Updated News From Kaup

ಅಕ್ಟೋಬರ್ 18ರ ಟೋಲ್ ತೆರವು ಹೋರಾಟಕ್ಕೆ ಜೆಡಿಎಸ್ ಪಕ್ಷದ ಸಂಪೂರ್ಣ ಬೆಂಬಲವಿದೆ - ಉಡುಪಿ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೇಶ್ ವಿ ಶೆಟ್ಟಿ

Posted On: 16-10-2022 05:05PM

ಕಾಪು : ರಾಷ್ಟ್ರೀಯ ಹೆದ್ದಾರಿಯ ಹತ್ತು ಕಿಲೋಮೀಟರ್ ಅಂತರದಲ್ಲಿ ಎರಡು ಕಡೆ ಟೋಲ್ ಸಂಗ್ರಹಿಸುವುದು ಕಾನೂನು ಬಾಹಿರ ಎಂದು ಸಂಸತ್ತಿನಲ್ಲಿ ಘೋಷಿಸಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ ಮೂರು ತಿಂಗಳೊಳಗೆ ಸುರತ್ಕಲ್ ಟೋಲ್ ಗೇಟ್ ಮುಚ್ಚಿಸುವುದಾಗಿ ಆಶ್ವಾಸನೆ ನೀಡಿದರೂ, ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ ರಾಜ್ಯದಲ್ಲಿ 18 ಇಂತಹ ಅಕ್ರಮ ಟೋಲ್ಗಳಿದ್ದು ಸುರತ್ಕಲ್ ಟೋಲ್ ಗೇಟ್ ಇದರಲ್ಲಿ ಸೇರಿದೆ.

ಕಾಪು ಬೀಚ್ ನ ನೂತನ ಸಿಬ್ಬಂದಿ ಕಚೇರಿ ಉದ್ಘಾಟನೆ

Posted On: 16-10-2022 12:55PM

ಕಾಪು : ಇಲ್ಲಿನ ಬೀಚ್ ನಿರ್ವಹಣಾ ಸಮಿತಿ ಹಾಗೂ ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಕಾಪು ಬೀಚ್ ಪ್ರದೇಶದಲ್ಲಿ ನೂತನವಾಗಿ ನಿರ್ಮಿಸಿರುವ ಬೀಚ್ ಸಿಬ್ಬಂದಿ ಕಚೇರಿಯನ್ನು ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಉದ್ಘಾಟಿಸಿದರು.

ಶಿರ್ವ : ಅಂತರಾಷ್ಟ್ರೀಯ ಮಟ್ಟದ ಇಂಡೋ ನೇಪಾಳ ಥ್ರೋಬಾಲ್ ಚಾಂಪಿಯನ್‌ಶಿಪ್‌ ಗೆ ಆಯ್ಕೆಯಾದ ಶಮಿತಾ ಪೂಜಾರಿ

Posted On: 15-10-2022 06:29PM

ಶಿರ್ವ : ನೇಪಾಳದ ಪೋಕಾರದಲ್ಲಿ ನವೆಂಬರ್ 12 ರಿಂದ 14 ರವರೆಗೆ ನಡೆಯುವ ಅಂತರಾಷ್ಟ್ರೀಯ ಮಟ್ಟದ ಇಂಡೋ ನೇಪಾಳ ಥ್ರೋಬಾಲ್ ಚಾಂಪಿಯನ್‌ಶಿಪ್‌ಗೆ ರಯಿಸ್ ಥ್ರೋಬಾಲ್ ಅಕಾಡೆಮಿ ವತಿಯಿಂದ ಶಿರ್ವ ಗ್ರಾಮದ ಭಟ್ರ ನಿವಾಸಿ ಶಮಿತಾ ಪೂಜಾರಿ ಇವರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ.

ಹುಲಿವೇಷ, ಮರಕಾಲು ಕುಣಿತದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಅಂತ್ರ ಆನಂದ್ ಕೋಟ್ಯಾನ್

Posted On: 14-10-2022 11:48PM

ಉಡುಪಿ : ನ್ಯಾಷನಲ್ ಪರ್ಫಾಮಿಂಗ್ ಆರ್ಟ್ಸ್ ಚಾಂಪಿಯನ್ ಶಿಪ್ ಮಹಾರಾಷ್ಟ್ರ - 2022 ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಹುಲಿವೇಷ ಧರಿಸಿ, ಮರಕಾಲು ಕುಣಿತದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಅಂತ್ರ ಆನಂದ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

ಶಾಸಕ ಹರೀಶ್ ಪೂಂಜಾರ ಹಲ್ಲೆ ಯತ್ನ - ಶಾಸಕ ಲಾಲಾಜಿ ಆರ್ ಮೆಂಡನ್ ಖಂಡನೆ ; ಸೂಕ್ತ ಕ್ರಮಕ್ಕಾಗಿ ಆಗ್ರಹ

Posted On: 14-10-2022 10:01PM

ಕಾಪು : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಮಿತ್ರರಾದ ಹರೀಶ್ ಪೂಂಜಾರವರ ಮೇಲೆ ನಿನ್ನೆ ತಡರಾತ್ರಿ ತಮ್ಮ ಕೆಲಸಗಳನ್ನು ಮುಗಿಸಿ ವಾಪಸಗುತ್ತಿದ್ದಾಗ ಅವರ ಮೇಲೆ ಆಘಂತುಕರಿಂದ ಹಲ್ಲೆ ಯತ್ನ ನಡೆದಿರುವುದು ಅತ್ಯಂತ ಖಂಡನೀಯ ವಿಷಯ. ಒಬ್ಬ ಜನರಿಂದ ಆರಿಸಿ ಬಂದ ಜನಪ್ರತಿನಿಧಿಯ ಮೇಲೆ ನಡೆದಿರುವ ಈ ಕೃತ್ಯ ಪ್ರಜಾಪ್ರಭುತ್ವ ಮೌಲ್ಯಗಳ ಮೇಲೆ ಆಗಿರುವ ಹಲ್ಲೆಯಂತೆ.

ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿ ಪುಣೆ ಸಮಿತಿಗೆ ಚಾಲನೆ , ಶ್ರೀದೇವಿ ಮಹಾತ್ಮೆ ಯಕ್ಷಗಾನ

Posted On: 14-10-2022 09:54PM

ಪುಣೆ : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಅಭಿವೃದ್ಧಿಗಾಗಿ ರಚಿಸಿದ ಪುಣೆ ಸಮಿತಿಯ ಉದ್ಘಾಟನಾ ಸಮಾರಂಭ ಹಾಗೂ ಪಟ್ಲ ಸತೀಶ್ ಶೆಟ್ಟಿ ನೇತೃತ್ವದ ಹಾವಂಜೆ ಮೇಳದ ಕಲಾವಿದರಿಂದ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನವು ಅ . ೧೩ ರಂದು ಓಣಿಮಜಲು ಜಗನ್ನಾಥ ಶೆಟ್ಟಿ ಸಾಂಸ್ಕೃತಿಕ ಬಂಟರ ಭವನದಲ್ಲಿ ಸಂಭ್ರಮದಿಂದ ನಡೆಯಿತು . ಪುಣೆ ಬಂಟರ ಸಂಘದ ಅಧ್ಯಕ್ಷ ಹಾಗೂ ಕಾಪು ಮಾರಿಗುಡಿ ಅಭಿವೃದ್ಧಿ ಪುಣೆ ಸಮಿತಿಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಇವರ ನೇತೃತ್ವದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಎಂ ಆರ್ ಜಿ ಗ್ರೂಪ್ ನ ಸಿಎಂಡಿ ಕೆ . ಪ್ರಕಾಶ್ ಶೆಟ್ಟಿ,ಕಾಪು ಮಾರಿಗುಡಿ ಅಭಿವೃದ್ಹಿ ಸಮಿತಿಯ ಅಧ್ಯಕ್ಷರಾದ ವಾಸುದೇವ ಶೆಟ್ಟಿ, ಉಪಾಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ದಿವಾಕರ ಶೆಟ್ಟಿ ಕಾಪು, ಮುಂಬಯಿ ಸಮಿತಿಯ ಅಧ್ಯಕ್ಷರಾದ ಸುಧಾಕರ ಹೆಗ್ಡೆ ,ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ,ಕಾಪು ಮಾರಿಗುಡಿ ಅಭಿವೃದ್ಹಿ ಪ್ರಚಾರ ಸ ಮಿತಿ ಅಧ್ಯಕ್ಷರಾದ ಯೋಗೇಶ್ ಶೆಟ್ಟಿ ,ಆರ್ಥಿಕ ಸಮಿತಿಯ ಮುಖ್ಯ ಪ್ರಧಾನ ಸಂಚಾಲಕರಾಗಿರುವ ಉದಯ್ ಸುಂದರ್ ಶೆಟ್ಟಿ , ಸಂದೀಪ್ ಶೆಟ್ಟಿ , ರವಿರಾಜ್ ಶೆಟ್ಟಿ ,ಮೋಹನ್ ಶೆಟ್ಟಿ ,ದಿವಾಕರ ಶೆಟ್ಟಿ , ದಯಾನಂದ್ ಶೆಟ್ಟಿ ಉಪಸ್ಥಿತರಿದ್ದು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಉಡುಪಿ : ಜೆಡಿಎಸ್ ಪಕ್ಷದ ಜಿಲ್ಲಾ ವಕ್ತಾರರಾಗಿ ಶ್ರೀಕಾಂತ್ ಕುಚ್ಚೂರು ನೇಮಕ

Posted On: 14-10-2022 11:28AM

ಉಡುಪಿ :ಜನತಾದಳ (ಜಾತ್ಯತೀತ) ಪಕ್ಷದ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗೀಶ್ ವಿ ಶೆಟ್ಟಿಯವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಪ್ರದೇಶ ಜನತಾದಳ( ಜಾತ್ಯತೀತ) ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂರವರು ಶ್ರೀಕಾಂತ್ ಕುಚ್ಚೂರುರವರನ್ನು ಉಡುಪಿ ಜಿಲ್ಲೆಯ ಜನತಾದಳ (ಜಾತ್ಯತೀತ) ಪಕ್ಷದ ಜಿಲ್ಲಾ ವಕ್ತಾರರನ್ನಾಗಿ ನೇಮಕಗೊಳಿಸಿದ್ದಾರೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕಾಂತಾರ ತುಳುನಾಡಿನ ದೈವಾರಾಧನೆಯನ್ನು ಪ್ರಪಂಚದ ಮೂಲೆ ಮೂಲೆಗೆ ತಲುಪಿಸಿದೆ. ಆದರೆ....!

Posted On: 13-10-2022 11:39PM

" ಕಾಂತಾರ " ಇಂದು ಜಗತ್ತಿನಾದ್ಯಂತ ತುಂಬಿರುವ ತುಳು ಕನ್ನಡಿಗರ ವಲಯದಲ್ಲಿ ತುಂಬಾ ಜನಪ್ರಿಯತೆಯನ್ನು ಪಡೆದಂತಹ ದೈವ ಆಧಾರಿತ ಚಲನ ಚಿತ್ರ. ತುಳುನಾಡಿನ ಜನತೆಗೆ "ದೈವ"ಮೊದಲು "ದೇವರು"ನಂತರ ಎಂಬ ಮೂಲ ನಂಬಿಕೆಗೆ ಸಂಪೂರ್ಣವಾಗಿ ಶರಣಾದಂತಹ ಸತ್ಯ ಸಂಕಲ್ಪ. ಅದಕ್ಕಾಗಿಯೇ ತುಳುವರು "ದೈವ ದೇವೆರೇ " ಎಂದು ಕರೆಯುವುದೇ ಅವರ ಮಹಾಮಂತ್ರ ಎಂದರೆ ತಪ್ಪಾಗಲಾರದು. ಭಯದ ಅಡಿಯಲ್ಲಿ ಭಕ್ತಿಯನ್ನು ಪಾಲಿಸಿಕೊಂಡು ಬಂದಿರುವ ಏಕೈಕ ಸಂಪ್ರದಾಯ ನಮ್ಮ ತುಳುವರದ್ದು. ದೈವ ಎಂಬುವುದು ಒಂದು ಕುಟುಂಬಕ್ಕೆ ಮಾವ (ತಮ್ಮಲೆ)ನಂತೆ ಎಂದೂ ಹೇಳುತ್ತಾರೆ .ತುಳುವರು ತಾಯಿ ತಂದೆಯ ಮೇಲೆ ಅಪಾರ ಭಕ್ತಿಯನ್ನು ತೋರಿಸಿ ಮಾವನಿಗೆ ತುಂಬಾ ಹೆದರುವ ಗೌರವ ಕೊಡುವ ನಮ್ಮ ಸಂಸ್ಕ್ರತಿ.ಹಾಗಾಗಿ ದೇವರು ಸಲಹುವವನಾದರೆ ನಾವು ಧರ್ಮ ತಪ್ಪಿದಲ್ಲಿ ದಂಡಿಸುವ ಮತ್ತು ತಿದ್ದುವ ಕೆಲಸವನ್ನು ಮಾವ(ತಮ್ಮಲೆ ) ನ ಸ್ಥಾನದಲ್ಲಿ ನಿಂತು ದೈವಗಳೆ ಮಾಡುವುದು ಎಂಬುವುದನ್ನು ಬಲವಾಗಿ ನಂಬಲೇ ಬೇಕಾದ ವಿಚಾರ.

ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ

Posted On: 13-10-2022 11:29PM

ಕಾಪು : ಟೆಂಪೋ ಚಾಲಕ ಶಿವ ಪೂಜಾರಿ ನಿಧನ ಕಾಪು : ಇಲ್ಲಿನ ಟೆಂಪೋ ಚಾಲಕ ಪೊಲಿಪುಗುಡ್ಡೆ ನಿವಾಸಿ ಶಿವ ಪೂಜಾರಿ (4೦) ಅವರು ಅಕ್ಟೋಬರ್ 13ರಂದು ಅಸೌಖ್ಯದಿಂದಾಗಿ ನಿಧನ ಹೊಂದಿದರು

ಉಚ್ಚಿಲದಲ್ಲಿ ಸ್ಕಾರ್ಪಿಯೋ ಚಾಲಕನ ಅವಾಂತರ 4 ವಾಹನಗಳಿಗೆ ಡಿಕ್ಕಿ

Posted On: 13-10-2022 11:25PM

ಉಚ್ಚಿಲ : ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿ ಎದುರು ಸ್ಕಾರ್ಪಿಯೋ ಚಾಲಕನ ಅತೀವೇಗ ಹಾಗೂ ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಗುರುವಾರ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೋ ಕಾರು ಚಾಲಕ ಎರ್ಮಾಳು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಬೈಕ್ ಗಳಿಗೆ ಡಿಕ್ಕಿ ಹೊಡೆದಿದ್ದು, ಅಲ್ಲಿ ನಿಲ್ಲಿಸದೆ ಅತಿವೇಗದಿಂದ ಬಂದು ಉಚ್ಚಿ. ರಾ. ರಾಷ್ಟ್ರೀಯ ಹೆದ್ದಾರಿ 66ರ ಅನಾಫಿ ಮಸೀದಿಯವರು ಎರ್ಟಿಗಾ ಕಾರು ಬೈಕು ಹಾಗೂ ಮೀನಿನ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ.