Updated News From Kaup

ಶಿರ್ವ : ಮಕ್ಕಳಿಗೆ ಹೆತ್ತವರು ದ್ವಿ ಚಕ್ರ ವಾಹನ ನೀಡಬೇಡಿ - ರಾಘವೇಂದ್ರ ಸಿ

Thumbnail
Posted On: 16 Dec 2022, 04:52 PM

ಶಿರ್ವ : ಹದಿನೆಂಟು ವಯಸ್ಸಾಗದ ಕೆಳ ವಯಸ್ಸಿನ ಮಕ್ಕಳಿಗೆ ದ್ವಿ ಚಕ್ರ ವಾಹನ ಹಾಗೂ ಇತರ ವಾಹನ ನೀಡದೆ ಸಂಪೂರ್ಣ ವಾಹನ ಚಾಲನೆ ಪರವಾನಿಗೆ ಪಡೆದ ಮೇಲೆ ವಾಹನವನ್ನು ರಸ್ತೆಗೆ ಇಳಿಸಬೇಕು ಹೆತ್ತವರು ಜಾಗ್ರತೆ ವಹಿಸಿ ಮಕ್ಕಳನ್ನು ಅಪಾಯದಿಂದ ರಕ್ಷಿಸಿಕೊಳ್ಳಿ. ಅದಲ್ಲದೆ ಮಾದಕ ದ್ರವ್ಯಗಳ ಕುರಿತು ಎಚ್ಚರಿಕೆಯಿಂದಿದ್ದು ಎಲ್ಲಾ ವಾಹನ ಮಾಲಕರು ತನ್ನ ವಾಹನದ ನಾಲ್ಕು ಬಗೆಯ ದಾಖಲೆಯನ್ನು ವಾಹನದಲ್ಲಿರಿಸಿ ತಪಾಸಣೆ ಸಮಯದಲ್ಲಿ ಸಾರ್ವಜನಿಕರು ಸಹಕರಿಸಬೇಕು ಮನೆಯಿಂದ ಹೊರಗೆ ಹೋಗುವಾಗ ಮನೆಯ ಸುರಕ್ಷತೆಯಿಂದ ಕಾಪಾಡಬೇಕು ಅಪರಾಧ ಆದಾಗ ಪೊಲೀಸರನ್ನು ಕೂಡಲೇ ಸಂಪರ್ಕಿಸಬೇಕು ನಾವೂ ಸದಾ ನಿಮ್ಮ ಸೇವೆಯಲ್ಲಿ ಇರುತ್ತೇವೆ ಎಂದು ಕಳತ್ತೂರು ಚಂದ್ರನಗರದ ಬಟರ್ ಫ್ಲೈ ಗೆಸ್ಟ್ ಹೌಸ್ ಸಭಾಂಗಣದಲ್ಲಿ ಶಿರ್ವ ಪೊಲೀಸ್ ಠಾಣಾ ವತಿಯಿಂದ ನಡೆದ ಅಪರಾಧ ಮಾಸ ತಡೆ ಮಾಸಚರಣೆ ಸಭೆಯಲ್ಲಿ ಶಿರ್ವ ಠಾಣಾಧಿಕಾರಿ ರಾಘವೇಂದ್ರ ಮಾತನಾಡಿ ಸಾರ್ವಜನಿಕರಿಗೆ ಸಲಹೆ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಎಸ್.ಐ ಶಶಿಧರ್, ಎ.ಎಸ್.ಐ ಶ್ರೀಧರ್ ಕೆ.ಜೆ, ಜನಸಂಪರ್ಕ ಜನಸೇವಾ ವೇದಿಕೆ ಅಧ್ಯಕ್ಷರಾದ ದಿವಾಕರ ಬಿ ಶೆಟ್ಟಿ, ಕಾಪು ಸಮಾಜ ಸೇವಾ ವೇದಿಕೆ ಅಧ್ಯಕ್ಷರಾದ ಫಾರೂಕ್ ಚಂದ್ರನಗರ, ಸಂಚಾಲಕರಾದ ದಿವಾಕರ ಡಿ ಶೆಟ್ಟಿ, ಬಟರ್ ಫ್ಲೈ ಆಡಳಿತ ನಿರ್ದೇಶಕರಾದ ಹಾಜಿ ಕೆ.ಉಮ್ಮರಬ್ಬ, ಚಂದ್ರನಗರ ಪೊಲೀಸ್ ಸಿಬ್ಬಂದಿಗಳಾದ ಪ್ರಸಾದ್, ಬೀಟ್ ಪೊಲೀಸ್ ಅನ್ವರ್ ಹಾಗೂ ಗ್ರಾಮದ ಸದಸ್ಯರು ಉಪಸ್ಥಿತರಿದ್ದರು.

ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ಪ್ರವಾಸಿಗರ ರಕ್ಷಣೆ

Thumbnail
Posted On: 16 Dec 2022, 12:25 PM

ಕಾಪು : ಕಾಪು ಲೈಟ್ ಹೌಸ್ ಬೀಚ್ ಬಳಿ ಸಮುದ್ರದಲ್ಲಿ ನೀರು ಪಾಲಾಗುತ್ತಿದ್ದ ಹೈದರಾಬಾದ್ ಮೂಲದ ಇಬ್ಬರು ಪ್ರವಾಸಿಗರನ್ನು ಕಾಪು ಬೀಚ್‌ನ ಲೈಫ್ ಗಾರ್ಡ್‌ಗಳು ರಕ್ಷಿಸಿದ್ದಾರೆ. ಹೈದರಾಬಾದ್‌ನ ನವೀನ್ (25) ಮತ್ತು ಸಾಯಿತೇಜ (27) ಕಾಪು ಬೀಚ್‌ನಲ್ಲಿ ಸಮುದ್ರ ಪಾಲಾಗುತ್ತಿದ್ದ ವೇಳೆ ಲೈಫ್ ಗಾರ್ಡ್‌ಗಳಿಂದ ಜೀವದಾನ ಪಡೆದ ಪ್ರವಾಸಿಗರು. ಗುರುವಾರ ಸಂಜೆ ಕಾಪು ಬೀಚ್‌ಗೆ ಬಂದಿದ್ದ ಹೈದರಾಬಾದ್‌ನ ಇಬ್ಬರು ಯುವಕರು ಮತ್ತು ಓರ್ವ ಯುವತಿ ಸಮುದ್ರ ಸ್ನಾನಕ್ಕೆ ಇಳಿದಿದ್ದರು. ಈ ಸಂದರ್ಭ ಅವರನ್ನು ಲೈಫ್ ಗಾರ್ಡ್‌ಗಳು ಎಚ್ಚರಿಕೆ ನೀಡಿ ಅವರನ್ನು ನೀರಿನಿಂದ ಮೇಲಕ್ಕೆ ಕಳುಹಿಸಿದ್ದರು. ಎರಡು ಮೂರು ಸಾರಿ ಹೇಳಿದ್ದರೂ ನಿರ್ಲಕ್ಷಿಸಿ ಲೈಟ್‌ಹೌಸ್‌ನ ಬಂಡೆಯ ಮೇಲೆ ಹೋಗಿದ್ದ ಯುವಕರು ಕಲ್ಲಿನಲ್ಲಿ ಜಾರುತ್ತಾ ಸಮುದ್ರದೊಳಗೆ ಬಿದ್ದಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್‌ಗಳಾದ ಲಕ್ಷ್ಮಣ್, ಸಂದೇಶ್, ಸುಜಿನ್ ಹಾಗೂ ಬೋಟ್ ರೈಡರ್‍ಸ್ ತಂಡದ ಹುಸೇನ್ ಮತ್ತು ಕಾರ್ತಿಕ್ ಸಮುದ್ರಕ್ಕೆ ತೆರಳಿ ನೀರು ಪಾಲಾಗುತ್ತಿದ್ದ ಯುವಕರನ್ನು ರಕ್ಷಿಸಿದ್ದಾರೆ. ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದ ಯುವಕರನ್ನು ರಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದಾರೆ.

ಸಂತ ಮೇರಿ ಮಹಾವಿದ್ಯಾಲಯ ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ತರಬೇತಿ ಶಿಬಿರ'

Thumbnail
Posted On: 16 Dec 2022, 11:09 AM

ಶಿರ್ವ : ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರವು ಏರ್ಪಡಿಸಲಾಯಿತು. ಶಸ್ತ್ರಾಸ್ತ್ರ ಕಲಿಕೆ ಒಂದು ಸುವರ್ಣ ಅವಕಾಶ , ಇದು ಎಲ್ಲಾ ವಿದ್ಯಾರ್ಥಿಗಳಿಗೆ ಸಿಗುವುದಿಲ್ಲ ಕೆಡೆಟ್ಗಳು ಈ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ!ಹೆರಾಲ್ಡ್ ಐವನ್ ಮೋನಿಸ್ ರವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದಂತ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ,ಕ್ಯಾಡೆಟ್ ಗಳಾದ ಪೂಜಾ, ಹುಳಿದ್ರ ಖುಷಿ, ಲಾಯ್ ವಿನ್ಸ್ಟನ್ ಫರ್ನಾಂಡಿಸ್ ರವರನ್ನು ಅಭಿನಂದಿಸಲಾಯಿತು. ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್‍ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ, ಮುಂದೆ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ಹಾಗೂ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು ಮಾತನಾಡಿದರು. ಲ್ಯಾನ್ಸ್ ಕಾರ್ಪೋರಲ್ ಶೆಟ್ಟಿಗಾರ ಹೇಮಶ್ರೀ ಸುದರ್ಶನ್ ತರಬೇತಿನ ಮುಖ್ಯ ಉದ್ದೇಶ ಮತ್ತು ಪ್ರಯೋಜನವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಬಿಎಚ್‌ಎಂ ಮಹೇಂದ್ರ ಲಿಂಬು, ಹವಾಲ್ದಾರ್ ಪೆಶಲ್ ಬಿಡಿಆರ್ ತಮಾಂಗ್, ಭೂ-ಯುವ ಸೇನಾದಳದ ಕೆಡೆಟ್‍ಗಳನ್ನು ಎನ್.ಸಿ.ಸಿ. ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ಕವಾಯತು, ಭೂಪಟ ಅಧ್ಯಯನ, ಫೈರಿಂಗ್ ಅಣಕುಯುದ್ಧ, ಶಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯಮೂಲಕ ತಿಳಿಸಿ ತರಬೇತಿ ನಡೆಸಿಕೊಟ್ಟರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಲೋಬೋ ಆನ್ ರಿಯಾ ನೇವಿಲ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ, ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ವಾಣಿ ಯು ಸಾಲಿಯಾನ್ ಸ್ವಾಗತಿಸಿ, ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್ ವಂದಿಸಿದರು. ಸೋನಾಲಿ ಕುಲಾಲ್ ಕಾರ್ಯಕ್ರಮ ನಿರೂಪಿಸಿದರು.

ಪಡುಬಿದ್ರಿ : ಹೆಜ್ಜೇನು ದಾಳಿ - ಓರ್ವ ಮೃತ ; ಇನ್ನೋರ್ವ ಗಂಭೀರ

Thumbnail
Posted On: 15 Dec 2022, 08:06 PM

ಪಡುಬಿದ್ರಿ : ಇಲ್ಲಿನ ಬೀಚ್ ಬಳಿ ಹೆಜ್ಜೇನು ದಾಳಿಯಿಂದ ಒರ್ವ ವ್ಯಕ್ತಿ ಮೃತಪಟ್ಟರು ಇನ್ನೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದು ಹಲವರು ಗಾಯಗೊಂಡಿರುವ ಘಟನೆ ಇಂದು ನಡೆದಿದೆ. ಮೃತ ವ್ಯಕ್ತಿ ಸ್ಥಳೀಯ ನಿವಾಸಿ ವಾಸುದೇವ ಡಿ. ಸಾಲ್ಯಾನ್ (65) ರಕ್ಷಣೆಗಾಗಿ ಸಮುದ್ರದ ನೀರಿಗೆ ಹಾರಿದವರು ಮತ್ತೆ ಮೇಲೆ ಬರಲಾಗದೆ ಅಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬುದಾಗಿ ಸ್ಥಳೀಯರು ತಿಳಿಸಿದ್ದಾರೆ. ಚಂದ್ರಶೇಖರ (65) ಗಂಭೀರ ಗಾಯಗೊಂಡಿದ್ದು ಅವರನ್ನು ತಕ್ಷಣ ಪಡುಬಿದ್ರಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳೀಯವಾಗಿ ಹಲವರ ಮೇಲೆ ದಾಳಿ ನಡೆಯಿತಾದರೂ ಅವರು ಓಡಿ ತಪ್ಪಿಸಿಕೊಂಡಿದ್ದಾರೆ. ಬೀಚ್ ಬಳಿಯ ಆಂಗ್ಲ ಮಾಧ್ಯಮ ಶಾಲೆ ಬಿಟ್ಟು ಶಾಲಾ ವಾಹನ ಮಕ್ಕಳನ್ನು ಹೇರಿಕೊಂಡು ಹೋಗಿದ್ದರಾದರೂ ನಡೆದುಕೊಂಡು ಹೋಗುವ ಮಕ್ಕಳು ಇನ್ನೇನು ಆ ಪ್ರದೇಶಕ್ಕೆ ಬರುತ್ತಾರೆ ಎನ್ನುವಾಗ ಸಾರ್ವಜನಿಕರು ಬೊಬ್ಬೆ ಹಾಕಿ ಮಕ್ಕಳನ್ನು ತಡೆದ್ದರಿಂದ ಬಾರೀ ಅನಾಹುತ ತಪ್ಪಿದಂತ್ತಾಗಿದೆ. ಭಾನುವಾರವಾಗಿದ್ದರೆ ಈ ಬೀಚ್ ಪ್ರದೇಶದಲ್ಲಿ ಬಾರೀ ಜನ ಸಂದಣಿ ಇರುತ್ತಿದ್ದು ಮತ್ತಷ್ಟು ದುರಂತ ಸಂಬವಿಸುತ್ತಿತ್ತು ಎನ್ನುತ್ತಾರೆ ಸ್ಥಳೀಯರು. ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿಯವರು ಆ ಹೆಜ್ಜೇನು ಹಿಂಡನ್ನು ತೆರವು ಮಾಡುವಂತೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾಂಗಾಳದಲ್ಲಿ ಮಹಾಲಕ್ಷ್ಮೀ ರೆಡಿಮೇಡ್ ಗಾರ್ಮೆಂಟ್ಸ್ ಉದ್ಘಾಟನೆ

Thumbnail
Posted On: 15 Dec 2022, 02:45 PM

ಪಾಂಗಾಳ : ಇಲ್ಲಿನ ಬರೋಡಾ ಬ್ಯಾಂಕ್ ನ ಎದುರುಗಡೆ ಇರುವ ಕೆ.ಕೆ. ಆರ್ಕೆಡ್, ಒಂದನೇ ಮಹಡಿಯಲ್ಲಿ ಮಹಾಲಕ್ಷ್ಮೀ ರೆಡಿಮೇಡ್ ಗಾರ್ಮೆಂಟ್ಸ್ ನ್ನು ಬುಧವಾರ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು. ವಿವಿಧ ರೀತಿಯ ಕಾಟನ್ ನೈಟಿಗಳು, ಕಾಟನ್ ಸೀರೆಯ ಸ್ಕರ್ಟ್‌ಗಳನ್ನು ಹೋಲ್‌ ಸೇಲ್‌ ದರದಲ್ಲಿ ತಯಾರಿ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 7760862063

ಉಡುಪಿ : ಟೋಲ್ ಗೇಟ್ - ಸಮಾನ ಮನಸ್ಕರ ಸಭೆ ; ಅಧ್ಯಾದೇಶದ ವಾಪಾಸಿಗೆ ಧರಣಿಯ ತೀರ್ಮಾನ

Thumbnail
Posted On: 14 Dec 2022, 10:01 PM

ಉಡುಪಿ : ಸುರತ್ಕಲ್ ನಿಂದ ತೆರವುಗೊಳಿಸಿರುವ ಅಕ್ರಮ ಟೋಲ್ ಗೇಟ್ ಅನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿಲೀನಗೊಳಿಸಿ ಸುರತ್ಕಲ್ ಟೋಲ್ ಸುಂಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಸಂಗ್ರಹಿಸುವ ಹೆದ್ದಾರಿ ಪ್ರಾಧಿಕಾರದ ಆದ್ಯಾದೇಶ ಜಾರಿಗೊಳಿಸಲು ತೆರೆಮರೆಯಲ್ಲಿ ಪ್ರಯತ್ನಗಳು ನಡೆಯುತ್ತಿರುವ ಹಿನ್ನಲೆಯಲ್ಲಿ ನಡೆಸಬೇಕಾದ ಹೋರಾಟದ ಕುರಿತು ಚರ್ಚಿಸಲು ಉಡುಪಿ ಅಜ್ಜರಕಾಡಿನಲ್ಲಿ ಇಂದು ಸಮಾನ ಮನಸ್ಕ ಸಂಘಟನೆಗಳ ಸಭೆ ನಡೆಯಿತು. ವಿನಯ ಕುಮಾರ್ ಸೊರಕೆ, ಮುನೀರ್ ಕಾಟಿಪಳ್ಳ, ಅಭಯ ಚಂದ್ರ ಜೈನ್, ಬಾಲಕೃಷ್ಣ ಶೆಟ್ಟಿ, ಎಮ್ ಜಿ ಹೆಗ್ಢೆ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಶೇಖರ ಹೆಜಮಾಡಿ, ರಮೇಶ್ ಕಾಂಚನ್, ನವೀನ್ ಚಂದ್ರ ಶೆಟ್ಟಿ ,ಸುಂದರ ಮಾಸ್ತರ್, ನೇರ್ಗಿ, ರಾಲ್ಫಿ ಡಿ ಕೋಸ್ತ, ಫಣಿರಾಜ್, ಸುರೇಶ್ ಕಲ್ಲಾಗರ, ರಮೀಜ್ ಪಡುಬಿದ್ರೆ, ಧೀರಜ್, ಸುಧೀರ್ ಕರ್ಕೇರ, ಸುಭಾಷ್ ಸಾಲ್ಯಾನ್, ಶೇಕಬ್ಬ ಕೋಟೆ, ಇಬ್ರಹಿಮ್ ಸನ ,ಯತೀಶ್ ಕರ್ಕೇರಾ ಸಹಿತ ಉಡುಪಿ ಯ ಹಲವು ಸಂಘಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು. ಮುಂದೆ ನಡೆಸಬೇಕಾದ ಹೋರಾಟಗಳ ಕುರಿತು ವಿಸ್ತೃತ ಚರ್ಚೆ ನಡೆಯಿತು. ಡಿಸೆಂಬರ್ 29 ರಂದು ಉಡುಪಿಯಲ್ಲಿ ಅಧ್ಯಾದೇಶದ ವಾಪಾಸು ಪಡೆಯಿರಿ ಎಂಬ ಬೇಡಿಕೆಯಡಿ ಸಾಮೂಹಿಕ ಧರಣಿ ನಡೆಸಲು ತೀರ್ಮಾನಿಸಲಾಯಿತು.

34 ನೇ ವರ್ಷದ ಮುಂಡ್ಕೂರು ನಾನಿಲ್ತಾರ್ ಕುಲಾಲ ಸಂಘದ ವಾರ್ಷಿಕ ಮಹಾಸಭೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Thumbnail
Posted On: 14 Dec 2022, 09:43 PM

ಕಾರ್ಕಳ :ಮುಂಡ್ಕೂರು ನಾನಿಲ್ತಾರ್ ಕುಲಾಲ ಸಂಘದ 34ನೇ ವರ್ಷದ ವಾರ್ಷಿಕ ಮಹಾಸಭೆ, ಶ್ರೀ ಸತ್ಯನಾರಾಯಣ ಪೂಜೆ, ಅಭಿನಂದನ ಕಾರ್ಯಕ್ರಮ, ವೈದಕೀಯ ನೆರವು, ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಬಿಡುಗಡೆ ಬುಧವಾರ ಕುಲಾಲ ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ಕುಶ ಆರ್ ಮೂಲ್ಯ ಅಧ್ಯಕ್ಷತೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಜಯರಾಮ್ ಕುಲಾಲ್, ಜಗನಾಥ್ ಮೂಲ್ಯ, ಸಂತೋಷ್ ಕುಲಾಲ್, ಲೋಕೇಶ್ ಕುಲಾಲ್, ದೀಪಕ್ ಬೆಳ್ಮಣ್ ಉಪಸ್ಥಿತರಿದ್ದರು.

ಉಡುಪಿ : ಹಾವಂಜೆ ಕೊಳಲುಗಿರಿ ದೊಡ್ಡಮನೆ ಮರ್ಲ್ ಜುಮಾದಿ ದೈವದ ದರ್ಶನ ಸೇವೆ

Thumbnail
Posted On: 14 Dec 2022, 09:37 PM

ಉಡುಪಿ : ಜಿಲ್ಲೆಯಲ್ಲಿ 500 ವರ್ಷಗಳ ಇತಿಹಾಸವಿರುವ ಉಡುಪಿ ಜಿಲ್ಲೆಯ ಹಾವಂಜೆ ಕೊಳಲುಗಿರಿ ದೊಡ್ಡಮನೆ ಮರ್ಲ್ ಜುಮಾದಿ ಹಾಗೂ ಬಂಟ ದೈವಗಳ ದೈವಸ್ಥಾನ ಜೀರ್ಣೋದ್ಧಾರದ ಪ್ರಯುಕ್ತ ಬುಧವಾರ ಜುಮಾದಿ ದೈವದ ದರ್ಶನ ಸೇವೆ ಜರಗಿತು. ಈ ಸಂದರ್ಭದಲ್ಲಿ ಸುಂದರ್ ಶೆಟ್ಟಿ, ವಿನೋದ್ ಶೆಟ್ಟಿ, ದೊಡ್ಡನ ಗುಡ್ಡೆ ಅಶೋಕ್ ಶೆಟ್ಟಿ, ಜಯಕರ್ ಶೆಟ್ಟಿ ಪುಣೆ, ಅಶೋಕ್ ಶೆಟ್ಟಿ, ಸುರೇಶ ಶೆಟ್ಟಿ ಹಾಗೂ ಕುಟುಂಬಿಕರು ಉಪಸ್ಥಿತಿಯಿದ್ದರು.

ಡಿಸೆಂಬರ್ 31 : ಮೂಳೂರು ಮೂಲ್ಯ ಮನೆಯಲ್ಲಿ ಸಿರಿ ಸಿಂಗಾರದ ನೇಮೋತ್ಸವ

Thumbnail
Posted On: 14 Dec 2022, 02:33 PM

ಕಾಪು : ತಾಲೂಕಿನ ಮೂಳೂರು ಮೂಲ್ಯ ಮನೆ ಕುಟುಂಬಸ್ಥರು ಆರಾಧಿಸಿಕೊಂಡು ಬಂದಿರುವ ದೈವಗಳ ಹರಕೆಯ ಸಿರಿ ಸಿಂಗಾರದ ನೇಮೋತ್ಸವ ಡಿಸೆಂಬರ್ 31, ಶನಿವಾರದಂದು ಜರಗಲಿದೆ. ಅದೇ ದಿನ ಬೆಳಿಗ್ಗೆ 11:30ಗೆ ಚಪ್ಪರ ಮುಹೂರ್ತ, ಮಧ್ಯಾಹ್ನ 12:30ಕ್ಕೆ ಅನ್ನ ಸಂತರ್ಪಣೆ, ಸಂಜೆ 7 ಗಂಟೆಗೆ ಬಾಳು ಭಂಡಾರ ಹೊರಡುವುದು. ರಾತ್ರಿ 9ಕ್ಕೆ ಸರಿಯಾಗಿ ಮೈಸಂದಾಯ, ಜುಮಾದಿ, ಜುಮಾದಿ ಬಂಟ, ಪಂಜುರ್ಲಿ,ಗುಳಿಗ ಹಾಗೂ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ ಎಂದು ಮೂಳೂರು ಮೂಲ್ಯ ಮನೆಯ ಮುಕ್ಕಾಲ್ದಿ ಅರುಣ್ ಕುಲಾಲ್ ಹಾಗೂ ಕುಟುಂಬಸ್ಥರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪಲಿಮಾರು : ಕೈ ತೋಟ ಕ್ರಾಂತಿಯಾಗಲಿ ಕಾರ್ಯಕ್ರಮ

Thumbnail
Posted On: 11 Dec 2022, 07:08 PM

ಪಲಿಮಾರು : ಹೊೖಗೆ ಫ್ರೆಂಡ್ಸ್ ಹೊೖಗೆ (ರಿ.) ಪಲಿಮಾರು ಹಾಗೂ ಸಾವಯವ ಕೃಷಿಕ ಗ್ರಾಹಕ ಬಳಗ ಮಂಗಳೂರು ಇವರ ಸಹಯೋಗದಲ್ಲಿ ಪಲಿಮಾರು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಕೈ ತೋಟ ಕ್ರಾಂತಿಯಾಗಲಿ ಕಾರ್ಯಕ್ರಮದಡಿ ವಿಷಮುಕ್ತ ಆಹಾರ ನಮ್ಮದಾಗಲಿ ಎಂಬ ಕಾರ್ಯಕ್ರಮವನ್ನು ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ ಉಡುಪರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹರಿಕೃಷ್ಣ ಕಾಮತ್ ಮಾತನಾಡಿ ನಾವು ಸೇವಿಸುವ ಪ್ರತಿಯೊಂದು ಆಹಾರವು ಇಂದು ರಾಸಾಯನಿಕ ಪದಾರ್ಥಗಳಿಂದ ತಯಾರಾಗುತ್ತಿದ್ದು ಕನಿಷ್ಠ ನಾವು ನಮಗೆ ಬೇಕಾದ ತರಕಾರಿಯನ್ನಾದರೂ ನಮ್ಮ ಮನೆಯಂಗಳದಲ್ಲಿ ಸಾವಯವ ಪದ್ದತಿಯಲ್ಲಿ ಬೆಳೆದು ಆರೋಗ್ಯ ಕಾಪಾಡಿಕೊಳ್ಳುವ. ಇಲ್ಲವಾದಲ್ಲಿ ಮುಂದೊಂದು ದಿನ ಕ್ಯಾನ್ಸರ್ ನಂತಹ ಭೀಕರ ಕಾಯಿಲೆಗಳಿಗೆ ತುತ್ತಾಗಬಹುದು ಮತ್ತು ಸಾವಯವ ಪದ್ದತಿಯಲ್ಲಿ ಯಾವ ರೀತಿ ಕೈ ತೋಟ ಮಾಡಬಹುದು ಎಂದು ಮಾಹಿತಿ ನೀಡಿದರು. ಈ ಸಂದರ್ಭ ಪಲಿಮಾರು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಗಾಯತ್ರಿ ಡಿ ಪ್ರಭು, ಸಾವಯವ ಕೃಷಿಕ ಗ್ರಾಹಕ ಬಳಗದ ಕಾರ್ಯದರ್ಶಿ ರತ್ನಾಕರ ಕುಳಾಯಿ, ಉಪಾಧ್ಯಕ್ಷ ರಾದ ರಾಜೇಂದ್ರ ಬಲ್ಲಾಳ್, ಗುರುರಾಜ್ ಭಟ್, ಆಶಾ, ದೀಪಕ್ ಕಾಂಜರ್ ಕಟ್ಟೆ, ವಸಂತ್ ಸನಿಲ್, ಹೊೖಗೆ ಫ್ರೆಂಡ್ಸ್ ಹೊೖಗೆ (ರಿ) ಪಲಿಮಾರ್ ಇದರ ಅಧ್ಯಕ್ಷರಾದ ರಾಘವೇಂದ್ರ ಜೆ ಸುವರ್ಣ, ಕಾರ್ಯದರ್ಶಿ ಸತೀಶ್ ಕುಮಾರ್ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸಾವಯವ ಕೃಷಿಯ ಬಗ್ಗೆ ಮೂರು ಕೈಪಿಡಿಯನ್ನು ಪರಿಚಯಿಸಿ ಭಾಗವಹಿಸಿದ ಆಸಕ್ತರಿಗೆ ತರಕಾರಿ ಬೀಜ ಹಾಗೂ ಗಿಡಗಳನ್ನು ಉಚಿತವಾಗಿ ನೀಡಲಾಯಿತು. ಅರುಣ್ ಎಸ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.