Updated News From Kaup

ಕಟಪಾಡಿ : ಈ ಬಾರಿ ಕಾಂತಾರ ಇಫೆಕ್ಟ್ ನಲ್ಲಿ ರಿಕ್ಷಾ ಚಾಲಕ ಜಯಕರ್

Posted On: 26-10-2022 02:02PM

ಕಟಪಾಡಿ : ಆಟೋ ಚಾಲಕ ಜಯಕರ್ ಆಯುಧ ಪೂಜೆಯ ಪ್ರಯುಕ್ತ ರಿಕ್ಷಾಕ್ಕೆ ಕಾಂತಾರ ಸಿನಿಮಾ ಶೈಲಿಯಲ್ಲಿ ಸಿಂಗರಿಸಿ ತುಳುನಾಡಿನ ಕಂಬಳ ಮತ್ತು ಕಾಡು ಹಾಗು ಜನರ ನಡುವಿನ ಸಂಬಂಧದ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ.

ಕಾಪು : ಬಿಜೆಪಿ‌ ಒಬಿಸಿ ಮೋರ್ಚಾ ವತಿಯಿಂದ ವಾಹನ ಪೂಜಾ ಕಾರ್ಯಕ್ರಮ

Posted On: 26-10-2022 01:18PM

ಕಾಪು : ಹೊಸ ಮಾರಿಗುಡಿಯಲ್ಲಿ ಕಾಪು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ವಾಹನ ಪೂಜೆ ಕಾರ್ಯಕ್ರಮವನ್ನು ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಬುಧವಾರ ಉದ್ಘಾಟಿಸಿದರು.

ಕಾಪು : ಶ್ರೀ ಲಕ್ಷ್ಮಿ ಜನಾರ್ಧನ ದೇವಳದಲ್ಲಿ ಸಾರ್ವಜನಿಕ ಗೋಪೂಜೆ, ವಾಹನ ಪೂಜೆ

Posted On: 26-10-2022 12:45PM

ಕಾಪು : ಇಲ್ಲಿನ ಮಹತೋಭಾರ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದಲ್ಲಿ ಸಾರ್ವಜನಿಕ ಗೋಪೂಜೆ ಮತ್ತು ವಾಹನ ಪೂಜೆಯು ಬುಧವಾರ ನೆರವೇರಿತು.

ಕಳತ್ತೂರಿನಲ್ಲಿ ಉಚಿತ ನೇತ್ರ ತಪಾಸಣಾ ಮತ್ತು ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ

Posted On: 25-10-2022 09:10PM

ಕಾಪು : ಕುಶಲ ಶೇಖರ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಧ್ಯಕ್ಷರಾದ ಕಳತ್ತೂರು ಶೇಖರ ಬಿ. ಶೆಟ್ಟಿ ನೇತ್ರತ್ವದಲ್ಲಿ ಪ್ರಸಾದ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ,ಅಂಧತ್ವ ನಿವಾರಣ ವಿಭಾಗ ಉಡುಪಿ ಇವರ ಸಹಯೋಗದೊಂದಿಗೆ ಉಚಿತ ನೇತ್ರ ತಪಾಸಣಾ ಹಾಗೂ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಆದಿತ್ಯವಾರ ಕಳತ್ತೂರಿನ ಕುಶಲ ಶೇಖರ ಶೆಟ್ಟಿ ಇಂಟರ್ ನ್ಯಾಷನಲ್ ಸಭಾಂಗಣದಲ್ಲಿ ನಡೆಯಿತು.

ಶಿರ್ವದ ಕಡಂಬುವಿನಲ್ಲಿ ರಾರಾಜಿಸುತ್ತಿದೆ ಕೆ ಕೆ ಫ್ರೆಂಡ್ಸ್ ರಚಿಸಿದ ಬೃಹತ್ ಗೂಡುದೀಪ

Posted On: 25-10-2022 08:59PM

ಶಿರ್ವ : ಕೆ ಕೆ ಫ್ರೆಂಡ್ಸ್ ಕಡಂಬು ಇದರ ವತಿಯಿಂದ ದೀಪಾವಳಿಯ ಪ್ರಯುಕ್ತ ಕಡಂಬು ಮೈದಾನದಲ್ಲಿ ಸೋಮವಾರ ಬೃಹತ್ ಗೂಡುದೀಪ ಅಳವಡಿಸಿ ದೀಪಾವಳಿ ಆಚರಿಸಲಾಯಿತು.

ಪಡುಬಿದ್ರಿ : ಕೊರಗಜ್ಜ ಕ್ಷೇತ್ರದ ಜೀರ್ಣೋದ್ಧಾರದ ನೀಲ ನಕ್ಷೆ, ವಿಜ್ಞಾಪನಾ ಪತ್ರ ಬಿಡುಗಡೆ

Posted On: 24-10-2022 06:10PM

ಪಡುಬಿದ್ರಿ : ಪ್ರೇರಣೆಯಿಲ್ಲದೆ ಯಾವುದೇ ಕಾರ್ಯ ನಡೆಯದು. ಅದು ವಿಜ್ಞಾಪನ ಪತ್ರದ ಮೂಲಕ ಈ ಸಮಾಜಕ್ಕೆ ತಲುಪಲಿದೆ. ಸಂಕಲ್ಪವು ಮಹಾ ಸಂಕಲ್ಪವಾಗಿ ಮೂಡಿದಾಗ ಸಂಪತ್ತು ಕ್ರೋಢೀಕರಣ ಸಾಧ್ಯ. ಮನುಷ್ಯ ಪ್ರಯತ್ನ ಜತೆಗೆ ದೈವಾನುಗ್ರಹ ಇದ್ದರೆ ಕಾರ್ಯ ಸಾಧ್ಯ. ಈ ಸಾನಿಧ್ಯದ ಸಂಕಲ್ಪ ಮಹಾ ಸಂಕಲ್ಪವಾಗಿ ಜೀರ್ಣೋದ್ಧಾರವಾಗಲಿ ಎಂದು ವಜ್ರದೇಹಿ ಮಠ ಗುರುಪುರದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಹೇಳಿದರು. ಅವರು ಕಾಪು ತಾಲೂಕಿನ ಸಾವಿರಾರು ವರ್ಷಗಳ ಇತಿಹಾಸವಿರುವ ಪಡುಬಿದ್ರಿಯ ಶ್ರೀ ಆದಿಶಕ್ತಿ ಆದಿ ಮಾಯೆ ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಅಕ್ಟೋಬರ್ 22ರಂದು ಕ್ಷೇತ್ರದ ಜೀರ್ಣೋದ್ದಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿದರು.

ಹೆಜಮಾಡಿ : 4 ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗಳಿಗೆ ಶಾಸಕರಿಂದ ಗುದ್ದಲಿ ಪೂಜೆ

Posted On: 24-10-2022 03:59PM

ಹೆಜಮಾಡಿ : ಇಲ್ಲಿನ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 4 ಕೋಟಿ ರೂ.ಗಳ ವಿವಿಧ ಕಾಮಗಾರಿಗಳಿಗೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.

ಬಂಟಕಲ್ಲು: ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರೀಯ ರೋಟರಿಯಿಂದ ನೇಷನ್ ಬಿಲ್ಡರ್ ಪ್ರಶಸ್ತಿ

Posted On: 24-10-2022 03:33PM

ಬಂಟಕಲ್ಲು : ಇಲ್ಲಿನ ಶ್ರೀ ದುರ್ಗಾಪರಮೇಶ್ವರಿ ಹಿರಿಯ ಪ್ರಾರ್ಥಮಿಕ ಶಾಲೆಯ ಗೌರವ ಶಿಕ್ಷಕಿ ಸಂಗೀತ ಪಾಟ್ಕರ್ ರವರಿಗೆ ಅಂತರಾಷ್ಟ್ರಿಯ ರೋಟರಿಯು, ಶಿಕ್ಷಕ ವೃತ್ತಿಯಲ್ಲಿರುವ ಆಯ್ದ ಶಿಕ್ಷಕರಿಗೆ ಕೊಡಮಾಡುವ ನೇಷನ್ ಬಿಲ್ಡರ್ ಪ್ರಶಸ್ತಿಯನ್ನು ನೀಡಲಾಯಿತು.

ಕಟಪಾಡಿ : ಏಣಗುಡ್ಡೆಯಲ್ಲಿ ಮುಳ್ಳಮುಟ್ಟೆ ಆಚರಣೆ

Posted On: 24-10-2022 03:27PM

ಕಟಪಾಡಿ : ಕಾಪು ತಾಲೂಕಿನ ಕಟಪಾಡಿಯ ಏಣಗುಡ್ಡೆಯ ನೀಚ ದೈವಸ್ಥಾನದ ಬಳಿ ದೀಪಾವಳಿಯಂದು ಪ್ರಾತ: ಕಾಲ ಮುಳ್ಳಮುಟ್ಟೆ ಸುಡುವ ಕಾರ್ಯಕ್ರಮ ಜರಗಿತು.

ಕಾಪು : ಕಾಂಗ್ರೆಸ್ ವತಿಯಿಂದ ತುಡರ ಪರ್ಬದ ಗಮ್ಮತ್ ; ಸನ್ಮಾನ ; ಅನಾಥಾಶ್ರಮಗಳಿಗೆ ಉಡುಪು ವಿತರಣೆ

Posted On: 24-10-2022 03:03PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್‌ ಸಮಿತಿ (ದಕ್ಷಿಣ) ವಿನಯ ಕುಮಾರ್ ಸೊರಕೆ ಉಪಸ್ಥಿತಿಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ತುಡರ ಪರ್ಬದ ಗಮ್ಮತ್ 2022 ಇದರ ಅಂಗವಾಗಿ ಸೋಮವಾರ ರಾಜೀವ್ ಭವನ, ಕಾಪು ಇಲ್ಲಿ ವಿವಿಧ ಸಮುದಾಯಗಳ ಅನಾಥರಿಗೆ,ನಿರಾಶ್ರಿತರಿಗೆ ಉಡುಪುಗಳನ್ನು, ಸಿಹಿ ತಿಂಡಿ ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತ ಮೋಹನ್ ನಂಬಿಯಾರ್ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹಿಂದೂ, ಮುಸ್ಲಿಂ, ಕ್ರೈಸ್ತರು ಎಲ್ಲರೂ ಒಂದೇ. ಎಲ್ಲರ ಮನಸ್ಸಿನಲ್ಲಿ ನಾವೆಲ್ಲ ಒಂದೇ ಎಂಬ ಸಂದೇಶ ಹುಟ್ಟಿ ಎಲ್ಲಾ ಕಡೆ ಪಸರಿಸಬೇಕಿದೆ ಎಂದರು.