Updated News From Kaup
ಹೆಜಮಾಡಿ : ಬಂದರು ನಿರ್ಮಾಣ ಕಾಮಗಾರಿ ಪರಿಶೀಲಿಸಿದ ಶಾಸಕ ಲಾಲಾಜಿ ಮೆಂಡನ್
Posted On: 29 Oct 2022, 04:43 PM
ಹೆಜಮಾಡಿ :ಇಲ್ಲಿನ 181 ಕೋಟಿ ರೂಗಳ ಮೊತ್ತದಲ್ಲಿ 70 ಎಕ್ರೆ ಪ್ರದೇಶದಲ್ಲಿ ಬಂದರು ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಬಂದರು ಸಮಿತಿ, ಸ್ಥಳೀಯರೊಂದಿಗೆ ಶಾಸಕ ಲಾಲಾಜಿ ಆರ್ ಮೆಂಡನ್ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯರಿಗೆ ಇರುವ ಗೊಂದಲವನ್ನು ಶಾಸಕರು ಬಗೆಹರಿಸಿದರು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಜಂಟಿ ನಿರ್ದೇಶಕರು ಗಣೇಶ್, ಸಹಾಯಕ ನಿರ್ದೇಶಕರು ದಿವಾಕರ್ ಖಾರ್ವಿ, ಬಂದರು ಹಾಗೂ ಮೀನುಗಾರಿಕೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಉದಯಕುಮಾರ್, ಸಹಾಯಕ ಇಂಜಿನಿಯರ್ ಜಯರಾಜ್, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಪಾಂಡುರಂಗ ಕರ್ಕೇರ, ಬಂದರು ಸಮಿತಿ ಅಧ್ಯಕ್ಷ ಸದಾಶಿವ ಕೋಟ್ಯಾನ್, ಕಾರ್ಯದರ್ಶಿ ವಿಜಯ ಎಸ್ ಬಂಗೇರ, ಪ್ರಮುಖರಾದ ವಿನೋದ್ ಕೋಟ್ಯಾನ್, ಹರಿಶ್ಚಂದ್ರ ಮೆಂಡನ್, ಎಕನಾಥ ಕರ್ಕೇರ, ರವಿ ಕುಂದರ್, ಶರಣ್ ಹೆಜಮಾಡಿ, ಲಲಿತ್ ಕುಮಾರ್, ಅರುಣ್ ಕುಮಾರ್, ರಘುವೀರ್ ಸುವರ್ಣ, ಜನಾರ್ಧನ ಕೋಟ್ಯಾನ್, ರೋಷನ್ ಕುಂದರ್, ಶೈಲೇಶ್ ಕುಂದರ್, ಭರತ್ ಕಾಂಚನ್, ಶೇಖರ್ ಕೋಟ್ಯಾನ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.
ಕಾಪು : ನೂತನ ಗೃಹ ರಕ್ಷಕ ದಳ ಪದಾಧಿಕಾರಿಗಳ ಕಚೇರಿ ಉದ್ಘಾಟನೆ
Posted On: 28 Oct 2022, 11:33 PM
ಕಾಪು : ಗೃಹ ರಕ್ಷಕ ದಳ ಕಾಪು ಘಟಕದ ಪದಾಧಿಕಾರಿಗಳ ನೂತನ ಕಚೇರಿಯನ್ನು ಉಡುಪಿ ಜಿಲ್ಲಾ ಸಮಾದೇಷ್ಟ ಡಾ. ಪ್ರಶಾಂತ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು ಗೃಹ ರಕ್ಷಕ ದಳದ ಕಚೇರಿಯು ಈ ಹಿಂದೆ ಇದ್ದ ಕಚೇರಿಯಿಂದ ನೂತನ ಕಚೇರಿಗೆ ಸ್ಥಳಾಂತರವಾಗಿದೆ. ಇದಕ್ಕೆ ಸಹಕರಿಸಿದ ಶಾಸಕರು, ಪಂಚಾಯತ್ ಹಾಗೂ ಪುರಸಭೆಯ ಸರ್ವರಿಗೂ ಕೃತಜ್ಞತೆಗಳನ್ನು ಹೇಳಿದರು. ಉಡುಪಿ ಜಿಲ್ಲಾ ಡೆಪ್ಯುಟಿ ಕಮಾಂಡೆಂಟ್ ರಮೇಶ್ ಮಾತನಾಡಿ ನಾಲ್ಕು ವರ್ಷಗಳ ಹಿಂದೆ ಕಾಪುವಿನಲ್ಲಿ ಗೃಹರಕ್ಷಕ ದಳದ ಕಚೇರಿ ಉದ್ಘಾಟನೆಯಾಗಿತ್ತು. ಇದೀಗ ನೂತನ ಕಚೇರಿಯ ಸದುಪಯೋಗ ಎಲ್ಲಾ ಗೃಹರಕ್ಷಕರು ಪಡೆಯುವಂತಾಗಲಿ ಎಂದರು. ಈ ಸಂದರ್ಭ ಕಾಪು ಘಟಕಾಧಿಕಾರಿ ಲಕ್ಷೀನಾರಾಯಣ ರಾವ್, ಗೃಹರಕ್ಷಕ ದಳದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕಾಪುವಿನಿಂದ ಮೂಲ್ಕಿವರೆಗೆ - ರಾಮ ನಾಮ ಸಂಕೀರ್ತನಾ ಪಾದಯಾತ್ರೆ
Posted On: 28 Oct 2022, 03:53 PM
ಕಾಪು : ರಾಮ ನಾಮ ಸಂಕೀರ್ತನಾ ಪಾದಯಾತ್ರೆ ಯು ಅಕ್ಟೋಬರ್ 30, ಆದಿತ್ಯವಾರದಂದು ಕಾಪು ಶ್ರೀ ವೆಂಕಟರಮಣ ದೇವಳದಿಂದ ಬೆಳಿಗ್ಗೆ ಗಂಟೆ 5:30 ಕ್ಕೆ ಪ್ರಾರಂಭಗೊಂಡು, ಹಳೇ ಮಾರಿಯಮ್ಮ ದೇವಳ ಭೇಟಿಯಾಗಿ, ಪಡುಬಿದ್ರೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ, ಹೆಜಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಳ ಭೇಟಿಯಾಗಿ ತದನಂತರ ಹೆಜಮಾಡಿ ಟೋಲ್ ಗೇಟ್ ನಿಂದ ಹೊರೆಕಾಣಿಕೆ ಸಹಿತ ಮೂಲ್ಕಿ ಶ್ರೀ ವೆಂಕಟರಮಣ ದೇವಳ ತಲುಪಿ ರಾಮ ನಾಮ ಸಂಕೀರ್ತನ ಪಾದ ಯಾತ್ರೆ ಸಂಪನ್ನಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾಪು ಶ್ರೀ ವೆಂಕಟರಮಣ ದೇವಳದಲ್ಲಿ ಪ್ರಾತಃ ಜಾಗರ ಪೂಜೆ ನಂತರ ಸಾಮೂಹಿಕ ಪ್ರಾರ್ಥನೆ, ಉಪಹಾರ, ಸಂಕೀರ್ತನ ಯಾತ್ರೆ ಆರಂಭ. ಹಳೇ ಮಾರಿಯಮ್ಮ ದೇವಳ ಭೇಟಿ, ಪಡುಬಿದ್ರಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಳ ಭೇಟಿಯಾಗಿ ವಿಶ್ರಾಂತಿ, ಉಪಹಾರ, ಹೆಜಮಾಡಿ ಶ್ರೀ ಲಕ್ಷ್ಮೀ ನಾರಾಯಣ ದೇವಳ ಭೇಟಿ , ವಿಶ್ರಾಂತಿ ನಂತರ ಮೂಲ್ಕಿ ಶ್ರೀ ವೆಂಕಟರಮಣ ದೇವಳ ತಲುಪಲಿದೆ.
ಅದಮಾರು : ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು : ಕೋಟಿ ಕಂಠ ಗಾಯನ
Posted On: 28 Oct 2022, 03:25 PM
ಅದಮಾರು : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದಾದ್ಯಾಂತ ಆಯೋಜಿಸಲಾದ 67ನೇ ಕರ್ನಾಟಕ ರಾಜ್ಯೋತ್ಸವ ದ ಅಂಗವಾಗಿ ನನ್ನ ನಾಡು - ನನ್ನ ಹಾಡು ಸಮೂಹ ಗೀತೆ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಶುಕ್ರವಾರ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜು, ಅದಮಾರಿನಲ್ಲಿ ನಡೆಯಿತು. ಉಚ್ಚಾರ ಸ್ಪಷ್ಟತೆಯೊಂದಿಗೆ ಬರೆದಂತೆ ಓದುವ ಹಾಗೂ ಓದಿದಂತೆ ಬರೆಯಲ್ಪಡುವ ಭಾಷೆ ಕನ್ನಡ. ನಾಡು ನುಡಿಯ ಬಗ್ಗೆ ಅಭಿಮಾನವನ್ನು ಮೂಡಿಸುವ, ನಮ್ಮ ಪರಂಪರೆಯ ಬಗ್ಗೆ ಹೆಮ್ಮೆ ಮತ್ತು ಗೌರವ ಮೂಡಿಸುವ ಗೀತೆ, ಕವನಗಳನ್ನು ನಾಡಿನ ಹೆಮ್ಮೆಯ ಕವಿಗಳು ರಚಿಸಿದ್ದಾರೆ. ಇವುಗಳನ್ನು ಹಾಡುವುದರಿಂದ ಮತ್ತು ಆಲಿಸುವುದರಿಂದ ನಮ್ಮಲ್ಲಿ ನಾಡು ನುಡಿಯ ಬಗೆಗಿರುವ ಅಭಿಮಾನ ಹೆಚ್ಚಾಗುತ್ತದೆ. ಈ ದೃಷ್ಟಿಯಿಂದ ಈ ಗೀತೆಗಳು ಕನ್ನಡದ ಶಕ್ತಿ. ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕಲಿಯಲು ಹಲವು ಭಾಷೆಗಳಿದ್ದರೂ, ವ್ಯವಹರಿಸಲು ಮಾತೃ ಭಾಷೆಯೇ ಇರಲಿ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎಂ. ರಾಮಕೃಷ್ಣ ಪೈಯವರು ನುಡಿದರು. ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಶ್ರೀಕಾಂತ್ ರಾವ್ರವರು ಸಂಕಲ್ಪ ವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ನಾಯಕ್ ಮತ್ತು ಪೂರ್ವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ನಿಶ್ಮಿತಾ ಶೆಟ್ಟಿ, ಸಂಸ್ಥೆಯ ಬೋಧಕ-ಬೋಧಕೇತರ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜೈ ಭಾರತ ಜನನಿಯ ತನುಜಾತೆ, ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು, ಹಚ್ಚೇವು ಕನ್ನಡದ ದೀಪ, ವಿಶ್ವ ವಿನೂತನ ವಿದ್ಯಾ ಚೇತನ, ಬಾರಿಸು ಕನ್ನಡ ಡಿಂಡಿಮವ, ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಈ ಕನ್ನಡದ ಗೀತೆಗಳನ್ನು ವಿದ್ಯಾರ್ಥಿಗಳು ಹಾಡಿದರು. ಸಂಸ್ಕೃತ ಉಪನ್ಯಾಸಕರಾದ ಡಾ. ಜಯಶಂಕರ್ ಕಂಗಣ್ಣಾರು ಸ್ವಾಗತಿಸಿದರು. ಕನ್ನಡ ಉಪನ್ಯಾಸಕರಾದ ದೇವಿಪ್ರಸಾದ್ ಬೆಳ್ಳಿಬೆಟ್ಟು ನಿರೂಪಿಸಿದರು. ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಸಂಜೀವ ನಾಯ್ಕ್ ರವರು ವಂದಿಸಿದರು.
ಕಾಪು : ಮರದ ದಿಮ್ಮಿಯಿದ್ದ ಲಾರಿಯ ಟೈಯರ್ ಸ್ಫೋಟ ; ಉರಿದ ದಿಮ್ಮಿ ; ತಪ್ಪಿದ ಭಾರೀ ಅನಾಹುತ
Posted On: 28 Oct 2022, 01:18 PM
ಕಾಪು : ತೀರ್ಥಹಳ್ಳಿಯಿಂದ ಮಂಗಳೂರು ಕಡೆ ಮರದ ದಿಮ್ಮಿ ಸಾಗಿಸುತ್ತಿದ್ದ ಲಾರಿಯೊಂದರ ಟೈರ್ ಸ್ಫೋಟಗೊಂಡು ಮರದ ದಿಮ್ಮಿ ಸಮೇತ ಲಾರಿ ಹೊತ್ತಿ ಉರಿದ ಘಟನೆ ಗುರುವಾರ ತಡ ರಾತ್ರಿ ಕಾಪು ದಂಡ ತೀರ್ಥ ಮಠದ ಮುಂಭಾಗದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಬಳಿ ನಡೆದಿದೆ. ಘಟನೆಯಿಂದಾಗಿ ಲಾರಿಯ ಹಿಂಭಾಗ ಟಯರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಮರದ ದಿಮ್ಮಿಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಕೂಡಲೇ ಅಗ್ನಿ ಶಾಮಕ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ.
ಅಕ್ಟೋಬರ್ 30 : ಪಡುಬಿದ್ರಿ ರೋಟರಿ ಕ್ಲಬ್ ಮತ್ತು ಆರ್ ಸಿ ಸಿ ಜಂಟಿ ಆಶ್ರಯದಲ್ಲಿ ಭಜನಾ ಸ್ಪರ್ಧೆ -2022
Posted On: 28 Oct 2022, 01:06 PM
ಕಾಪು : ರೋಟರಿ ಕ್ಲಬ್ ಪಡುಬಿದ್ರಿ ಹಾಗೂ ರೋಟರಿ ಸಮುದಾಯದಳ ಪಡುಬಿದ್ರಿ ಜಂಟಿ ಆಶ್ರಯದಲ್ಲಿ ನಶಿಸಿ ಹೋಗುವ ಭಜನೆ ಕಲೆಯನ್ನು ಯುವ ಜನತೆಗೆ ಪ್ರೇರೇಪಿಸುವ ನಿಟ್ಟಿನಲ್ಲಿ 6ನೇ ಬಾರಿಗೆ ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮಟ್ಟದ ಭಜನಾ ಸ್ಪರ್ಧೆ -2022 ಅಕ್ಟೋಬರ್ 30, ಆದಿತ್ಯವಾರ ಬೆಳಿಗ್ಗೆ 9 ರಿಂದ ಸಂಜೆ 6:30ರ ತನಕ ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಜರಗಲಿದೆ. ಭಜನಾ ಸ್ಪರ್ಧಾ ಕಾರ್ಯಕ್ರಮವನ್ನು ಬೆಂಗಳೂರು ಆದಾಯ ತೆರಿಗೆ ಇಲಾಖೆಯ ಅಧಿಕಾರಿ ರೇಖಾ ಮೋಹನ್ ಉದ್ಘಾಟಿಸಲಿದ್ದಾರೆ ಎಂದು ರೋಟರಿ ಕ್ಲಬ್ ಪಡುಬಿದ್ರಿ ಸ್ಥಾಪಕ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಶುಕ್ರವಾರ ಕಾಪು ಪ್ರೆಸ್ ಕ್ಲಬ್ ನಲ್ಲಿ ಜರಗಿದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಅವಿಭಜಿತ ಜಿಲ್ಲೆಯ 12 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದು, ಪ್ರಥಮ ಬಹುಮಾನ ರೂ.10,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ, ದ್ವಿತೀಯ ರೂ. 7,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ, ತೃತೀಯ ರೂ.5,000 ಶಾಶ್ವತ ಫಲಕ ಹಾಗೂ ಪ್ರಶಸ್ತಿ ಪತ್ರ ಹಾಗೂ ಉತ್ತಮ ಗಾಯಕ, ಗಾಯಕಿ, ಉತ್ತಮ ತಬಲ ವಾದಕ, ಹಾರ್ಮೋನಿಯಂ ವಾದಕ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಮಾಜ ಸೇವಕ ರವಿ ಕಟಪಾಡಿ ಮತ್ತು ಕಲರ್ಸ್ ಕನ್ನಡ ಎದೆ ತುಂಬಿ ಹಾಡುವೆನು ಕಾರ್ಯಕ್ರಮದಲ್ಲಿ ದ್ವಿತೀಯ ಪ್ರಶಸ್ತಿ ಪಡೆದ ಸಂಗೀತ ಕಲಾವಿದ ಸಂದೇಶ ನಿರುಮಾರ್ಗ, ವೈದ್ಯಕೀಯ ಕ್ಷೇತ್ರದಲ್ಲಿ ಡಾ| ಸುರೇಶ್ ಕೋಟ್ಯಾನ್ ಚಿತ್ರಾಪುರನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಪಡುಬಿದ್ರಿ ರೋಟರಿ ಸ್ಥಾಪಕ ಅಧ್ಯಕ್ಷರಾದ ವೈ ಸುಧೀರ್ ಕುಮಾರ್, ಅಧ್ಯಕ್ಷರಾದ ಗೀತಾ ಅರುಣ್, ಕಾರ್ಯದರ್ಶಿ ಜ್ಯೋತಿ ಮೆನನ್, ರೋಟರಿ ಸಮುದಾಯದಳದ ಅಧ್ಯಕ್ಷೆ ದೀಪಾಶ್ರೀ ಕರ್ಕೇರ, ಕಾರ್ಯದರ್ಶಿ ತನಿಷಾ ಜಿ. ಕುಕ್ಯಾನ್, ರೋಟರಿ ಕ್ಲಬ್ ಸದಸ್ಯರಾದ ಸುನಿಲ್ ಕುಮಾರ್, ಸುಧಾಕರ್, ಸಂತೋಷ್ ಉಪಸ್ಥಿತರಿದ್ದರು.
ಕಾಪುವಿನಲ್ಲಿ ಮೊಳಗಿದ ಕನ್ನಡ ನಾಡು ನುಡಿಯ ಗೀತೆಗಳ ಕೋಟಿ ಕಂಠ ಗಾಯನ
Posted On: 28 Oct 2022, 12:50 PM
ಕಾಪು : ರಾಷ್ಟ್ರೀಯ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಕಾಪು ತಾಲೂಕು, ಕಾಪು ಪುರಸಭಾ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯಕ್ರಮ ಕಾಪು ಪ್ರಥಮದರ್ಜೆ ಕಾಲೇಜಿನಲ್ಲಿ ಶುಕ್ರವಾರ ಜರಗಿತು. ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ ಸಂಕಲ್ಪ ವಿಧಿ ಬೋಧಿಸಿದರು. ಗುರುಚರಣ್ ಪೊಲಿಪು ನೇತೃತ್ವದಲ್ಲಿ ಕಾಪು ಪರಿಸರದ ವಿವಿಧ ಕಾಲೇಜು, ಶಾಲೆಯ ಮಕ್ಕಳು ಕನ್ನಡ ನಾಡು ನುಡಿಯ ಗೀತೆಗಳನ್ನು ಹಾಡಿದರು. ಈ ಸಂದರ್ಭ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಕಾಪು ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಪುರಸಭೆಯ ಅಧಿಕಾರಿ ವೆಂಕಟೇಶ ನಾವಡ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪುಂಡಲಿಕ ಮರಾಠೆ, ಸುಧಾಮ ಶೆಟ್ಟಿ, ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅನಿಲ್ ಕುಮಾರ್, ಕಾಪು ಪುರಸಭಾ ಸದಸ್ಯರು, ಅಧಿಕಾರಿ ವರ್ಗ, ಸಿಬ್ಬಂದಿಗಳು, ಶಾಲಾ ಶಿಕ್ಷಕ ವರ್ಗ, ಕಾಲೇಜಿನ ಪ್ರಾಧ್ಯಾಪಕ ವರ್ಗ, ಸಾರ್ವಜನಿಕರು ಮತ್ತಿತರರು ಉಪಸ್ಥಿತರಿದ್ದರು.
ಕಾಪು : ಹಿಂದು ಜಾಗರಣ ವೇದಿಕೆ ಪೈಯ್ಯಾರು ಘಟಕದ ವತಿಯಿಂದ ಸಾರ್ವಜನಿಕ ಗೋಪೂಜೆ
Posted On: 27 Oct 2022, 06:00 PM
ಕಾಪು : ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ಪೈಯ್ಯಾರು ಘಟಕದ ವತಿಯಿಂದ ದ್ವಿತೀಯ ವರ್ಷದ ಸಾರ್ವಜನಿಕ ಗೋಪೂಜೆ ಹಾಗೂ ವಾಹನ ಪೂಜೆ ಕಾರ್ಯಕ್ರಮ ಬುಧವಾರದಂದು ವಿಜೃಂಭಣೆಯಿಂದ ಜರುಗಿತು. ಮುಖ್ಯ ಅತಿಥಿಗಳಾಗಿ ಹಿಂದು ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕರಾದ ಉಮೇಶ್ ಸೂಡ, ನೀತಾ ಪ್ರಭು, ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ಸಂಯೋಜಕರಾದ ಗುರುಪ್ರಸಾದ್ ಸೂಡ, ಬೆಳಪು ಗ್ರಾಮದ ಸಾಮಾಜಿಕ ಮುಖಂಡ ಕೆ.ಕೊರಗ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನೀತಾ ಪ್ರಭು ಗೋವಿನ ಮಹತ್ವ ಹಾಗೂ ಹಿರಿಯರು ಗೋವನ್ನು ಪೂಜಿಸಿಕೊಂಡು ಬಂದ ರೀತಿ ಹಾಗೂ ಗೋರಕ್ಷಣೆ ಇಡೀ ಹಿಂದು ಸಮಾಜದ ಕರ್ತವ್ಯ ಎಂದರು. ಸಭೆಯ ಅಧ್ಯಕ್ಷತೆಯನ್ನು ಉದ್ಯಮಿ ಗಣೇಶ್ ಶೆಟ್ಟಿ ಪೈಯ್ಯಾರು ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದು ಜಾಗರಣ ವೇದಿಕೆ ಕಾಪು ತಾಲೂಕು ಸಹಸಂಯೋಜಕರಾದ ಲೋಕೇಶ್ ಪಲಿಮಾರು, ಕಾಪು ತಾಲೂಕು ಸಂಪರ್ಕ ಪ್ರಮುಖ್ ರಾಜೇಶ್ ಪೈಯ್ಯಾರು, ಕಾಪು ತಾಲೂಕು ಯುವವಾಹಿನಿ ಸಂಯೋಜಕ ರಂಜಿತ್ ಬೆಳಪು ಹಾಗೂ ಪೈಯ್ಯಾರು ಭಾಗದ ಸಾಮಾಜಿಕ ಮುಖಂಡ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.
ಯುವಸಂಗಮ ಕಾಂತಾವರದಿಂದ ದೀಪಾವಳಿ ಆಚರಣೆ
Posted On: 27 Oct 2022, 02:11 PM
ಕಾಂತಾವರ : ಯುವಸಂಗಮ ಕಾಂತಾವರ (ರಿ.) ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 4ನೇ ವರ್ಷದ ಲಕ್ಷ್ಮೀ ಪೂಜೆ ಹಾಗೂ ಸಾಮೂಹಿಕ ವಾಹನ ಪೂಜೆಯು ಬಾಲಕೃಷ್ಣ ಭಟ್ ಇವರ ವೈದಿಕತ್ವದಲ್ಲಿ ಅಕ್ಟೋಬರ್ 26 ರಂದು ಮಿತ್ತಲಚ್ಚಿಲು ವಠಾರದಲ್ಲಿ ಜರಗಿತು. ಈ ಸಂದರ್ಭದಲ್ಲಿ ಊರ ನಾಗರೀಕರು, ಕಾಂತಾವರ ಗ್ರಾಮ ಪಂಚಾಯತ್ ಸದಸ್ಯರು, ಯುವಸಂಗಮ ಕಾಂತಾವರದ ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಸರ್ವ ಸದಸ್ಯರು ,ಯುವ ಉತ್ಸಾಹಿ ಬಳಗ ಕೇಮಾರು ಸದಸ್ಯರು ಉಪಸ್ಥಿತರಿದ್ದರು.
ಮಟ್ಟಾರು : ದಶಮ ವರ್ಷದ ಸಾರ್ವಜನಿಕ ಗೋಪೂಜಾ ಉತ್ಸವ - ಗೋಪೂಜೆ ಮತ್ತು ವಾಹನ ಪೂಜೆ
Posted On: 27 Oct 2022, 02:05 PM
ಕಾಪು : ವಿಶ್ವ ಹಿಂದೂ ಪರಿಷದ್ ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಮಟ್ಟಾರು ನೇತೃತ್ವದಲ್ಲಿ ದಶಮ ವರ್ಷದ ಸಾರ್ವಜನಿಕ ಗೋಪೂಜಾ ಉತ್ಸವದ ಪ್ರಯುಕ್ತ ಬುಧವಾರ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ಶಂಕರಪುರ ಶ್ರೀ ದ್ವಾರಕಾಮಯಿ ಸಾಯಿಬಾಬಾ ಮಂದಿರದ ಪೂಜ್ಯ ಶ್ರೀ ಸಾಯಿ ಈಶ್ವರ್ ಗುರೂಜಿ ಆಶೀರ್ವಚನ ನೀಡಿದರು. ವಿಶ್ವ ಹಿಂದೂ ಪರಿಷದ್ ಮಟ್ಟಾರು ಘಟಕ ಅಧ್ಯಕ್ಷ ಪ್ರಕಾಶ್ ಶೆಟ್ಟಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶಪಾಲ್ ಸುವರ್ಣ,ಮಾಣಿಬೆಟ್ಟು ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯ,ವಿಶ್ವ ಹಿಂದೂ ಪರಿಷದ್ ಕಾಪು ಪ್ರಖಂಡ ಅಧ್ಯಕ್ಷ ಜಯಪ್ರಕಾಶ್ ಪ್ರಭು,ಶಿರ್ವ ವಲಯ ಕಾರ್ಯದರ್ಶಿ ಪ್ರಕಾಶ್ ಕೋಟ್ಯಾನ್,ಮಟ್ಟಾರು ಘಟಕ ಗೋರಕ್ಷಾ ಪ್ರಮುಖ್ ಶಿವರಾಜ ಆಚಾರ್ಯ,ದುರ್ಗಾವಾಹಿನಿ ಸಂಚಾಲಕಿ ದೀಕ್ಷಾ ಪ್ರಭು,ಶಿರ್ವ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ವಾರಿಜಾ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ರಂಜಿತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಈ ಸಂದರ್ಭ ಕ್ರೀಡಾಕೂಟದ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.ಸಭೆಯ ನಂತರ ಮಾಣಿಬೆಟ್ಟು ಶ್ರೀ ವಿಷ್ಣುಮೂರ್ತಿ ಉಪಾಧ್ಯಾಯರ ನೇತೃತ್ವದಲ್ಲಿ ಗೋಪೂಜೆ ಮತ್ತು ವಾಹನ ಪೂಜೆ ನಡೆಯಿತು. ಕಾರ್ಯಕ್ರಮದ ನಂತರ ಶ್ರೀ ದ್ವಾರಕಾಮಯಿ ಮಠ ಶಂಕರಪುರ ಇವರ ವತಿಯಿಂದ ಶ್ರೀ ಸೌಭಾಗ್ಯ ಕಾರ್ಯಕ್ರಮದ ಪ್ರಯುಕ್ತ ಆಯ್ದ 21 ಹೆಣ್ಣು ಮಕ್ಕಳಿಗೆ ಚಿನ್ನದ ಮೂಗುತಿ ಧಾರಣೆ ನಡೆಯಿತು.
