆಚ್ ಅಬ್ದುಲ್ಲ ಕಾಪು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
ಫೆಬ್ರವರಿ 12 : ಪಣಿಯೂರು ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬ್ರಹ್ಮಕಲಶೋತ್ಸವ - ಬೆಳಪು ಡಾ| ಶ್ರೀ ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
Posted On: 10 Feb 2023, 10:04 PM
ಕಾಪು : ತಾಲೂಕಿನ ಪಣಿಯೂರಿನ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವ ಫೆಬ್ರವರಿ 21ರಿಂದ 25ರವರೆಗೆ ನಡೆಯಲಿದ್ದು ಈ ನಿಮಿತ್ತ ನಡೆಯಲಿರುವ ವೈದಿಕ ಕಾರ್ಯಕ್ರಮಗಳು, ಸಭಾ ಕಾರ್ಯಕ್ರಮಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ತಯಾರಿಗಾಗಿ ಪೂರ್ವಭಾವಿ ಸಭೆ ಫೆಬ್ರವರಿ 12, ಭಾನುವಾರ ಸಂಜೆ ಗಂಟೆ 4ಕ್ಕೆ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಬೆಳಪು ಡಾ| ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಗುತ್ತಿನಾರ್ ಯೋಗೀಶ್ ಶೆಟ್ಟೆ ಪಣಿಯೂರು ಗುತ್ತು, ಮುಂಬಯಿ ಸಮಿತಿ ಅಧ್ಯಕ್ಷರಾದ ಸುಕುಮಾರ್ ಶೆಟ್ಟಿ, ಸ್ಥಳ ವಂದಿಗರು ಮತ್ತು ಊರ ಹತ್ತು ಸಮಸ್ತರು, ಬಿ. ಶಂಕರ್, ಗುರಿಕಾರರು ಮತ್ತು ಸರ್ವ ಸಮಿತಿಯ ಸದಸ್ಯರು ಉಪಸ್ಥಿತಿಯಲ್ಲಿ ಸ್ವಾಗತ, ಮೆರವಣಿಗೆ, ಪ್ರಚಾರ, ಉಗ್ರಾಣ, ಸಭಾ ಕಾರ್ಯಕ್ರಮ, ಅನ್ನಸಂತರ್ಪಣೆ, ಪಾರ್ಕಿಂಗ್, ಸೆಕ್ಯೂರಿಟಿ ಮತ್ತು ಶುಚಿತ್ವ ಈ ಎಲ್ಲಾ ಸಮಿತಿಗಳ ಅಧ್ಯಕ್ಷರುಗಳು ಹಾಗೂ ಸರ್ವ ಸದಸ್ಯರುಗಳು ಮತ್ತು ಊರ ಸಮಸ್ತರೊಂದಿಗೆ ಸಭೆ ನಡೆಯಲಿದೆ.
ಯಕ್ಷಗಾನ ಸಮ್ಮೇಳನಕ್ಕೆ ರೋಹಿತ್ ಚಕ್ರತೀರ್ಥ ಆಯ್ಕೆ ಸರಿಯಾದುದ್ದಲ್ಲ : ಪ್ರವೀಣ್ ಎಂ ಪೂಜಾರಿ
Posted On: 10 Feb 2023, 07:55 PM
ಉಡುಪಿ : ಕರಾವಳಿ ಕರ್ನಾಟಕದ ಹೆಮ್ಮೆಯ ಕಲೆಯಾದ ಯಕ್ಷಗಾನಕ್ಕೆ ವಿಶಿಷ್ಟವಾದ ಸಾಂಸ್ಕೃತಿಕ ಪರಂಪರೆಯಿದೆ.ಅದನ್ನು ನೆನಪಿಸುವ ಮತ್ತು ಭವಿಷ್ಯಕ್ಕೆ ಪೂರಕವಾಗುವ ನಿಟ್ಟಿನಲ್ಲಿ ಉಡುಪಿಯಲ್ಲಿ ಹಮ್ಮಿಕೊಂಡಿರುವ ಯಕ್ಷಗಾನ ಸಮ್ಮೇಳನ ಆಯೋಜನೆ ಅಭಿನಂದನಾರ್ಹವಾದುದು.ಆದರೆ ಇಂತಹ ಪ್ರತಿಷ್ಠಿತ ಕಾರ್ಯಕ್ರಮದ ದಿಕ್ಸೂಚಿ ಭಾಷಣಕ್ಕೆ ರೋಹಿತ್ ಚಕ್ರತೀರ್ಥರವರನ್ನು ಆಹ್ವಾನಿಸಿರುವುದು ಆಶ್ಚರ್ಯಕರವಾಗಿದೆ.ರೋಹಿತ್ರವರು ಪಠ್ಯಪುಸ್ತಕ ಸಮಿತಿಯಲ್ಲಿದ್ದಾಗ ಸುಧಾರಣಾವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ತೆಗೆದು ಹಾಕುವಂತಹ ದುಸ್ಸಾಹಸ ಮಾಡಿದವರು. ಇಂದಿಗೂ ಈ ವಿಷಯ ಸಮರ್ಪಕವಾಗಿ ಬಗೆಹರಿದಿಲ್ಲ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರಾದ ಪ್ರವೀಣ್ ಎಂ ಪೂಜಾರಿ ತಿಳಿಸಿದ್ದಾರೆ. ಅಲ್ಲದೆ ರಾಷ್ಟ್ರ ಕವಿ ಕುವೆಂಪು ವಿರಚಿತ ನಾಡಗೀತೆಗೂ ಅವಮಾನ ಮಾಡಿದ್ದರು. ಇಷ್ಟೆಲ್ಲಾ ವಿವಾದಿತ ವ್ಯಕ್ತಿಯಾಗಿ ಹಾಗೂ ಯಕ್ಷಗಾನದಲ್ಲೂ ಏನೇನೂ ಸಾಧನೆ ಮಾಡಿಲ್ಲದ ರೋಹಿತ್ ಆಯ್ಕೆ ಯಾವ ಮಾನದಂಡದಲ್ಲಿ ಆಗಿದೆ ಎಂಬುದು ತಿಳಿಯುತ್ತಿಲ್ಲ.ಯಕ್ಷಗಾನದಲ್ಲಿ ಅವಿರತ ಸಾಧನೆ ಮಾಡಿದ ಕಲಾದಿಗ್ಗಜರು,ಯಕ್ಷ ವಿದ್ವಾಂಸರು ನಮ್ಮಲ್ಲಿರುವಾಗ ರೋಹಿತ್ ಆಹ್ವಾನವನ್ನು ತಿರಸ್ಕರಿಸುವುದು ಒಳ್ಳೆಯದು ಎಂದು ನಮ್ಮ ಅಭಿಪ್ರಾಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೆ.11 : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದ.ಕ.ಜಿಲ್ಲಾ ಪದಾಧಿಕಾರಿಗಳ ಪದಗ್ರಹಣ ; ಚಿಣ್ಣರ ಕಲರವ
Posted On: 10 Feb 2023, 08:39 AM
ಮಂಗಳೂರು : ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಪದಾಧಿಕಾರಿಗಳ ಮತ್ತು ತಾಲೂಕು ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಚಿಣ್ಣರ ಕಲರವ ಸಾಂಸ್ಕೃತಿಕ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಫೆಬ್ರವರಿ11, ಶನಿವಾರ ನಡೆಯಲಿದೆ. ಈ ಮಹತ್ವಪೂರ್ಣ ಕಾರ್ಯಕ್ರಮದ ಉದ್ಘಾಟನೆಯನ್ನು ಭಾರತ್ ಸ್ಕೌಟ್ ಮತ್ತು ಗೈಡ್ನ ರಾಜ್ಯ ಸಹಾಯಕ ಸಂಘಟನಾ ಆಯುಕ್ತ ಭರತ ರಾಜ್ ಕೆ. ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ದಕ್ಷಿಣಕನ್ನಡ ಜಿಲ್ಲಾ ನೂತನ ಅಧ್ಯಕ್ಷೆ ಹಾಗೂ ನ್ಯಾಯವಾದಿ ಪರಿಮಳ ಮಹೇಶ್ ರಾವ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಶ್ರಾಂತ ಕನ್ನಡ ಉಪನ್ಯಾಸಕ ಎಸ್.ಪಿ. ಅಜಿತ್ ಪ್ರಸಾದ್, NSCDF ಅಧ್ಯಕ್ಷ ಗಂಗಾಧರ್ ಗಾಂಧಿ, KSSAP ಅಧ್ಯಕ್ಷೆ ರಾಣಿ ಪುಷ್ಪಲತಾ ದೇವಿ ಮತ್ತಿತರರು ಭಾಗವಹಿಸುವ ಈ ಕಾರ್ಯಕ್ರಮದಲ್ಲಿ ದಕ್ಷಿಣ ಜಿಲ್ಲೆಯ ವಿವಿಧ ತಾಲೂಕಿನ ಅಧ್ಯಕ್ಷರುಗಳ ಪದಗ್ರಹಣ ಕಾರ್ಯಕ್ರಮ ಹಾಗೂ ಶಾಲಾ ಮಕ್ಕಳಿಂದ ಚಿಣ್ಣರ ಕಲರವ ಎಂಬ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ರಶ್ಮಿ ಸನಿಲ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿಯ ಬ್ರಾಹ್ಮಣ ವಿರೋಧಿ ಹೇಳಿಕೆ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ : ಶ್ರೀಶ ನಾಯಕ್ ಪೆರ್ಣಂಕಿಲ
Posted On: 09 Feb 2023, 11:39 PM
ಉಡುಪಿ : ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡುವ ಮೂಲಕ ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಮಾಡಿದ್ದಾರೆ, ಅವರು ತಕ್ಷಣ ಸಮಸ್ತ ಹಿಂದೂ ಸಮಾಜ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ ಆಗ್ರಹಿಸಿದ್ದಾರೆ. ಅರ್ಹತೆ ಇಲ್ಲದಿದ್ದರೂ ಸಂದರ್ಭದ ಅನಿವಾರ್ಯತೆಯಿಂದ ರಾಜ್ಯದ ಮುಖ್ಯಮಂತ್ರಿಯಾದ ಕುಮಾರಸ್ವಾಮಿ ಅವರು ಬಿಜೆಪಿಯನ್ನು ಬೆಂಬಲಿಸುವ ಹಿಂದೂ ಸಮಾಜವನ್ನು ಒಡೆದು, ಅತಂತ್ರ ವಿಧಾನಸಭೆಯನ್ನು ಸೃಷ್ಟಿಸಿ ಮತ್ತೇ ತಾವು ಮುಖ್ಯಮಂತ್ರಿಯಾಗುವ ತಂತ್ರ ಹೆಣೆಯುತ್ತಿದ್ದಾರೆ. ಆದರೇ ಈ ಬಾರಿ ಹಿಂದೂ ಸಮಾಜ ಕಾಂಗ್ರೆಸ್ ಜೊತೆ ಜೆಡಿಎಸ್ ಪಕ್ಷವನ್ನೂ ನಿರ್ನಾಮ ಮಾಡಲಿದೆ. ಕುಮಾರಸ್ವಾಮಿ ಮುಂದೆಂದೂ ಈ ರಾಜ್ಯದ ಮುಖ್ಯಮಂತ್ರಿಯಾಗಲಾರರು ಎಂದವರು ಹೇಳಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಪ್ರಹ್ಲಾದ್ ಜೋಷಿ ಅವರನ್ನು ಅವಮಾನಿಸಿರುವ ಕುಮಾರಸ್ವಾಮಿ ಅವರ ಜಾತ್ಯಾತೀತ ಮುಖವಾಡ ಕಳಚಿಬಿದ್ದಿದೆ. ಜೋಷಿ ಅವರು ಪಕ್ಷನಿಷ್ಠೆ ದೇಶನಿಷ್ಠೆಯಿಂದ ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾರೆ. ಅವರು ಅರ್ಹವಾಗಿಯೇ ರಾಜ್ಯದ ಮುಖ್ಯಮಂತ್ರಿಯಾದರೇ ಅದನ್ನು ತಡೆಯುವುದಕ್ಕೆ ಕುಮಾರಸ್ವಾಮಿಯಂತಹವರಿಂದ ಸಾಧ್ಯವಿಲ್ಲ. ಕುಮಾರಸ್ವಾಮಿ ಅವರು ರಾಜಕೀಯದಲ್ಲಿ ಉಳಿಯುವ ಆಸೆ ಇದ್ದರೇ ತಕ್ಷಣ ಬ್ರಾಹ್ಮಣ ಸಮುದಾಯವೂ ಸೇರಿದಂತೆ ಹಿಂದೂ ಸಮಾಜದ ಕ್ಷಮೆ ಕೇಳಬೇಕು, ಇಲ್ಲದಿದ್ದಲ್ಲಿ ಮುಂಬರುವ ಚುನಾವಣೆಯ ನಂತರ ಅನಿವಾರ್ಯವಾಗಿ ರಾಜಕೀಯದಿಂದ ನಿವೃತ್ತಿಯಾಗುವುದಕ್ಕೆ ಸಿದ್ಧರಾಬೇಕು ಎಂದು ಶ್ರೀಶ ನಾಯಕ್ ಎಚ್ಚರಿಸಿದ್ದಾರೆ.
