Updated News From Kaup
ಕುಲಾಲ ಸಮಾಜ ಸೇವಾ ಸಂಘ ಬ್ರಹ್ಮಾವರ : ವಾರ್ಷಿಕ ಮಹಾಸಭೆ ; ಸತ್ಯನಾರಾಯಣ ಪೂಜೆ ; ವಿದ್ಯಾರ್ಥಿವೇತನ ವಿತರಣೆ
Posted On: 28 Nov 2022, 07:08 AM
ಉಡುಪಿ : ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಇದರ ವಾರ್ಷಿಕ ಮಹಾಸಭೆ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕುಲಾಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ ರವಿವಾರ ಶಾರದಾ ಹೈಸ್ಕೂಲ್ ಚೇರ್ಕಾಡಿಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ದೇವರಾಜ್ ಅರಸು ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಡಾl. ಅಣ್ಣಯ್ಯ ಕುಲಾಲ್ ಉಳ್ತೂರು ಹಾಗೂ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಐತು ಕುಲಾಲ್ ಕನ್ಯಾನ ಇವರನ್ನು ಸನ್ಮಾನಿಸಿ ಕುಲಾಲ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾ ಪ್ರೋತ್ಸಾಹ ಧನ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಅಧ್ಯಕ್ಷರಾದ ರಾಜೀವ ಕುಲಾಲ್, ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ಯುವ ವೇದಿಕೆ ಗೌರವಾಧ್ಯಕ್ಷರಾದ ತೇಜಸ್ವಿರಾಜ್, ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ (ನಿ.) ಪೆರ್ಡೂರು ಅಧ್ಯಕ್ಷರಾದ ಸಂತೋಷ್ ಕುಲಾಲ್, ಕುಲಾಲ ಸಂಘ (ರಿ.) ಪೆರ್ಡೂರು ಅಧ್ಯಕ್ಷರಾದ ಕೃಷ್ಣಪ್ಪ ಕುಲಾಲ, ಕುಲಾಲ ಸಮಾಜ ಸೇವಾ ಸಂಘ (ರಿ.) ಬ್ರಹ್ಮಾವರ ಗೌರವಾಧ್ಯಕ್ಷರಾದ ಮಂಜುನಾಥ ಕುಲಾಲ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕಾಪು ತಾಲೂಕು 4ನೇ ಕನ್ನಡ ಸಾಹಿತ್ಯ ಸಮ್ಮೇಳನ - 2022 ಆಮಂತ್ರಣ ಪತ್ರಿಕೆ ಬಿಡುಗಡೆ
Posted On: 27 Nov 2022, 07:30 PM
ಕಟಪಾಡಿ : ಇಲ್ಲಿನ ಎಸ್ ವಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಡಿಸೆಂಬರ್ 10ರಂದು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಆಶ್ರಯದಲ್ಲಿ ನಡೆಯಲಿರುವ ನಾಲ್ಕನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಸ್ವಾತಂತ್ರ್ಯ ಹೋರಾಟಗಾರರು, ಗೋವಾ ವಿಮೋಚನ ಹೋರಾಟಗಾರರಾದ ಮಟ್ಟಾರು ವಿಟ್ಠಲ ಕಿಣಿಯವರು ಮಂಗಳೂರಿನ ತಮ್ಮ ಸ್ವಗೃಹದಲ್ಲಿ ಬಿಡುಗಡೆಗೊಳಿಸಿದರು. ಈ ಸಂದರ್ಭ ಮಾತನಾಡಿದ ಅವರು ಯುವಕರ ಮೇಲೆ ಆಶಾದಾಯಕವಾದ ಜವಾಬ್ದಾರಿ ಇದೆ. ಮುಖ್ಯವಾಗಿ ಯುವಕರಿಗೆ ವಿದ್ಯೆ, ವೈಯಕ್ತಿಕ ಚಾರಿತ್ರ್ಯ, ರಾಷ್ಟ್ರೀಯ ಚಾರಿತ್ರ್ಯವಿರಬೇಕು. ಎಲ್ಲರೂ ಸಂಘಟಿತರಾದಾಗ ಮಾತ್ರ ಕಾರ್ಯಸಾಧ್ಯ. ಕಾಪು ತಾಲೂಕು ಘಟಕದ ಕಾರ್ಯ, ಪರಿಶ್ರಮಕ್ಕೆ ಶುಭವಾಗಲಿ ಎಂದು ಹಾರೈಸಿದರು. ಈ ಸಂದರ್ಭ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಮರಾಠೆ, ಕಾಪು ತಾಲೂಕಿನ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಪೂರ್ವಾಧ್ಯಕ್ಷರಾದ ಮುದ್ದು ಮೂಡುಬೆಳ್ಳೆ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ, ನೀಲಾನಂದ ನಾಯ್ಕ್, ಸಮ್ಮೇಳನದ ಸ್ವಾಗತ ಸಮಿತಿಯ ಕಾರ್ಯಾಧ್ಯಕ್ಷರಾದ ಡಾ| ದಯಾನಂದ ಪೈ, ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಕುಮಾರ್ ರಾವ್ ಮಟ್ಟು, ಕಾಪು ತಾಲೂಕಿನ ಸಂಘಟನ ಕಾರ್ಯದರ್ಶಿ ದೀಪಕ್ ಬೀರ, ಸುಧಾಕರ ಪಾಣಾರ ಮೂಡುಬೆಳ್ಳೆ ಉಪಸ್ಥಿತರಿದ್ದರು. ಸಮ್ಮೇಳನದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಕೃಷ್ಣಕುಮಾರ್ ರಾವ್ ಮಟ್ಟು ಸ್ವಾಗತಿಸಿ, ನಿರೂಪಿಸಿದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಪುಂಡಲೀಕ ಮರಾಠೆ ಪ್ರಸ್ತಾವನೆಗೈದರು. ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಗೌರವ ಕಾರ್ಯದರ್ಶಿಗಳಾದ ಅಶ್ವಿನ್ ಲಾರೆನ್ಸ್ ಮೂಡುಬೆಳ್ಳೆ ವಂದಿಸಿದರು.
ಬಿಳಿಯಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಭೇಟಿ
Posted On: 27 Nov 2022, 07:24 PM
ಕಾಪು : ತಾಲೂಕಿನ ಕುರ್ಕಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿಳಿಯಾರು ಶ್ರೀ ಧೂಮಾವತಿ ದೈವಸ್ಥಾನಕ್ಕೆ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ರವಿವಾರ ಭೇಟಿ ನೀಡಿದರು. 1 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ದೈವಸ್ಥಾನದ ಕಾಮಗಾರಿ ವೀಕ್ಷಣೆ ಮಾಡಿದರು. ಹಾಗೂ ದೈವಸ್ಥಾನದ ಅಭಿವೃದ್ಧಿಗೆ ಹೆಚ್ಚಿನ ಮೊತ್ತದ ಅನುದಾನ ದೊರಕಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದೈವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ್ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಶೆಟ್ಟಿ ಹಾಗೂ ಪ್ರಮುಖರಾದ ವೀರೇಂದ್ರ ಪೂಜಾರಿ, ಚಂದ್ರಹಾಸ ಶೆಟ್ಟಿ, ಅಶೋಕ್ ಪೂಜಾರಿ, ವಿಶ್ವನಾಥ್ ಕುರ್ಕಾಲು, ಸುಧರ್ಶನ್ ಕುರ್ಕಾಲು, ಸುಮಾ ಶೆಟ್ಟಿ, ಪ್ರಮೀಳಾ ಆಚಾರ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಯೋಗಿತಾ ಹಾಗೂ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಡೆದ ಡಿಗ್ರಿಯೊಂದಿಗೆ ಸಾಮಾನ್ಯ ಜ್ಞಾನವೂ ಅವಶ್ಯಕ : ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ
Posted On: 27 Nov 2022, 07:03 PM
ಬಂಟಕಲ್ಲು : ಪ್ರತಿಯೊಬ್ಬ ವ್ಯಕ್ತಿಗೂ ಜ್ಞಾನದ ಅವಶ್ಯಕತೆಯಿದೆ. ಇದರ ಜೊತೆಗೆ ಸಾಮಾನ್ಯ ಜ್ಞಾನದ ಅವಶ್ಯಕತೆಯೂ ಇದೆ. ಪಡೆದ ಡಿಗ್ರಿ ಮುಖ್ಯವಲ್ಲ. ಸಾಮಾನ್ಯ ಜ್ಞಾನ ಹೊಂದಿದರೆ ಮಾತ್ರ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಲು ಸಾಧ್ಯ. ಅಧ್ಯಯನ ಘಟ್ಟದಲ್ಲಿ ಒಳ್ಳೆಯ ವ್ಯಕ್ತಿತ್ವ ರೂಪಿಸಿ ಎಂದು ಉಡುಪಿ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದರು. ಅವರು ಶ್ರೀ ಮಧ್ವ ವಾದಿರಾಜ ಇನ್ಸ್ಟಿಟ್ಯೂಟ್ ಆಫ್ ಟೆಕ್ನೋಲಜಿ ಅಂಡ್ ಮ್ಯಾನೇಜ್ಮೆಂಟ್ ಬಂಟಕಲ್ಲು ಇಲ್ಲಿ ಪ್ರಥಮ ವರ್ಷದ ಇಂಜಿನಿಯರಿಂಗ್ ಶಿಕ್ಷಣಕ್ಕೆ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗಾಗಿ ನಡೆದ ಮಾರ್ಗದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಬೆಂಗಳೂರಿನ ಏಸ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ರಾಮದಾಸ್ ಮಡ್ಮಣ್ಣಾಯ ಮಾತನಾಡಿ ತಂದೆ ತಾಯಿಗಳು ಮಕ್ಕಳ ಅಭ್ಯುದಯಕ್ಕೆ ನಾಂದಿ ಹಾಡಬೇಕು. ದೃಢ ಸಂಕಲ್ಪ, ಹಠ ನಮ್ಮನ್ನು ಉನ್ನತಮಟ್ಟಕ್ಕೆ ಕೊಂಡೊಯ್ಯಲು ಸಾಧ್ಯ. ಮಕ್ಕಳ ಭವಿಷ್ಯದ ಆಸೆಗೆ ಹೆತ್ತವರು ಮಾರ್ಗದರ್ಶನ ನೀಡಬೇಕು. ವಿದ್ಯೆ ಜೊತೆ ನಾಯಕತ್ವ ಗುಣ ಬೆಳೆಸಬೇಕು. ಕೇವಲ ಮಾಕ್೯ ಮುಖ್ಯವಲ್ಲ ಅದೊಂದು ಸಾಧನದಂತೆ. ಕಲಿಕೆಯ ವಿಷಯದ ಮೂಲಭೂತ ಜ್ಞಾನವಿರಬೇಕು. ಅಹಂಕಾರ ವಿದ್ಯಾರ್ಥಿಗಳಲ್ಲಿ ಇರಬಾರದು. ನಿಸ್ವಾರ್ಥದ ಜೀವನ ನಮ್ಮದಾಗಬೇಕು ಎಂದರು. ಸಾಧನೆಗೈದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಗೌರವ, ದಾನಿಗಳಿಂದ ಪ್ರೋತ್ಸಾಹಕವಾಗಿ ನೀಡಲ್ಪಟ್ಟ ವಿದ್ಯಾರ್ಥಿವೇತನ ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಸೋದೆ ವಾದಿರಾಜ ಮಠ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ವಹಿಸಿದ್ದರು. ಈ ಸಂದರ್ಭ ಸಂಸ್ಥೆಯ ಕಾರ್ಯದರ್ಶಿ ರತ್ನಕುಮಾರ್, ಪ್ರಾಂಶುಪಾಲರಾದ ಡಾ| ತಿರುಮಲೇಶ್ವರ ಭಟ್, ಉಪಪ್ರಾಂಶುಪಾಲರಾದ ಡಾ| ಗಣೇಶ್ ಐತಾಳ್, ಆಡಳಿತ ಮಂಡಳಿ ಸದಸ್ಯ ಹರೀಶ್ ಬೆಳ್ಮಣ್, ಉಪನ್ಯಾಸಕ ರವೀಂದ್ರ ಎಚ್ ಜೆ ಉಪಸ್ಥಿತರಿದ್ದರು. ಪ್ರಾಂಶುಪಾಲರಾದ ಡಾ| ತಿರುಮಲೇಶ್ವರ ಭಟ್ ಸ್ವಾಗತಿಸಿದರು. ಸಂಸ್ಥೆಯ ಉಪನ್ಯಾಸಕಿ ಡಾ| ಲೊಲಿಟ ಪ್ರಿಯ ಕ್ಯಾಸ್ಟಲಿನೊ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ಉಪನ್ಯಾಸಕರಾದ ಲಹರಿ ವೈದ್ಯ ಮತ್ತು ಸಚಿನ್ ಪ್ರಭು ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲರಾದ ಡಾ| ಗಣೇಶ್ ಐತಾಳ್ ವಂದಿಸಿದರು.
ಟೋಲ್ ಸುಲಿಗೆ - ಎರಡು ಜಿಲ್ಲೆಯ ಜನತೆಗೆ ಸಂಸದರು ಎಸೆಗಿದ ದ್ರೋಹ : ಯೋಗೀಶ್ ವಿ ಶೆಟ್ಟಿ
Posted On: 27 Nov 2022, 01:52 PM
ಕಾಪು : ಸುರತ್ಕಲ್ ಟೋಲ್ ದರವನ್ನು ಪೂರ್ತಿಯಾಗಿ ಸೇರಿಸಿ ಹೆಜಮಾಡಿಯಲ್ಲಿ ಸುಲಿಗೆ ನಡೆಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ ಅಂದರೆ ಸರಕಾರದ ನಿರ್ಧಾರ ಇದು ಎರಡು ಜಿಲ್ಲೆಯ ಜನತೆಗೆ ಸಂಸದರು ಎಸೆಗಿದ ದ್ರೋಹ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಎಲ್ಲಾ ಕಡೆ ಸರ್ವಿಸ್ ರಸ್ತೆ ಕಾಮಗಾರಿ ನಿರ್ಮಾಣ ಮಾಡಿ ಅಪಘಾತಗಳು ಆಗದ ರೀತಿಯಲ್ಲಿ ಮುಂದಿನ ಕಾಮಗಾರಿ ನಿರ್ವಹಿಸಬೇಕು. ಬಸ್ ಬೇ ಮತ್ತು ಲಾರಿ ಬೇ ನಿರ್ಮಾಣವಾಗಬೇಕು, ಬೀದಿ ದೀಪಗಳು ಕೆಟ್ಟು ಹೋಗಿದ್ದು ಕೆಲವು ಜಂಕ್ಷನ್ ಗಳಲ್ಲಿ ಕತ್ತಲು ಆವರಿಸಿದ್ದು, ರಾತ್ರಿ ಸಂಚರಿಸುವ ವಾಹನಗಳು ಅಪಘಾತಗಳಿಗೆ ಸಿಲುಕಿ ನೂರಾರು ಜನರು ಪ್ರಾಣ ಕಳೆದುಕೊಂಡಿರುತ್ತಾರೆ. ಬೀದಿ ದೀಪಗಳ ಅಸಮರ್ಪಕ ನಿರ್ವಹಣೆ ಮತ್ತು ಕೆಲವು ಅಂಡರ್ ಪಾಸ್ ಗಳಲ್ಲಿ ದೀಪಗಳು ಉರಿಯದೆ ಇದೆ, ಮಾರ್ಕಿಂಗ್ ಗಳು ಕಾಣದೇ ಮತ್ತು ಗಾರ್ಡನ್ ನಿರ್ವಹಣೆಗಳು ಸರಿಯಾದ ರೀತಿಯಲ್ಲಿ ಆಗದೆ ಇದ್ದು, ಇದನ್ನೆಲ್ಲಾ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ವ್ಯವಸ್ಥೆಗೊಳಿಸಬೇಕು. ಟೋಲ್ ವಿಲೀನದ ಪರಿಣಾಮ ದುಬಾರಿ ಸುಂಕ ನೀಡುವ ಪರಿಸ್ಥಿತಿ ಬಂದಿರುವುದು ಕರಾವಳಿ ಜಿಲ್ಲೆಯ ಜನರ ದೌರ್ಭಾಗ್ಯ ಜನರ ಭಾವನೆ ಕಷ್ಟ ಸುಖಗಳಿಗೆ ಸರಕಾರ ಸ್ಪಂದಿಸುವರೆ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ, ಹಿಂದೆಯೂ ಟೋಲ್ ರದ್ಧತಿ ಹೋರಾಟದಲ್ಲಿ ಪಾಲ್ಗೊಂಡಿದ್ದೆವು ಇನ್ನು ಮುಂದಿನ ದಿನಗಳಲ್ಲಿ ಜನತಾದಳ (ಜಾತ್ಯತೀತ )ಪಕ್ಷದ ವತಿಯಿಂದ ನಮ್ಮದೇ ಆದ ರೀತಿಯಲ್ಲಿ ಉಗ್ರ ಹೋರಾಟವನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆ
Posted On: 27 Nov 2022, 01:46 PM
ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಹರಿಶ್ಚಂದ್ರ ಎಚ್ ಆಚಾರ್ಯ, ಗೌರವ ಸಲಹೆಗಾರರಾಗಿ ಪ್ರಕಾಶ ಎ ಆಚಾರ್ಯ, ಚಂದ್ರಯ ಪಿ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾಗಿ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾಗಿ ಕಾಪು ಜಯರಾಮ ಆಚಾರ್ಯ, ಉಪಾಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ, ಕೆ ವಿವೇಕಾನಂದ ಆಚಾರ್ಯ, ಕಾರ್ಯದರ್ಶಿಯಾಗಿ ದಿನೇಶ್ ಎಸ್ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ ಎಸ್ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ, ಉದಯ ವಿ ಆಚಾರ್ಯ, ಕೋಶಾಧಿಕಾರಿಯಾಗಿ, ಗಂಗಾಧರ ಎಸ್ ಆಚಾರ್ಯ, ಜೊತೆ ಕೋಶಾಧಿಕಾರಿಯಾಗಿ ಸುರೇಶ್ ಆರ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿರಾಜ ಆಚಾರ್ಯ, ಹೇಮಲತಾ ಪಿ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಎಸ್ ಆಚಾರ್ಯ, ಅಶೋಕ ಆರ್ ಆಚಾರ್ಯ, ಮತ್ತು ಸುರೇಂದ್ರ ಎ ಆಚಾರ್ಯ ಆಯ್ಕೆಯಾಗಿರುತ್ತಾರೆ.
ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ
Posted On: 27 Nov 2022, 01:41 PM
ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್ಸಿಸಿ ದಿನಾಚರಣೆಯ ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮ ಏರ್ಪಡಿಸಲಾಯಿತು. ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು. ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ. ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ನಮ್ಮ ಸಂವಿಧಾನ ಪ್ರಪಂಚದಲ್ಲಿ ಉತ್ತಮವಾದ ಸಂವಿಧಾನ ಎಂದರು. ಕ್ಯಾಡೆಟ್ ಸೋನಾಲಿ ಕುಲಾಲ್ ಎನ್ಸಿಸಿ ದಿನದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿ,ಕ್ಯಾಡೆಟ್ ಉಳಿದ್ರಾ ಖುಷಿ ಸಂವಿಧಾನ ದಿನದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಲಾಯ್ ವಿನ್ಸ್ಟನ್ ಫರ್ನಾಂಡಿಸ್, ಸ್ಮಿತಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ, ವಿಜೇತ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ, ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್, ಶೆಟ್ಟಿಗಾರ ಹೇಮಶ್ರೀ ಸುದರ್ಶನ್ , ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್.ಸಿ.ಸಿ ಅಧಿಕಾರಿ ಜಾನ್ ವಿಲಿಯಂ ವೇಗಾಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಸ್ವಾಗತಿಸಿ ಸುಶ್ಮಿತಾ ಎಸ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ವಂದಿಸಿದರು.
ಉಡುಪಿ : ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ವಾರ್ಷಿಕ ಹರಕೆ ಸೇವೆ
Posted On: 27 Nov 2022, 01:00 PM
ಉಡುಪಿ : ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಹಾವಂಜೆ ಗ್ರಾಮದ ಕೊಳಲಗಿರಿ ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಹರಕೆ ಸೇವೆ ಜರಗಿತು. ಈ ಸಂದರ್ಭದಲ್ಲಿ ಪರಿವಾರ ದೈವಗಳಿಗೆ ದರ್ಶನ ಸೇವೆ ಜರಗಿತು. ಗ್ರಾಮದ ಪರ ಊರಿನ ಭಕ್ತಾದಿಗಳು ದೈವದ ಗಂಧ ಪ್ರಸಾದ ಪಡೆದು ದೈವದ ಕೃಪೆಗೆ ಪಾತ್ರರಾದರು. ಗ್ರಾಮದ ಹಿರಿಯರಾದ ಹಾಗೂ ಆಡಳಿತ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ವಿನೋದ್ ಶೆಟ್ಟಿ ದೊಡ್ಡನಗುಡ್ಡೆ, ಸುರೇಶ್ ಶೆಟ್ಟಿ, ಸುಂದರ ಶೆಟ್ಟಿ, ಮನೋರಂಜನ ಹೆಗ್ಡೆ, ಸಂಜೀವ ಸುವರ್ಣ, ದೋಗು ಪೂಜಾರಿ, ದಾದುಪೂಜಾರಿ, ದೂಮಪೂಜಾರಿ, ತೌಡಪೂಜಾರಿ ಮತ್ತು ಗುರಿಕಾರರು ಹಾಗೂ ಸಮಸ್ತರು, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತಿಯಿದ್ದರು.
ಭೃಷ್ಟಾಚಾರದ ಸರಕಾರದಿಂದ ಟೋಲ್ ದರೋಡೆ : ರಮೀಜ್ ಹುಸೇನ್
Posted On: 27 Nov 2022, 12:50 PM
ಪಡುಬಿದ್ರಿ : ಅತ್ಯಂತ ಕಠೋರ ಹೃದಯದ ಜನ ವಿರೋಧಿ ಸರಕಾರದ ನಿರ್ಧಾರ ಜನರ ಬದುಕಿನಲ್ಲಿ ಚೆಲ್ಲಾಟ ನಡೆಸುತ್ತಿದೆ. ಸುರತ್ಕಲ್ ಟೋಲ್ ಅನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕರನ್ನು ಸೇರಿಸಿ ಟೋಲ್ ಹೋರಾಟ ಸಮಿತಿ ಅನಿರ್ಧಿಷ್ಟ ಅವಧಿ ಹಗಲು ರಾತ್ರಿ ಧರಣಿಯನ್ನು ಹಮ್ಮಿಕೊಂಡಿರುವ ಪರಿಣಾಮ ಸುರತ್ಕಲ್ ಟೋಲ್ ನ್ನು ರದ್ದು ಮಾಡುತ್ತೇವೆ ಅನ್ನುತ್ತಿದ್ದ ಜನಪ್ರತಿನಿಧಿಗಳು , ಇಂದು ವಿಲೀನದ ನೆಪ ಹೇಳಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ನಲ್ಲಿ ಪೂರ್ತಿಯಾಗಿ ಸೇರಿಸಿ ಹಣ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈ ದುಪ್ಟಟು ದರವನ್ನು ಜನ ಸಾಮಾನ್ಯರು ಕಟ್ಟುವಂತಹ ಪರಿಸ್ಥಿತಿ ಒದಗಿ ಬಂದಿದೆ. ದಿನದಿಂದ ದಿನಕ್ಕೆ ಗಗನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದಡೆಯಾದರೆ, ಈಗ ಟೋಲ್ ಮೂಲಕ ಜನರ ಸುಲಿಗೆ ನಡೆಸಿ ಜನ ಸಾಮಾನ್ಯನ ಬದುಕಿಗೆ ಕೊಳ್ಳಿ ದೀಪ ಇಡಲು ಸರಕಾರ ತಯಾರಿ ನಡೆಸುತಿದೆ. ಇದೇ ರೀತಿ ಮುಂದುವರಿದಲ್ಲಿ ಅರ್ಥಿಕವಾಗಿ ಕುಗ್ಗಿರುವ ಜನರ ಬದುಕು ಕಂಗಲಾಗುವ ಪರಿಸ್ಥಿತಿಗೆ ಬರುವಂತೆ ಈ ಸರಕಾರ ಮಾಡುತಿದೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್ ಆಗ್ರಹಿಸಿದ್ದಾರೆ. ಈಗಾಗಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಷ್ಕೃತ ದರದಲ್ಲಿ ಡಿಸೆಂಬರ್ 1 ರಿಂದ ಹೆಜಮಾಡಿ ಟೋಲ್ ನಲ್ಲಿ ದುಪ್ಪಟ್ಟು ಟೋಲ್ ವಸೂಲಿ ನಡೆಯಲಿದೆ. ಇದರಿಂದ ಹೆಜಮಾಡಿ, ಪಡುಬಿದ್ರಿ ಆಸುಪಾಸಿನ ಜನರು ಕೇವಲ 6 ಕಿ.ಮಿ ದೂರದ ಮುಲ್ಕಿ ಗೆ ಕಾರಿನಲ್ಲಿ ಹೋಗಿ ಬರಬೇಕಾದರೆ ಹೆಜಮಾಡಿ ಟೋಲ್ ನಲ್ಲಿ 155 ರೂಪಾಯಿಯನ್ನು ಕಟ್ಟಬೇಕಾಗಿದೆ ಇಂತಹ ಹಗಲು ದರೋಡೆಯನ್ನು ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಇದು ಡಬಲ್ ಇಂಜಿನ್ ಸರಕಾರದ ಡಬಲ್ ಲೂಟಿ, ಇಷ್ಟಾದರೂ ಇನ್ನೂ ಬಾಯಿ ಮುಚ್ಚಿ ಕುಳಿತಿರುವ ಸರಕಾರ ನಡೆಸುತ್ತಿರುವ ಸ್ಥಳೀಯ ಶಾಸಕರು, ಸಂಸದರು ಧ್ವನಿ ಎತ್ತದಿರುವುದು ವಿಪರ್ಯಾಸವೇ ಸರಿ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ದುಪ್ಪಟ್ಟು ದರವನ್ನು ರದ್ದು ಗೊಳಿಸದ್ದಿದಲ್ಲಿ ಯುವ ಕಾಂಗ್ರೆಸ್ ಜನ ವಿರೋಧಿ ನಿರ್ಧಾರದ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆಗೆ ನಡೆಸಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ
Posted On: 27 Nov 2022, 12:48 PM
ಕಾರ್ಕಳ : ಇಲ್ಲಿನ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು. ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ ಎಲ್ಲರಿಗೂ ನ್ಯಾಯ ಸಿಗುವಂತೆ ರಚಿಸಲಾಗಿದೆ. ಡಾ. ಬಿ ಆರ್ ಅಂಬೇಡ್ಕರ್ ಅವರನ್ನು ಸಂವಿಧಾನ ರಚನಾ ಕರಡು ಸಮೀತಿಯ ಅಧ್ಯಕ್ಷರನ್ನಾಗಿ ನೇಮಿಸಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಅವರ ಆಶಯಕ್ಕೆ ಅನುಗುಣವಾಗಿ ದೇಶದ ಸಮಗ್ರತೆಯನ್ನು ಗೌರವಿಸಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್, ಶಿವಕುಮಾರ್, ಉಮೇಶ್, ಅಕ್ಷತಾ ಜೈನ್, ರಾಮಕೃಷ್ಣ ಹೆಗಡೆ, ಡಾ ಆದಂ ಶೇಕ್, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್ ಗೌಡ ಉಪಸ್ಥಿತರಿದ್ದರು.
