Updated News From Kaup

ಉಡುಪಿ : ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ, ಗಾಲಿಕುರ್ಚಿಗಳ ವಿತರಣಾ ಕಾರ್ಯಕ್ರಮ

Posted On: 20-10-2022 11:07PM

ಉಡುಪಿ : ಸೇವಾಭಾರತಿ - ಸೇವಾಧಾಮ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ ಹೈಟೆಕ್‌ ಮೆಡಿಕೇರ್ ಆಸ್ಪತ್ರೆ, ಅಂಬಲಪಾಡಿ ಉಡುಪಿ, ರೋಟರಿ ಕ್ಲಬ್ ಕಾಪು, ಅಮ್ಮ ರಿಲೀಜಿಯಸ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.), ಕಾಪು ಮತ್ತು ದಿವ್ಯಾಂಗ ರಕ್ಷಣಾ ಸಮಿತಿ, ಕೊಡವೂರು ಇವುಗಳ ಸಹಯೋಗದಲ್ಲಿ ಅಕ್ಟೋಬರ್ 19ರಂದು ಹೈಟೆಕ್ ಮೆಡಿಕೇರ್ ಆಸ್ಪತ್ರೆ ಅಂಬಲಪಾಡಿ ಉಡುಪಿ ಇಲ್ಲಿ 16ನೇ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಮತ್ತು 10 ಗಾಲಿಕುರ್ಚಿಗಳ ವಿತರಣಾ ಕಾರ್ಯಕ್ರಮವನ್ನು ರೋಟರಿಯ ಝೋನ್ -5 ಸಹಾಯಕ ಗವರ್ನರ್ ರೊ. ಡಾ| ಶಶಿಕಾಂತ ಕಾರಿಂಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇವಾಭಾರತಿ, ಬೆಳ್ತಂಗಡಿ ಅಧ್ಯಕ್ಷರಾದ ಕೆ. ವಿನಾಯಕ ರಾವ್ ವಹಿಸಿದ್ದರು.

ನವಂಬರ್ 7 ರಂದು ಉಡುಪಿಗೆ ಬರಲಿರುವ ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ದಿಗ್ವಿಜಯ ಯಾತ್ರೆ ಪೂರ್ವ ತಯಾರಿ ಸಭೆ

Posted On: 20-10-2022 10:25PM

ಉಡುಪಿ : ಅಯೋಧ್ಯ ಶ್ರೀ ರಾಮಚಂದ್ರನ ದಿಗ್ವಿಜಯ ಯಾತ್ರೆಯ ಪೂರ್ವ ತಯಾರಿ ಬೈಠಕ್ ಅಕ್ಟೋಬರ್ 17 ರಂದು ಅಮೃತ ಗಾರ್ಡನ್ ಸಭಾಂಗಣದಲ್ಲಿ ನಡೆಯಿತು. ಅಯೋಧ್ಯ ಪ್ರಭು ಶ್ರೀ ರಾಮಚಂದ್ರನ ದಿಗ್ವಿಜಯ ಯಾತ್ರೆಯು 26 ರಾಜ್ಯಗಳನ್ನು ಸುತ್ತಾಡಿ ಬರುವ ಯಾತ್ರೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾತ್ ಚಾಲನೆಯನ್ನು ನೀಡಿದ್ದು. ಈ ಯಾತ್ರೆಯು ನವಂಬರ್ 7 ರಂದು ಉಡುಪಿ ಜಿಲ್ಲೆಗೆ ಬರಲಿದ್ದು ಇದಕ್ಕೆ ಪೂರ್ವ ತಯಾರಿಗಾಗಿ ಯೋಚನೆ ಮತ್ತು ಯೋಜನೆಗಾಗಿ ಸಮಿತಿಯನ್ನು ರಚನೆಯನ್ನು ಮಾಡಲಾಯಿತು.

ನಾಡದೋಣಿಗಳಿಗೆ ಸೀಮೆ ಎಣ್ಣೆ ಪೂರೈಸಲು ಕಾಪುವಿನಲ್ಲಿ ಶಾಸಕರಿಗೆ ಮನವಿ

Posted On: 20-10-2022 08:45PM

ಕಾಪು : ಕಳೆದ 2 ತಿಂಗಳಿಂದ ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಪೂರೈಕೆ ಸ್ಥಗಿತಗೊಳಿಸಲಾಗಿದ್ದು, ತಕ್ಷಣ ಸೀಮೆ ಎಣ್ಣೆ ಪೂರೈಸುವಂತೆ ಗುರುವಾರ ಹೆಜಮಾಡಿ ಪಟ್ಟೆಬಲೆ ಮತ್ತು ಕಂತಬಲೆ ಯೂನಿಯನ್ ಸದಸ್ಯರು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್‌ರವರಿಗೆ ಕಾಪುವಿನಲ್ಲಿ ಮನವಿ ಸಲ್ಲಿಸಿದ್ದಾರೆ.

ಕುತ್ಯಾರು ಗ್ರಾ. ಪಂ ವಿವಿಧ ಕಾಮಗಾರಿಗಳಿಗೆ 3 ಕೋಟಿ 27 ಲಕ್ಷ ರೂ ಅನುದಾನ ; ಗುದ್ದಲಿ ಪೂಜೆ ; ಉದ್ಘಾಟನೆ

Posted On: 20-10-2022 10:44AM

ಕುತ್ಯಾರು : ಕಾಪು ತಾಲೂಕಿನ ಕುತ್ಯಾರು ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 3 ಕೋಟಿ 27 ಲಕ್ಷ ರೂಗಳ ವಿವಿಧ ಕಾಮಗಾರಿಗಳಲ್ಲಿ ಸುಮಾರು 19 ಕಾಮಗಾರಿಗಳಿಗೆ ಗುದ್ದಲಿ ಪೂಜೆ ಹಾಗೂ 3 ಕಾಮಗಾರಿಗಳಿಗೆ ಉದ್ಘಾಟನೆ ಶಾಸಕರಾದ ಲಾಲಾಜಿ ಆರ್ ಮೆಂಡನ್ ಗುದ್ದಲಿ ಪೂಜೆ ನೆರವೇರಿಸಿದರು.

ಪಡುಬಿದ್ರಿ : ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ, ಕೊರಗಜ್ಜ ದೈವದ ನೇಮೋತ್ಸವ, ಸಭಾ ಕಾರ್ಯಕ್ರಮ

Posted On: 20-10-2022 10:36AM

ಪಡುಬಿದ್ರಿ : ಕಾಪು ತಾಲೂಕಿನ ತಾಲೂಕಿನ ಸಾವಿರಾರು ವರ್ಷಗಳ ಇತಿಹಾಸವಿರುವ ಪಡುಬಿದ್ರಿಯ ಶ್ರೀ ಆದಿಶಕ್ತಿ ಆದಿ ಮಾಯೆ ಅಣ್ಣಪ್ಪ ಪಂಜುರ್ಲಿ ಮಂತ್ರ ದೇವತೆ ಹಾಗೂ ಸ್ವಾಮಿ ಕೊರಗಜ್ಜ ಸನ್ನಿಧಿಯಲ್ಲಿ ಅಕ್ಟೋಬರ್ 22, ಶನಿವಾರ ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ವಿಜ್ಞಾಪನ ಪತ್ರ ಬಿಡುಗಡೆ ಹಾಗೂ ಸಂಜೆ 4 ಗಂಟೆಗೆ ಕೊರಗಜ್ಜ ದೈವದ ನೇಮೋತ್ಸವ ಹಾಗೂ ಸಭಾ ಕಾರ್ಯಕ್ರಮ ಜರಗಲಿದೆ.

ಇನ್ನಂಜೆ : ನರಕ ಚತುರ್ದಶಿಯಂದು ಗೊಳಿಕಟ್ಟೆಯಲ್ಲಿ ಮುಳ್ಳಮುಟ್ಟೆ ಕಾರ್ಯಕ್ರಮ

Posted On: 19-10-2022 03:08PM

ಇನ್ನಂಜೆ : ದೀಪಾವಳಿ ಹಬ್ಬಕ್ಕೆ ಮುಂಚಿತವಾಗಿ ನರಕ ಚತುರ್ದಶಿಯ ಪ್ರಯುಕ್ತ ವರ್ಷಂಪ್ರತಿ ನಡೆಯುವ ಮುಳ್ಳಮುಟ್ಟೆ ಕಾರ್ಯಕ್ರಮದಲ್ಲಿ ಜೋಡುಬಂಟ ನರ್ತನ ಸೇವೆಯು ಉಂಡಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಿಂದ ಹೊರಟು ವಿಠೋಬಾ ಭಜನಾ ಮಂದಿರ ಗೊಳಿಕಟ್ಟೆ ಇಲ್ಲಿಗೆ ಮೆರವಣಿಗೆಯ ಮೂಲಕ ಸಾಗಿ ಊರಿಗೆ ಬಂದಿರುವ ದುರಿತಗಳು ತೊಲಗಲಿ ಹಾಗೂ ನರಕಾಸುರನ ವಧೆ ಎಂಬ ಉದ್ದೇಶದಿಂದ ಮುಳ್ಳಿನ ರಾಶಿಗೆ ಬೆಂಕಿ ಕೊಡುವುದು ವಾಡಿಕೆಯಾಗಿದೆ.

ವಿಕಲ ಚೇತನರ ಬಾಳಿನಲ್ಲಿ ಬೆಳಕು ಕಾಣುವ NSCDF ಕಾರ್ಯ ಸ್ತುತ್ಯರ್ಹ : ಲಾಲಾಜಿ‌ ಆರ್ ಮೆಂಡನ್

Posted On: 18-10-2022 11:05PM

ಕಾಪು : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (KSDL) ಬೆಂಗಳೂರು ಪ್ರಾಯೋಜಕತ್ವದಲ್ಲಿ ರಾಷ್ಟ್ರೀಯ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (NSCDF) ಮಂಗಳೂರು ಸಾರಥ್ಯದಲ್ಲಿ ಉಡುಪಿ ಜಿಲ್ಲೆಯ ಕಾಪು ವಿಧಾನ ಸಭಾ ಕ್ಷೇತ್ರದ ವಿಕಲಚೇತನರಿಗೆ ಪರಿಕರ ವಿತರಣಾ ಕಾರ್ಯಕ್ರಮ ಅಕ್ಟೋಬರ್ 18ರಂದು ಕಾಪುವಿನ ಶ್ರೀ ಆದಿಶಕ್ತಿ ವೀರಭದ್ರ ಸಭಾಂಗಣದಲ್ಲಿ ನಡೆಯಿತು.

ಇನ್ನಂಜೆ : ದಿವಂಗತ ಕೆ. ಸದಾನಂದ ಶೆಟ್ಟಿ - ನುಡಿನಮನ, ಸಂಸ್ಮರಣೆ

Posted On: 18-10-2022 08:16PM

ಕಾಪು : ಯಸ್. ವಿ.ಯಚ್ ವಿದ್ಯಾಸಂಸ್ಥೆಯ ಸಂಚಾಲಕರಾಗಿದ್ದ, ಶಿಕ್ಷಣ ಪ್ರೇಮಿ ಸಮಾಜಸೇವಕ ಮಂಡೇಡಿ ಹೊಸಮನೆ ದಿವಂಗತ ಕೆ. ಸದಾನಂದ ಶೆಟ್ಟಿ ಅವರಿಗೆ ನುಡಿ ನಮನ ಹಾಗೂ ಸಂಸ್ಮರಣಾ ಕಾರ್ಯಕ್ರಮವು ಶಾಲೆಯ ಹಯವದನ ಸಭಾ ಮಂಟಪದಲ್ಲಿ ಇತ್ತೀಚೆಗೆ ನಡೆಯಿತು. ಆಡಳಿತಾಧಿಕಾರಿ ಅನಂತ ಮೂಡಿತ್ತಾಯ ಸಭಾಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲರಾದ ಪುಂಡರಿಕಾಕ್ಷ ಕೊಡಂಚ, ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಶೆಟ್ಟಿ ನುಡಿ ನಮನ ಸಮರ್ಪಿಸಿದರು.

ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇಗುಲಕ್ಕೆ ಕಾಶಿ ಮಠಾಧೀಶರ ಭೇಟಿ ; ಪಾದಪೂಜೆ

Posted On: 18-10-2022 08:00PM

ಕಾಪು : ಇತಿಹಾಸ ಪ್ರಸಿದ್ಧ ಕಾಪು ಶ್ರೀ ವೆಂಕಟರಮಣ ದೇಗುಲಕ್ಕೆ ಮಂಗಳವಾರ ಕಾಶಿ ಮಠಾಧೀಶರಾದ ಶ್ರೀಮದ್ ಸಯಮೀಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ ವೆಂಕಟರಮಣ ದೇವರ ದರ್ಶನ ಪಡೆದರು. ದೇವಳದ ವತಿಯಿಂದ ಸ್ವಾಮೀಜಿಯವರ ಪಾದ ಪೂಜೆ ನೆರವೇರಿಸಲಾಯಿತು.

ಅಕ್ಟೋಬರ್ 30 : ಕಾಪುವಿನಲ್ಲಿ ಬೃಹತ್ ರಕ್ತದಾನ ಶಿಬಿರ

Posted On: 18-10-2022 06:15PM

ಕಾಪು : ಧರಣಿ ಸಮಾಜ ಸೇವಾ ಸಂಘ ಕಾಪು, ಜೆಸಿಐ ಕಾಪು ಮತ್ತು ಶಬರಿಮಲೈ ಅಯ್ಯಪ್ಪ ಸೇವಾ ಸಮಾಜಂ ಕಾಪು ವಲಯ ಇವರ ಆಶ್ರಯದಲ್ಲಿ ಸರಕಾರಿ ಜಿಲ್ಲಾ ಆಸ್ಪತ್ರೆ, ಅಜ್ಜರಕಾಡು, ಉಡುಪಿ ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ ಗಂಟೆ 9ರಿಂದ ಅಪರಾಹ್ನ ಗಂಟೆ 1ರ ತನಕ ವೀರಭದ್ರ ಸಭಾಭವನ, ಕಾಪು ಇಲ್ಲಿ ಜರಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.