Updated News From Kaup

ಕಾಪು : ಲಕ್ಷ್ಮೀ ಜನರಲ್ ಸ್ಟೋರ್ಸ್ ನಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಚಾಲನೆ

Thumbnail
Posted On: 20 Dec 2022, 06:51 PM

ಕಾಪು : ಇಲ್ಲಿನ ಲಕ್ಷ್ಮೀ ಜನರಲ್ ಸ್ಟೋರ್ಸ್ ನಲ್ಲಿ ನಂದಿನಿ ಸಿಹಿ ಉತ್ಪನ್ನಗಳ ಮಾರಾಟಕ್ಕೆ ಕರ್ನಾಟಕ ರಾಜ್ಯ ಹಾಲು ಮಹಾಮಂಡಳ ನಿರ್ದೇಶಕ ಕಾಪು ದಿವಾಕರ ಶೆಟ್ಟಿ ಚಾಲನೆ ನೀಡಿದರು. ಈ ಸಂದರ್ಭ ಮಾತನಾಡಿದ ಅವರು ಡಿಸೆಂಬರ್ 18 ರಿಂದ ಜನವರಿ 18 ರವರೆಗೆ ನಂದಿನಿ ಸಿಹಿ ಉತ್ಸವ ಜರಗಲಿದೆ. ನಂದಿನಿ ಸಿಹಿ ಉತ್ಪನ್ನಗಳಿಗೆ ಶೇ. 20 ರಿಯಾಯಿತಿ ದೊರೆಯಲಿದೆ ಇದರ ಸದುಪಯೋಗ ಸಾರ್ವಜನಿಕರು ಪಡೆಯಬಹುದು. ಸಿಹಿ ಉತ್ಪನ್ನಗಳ ಮಾರಾಟದ ಮೂಲಕ ಇದ್ದ ಗ್ರಾಹಕರನ್ನು ಉಳಿಸಿ ಹೊಸ ಗ್ರಾಹಕರನ್ನು ಸೆಳೆಯುವುದು. ಕರ್ನಾಟಕ ರಾಜ್ಯದಲ್ಲಿಯ 58 ಬಗೆಯ ಸಿಹಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುತ್ತದೆ. ಪ್ರತಿವರ್ಷದಂತೆ ಈ ವರ್ಷವೂ ಕೂಡ ಸಿಹಿ ಉತ್ಸವ ಮಾಡಲಾಗುತ್ತಿದೆ ಎಂದರು. ಈ ಸಂದರ್ಭ ದಕ್ಷಿಣ ಕನ್ನಡ ಹಾಲು ಮಹಾಮಂಡಲ ಇದರ ಉಪ ವ್ಯವಸ್ಥಾಪಕರಾದ ಸುಧಾಕರ್, ಕೆಎಂಎಫ್ ಪ್ರಭಾರ ಜಂಟಿ ನಿರ್ದೇಶಕ ರಮೇಶ್ ಬೂದಗತ್ತಿ, ಕೆಎಂಎಫ್ ಮಾರ್ಕೆಟಿಂಗ್ ಆಫೀಸರ್ ಸಿ ಎಚ್ ಮೋಹನ್, ಉದ್ಯಮಿ ಕೆ ಕಮಲಾಕ್ಷ ನಾಯಕ್, ಮಹಾಲಕ್ಷ್ಮಿ ಟ್ರೇಡರ್ಸ್ ನ ಹರೀಶ್ ಕೆ ನಾಯಕ್, ಅನುಪೂರ್ವಿ ಸಮೂಹ ಸಂಸ್ಥೆಯ ಪ್ರವರ್ತಕರಾದ ಪ್ರೀತಿ ನಾಯಕ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ಮಾರ್ಕೆಟಿಂಗ್ ಆಫೀಸರ್ ಸಂದೀಪ್, ದಕ್ಷಿಣ ಕನ್ನಡ ಹಾಲು ಒಕ್ಕೂಟದ ವ್ಯವಸ್ಥಾಪಕ ರವಿರಾಜ್ ಉಡುಪ ಮತ್ತಿತರರು ಉಪಸ್ಥಿತರಿದ್ದರು.

ಡಿಸೆಂಬರ್ 23 : ಕಾಪು ರಂಗತರಂಗ ತಂಡದ 16 ನೇ ನಾಟಕ 'ಬುಡೆದಿ' ಪ್ರಥಮ ಪ್ರದರ್ಶನ

Thumbnail
Posted On: 20 Dec 2022, 02:07 PM

ಕಾಪು : ಇಲ್ಲಿನ ರಂಗತರಂಗ ಕಲಾವಿದರಿಂದ ಡಿಸೆಂಬರ್ 23 ಶುಕ್ರವಾರದಂದು ಕಾಪು ಹೊಸ ಮಾರಿಗುಡಿಯ ಮೈದಾನದಲ್ಲಿ ನೂತನ ಹದಿನಾರನೇ ನಾಟಕ 'ಬುಡೆದಿ' ಪ್ರದರ್ಶನ ಗೊಳ್ಳಲಿದೆ ಎಂದು ರಂಗತರಂಗ ಸಂಚಾಲಕರಾದ ಸಮಾಜ ರತ್ನ ಲೀಲಾಧರ ಶೆಟ್ಟಿ ಕರಂದಾಡಿ ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿದ್ದು ಉಚ್ಚಿಲ ನಿರ್ದೇಶನ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಕಥೆ, ಪ್ರಸನ್ನ ಶೆಟ್ಟಿ ಬೈಲೂರು ಸಂಭಾಷಣೆ, ಶರತ್ ಉಚ್ಚಿಲ ಸಂಗೀತ ನಾಟಕಕ್ಕಿದೆ. 16ನೇ ನಾಟಕ ಬುಡೆದಿಯ ಪ್ರಥಮ ಪ್ರದರ್ಶನದ ಟಿಕೆಟನ್ನು ಒಟಿಟಿ ಬುಕ್ ಮೈ ಶೋ ಆ್ಯಪ್ ಮೂಲಕ ಕಾಯ್ದಿರಿಸಲು ಅವಕಾಶವಿದೆ ಎಂದು ತಿಳಿಸಿದರು. ಪ್ರಥಮ ಪ್ರದರ್ಶನದಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಗುರ್ಮೆ ಸುರೇಶ್ ಶೆಟ್ಟಿ, ವಕೀಲರಾದ ಸಂಕಪ್ಪ, ಉದ್ಯಮಿ ರೋಹಿತ್ ಆಳ್ವ ಮೊದಲಾದವರು ಉಪಸ್ಥಿತರಿರುವರು ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಶರತ್ ಉಚ್ಚಿಲ, ಸಂದೀಪ್ ಶೆಟ್ಟಿ ಮಾಣಿಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಕಾಪು : ಕಡಲ ಐಸಿರ 2022 ; ಜನಮನ ಸೆಳೆದ ಚೆಂಡೆವಾದನ

Thumbnail
Posted On: 18 Dec 2022, 09:02 PM

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ಆದಿತ್ಯವಾರದಂದು ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಚೆಂಡೆ ವಾದನ ಜನಮನ ಸೆಳೆಯಿತು. ಸಭಾ ಕಾರ್ಯಕ್ರಮ, ಬೆಂಗಳೂರು ತಂಡದಿಂದ ರಸಮಂಜರಿ ಕಾರ್ಯಕ್ರಮವೂ ಜರಗಲಿದೆ. ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ವತಿಯಿಂದ ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಡ್ರಮ್ - ಚೆಂಡೆ ಸ್ಪರ್ಧೆ, ಕೊಳಲು - ಚೆಂಡೆ ವಾದನ, ಬೀಚ್ ವಾಲಿಬಾಲ್ ಸ್ಪರ್ಧೆ, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕುತ್ಯಾರು ಸೂರ್ಯಚೈತನ್ಯ ಹೈಸ್ಕೂಲ್‌ ಕ್ರೀಡಾಕೂಟ

Thumbnail
Posted On: 18 Dec 2022, 03:52 PM

ಕಾಪು : ಕುತ್ಯಾರು ಆನೆಗುಂದಿ ಶ್ರೀ ಸರಸ್ವತೀ ಎಜುಕೇಷನ್‌ ಟ್ರಸ್ಟ್‌ನ ಆಡಳಿತಕ್ಕೊಳಪಟ್ಟ ಸೂರ್ಯಚೈತನ್ಯ ಹೈಸ್ಕೂಲಿನ ವಾರ್ಷಿಕ ಕ್ರೀಡಾಕೂಟವು ಶನಿವಾರದಂದು ಆಡಳಿತ ಮಂಡಳಿ ಅಧ್ಯಕ್ಷ ಮೋಹನ್‌ ಕುಮಾರ್‌ ಬೆಳ್ಳೂರು ಅಧ್ಯಕ್ಷತೆಯಲ್ಲಿ ಜರುಗಿತು. ಶಿರ್ವ ಪೊಲೀಸ್‌ ಠಾಣೆಯ ಸಬ್‌ಇನ್ಸ್‌ಪೆಕ್ಟರ್‌ ರಾಘವೇಂದ್ರ ಸಿ. ಕ್ರೀಡಾಜ್ಯೋತಿ ಬೆಳಗಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕ್ರೀಡೆಯಿಂದ ಶಿಸ್ತು, ಒಗ್ಗಟ್ಟು ಸಾಧ್ಯವಾಗುವುದು. ಪೊಲೀಸ್‌ ಮತ್ತು ಸೇನೆಯ ಸೇರ್ಪಡೆಗೆ ದೈಹಿಕ ಕ್ಷಮತೆ ಅತ್ಯಗತ್ಯ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಿ ಉನ್ನತ ಸಾಧನೆ ಮಾಡಬೇಕು ಎಂದು ಕರೆಯಿತ್ತರು. ಠಾಣಾ ಎಎಸ್ಸೈ ಶಶಿಧರ್‌ ಕೆ, ಕಾರ್ಯದರ್ಶಿ ಗುರುರಾಜ್‌ ಕೆ.ಜೆ. ವಿದ್ಯಾರ್ಥಿಗಳ ಆಕರ್ಷಕ ಪಥ ಸಂಚಲನೆಯ ವಂದನೆ ಸ್ವೀಕರಿಸಿದರು. ಉಪಾಧ್ಯಕ್ಷ ವಿವೇಕ್‌ ಆಚಾರ್ಯ ಕ್ರೀಡಾ ಧ್ವಜಾರೋಹಣ ನೆರವೇರಿಸಿದರು. ಗೌರವ ಸಲಹೆಗಾರ ವಿದ್ವಾನ್‌ ಶಂಭುದಾಸ ಗುರೂಜಿ, ಪ್ರಿನ್ಸಿಪಾಲ್‌ ಗುರುದತ್ತ ಸೋಮಯಾಜಿ, ಸಹಾಯಕ ಪ್ರಿನ್ಸಿಪಾಲ್‌ ಸಂಗೀತಾ, ಶಿಕ್ಷಕವೃಂದ,ವಿದ್ಯಾರ್ಥಿಗಳು ಮತ್ತು ಪೋಷಕರು ಉಪಸ್ಥಿತರಿದ್ದರು. ಗುರುದತ್ತ ಸೋಮಯಾಜಿ ಸ್ವಾಗತಿಸಿದರು. ಸಹ ಶಿಕ್ಷಕಿ ರಮ್ಯಾ ಪ್ರಭು ನಿರೂಪಿಸಿ ಸಹ ಶಿಕ್ಷಕ ಮಂಜುನಾಥ್‌ ಶೇಟ್‌ ವಂದಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್‌ ಆಚಾರ್ಯ ಕ್ರೀಡಾಕೂಟವನ್ನು ಸಂಘಟಿಸಿದರು.

ಜನವರಿ 15 : ಕುತ್ಯಾರು ಮೂಲ್ಯರ ಯಾನೆ ಕುಲಾಲರ ಸಂಘದಿಂದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ

Thumbnail
Posted On: 18 Dec 2022, 03:06 PM

ಕಾಪು : ಮೂಲ್ಯರ ಯಾನೆ ಕುಲಾಲರ ಸಂಘ (ರಿ.) ಕುತ್ಯಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಜನವರಿ 15 ರ ರವಿವಾರ ಕುತ್ಯಾರು ರಾಮೊಟ್ಟು ಬನತೋಡಿ ಗದ್ದೆಯಲ್ಲಿ ಬೆಳಿಗ್ಗೆ 9 ರಿಂದ ಮದ್ಯಾಹ್ನ 1 ಗಂಟೆಯವರೆಗೆ ಸಾರ್ವಜನಿಕ ಸತ್ಯನಾರಾಯಣ ಪೂಜೆ, ಮಹಾಮಂಗಳಾರತಿ, ಧಾರ್ಮಿಕ ಸಭೆ ನಂತರ ಪ್ರಸಾದ ಭೋಜನವಿರುತ್ತದೆ ಎಂದು ಕಾರ್ಯಕ್ರಮ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿರುವರು.

ಕಾಪು : ಕಡಲ ಐಸಿರ 2022 ; ಜನ ಸಾಗರ ; ನೃತ್ಯ ಸ್ಪರ್ಧೆ ; ಲೇಸರ್ ಷೋ

Thumbnail
Posted On: 17 Dec 2022, 08:32 PM

ಕಾಪು : ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಪು ಪಡು, ದಿ| ಆರ್ ಡಿ ಮೆಂಡನ್ ಕಾಪು ಸ್ಮರಣಾರ್ಥ ಜನ್ಮ ಶತಮಾನೋತ್ಸವ ಆಚರಣೆ ಸಮಿತಿ, ಕಾಪು ಇದರ ಸಂಯುಕ್ತ ಆಶ್ರಯದಲ್ಲಿ ಕಾಪು ದೀಪಸ್ಥಂಭದ ಬಳಿ ಕಡಲ ಕಿನಾರೆಯಲ್ಲಿ ಬೀಚ್ ಉತ್ಸವ ಕಡಲ ಐಸಿರ 2022 ಕಾರ್ಯಕ್ರಮದಲ್ಲಿ ನೃತ್ಯ ಸ್ಪರ್ಧೆ ವೀಕ್ಷಿಸಲು ಜನ ಸಾಗರವೇ ನೆರೆದಿದ್ದು ಜನಮನ ಸೆಳೆಯಿತು. ಇದರ ಜೊತೆಗೆ ಲೇಸರ್ ಷೋ, ವಿಶೇಷ ಚೇತನ ಮಕ್ಕಳ ನೃತ್ಯ, ಹಾಡು ಸಭಿಕರ ಗಮನ ಸೆಳೆಯಿತು. ಈ ಹಿಂದೆ ಕಾರ್ಯಕ್ರಮಗಳನ್ನು ಆಯೋಜಿಸಿದ ಲಾಲ್ ಬಹದ್ದೂರ್ ಶಾಸ್ತ್ರಿ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ (ರಿ.) ಕಾಪು ಈ ಬಾರಿ ಶನಿವಾರ ಮತ್ತು ಆದಿತ್ಯವಾರದಂದು ಆಟದ ಜೊತೆಗೆ, ವಿವಿಧ ಸ್ಪರ್ಧೆಗಳು, ಸಾಂಸ್ಕೃತಿಕ ಸ್ಪರ್ಧೆ, ಚಿತ್ರ ಬಿಡಿಸುವ ಸ್ಪರ್ಧೆ, ಫಲಪುಷ್ಪ ಕಲಾ ಸ್ಪರ್ಧೆ- ಪ್ರದರ್ಶನ, ಫುಡ್ ಫೆಸ್ಟಿವಲ್, ಲೇಸರ್ ಷೋ, ರಸಮಂಜರಿ, ಬಲೆ ಬೀಸಿ ಮೀನು ಹಿಡಿಯುವುದು, ಗಾಳ ಹಾಕಿ ಮೀನು ಹಿಡಿಯುವುದು, ಚೆಂಡೆ ಸ್ಪರ್ಧೆ, ಬೀಚ್ ವಾಲಿಬಾಲ್ ಸ್ಪರ್ಧೆ, ಮಹಿಳೆಯರಿಗಾಗಿ ತ್ರೋಬಾಲ್, ಸಂಗೀತ ಕುರ್ಚಿ ಇತ್ಯಾದಿ ಸ್ಪರ್ಧೆಗಳು, ಕೊಳಲು ತಬಲ ತಂಡ, ಶ್ವಾನ ಸ್ಪರ್ಧೆ, ಈಜು ಸ್ಪರ್ಧೆ, ಮರಳಿನಲ್ಲಿ ಕಲಾಕೃತಿ, ಹುಟ್ಟು ಧೋನಿ ಸ್ಪರ್ಧೆ, ಗಾಳಿಪಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಜನವರಿ 7, 8 : ಮಹಾದೇವಿ ಫ್ರೆಂಡ್ಸ್ ಕಾಪು ಆಶ್ರಯದಲ್ಲಿ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ; ಸಮ್ಮಾನ

Thumbnail
Posted On: 16 Dec 2022, 10:47 PM

ಕಾಪು‌ : ಮಹಾದೇವಿ ಫ್ರೆಂಡ್ಸ್, ಕಾಪು ಇವರ ಆಶ್ರಯದಲ್ಲಿ 4ನೇ ವರ್ಷದ 40 ಗಜಗಳ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಕೂಟ ಮಹಾದೇವಿ ಟ್ರೋಫಿ - 2023 ಜನವರಿ 7, ಶನಿವಾರ ಮತ್ತು 8 ,ಆದಿತ್ಯವಾರ ಮಹಾದೇವಿ ಶಾಲಾ ಕ್ರೀಡಾಂಗಣ, ಕಾಪು ಇಲ್ಲಿ ಜರಗಲಿದೆ. ಪ್ರಥಮ ಬಹುಮಾನವಾಗಿ ₹ 50,555 ಹಾಗೂ ಮಹಾದೇವಿ ಟ್ರೋಫಿ ಮತ್ತು ದ್ವಿತೀಯ ಬಹುಮಾನವಾಗಿ ₹ 25,555 ಹಾಗೂ ಮಹಾದೇವಿ ಟ್ರೋಫಿ ಸಿಗಲಿದೆ. ಲೀಗ್ ಮಾದರಿಯ 12 ಟೀಮ್‌ಗಳ ಪಂದ್ಯಾಕೂಟ ಜನವರಿ 7, ಶನಿವಾರ ಮಧ್ಯಾಹ್ನ ಗಂಟೆ 2 ರಿಂದ ಪ್ರಾರಂಭ. ಮುಕ್ತ ಪಂದ್ಯಾಕೂಟ ಜನವರಿ 7, ಶನಿವಾರ ರಾತ್ರಿ ಗಂಟೆ 10 ರಿಂದ ಪ್ರಾರಂಭವಾಗಲಿದೆ. ಸಮ್ಮಾನ‌ : 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗುಡ್ಡ ಪಾಣಾರ, 2022ನೇ ಸಾಲಿನಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸ್ಟ್ರಿಂಗ್ ಆಟ್೯ ನಲ್ಲಿ ಸಾಧನೆಗೈದಿರುವ ಶಶಾಂಕ್ ಸಾಲ್ಯಾನ್, 2022ನೇ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಕಾಪು ತಾಲೂಕಿನಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುವ ರಕ್ಷಣ್ ಕಲ್ಯಾ ಇವರ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ಸಮ್ಮಾನಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : ಸುಶಾಂತ್ 7795160058, ಮಾಧವ ಪೂಜಾರಿ 7899065890, ಜಗದೀಶ್ 8123431411

ಇನ್ನಂಜೆ : ಅಪರಾಧ ತಡೆ ಮಾಸಾಚರಣೆ ಮಾಹಿತಿ ಕಾರ್ಯಕ್ರಮ

Thumbnail
Posted On: 16 Dec 2022, 06:46 PM

ಇನ್ನಂಜೆ : ಜೆಸಿಐ ಶಂಕರಪುರ ಜಾಸ್ಮಿನ್, ಕಾಪು ಪೊಲೀಸ್ ಠಾಣೆ ಮತ್ತು ಯಸ್ ವಿ ಎಚ್ ಪ್ರೌಢಶಾಲೆ ಇನ್ನಂಜೆ ಇವರ ಜಂಟಿ ಆಶ್ರಯದಲ್ಲಿ ಅಪರಾಧ ತಡೆ ಮಾಸಾಚರಣೆ ಮಾಹಿತಿ ಕಾರ್ಯಕ್ರಮವು ಇನ್ನಂಜೆ ದಾಸ ಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೈಹಿಕಶಿಕ್ಷಕ ನವೀನ್ ಶೆಟ್ಟಿ ಉದ್ಘಾಟಿಸಿದರು. ಕಾಪು ಠಾಣಾಧಿಕಾರಿಯಯಾದ ಶ್ರೀಶೈಲ ಮುರಗೋಡ ಮಾಹಿತಿಯನ್ನು ನೀಡಿದರು. ಜೆಸಿಐ ಶಂಕರಪುರ ನಿಕಟಪೂರ್ವ ಅಧ್ಯಕ್ಷ ಜಗದೀಶ್ ಅಮೀನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪೂರ್ವ ವಲಯ ಉಪಾಧ್ಯಕ್ಷ ಸಂತೋಷ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಶಾಂತ್ ಶೆಟ್ಟಿ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಂಡರು. ಸಿಲ್ವಿಯಾ ಕಾಸ್ಟಲಿನೋ ಜೆಸಿ ವಾಣಿ ವಾಚಿಸಿದರು. ಜೆಸಿಐ ಶಂಕರಪುರ ಅಧ್ಯಕ್ಷರಾದ ಮಾಲಿನಿ ಪಾರ್ಥ ಇನ್ನಂಜೆ ಸ್ವಾಗತಿಸಿದರು. ಶಾಲೆಯ ಅಧ್ಯಾಪಕ ಪ್ರಭಾಕರ್ ಭಟ್ ವಂದಿಸಿದರು.

ಎರ್ಮಾಳು : ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ

Thumbnail
Posted On: 16 Dec 2022, 06:26 PM

ಎರ್ಮಾಳು : ಪುರಾಣ ಪ್ರಸಿದ್ಧ ಎರ್ಮಾಳು ಶ್ರೀ ಲಕ್ಷ್ಮಿ ಜನಾರ್ಧನ ದೇಗುಲದಲ್ಲಿ ಶುಕ್ರವಾರ ಬೆಳಗ್ಗೆ ವಾರ್ಷಿಕ ರಥೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿತು. ಧ್ವಜಾರೋಹಣದ ಪ್ರಯುಕ್ತ ಬಲಿ ಸೇವೆ, ಮಹಿಳಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನೆರವೇರಿತು. ಮಧ್ಯಾಹ್ನ ಮಹಾ ಅನ್ನಸಂತರ್ಪಣೆ ನೆರವೇರಿತು. ದೇವಳದ ವಾರ್ಷಿಕ ಜಾತ್ರೋತ್ಸವವು ಡಿಸೆಂಬರ್ 20ರ ಮಂಗಳವಾರ ನೆರವೇರಲಿದೆ. ಈ ಸಂದರ್ಭ ದೇವಳದ ತಂತ್ರಿ ವರ್ಯರಾದ ರಾಧಾಕೃಷ್ಣ ತಂತ್ರಿ, ಪ್ರಧಾನ ಅರ್ಚಕ ಕೃಷ್ಣಮೂರ್ತಿ ಭಟ್‌, ಅನುವಂಶೀಯ ಮೊಕ್ತೇಸರ ಅಶೋಕ್‌ ರಾಜ್‌ ಎರ್ಮಾಳು, ಶಂಕರ ಶೆಟ್ಟಿ ಎರ್ಮಾಳು, ನೈಮಾಡಿ ನಾರಾಯಣ ಶೆಟ್ಟಿ, ಎರ್ಮಾಳು ರೋಹಿತ್‌ ಹೆಗ್ಡೆ, ಉದಯ ಕೆ ಶೆಟ್ಟಿ ಎರ್ಮಾಳು, ಕಿಶೋರ್‌ ಶೆಟ್ಟಿ ಎರ್ಮಾಳು, ಸಂತೋಷ್‌ ಶೆಟ್ಟಿ ಬರ್ಪಾಣಿ ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

ಉಡುಪಿ : ಹೆಚ್ ಡಿ ಕುಮಾರಸ್ವಾಮಿಯವರ 64ನೇ ಹುಟ್ಟುಹಬ್ಬ ; ಉಡುಪಿ ಆಶಾ ನಿಲಯದ ಮಕ್ಕಳೊಂದಿಗೆ ಆಚರಣೆ

Thumbnail
Posted On: 16 Dec 2022, 05:01 PM

ಉಡುಪಿ : ಕರ್ನಾಟಕ ಸರ್ಕಾರದ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರ 64ನೇ ಹುಟ್ಟುಹಬ್ಬವನ್ನು ಇಂದು ಉಡುಪಿ ಆಶಾ ನಿಲಯ ವಿಕಲಚೇತನ ಮಕ್ಕಳೊಂದಿಗೆ ಕೇಕ್ ಕತ್ತರಿಸಿ ಆಚರಿಸಲಾಯಿತು. ಕೇಕ್ ಕತ್ತರಿಸಿ ಮಾತನಾಡಿದ ಜಿಲ್ಲಾಧ್ಯಕ್ಷರಾದ ಯೋಗೇಶ್ ವಿ ಶೆಟ್ಟಿಯವರು, ಪ್ರತಿ ವರ್ಷದಂತೆ ಈ ವರ್ಷ ಕೂಡ ವಿಕಲ ಚೇತನ ಮಕ್ಕಳೊಂದಿಗೆ ಬೆರೆತು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕುಮಾರಸ್ವಾಮಿಯವರಿಗೆ ವಿಕಲಚೇತನ ಮಕ್ಕಳಲ್ಲಿ ಅತಿಯಾದ ಪ್ರೇಮ ಹಾಗೂ ಮುಖ್ಯಮಂತ್ರಿ ಆಗಿದ್ದ ಸಂದರ್ಭ ವಿಕಲಚೇತನ ಮಕ್ಕಳಿಗೆ ಕ್ಷೀರಭಾಗ್ಯ ಮತ್ತು ಇತರ ಕಾರ್ಯಕ್ರಮಗಳನ್ನು ನಾಡಿಗೆ ನೀಡಿದ್ದರು. ಈ ಸಂದರ್ಭ ಅವರಿಗೆ ದೇವರು ಆರೋಗ್ಯ, ಆಯುಷ್ಯವನ್ನು ದೇವರು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥನೆ ಮಾಡಿದರು ಮತ್ತು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ಅತೀ ಹೆಚ್ಚು ಸೀಟು ಲಭಿಸಿ ಕರ್ನಾಟಕದ ಮುಖ್ಯಮಂತ್ರಿ ಆಗುತ್ತಾರೆ ಎಂದು ನುಡಿದರು ಮತ್ತು ಹುಟ್ಟುಹಬ್ಬದ ಶುಭಾಶಯಗಳು ಕೋರಿದರು. ತದ ನಂತರ ಮಕ್ಕಳಿಗೆ ಮಧ್ಯಾಹ್ನದ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಆಶಾ ನಿಲಯದ ಎಚ್ಎಂ ಶಶಿಕಲಾ ಕೋಟ್ಯಾನ್ ಮತ್ತು ಸಿಬ್ಬಂದಿ ವರ್ಗದವರು ಸಹಕರಿಸಿದರು. ಈ ಸಂದರ್ಭ ರಾಜ್ಯ ಕಾರ್ಯದರ್ಶಿ ಸುಧಾಕರ ಶೆಟ್ಟಿ,ಜಿಲ್ಲಾ ಕಾರ್ಯಾಧ್ಯಕ್ಷರಾದ ವಾಸುದೇವ ರಾವ್, ಗಂಗಾಧರ ಬಿರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಮಹಿಳಾ ಅಧ್ಯಕ್ಷ ಶಾಲಿನಿ ಆರ್ ಶೆಟ್ಟಿ ಕೆಂಚನೂರು, ಜಿಲ್ಲಾ ಯುವ ನಾಯಕ ಸಂಜಯ್ ಕುಮಾರ್, ದಕ್ಷಿತ್ ಶೆಟ್ಟಿ, ಬಾಲಕೃಷ್ಣ ಆಚಾರ್ಯ, ಇಕ್ಬಾಲ್ ಅತ್ರಾಡಿ, ಭರತ್ ಕುಮಾರ್ ಶೆಟ್ಟಿ, ಇಸ್ಮಾಯಿಲ್ ಪಲಿಮಾರ್, ವೆಂಕಟೇಶ್ ಎಂಟಿ, ವಿಶಾಲಾಕ್ಷಿ ಶೆಟ್ಟಿ, ರಾಮರಾವ್, ಹರಣಿಕೋಟ್ಯಾನ್, ಅರುಣಾಕಿಣಿ, ಮಮತಾ, ರಂಗ ಆರ್ ಕೋಟ್ಯಾನ್, ಅರವಿಂದ ಶೆಟ್ಟಿ, ರೋಹಿತಾ ಶೆಟ್ಟಿ, ಪಕ್ಷ ಕಾರ್ಯಕರ್ತರು ಉಪಸ್ಥಿತರಿದ್ದರು.