Updated News From Kaup

ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆ

Thumbnail
Posted On: 27 Nov 2022, 01:46 PM

ಕಾಪು : ಪಡುಕುತ್ಯಾರು ಶ್ರೀ ವಿಶ್ವಕರ್ಮ ಸಮಾಜ ಸೇವಾ ಸಂಘದ ನೂತನ ಅಧ್ಯಕ್ಷರಾಗಿ ನಾಗೇಶ ಆರ್ ಆಚಾರ್ಯ ಆಯ್ಕೆಯಾಗಿದ್ದಾರೆ. ಗೌರವ ಅಧ್ಯಕ್ಷರಾಗಿ ಹರಿಶ್ಚಂದ್ರ ಎಚ್ ಆಚಾರ್ಯ, ಗೌರವ ಸಲಹೆಗಾರರಾಗಿ ಪ್ರಕಾಶ ಎ ಆಚಾರ್ಯ, ಚಂದ್ರಯ ಪಿ ಆಚಾರ್ಯ, ಮುಂಬೈ ಕಮಿಟಿ ಅಧ್ಯಕ್ಷರಾಗಿ ಮಾಧವ ಎಸ್ ಆಚಾರ್ಯ, ಕಾರ್ಯಾಧ್ಯಕ್ಷರಾಗಿ ಕಾಪು ಜಯರಾಮ ಆಚಾರ್ಯ, ಉಪಾಧ್ಯಕ್ಷರಾಗಿ ಸದಾಶಿವ ಎ ಆಚಾರ್ಯ, ಕೆ ವಿವೇಕಾನಂದ ಆಚಾರ್ಯ, ಕಾರ್ಯದರ್ಶಿಯಾಗಿ ದಿನೇಶ್ ಎಸ್ ಆಚಾರ್ಯ, ಜೊತೆ ಕಾರ್ಯದರ್ಶಿಯಾಗಿ ಪ್ರವೀಣ ಎಸ್ ಆಚಾರ್ಯ, ಪ್ರಕಾಶ ಎಸ್ ಆಚಾರ್ಯ, ಉದಯ ವಿ ಆಚಾರ್ಯ, ಕೋಶಾಧಿಕಾರಿಯಾಗಿ, ಗಂಗಾಧರ ಎಸ್ ಆಚಾರ್ಯ, ಜೊತೆ ಕೋಶಾಧಿಕಾರಿಯಾಗಿ ಸುರೇಶ್ ಆರ್ ಆಚಾರ್ಯ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಶಶಿರಾಜ ಆಚಾರ್ಯ, ಹೇಮಲತಾ ಪಿ ಆಚಾರ್ಯ, ಸಂಘಟನಾ ಕಾರ್ಯದರ್ಶಿಯಾಗಿ ಪ್ರಸನ್ನ ಎಸ್ ಆಚಾರ್ಯ, ಅಶೋಕ ಆರ್ ಆಚಾರ್ಯ, ಮತ್ತು ಸುರೇಂದ್ರ ಎ ಆಚಾರ್ಯ ಆಯ್ಕೆಯಾಗಿರುತ್ತಾರೆ.

ಶಿರ್ವ ಸಂತ ಮೇರಿ ಕಾಲೇಜಿನಲ್ಲಿ 74ನೇ ಎನ್.ಸಿ.ಸಿ ಹಾಗೂ 73ನೇ ಸಂವಿಧಾನ ದಿನಾಚರಣೆ

Thumbnail
Posted On: 27 Nov 2022, 01:41 PM

ಶಿರ್ವ : ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ 73ನೇ ಸಂವಿಧಾನ ಹಾಗೂ 74ನೇ ಎನ್‌ಸಿಸಿ ದಿನಾಚರಣೆಯ ಪ್ರಯುಕ್ತ ಪ್ರಕೃತಿಯ ರಕ್ಷಣೆ ಮತ್ತು ಪೋಷಣೆಯ ಅನ್ವಯ ಕ್ಯಾಡೆಟ್ ಗಳಿಂದ ವನಮೋತ್ಸವ ಕಾರ್ಯಕ್ರಮ ಏರ್ಪಡಿಸಲಾಯಿತು. ಸಂವಿಧಾನ ಪ್ರತಿಜ್ಞಾವಿಧಾನವನ್ನು ಕಾಲೇಜಿನ ಎನ್‌ಸಿಸಿ ಅಧಿಕಾರಿ ಲೆಫ್ಟಿನೆಂಟ್ ಕೆ.ಪ್ರವೀಣ್ ಕುಮಾರ್ ರವರು ನೆರವೇರಿಸಿದರು. ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸ್ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಇಂದು, ತಮ್ಮ ಪ್ರಾಣದ ಪರಮ ತ್ಯಾಗ ಮಾಡಿದ ವೀರಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ದಿನವನ್ನು ಪ್ರತಿವರ್ಷ ನವೆಂಬರ್ ನಾಲ್ಕನೇ ಭಾನುವಾರರಂದು ಗುರುತಿಸಲಾಯಿತು. ಇಂದು ಬಹಳಷ್ಟು ಪ್ರಮುಖರು ಎನ್.ಸಿ.ಸಿಯ ಹಳೆವಿದ್ಯಾರ್ಥಿಗಳು ಆಗಿರುವುದು ಗಮನಾರ್ಹ. ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ನಮ್ಮ ಸಂವಿಧಾನ ಪ್ರಪಂಚದಲ್ಲಿ ಉತ್ತಮವಾದ ಸಂವಿಧಾನ ಎಂದರು. ಕ್ಯಾಡೆಟ್ ಸೋನಾಲಿ ಕುಲಾಲ್ ಎನ್‌ಸಿಸಿ ದಿನದ ಮುಖ್ಯ ಉದ್ದೇಶವನ್ನು ಮತ್ತು ಮಹತ್ವವನ್ನು ವಿವರಿಸಿ,ಕ್ಯಾಡೆಟ್ ಉಳಿದ್ರಾ ಖುಷಿ ಸಂವಿಧಾನ ದಿನದ ಬಗ್ಗೆ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದರು ಇದೇ ಸಂದರ್ಭದಲ್ಲಿ ವಿವಿಧ ತರಬೇತಿಯಲ್ಲಿ ಭಾಗವಹಿಸಿ ಬಹುಮಾನ ಪಡೆದ ಕ್ಯಾಡೆಟ್ ಗಳಾದ ಲಾಯ್ ವಿನ್ಸ್ಟನ್ ಫರ್ನಾಂಡಿಸ್, ಸ್ಮಿತಾ, ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ, ವಿಜೇತ ಇವರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು. ಎನ್.ಸಿ.ಸಿ ಜೂನಿಯರ್ ಅಂಡರ್ ಆಫೀಸರ್ ಧೀರಜ್ ಆಚಾರ್ಯ, ಕಂಪನಿ ಸಾರ್ಜೆಂಟ್ ಕ್ವಾಟರ್ ಮಾಸ್ಟರ್ ಆಶಿಶ್ ಪ್ರಸಾದ್, ಸರ್ಜೆಂಟ್ ದೀಪಕ್, ರಿಯಾನ್ ಡಿಸೋಜಾ, ಕಾರ್ಪೋರಲ್ ಮಂಜುನಾಥ ಅಮರಾವತಿ, ಲ್ಯಾನ್ಸ್ ಕಾರ್ಪೋರಲ್ ಅನೀಶ್ ಭಟ್, ಶೆಟ್ಟಿಗಾರ ಹೇಮಶ್ರೀ ಸುದರ್ಶನ್ , ಕ್ಯಾಡೆಟ್ ಅನುಪ್ ನಾಯಕ್ ಮತ್ತು ಅಲಿಸ್ಟಾರ್ ಸುಜಯ್ ಡಿಸೋಜ ಸಹಕರಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಎನ್.ಸಿ.ಸಿ ಅಧಿಕಾರಿ ಜಾನ್ ವಿಲಿಯಂ ವೇಗಾಸ್, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಯಶೋದ, ಎಲ್ಲಾ ಕ್ಯಾಡೆಟ್ಗಳು ಉಪಸ್ಥಿತರಿದ್ದರು. ಸೀನಿಯರ್ ಅಂಡರ್ ಆಫೀಸರ್ ಮೋಹಿತ್ ಎನ್ ಸಾಲಿಯಾನ್ ಸ್ವಾಗತಿಸಿ ಸುಶ್ಮಿತಾ ಎಸ್ ಅಮೀನ್ ಕಾರ್ಯಕ್ರಮ ನಿರೂಪಿಸಿದರು. ಕಾರ್ಪೊರಲ್ ರಿಯಾ ಸೇರಿನಾ ಡಿಸೋಜಾ ವಂದಿಸಿದರು.

ಉಡುಪಿ : ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ವಾರ್ಷಿಕ ಹರಕೆ ಸೇವೆ

Thumbnail
Posted On: 27 Nov 2022, 01:00 PM

ಉಡುಪಿ : ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸವಿರುವ ಹಾವಂಜೆ ಗ್ರಾಮದ ಕೊಳಲಗಿರಿ ಕಾತೀಬೈಲು ಬಬ್ಬು ಸ್ವಾಮಿ ಪರಿವಾರ ದೈವಗಳ ದೈವಸ್ಥಾನದಲ್ಲಿ ವಾರ್ಷಿಕ ಹರಕೆ ಸೇವೆ ಜರಗಿತು. ಈ ಸಂದರ್ಭದಲ್ಲಿ ಪರಿವಾರ ದೈವಗಳಿಗೆ ದರ್ಶನ ಸೇವೆ ಜರಗಿತು. ಗ್ರಾಮದ ಪರ ಊರಿನ ಭಕ್ತಾದಿಗಳು ದೈವದ ಗಂಧ ಪ್ರಸಾದ ಪಡೆದು ದೈವದ ಕೃಪೆಗೆ ಪಾತ್ರರಾದರು. ಗ್ರಾಮದ ಹಿರಿಯರಾದ ಹಾಗೂ ಆಡಳಿತ ಅಧ್ಯಕ್ಷರಾದ ರಮೇಶ್ ಶೆಟ್ಟಿ, ಅಶೋಕ್ ಶೆಟ್ಟಿ, ವಿನೋದ್ ಶೆಟ್ಟಿ ದೊಡ್ಡನಗುಡ್ಡೆ, ಸುರೇಶ್ ಶೆಟ್ಟಿ, ಸುಂದರ ಶೆಟ್ಟಿ, ಮನೋರಂಜನ ಹೆಗ್ಡೆ, ಸಂಜೀವ ಸುವರ್ಣ, ದೋಗು ಪೂಜಾರಿ, ದಾದುಪೂಜಾರಿ, ದೂಮಪೂಜಾರಿ, ತೌಡಪೂಜಾರಿ ಮತ್ತು ಗುರಿಕಾರರು ಹಾಗೂ ಸಮಸ್ತರು, ಆಡಳಿತ ಮಂಡಳಿ ಸದಸ್ಯರು, ಗ್ರಾಮಸ್ಥರು ಉಪಸ್ಥಿತಿಯಿದ್ದರು.

ಭೃಷ್ಟಾಚಾರದ ಸರಕಾರದಿಂದ ಟೋಲ್ ದರೋಡೆ : ರಮೀಜ್ ಹುಸೇನ್‌

Thumbnail
Posted On: 27 Nov 2022, 12:50 PM

ಪಡುಬಿದ್ರಿ : ಅತ್ಯಂತ ಕಠೋರ ಹೃದಯದ ಜನ ವಿರೋಧಿ ಸರಕಾರದ ನಿರ್ಧಾರ ಜನರ‌ ಬದುಕಿನಲ್ಲಿ ಚೆಲ್ಲಾಟ ನಡೆಸುತ್ತಿದೆ. ಸುರತ್ಕಲ್ ಟೋಲ್ ಅನ್ನು ರದ್ದು ಮಾಡಬೇಕೆಂದು ಆಗ್ರಹಿಸಿ ಸಮಾನ ಮನಸ್ಕರನ್ನು ಸೇರಿಸಿ ಟೋಲ್ ಹೋರಾಟ ಸಮಿತಿ ಅನಿರ್ಧಿಷ್ಟ ಅವಧಿ ಹಗಲು ರಾತ್ರಿ ಧರಣಿಯನ್ನು ಹಮ್ಮಿಕೊಂಡಿರುವ ಪರಿಣಾಮ ಸುರತ್ಕಲ್ ಟೋಲ್ ನ್ನು ರದ್ದು ಮಾಡುತ್ತೇವೆ ಅನ್ನುತ್ತಿದ್ದ ಜನಪ್ರತಿನಿಧಿಗಳು , ಇಂದು ವಿಲೀನದ ನೆಪ ಹೇಳಿ ಸುರತ್ಕಲ್ ಟೋಲ್ ದರವನ್ನು ಹೆಜಮಾಡಿ ಟೋಲ್ ನಲ್ಲಿ ಪೂರ್ತಿಯಾಗಿ ಸೇರಿಸಿ ಹಣ ಸಂಗ್ರಹಿಸಲು ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಈ ದುಪ್ಟಟು ದರವನ್ನು ಜನ ಸಾಮಾನ್ಯರು ಕಟ್ಟುವಂತಹ ಪರಿಸ್ಥಿತಿ ಒದಗಿ ಬಂದಿದೆ. ದಿನದಿಂದ ‌ದಿನಕ್ಕೆ ಗಗನಕ್ಕೆ ಏರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆ ಒಂದಡೆಯಾದರೆ, ಈಗ ಟೋಲ್ ಮೂಲಕ ಜನರ ಸುಲಿಗೆ ನಡೆಸಿ ಜನ ಸಾಮಾನ್ಯನ ಬದುಕಿಗೆ ಕೊಳ್ಳಿ ದೀಪ ಇಡಲು ಸರಕಾರ ತಯಾರಿ ನಡೆಸುತಿದೆ. ಇದೇ‌ ರೀತಿ ಮುಂದುವರಿದಲ್ಲಿ ಅರ್ಥಿಕವಾಗಿ ಕುಗ್ಗಿರುವ ಜನರ ಬದುಕು ಕಂಗಲಾಗುವ ಪರಿಸ್ಥಿತಿಗೆ ಬರುವಂತೆ ಈ ಸರಕಾರ ಮಾಡುತಿದೆ ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಜ್ ಹುಸೇನ್‌ ಆಗ್ರಹಿಸಿದ್ದಾರೆ. ಈಗಾಗಲೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪರಿಷ್ಕೃತ ದರದಲ್ಲಿ ಡಿಸೆಂಬರ್ 1 ರಿಂದ ಹೆಜಮಾಡಿ ಟೋಲ್ ನಲ್ಲಿ ದುಪ್ಪಟ್ಟು ಟೋಲ್ ವಸೂಲಿ ನಡೆಯಲಿದೆ. ಇದರಿಂದ ಹೆಜಮಾಡಿ, ಪಡುಬಿದ್ರಿ ಆಸುಪಾಸಿನ ಜನರು ಕೇವಲ 6 ಕಿ.ಮಿ ದೂರದ ಮುಲ್ಕಿ ಗೆ ಕಾರಿನಲ್ಲಿ ಹೋಗಿ ಬರಬೇಕಾದರೆ ಹೆಜಮಾಡಿ ಟೋಲ್ ನಲ್ಲಿ 155 ರೂಪಾಯಿಯನ್ನು ಕಟ್ಟಬೇಕಾಗಿದೆ ಇಂತಹ ಹಗಲು ದರೋಡೆಯನ್ನು ಯಾವುದೇ ಕಾರಣಕ್ಕೂ ಒಪ್ಪುವಂತದ್ದಲ್ಲ. ಇದು ಡಬಲ್ ಇಂಜಿನ್ ಸರಕಾರದ ಡಬಲ್ ಲೂಟಿ, ಇಷ್ಟಾದರೂ ಇನ್ನೂ ಬಾಯಿ ಮುಚ್ಚಿ ಕುಳಿತಿರುವ ಸರಕಾರ ನಡೆಸುತ್ತಿರುವ ಸ್ಥಳೀಯ ಶಾಸಕರು, ಸಂಸದರು ಧ್ವನಿ ಎತ್ತದಿರುವುದು ವಿಪರ್ಯಾಸವೇ ಸರಿ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ದುಪ್ಪಟ್ಟು ದರವನ್ನು ರದ್ದು ಗೊಳಿಸದ್ದಿದಲ್ಲಿ ಯುವ ಕಾಂಗ್ರೆಸ್ ಜನ ವಿರೋಧಿ ನಿರ್ಧಾರದ ವಿರುದ್ಧ ಸಾರ್ವಜನಿಕರೊಂದಿಗೆ ಸೇರಿ ಪ್ರತಿಭಟನೆಗೆ ನಡೆಸಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಕ್ರಿಯೇಟಿವ್‌ ಪಿಯು ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

Thumbnail
Posted On: 27 Nov 2022, 12:48 PM

ಕಾರ್ಕಳ : ಇಲ್ಲಿನ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿನಲ್ಲಿ ನವೆಂಬರ್‌ 26 ರಂದು ಸಂವಿಧಾನ ದಿನಾಚರಣೆ ನಡೆಯಿತು. ಭಾರತದ ಸಾರ್ವಭೌಮತೆಯ ರಕ್ಷಣೆ ಮತ್ತು ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿ ರೂಪಿಸಲು ಸಂವಿಧಾನದ ರಚನೆಯನ್ನು ಮಾಡಲಾಯಿತು. ದೇಶದ ಪ್ರಜೆಗಳು ದೇಶದ ಕಾನೂನನ್ನು ಗೌರವಿಸಿ ಮತ್ತು ಸಂವಿಧಾನದ ಆಶಯದಂತೆ ಬದುಕನ್ನು ನಡೆಸಬೇಕು ಎಂದು ಪ್ರಾಂಶುಪಾಲರಾದ ವಿದ್ವಾನ್‌ ಗಣಪತಿ ಭಟ್‌ ವಿದ್ಯಾರ್ಥಿಗಳಿಗೆ ತಿಳಿಸಿದರು. ಸಂವಿಧಾನವನ್ನು ರಚನೆ ಮಾಡಬೇಕಾದರೆ ಅನೇಕ ದೇಶಗಳಲ್ಲಿರುವ ಕಾಯ್ದೆ, ಕಾನೂನುಗಳನ್ನು ಅಳವಾಗಿ ಅಧ್ಯಯನ ನಡೆಸಿ ಎಲ್ಲರಿಗೂ ನ್ಯಾಯ ಸಿಗುವಂತೆ ರಚಿಸಲಾಗಿದೆ. ಡಾ. ಬಿ ಆರ್‌ ಅಂಬೇಡ್ಕರ್‌ ಅವರನ್ನು ಸಂವಿಧಾನ ರಚನಾ ಕರಡು ಸಮೀತಿಯ ಅಧ್ಯಕ್ಷರನ್ನಾಗಿ ನೇಮಿಸಿ ವಿಶ್ವದಲ್ಲಿಯೇ ಅತ್ಯಂತ ದೊಡ್ಡದಾದ ಲಿಖಿತ ಸಂವಿಧಾನವನ್ನು ರಚಿಸಲಾಯಿತು. ಅವರ ಆಶಯಕ್ಕೆ ಅನುಗುಣವಾಗಿ ದೇಶದ ಸಮಗ್ರತೆಯನ್ನು ಗೌರವಿಸಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಅನುಭವಿಸಬೇಕೆಂದು ಕರೆ ನೀಡಿದರು. ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ರಾಘವೇಂದ್ರ ಬಿ ರಾವ್‌, ಶಿವಕುಮಾರ್‌, ಉಮೇಶ್‌, ಅಕ್ಷತಾ ಜೈನ್‌, ರಾಮಕೃಷ್ಣ ಹೆಗಡೆ, ಡಾ ಆದಂ ಶೇಕ್‌, ಸಾರ್ವಜನಿಕ ಸಂಪರ್ಕ ಅಧಿಕಾರಿ ಲಿಶನ್‌ ಗೌಡ ಉಪಸ್ಥಿತರಿದ್ದರು.

ಡಿಸೆಂಬರ್ 16 : ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ

Thumbnail
Posted On: 25 Nov 2022, 10:59 PM

ಕಾಪು : ಇಲ್ಲಿನ ಕುತ್ಯಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಮಹೋತ್ಸವ ಡಿಸೆಂಬರ್ 16ರಂದು ಜರಗಲಿದ್ದು ಆ ಪ್ರಯುಕ್ತ ಬೆಳಿಗ್ಗೆ 8.30ಕ್ಕೆ ಬಿಂಬ ಪ್ರತಿಷ್ಠೆ, ಮಧ್ಯಾಹ್ನ ಗಂಟೆ 12ಕ್ಕೆ ಮಹಾಪೂಜೆ, ದೇವಿ ದರ್ಶನ, ಮಧ್ಯಾಹ್ನ 1.30 ಕ್ಕೆ ಅನ್ನ ಪ್ರಸಾದ ಹಾಗೂ ಸಂಜೆ 7 ಗಂಟೆಗೆ ಭಜನೆ, ರಾತ್ರಿ 10 ಗಂಟೆಗೆ ಮಹಾಪೂಜೆ, ದೇವಿ ದರ್ಶನ, ಪ್ರಸಾದ ವಿತರಣೆ, ಬಿಂಬ ವಿಸರ್ಜನೆ ನಡೆಯಲಿದೆ.

ಕಾಪು : ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ರಾಮಚಂದ್ರ ಆಚಾರ್ಯರಿಗೆ ಪತ್ರಕರ್ತರ ಅಭಿನಂದನೆ

Thumbnail
Posted On: 25 Nov 2022, 09:45 PM

ಕಾಪು : ಇತ್ತೀಚೆಗೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ರಾಮಚಂದ್ರ ಆಚಾರ್ಯರವರನ್ನು ದಂಪತಿ ಸಮೇತವಾಗಿ ಕಾಪು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ನಮ್ಮೂರ ಮಂದಾರ ಹೋಟೆಲ್ ಸಭಾಭವನದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭ ರಾಮಚಂದ್ರ ಆಚಾರ್ಯ ಮಾತನಾಡಿ, ಪತ್ರಕರ್ತರು ಯಾವುದೇ ಪೂರ್ವಗ್ರಹ, ರಾಗದ್ವೇಷ ಇಲ್ಲದೆ ವಸ್ತು ನಿಷ್ಠ ವರದಿ ಮಾಡಬೇಕು. ಜನರಿಗೆ ಆ ಸುದ್ದಿಯಿಂದ ಲಾಭ ಆಗುವಂತಿರಬೇಕು. ಆಗ ಸಮಾಜಕ್ಕೆ ಮತ್ತು ಸುದ್ದಿ ಮಾಡಿದ ಪತ್ರಕರ್ತರಿಗೂ ಒಳಿತು ಎಂದರು. ವೇದಿಕೆಯಲ್ಲಿ ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುರೇಶ್ ಎರ್ಮಾಳು, ಕಾರ್ಯದರ್ಶಿ ಪುಂಡಲಿಕ ಮರಾಠೆ, ಕೋಶಾಧಿಕಾರಿ ಅಬ್ದುಲ್ ಹಮೀದ್ ಪಡುಬಿದ್ರಿ, ನಮ್ಮೂರ ಮಂದಾರ ಹೋಟೆಲ್ ಮಾಲೀಕ ವಾದಿರಾಜ ನಡಿಮನೆ, ರಾಮಚಂದ್ರ ಆಚಾರ್ಯರವರ ಪತ್ನಿ ರಾಜಲಕ್ಷ್ಮಿ ಆಚಾರ್ಯ ಜಿಲ್ಲಾ ಸಮಿತಿಯ ಸದಸ್ಯರು ಹಾಗೂ ಪತ್ರಕರ್ತರ ಉಪಸ್ಥಿತರಿದ್ದರು. ಪತ್ರಕರ್ತ ಸುರೇಶ್ ಎರ್ಮಾಳು ಸ್ವಾಗತಿಸಿದರು. ರಾಕೇಶ್ ಕುಂಜೂರು ನಿರೂಪಿಸಿದರು. ಪುಂಡಲಿಕ ಮರಾಠೆ ವಂದಿಸಿದರು.

ನವಂಬರ್ 27: ಕುಲಾಲ ಚಾವಡಿ ವಾಟ್ಸಪ್ ಬಳಗ ವತಿಯಿಂದ ಕುಲಾಲ ಚಾವಡಿ ಸಂಭ್ರಮ 2022

Thumbnail
Posted On: 25 Nov 2022, 07:50 PM

ಕಾರ್ಕಳ : ಸಾಮಾಜಿಕ ಜಾಲತಾಣದ ವಾಟ್ಸಪ್ ಗ್ರೂಪ್ ಮುಖೇನ ಕುಲಾಲ ಸಮುದಾಯದ ಹಲವಾರು ಕುಟುಂಬದಲ್ಲಿ ಮಂದಹಾಸ ಮೂಡಿದ ತಂಡದ ಸಮಸ್ತ ಸದಸ್ಯರಿಂದ ಕುಲಾಲ ಚಾವಡಿ ಸಂಭ್ರಮ ಕಾರ್ಯಕ್ರಮ ನವಂಬರ್ 27 ರಂದು ಕಾರ್ಕಳ ಮಿಯ್ಯಾರು ರಾಮರಗುತ್ತು ನದಿಯ ತೀರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ ಎಂದು ಕುಲಾಲ ಚಾವಡಿ ಅಡ್ಮಿನ್ ಬಳಗದ ಸಂತೋಷ್ ಕುಲಾಲ್ ಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾಪು ದಂಡತೀರ್ಥ ಶಿಕ್ಷಣ ಸಂಸ್ಥೆ : ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದಿಂದ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ

Thumbnail
Posted On: 25 Nov 2022, 06:28 PM

ಕಾಪು : ಯಾವುದೇ ಪ್ರದೇಶದ ಸಾಂಸ್ಕೃತಿಕ ಹಿನ್ನೆಲೆಯ ಚಲನಚಿತ್ರ ವೀಕ್ಷಿಸಿದಾಗ ಅಲ್ಲಿಯ ಚಿತ್ರಣ ನಮ್ಮ ಮುಂದೆ ಹೇಗೆ ಬರುತ್ತದೆಯೋ ಹಾಗೆ ಸಾಹಿತ್ಯದ ಓದುವಿಕೆಯಿಂದ ಕವಿ, ಲೇಖಕರ ಓದು, ಹಿನ್ನೆಲೆ, ಪರಿಸರ ಇತ್ಯಾದಿ ತಿಳಿಯಲು ಸಾಧ್ಯ. ಬರೆಯಲು ಪ್ರತಿಯಬ್ಬರಿಗೂ ಸಾಧ್ಯ. ಪ್ರಯತ್ನ ಪಡದೆ ಯಾವುದೇ ಕಾರ್ಯ ಸಾಧ್ಯವಾಗದು. ಯಾವುದೇ ವಿಷಯವನ್ನು ಬರೆದು, ಓದಿದಾಗ ನಮ್ಮಲ್ಲಿ ಉಳಿಯಲು ಸಾಧ್ಯ. ನಮ್ಮನ್ನು ನಾವು ಪ್ರಯೋಗಕ್ಕೆ ಒಡ್ಡಿದಾಗ ಯಾವುದೇ ಕಾರ್ಯ ಸಾಧ್ಯ. ಮೊದಲ ಅಕ್ಷರದಿಂದ ಯಾರು ಸಾಹಿತಿ ಆಗಿಲ್ಲ. ಓದು, ಬರವಣಿಗೆಯಿಂದ ಸಾಹಿತ್ಯ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಬಹುದು. ಸಾಹಿತ್ಯದ ಬಗೆಗಿನ ಒಲವನ್ನು ನಾವೆಲ್ಲರೂ ಬೆಳೆಸೋಣ ಎಂದು ಕಟಪಾಡಿಯ ತೃಷಾ ಕಾಲೇಜಿನ ಕನ್ನಡ ಪ್ರಾಧ್ಯಾಪಕ ಧೀರಜ್ ಬೆಳ್ಳಾರೆ ಹೇಳಿದರು. ಅವರು ಕಾಪು ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕ ಆಯೋಜಿಸಿದ್ದ ಕನ್ನಡ ಮಾಸಾಚರಣೆ - ನವೆಂಬರ್ ತಿಂಗಳ ಸಡಗರ 'ಸಂಪದ - ೨೦೨೨' ಕಾರ್ಯಕ್ರಮದಲ್ಲಿ 'ಶಾಲೆಯತ್ತ ಸಾಹಿತ್ಯ' ವಿಷಯದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಕಾಪು ತಾಲೂಕು ಘಟಕದ ಅಧ್ಯಕ್ಷರಾದ ಪುಂಡಲಿಕ ಮರಾಠೆ ವಹಿಸಿದ್ದರು. ಈ ಸಂದರ್ಭ ಕಾಪು ತಾಲೂಕು ಘಟಕದ ಕಾರ್ಯದರ್ಶಿ ನೀಲಾನಂದ ನಾಯಕ್, ಕ.ಸಾ.ಪ ಜಿಲ್ಲಾ ಸಮಿತಿಯ ಸದಸ್ಯ ಮಧುಕರ್ ಎಸ್, ಕಾಪು ತಾಲೂಕು ಕ.ಸಾ.ಪ ಸಂಘಟನಾ ಕಾರ್ಯದರ್ಶಿ ದೀಪಕ್ ಬೀರ, ದಂಡತೀರ್ಥ ಸಂಸ್ಥೆಯ ಪ್ರಾಂಶುಪಾಲೆ ಮರೀನಾ ಸರೋಜಾ ಸೋನ್ಸ್, ದಂಡ ತೀರ್ಥ ಸಮೂಹ ವಿದ್ಯಾ ಸಂಸ್ಥೆಯ ಶಿಕ್ಷಕರು, ಪ್ರಾಧ್ಯಾಪಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕ.ಸಾ.ಪ ಕಾಪು ತಾಲೂಕು ಘಟಕದ ಕಾರ್ಯದರ್ಶಿ ನೀಲಾನಂದ ನಾಯಕ್ ಪ್ರಸ್ತಾವಿಸಿ, ಸ್ವಾಗತಿಸಿದರು. ಕ.ಸಾ.ಪ ಕಾಪು ತಾಲೂಕು ಘಟಕದ ಖಜಾಂಚಿ ವಿದ್ಯಾಧರ್ ಪುರಾಣಿಕ್ ನಿರೂಪಿಸಿದರು. ಕ.ಸಾ.ಪ ಜಿಲ್ಲಾ ಸಮಿತಿಯ ಸದಸ್ಯ ಮಧುಕರ್ ಎಸ್ ವಂದಿಸಿದರು.

ಕ್ರಿಕೆಟ್ : ಕಟಪಾಡಿಯ ರಿತೇಶ್ ಹೆಚ್ ಸುವರ್ಣ ರಾಜ್ಯಮಟ್ಟಕ್ಕೆ ಆಯ್ಕೆ

Thumbnail
Posted On: 24 Nov 2022, 11:12 PM

ಕಟಪಾಡಿ : ಸಾರ್ವಜನಿಕ ಶಿಕ್ಷಣ ಇಲಾಖೆ ಕರ್ನಾಟಕ ಸಹಯೋಗದಲ್ಲಿ ಮೈಸೂರು ವಿಭಾಗ ಮಟ್ಟದ ಕ್ರಿಕೆಟ್ ಪಂದ್ಯಾವಳಿ ನವೆಂಬರ್ 16 ಮತ್ತು 17 ರಂದು ಹಾಸನ ಜಿಲ್ಲೆಯ ತಾಲೂಕು ಕ್ರೀಡಾಂಗಣ ಚನ್ನರಾಯಪಟ್ಟಣದಲ್ಲಿ ನಡೆಯಿತು. ಸೈಂಟ್ ಜಾನ್ಸ್ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಶಂಕರಪುರದ ವಿದ್ಯಾರ್ಥಿ ಕಟಪಾಡಿ ಅಂಬಾಡಿ ಹರೀಶ್ ದಯಾವತಿಯವರ ಪುತ್ರ ರಿತೇಶ್ ಹೆಚ್ ಸುವರ್ಣ ಉಡುಪಿ ಜಿಲ್ಲೆಯ ಕ್ರಿಕೆಟ್ ತಂಡದಲ್ಲಿ ಆಡಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾನೆ. ಕಟಪಾಡಿಯ ಕ್ರಿಕೆಟ್ ಕೋಚ್ ಉದಯ್ ಹಾಗೂ ಪ್ರದೀಪ್ ಅವರಲ್ಲಿ ತರಬೇತಿ ಪಡೆದಿರುತ್ತಾನೆ.