Updated News From Kaup

ಪಡುಬಿದ್ರಿ : ಕಾಪು ಶಾಸಕರಿಂದ ಕಂಚಿನಡ್ಕದಲ್ಲಿ ರಸ್ತೆ ಕಾಮಗಾರಿ ಉದ್ಘಾಟನೆ ; ಚರಂಡಿ ನಿರ್ಮಾಣಕ್ಕೆ ಗುದ್ದಲಿ ಪೂಜೆ

Thumbnail
Posted On: 14 Jul 2025, 06:51 PM

ಪಡುಬಿದ್ರಿ : ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿನಡ್ಕ ಮಿಂಚಿನ ಬಾವಿ ಸಂಪರ್ಕ ರಸ್ತೆ ಕಾಂಕ್ರಿಟೀಕರಣಕ್ಕೆ 6 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ಸೋಮವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ನೆರವೇರಿಸಿದರು. ಇದೇ ಸಂದರ್ಭ 5 ಲಕ್ಷ ರೂಪಾಯಿ ವೆಚ್ಚದಲ್ಲಿ ಕಂಚಿನಡ್ಕ ಮಮ್ತಾಜ್ ಮನೆ ಬಳಿ ರಸ್ತೆ ಚರಂಡಿ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಸದಸ್ಯರಾದ ರವಿ ಶೆಟ್ಟಿ, ಅಶೋಕ್ ಪೂಜಾರಿ, ಶೋಭಾ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ತಾಲೂಕು ಪಂಚಾಯತ್ ಮಾಜಿ ಸದಸ್ಯರಾದ ನೀತಾ ಗುರುರಾಜ್, ಸ್ಥಳೀಯರಾದ ಸಂತೋಷ್, ಕೃಷ್ಣ ಉಪಸ್ಥಿತರಿದ್ದರು.

ಕಾಪು : ಕಾಂಗ್ರೆಸ್ ಪಕ್ಷದಿಂದ ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ತಹಶಿಲ್ದಾರ್‌ ಕಛೇರಿ ಎದುರು ಪ್ರತಿಭಟನೆ

Thumbnail
Posted On: 14 Jul 2025, 06:43 PM

ಕಾಪು : ಕೇಂದ್ರ ಸರಕಾರದ ವೈಫಲ್ಯಗಳ ವಿರುದ್ಧ ಸೋಮವಾರ ಕಾಪು ತಶಿಲ್ದಾರ್‌ ಕಛೇರಿ ಎದುರು ಮಾಜಿ ಸಚಿವ ವಿನಯಕುಮಾರ್‌ ಸೊರಕೆ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ಪ್ರತಿಭಟನಾ ಸಭೆಗು ಮುನ್ನ ಕಾಪು ರಾಜೀವ ಭವನದಿಂದ ತಹಶಿಲ್ದಾರ್‌ ಕಛೇರಿವರೆಗೆ ಕಾಂಗ್ರೆಸ್‌ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಮೆರವಣಿಗೆಯಲ್ಲಿ ಸಾಗಿ ಬಂದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ, ಪಂಚ ಗ್ಯಾರಂಟಿಯ ಮೂಲಕ ರಾಜ್ಯದ ಕಾಂಗ್ರೆಸ್ ಸರಕಾರ ಜನ ಮನ ಗೆದ್ದಿದೆ. ಇದನ್ನು ಸಹಿಸದ ಬಿಜೆಪಿ ಪಕ್ಷದವರು ಏನು ಮಾಡಲು ತೋಚದೆ ಕಾಂಗ್ರೆಸ್ ಪಕ್ಷದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕಾಪು ಶಾಸಕರು ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ಕೊಡಿಸುವ ಕಾರ್ಯ ಮಾಡಲಿ. ಹದಿನಾರು ಪಂಚಾಯತ್ ಗಳಲ್ಲಿ ಬಿಜೆಪಿಯವರ ಸುಳ್ಳು ಮತ್ತು ಕೇಂದ್ರ ಸರಕಾರದ ವೈಫಲ್ಯದ ವಿರುದ್ಧ ಪ್ರತಿಭಟನೆ ಮಾಡುವುದರ ಮುಖೇನ ನೈಜತೆಯನ್ನು ಜನತೆಯ ಮುಂದೆ ಇಡುವ ಕೆಲಸವನ್ನು ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಹೇಳಿದರು. ಈ ಸಂದರ್ಭ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಂತಲತಾ ಶೆಟ್ಟಿ, ಪಡುಬಿದ್ರಿ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್‌ ನಿಯಾಝ್, ನವೀನ್‌ಚಂದ್ರ ಸುವರ್ಣ, ಎಂಎ ಗಫೂರ್‌, ಗಣೇಶ್‌ ಕೋಟ್ಯಾನ್‌ ಪಡುಬಿದ್ರಿ, ಶರ್ಫುದ್ಧೀನ್‌ ಶೇಖ್‌, ನವೀನ್‌ ಎನ್‌ ಶೆಟ್ಟಿ, ಕಾಪು ದಿವಾಕರ ಶೆಟ್ಟಿ ಮತ್ತು ಕಾಂಗ್ರೆಸ್ ಸದಸ್ಯರುಗಳು ಉಪಸ್ಥಿತರಿದ್ದರು.

ISPRL ಪಾದೂರು ಘಟಕದಿಂದ : ಪ್ರಕೃತಿ ರಮಣೀಯವಾಗಿರುವ ಧನಸ್ಸು ತೀರ್ಥ ಸ್ವಚ್ಛತೆ

Thumbnail
Posted On: 13 Jul 2025, 05:30 PM

ಕಾಪು : ಇನ್ನಂಜೆ ಗ್ರಾಮದ ಮಡುಂಬು ಧನಸ್ಸು ತೀರ್ಥ, ರೆಂಜಾಲ ಪಾದೆ ಇಲ್ಲಿ ISPRL ಪಾದೂರು ಘಟಕದಿಂದ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಾಲಿನಿ ಶೆಟ್ಟಿ ಉಪಸ್ಥಿತರಿದ್ದರು. ಗ್ರಾಮಸ್ಥರ ಆಗ್ರಹ : ಧನಸ್ಸು ತೀರ್ಥ ಎಂಬುದು ಪವಿತ್ರ ತೀರ್ಥಬಾವಿಯನ್ನು ಹೊಂದಿದ್ದು, ಕುಂಜಾರು ಗಿರಿಯಿಂದ ಗುರುತಿಸಲ್ಪಡುವ ನಾಲ್ಕು ತೀರ್ಥಗಗಳಲ್ಲಿ ಇದೂ ಒಂದು, ಕಾಪು ರಾಷ್ಟ್ರೀಯ ಹೆದ್ದಾರಿಯಿಂದ 3 ಕಿಲೋಮೀಟರ್ ಅಂತರದಲ್ಲಿ ಇದ್ದು, ಶಂಕರಪುರ ಅಥವಾ ಬಂಟಕಲ್ಲಿಗೂ 3 ಕಿಲೋಮೀಟರ್ ಅಂತರದಲ್ಲಿರುವ ಈ ಬೆಟ್ಟವು ಪ್ರವಾಸಿಗರನ್ನು ಆಕರ್ಷಿಸಿ ಕೈ ಬೀಸಿ ತನ್ನತ್ತ ಕರೆಯುತ್ತಿದೆ, ಪ್ರವಾಸೋದ್ಯಮಕ್ಕೆ ಕೊಡುಗೆಯನ್ನು ನೀಡಬಲ್ಲ ಈ ಧನಸ್ಸು ತೀರ್ಥಕ್ಕೆ ಸಾಗಬೇಕಾದರೆ ಮಣ್ಣಿನ ರಸ್ತೆಯಲ್ಲೇ ಸಾಗಬೇಕಾಗಿರುವುದು ದುರದೃಷ್ಟಕರ ಸಂಗತಿ, ಇನ್ನಾದರೂ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ, ಸೂಕ್ತ ರಸ್ತೆಯ ವ್ಯವಸ್ಥೆಯನ್ನು ಮಾಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಾಪು ಶ್ರೀ ಹೊಸ ಮಾರಿಗುಡಿಗೆ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Thumbnail
Posted On: 13 Jul 2025, 04:57 PM

ಕಾಪು : ಕರ್ನಾಟಕ ಸರಕಾರದ ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವರಾದ ರಾಮಲಿಂಗ ರೆಡ್ಡಿಯವರು ಭಾನುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕರಾದ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅವರು ಶ್ರೀದೇವಿಯಲ್ಲಿ ಪ್ರಾರ್ಥಿಸಿ ಅಮ್ಮನ ಅನುಗ್ರಹ ಪ್ರಸಾದವನ್ನು ನೀಡಿದರು. ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಗೌರವಿಸಲಾಯಿತು. ನಂತರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು ಸರಕಾರದ ಅನುದಾನವಿಲ್ಲದೆ ದಾನಿಗಳ ಮತ್ತು ಭಕ್ತರ ನೆರವಿನಿಂದ ಇಷ್ಟು ದೊಡ್ಡ ದೇವಸ್ಥಾನ ನಿರ್ಮಾಣ ಮಾಡಿರುವುದು ಬಹಳ ಸಂತೋಷ. ಇಲ್ಲಿನ ವಾಸ್ತುಶಿಲ್ಪ ಬಹಳಷ್ಟು ಚೆನ್ನಾಗಿ ಮೂಡಿಬಂದಿದೆ ಎಂದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ದೇವಳದ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಮಾಜಿ ಸಚಿವ ಮತ್ತು ಗೌರವಾಧ್ಯಕ್ಷ ವಿನಯ ಕುಮಾರ್ ಸೊರಕೆ, ಮಾಜಿ ಸಚಿವ ಅಭಯ ಚಂದ್ರ ಜೈನ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕಳ, ಉಡುಪಿ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಮಂಜುಳಾ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಅಧ್ಯಕ್ಷ ಭಾಸ್ಕರ ದೇವಾಡಿಗ, ಕಾಪು ತಾಲೂಕು ತಹಶಿಲ್ದಾರ್ ಪ್ರತಿಭಾ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ದೇವಳದ ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಕಾಪು ದಿವಾಕರ ಶೆಟ್ಟಿ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿ ಅಧ್ಯಕ್ಷ ಯೋಗೀಶ್ ವಿ. ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರುಗಳಾದ ಮಾಧವ ಆರ್ ಪಾಲನ್, ಶೇಖರ ಸಾಲ್ಯಾನ್, ಮನೋಹರ ರಾವ್ ಕಲ್ಯ, ರವೀಂದ್ರ ಮಲ್ಲಾರ್, ಜಯಲಕ್ಷ್ಮಿ ಸುರೇಶ್ ಶೆಟ್ಟಿ, ಚರಿತ ದೇವಾಡಿಗ, ನವದುರ್ಗಾ ಲೇಖನ ಯಜ್ಞ ಸಮಿತಿಯ ಮಹಿಳಾ ವಿಭಾಗದ ಅಧ್ಯಕ್ಷೆ ಸಾವಿತ್ರಿ ಗಣೇಶ್, ಕಾಪು ಪುರಸಭೆ ನಾಮ ನಿರ್ದೇಶಿತ ಸದಸ್ಯ ದೇವರಾಜ್ ಕೋಟ್ಯಾನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ವಿದ್ಯಾರ್ಜನೆಗೆ ಸಹಾಯ ಮಾಡುವುದು ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ : ಅಶೋಕ್ ಸಾಲ್ಯಾನ್

Thumbnail
Posted On: 06 Jul 2025, 09:33 PM

ಪಡುಬಿದ್ರಿ: ಬಡತನ ಮತ್ತು ಹಣದ ಕೊರತೆಯ ಕಾರಣದಿಂದಾಗಿ ಯಾರೂ ಶಿಕ್ಷಣದಿಂದ ವಂಚಿತರಾಗಬಾರದು. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ವಿದ್ಯೆ ಲಭಿಸಬೇಕು. ವಿದ್ಯಾರ್ಜನೆಗೆ ಸಹಾಯ ಮಾಡುವುದರಿಂದ ದೇಶದ ಸುಭದ್ರ ಭವಿಷ್ಯಕ್ಕೆ ಬುನಾದಿ ಇಟ್ಟಂತೆ ಎಂದು ಪಡುಬಿದ್ರಿ ಕಾಡಿಪಟ್ಣ ಮೊಗವೀರ ಮಹಾಸಭಾದ ಅಧ್ಯಕ್ಷ ಅಶೋಕ್ ಸಾಲ್ಯಾನ್ ಹೇಳಿದರು. ಅವರು ಕಾಡಿಪಟ್ಣದ ಶ್ರೀ ವಿಷ್ಣು ಭಜನಾ ಮಂದಿರದ ಆವರಣದಲ್ಲಿ ಭಾನುವಾರ ಕಾಡಿಪಟ್ಣ ಮೊಗವೀರ ಮಹಾಸಭಾ ಮುಂಬೈ ಇವರ ಸಹಕಾರದೊಂದಿಗೆ ನಡೆದ ವಿದ್ಯಾರ್ಥಿವೇತನ ವಿತರಣಾ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಉಡುಪಿ ಜಿಲ್ಲಾ ಮೀನುಗಾರ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷ ವಿಶ್ವಾಸ್ ಅಮೀನ್ ಮಾತನಾಡಿ, ವಿದ್ಯಾರ್ಥಿವೇತನದ ಸಹಾಯ ಪಡೆದುಕೊಳ್ಳುವ ಪ್ರತಿಯೊಬ್ಬರೂ ಭವಿಷ್ಯದಲ್ಲಿ ಸುಂದರ ಸಮಾಜ ನಿರ್ಮಾಣಕ್ಕೆ ಅಣಿಯಾಗಬೇಕು. ಯುವಕ ಯುವತಿ ವೃಂದದಂತಹ ಸಂಘಟಿತ ವೇದಿಕೆ ನಿರ್ಮಾಣವಾಗಬೇಕು. ಇದರಿಂದ ಶೈಕ್ಷಣಿಕವಾಗಿ ಮಾತ್ರವಲ್ಲದೆ ಮಕ್ಕಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಈ ಸಂದರ್ಭ ಊರಿನ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಿಸಲಾಯಿತು. ಕಾಡಿಪಟ್ಣ ಮೊಗವೀರ ಮಹಾಸಭಾದ ಕೋಶಾಧಿಕಾರಿ ಅಶೋಕ್ ಬಂಗೇರ, ಕೆ.ಎನ್.ವಿ.ಪಿ ಸದಸ್ಯ ಸುಧಾಕರ್ ಸಾಲ್ಯಾನ್, ಮಹಿಳಾ ಸಭಾ ದ ಅಧ್ಯಕ್ಷೆ ಸರಳಾ ಕಾಂಚನ್, ಮೊಗವೀರ ಮಹಿಳಾ ಮಹಾಜನ ಸಂಘದ ಉಪಾಧ್ಯಕ್ಷೆ ಮಾಲತಿ ಸಾಲ್ಯಾನ್, ಗುರು ಪ್ರಸಾದ್, ಶರತ್ ಕರ್ಕೇರ, ನಾರಾಯಣ ಕಕೇರ, ಉದಯ ಸಾಲ್ಯಾನ್, ಸತೀಶ್ ಕೋಟ್ಯಾನ್, ಜೀವನ್ ಎಸ್ ಸುವರ್ಣ, ಮಿಥುನ್ ಸಾಲ್ಯಾನ್, ದೇವರಾಜ್ ಬಂಗೇರ, ಅಕ್ಷಿತ್ ಕರ್ಕೇರ, ಆಡಳಿತ ಮಂಡಳಿ ಸದಸ್ಯರು ಮತ್ತು ಊರಿನ ಸದಸ್ಯರು ಉಪಸ್ಥಿತರಿದ್ದರು. ಕಾರ್ಯದರ್ಶಿ ಸಂತೋಷ್ ಪಡುಬಿದ್ರಿ ಸ್ವಾಗತಿಸಿ, ನಿರೂಪಿಸಿದರು.

ಅಂಗಾಗ ಕಸಿ ಚಿಕಿತ್ಸೆಯಲ್ಲಿ ಶ್ರೇಷ್ಠತೆ ಸಾಧಿಸಿ ಡಾ.ಸುರೇಶ ರಾವ್ ಗೆ ಹುಟ್ಟೂರ ಅಭಿನಂದನೆ

Thumbnail
Posted On: 04 Jul 2025, 06:09 AM

ಕಾಪು : ಮಾನವ ದೇಹದ ಅಮೂಲ್ಯ ಅತ್ಯಗತ್ಯ "ಅಂಗಾಂಗಳ ಕಸಿ ಶಸ್ತ್ರಚಿಕಿತ್ಸೆ"ಯ ವಿಭಾಗದಲ್ಲಿ ಅಂತಾರಾಷ್ಟ್ರೀಯ ಶ್ರೇಷ್ಠತೆಯನ್ನು ಸುಮಾರು ನಾಲ್ನೂರು ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೂಲಕ ಪ್ರಮಾಣಪಡಿಸಿದ ಡಾ.ಕೆ.ಜಿ.ಸುರೇಶ ರಾವ್ ಅವರಿಗೆ ಹುಟ್ಟೂರಿನಲ್ಲಿ ಅಭಿಮಾನ ಪೂರ್ವಕ ಗೌರವಾರ್ಪಣೆ ನೆರವೇರಿತು. ಕೆಮುಂಡೇಲಿನ‌ ಶ್ರೀ ಪಾಂಡುರಂಗ ಭಜನಾ ಮಂಡಳಿ,ಕೆಮುಂಡೇಲು ಅನುದಾನಿತ ಹಿ. ಪ್ರಾಥಮಿಕ ಶಾಲೆಹಾಗೂ ಹಳೆವಿದ್ಯಾರ್ಥಸಂಘ ಮತ್ತು ಕೆಮುಂಡೇಲು,ಉಳ್ಳೂರು ಗ್ರಾಮಸ್ಥರು ಈ ಕಾರ್ಯಕ್ರಮವನ್ನು ಕೆಮುಂಡೇಲು ಭಜನಾ ಮಂಡಳಿಯಲ್ಲಿ ಸಂಘಟಿಸಿದ್ದರು. ಮಹತ್ತನ್ನು ಸಾಧಿಸುವ ಸಂಕಲ್ಪ ವ್ಯಕ್ತಿಜೀವನವನ್ನು ಸುಸಂಪನ್ನಗೊಳಿಸಿ ದೇಶದ ಆಸ್ತಿಯನ್ನಾಗಿಸಿ ಸಮಾಜದಲ್ಲಿ ಬಹುಮಾನ್ಯತೆಯನ್ನು ಪಡೆಯುವ ಎತ್ತರಕ್ಕೆ ಏರಿಸುತ್ತದೆ ಎಂಬುದಕ್ಕೆ ನಮ್ಮ ಸುರೇಶ ರಾವ್ ಪ್ರತ್ಯಕ್ಷ ಸಾಕ್ಷಿ, ಯುವ ಸಂದಣಿಗೆ ಇವರ ಜೀವನ ವಿಧಾನ ಒಂದು ಆದರ್ಶ‌ - ಮಾರ್ಗದರ್ಶಿ ಎಂದು ಹುಟ್ಟೂರಿನ ಕುವರನನ್ನು ಶ್ಲಾಘಿಸಿ "ಅಭಿನವ ಧನ್ವಂತರಿ" ಉಪಾದಿಯನ್ನಿತ್ತು ಸಮ್ಮಾನಿಸಲಾಯಿತು.ಸುರೇಶ ರಾವ್ ಪತ್ನಿ ನೇತ್ರತಜ್ಞೆ ಡಾ.ಕಲ್ಪನಾ ಜೊತೆಗಿದ್ದರು. ಭಜನಾ ಮಂಡಳಿಯ ಅಧ್ಯಕ್ಷ ಚಂದ್ರಶೇಖರ ಶೆಟ್ಟಿಗಾರ್ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ‌ ಯುಎಸ್ ಎಎಂ ಎಸ್ ಅಕಾಡೆಮಿಕ್ಸ್ ಆ್ಯಂಡ್ ಟ್ರೈನಿಂಗ್ ನ ನಿರ್ದೇಶಕ ಡಾ.ಸಿ.ಕೆ.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿದರು. ನಿವೃತ್ತ ಪ್ರಾಂಶುಪಾಲ ರಮೇಶ ಹಂದೆ,ಎನ್ ಎಸ್ ಯು ಎಂ ಪ.ಪೂ.ಕಾಲೇಜಿನ‌ ಪ್ರಾಚಾರ್ಯ ಪ್ರಕಾಶ ಶೆಣೈ ಅವರು ಡಾ.ಸುರೇಶ ರಾವ್ ಅವರ ಸಾಧನೆಗಳನ್ನು ವಿವರಿಸಿ ವಿದ್ಯಾರ್ಥಿ ಜೀವನದ ದಿನಗಳನ್ನು ನೆನಪಿಸಿಕೊಂಡು ಅಭಿನಂದಿಸಿದರು.ಪುತ್ತಿಗೆ ಮಠದ ದಿವಾನರಾದ ನಾಗರಾಜ ಆಚಾರ್ಯ ಆಶೀರ್ವದಿಸಿದರು. ನಿವೃತ್ತ ಪಾಂಶುಪಾಲ ಬಿ.ಆರ್. ನಾಗರತ್ನ, ಕೆಮುಂಡೇಲು ಶಾಲೆಯ ಮುಖೋಪಾಧ್ಯಾಯ ಜಗನ್ನಾಥ ಶೆಟ್ಟಿ, ಭಜನಾ ಮಂಡಳಿಯ ಅರ್ಚಕ ಶ್ರೀಪತಿ ಆಚಾರ್ಯ, ಬಾಲಕೃಷ್ಣ ರಾವ್, ಕೆ.ಎಲ್.ಕುಂಡಂತಾಯ ಉಪಸ್ಥಿತರಿದ್ದರು. ಭಜನಾ ಮಂಡಳಿಯ ಕಾರ್ಯದರ್ಶಿ ಕೃಷ್ಣಾನಂದ ರಾವ್ ಪ್ರಸ್ತಾವಿಸಿ,ಸ್ವಾಗತಿಸಿದರು.ಹರೀಶ ಕೋಟ್ಯಾನ್ ಡಾ.ಸುರೇಶ ರಾವ್ ಅವರಿಗೆ ನೀಡಲಾದ "ಅಭಿನಂದನೆಯ ಆಲೇಖ"ವನ್ನು ವಾಚಿಸಿದರು, ಪ್ರಾಧ್ಯಾಪಕ ದೇವಿಪ್ರಸಾದ ಬೆಳ್ಳಿಬೆಟ್ಟು ಕಾರ್ಯಕ್ರಮ ನಿರೂಪಿಸಿದರು. ಹರೀಶ್ ಅವರು ವಂದಿಸಿದರು.

ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು : ಪಾಯಸ ಸೇವೆಗೆ ಚಾಲನೆ

Thumbnail
Posted On: 04 Jul 2025, 05:58 AM

ಕಾಪು : ಶ್ರೀ ಅಯ್ಯಣ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಡುಕಳತ್ತೂರು ಶಾಲೆಯಲ್ಲಿ ಶ್ರೀ ಸಾಯಿ ಸಾಂತ್ವಾನ ಮಂದಿರ ಟ್ರಸ್ಟ್, ಶಂಕರಪುರ ವತಿಯಿಂದ ಶಾಲಾಮಕ್ಕಳಿಗೆ ಪಾಯಸ ಸೇವೆ ನೀಡಲಾಯಿತು. ಶ್ರೀ ಸಾಯಿ ಈಶ್ವರ್ ಗುರೂಜಿಯವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾಯಿ ಮಂದಿರದ ಟ್ರಸ್ಟಿಗಳಾದ ಗೀತಾಂಜಲಿ ಸುವರ್ಣ, ಲಾವಣ್ಯ, ಶಾಲಾ ಸಂಚಾಲಕ ಪ್ರವೀಣ್ ಕುಮಾರ್ ಗುರ್ಮೆ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅನಿಲ್ ಕುಮಾರ್ ಶೆಟ್ಟಿ, ಹಳೆ ವಿದ್ಯಾರ್ಥಿ ಕಿಶನ್ ಶೆಟ್ಟಿ, ಎಸ್ ಡಿ ಎಂ ಸಿ ಅಧ್ಯಕ್ಷೆ ಲಕ್ಷ್ಮೀ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಸಂಧ್ಯಾ, ಶಾಲಾ ಶಿಕ್ಷಕರು, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೌಮ್ಯ ರೆಡ್ಡಿ ಭೇಟಿ

Thumbnail
Posted On: 03 Jul 2025, 08:34 PM

ಪಡುಬಿದ್ರಿ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್, ಗಿರಿಧರ್ ಸುವರ್ಣ, ಪ್ರಧಾನ ಅರ್ಚಕರಾದ ರಾಘವೇಂದ್ರ ಉಪಾಧ್ಯಾಯ, ಕಾಂಗ್ರೆಸ್ ಮುಖಂಡರಾದ ಪ್ರಸಾದ್ ರಾಜ್ ಕಾಂಚನ್, ವಿಶ್ವಾಸ್ ಅಮೀನ್, ದಿನೇಶ್ ಎರ್ಮಾಳ್, ಕಾಪು ನಾಲ್ಕು ಮೊಗವೀರ ಮಹಿಳಾ ಸಂಘದ ಅಧ್ಯಕ್ಷೆ ಸುಗುಣ ಎಸ್. ಕರ್ಕೇರ, ರಚನ್ ಸಾಲ್ಯಾನ್, ದೇವಳದ ಪ್ರಭಂದಕರಾದ ಸತೀಶ್ ಅಮೀನ್ ಪಡುಕರೆ, ಕಾಪು ಮಹಿಳಾ ಸಂಘದ ಸದಸ್ಯೆಯರು ಉಪಸ್ಥಿತರಿದ್ದರು.

ಪ್ರಭಾಕರ್ ಎಸ್ ಪೂಜಾರಿ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಆಯ್ಕೆ

Thumbnail
Posted On: 02 Jul 2025, 09:48 AM

ಕಾಪು : ಪ್ರತಿಷ್ಠಿತ ನಾರಾಯಣಗುರು ಕೋ ಆಪರೇಟಿವ್ ಬ್ಯಾಂಕ್ ಉಡುಪಿಯ ನಿರ್ದೇಶಕರಾಗಿ‌ ಹೋಟೆಲ್ ಉದ್ಯಮಿ‌ ಪ್ರಭಾಕರ ಎಸ್ ಪೂಜಾರಿ ಆಯ್ಕೆಯಾಗಿದ್ದಾರೆ. ಇವರು ಕಾಪು ಬಿಲ್ಲವರ ಸಹಾಯಕ ಸಂಘದ ಗೌರವಾಧ್ಯಕ್ಷರಾಗಿ, ಹೋಟೆಲ್ ಶಿವ ಸಾಗರ್ ಇದರ ಮಾಲಕರೂ ಆಗಿದ್ದು, ಹಲವಾರು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ.

ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಅವಿರೋಧ ಆಯ್ಕೆ

Thumbnail
Posted On: 01 Jul 2025, 06:10 PM

ಕಾಪು : ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ಅಧೀನದ ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ದೇವಸ್ಥಾನದ ನೂತನ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ. ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಗೀತಾ ಉಳಿಯಾರು ಆಯ್ಕೆಯಾಗಿದ್ದಾರೆ.