Updated News From Kaup
ಬಂಟಕಲ್ಲು : ಸಾಮರಸ್ಯ ನಡಿಗೆ, ಗಾಂಧಿ ನಮನ, ಸ್ವಚ್ಚತಾ ಕಾರ್ಯಕ್ರಮ

Posted On: 02-10-2022 02:07PM
ಬಂಟಕಲ್ಲು : ನಾಗರಿಕ ಸೇವಾ ಸಮಿತಿ (ರಿ.) ಬಂಟಕಲ್ಲು ಇವರ ಆಶ್ರಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಎಸ್. ವಿ.ಎಸ್ ಪ.ಪೂ ಕಾಲೇಜ್ ಇನ್ನಂಜೆ, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಇವರ ಸಹಯೋಗದೊಂದಿಗೆ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಚತಾ ಕಾರ್ಯದೊಂದಿಗೆ ಗಾಂಧಿ ನಮನ ಕಾರ್ಯಕ್ರಮವು ಬಂಟಕಲ್ಲು ಶ್ರೀ ದುರ್ಗಾಪರಮೇಶ್ವರಿ ಶಾಲೆಯಲ್ಲಿ ನಡೆಯಿತು.

ಬಂಟಕಲ್ಲು ಶಾಲೆಯಿಂದ ಇಂಜಿನಿಯರಿಂಗ್ ಕಾಲೇಜಿನವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸಾಮರಸ್ಯ ನಡಿಗೆ ನಡೆಯಿತು. ನಂತರ ಬಂಟಕಲ್ಲು ಇಂಜಿನಿಯರಿಂಗ್ ಕಾಲೇಜು ಬಳಿಯಿಂದ ಬಿ ಸಿ ರೋಡುವರೆಗೆ ರಸ್ತೆ ಇಕ್ಕಲಗಳ ಬೃಹತ್ ಸ್ವಚ್ಚತಾ ಕಾರ್ಯಕ್ರಮಕ್ಕೆ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ಚಾಲನೆ ನೀಡಿದರು. ಎನ್.ಎಸ್ ಎಸ್ ವಿದ್ಯಾರ್ಥಿಗಳು, ನಾಗರಿಕ ಸೇವಾ ಸಮಿತಿ ಸದಸ್ಯರು, ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್ ಸದಸ್ಯರು ಸ್ವಚ್ಚತಾ ಕಾರ್ಯದಲ್ಲಿ ಭಾಗವಹಿಸಿದರು.

ಸ್ವಚ್ಚತಾ ಕಾರ್ಯ ದ ಬಳಿಕ ಬಂಟಕಲ್ಲು ಶಾಲೆಯಲ್ಲಿ ಗಾಂಧಿನಮನ ಕಾರ್ಯಕ್ರಮ ಜರುಗಿತು. ಗಾಂಧಿಜಿ ಹಾಗೂ ಶಾಸ್ರ್ತಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ನಾಗರಿಕ ಸೇವಾ ಸಮಿತಿ ಅಧ್ಯಕ್ಷ ಕೆ ಆರ್ ಪಾಟ್ಕರ್ ರವರು ಗಾಂಧಿಜಿಯವರಿಗೆ ನುಡಿನಮನ ಸಲ್ಲಿಸಿ ಮಾತನಾಡಿದರು. ಎನ್. ಎಸ್. ಎಸ್ ಯೋಜನಾಧಿಕಾರಿ ರಾಜೇಂದ್ರ ಪ್ರಭುರವರು ಗಾಂಧಿಜಿಯವರ ತತ್ವ, ಆದರ್ಶ, ಜೀವನ ದ ಬಗ್ಗೆ ಮಾತನಾಡಿದರು.
ಶಾಲಾ ಮುಖ್ಯ ಶಿಕ್ಷಕಿ ಸಂಗೀತಾ ಪಾಟ್ಕರ್, ಲಯನ್ಸ್ ಕ್ಲಬ್ ಕಾರ್ಯದರ್ಶಿ ಲ.ಅನಿತಾ ಮೆಂಡೋನ್ಸಾ, ಜಗದೀಶ್ ಆಚಾರ್ಯ, ಉಮೇಶ್ ರಾವ್ ಶಿಕ್ಷಕ ಸತೀಶ್ ನಾಯಕ್, ಪ್ರಶಾಂತ್ ಶಾಲಾ ಶಿಕ್ಷಕಿಯರಾದ ಸೌಮ್ಯ, ಸುಮತಿ, ವಿನುತ, ಶಾಲಿನಿ,ಶ್ವೀತಾ ಮತ್ತಿತರರು ಉಪಸ್ಥಿತರಿದ್ದರು.
ಕಾಪು ತಾಲೂಕಿನ ವಿವಿದೆಡೆಯಲ್ಲಿ ಶಾಸಕ ಲಾಲಾಜಿ ಮೆಂಡನ್ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಕಾರ್ಯಕ್ರಮ

Posted On: 02-10-2022 01:48PM
ಕಾಪು : ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಕ್ಷೇತ್ರದ 9 ಪ್ರಮುಖ ಕೇಂದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಶಯದಂತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನ ನಿಟ್ಟಿನಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸಹಯೋಗದಲ್ಲಿ ಬೆಳಿಗ್ಗೆ 8.30 ಗಂಟೆಗೆ ಏಕಕಾಲದಲ್ಲಿ ಚಾಲನೆಗೊಂಡು 12 ಗಂಟೆ ತನಕ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ನಡೆಯಿತು.
ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರ ನೇತೃತ್ವದಲ್ಲಿ ಪ್ರತಿವರ್ಷ ಸ್ವಚ್ಛತಾ ಕಾರ್ಯಕ್ರಮ ನಡೆಯುತ್ತಿದ್ದು ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಶಾಲಾ ಕಾಲೇಜುಗಳ ಸಹಭಾಗಿತ್ವದಲ್ಲಿ ನಡೆಯುತ್ತಿದ್ದು ಈ ಭಾರಿ ಕ್ಷೇತ್ರ 9 ಕಡೆಗಳಲ್ಲಿ ಸುಮಾರು 3500 ಮಂದಿ ಭಾಗವಹಿಸಿದರು.
ಕಾಪು ಬೀಚ್ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮಕ್ಕೆ ಶಾಸಕ ಲಾಲಾಜಿ ಆರ್ ಮೆಂಡನ್ ಚಾಲನೆ ನೀಡಿದರು. ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ್ ನಾವಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಸುವರ್ಣ ಉಪಸ್ಥಿತರಿದ್ದರು. ಕಟಪಾಡಿ ವ್ಯಾಪ್ತಿಯಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮವನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಹಾಗೂ ಎಸ್ ವಿ ಎಸ್ ವಿದ್ಯಾಸಂಸ್ಥೆಯ ಸತೇoದ್ರ ಪೈ, ಹಿರಿಯಡ್ಕ ವ್ಯಾಪ್ತಿಯಲ್ಲಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷರು ಉದಯ ಕುಮಾರ್ ಶೆಟ್ಟಿ, ಕುಕ್ಕೆಹಳ್ಳಿ ವ್ಯಾಪ್ತಿಯಲ್ಲಿ ಕರಾವಳಿ ಪ್ರಾಧಿಕಾರ ಅಧ್ಯಕ್ಷರು ಮಟ್ಟಾರು ರತ್ನಾಕರ್ ಹೆಗ್ಡೆ, ಪೆರ್ಡೂರ್ ವ್ಯಾಪ್ತಿಯಲ್ಲಿ ಕರ್ನಾಟಕ ಬಸ್ಸು ಮಾಲಕರ ಸಂಘದ ಅಧ್ಯಕ್ಷರು ಕುಯಿಲಾಡಿ ಸುರೇಶ್ ನಾಯಕ್, ಬೆಳ್ಳೆ ವ್ಯಾಪ್ತಿಯಲ್ಲಿ ಕಾಪು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶ್ರೀಶೈಲಾ ಮುರುಗೋಡ, ಶಿರ್ವ ವ್ಯಾಪ್ತಿಯಲ್ಲಿ ಶಿರ್ವ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಘವೇಂದ್ರ ಸಿ , ಪಡುಬಿದ್ರಿ ವ್ಯಾಪ್ತಿಯಲ್ಲಿ ಕಾಪು ವೃತ್ತ ನೀರಿಕ್ಷಕರಾದ ಪೂವಯ್ಯ ಹಾಗೂ ಉಚ್ಚಿಲ ವ್ಯಾಪ್ತಿಯಲ್ಲಿ ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷರು ಸುಧಾಮ ಶೆಟ್ಟಿ ಮತ್ತು ಉಚ್ಚಿಲ ಮೊಗವೀರ ಹಿತಾಸಾಧನ ಸಮಿತಿ ಅಧ್ಯಕ್ಷರು ಸರ್ವೋತ್ತಮ ಕುಂದರ್ ಚಾಲನೆ ನೀಡಿದರು.
ಆಯಾ ಸ್ವಚ್ಛತಾ ಕೇಂದ್ರಗಳಿಗೆ ಸಂಬಂಧಪಟ್ಟಂತೆ ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಗ್ರಾಮ ಪಂಚಾಯತ್ ಆಡಳಿತ ವರ್ಗ, ಸ್ವಯಂ ಸೇವಾ ಸಂಘ - ಸಂಸ್ಥೆಯವರು, ಎಲ್ಲಾ ಜನಪ್ರತಿನಿಧಿಗಳು, ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯ ಮುಖಂಡರು, ಶಾಲಾ ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸ್ವಚ್ಛತಾ ಕಾರ್ಯಕ್ರಮಕ್ಕೆ ಯಶಸ್ವಿಗೊಳಿಸಿದ ಎಲ್ಲರಿಗೂ ಈ ಮೂಲಕ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಕೃತಜ್ಞತೆ ಸಲ್ಲಿಸಿದ್ದಾರೆ.
ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಶಾಲೆಯಲ್ಲಿ ಗಾಂಧಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ; ಶ್ರಮದಾನ

Posted On: 02-10-2022 01:38PM
ಇನ್ನಂಜೆ : ಎಸ್ ವಿ ಎಸ್ ಮತ್ತು ಎಸ್ ವಿ ಎಚ್ ಆಂಗ್ಲ ಮಾಧ್ಯಮ ನರ್ಸರಿ ಮತ್ತು ಹೈಯರ್ ಪ್ರೈಮರಿ ಶಾಲೆ ಇನ್ನಂಜೆ ಇಲ್ಲಿ ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನವನ್ನು ಶಾಲಾ ಆಡಳಿತಾಧಿಕಾರಿ ಅನಂತ ಮೂಡಿತ್ತಾಯರವರು ಉದ್ಘಾಟಿಸಿದರು.

ಮಹಿಳಾ ಮಂಡಳಿ, ಗ್ರಾಮ ಪಂಚಾಯತ್ ಇನ್ನಂಜೆ, ರೋಟರಿಕ್ಲಬ್, ಯುವಕ ಮಂಡಲ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಬಿಲ್ಲವ ಸಂಘ, ಎಸ್ ವಿ ಎಚ್ ಕನ್ನಡ ಮಾಧ್ಯಮ ಸಂಯುಕ್ತಾಶ್ರಯದಲ್ಲಿ ಶಾಲಾ ವಠಾರದಲ್ಲಿ ಶ್ರಮದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಆಶಾ ನಾಯಕ್, ಉಮೇಶ್ ಆಚಾರ್ಯ, ದಿವೇಶ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಸುರೇಶ್ ಶೆಟ್ಟಿ, ಶೇಖರ, ಗುರುರಾಜ ಆಚಾರ್ಯ, ಶಾಲಾ ಮುಖ್ಯೋಪಾಧ್ಯಾಯರಾದ ನಟರಾಜ ಉಪಾಧ್ಯಾಯ, ಸುಷ್ಮಾ, ಮಮತಾ ಹಾಗು ಶಿಕ್ಷಕಿಯರು ಉಪಸ್ಥಿತರಿದ್ದರು.
ಇನ್ನಂಜೆ : ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ ; ಸನ್ಮಾನ

Posted On: 02-10-2022 01:03PM
ಇನ್ನಂಜೆ : ರೋಟರಿ ಸಮುದಾಯ ದಳ ಇನ್ನಂಜೆ ಮತ್ತು ಇನ್ನಂಜೆ ಗ್ರಾಮ ಪಂಚಾಯತ್ ಜಂಟಿಯಾಗಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನಾಚರಣೆಯನ್ನು ಆಚರಿಸಿತು.

ಆ ಪ್ರಯುಕ್ತ ರೋಟರಿ ಸಮುದಾಯ ದಳದ ಅಧ್ಯಕ್ಷರಾದ ದಿವೇಶ್ ಶೆಟ್ಟಿ ಕಲ್ಯಾಲು ಅವರ ಉಪಸ್ಥಿತಿಯಲ್ಲಿ ಇನ್ನಂಜೆ ಗ್ರಾಮ ಪಂಚಾಯತ್ ಪೌರ ಕಾರ್ಮಿಕರಾದ ರೋಕೇಶ್ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಇನ್ನಂಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಲ್ಲಿಕ ಆಚಾರ್ಯ, ಉಪಾಧ್ಯಕ್ಷರಾದ ಸುರೇಶ್ ಶೆಟ್ಟಿ ಮಂಡೇಡಿ, ರೊ. ನವೀನ್ ಅಮೀನ್ ಶಂಕರಪುರ, ರೊ. ಮಾಲಿನಿ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಪಂಚಾಯತ್ ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಪಂಚಾಯತ್ ಸದಸ್ಯರುಗಳಾದ ಸವಿತಾ ಶೆಟ್ಟಿ, ಅನಿತಾ ಮಥಾಯಸ್, ಸುನೀತಾ ಕುಲಾಲ್, ಜಯಶ್ರೀ, ರೋಟರಿ ಸಮುದಾಯ ದಳ ಸ್ಥಾಪಕ ಅಧ್ಯಕ್ಷ ಪ್ರಶಾಂತ್ ಶೆಟ್ಟಿ, ಸದಸ್ಯರುಗಳಾದ ಮನೋಹರ್ ಕಲ್ಲುಗುಡ್ಡೆ , ವಜ್ರೇಶ್ ಆಚಾರ್ಯ, ಸುನೀಲ್ ಸಾಲಿಯಾನ್, ಜೇಸುದಾಸ್ ಸೋನ್ಸ್, ಸಂದೀಪ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.
ಮೂಳೂರು : ಕೈರಂಪನಿಗೆ ಬಿದ್ದ ಬೃಹತ್ ಗಾತ್ರದ ತೊರಕೆ ಮೀನುಗಳು

Posted On: 01-10-2022 10:42PM
ಮೂಳೂರು : ಕಾಪು ತಾಲೂಕಿನ ಮೂಳೂರು ಕಡಲ ತೀರದಲ್ಲಿ ಶುಕ್ರವಾರ ಹಾಗೂ ಶನಿವಾರ ಎರ್ಮಾಳಿನ ಕೈರಂಪಣಿ ಮೀನುಗಾರರ ಬಲೆಗೆ ಬೃಹತ್ ಗಾತ್ರದ ತೊರಕೆ ಮೀನುಗಳು ಬಿದ್ದಿದೆ.
ತಲಾ 15 ರಿಂದ 50 ಕಿಲೋ ತೂಕದ ನೂರಾರು ತೊರಕೆ ಮೀನುಗಳು ಬಲೆಗೆ ಬಿದ್ದಿದ್ದು, ಈ ತೋರಕೆ ಮೀನುಗಳು ಕಿಲೋವೊಂದಕ್ಕೆ 250 ರೂ ನಿಂದ 300 ರೂ ಬೆಲೆ ಬಾಳುತ್ತದೆ.
ಹೇರಳವಾಗಿ ಸಿಕ್ಕ ತೊರಕೆ ಮೀನಿನಿಂದಾಗಿ ಮೀನುಗಾರರ ಮುಖದಲ್ಲಿ ಮಂದಹಾಸ ಮೂಡಿದೆ. ಈ ಮೀನನ್ನು ನೋಡಲೆಂದು ಸಾರ್ವಜನಿಕರು ತಂಡೋಪ ತಂಡವಾಗಿ ಆಗಮಿಸಿದ್ದರು.
ಉಚ್ಚಿಲ : ಚಿತ್ರ ಬಿಡಿಸುವ ಸ್ಪರ್ಧೆ ಉದ್ಘಾಟನೆ ; 700ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ

Posted On: 01-10-2022 05:13PM
ಉಚ್ಚಿಲ : ಶ್ರೀ ಮಹಾಲಕ್ಷ್ಮಿ ದೇವಳದ ಮೊಗವೀರ ಭವನ ಸಭಾಂಗಣದಲ್ಲಿ ಶನಿವಾರ ಮಹಾಲಕ್ಷ್ಮಿ ಕೋ ಅಪರೇಟಿವ್ ಬ್ಯಾಂಕ್ ಮತ್ತು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಉಚ್ಚಿಲ ದಸರಾ ಅಂಗವಾಗಿ ಹಮ್ಮಿಕೊಂಡ ಅವಿಭಜಿತ ದಕ ಜಿಲ್ಲಾ ಮಟ್ಟದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಹೆದ್ದಾರಿ ಪಕ್ಕದಲ್ಲಿದ್ದುಕೊಂಡು ಉಚ್ಚಿಲ ಶ್ರೀ ಮಹಾಲಕ್ಷ್ಮಿ ಕ್ಷೇತ್ರವು ದೇಶ ವಿದೇಶಗಳ ಭಕ್ತರನ್ನು ಅಕರ್ಷಿಸುವ ತಾಣವಾಗಿ ಮೂಡಿಬಂದಿರುವುದು ನಮ್ಮ ಜಿಲ್ಲೆಗೆ ಹೆಮ್ಮೆ. ಈ ಬಾರಿಯ ದಸರಾ ಮಹೋತ್ಸವ ಅದರ ಹಿರಿಮೆಗೆ ಗರಿ ಮೂಡಿಸಿದೆ. ಮುಂದಿನ ನಾಲ್ಕೈದು ವರ್ಷಗಳಲ್ಲಿ ಎಲ್ಲಾ ದಸರಾ ಮಹೊತ್ಸವಗಳನ್ನು ಉಚ್ಚಿಲ ದಸರಾ ಮೀರಿಸಲಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಸನ್ಮಾನ : ದ್ವಿತೀಯ ಬಾರಿಗೆ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷರಾಗಿ ಆಯ್ಕೆಯಾದ ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರಕುಮಾರ್, ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ನಿರ್ದೇಶಕರಾಗಿ ಆಯ್ಕೆಯಾದ ದೇವಿಪ್ರಸಾದ್ ಶೆಟ್ಟಿ ಮತ್ತು ಝೀ ಕನ್ನಡದ ಡ್ರಾಮಾ ಜ್ಯೂನಿಯರ್ ವಿಭಾಗದ 4ನೇ ಅವೃತ್ತಿಯಲ್ಲಿ ವಿಜೇತರಾದ ಸಮೃದ್ಧಿ ಕುಂದಾಪುರರವರನ್ನು ಮಹಾಲಕ್ಷ್ಮಿ ಕೊ ಅಪರೇಟಿವ್ ಬ್ಯಾಂಕ್ ಮತ್ತು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಳದ ವತಿಯಿಂದ ಅದ್ದೂರಿಯಾಗಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭ ಸಹಕಾರ ರತ್ನ ಡಾ.ಎಮ್.ಎನ್.ರಾಜೇಂದ್ರ ಕುಮಾರ್, ನಾಡೋಜ ಡಾ.ಜಿ.ಶಂಕರ್, ಬ್ಯಾಂಕ್ ಅಧ್ಯಕ್ಷ ಯಶಪಾಲ್ ಎ.ಸುವರ್ಣ, ಜಯ ಸಿ.ಕೋಟ್ಯಾನ್ ಬೆಳ್ಳಂಪಳ್ಳಿ, ಮಟ್ಟಾರು ರತ್ನಾಕರ ಹೆಗ್ಡೆ, ಜಯಕರ ಶೆಟ್ಟಿ ಇಂದ್ರಾಳಿ, ದೇವಿಪ್ರಸಾದ್ ಶೆಟ್ಟಿ ಬೆಳಪು ಮತ್ತು ಅಪ್ಪಿ ಎಸ್.ಸಾಲ್ಯಾನ್ ಉಪಸ್ಥಿತರಿದ್ದರು.
ಯಶಪಾಲ್ ಎ.ಸುವರ್ಣ ಸ್ವಾಗತಿಸಿದರು. ಪ್ರಶಾಂತ್ ಶೆಟ್ಟಿ ಹಾವಂಜೆ ಮತ್ತು ವಿಜೇತಾ ಶೆಟ್ಟಿ ನಿರೂಪಿಸಿದರು. ಬ್ಯಾಂಕ್ನ ಎಮ್ಡಿ ಜಗದೀಶ ಮೊಗವೀರ ವಂದಿಸಿದರು. ಚಿತ್ರಕಲಾ ಸ್ಪರ್ಧೆಯ 5 ವಿಭಾಗಗಳಲ್ಲಿ 7೦೦ಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಿದ್ದರು.
ಕುಂಜೂರು : ಐತಿಹಾಸಿಕ ಪರಂಪರೆ ಉಳಿಸಿ ಜಾಗೃತಿ ಕಾರ್ಯಕ್ರಮ

Posted On: 01-10-2022 08:19AM
ಕುಂಜೂರು : ಹೀಗೆ ಇದ್ದಿತೆಂದು ನಿರೂಪಿಸುವ ಸತ್ಯ ಕಥೆಯೇ ಇತಿಹಾಸ. ಇಂತಹ ಅಮೂಲ್ಯ ಪಾರಂಪರಿಕ ಮೌಲ್ಯಗಳಿರುವ ದಾಖಲೆಗಳನ್ನು ಮನನ ಮಾಡಿಕೊಳ್ಳುವ ,ಕಾಪಿಡುವ ಪ್ರಯತ್ನವಾಗಿ "ಐತಿಹಾಸಿಕ ಪರಂಪರೆ ಉಳಿಸಿ" ಎಂಬ ಕಾರ್ಯಕ್ರಮ ರಾಜ್ಯದಾದ್ಯಂತ ನಡೆಯುತ್ತಿದೆ. ಪ್ರಾಚ್ಯ ವಸ್ತುಗಳ ಅಧ್ಯಯನದಿಂದ,ಲಿಖಿತ ದಾಖಲೆಗಳ ಆಧಾರದಲ್ಲಿ ಇತಿಹಾಸವನ್ನು ಕಟ್ಟಬಹುದು ಎಂದು ಅದಮಾರಿನ ಪೂರ್ಣಪ್ರಜ್ಞ ಪ.ಪೂ.ಕಾಲೇಜಿನ ಉಪನ್ಯಾಸಕ ವೈ. ಜ್ಯೋತೀಂದ್ರನಾಥ ರಾವ್ ಅಭಿಪ್ರಾಯಪಟ್ಟರು. ಅವರು ಕುಂಜೂರು ಶ್ರೀ ದುರ್ಗಾ ದೇವಸ್ಥಾನದ ಆಶ್ರಯದಲ್ಲಿ ಸ್ಥಳೀಯ ದುರ್ಗಾ ಮಿತ್ರವೃಂದ, ದುರ್ಗಾ ಸೇವಾ ಸಮಿತಿಗಳ ಸಹಯೋಗದಲ್ಲಿ ನೆರವೇರಿದ ಬೆಂಗಳೂರಿನ ಇತಿಹಾಸ ಅಕಾಡೆಮಿಯ "ಐತಿಹಾಸಿಕ ಪರಂಪರೆ ಉಳಿಸಿ" ಕಾರ್ಯಕ್ರಮದಲ್ಲಿ ಪ್ರಧಾನ ಭಾಷಣ ಮಾಡಿದರು.
ನಮ್ಮಲ್ಲಿ ಲಭ್ಯವಿರುವ ಪುರಾವಸ್ತುಗಳು, ಶಿಲಾಶಾಸನಗಳು,ತಾಮ್ರ ಪಟಗಳು ,ಧಾರ್ಮಿಕ ನಿರ್ಮಿತಿಗಳು,ಕಟ್ಟಡಗಳು, ಪುರಾತನ ಕಡತಗಳು,ನಾಣ್ಯಗಳು ಒಂದು ಕಾಲದ ಇತಿಹಾಸವನ್ನು ಹೇಳುತ್ತವೆ ಇಂತಹ ಅಮೂಲ್ಯ ಪುರಾತನ ಉಳಿಕೆಗಳು ಕಾಲಕಾರಣವಾಗಿ ಅಥವಾ ಮಾನವ ನಿರ್ಲಕ್ಷ್ಯದಿಂದ ನಾಶವಾಗದಂತೆ ರಕ್ಷಿಸುವ ಜಾಗೃತಿ ಮೂಡಿಸುವ ಕಾರ್ಯಕ್ರಮವೇ "ಐತಿಹಾಸಿಕ ಪರಂಪರೆ ಉಳಿಸಿ" ಆಭಿಯಾನ ಎಂದು ಜ್ಯೋತೀಂದ್ರನಾಥ ರಾವ್ ವಿವರಿಸಿದರು.
ಶ್ರೀ ದುರ್ಗಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ದೇವರಾಜ ರಾವ್ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ನಿವೃತ್ತ ಪ್ರಾಂಶುಪಾಲ ಸುದರ್ಶನ ವೈ.ಎಸ್. ಅಧ್ಯಕ್ಷತೆ ವಹಿಸಿದ್ದರು. ಎಲ್ಲೂರು ಗುತ್ತು ಪ್ರಫುಲ್ಲ ಶೆಟ್ಟಿ, ಎಲ್ಲೂರು ಪಂಚಾಯತ್ ಮಾಜಿ ಅಧ್ಯಕ್ಷ ಯಶವಂತ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸಂಜೀವ ಶೆಟ್ಯಿ,ಸಂತೋಷ ಶೆಟ್ಟಿ, ಗಿರಿಜಾ ಪೂಜಾರ್ತಿ,ದೇವಳದ ಮ್ಯಾನೇಜರ್ ರಾಘವೇಂದ್ರ ಶೆಟ್ಟಿ,ದುರ್ಗಾಮಿತ್ರ ವೃಂದದ ಅಧ್ಯಕ್ಷ ಚಂದ್ರಹಾಸ ಆಚಾರ್ಯ ಉಪಸ್ಥಿತರಿದ್ದರು.
ರಾಕೇಶ್ ಕುಂಜೂರು ಸ್ವಾಗತಿಸಿದರು. ಕೆ.ಎಲ್ ಕುಂಡಂತಾಯ ಪ್ರಸ್ತಾವಿಸಿದರು. ಸತೀಶ ಶೆಟ್ಟಿ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು.
ಬೈಂದೂರು: ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ದಿಡೀರ್ ಭೇಟಿ

Posted On: 30-09-2022 10:37PM
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಗುಜ್ಜಾಡಿ ಗ್ರಾಮ ಪಂಚಾಯಿತಿಗೆ ತಾಲೂಕು ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಗ್ರಾಮಸ್ಥರ ಕುಂದುಕೊರತೆಗಳ ಅಹವಾ ಲುಗಳನ್ನು ಸ್ವೀಕರಿಸಲು ಬಂದಿರುವುದಾಗಿ ಹೇಳಿದರು.
ಮಾಧ್ಯಮದ ಜೊತೆ ಮಾತನಾಡಿ ಎನ್ ಆರ್ ಎಲ್ ಎಮ್ ಘಟಕ ಇವಾಗಲೇ ಸರಕಾರ ಆದೇಶದಂತೆ ಘಟಕಕ್ಕೆ 17.50 ಲಕ್ಷ ಮಂಜೂರಾಗಿದ್ದು ತಕ್ಷಣ ಕಾಮಗಾರಿಯ ಸ್ಥಳ ಪರಿಶೀಲಿಸಿ ಮುಂದಿನ ಕಾರ್ಯಯೋಜನೆ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜು ಪೂಜಾರಿ, ಗ್ರಾಮ ಪಂಚಾಯತ್ ಹಿರಿಯ ಸದಸ್ಯ ಹರೀಶ್ ಮೇಸ್ತ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಶಕುಂತಲಾ ಮಾಧವ, ಸಿಬಂದಿಗಳು ಹಾಜರಿದ್ದರು.
ಮುನಿಯಾಲ್ ಆಯುರ್ವೇದ ಮೆಡಿಕಲ್ ಸೈನ್ಸ್ ಮಣಿಪಾಲ : ಪ್ಲಾನೆಟ್ ಮಾರ್ಸ್ ಫೌಂಡೇಶನ್ ಸಂತೆಕಟ್ಟೆ ಸಂಸ್ಥೆಗೆ ಅಗತ್ಯ ವಸ್ತುಗಳ ಹಸ್ತಾಂತರ

Posted On: 30-09-2022 08:57PM
ಉಡುಪಿ : ಮುನಿಯಾಲ್ ಆಯುರ್ವೇದ ಮೆಡಿಕಲ್ ಸೈನ್ಸ್ ಮಣಿಪಾಲ ಇದರ ವತಿಯಿಂದ ನವರಾತ್ರಿ ಹಬ್ಬದ ಅಂಗವಾಗಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ವೃಂದದಿಂದ ಆಹಾರ ಸಾಮಗ್ರಿ, ದೈನಂದಿನ ಅಗತ್ಯವಿರುವ ವಸ್ತುಗಳು, ಬಿಸ್ಕೆಟ್ ಹಾಗೂ ತಿಂಡಿ ತಿನಿಸುಗಳನ್ನು ಪ್ಲಾನೆಟ್ ಮಾರ್ಸ್ ಫೌಂಡೇಶನ್ (ರಿ.) ಸಂತೆಕಟ್ಟೆ ಈ ಸಂಸ್ಥೆಗೆ ನೀಡಲಾಯಿತು.
ಹಾಗೆಯೇ ಮಕ್ಕಳಿಗೆ ರೋಗನಿರೋದಕ ಶಕ್ತಿಯನ್ನು ಹೆಚ್ಚಿಸುವ ಮಾತ್ರೆಯಾದ ಸಂಶಮನೀಯ ವಟಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಮುನಿಯಾಲ್ ಕಾಲೇಜಿನ ಡಾ. ರಾಜಕಿರಣ್ , ಕಾಲೇಜಿನ ಕೌನ್ಸಿಲ್ ಅಧ್ಯಕ್ಷರಾದ ಶ್ರೀಪ್ರದ ಉಪಾಧ್ಯಾಯ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾಪು : ಬೃಹತ್ ಖಾದಿ ಮೇಳ ಉದ್ಘಾಟಿಸಿದ ಸಂಸದೆ ಶೋಭಾ ಕರಂದ್ಲಾಜೆ

Posted On: 30-09-2022 08:51PM
ಕಾಪು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರು ಸೇವಾ ಪಾಕ್ಷಿಕ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ, ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಕಾಪು ಬಿಜೆಪಿ ವತಿಯಿಂದ ಆಯೋಜಿಸಿದ 'ಬೃಹತ್ ಖಾದಿ ಮೇಳ' ವನ್ನು ಕಾಪು ನಗರದಲ್ಲಿ ಇಂದು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಉಪಾಧ್ಯಕ್ಷರುಗಳಾದ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ, ಗಂಗಾಧರ್ ಸುವರ್ಣ, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚದ ಅಧ್ಯಕ್ಷರಾದ ದಾವುದ್, ಕಾಪು ಯುವಮೋರ್ಚ ಅಧ್ಯಕ್ಷರಾದ ಸಚಿನ್ ಸುವರ್ಣ, ಕಾಪು ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಕಾಪು ಮಂಡಲ ಪದಾಧಿಕಾರಿಗಳಾದ ಸುಧಾಮ ಶೆಟ್ಟಿ, ಪವಿತ್ರ ಶೆಟ್ಟಿ ಮಾಲಿನಿ ಶೆಟ್ಟಿ, ಚಂದ್ರ ಮಲ್ಲಾರ್ ರಾಜೇಶ್ ಕುಂದರ್ ಕಾರ್ಯಕ್ರಮದ ಸಂಚಾಲಕರಾದ ಅನಿಲ್ ಕುಮಾರ್ ಸಹಸಂಚಾಲಕರಾದ ರತ್ನಾಕರ್ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.