Updated News From Kaup
ದೀಪಾವಳಿ - ಸೊಡರ ಹಬ್ಬಕ್ಕೆ ಸೊಬಗಿನ ಸೋಬಾನೆ
Posted On: 24-10-2022 08:15AM
ಓ... ಬಲೀಂದ್ರ ಮೂಜಿ ದಿನತ ಬಲಿಗೆತೊಂದು ’ಪೊಲಿ’ ಕೊರ್ಲ ಕೂ... ’ಹೊಲಿ’ ಕೊಟ್ರು ಬಲಿ ತಕಂಡ್ರು ತಮ್ಮ ರಾಜ್ಯಕ್ಕೆ ತಾವೇ ಬಂದ್ರು ’ಹೊಲಿ’ಯೇ ಬಾ.... ಆ ಊರುದ ’ಪೊಲಿ’ ಕೊಂಡತ್ತ್ದ್ ಈ ಊರುದ ಕಲಿಕೊಂಡೋಲ ಹರಿಯೋ ಹರ.... ಹೀಗೆ ಉಡುಪಿ ,ಕುಂದಾಪುರ ,ಪುತ್ತೂರು - ಸುಳ್ಯ ಭಾಗಗಳಲ್ಲಿ ಬಲೀಂದ್ರ ಕರೆಹದ ಒಂದು ಕ್ರಮ. ’ಧನ, ಧಾನ್ಯ, ಪಶು ಸಂಪತ್ತು ’ಪೊಲಿ’ (ಸಮೃದ್ಧಿ)ಯಾಗಲಿ ಎಂಬ ಆಶಯದೊಂದಿಗೆ ಆಚರಿಸುವ ಸೊಡರ ಹಬ್ಬ ’ದೀಪಾವಳಿ’. ನರಕ ಚತುರ್ದಶಿಯ ದಿನ ಎಣ್ಣೆ ಹಚ್ಚಿ ಬಿಸಿ ನೀರ ಸ್ನಾನ. ಹಿಂದಿನ ದಿನ ಪಿತೃಗಳ ಸ್ಮರಣೆ, ಹಚ್ಚಿಡುವ ಯಮದೀಪ. ದೀಪಾವಳಿಯಂದು ಬಲೀಂದ್ರನ ಸ್ವಾಗತಕ್ಕೆ ಸಿದ್ಧತೆ. ಧಾನ್ಯದ ರಾಶಿ, ಮನೆ, ಹಟ್ಟಿ, ಗದ್ದೆಗಳಲ್ಲಿ ಬಲೀಂದ್ರನನ್ನು ಸ್ಮರಿಸಿ ದೀಪವಿರಿಸಿ ’ಹೊಲಿ’ ಹರಕೆಗೊಂಬ ಸಂಭ್ರಮ. ಗೋಪೂಜೆ, ಧನಲಕ್ಷ್ಮೀ ಪೂಜೆಗಳೊಂದಿಗೆ ಮೂರನೇ ದಿನ ದೀಪದ ಹಬ್ಬದ ಸಮಾರೋಪ. ನರಕಾಸುರನ ವಧೆ ಕೃಷ್ಣ-ಸತ್ಯಭಾಮೆಯರಿಂದ ಆಯಿತು. ಆಯಾಸದಿಂದ ಕೃಷ್ಣ ಎಣ್ಣೆ ಹಚ್ಚಿ ಬಿಸಿನೀರ ಸ್ನಾನ ಮಾಡಿದನೆಂಬ ಕಥೆ. ಬಲಿ ಚಕ್ರವರ್ತಿಯನ್ನು ವಾಮನಾವತಾರಿ ವಿಷ್ಣು ಪಾತಾಳಕ್ಕೆ ಮೆಟ್ಟಿದ ಎಂಬ ವಿವರಣೆಗಳು. ಈ ಇಬ್ಬರೂ ಭೂಮಿ ತಾಯಿಯ ಮಕ್ಕಳು ಎಂಬ ಒಡಂಬಡಿಕೆಗಳು ಸಮಗ್ರ ದೀಪಾವಳಿ ಆಚರಣೆಯ ವಿವಿಧ ಹಂತಗಳಲ್ಲಿ ಸ್ಪಷ್ಟವಾಗುತ್ತವೆ. ನರಕಾಸುರನೂ ಭೂಮಿದೇವಿಯ ಮಗ (ಭೌಮ), ಬಲೀಂದ್ರನೂ ಭೂಮಿಪುತ್ರನೆಂದೇ ಪ್ರಸಿದ್ಧನು.
ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆ - ಉಡುಪಿ ಜಿಲ್ಲಾ ಕಾರ್ಯಾಲಯ ಉದ್ಘಾಟನೆ
Posted On: 23-10-2022 06:27PM
ಉಡುಪಿ : ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆಯ ಉಡುಪಿ ಜಿಲ್ಲಾ ಕಾರ್ಯಾಲಯ ಸಂತೆಕಟ್ಟೆ ಹಳೆಯ ಡೈಲಿ ನೀಡ್ಸ್ ಕಟ್ಟಡದ ಪ್ರಥಮ ಮಹಡಿಯಲ್ಲಿ ಭಾನುವಾರ ಸಮಿತಿಯ ಗೌರವಾಧ್ಯಕ್ಷರಾದ ಹರಿಯಪ್ಪ ಕೋಟ್ಯಾನ್ ದೀಪ ಪ್ರಜ್ವಲನೆಯ ಮೂಲಕ ಕಾರ್ಯಾಲಯವನ್ನು ಉದ್ಘಾಟಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾಪು : ವಿದ್ಯಾನಿಕೇತನ ಸಂಸ್ಥೆಯಲ್ಲಿ ದೀಪಾವಳಿ ಆಚರಣೆ ; ಮಕ್ಕಳು - ಶಿಕ್ಷಕರಿಂದ ಸಾಂಸ್ಕೃತಿಕ ಕಾರ್ಯಕ್ರಮ
Posted On: 23-10-2022 05:24PM
ಕಾಪು : ವಿದ್ಯಾನಿಕೇತನ ಸಂಸ್ಥೆಯು ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಮೌಲ್ಯಯುತ ಶಿಕ್ಷಣವನ್ನು ನೀಡುತ್ತಿದ್ದು ಅದರ ಭಾಗವಾಗಿ ನಮ್ಮ ಆಚರಣೆಗಳ ಬಗ್ಗೆ ಮಕ್ಕಳಿಗೆ ತಿಳಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಪತ್ರಕರ್ತ ರಾಕೇಶ್ ಕುಂಜೂರು ಹೇಳಿದರು. ಅವರು ಕಾಪು ವಿದ್ಯಾನಿಕೇತನ್ ಶಾಲೆಯಲ್ಲಿ ಜರಗಿದ ದೀಪಾವಳಿ ಆಚರಣೆಯ ಕಾರ್ಯಕ್ರಮ ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಪು : ನಾಲ್ಕೂವರೆ ವರ್ಷದಲ್ಲಿ 2898.68 ಕೋಟಿ ರೂಪಾಯಿಯ ಕಾಮಗಾರಿಗಳ ಮಂಜೂರಾತಿ - ಶಾಸಕ ಲಾಲಾಜಿ ಮೆಂಡನ್
Posted On: 23-10-2022 02:08PM
ಕಾಪು : ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ನಾಲ್ಕೂವರೆ ವರ್ಷದಲ್ಲಿ 2898.68 ಕೋಟಿ ರೂಪಾಯಿಗಳ ಕಾಮಗಾರಿ ಮಂಜೂರಾತಿ ಆಗಿದೆ ಎಂದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಮಂದಾರ ಸಭಾಭವನದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಹೇಳಿದರು.
ಕಾಪು : ಪ್ರೆಸ್ ಕ್ಲಬ್ ನಲ್ಲಿ ದೀಪಾವಳಿ ಹಬ್ಬದ ಸಂಭ್ರಮ
Posted On: 23-10-2022 10:45AM
ಕಾಪು : ಬಲಿ ಚಕ್ರವರ್ತಿ ಮೂಲಸಂಸ್ಕೃತಿಯ ಪ್ರತಿನಿಧಿ ಇದ್ದಂತೆ. ಬಲಿಯೇಂದ್ರನನ್ನು ಪುರಾಣದ ಮತ್ತು ತುಳುನಾಡಿನ ಬಲಿಯೇಂದ್ರ ಎಂದು ವಿಭಾಗಿಸಬಹುದು. ಈ ಕಲ್ಪನೆ ಒಂದೆಡೆ ವೈದಿಕತೆಯನ್ನು ಮತ್ತೊಂದೆಡೆ ಜಾನಪದದ ತಳಹದಿಗೆ ಒತ್ತು ನೀಡಿದೆ. ಬಲಿಯೇಂದ್ರನನ್ನು ಸ್ವೀಕರಿಸುವ ಗುಣ ಭಿನ್ನವಾಗಿದೆ. ಮುಂದೆ ಜನಪದರ ಆಚರಣೆಯೊಂದಿಗೆ ವೈದಿಕ ಆಚರಣೆಯ ಸುಗಮವಾದ ಸಮಾಗಮವಾಯಿತು. ದೀಪಾವಳಿ ಮೂರು ದಿನದ ಆಚರಣೆ. ಇದು ಸುಖ ಸಮೃದ್ಧಿಯ ಹಬ್ಬ ಎಂದು ಹಿರಿಯ ಜಾನಪದ ವಿದ್ವಾಂಸ ಕೆ.ಎಲ್. ಕುಂಡಂತಾಯ ಹೇಳಿದರು. ಅವರು ಶನಿವಾರ ಕಾಪು ಪತ್ರಕರ್ತರ ಸಂಘದಲ್ಲಿ ಜರಗಿದ ದೀಪಾವಳಿ ಹಬ್ಬದ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಪು : ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಪ್ರಯುಕ್ತ ರ್ಯಾಲಿ
Posted On: 22-10-2022 10:44AM
ಕಾಪು : ಮಹಮ್ಮದ್ ಪೈಗಂಬರ ಅವರ ಜನ್ಮದಿನದ ದಿನಾಚರಣೆಯ ಪ್ರಯುಕ್ತ ಎಸ್ ವೈ ಎಸ್ ಹಾಗೂ ಎಸ್ ಎಸ್ ಎಫ್ ವತಿಯಿಂದ ಶುಕ್ರವಾರ ಸಂಜೆ ಕಾಪುವಿನ ಪೋಲಿಪು, ಜುಮ್ಮಾ ಮಸೀದಿಯ ದರ್ಗಾದಲ್ಲಿ ರ್ಯಾಲಿಗೆ ಕಾಪುವಿನ ಖಾಜಿ ಅಲ್ ಹಜ್ ಶೈಖುನಾ ಅಜ್ಮಿದ್ ಮುಸ್ಲಿಯಾರವರು ಚಾಲನೆ ನೀಡಲಾಯಿತು.
ರಾಜಕೀಯಕ್ಕೆ ಬಂದದ್ದು ನಾನು ಸನ್ಯಾಸಿಯಾಗಿಯಲ್ಲ. ಸ್ಥಾನಮಾನ ನೀಡಿದರೆ ಅದನ್ನು ಒಪ್ಪಲು ಸಿದ್ಧ - ಶ್ರೀಶ ನಾಯಕ್
Posted On: 22-10-2022 07:20AM
ಕಟಪಾಡಿ : ಸಾಮಾಜಿಕ ಕಾರ್ಯದ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ತಂದೆಯವರ ಕಾರ್ಯಕ್ಷಮತೆ, ಬಿಜೆಪಿ ಪಕ್ಷಕ್ಕಾಗಿ ದುಡಿದವರು ಹಾಗಾಗಿ ಅವರ ನಂತರ ಈ ಪಕ್ಷಕ್ಕಾಗಿ ದುಡಿಯುತ್ತಿದ್ದೇನೆ. ಮುಂದೆ ಪಕ್ಷ ಅವಕಾಶ ನೀಡಿದರೆ ಕೊಟ್ಟಂತಹ ಜವಾಬ್ದಾರಿಯನ್ನು ನಿರ್ವಹಿಸಲಿದ್ದೇನೆ ಎಂದು ಬಿಜೆಪಿ ಪಕ್ಷದ ಯುವ ನಾಯಕ ಶ್ರೀಶ ನಾಯಕ್ ಹೇಳಿದರು. ನಾನು ಪೆರ್ಣಂಕಿಲದಲ್ಲಿ ಹುಟ್ಟಿದರೂ ಕಾಪು ಕ್ಷೇತ್ರದಲ್ಲಿ 2000ನೇ ಇಸವಿಯಲ್ಲಿ ಪಂಚಾಯತ್ ಸದಸ್ಯನಾಗಿ ಕೆಲಸ ಮಾಡಿದವ ಹಾಗಾಗಿ ಬಿಜೆಪಿ ಪಕ್ಷದ ಯುವಮೋರ್ಚಾದಲ್ಲಿ ಕೆಲಸ ಮಾಡಿದ ಅನುಭವವಿದೆ.
ಅಕ್ಟೋಬರ್ 26 : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಗೂಡುದೀಪ ಸ್ಪರ್ಧೆ
Posted On: 22-10-2022 01:07AM
ಕಟಪಾಡಿ : ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಮಾಜಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರಲಾಗುತ್ತಿದ್ದು ಈ ಬಾರಿ ದೀಪಾವಳಿಯನ್ನು ಅರ್ಥೂರ್ಣವಾಗಿಸುವ ನಿಟ್ಟಿನಲ್ಲಿ ಅಕ್ಟೋಬರ್ 26ರಂದು ಸಂಜೆ 4 ಗಂಟೆಗೆ ಕಾಪು ಬೀಚ್ ನಲ್ಲಿ ಸಾಂಪ್ರದಾಯಿಕ ಗೂಡುದೀಪ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ಟ್ರಸ್ಟಿ ಶ್ರೀಶ ನಾಯಕ್ ಶುಕ್ರವಾರ ಕಟಪಾಡಿ ಮಟ್ಟುವಿನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಮೂಲ್ಕಿ : ದಿ| ಜಯ ಸಿ ಸುವರ್ಣರ ದ್ವಿತೀಯ ವರ್ಷದ ಸಂಸ್ಮರಣೆ
Posted On: 21-10-2022 05:18PM
ಮೂಲ್ಕಿ : ರಾಷ್ಟ್ರೀಯ ಬಿಲ್ಲವರ ಮಹಾಮಂಡಲ (ರಿ.) ಮೂಲ್ಕಿ ಇದರ ಸ್ಥಾಪಕ ಅಧ್ಯಕ್ಷರು, ಬಿಲ್ಲವ ಮುಖಂಡ, ಸಮಾಜ ಸೇವಕ ದಿ| ಜಯ ಸಿ ಸುವರ್ಣರ ದ್ವಿತೀಯ ವರ್ಷದ ಸಂಸ್ಮರಣೆ ಶುಕ್ರವಾರ ಮೂಲ್ಕಿಯ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಸಭಾಂಗಣದಲ್ಲಿ ಜರಗಿತು.
ಕಟಪಾಡಿ : ಸೋದೆ ಪೀಠಾಧಿಪತಿಗಳಿಂದ ಮಟ್ಟು ಗುಳ್ಳ ಕೃಷಿಗೆ ಚಾಲನೆ
Posted On: 21-10-2022 05:03PM
ಕಟಪಾಡಿ : ಸೋದೆ ಶ್ರೀ ವಾದಿರಾಜ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಶ್ರೀಮಠದ ವತಿಯಿಂದ ಮಟ್ಟುಗುಳ್ಳ ಕೃಷಿ ಮಾಡಲು ಯೋಜಿಸಿದ್ದು, ಆ ಪ್ರಯುಕ್ತ ಗುರುವಾರ ಮಟ್ಟು ಗ್ರಾಮದ ನಾಗಪಾತ್ರಿಗಳಾದ ಶ್ರೀ ಲಕ್ಷ್ಮಣ ರಾಯರ ಗದ್ದೆಯಲ್ಲಿ ಮಟ್ಟು ಗುಳ್ಳದ ಸಸಿಯನ್ನು ನೆಟ್ಟು ಗುಳ್ಳದ ಬೆಳೆಗೆ ಚಾಲನೆ ನೀಡಿದರು.
