Updated News From Kaup

ಶಿರ್ವ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ತರಬೇತಿ ಶಿಬಿರ

Posted On: 24-09-2022 07:51PM

ಶಿರ್ವ: ಇಂದು ಸ್ಪರ್ಧಾತ್ಮಕ ಯುಗದಲ್ಲಿ ಯುವಜನರು ತಮ್ಮ ದೈನಂದಿನ ಜೀವನದಲ್ಲಿ ದೈಹಿಕ ಚಟುವಟಿಕೆ, ಯೋಗ ಮತ್ತು ಕ್ರೀಡೆಯಲ್ಲಿ ತೊಡಗಿಸಿಕೊಂಡು ಆರೋಗ್ಯವಂತರಾಗಬೇಕು.ಯೋಗದಿಂದ ದೇಹ ಮತ್ತು ಮನಸ್ಸನ್ನು ನಿಯಂತ್ರಿಸಿಕೊಳ್ಳುವ ಮೂಲಕ ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡಬಹುದೆಂದು ಶಿರ್ವ ವಲಯ ಪತಂಜಲಿ ಯೋಗ ಸಮಿತಿಯ ಯೋಗಗುರುಗಳಾದ ಶ್ರೀ ರಾಧಾಕೃಷ್ಣ ಪ್ರಭು ಹೇಳಿದರು. ಅವರು ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ಯೋಗ ಮತ್ತು ಫಿಟ್ನೆಸ್ ಸೆಲ್ ಹಾಗೂ ಎನ್.ಸಿ.ಸಿ ಸಂಯುಕ್ತವಾಗಿ ಏರ್ಪಡಿಸಿದ ಯೋಗ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಘಾಟಿಸಿ ಮಾತನಾಡಿದರು.

ಆರೋಗ್ಯಯುತ ಯುವಜನರನ್ನು ರೂಪಿಸಲು ಯೋಗ ಮತ್ತು ಕ್ರೀಡಾ ಕಡ್ಡಾಯವಾಗಿ ಶಿಕ್ಷಣದಲ್ಲಿ ಭಾಗವಾಗಿದೆ. ಈ ಶಿಬಿರದ ಪ್ರಯೋಜನವನ್ನು ವಿದ್ಯಾರ್ಥಿಗಳು ಸಂಪೂರ್ಣವಾಗಿ ಪಡೆದು ಮುಂದೆ ಇತರರಿಗೆ ಮಾದರಿಯಾಗಿ ಸಮಾಜಸೇವೆಯನ್ನು ಮಾಡಬೇಕು ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿ ಎಲ್ಲರಿಗೂ ಶುಭಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಪತಂಜಲಿ ಯೋಗ ಗುರುಗಳಾದ ಅನಂತ ರಾಯ ಶೆಣೈ, ಯೋಗ ಮತ್ತು ಫಿಟ್ನೆಸ್ ಸೆಲ್ ನಿರ್ದೇಶಕ ಜೆಫ್ ಸನ್ನಿ ಡಿಸೋಜಾ, ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್, ಅಧ್ಯಾಪಕ ವೃಂದ,ಆಡಳಿತ ಸಿಬ್ಬಂದಿ, ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿ ಅನುಕ್ ನಾಯಕ ಸಹಕರಿಸಿದರು. ರಕ್ಷ ಮತ್ತು ಬಳಗ ಪ್ರಾರ್ಥಿಸಿದರು. ಸನಿಯಾ ಶೇಕ್ ಸ್ವಾಗತಿಸಿದರು. ತರನಂ ಕಾರ್ಯಕ್ರಮ ನಿರೂಪಿಸಿದರು. ಜಿಯಾ ಸಿ ಪೂಜಾರಿ ವಂದಿಸಿದರು.

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟದಿಂದ ಬೃಹತ್ ರಕ್ತದಾನ ಶಿಬಿರ ; ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ

Posted On: 24-09-2022 07:16PM

ಉಡುಪಿ : ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ (ರಿ.) ಉಡುಪಿ ಜಿಲ್ಲೆ ಹಾಗೂ ಬ್ರಹ್ಮಾವರ ಘಟಕ ಜಂಟಿ ಆಶ್ರಯದೊಂದಿಗೆ ಸೆಪ್ಟೆಂಬರ್ 25, ಆದಿತ್ಯವಾರದಂದು ಮಲ್ಪೆಯ ಫಿಶರೀಸ್ ಸಭಾಭವನದಲ್ಲಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿವೆ.

ಬೆಳಗ್ಗೆ 7 ಗಂಟೆಗೆ ಶ್ರೀ ಸತ್ಯನಾರಾಯಣ ಪೂಜೆ, ಬೆಳಗ್ಗೆ 10ಗಂಟೆಗ ಬೃಹತ್ ರಕ್ತದಾನ ಶಿಬಿರ ಉದ್ಘಾಟನೆ, ಬೆಳಿಗ್ಗೆ 11 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ, ಮಧ್ಯಾಹ್ನ 12:30 ಅನ್ನ ಸಂತರ್ಪಣೆ, ಸಂಜೆ 4 ಗಂಟೆಗೆ ಗಜಾನನ ಯಕ್ಷಗಾನ ಕಲಾ ಸಂಘ (ರಿ.) ತೊಟ್ಟಂ, ಬಡನಿಡಿಯೂರು ಕಲಾವಿದರಿಂದ ವೀರ ಕೋಟಿ ಚೆನ್ನಯ ತುಳು ‌ಯಕ್ಷಗಾನ ಜರಗಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಅಕ್ಟೋಬರ್ 4 : ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ ಕಾಪು ಪಿಲಿ ಪರ್ಬ - ಹುಲಿ ವೇಷ ಸ್ಪರ್ಧೆ

Posted On: 24-09-2022 06:56PM

ಕಾಪು : ಎಂದರೆ ರಕ್ಷಣಾಪುರ. ಈ ಹೆಸರು ಬ್ರಾಂಡ್ ಆಗಬೇಕೆನ್ನುವ ಉದ್ದೇಶದಿಂದ ಸಾಕಷ್ಟು ಯುವಕರ ಅಭಿಲಾಷೆಯಾಗಿದೆ. ಇದರೊಂದಿಗೆ ದಸರಾ ಸಂದರ್ಭ ಕಲಾವಿದರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ದಸರಾ ಹಬ್ಬದ ಪ್ರಯುಕ್ತ ರಕ್ಷಣಾಪುರ ಜವನೆರ್ನ ಕೂಟ ಕಾಪು ಸಾರಥ್ಯದಲ್ಲಿ ಅಕ್ಟೋಬರ್ 4ರಂದು ಕಾಪು ಶ್ರೀ ಜನಾರ್ಧನ ದೇವಸ್ಥಾನದ ಬಳಿಯ ಮೈದಾನದಲ್ಲಿ (ಬಂಟರ ಸಂಘದ ಕಚೇರಿಯ ಮುಂಭಾಗ) 2 ಗಂಟೆಯಿಂದ ಹುಲಿ ವೇಷ ಸ್ಪರ್ಧೆಯಾದ ಕಾಪು ಪಿಲಿ ಪರ್ಬ ಆಯೋಜಿಸಲಾಗಿದೆ ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಹೇಳಿದರು. ಅವರು ಕಾಪು ರಾಜೀವ್ ಭವನದಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿ ಮಾಹಿತಿ ನೀಡಿದರು.

ಇದೊಂದು ಪಕ್ಷಾತೀತವಾದ ಕಾರ್ಯಕ್ರಮ. ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿದೆ. ಕಾಪು ಮಾರಿಗುಡಿಯ ತಂತ್ರಿಗಳು ಕಾರ್ಯಕ್ರಮ ಉದ್ಘಾಟಿಸಲಿದ್ದು ಪ್ರತಿ ತಂಡದಲ್ಲಿ 15 ಜನರಿಗೆ ಮಾತ್ರ ಅವಕಾಶ. ಧರಣಿ ಮಂಡಲ ಹಾಡಿಗೆ ಕುಣಿತ, ಮರಕಾಲು ಕುಣಿತ, ಅಕ್ಕಿಮುಡಿ ಎಸೆತ ಇತ್ಯಾದಿ ಪ್ರಕಾರಗಳನ್ನು ಪ್ರಸ್ತುತಪಡಿಸುವ ಅಂಶಗಳ ಮೇಲೆ ಬಹುಮಾನ ನೀಡಲಾಗುವುದು. ಪ್ರತಿ ತಂಡಕ್ಕೆ 20 ನಿಮಿಷದ ಕಾಲಾವಧಿ. ಪ್ರಥಮ 1ಲಕ್ಷ ರೂಪಾಯಿ , ದ್ವಿತೀಯ 50 ಸಾವಿರ ಬಹುಮಾನ ಹಾಗೂ ಇತರ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾವುದು. ಸ್ಪರ್ಧೆಯ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಈಗಾಗಲೇ 10 ತಂಡಗಳು ಹೆಸರು ನೋಂದಾಯಿಸಿದೆ. ಸೆಪ್ಟೆಂಬರ್ 30 ಹೆಸರು ನೋಂದಾವಣೆಗೆ ಕೊನೆಯ ದಿನ ಎಂದರು.

ಈ ಸಂದರ್ಭ ಕಾರ್ಯಕ್ರಮ ಆಯೋಜನೆಯ ಸಂಚಾಲಕ ನವೀನ್ ಶೆಟ್ಟಿ ಪಡುಬಿದ್ರಿ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಗಣೇಶ್ ಕೋಟ್ಯಾನ್, ರಮೀಝ್ ಹುಸೇನ್, ಶರ್ಫುದ್ದೀನ್, ಹರೀಶ್ ನಾಯಕ್, ರಕ್ಷಣಾಪುರ ಜವನೆರ್ನ ಕೂಟದ ಪ್ರಮುಖರು ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 9964026471 / 8105780251/ 9900555542/ 9901731999/ 9844995937

ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ : ವಿದ್ಯೆ, ಶಸ್ತ್ರಚಿಕಿತ್ಸೆಗಾಗಿ ಸಹಾಯ ನಿಧಿ ಹಸ್ತಾಂತರ ಕಾಯ೯ಕ್ರಮ

Posted On: 23-09-2022 11:07PM

ಉಡುಪಿ : ಇಲ್ಲಿನ ರೋಟರಿ ಸೌಟ್ಕ್ ಭವನ, ಕಮಲ ಬಾಯಿ ಹೈಸ್ಕೂಲ್ ಕಡಿಯಾಳಿ ಉಡುಪಿಯಲ್ಲಿ ಸೆಪ್ಟೆಂಬರ್ 21ರಂದು ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ತಂಡವು 2 ದಿನ ವೇಷ ಧರಿಸಿದ ಬಂದ ಹಣವನ್ನು ವಿದ್ಯೆಗಾಗಿ ಸಹಾಯ ನಿಧಿ ಹಸ್ತಾಂತರ ಕಾರ್ಯಕ್ರಮದ ಮೂಲಕ ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ಕಾಯ೯ಕ್ರಮದ ಅಧ್ಯಕ್ಷತೆಯನ್ನುಮಲಬಾರ್ ಶಾಖಾ ಮುಖ್ಯಸ್ಥ ಹಪೀಜ್ ರೆಹಮಾನ್ ವಹಿಸಿದ್ದರು. ಮುಕುಂದ ಕೃಪಾ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಮುಖ್ಯ ಶಿಕಕ್ಷಕಿ ಸುಜಾತ ಶೆಟ್ಟಿ, ಜಿಲ್ಲಾ ತರಬೇತಿ ಆಯುಕ್ತರಾದ ಆನಂದ್ ಬಿ ಅಡಿಗ, ರಾಜ್ಯ ಸಹಾಯಕ ಸಂಘಟನ ಆಯುಕ್ತಾದ ಸುಮನ್ ಶೇಖರ್, ಕೆವಿಎಸ್ಎಮ್ ಕಾಲೇಜಿನ ಪ್ರವೀಣ್ ಆಚಾಯ೯ , ಎಸ್ ವಿ ಎಸ್ ಪದವಿ ಪೂರ್ವ ಕಾಲೇಜು, ವಿದ್ಯಾ ಲಕ್ಷ್ಮೀ ಗ್ರೂಪ್ ಆಫ್ ಎಜುಕೇಶನ್ ಇನ್ಸ್ಟಿಟ್ಯೂಟ್, ವೈಕುಂಠ ಬಾಳಿಗ ಕಾನೂನು ವಿದ್ಯಾಲಯದ ಉಪನ್ಯಾಸಕರು ಹಾಗೂ ವಿವಿಧ ಸಂಸ್ಥೆಗಳ ಪಧಾದಿಕಾರಿಗಳು ಭಾಗವಹಿಸಿದ್ದರು.

ಈ ಸಂಧಭ೯ದಲ್ಲಿ ವೇಷ ಧರಿಸಿ ಸಂಗ್ರಹಿಸಿದ ಹಣವನ್ನು ದಾನಿಗಳ ಸಮುಖದಲ್ಲಿ ವಿದ್ಯಾರ್ಥಿಗಳಾದ ಕಮಲಾ ಪಿ ಐತಾಳ್ ಹಂಗಾರಕಟ್ಟೆ, ಅವಿನಾಶ್ ಮೂಡು ಅಲೆವೂರು, ವಿನೀಶ್ ಎಸ್ ಸಂತೆಕಟ್ಟೆ ಹಾಗೂ ಹೃದಯದ ಶಸ್ತ್ರ ಚಿಕಿತ್ಸೆ ಮಾಡಲು ಇರುವ 2 ವಷ೯ 7 ತಿಂಗಳಿನ ಮಗು ಪೀಯುಷ್ ಕುಮಾರ್ ಹಂಪನಕಟ್ಟೆ . ಪ್ರತಿ ಒಬ್ಬರಿಗೆ ತಲಾ 10 ಸಾವಿರ ರೂಪಾಯಿ ಚೆಕ್ ವಿತರಿಸಲಾಯಿತು.

ಶಮಿ೯ನಾ ಬಾನು ಕಾರ್ಯಕ್ರಮ ನಿರೂಪಿಸಿದರು. ಅಮೃತ್ ಸ್ವಾಗತಿಸಿದರು. ಹಿತೇಶ್ ಆರ್ ಶೆಟ್ಟಿ ಪ್ರಸ್ತಾವನೆಗೈದರು. ಸೃಜನ್ ಎಸ್ ಶೇರಿಗಾರ್ ವಂದಿಸಿದರು . ಭಜರಂಗ್ ನಾಸಿಕ್ ಬ್ಯಾಂಡ್ ಉಡುಪಿ ತಂಡದ ಸೃಜನ್ ಎಸ್ ಶೇರಿಗಾರ್ , ಅನುರೂಪ್,ರಾಜೇ ಸಾಬ್, ರೋಯ್ಸ್ಟಾನ್, ಹಿತೇಶ್, ಲತೇಶ್, ಚೇತನ್, ಅಮೃತ್, ಅಶೀಶ್, ಶ್ರೇಯಸ್ಸ್ , ತರುಣ್, ಅಕ್ಷಯ್ ಭಟ್, ಪ್ರಪುಲ್, ಶ್ರೇಯಸ್ಸ್ ಶೇರಿಗಾರ್, ಆಯುಷ್, ಆಧಿ ಆಚಾಯ೯, ದಶ೯ನ್, ಅಕ್ಷಯ್, ಸವೆ೯ಶ್, ಸುಕೇತ್ ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕ : ಶ್ರೀ ಸತ್ಯನಾರಾಯಣ ಪೂಜೆ-ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ

Posted On: 23-09-2022 10:39PM

ಕಾಪು : ವಿಶ್ವ ಹಿಂದೂ ಪರಿಷದ್ ಭಜರಂಗದಳ ಮಾತೃಶಕ್ತಿ ಹಾಗೂ ದುರ್ಗಾವಾಹಿನಿ ಮೂಡುಬೆಳ್ಳೆ ಘಟಕದ ವತಿಯಿಂದ ಅಕ್ಟೋಬರ್ 04, ಮಂಗಳವಾರ ಬೆಳ್ಳೆ ಗೀತಾ ಮಂದಿರದಲ್ಲಿ ವೇದಮೂರ್ತಿ ಬಿ ಗಣೇಶ್ ಭಟ್ ಇವರ ನೇತೃತ್ವದಲ್ಲಿ 15ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ-ಶ್ರೀ ಶಾರದಾ ಪೂಜೆ, ಮಹಾ ಚಂಡಿಕಾಯಾಗ ನಡೆಯಲಿದೆ.

ಅಂದು ಬೆಳಿಗ್ಗೆ 8 ಗಂಟೆಗೆ ಪ್ರಾರ್ಥನೆ ಬೆಳಿಗ್ಗೆ 11.30ಕ್ಕೆ ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪೂರ್ಣಾಹುತಿ ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ವಿಶ್ವಹಿಂದೂಪರಿಷತ್ ನ ಶಿರ್ವ ವಲಯದ ಅಧ್ಯಕ್ಷರಾದ ವಿಖ್ಯಾತ ಭಟ್ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ; ವಿವಿಧ ಸ್ಪರ್ಧೆಗಳ ಆಯೋಜನೆ ; ಸನ್ಮಾನ

Posted On: 23-09-2022 10:33PM

ಕಾಪು : ಇಲ್ಲಿನ ಪುರಸಭೆಯಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರ ಸಹಿತ ೩೫ ಮಂದಿಗೆ ಸನ್ಮಾನ, ವಿವಿಧ ಸ್ಪರ್ಧೆ ಆಯೋಜನೆ, ಬಹುಮಾನ ವಿತರಣೆ ಶುಕ್ರವಾರ ಜರಗಿತು.

ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವಡ ಮಾತನಾಡಿ, ಪೌರ ಕಾರ್ಮಿಕರ ಪ್ರಾಮಾಣಿಕ ಸೇವೆಯಿಂದಾಗಿ ಕಾಪು ಪುರಸಭೆಗೆ ವಿಶೇಷ ಗೌರವ ಸಿಗುವಂತಾಗಿದೆ. ಸಮಾಜದ ಜನರ ಜೊತೆಗಿದ್ದು ಸ್ವಚ್ಛತೆಗಾಗಿ ನಿರಂತರವಾಗಿ ನಿಸ್ವಾರ್ಥ ಸೇವೆಗೈಯ್ಯುತ್ತಿರುವ ಪೌರ ಕಾರ್ಮಿಕರನ್ನು ಅವಮಾನಿಸದೇ ಅವರನ್ನು ಗುರುತಿಸಿ, ಗೌರವಿಸುವುದೇ ನಾವು ಅವರಿಗೆ ನೀಡಬಹುದಾದ ವಿಶೇಷ ಗೌರವವಾಗಿದೆ ಎಂದರು.

ಪೌರ ಕಾರ್ಮಿಕರ ದಿನಾಚರಣೆಯ ಪ್ರಯುಕ್ತ ಪುರಸಭೆಯ ಎಲ್ಲಾ ಪೌರ ಕಾರ್ಮಿಕರನ್ನು ಸನ್ಮಾನಿಸಲಾಯಿತು. ವಿವಿಧ ಮನೋರಂಜನೆ ಮತ್ತು ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ, ಬಹುಮಾನ ವಿತರಿಸಲಾಯಿತು.

ಕಾಪು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುರಸಭೆ ಸದಸ್ಯ ಅರುಣ್ ಶೆಟ್ಟಿ ಪಾದೂರು ಶುಭಾಶಂಸನೆಗೈದರು. ಪುರಸಭೆ ಸದಸ್ಯರಾದ ಅನಿಲ್ ಕುಮಾರ್, ಸುರೇಶ್ ದೇವಾಡಿಗ, ರತ್ನಾಕರ ಶೆಟ್ಟಿ, ನೂರುದ್ದೀನ್, ಶೈಲೇಶ್ ಅಮೀನ್, ಉಮೇಶ್ ಪೂಜಾರಿ, ಸತೀಶ್ಚಂದ್ರ, ನಾಗೇಶ್, ಸರಿತಾ ಪೂಜಾರಿ, ರಾಧಿಕಾ ಸುವರ್ಣ, ಫರ್ಜಾನ, ಶೋಭಾ ಬಂಗೇರ, ಹರಿಣಾಕ್ಷಿ ದೇವಾಡಿಗ, ವಿದ್ಯಾಲತಾ, ಲತಾ ದೇವಾಡಿಗ, ಮೋಹಿನಿ ಶೆಟ್ಟಿ, ಶಾಬು ಸಾಹೇಬ್, ಸರಿತಾ ಶಿವಾನಂದ್, ಅಧಿಕಾರಿ ವರ್ಗ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಪಶು ಆಸ್ಪತ್ರೆಯಲ್ಲಿ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಣೆ

Posted On: 22-09-2022 05:20PM

ಕಾಪು : ಕರ್ನಾಟಕ ಸರಕಾರ ಕುಕ್ಕುಟ ಮಹಾಮಂಡಳಿ ಬೆಂಗಳೂರು ಇವರ ವತಿಯಿಂದ ಪಶು ಸಂಗೋಪನಾ ಇಲಾಖೆಯ ಸಹಯೋಗದೊಂದಿಗೆ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ರೈತ ಮಹಿಳೆಯರಿಗೆ ನಾಟಿ ಕೋಳಿ ವಿತರಿಸುವ ಕಾರ್ಯಕ್ರಮವು ಕಾಪು ಪಶು ಆಸ್ಪತ್ರೆಯಲ್ಲಿ ಗುರುವಾರ ನಡೆಯಿತು.

ಕಾಪು ತಾಲೂಕು ಪಶು ವೈದ್ಯಾಧಿಕಾರಿ ಡಾ. ಅರುಣ್ ಹೆಗ್ಡೆ ಮಾತನಾಡಿ, ಕಾಪು ತಾಲೂಕಿನ 106 ಮಂದಿ ಫಲಾನುಭವಿಗಳಿಗೆ ತಲಾ 20 ರಂತೆ ನಾಟಿ ಕೋಳಿ ವಿತರಿಸಲಾಗುತ್ತಿದೆ. ಈ ಯೋಜನೆಯ ಮೂಲಕವಾಗಿ ಗ್ರಾಮೀಣ ರೈತ ಮಹಿಳೆಯರನ್ನು ಆರ್ಥಿಕವಾಗಿ ಬಲವಪಡಿಸುವ ಉದ್ದೇಶ ಹೊಂದಲಾಗಿದೆ ಎಂದರು.

ಕರ್ನಾಟಕ ಕುಕ್ಕುಟ ಮಹಾಮಂಡಳಿಯ ಜಾನುವಾರು ಅಧಿಕಾರಿ ಅನಿಲ್ ಕುಮಾರ್, ಕಟಪಾಡಿ ಪಶು ವೈದ್ಯಕೀಯ ಕೇಂದ್ರದ ಹಿರಿಯ ಪಶು ವೈದ್ಯಾಧಿಕಾರಿ ಡಾ. ವಿಜಯಕುಮಾರ್, ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ವಸಂತ ಮಾದರ, ಶಿವ ಪುತ್ರಯ್ಯ ಗುರುಸ್ವಾಮಿ, ಸಹಾಯಕ ಸಿಬಂದಿಗಳಾದ ಜಯೇಶ್, ಧನವತಿ, ಪೂಜಾ ಮೊದಲಾದವರು ಉಪಸ್ಥಿತರಿದ್ದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯ : ರಸ್ತೆ ದುರಸ್ಥಿಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ

Posted On: 22-09-2022 05:16PM

ಕಾಪು : ಇಲ್ಲಿನ ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯ ಇವರ ವತಿಯಿಂದ ರಾಷ್ಟ್ರೀಯ ಹೆದ್ದಾರಿ ಪರ್ಕಳದಿಂದ- ಗುಡ್ಡೆಯಂಗಡಿ ವರೆಗಿನ ಮುಖ್ಯ ರಸ್ತೆಯನ್ನು ದುರಸ್ಥಿಗೊಳಿಸುವಂತೆ ಆಗ್ರಹಿಸಿ ಮತ್ತು ಉಡುಪಿ ಜಿಲ್ಲಾಡಳಿತ ಮತ್ತು ಕೇಂದ್ರ ಸರಕಾರ ಹಾಗೂ ಬಿಜೆಪಿ ಸರಕಾರದ ಜನವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಆತ್ರಾಡಿ ಪೇಟೆಯಲ್ಲಿ ಗುರುವಾರದಂದು ಬ್ರಹತ್ ಪ್ರತಿಭಟನೆಯನ್ನು ಹಮ್ಮಿ ಕೊಳ್ಳಲಾಗಿತ್ತು.

ಈ ಪ್ರತಿಭಟನೆಯಲ್ಲಿ ವಿನಯ್ ಕುಮಾರ್ ಸೊರಕೆ ಮಾತನಾಡಿ ಹಲವಾರು ವಾಹನಗಳು ಸಂಚರಿಸುವಂತಹ ಪರ್ಕಳ ಗುಡ್ಡೆಯಂಗಡಿ ರಸ್ತೆಯಲ್ಲಿ ಪ್ರತಿ ದಿನ ಅಪಘಾತ ಹೆಚ್ಚುತ್ತಿದೆ ಹಾಗೂ ಈ ರಸ್ತೆಯು ಜನರ ಜೀವವನ್ನು ಪಡೆದುಕೊಳ್ಳಲು ಆಹ್ವಾನ ನೀಡಿ ಕಾದು ಕುಳಿತಂತಿದೆ. ಇಂತಹ ರಸ್ತೆ ಯನ್ನು ಶೀಘ್ರವಾಗಿ ಸರಿಪಡಿಸಿದೆ ಇದ್ದರೆ ನಾವೆಲ್ಲರೂ ಲೋಕಸಭೆ ಮತ್ತು ರಾಜ್ಯ ಸಭೆಯ ಪ್ರಮುಖ ಕಚೇರಿಗಳ ಮುಂದೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸಂತೋಷ್ ಕುಲಾಲ್ ಪಕ್ಕಾಲು, ಚುನಾವಣಾ ಪ್ರಚಾರ ಸಮಿತಿಯ ಅಧ್ಯಕ್ಷರಾದ ಚರಣ್ ವಿಠ್ಠಲ್ ಕುದಿ, ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರು, ಶಶಿಧರ್ ಜತನ್ನ, ಇಸ್ಮಾಯಿಲ್ ಆತ್ರಾಡಿ, ಉಮೇಶ್ ಕಾಂಚನ್,ತಂಗಣ್ಣ ಸುದಣ್ಣ,ದಿನೇಶ್ ಪೂಜಾರಿ,ಗಂಪ ರವೀಂದ್ರ, ಲಕ್ಷ್ಮೀ ನಾರಾಯಣ, ಗುರುದಾಸ್ ಭಂಡಾರಿ, ದಿಲೀಪ್ ಹೆಗ್ಡೆ, ಕಿರಣ್ ಹೆಗ್ಡೆ, ಸಂತೋಷ್ ಶೆಟ್ಟಿ, ನಾಗರಾಜ್ ಪ್ರಗತಿ ನಗರ, ಸುಧೀರ್, ನಿತಿನ್ ಶೆಟ್ಟಿ ಮತ್ತು ಅಮರ್ ಭೈರಂಪಲ್ಲಿ, ಸೌರಭ್ ಬಲ್ಲಾಳ್ ಮತ್ತಿತರರು ಉಪಸ್ಥಿತರಿದ್ದರು.

ಸೆಪ್ಟಂಬರ್ 26- ಅಕ್ಟೋಬರ್ 5 : ಉಚ್ಚಿಲ ದಸರಾ ಉತ್ಸವ - 2022

Posted On: 22-09-2022 12:10PM

ಉಚ್ಚಿಲ : ಕರ್ನಾಟಕದ ಕೊಲ್ಹಾಪುರ ಖ್ಯಾತಿಯ ಕಾಪು ತಾಲೂಕಿನ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ 26ರಿಂದ ಅ. 5ರ ವರೆಗೆ ನವರಾತ್ರಿಯ ಅಂಗವಾಗಿ ಉಚ್ಚಿಲ ದಸರಾ ಉತ್ಸವ-2022 ಜರಗಲಿದೆ. ನವರಾತ್ರಿ ಸಂದರ್ಭ ವೈಭವದ ದಸರಾ ಕಾರ್ಯಕ್ರಮ ಜರಗಲಿದ್ದು ಈಗಾಗಲೇ ಎಲ್ಲಾ ಸಿದ್ಧತೆ ನಡೆಯುತ್ತಿದ್ದು ದೇವಾಲಯ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿ ದೀಪ ಅಲಂಕಾರ, ನವದುರ್ಗೆಯರ ಮಂಟಪ, ನವ ದುರ್ಗೆಯರ ಮೂರ್ತಿಯೂ ಶಿವಮೊಗ್ಗದ ಕುಬೇರ ಮತ್ತು ತಂಡದ ನೇತೃತ್ವದಲ್ಲಿ ತಯಾರಾಗುತ್ತಿದೆ.

ಉಚ್ಚಿಲ – ಪಡುಬಿದ್ರಿ – ಹೆಜಮಾಡಿ ಟೋಲ್‌ ಗೇಟ್- ಪಡುಬಿದ್ರಿ -ಉಚ್ಚಿಲ- ಕೊಪ್ಪಲಂಗಡಿ ಕ್ರಾಸ್ ಕಾಪು ಬೀಚ್ ವರೆಗೆ (26 ಕಿ.ಮೀ.)ಶೋಭಾಯಾತ್ರೆನಡೆಯಲಿದ್ದು, ಇದರಲ್ಲಿ ಹುಲಿವೇಷ, ಭಜನ ತಂಡಗಳು ಸಹಿತ 50ಕ್ಕೂ ಹೆಚ್ಚಿನ ಟ್ಯಾಬ್ಲೊಗಳಿವೆ. ಮೆರವಣಿಗೆ ಸಾಗುವ ಕೆಲವು ಕಡೆಗಳಲ್ಲಿ ಸಂಗೀತ ರಸಮಂಜರಿಯೂ ಜರಗಲಿದೆ. ಕೊಪ್ಪಲಂಗಡಿಯಿಂದ ಕಾಪು ಬೀಚ್ ವರೆಗಿನ 4 ಕಿ.ಮೀ. ನಡಿಗೆ ಗಂಗಾರತಿ ಮಾದರಿ ಯಲ್ಲೇ 10 ಬೃಹತ್ ಮಹಾ ಮಂಗಳಾರತಿ ನಡೆಯಲಿದೆ. ದೋಣಿಗಳಲ್ಲಿ ಶಾರದಾ ಮಾತೆ, ನವದುರ್ಗೆಯರ ಪ್ರತಿಮೆಗಳನ್ನು ಸಮುದ್ರದಲ್ಲಿ ಜಲಸ್ತಂಭನ ಮಾಡಲಾಗುವುದು. ಮೈಸೂರು, ಮಂಗಳೂರು, ಮಡಿಕೇರಿ ದಸರಾ ಮಾದರಿಯಲ್ಲೇ ವೈಭವದಿಂದ ಆಚರಿಸಲಾಗುವುದು. ಪ್ರತಿದಿನ ಚಂಡಿಕಾ ಹೋಮ, ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ನಿರ್ಧರಿಸಿದೆ ಎಂದು ದ.ಕ. ಮೊಗವೀರ ಮುಖಂಡ ರಾದ ಡಾ| ಜಿ. ಶಂಕರ್ ಉಚ್ಚಿಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯಸಿ ಕೋಟ್ಯಾನ್ ಬೆಳ್ಳಂಪಳ್ಳಿ ಮಾತನಾಡಿ ದೇವಸ್ಥಾನದ ಪಕ್ಕದಲ್ಲಿ 1.70 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಮತಿ ಶಾಲಿನಿ ಡಾ| ಜಿ ಶಂಕರ್ ತೆರೆದ ಸಭಾಂಗಣದ ಲೋಕಾರ್ಪಣೆ ಸೆಪ್ಟೆಂಬರ್ 26ರಂದು ನಡೆಯಲಿದೆ ಅಲ್ಲಿಯೇ ನವ ದುರ್ಗೆರ ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠೆ ನಡೆಯಲಿದೆ ಎಲ್ಲಾ ಭಕ್ತರು ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು. ದೇವಸ್ಥಾನದ ಕ್ಷೇತ್ರ ಆಡಳಿತ ಮಂಡಳಿಯ ಅಧ್ಯಕ್ಷ ವಾಸುದೇವ ಸಾಲಿಯಾನ್ ಮಾತನಾಡಿ ಎಲ್ಲಾ ತಯಾರಿ ನಡೆದಿದ್ದು ಸಂಭ್ರಮದ ದಸರಾ ವೈಭವದಲ್ಲಿ ಎಲ್ಲರು ಭಾಗವಹಿಸಬೇಕು ತಾಯಿ ಮಹಾಲಕ್ಷ್ಮಿ ಸನ್ನಿಧಾನದಲ್ಲಿ ನಡೆಯುವ ಎಲ್ಲಾ ದೇವತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಂದರು.

ಈ ಸಂದರ್ಭ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಗುಂಡು ಬಿ ಅಮೀನ್, ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷ ಸುಭಾಷ್ ಚಂದ್ರ ಕಾಂಚನ್, ಪ್ರಧಾನ ಕಾರ್ಯದರ್ಶಿ ಸುಧಾಕರ್ ಕುಂದರ್, ಮಹಿಳಾ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಅಪ್ಪಿ ಸಾಲಿಯಾನ್ ಉಪಸ್ಥಿತಿಯಿದ್ದರು.

ಪಡುಬಿದ್ರಿ : ಎಸ್.ಪಿ. ಉಮರ್ ಫಾರೂಕ್ ನಿಧನ

Posted On: 22-09-2022 10:51AM

ಪಡುಬಿದ್ರಿ : ಇಲ್ಲಿಯ ಮಾಜಿ ಗ್ರಾಪಂ ಸದಸ್ಯ, ರಾಜಕೀಯ ಧುರೀಣ, ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ ಎಸ್.ಪಿ. ಉಮರ್ ಫಾರೂಕ್ ಅನಾರೋಗ್ಯದಿಂದ ಗುರುವಾರ ಬೆಳಿಗ್ಗೆ ನಿಧನ ಹೊಂದಿದರು.

ಪಡುಬಿದ್ರಿ ಪರಿಸರದ ಹಿರಿಯ ಸಾಮಾಜಿಕ ಕಾರ್ಯಕರ್ತ ಪಡುಬಿದ್ರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕಂಚಿನಡ್ಕ ಎಸ್.ಪಿ. ಕಂಪೌಂಡ್ ನಿವಾಸಿ ಹಾಜಿ ಎಸ್.ಪಿ. ಉಮರ್ ಫಾರೂಕ್‌ರವರು (60) ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಸಂಘಟನೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದ ಉಮ್ಮರ್ ಫಾರೂಖ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ, ಪಡುಬಿದ್ರಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾಗಿ, ಉಡುಪಿ ಜಿಲ್ಲಾ ಬ್ಯಾರಿ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ ಜಿಲ್ಲಾಧ್ಯಕ್ಷರಾಗಿ, ಎಸ್ ವೈಎಸ್ ಪಡುಬಿದ್ರಿ ಘಟಕದ ಮಾಜಿ ಅಧ್ಯಕ್ಷರಾಗಿ, ಪಡುಬಿದ್ರಿ ಜುಮಾ ಮಸೀದಿ ಸದಸ್ಯರಾಗಿ, ಇ ಅನತುಲ್ ಮಸಾಕೀನ್ ಸಂಸ್ಥೆಯಮಾಜಿ ಅಧ್ಯಕ್ಷರಾಗಿದ್ದರು. ಜನತಾದಳದಲ್ಲಿ ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿದ್ದ ಇವರು ಇತ್ತೀಚೆಗೆ ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದರು.

ಪತ್ನಿ, ಮೂರು ಹೆಣ್ಣು, ಒಂದು ಗಂಡು ಮಗನನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಪಡುಬಿದ್ರಿ ಜುಮ್ಮಾ ಮಸೀದಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.